ಸಮಗ್ರ ಸಮಾಚಾರ

ವಿಟ್ಲ: ದೇವಸ್ಥಾನದಿಂದ ಹುಂಡಿಹಣ ಕಳ್ಳತನ| ಮೂವರು ಅರೆಸ್ಟ್

ಸಮಗ್ರ ನ್ಯೂಸ್: ಧಾರ್ಮಿಕ ಶೃದ್ದಾ ಕೇಂದ್ರಕ್ಕೆ ಸಂಬಂಧಿಸಿದಂತೆ ರಸ್ತೆ ಬದಿಯಲ್ಲಿ ಇಟ್ಟ ಕಾಣಿಕೆ ಡಬ್ಬದಲ್ಲಿದ್ದ ಹಣವನ್ನು ಕದ್ದ ಕಳ್ಳರನ್ನು ವಿಟ್ಲ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ವಿಟ್ಲ ಕಸಬಾ ಗ್ರಾಮದ ನಿವಾಸಿಗಳಾದ ತ್ವಾಹಿದ್‌ (19), ಉಮ್ಮರ್‌ ಫಾರೂಕ್‌ (18 , ಮೊಹಮ್ಮದ್‌ ನಬೀಲ್‌(18) ಎಂದು ಗುರುತಿಸಲಾಗಿದೆ. ಕನ್ಯಾನ ಗ್ರಾಮದ ದೇಲಂತಬೆಟ್ಟು ನಿವಾಸಿ ಡಿ.ನಾರಾಯಣ ರಾವ್ ನೀಡಿದ ದೂರಿನಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಾರಾಯಣ ಅವರು ಅಧ್ಯಕ್ಷರಾಗಿದ್ದ ಧಾರ್ಮಿಕ ಶ್ರಧ್ದಾ ಕೇಂದ್ರಕ್ಕೆ ಸಂಬಂಧಿಸಿದ ಕಾಣಿಕೆ ಕಟ್ಟೆಯನ್ನು […]

ವಿಟ್ಲ: ದೇವಸ್ಥಾನದಿಂದ ಹುಂಡಿಹಣ ಕಳ್ಳತನ| ಮೂವರು ಅರೆಸ್ಟ್ Read More »

ಪುತ್ತೂರು: ಅಪ್ರಾಪ್ತ ಬಾಲಕಿಯ ಗರ್ಭಿಣಿಯನ್ನಾಗಿಸಿದವನಿಗೆ 10 ವರ್ಷ ಜೈಲು

ಸಮಗ್ರ ನ್ಯೂಸ್: ಏಳು ವರ್ಷಗಳ ಹಿಂದೆ ಮೈಂದನಡ್ಕದ ಎಂಬಲ್ಲಿ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡು ಆಕೆ ಗರ್ಭಿಣಿಯಾಗಲು ಕಾರಣನಾಗಿದ್ದ ಆರೋಪಿಗೆ ಪೋಕ್ಸೋ ಪ್ರಕರಣದಲ್ಲಿ 10 ವರ್ಷ ಕಠಿಣ ಜೈಲು ಶಿಕ್ಷೆ ನೀಡಿ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಜೈಲು ಶಿಕ್ಷೆಗೊಳಗಾದ ಆರೋಪಿಯನ್ನು ಗದಗ ಜಿಲ್ಲೆಯ ರೋಣ ತಾಲೂಕಿನ ರಾಜೂರ ದಿಂಡೂರ ನಿವಾಸಿ ಪೀರೇಶ್ ಪೀರಪ್ಪ ಸಂಗಪ್ಪ ಮಾಲೋತ್ತರ ಎಂದು ಗುರುತಿಸಲಾಗಿದೆ. 2017ರ ಆಗಸ್ಟ್‌ನಲ್ಲಿ ಈ ಪ್ರಕರಣ ನಡೆದಿದ್ದು,

ಪುತ್ತೂರು: ಅಪ್ರಾಪ್ತ ಬಾಲಕಿಯ ಗರ್ಭಿಣಿಯನ್ನಾಗಿಸಿದವನಿಗೆ 10 ವರ್ಷ ಜೈಲು Read More »

ಮಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ| 123 ಕೆಜಿ‌ ಗಾಂಜಾ‌ ವಶ, ಮೂವರ ಬಂಧನ

