ಸಮಗ್ರ ಸಮಾಚಾರ

ಬಿಜೆಪಿಗೆ ಮಗ್ಗುಲ ಮುಳ್ಳಾದ ಸಿಎಂ ನಡೆ| ಧರ್ಮ, ಸಂಪ್ರದಾಯ ಪಾಲಿಸುವ ಡಿಕೆಶಿ ವಿರುದ್ದ ಇನ್ನು ಹೇಗೆ ಹೋರಾಟ ಮಾಡುತ್ತೆ ಕೇಸರಿ ಪಡೆ?

ಸಮಗ್ರ ನ್ಯೂಸ್: ಬಹುಷಃ ಬಿಜೆಪಿಯ ನಾಯಕರು ಇಷ್ಟೊಂದು ಸಂಪ್ರದಾಯಗಳನ್ನು ಪಾಲನೆ ಮಾಡುತ್ತಾರೋ ಗೊತ್ತಿಲ್ಲ, ಡಿಕೆ ಶಿವಕುಮಾರ್ ಅವರು ಸಿಎಂ ಆಗುವುದಕ್ಕಿಂದ ಮೊದಲು ಹಾಗೂ ನಂತರದಲ್ಲೂ ಧಾರ್ಮಿಕ ಸಂಪ್ರದಾಯಗಳನ್ನು ಹಾಗೂ ದೈವ ಭಕ್ತಿಯ ಉತ್ಕೃಷ್ಟತೆಯನ್ನು ಪ್ರದರ್ಶನ ಮಾಡಿದ್ದಾರೆ. ಈ ಮೂಲಕ ನಾನೊಬ್ಬ ಅಪ್ಪಟ ದೈವ ಭಕ್ತ ಎಂಬುವುದನ್ನು ಸಾಬೀತು ಮಾಡಿದ್ದಾರೆ. ಹೀಗಿರುವಾಗ ಡಿಕೆ ಶಿವಕುಮಾರ್ ಅವರನ್ನು ಬಿಜೆಪಿ ನಾಯಕರು ಟಾರ್ಗೆಟ್ ಮಾಡುವಾಗ ಹಿಂದೂ ವಿರೋಧಿ ಎನ್ನಲು ಸಾಧ್ಯವಿಲ್ಲ. ಹಿಂದುತ್ವ ಹೋರಾಟ ಮುಂದಿಟ್ಟುಕೊಂಡು ಡಿಕೆ ಶಿವಕುಮಾರ್ ಅವರನ್ನು ಕಟ್ಟಿಹಾಕಲು ಸಾಧ್ಯವಿಲ್ಲ. […]

ಬಿಜೆಪಿಗೆ ಮಗ್ಗುಲ ಮುಳ್ಳಾದ ಸಿಎಂ ನಡೆ| ಧರ್ಮ, ಸಂಪ್ರದಾಯ ಪಾಲಿಸುವ ಡಿಕೆಶಿ ವಿರುದ್ದ ಇನ್ನು ಹೇಗೆ ಹೋರಾಟ ಮಾಡುತ್ತೆ ಕೇಸರಿ ಪಡೆ? Read More »

ಬಿಜೆಪಿಗೆ ಕೊನೆಗೂ ಗುಡ್ ಬೈ ಹೇಳಿದ ಅಣ್ಣಾಮಲೈ

ಸಮಗ್ರ ನ್ಯೂಸ್: ತಮಿಳುನಾಡು ಬಿಜೆಪಿ ಫೈರ್‌ಬ್ರ್ಯಾಂಡ್ ಮತ್ತು ಪಕ್ಷದ ಮಾಜಿ ರಾಜ್ಯ ಅಧ್ಯಕ್ಷ ಅಣ್ಣಾಮಲೈ ತಮ್ಮ ಹುದ್ದೆಗೆ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ದ್ರಾವಿಡ ರಾಜಕೀಯದ ಭದ್ರಕೋಟೆಯಲ್ಲಿ ಬಿಜೆಪಿಗೆ ಹೊಸ ಉತ್ಸಾಹ ತಂದ ಯುವ ನಾಯಕನ ಈ ಸಂಚಲನ ನಿರ್ಧಾರವು ಈಗ ದೇಶದ ರಾಜಕೀಯದಲ್ಲಿ ದೊಡ್ಡ ಸಂಚಲನ ಮೂಡಿಸಿದೆ. ಹೈಕಮಾಂಡ್ ಕೂಡ ಅವರ ರಾಜೀನಾಮೆಯನ್ನು ಅನುಮೋದಿಸಿದೆ. ಕರ್ನಾಟಕ ಕೇಡರ್‌ನ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ತಮ್ಮ ಪೊಲೀಸ್ ಕೆಲಸಕ್ಕೆ ರಾಜೀನಾಮೆ ನೀಡಿ ಬಿಜೆಪಿ

