ಸಮಗ್ರ ಸಮಾಚಾರ

ಜೂ.5ರಂದು ರಾಜ್ಯಕ್ಕೆ ಮುಂಗಾರು ಆಗಮನ

ಸಮಗ್ರ ನ್ಯೂಸ್: ರಾಜ್ಯದ ಜನತೆ ಕಾತರದಿಂದ ಕಾಯುತ್ತಿದ್ದ ಮುಂಗಾರು ಮಳೆಯ ಆಗಮನದಲ್ಲಿ ಯಾವುದೇ ವಿಳಂಬವಿಲ್ಲ ಎಂಬ ಸಿಹಿ ಸುದ್ದಿಯನ್ನು ಹವಾಮಾನ ಇಲಾಖೆ ನೀಡಿದೆ. ನಿಗದಿತ ದಿನಾಂಕದಂತೆ ಜೂನ್ 5 ರಂದೇ ಮಳೆರಾಯ ಕರ್ನಾಟಕವನ್ನು ಪ್ರವೇಶಿಸಲಿದ್ದು, ರಾಜ್ಯದಲ್ಲಿ ಮಳೆಗಾಲಕ್ಕೆ ಅಧಿಕೃತ ಚಾಲನೆ ಸಿಗಲಿದೆ. ರಾಜ್ಯದ ಜನತೆ ಕಾತರದಿಂದ ಕಾಯುತ್ತಿದ್ದ ಮುಂಗಾರು ಮಳೆಯ ಆಗಮನಕ್ಕೆ ಕಾಲ ಸನ್ನಿಹಿತವಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಇತ್ತೀಚಿನ ಮಾಹಿತಿ ಪ್ರಕಾರ, ಜೂನ್ 5 ರಂದು ಮುಂಗಾರು ಕರ್ನಾಟಕವನ್ನು ಪ್ರವೇಶಿಸಲಿದೆ. ರ್ನಾಟಕದಲ್ಲಿ ಮುಂಗಾರು […]

ಜೂ.5ರಂದು ರಾಜ್ಯಕ್ಕೆ ಮುಂಗಾರು ಆಗಮನ Read More »

ವಿಧಾನ ಪರಿಷತ್ ಚುನಾವಣೆ| ಕಾಂಗ್ರೆಸ್ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟ

ಸಮಗ್ರ ನ್ಯೂಸ್: ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ನಿಂದ ಅಭ್ಯರ್ಥಿಗಳ ಪಟ್ಟಿ ಪ್ರಕಟಗೊಂಡಿದೆ. ಪಕ್ಷದ ಹೈಕಮಾಂಡ್ ಪ್ರಕಟಿಸಿರುವ ಪಟ್ಟಿಯಲ್ಲಿ ಬಿ.ಕೆ. ಹರಿಪ್ರಸಾದ್, ತಿಪ್ಪಣ್ಣಪ್ಪ ಕಮಕನೂರು, ಪಿ.ವಿ. ಮೋಹನ್ ಹಾಗೂ ಶಿವಣ್ಣ ಮಳವಳ್ಳಿ ಅವರ ಹೆಸರುಗಳು ಅಂತಿಮಗೊಂಡಿವೆ. ಈ ಪೈಕಿಯ ಹಿರಿಯ ನಾಯಕರಾದ ಬಿ.ಕೆ. ಹರಿಪ್ರಸಾದ್ ಮತ್ತು ತಿಪ್ಪಣ್ಣಪ್ಪ ಕಮಕನೂರು ಅವರಿಗೆ ಪಕ್ಷವು ಮತ್ತೊಮ್ಮೆ ಮರು ಆಯ್ಕೆಯ ಅವಕಾಶ ನೀಡಿದೆ. ಉಳಿದಂತೆ ಪಿ.ವಿ. ಮೋಹನ್ ಹಾಗೂ ಮಳವಳ್ಳಿ ಶಿವಣ್ಣ ಅವರು ಈ ಬಾರಿ ಹೊಸದಾಗಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ವಿಧಾನ ಪರಿಷತ್ ಚುನಾವಣೆ| ಕಾಂಗ್ರೆಸ್ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟ Read More »