ಸಮಗ್ರ ನ್ಯೂಸ್: ಮಂಗಳೂರು ನಗರ ಅಪರಾಧ ವಿಭಾಗದ ಪೊಲೀಸರು ಮಾದಕ ದ್ರವ್ಯ ಕಳ್ಳಸಾಗಣೆ ತಡೆ ಕಾರ್ಯಾಚರಣೆಯಲ್ಲಿ 123 ಕೆಜಿ ತೂಕದ ಗಾಂಜಾವನ್ನು ವಶಪಡಿಸಿಕೊಂಡಿದ್ದು, ಆಂಧ್ರಪ್ರದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಮೂವರನ್ನು ಬಂಧಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಸಿಸಿಬಿ ಅಧಿಕಾರಿಗಳು ಗುರುವಾರ ದಕ್ಷಿಣ ಕನ್ನಡ ಜಿಲ್ಲೆ ಮೂಡುಬಿದಿರೆ ತಾಲೂಕಿನ ಬೆಳುವಾಯಿ ಗ್ರಾಮದ ಕಾಂತಾವರ ಕ್ರಾಸ್‌ನ ಮಠದಕೆರೆ ಬಳಿ ಎರಡು ಕಾರುಗಳನ್ನು ಅಡ್ಡಗಟ್ಟಿದ್ದಾರೆ. ಈ ಕಾರುಗಳಲ್ಲಿ ನಿಷೇಧ ವಸ್ತುಗಳನ್ನು ರಾಜ್ಯದ ಗಡಿಗಳಲ್ಲಿ ಕಳ್ಳಸಾಗಣೆ ಮಾಡಲಾಗುತಿತ್ತು ಎಂದು ವರದಿಯಾಗಿದೆ. ಬಂಧಿತ

ಮಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ| 123 ಕೆಜಿ‌ ಗಾಂಜಾ‌ ವಶ, ಮೂವರ ಬಂಧನ Read More »

ಧರ್ಮಸ್ಥಳ ಪ್ರಕರಣದ ಸುದ್ದಿ ಪ್ರಸಾರಕ್ಕೆ ಮಾಧ್ಯಮ ನಿರ್ಬಂಧ ತೆರವು| ಪ್ರತಿಬಂಧಕ ಆದೇಶ ರದ್ದುಗೊಳಿಸಿದ ಹೈಕೋರ್ಟ್

ಸಮಗ್ರ ನ್ಯೂಸ್ : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಹರ್ಷೇಂದ್ರ ಕುಮಾರ್ ಅವರ ಬಗ್ಗೆ ಯಾವುದೇ ಸುದ್ದಿ ಪ್ರಸಾರ/ಪ್ರಕಟ ಮಾಡದಂತೆ ಮಾಧ್ಯಮಗಳನ್ನು ನಿರ್ಬಂಧಿಸಿ ವಿಚಾರಣಾ ನ್ಯಾಯಾಲಯ ಹೊರಡಿಸಿದ್ದ ಏಕಪಕ್ಷೀಯ ಪ್ರತಿಬಂಧಕಾದೇಶವನ್ನು ಹೈಕೋರ್ಟ್‌ ವಜಾಗೊಳಿಸಿದೆ. ಮಾಧ್ಯಮಗಳನ್ನು ನಿರ್ಬಂಧಿಸಿ ವಿಚಾರಣಾ ನ್ಯಾಯಾಲಯ ಹೊರಡಿಸಿದ್ದ ಪ್ರತಿಬಂಧಕಾದೇಶ ಪ್ರಶ್ನಿಸಿ ದಕ್ಷಿಣ ಕನ್ನಡದ ‘ಕುಡ್ಲ ರ‍್ಯಾಂಪೇಜ್‌’ ಯೂಟ್ಯೂಬ್ ಚಾನಲ್‌ನ ಪ್ರಧಾನ ಸಂಪಾದಕ ಅಜಯ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿಯನ್ನು ಭಾಗಶಃ

ಧರ್ಮಸ್ಥಳ ಪ್ರಕರಣದ ಸುದ್ದಿ ಪ್ರಸಾರಕ್ಕೆ ಮಾಧ್ಯಮ ನಿರ್ಬಂಧ ತೆರವು| ಪ್ರತಿಬಂಧಕ ಆದೇಶ ರದ್ದುಗೊಳಿಸಿದ ಹೈಕೋರ್ಟ್ Read More »