ಬಿಜೆಪಿಗೆ ಕೊನೆಗೂ ಗುಡ್ ಬೈ ಹೇಳಿದ ಅಣ್ಣಾಮಲೈ Read More »

ನಡುರಾತ್ರಿ ಆಸ್ಪತ್ರೆಗೆ ಭೇಟಿ ನೀಡಿದ ಸಚಿವ ಖಾದರ್| ಜಯನಗರ ಆಸ್ಪತ್ರೆಯ ಅವಸ್ಥೆಗೆ ಫುಲ್ ಗರಂ

ಸಮಗ್ರ ನ್ಯೂಸ್: ನೂತನ ಸಚಿವರಿಗೆ ಖಾತೆ ಹಂಚಿಕೆಯಾಗ್ತಿದ್ದಂತೆ ಫುಲ್​ ಅಲರ್ಟ್​ ಆಗಿದ್ದಾರೆ. ಖಾತೆ ಹಂಚಿಕೆಯಾದ ಒಂದೇ ಗಂಟೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಯು ಟಿ ಖಾದರ್ ಅವರು ಜಯನಗರ ಸಾರ್ವಜನಿಕ ಆಸ್ಪತ್ರೆಗೆ ದಿಢೀರ್ ಭೇಟಿ ಕೊಟ್ಟಿದ್ದಾರೆ. ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಬೆಂಗಳೂರಿನ ಜಯನಗರ ಜನರಲ್ ಆಸ್ಪತ್ರೆಗೆ ಭೇಟಿ ನೀಡಿದ ಯುಟಿ ಖಾದರ್​ ಅವರು, ಆಸ್ಪತ್ರೆ ಸಿಬ್ಬಂದಿ ಬಗ್ಗೆ ಪರಿಶೀಲನೆ, ಸ್ವಚ್ಛತೆ, ರೋಗಿಗಳಿಗೆ ಚಿಕಿತ್ಸೆ ವಿಧಾನ, ತುರ್ತು ಚಿಕಿತ್ಸಾ ಘಟಕದಲ್ಲಿ ಪರಿಶೀಲನೆ ನಡೆಸಿದ್ದಾರೆ.

ನಡುರಾತ್ರಿ ಆಸ್ಪತ್ರೆಗೆ ಭೇಟಿ ನೀಡಿದ ಸಚಿವ ಖಾದರ್| ಜಯನಗರ ಆಸ್ಪತ್ರೆಯ ಅವಸ್ಥೆಗೆ ಫುಲ್ ಗರಂ Read More »

ಕೇರಳ ಪ್ರವೇಶಿಸಿದ ಮುಂಗಾರು| ಕರ್ನಾಟಕ ಕರಾವಳಿಯಲ್ಲಿ ಟ್ರಕ್ಕಿಂಗ್, ಕಡಲು, ನದಿತೀರಗಳಿಗೆ ನಿರ್ಬಂಧ

ಸಮಗ್ರ ನ್ಯೂಸ್: ಕೇರಳಕ್ಕೆ ಕೊನೆಗೂ ಮುಂಗಾರು ಮಾರುತಗಳು ಪ್ರವೇಶ ಮಾಡಿರುವುದಾಗಿ ಭಾರತೀಯ ಹವಾಮಾನ ಇಲಾಖೆ ಅಧಿಕೃತವಾಗಿ ತಿಳಿಸಿದೆ. ಇದರ ಬೆನ್ನಲ್ಲೇ ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಗೂ ಇನ್ನೆರಡು ದಿನಗಳಲ್ಲಿ ಮುಂಗಾರು ಮಳೆ ಆಗಮನವಾಗುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ. ಮಳೆಗಾಲದ ಆರಂಭದಲ್ಲೇ ಸಂಭವಿಸಬಹುದಾದ ನೆರೆ, ಪ್ರವಾಹ ಹಾಗೂ ಭೂಕುಸಿತದಂತಹ ಪ್ರಾಕೃತಿಕ ವಿಕೋಪಗಳನ್ನು ಸಮರ್ಥವಾಗಿ ಎದುರಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದೆ. ಕರಾವಳಿಯಲ್ಲಿ ಮಳೆಗಾಲದ ಸಂದರ್ಭದಲ್ಲಿ ಉಂಟಾಗುವ ಅವಾಂತರಗಳು ಮತ್ತು ಪ್ರಾಣಹಾನಿಯ ಆತಂಕವನ್ನು ತಪ್ಪಿಸಲು ಜಿಲ್ಲಾಧಿಕಾರಿ