ರಾಜ್ಯದ ‌ಎಲ್ಲಾ‌ ವಿದ್ಯಾರ್ಥಿಗಳಿಗೂ ಫ್ರೀ ಬಸ್ ಪಾಸ್ – ಸಿಎಂ ಡಿಕೆಶಿ

ಸಮಗ್ರ ನ್ಯೂಸ್: ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ ನೂತನ ಸಿಎಂ ಡಿ.ಕೆ ಶಿವಕುಮಾರ್ ಘೋಷಿಸಿದ್ದಾರೆ. ಆ ಮೂಲಕ ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪ್ರಯಾಣ ಘೋಷಿಸಿದ್ದಾರೆ. ಇದಕ್ಕಾಗಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವಂತೆಯೂ ತಿಳಿಸಿದ್ದಾರೆ. ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಗ್ಯಾರೆಂಟಿ ನೀಡಿತ್ತು. ಇದೀಗ ಡಿಕೆ ಶಿವಕುಮಾರ್ ನೇತೃತ್ವದ ಸರ್ಕಾರ ಗಂಡು ಮಕ್ಕಳಿಗೂ ಉಚಿತ ಪಾಸ್ ನೀಡಲಾಗುತ್ತದೆ ಎಂದಿದ್ದಾರೆ. ಈ ಮೂಲಕ ರಾಜ್ಯದಲ್ಲಿರುವ ಎಲ್ಲಾ ವಿದ್ಯಾರ್ಥಿಗಳು ಉಚಿತವಾಗಿ ಸಾರಿಗೆ ಬಸ್‌ನಲ್ಲಿ

ರಾಜ್ಯದ ‌ಎಲ್ಲಾ‌ ವಿದ್ಯಾರ್ಥಿಗಳಿಗೂ ಫ್ರೀ ಬಸ್ ಪಾಸ್ – ಸಿಎಂ ಡಿಕೆಶಿ Read More »

ದೆಹಲಿಯಲ್ಲಿ ಭೀಕರ ಅಗ್ನಿ ದುರಂತ| ಹೊಟೇಲ್ ನಲ್ಲಿ ಕಾಣಿಸಿಕೊಂಡ ಬೆಂಕಿಗೆ 20 ಮಂದಿ ಬಲಿ

ಸಮಗ್ರ ನ್ಯೂಸ್: ದಕ್ಷಿಣ ದೆಹಲಿಯ ಮಾಳವೀಯ ನಗರದಲ್ಲಿ ಬುಧವಾರ ಬೆಳಿಗ್ಗೆ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 20 ಜನರು ಜೀವಂತವಾಗಿ ದಹನವಾಗಿರುವ ಘಟನೆ ನಡೆದಿದೆ. ಇಲ್ಲಿನ ಪ್ರಸಿದ್ಧ ‘ಲೆಮನ್ ಗ್ರೀನ್’ ರೆಸ್ಟೋರೆಂಟ್‌ನಲ್ಲಿ ಈ ಅವಘಡ ಸಂಭವಿಸಿದೆ. ಬುಧವಾರ ಬೆಳಿಗ್ಗೆ ಸುಮಾರು 9 ಗಂಟೆಯ ಸುಮಾರಿಗೆ ರೆಸ್ಟೋರೆಂಟ್‌ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲೇ ಬೆಂಕಿಯ ಜ್ವಾಲೆ ಮತ್ತು ದಟ್ಟವಾದ ಹೊಗೆ ಇಡೀ ಕಟ್ಟಡವನ್ನು ಆವರಿಸಿಕೊಂಡಿದೆ. ಈ ವೇಳೆ ಉಸಿರುಗಟ್ಟಿಸುವ ವಾತಾವರಣ ನಿರ್ಮಾಣವಾಗಿದ್ದು, ಪ್ರಾಣ ಉಳಿಸಿಕೊಳ್ಳಲು ಮಹಿಳೆಯೊಬ್ಬರು ಕಟ್ಟಡದ

ದೆಹಲಿಯಲ್ಲಿ ಭೀಕರ ಅಗ್ನಿ ದುರಂತ| ಹೊಟೇಲ್ ನಲ್ಲಿ ಕಾಣಿಸಿಕೊಂಡ ಬೆಂಕಿಗೆ 20 ಮಂದಿ ಬಲಿ Read More »