ಕೆಸರುಮಯವಾದ ರಸ್ತೆ  ಗ್ರಾಮಸ್ಥರಿಂದ ರಸ್ತೆ ಮಧ್ಯೆ  ಬಾಳೆಗಿಡನೆಟ್ಟು ಆಕ್ರೋಶ

ಕಡಬ: ಮಳೆಯಿಂದಾಗಿ ರಸ್ತೆ ಕೆಸರುಮಯವಾಗಿದ್ದು ರೋಸಿ ಹೋದ ಸ್ಥಳೀಯರು ರಸ್ತೆಯ ಮಧ್ಯೆ ಗುಂಡಿ ತೆಗೆದು ಬಾಳೆಗಿಡ ನೆಟ್ಟು ಆಕ್ರೋಶ ವ್ಯಕ್ತಪಡಿಸಿದ ಘಟನೆ ಕಡಬ ತಾಲೂಕಿನ ಏನೇಕಲ್ಲು  ಸಮೀಪದ ದೇವರಹಳ್ಳಿ ಕಲ್ಲಾಜೆ ಎಂಬಲ್ಲಿ ಜು.27 ರಂದು ನಡೆದಿದೆ. ಕಳೆದ 1 ತಿಂಗಳಿನಿಂದ  ಈ ಸಮಸ್ಯೆ ಮತ್ತೆ ಹೆಚ್ಚಾಗಿದ್ದು ಸಂಬಂಧಪಟ್ಟವರಲ್ಲಿ ಹೇಳಿಯೂ ಪರಿಹಾರವಾಗದೇ ಇದ್ದುದಕ್ಕೆ  ಅಧಿಕಾರಿಗಳ ಗಮನ ಸೆಳೆಯುವ ನಿಟ್ಟಿನಲ್ಲಿ ಸುಮಾರು 12 ಮಂದಿ ಬಾಳೆಗಿಟ್ಟು ನೆಟ್ಟು ಅಧಿಕಾರಿಗಳ ನಡೆಯನ್ನು ಟೀಕಿಸಿದ್ದಾರೆ. ಇನ್ನು ಇಲ್ಲಿನ  ಮರಕತ  ದೇವಸ್ಥಾನ ಹತ್ತಿರ ಡ್ಯಾಮ್

ಕೆಸರುಮಯವಾದ ರಸ್ತೆ  ಗ್ರಾಮಸ್ಥರಿಂದ ರಸ್ತೆ ಮಧ್ಯೆ  ಬಾಳೆಗಿಡನೆಟ್ಟು ಆಕ್ರೋಶ Read More »

ಧರ್ಮಸ್ಥಳದಲ್ಲಿ ಮೃತದೇಹ ಹೂತ ಪ್ರಕರಣ| ಎಸ್ಐಟಿ ತಂಡದ ಎದುರು‌ ಹಾಜರಾದ‌ ದೂರುದಾರ

ಸಮಗ್ರ ನ್ಯೂಸ್: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಮಂಗಳೂರು ಐಬಿಗೆ ಎಸ್.ಐ.ಟಿ ತನಿಖೆಗಾಗಿ ಅಧಿಕಾರಿಗಳ ಮುಂದೆ ಮುಖಕ್ಕೆ ಕಪ್ಪು ಬಣ್ಣದ ಕವರ್ ಹಾಕಿಕೊಂಡು ದೂರುದಾರ ವ್ಯಕ್ತಿ ಇಬ್ಬರು ವಕೀಲರ ಜೊತೆ ಕಾರಿನಲ್ಲಿ ಜುಲೈ 26 ರಂದು ಬಂದು ಹಾಜರಾಗಿದ್ದಾನೆ. ಪ್ರಕರಣದ ತನಖೆಯನ್ನು ಎಸ್.ಐ.ಟಿ ಅಧಿಕಾರಿಗಳು ಚುರುಕುಗೊಳಿಸಿದ್ದಾರೆ. ಮಲ್ಲಿಕಟ್ಟೆಯಲ್ಲಿರುವ ಎಸ್ ಪಿ‌ ಕಚೇರಿಗೆ ಆಗಮಿಸಿರುವ ದೂರುದಾರ ತನಿಖಾಧಿಕಾರಿ ಅನುಚೇತ್ ಅವರಿಗೆ ಹೇಳಿಕೆ ನೀಡಿದ್ದಾನೆ ಎನ್ನಲಾಗಿದೆ.