ಕೇರಳ ಪ್ರವೇಶಿಸಿದ ಮುಂಗಾರು| ಕರ್ನಾಟಕ ಕರಾವಳಿಯಲ್ಲಿ ಟ್ರಕ್ಕಿಂಗ್, ಕಡಲು, ನದಿತೀರಗಳಿಗೆ ನಿರ್ಬಂಧ Read More »

ಶ್ರೇಯಸ್ ಅಯ್ಯರ್ ಗೆ ಟಿ20 ಟೀಂ ಕ್ಯಾಪ್ಟನ್ ಪಟ್ಟ| ಸೂರ್ಯಕುಮಾರ್ ಗೆ ಕೋಕ್ ಕೊಟ್ಟ ಬಿಸಿಸಿಐ

ಸಮಗ್ರ ನ್ಯೂಸ್: ಭಾರತೀಯ ಟಿ20 ಕ್ರಿಕೆಟ್ ತಂಡದಲ್ಲಿ ಪ್ರಮುಖ ಬದಲಾವಣೆಯಾಗಿದ್ದು, ಸೂರ್ಯಕುಮಾರ್ ಯಾದವ್ ಅವರ ಸ್ಥಾನಕ್ಕೆ ಶ್ರೇಯಸ್ ಅಯ್ಯರ್ ಅವರನ್ನು ನೂತನ ನಾಯಕರನ್ನಾಗಿ ಬಿಸಿಸಿಐ (BCCI) ಅಧಿಕೃತವಾಗಿ ನೇಮಕ ಮಾಡಿದೆ. ಮಾರ್ಚ್ 2026 ರಲ್ಲಿ ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಭಾರತ ತಂಡ ಟಿ20 ವಿಶ್ವಕಪ್ ಪ್ರಶಸ್ತಿಯನ್ನು ಯಶಸ್ವಿಯಾಗಿ ಉಳಿಸಿಕೊಂಡಿದ್ದರೂ ಸಹ, ಬ್ಯಾಟಿಂಗ್‌ನಲ್ಲಿ ಅವರ ವೈಯಕ್ತಿಕ ಫಾರ್ಮ್ ಕೈಕೊಟ್ಟಿರುವುದು ಈ ದಿಢೀರ್ ಬದಲಾವಣೆಗೆ ಕಾರಣವಾಗಿದೆ ಎನ್ನಲಾಗಿದೆ. ಮಹತ್ತರ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಭಾರತೀಯ ಆಯ್ಕೆಗಾರರು ಇಂತಹ ಕಠಿಣ ನಿರ್ಧಾರ

ಶ್ರೇಯಸ್ ಅಯ್ಯರ್ ಗೆ ಟಿ20 ಟೀಂ ಕ್ಯಾಪ್ಟನ್ ಪಟ್ಟ| ಸೂರ್ಯಕುಮಾರ್ ಗೆ ಕೋಕ್ ಕೊಟ್ಟ ಬಿಸಿಸಿಐ Read More »