ರಾಜೀನಾಮೆ ವಾಪಾಸ್ ಪಡೆದ ಅಣ್ಣಾಮಲೈ!! ಅಮಿತ್ ಶಾ ಭೇಟಿ ಬಳಿಕ ಉಲ್ಟಾ ಹೊಡೆದ ಸಿಂಗಂ

ಸಮಗ್ರ ನ್ಯೂಸ್: ತಮಿಳುನಾಡು ರಾಜಕೀಯದಲ್ಲಿ ಮತ್ತೆ ಚಕ್ರ ತಿರುಗಿದೆ. ಯಾಕೆಂದರೆ, ಬಿಜೆಪಿಯ ರಾಷ್ಟ್ರಾಧ್ಯಕ್ಷ ನಿತಿನ್​ ನಬೀನ್​ ಅವರಿಗೆ ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು ರಾಜೀನಾಮೆ ನೀಡಿದ್ದಾರೆ ಎನ್ನಲಾಗಿತ್ತು. ಆದ್ರೆ, ನಿತಿನ್ ಭೇಟಿಯ ನಂತರ ಕೇಂದ್ರ ಗೃಹ ಸಚಿವರಾದ ಅಮಿತ್​ ಶಾ ಅವರನ್ನ ಭೇಟಿಯಾದ ಅಣ್ಣಾಮಲೈ ತಮ್ಮ ರಾಜೀನಾಮೆಯ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ ಎನ್ನಲಾಗಿದೆ. ದೆಹಲಿಗೆ ಭೇಟಿ ನೀಡಿರುವ ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು ನಿತಿನ್​ ನಬೀನ್ ಅವರನ್ನ ಭೇಟಿಯಾಗಿ

ರಾಜೀನಾಮೆ ವಾಪಾಸ್ ಪಡೆದ ಅಣ್ಣಾಮಲೈ!! ಅಮಿತ್ ಶಾ ಭೇಟಿ ಬಳಿಕ ಉಲ್ಟಾ ಹೊಡೆದ ಸಿಂಗಂ Read More »

ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜೂ.7ರವರೆಗೆ ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಕರ್ನಾಟಕ ಕರಾವಳಿ ಜಿಲ್ಲೆ ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಜೂನ್‌ 7ರವರೆಗೆ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. 11 ಜಿಲ್ಲೆಗಳಿಗೆ ಜೂ.7ರವರೆಗೆ ಭಾರತೀಯ ಹವಾಮಾನ ಇಲಾಖೆಯು (ಐಎಂಡಿ) ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಗದಗ, ಹಾವೇರಿ, ಧಾರವಾಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಜೂ.7ರ ವರೆಗೆ ಹಳದಿ ಅಲರ್ಟ್‌ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಈ ಅವಧಿಗಳಲ್ಲಿ ಗುಡುಗು, ಮಿಂಚು ಸಮೇತ ಭಾರಿ ಮಳೆಯಾಗುವ ಸಾಧ್ಯತೆಗಳಿವೆ.

ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜೂ.7ರವರೆಗೆ ಭಾರೀ ಮಳೆ ಮುನ್ಸೂಚನೆ Read More »

ಕಾಂಗ್ರೆಸ್ ಕಾರ್ಯಕಾರಣಿ ಸದಸ್ಯರಾಗಿ ಸಿದ್ದರಾಮಯ್ಯ ನೇಮಕ

ಸಮಗ್ರ ನ್ಯೂಸ್: ಕರ್ನಾಟಕದ ರಾಜಕೀಯ ಅಂಗಳದಲ್ಲಿ ಭಾರಿ ಸಂಚಲನ ಮೂಡಿಸಿರುವ ಮಹತ್ವದ ಬೆಳವಣಿಗೆಯೊಂದರಲ್ಲಿ ಹಿರಿಯ ನಾಯಕ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಅನಿರೀಕ್ಷಿತ ಹಾಗೂ ಅತ್ಯಂತ ಪ್ರಭಾವಶಾಲಿ ಉಡುಗೊರೆಯೊಂದನ್ನು ನೀಡಿದೆ. ರಾಜ್ಯದ ಸಾರಥ್ಯ ತೊರೆದ ನಡುವೆಯೇ ಸಿದ್ದರಾಮಯ್ಯ ಅವರನ್ನು ಪಕ್ಷದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಮಿತಿಯಾದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯರನ್ನಾಗಿ ನೇಮಕ ಮಾಡುವ ಮೂಲಕ ದೆಹಲಿ ಮಟ್ಟದಲ್ಲಿ ಅವರ ಸ್ಥಾನಮಾನವನ್ನು ಮತ್ತಷ್ಟು ಹೆಚ್ಚಿಸಲಾಗಿದೆ. ರಾಜ್ಯ ರಾಜಕೀಯದಲ್ಲಿ ಹೊಸ ಬದಲಾವಣೆಗಳು ನಡೆಯುತ್ತಿರುವ ಈ ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷ

ಕಾಂಗ್ರೆಸ್ ಕಾರ್ಯಕಾರಣಿ ಸದಸ್ಯರಾಗಿ ಸಿದ್ದರಾಮಯ್ಯ ನೇಮಕ Read More »