ಧರ್ಮಸ್ಥಳದಲ್ಲಿ ಮೃತದೇಹ ಹೂತ ಪ್ರಕರಣ| ಎಸ್ಐಟಿ ತಂಡದ ಎದುರು‌ ಹಾಜರಾದ‌ ದೂರುದಾರ Read More »

ದಕ್ಷಿಣ‌ ಕನ್ನಡ ಜಿಲ್ಲೆಗೆ ‘ತುಳುನಾಡು’ ಎಂದು ಮರು ನಾಮಕರಣವಾಗಲಿ – ಬಿಳಿಮಲೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಎಂದು ಮರುನಾಮಕರಣ ಮಾಡಬೇಕೆಂಬ ಕೂಗು ಹಲವು ದಿನಗಳಿಂದ ಕೇಳಿಬರುತ್ತಿದೆ. ಈ ಬೆನ್ನಲ್ಲೇ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆಯವರು ಬದಲಿಸುವುದಾದರೇ ತುಳುನಾಡು ಅಂತಾ ಬದಲಿಸಲಿ ಎಂದು ಹೇಳಿದ್ದಾರೆ. ಕಾರವಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸ ಜಿಲ್ಲೆಯನ್ನು ಮಾಡುವುದಾದರೆ ಯಾವ ಹೆಸರು ಬೇಕಾದರೂ ಇಟ್ಟುಕೊಳ್ಳಲಿ. ಆದರೆ ಐತಿಹಾಸಿಕ ಸ್ಥಳಗಳ ಹೆಸರನ್ನು ಯಾರು ಕೂಡ ಬದಲಿಸಬಾರದು. ಕರ್ನಾಟಕ ಏಕೀಕರಣದ ಸಂದರ್ಭದಲ್ಲಿ ಕಾಸರಗೋಡು ಕರ್ನಾಟಕದಿಂದ ಬೇರೆ ಆಯಿತು. ತುಳುನಾಡು ಎಂದು ಇಟ್ಟಿದ್ದರೆ

ದಕ್ಷಿಣ‌ ಕನ್ನಡ ಜಿಲ್ಲೆಗೆ ‘ತುಳುನಾಡು’ ಎಂದು ಮರು ನಾಮಕರಣವಾಗಲಿ – ಬಿಳಿಮಲೆ Read More »

ಬಂಟ್ವಾಳ: ಅನಾರೋಗ್ಯದಿಂದ ಯುವ ವಕೀಲೆ ಸಾವು

ಸಮಗ್ರ ನ್ಯೂಸ್: ಅನಾರೋಗ್ಯದಿಂದ ಯುವ ಬರಹಗಾರ್ತಿ, ವಕೀಲೆ ರಾಜಶ್ರೀ ಜಯರಾಜ್ ಪೂಜಾರಿ ನಿಧನರಾಗಿದ್ದಾರೆ. ಚಿಕ್ಕವಯಸ್ಸಿನಲ್ಲೇ ಕಲೆ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದ ಯುವ ಪ್ರತಿಭೆ ನಿಧನರಾಗಿದ್ದು, ಆಘಾತ ಉಂಟುಮಾಡಿದೆ. ಬಂಟ್ವಾಳದ ಜಯರಾಜ್ ಮತ್ತು ಸರೋಜಿನಿ ದಂಪತಿಗಳಿಗೆ ಜನವರಿ 16, 2000 ರಂದು ಜನಿಸಿದ ರಾಜಶ್ರೀ, ಬಂಟ್ವಾಳದಲ್ಲಿ ತನ್ನ ಆರಂಭಿಕ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದರು ಮತ್ತು ನಂತರ ಬಡಗ ಎಕ್ಕಾರು ಮತ್ತು ಶ್ರೀ ದುರ್ಗಾಪರಮೇಶ್ವರಿ ಪದವಿ ಪೂರ್ವ ಕಾಲೇಜಿನಲ್ಲಿ ಕಟೀಲಿನ ಶಿಕ್ಷಣವನ್ನು ಮುಂದುವರೆಸಿದರು. ತನ್ನ ವಿಧ್ಯಾಬ್ಯಾಸದ ಸಂದರ್ಭ

ಬಂಟ್ವಾಳ: ಅನಾರೋಗ್ಯದಿಂದ ಯುವ ವಕೀಲೆ ಸಾವು Read More »