ಗಡೀಪಾರು ಆದೇಶ ಪ್ರಶ್ನಿಸಿ ತಿಮರೋಡಿ‌ ಸಲ್ಲಿಸಿದ್ದ ಮನವಿ ವಜಾಗೊಳಿಸಿದ ಹೈಕೋರ್ಟ್

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಉಪ ವಿಭಾಗಾಧಿಕಾರಿ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಗಡಿಪಾರು ಆದೇಶ ರದ್ದು ಕೋರಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಅರ್ಜಿಯನ್ನು ಏಪ್ರಿಲ್ 30ರಂದು ವಜಾಗೊಳಿಸಿದ್ದ ಏಕಸದಸ್ಯ ನ್ಯಾಯಪೀಠ, ಸರ್ಕಾರದ ಮುಂದೆ ಮೇಲ್ಮನವಿ ಸಲ್ಲಿಸುವಂತೆ ಆದೇಶಿಸಿತ್ತು. ಈ ಆದೇಶ ಪ್ರಶ್ನಿಸಿ ತಿಮರೋಡಿ ವಿಭಾಗೀಯ ನ್ಯಾಯಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಮೇಲ್ಮನವಿಯನ್ನು ಗುರುವಾರ ವಿಚಾರಣೆ ನಡೆಸಿದ

ಗಡೀಪಾರು ಆದೇಶ ಪ್ರಶ್ನಿಸಿ ತಿಮರೋಡಿ‌ ಸಲ್ಲಿಸಿದ್ದ ಮನವಿ ವಜಾಗೊಳಿಸಿದ ಹೈಕೋರ್ಟ್ Read More »

ರಾಜ್ಯ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ| ಯಾರಿಗೆ ಯಾವ ಇಲಾಖೆ? ಇಲ್ಲಿದೆ ಮಾಹಿತಿ…

ಸಮಗ್ರ ನ್ಯೂಸ್: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಸಚಿವ ಸಂಪುಟದ ಖಾತೆ ಹಂಚಿಕೆ ಪ್ರಕ್ರಿಯೆ ಅಂತಿಮ ಹಂತಕ್ಕೆ ತಲುಪಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಂಪುಟದ ಪ್ರಮುಖ 13 ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಿದ್ದು, ಅಧಿಕೃತ ಘೋಷಣೆಯಾಗಿದೆ. ಆದರೆ, ಖಾತೆ ಹಂಚಿಕೆಯ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಎಚ್ಚರಿಕೆ ನೀಡಿದ್ದರೂ ಸದ್ಯಕ್ಕೆ ಎಲ್ಲವೂ ತಣ್ಣಗಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹಣಕಾಸು ಇಲಾಖೆಯನ್ನು

ರಾಜ್ಯ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ| ಯಾರಿಗೆ ಯಾವ ಇಲಾಖೆ? ಇಲ್ಲಿದೆ ಮಾಹಿತಿ… Read More »

ವಿದ್ಯಾರ್ಥಿಗಳಿಗೆ ಉಚಿತ ಪಾಸ್ ಘೋಷಣೆ| ಅರ್ಜಿ ಸಲ್ಲಿಸಲು ಏನ್ ಮಾಡ್ಬೇಕು? ಇಲ್ಲಿದೆ ಫುಲ್ ಡೀಟೈಲ್ಸ್

ಸಮಗ್ರ ನ್ಯೂಸ್: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಡಿಕೆ ಶಿವಕುಮಾರ್ ವಿದ್ಯಾರ್ಥಿ ಸಮೂಹಕ್ಕೆ ಭರ್ಜರಿ ಕೊಡುಗೆ ನೀಡಿದ್ದಾರೆ. ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ‘ಉಚಿತ ಬಸ್ ಪಾಸ್’ ನೀಡುವುದಾಗಿ ಮುಖ್ಯಮಂತ್ರಿಗಳು ಮಹತ್ತರ ಘೋಷಣೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರುಮಹಾನಗರ ಸಾರಿಗೆ ಸಂಸ್ಥೆ (BMTC) ಹಾಗೂ KSRTCಯಲ್ಲಿ ಸದ್ಯ ಪಾಸ್ ಪಡೆಯಲು ಇರುವ ನಿಯಮಗಳು, ಪ್ರಸ್ತುತ ಇರುವ ದರ ಪಟ್ಟಿ ಹಾಗೂ ಇನ್ನು ಮುಂದೆ ಉಚಿತ ಪಾಸ್ ಪ್ರಕ್ರಿಯೆ ಹೇಗೆ ನಡೆಯಲಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ವಿದ್ಯಾರ್ಥಿಗಳಿಗೆ ಉಚಿತ ಪಾಸ್ ಘೋಷಣೆ| ಅರ್ಜಿ ಸಲ್ಲಿಸಲು ಏನ್ ಮಾಡ್ಬೇಕು? ಇಲ್ಲಿದೆ ಫುಲ್ ಡೀಟೈಲ್ಸ್ Read More »

ಜೂ.5ರಂದು ರಾಜ್ಯಕ್ಕೆ ಮುಂಗಾರು ಆಗಮನ

ಸಮಗ್ರ ನ್ಯೂಸ್: ರಾಜ್ಯದ ಜನತೆ ಕಾತರದಿಂದ ಕಾಯುತ್ತಿದ್ದ ಮುಂಗಾರು ಮಳೆಯ ಆಗಮನದಲ್ಲಿ ಯಾವುದೇ ವಿಳಂಬವಿಲ್ಲ ಎಂಬ ಸಿಹಿ ಸುದ್ದಿಯನ್ನು ಹವಾಮಾನ ಇಲಾಖೆ ನೀಡಿದೆ. ನಿಗದಿತ ದಿನಾಂಕದಂತೆ ಜೂನ್ 5 ರಂದೇ ಮಳೆರಾಯ ಕರ್ನಾಟಕವನ್ನು ಪ್ರವೇಶಿಸಲಿದ್ದು, ರಾಜ್ಯದಲ್ಲಿ ಮಳೆಗಾಲಕ್ಕೆ ಅಧಿಕೃತ ಚಾಲನೆ ಸಿಗಲಿದೆ. ರಾಜ್ಯದ ಜನತೆ ಕಾತರದಿಂದ ಕಾಯುತ್ತಿದ್ದ ಮುಂಗಾರು ಮಳೆಯ ಆಗಮನಕ್ಕೆ ಕಾಲ ಸನ್ನಿಹಿತವಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಇತ್ತೀಚಿನ ಮಾಹಿತಿ ಪ್ರಕಾರ, ಜೂನ್ 5 ರಂದು ಮುಂಗಾರು ಕರ್ನಾಟಕವನ್ನು ಪ್ರವೇಶಿಸಲಿದೆ. ರ್ನಾಟಕದಲ್ಲಿ ಮುಂಗಾರು

ಜೂ.5ರಂದು ರಾಜ್ಯಕ್ಕೆ ಮುಂಗಾರು ಆಗಮನ Read More »

ವಿಧಾನ ಪರಿಷತ್ ಚುನಾವಣೆ| ಕಾಂಗ್ರೆಸ್ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟ

ಸಮಗ್ರ ನ್ಯೂಸ್: ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ನಿಂದ ಅಭ್ಯರ್ಥಿಗಳ ಪಟ್ಟಿ ಪ್ರಕಟಗೊಂಡಿದೆ. ಪಕ್ಷದ ಹೈಕಮಾಂಡ್ ಪ್ರಕಟಿಸಿರುವ ಪಟ್ಟಿಯಲ್ಲಿ ಬಿ.ಕೆ. ಹರಿಪ್ರಸಾದ್, ತಿಪ್ಪಣ್ಣಪ್ಪ ಕಮಕನೂರು, ಪಿ.ವಿ. ಮೋಹನ್ ಹಾಗೂ ಶಿವಣ್ಣ ಮಳವಳ್ಳಿ ಅವರ ಹೆಸರುಗಳು ಅಂತಿಮಗೊಂಡಿವೆ. ಈ ಪೈಕಿಯ ಹಿರಿಯ ನಾಯಕರಾದ ಬಿ.ಕೆ. ಹರಿಪ್ರಸಾದ್ ಮತ್ತು ತಿಪ್ಪಣ್ಣಪ್ಪ ಕಮಕನೂರು ಅವರಿಗೆ ಪಕ್ಷವು ಮತ್ತೊಮ್ಮೆ ಮರು ಆಯ್ಕೆಯ ಅವಕಾಶ ನೀಡಿದೆ. ಉಳಿದಂತೆ ಪಿ.ವಿ. ಮೋಹನ್ ಹಾಗೂ ಮಳವಳ್ಳಿ ಶಿವಣ್ಣ ಅವರು ಈ ಬಾರಿ ಹೊಸದಾಗಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ವಿಧಾನ ಪರಿಷತ್ ಚುನಾವಣೆ| ಕಾಂಗ್ರೆಸ್ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟ Read More »