ಧರ್ಮಸ್ಥಳ ಪ್ರಕರಣ| ಎಸ್ಐಟಿ ಯಿಂದ ತನಿಖೆ ಶುರು

ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣಗಳ ತನಿಖೆಗೆ ರಾಜ್ಯ ಸರಕಾರ ರಚಿಸಿರುವ ಎಸ್ಐಟಿ ತಂಡ ಮಂಗಳೂರಿಗೆ ಆಗಮಿಸಿದೆ. ಇದರೊಂದಿಗೆ ಅಧಿಕೃತವಾಗಿ ಪ್ರಕರಣದ ತನಿಖೆ ಪ್ರಾರಂಭವಾಗಲಿದೆ. ತನಿಖೆಯ ಭಾಗವಾಗಿರುವ ಡಿಐಜಿ ಎಂ.ಎನ್. ಅನುಚೇತ್ ಮಂಗಳೂರಿಗೆ ಆಗಮಿಸಿ ಇತರ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ ಎಂದು ಎಂದು ಮೂಲಗಳು ತಿಳಿಸಿವೆ. ಪೊಲೀಸ್‌ ನೇಮಕಾತಿ ವಿಭಾಗದ ಡಿಐಜಿ ಎಂ.ಎನ್‌.ಅನುಚೇತ್‌ ಮತ್ತು ಆಂತರಿಕ ಭದ್ರತಾ ವಿಭಾಗದ ಎಸ್‌ಪಿ ಜಿತೇಂದ್ರ ಕುಮಾರ್ ದಯಾಮ ಸದಸ್ಯರಾಗಿದ್ದಾರೆ. ಅನುಚೇತ್‌ ಮತ್ತು ದಯಾಮ ಮಾತ್ರ

ಧರ್ಮಸ್ಥಳ ಪ್ರಕರಣ| ಎಸ್ಐಟಿ ಯಿಂದ ತನಿಖೆ ಶುರು Read More »

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಿಂದ ಖಾಸಗಿ ಕಾರ್ಯಕ್ರಮಗಳಿಗೆ ಉಚಿತ ಅನ್ನಪ್ರಸಾದ ರದ್ದತಿಗೆ ಚಿಂತನೆ

ಸಮಗ್ರ ನ್ಯೂಸ್: ದಕ್ಷಿಣಕನ್ನಡ ಜಿಲ್ಲೆಯ ಹೆಸರಾಂತ ಶಿವಕ್ಷೇತ್ರ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಇನ್ನು ಮುಂದೆ ಖಾಸಗಿ ಕಾರ್ಯಕ್ರಮಗಳಿಗೆ ಉಚಿತ ಅನ್ನಪ್ರಸಾದ ವಿತರಣೆ ವ್ಯವಸ್ಥೆಯನ್ನು ನಿಲ್ಲಿಸಲು ಚಿಂತಿಸಲಾಗಿದೆ ಎಂದು ಶಾಸಕ ಅಶೋಕ ರೈ ಹೇಳಿದ್ದಾರೆ. ಪುತ್ತೂರಿನಲ್ಲಿ ಮಾತನಾಡಿದ ಅವರು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ನಿರ್ವಹಣೆಗೆ ಹಣದ ಕೊರತೆ ಎದುರಾಗಿದ್ದು, ಈ ಹಿನ್ನಲೆ ಮುಂದಿನ ದಿನಗಳಲ್ಲಿ ಖಾಸಗಿ ಕಾರ್ಯಕ್ರಮಗಳಿಗೆ ಉಚಿತವಾಗಿ ನೀಡಲಾಗುತ್ತಿದ್ದ ಅನ್ನಪ್ರಸಾದ ಸೇವೆಯನ್ನು ನಿಲ್ಲಿಸಲು ಸೂಚಿಸಲಾಗಿದ್ದು, ಅನ್ನಪ್ರಸಾದ ಬೇಕಾದಲ್ಲಿ ಬೇಕಾದಲ್ಲಿ ಹಣ ಕೊಟ್ಟು ಪಡೆಯುವಂತೆ ಸೂಚನೆ ನೀಡಲಾಗಿದೆ ಎಂದು

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಿಂದ ಖಾಸಗಿ ಕಾರ್ಯಕ್ರಮಗಳಿಗೆ ಉಚಿತ ಅನ್ನಪ್ರಸಾದ ರದ್ದತಿಗೆ ಚಿಂತನೆ Read More »