ಜೈಲಿನಲ್ಲಿರುವ ದರ್ಶನ್ ಫೋಟೋ ವೈರಲ್| ಸೊರಗುತ್ತಿರುವ ದಾಸನ ಕಂಡು ಮರುಗಿದ ಜನ

ಸಮಗ್ರ ನ್ಯೂಸ್ : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಆರೋಪದ ಮೇಲೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ರದ್ದು ಎನ್ನಲಾದ ಫೋಟೋ ಒಂದು ವೈರಲ್‌ ಆಗಿದೆ. ತಮ್ಮ ಹಿಂದಿನ ಎಲ್ಲಾ ವರ್ಚಸ್ಸು, ದೇಹದಾರ್ಢ್ಯತೆಗಳನ್ನು ಕಳೆದುಕೊಂಡಂತೆ ಕಾಣುತ್ತಿರುವ ನಟ ದರ್ಶನ್‌ , ತೀವ್ರವಾಗಿ ಸೊರಗಿದಂತೆ ಕಂಡು ಬರುತ್ತಿದ್ದು ಈ ಫೋಟೋ ಅಭಿಮಾನಿಗಳನ್ನು ಆತಂಕಕ್ಕೀಡುಮಾಡಿದೆ. ನಟ ದರ್ಶನ್‌ ಗೆ ಜೈಲಿನಲ್ಲಿ ಮೂಲಭೂತ ಸೌಲಭ್ಯಗಳನ್ನು ನೀಡಲಾಗುತ್ತಿಲ್ಲ ಎಂದು ಆರೋಪಿಸಿ ದರ್ಶನ್‌ ಪರ ವಕೀಲರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು

ಜೈಲಿನಲ್ಲಿರುವ ದರ್ಶನ್ ಫೋಟೋ ವೈರಲ್| ಸೊರಗುತ್ತಿರುವ ದಾಸನ ಕಂಡು ಮರುಗಿದ ಜನ Read More »

ಕೈ-ಕಾಲು ಕತ್ತರಿಸುವ ಶಿಕ್ಷೆ ವಿಧಿಸುವಂತಾದ್ರೆ ಮಾತ್ರ ಜನರು ಕಾನೂನು ಪಾಲಿಸುತ್ತಾರೆ: ಹೈಕೋರ್ಟ್‌ ನ್ಯಾಯಮೂರ್ತಿ

ಸಮಗ್ರ ನ್ಯೂಸ್ : ಕೈ-ಕಾಲು ಕತ್ತರಿಸುವಂತಹ ಶಿಕ್ಷೆ ವಿಧಿಸಿದರೆ ಮಾತ್ರ ಜನರು ಕಾನೂನು ಪಾಲನೆ ಮಾಡುತ್ತಾರೆ ಎಂದು ಹೈಕೋರ್ಟ್‌ ನ್ಯಾಯಮೂರ್ತಿ ಆರ್‌.ನಟರಾಜ್‌ ಮೌಖಿಕವಾಗಿ ಅಭಿಪ್ರಾಯಪಟ್ಟಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರು ತಮಗೆ ಲಭ್ಯವಿರುವ ಹಕ್ಕುಗಳನ್ನು ಬಳಸಿಕೊಳ್ಳುತ್ತಿದ್ದಾರೆ. ಮಧ್ಯಪ್ರಾಚ್ಯ ದೇಶಗಳ ರೀತಿಯಲ್ಲಿಯೇ ನಮ್ಮಲ್ಲೂ ಕೈ-ಕಾಲು ಕತ್ತರಿಸುವ ಶಿಕ್ಷೆ ವಿಧಿಸಿ ಜನರು ಕಾನೂನು ಪಾಲಿಸುತ್ತಾರೆಂದು ನ್ಯಾಯಮೂರ್ತಿ ಹೇಳಿದ್ದಾರೆ. ಅತ್ಯಾಚಾರ ಆರೋಪದಲ್ಲಿ ಬಂಧಿನಕ್ಕೊಳಗಾಗಿರುವ ತೆಲಂಗಾಣದ ಯುವಕನೊಬ್ಬ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ವೇಳೆ ಈ ಮಾತುಗಳನ್ನಾಡಿದ್ದಾರೆ.ನಾವು ಅಪರಾಧಿಗಳ ವಿರುದ್ಧ ಕಠಿಣ ಕ್ರಮ

ಕೈ-ಕಾಲು ಕತ್ತರಿಸುವ ಶಿಕ್ಷೆ ವಿಧಿಸುವಂತಾದ್ರೆ ಮಾತ್ರ ಜನರು ಕಾನೂನು ಪಾಲಿಸುತ್ತಾರೆ: ಹೈಕೋರ್ಟ್‌ ನ್ಯಾಯಮೂರ್ತಿ Read More »

ಫೈನಲ್ ನಲ್ಲಿ ಆರ್‌ಸಿಬಿ vs ಗುಜರಾತ್ ಟೈಟಾನ್ಸ್ | ಅಚ್ಚರಿ ಮೂಡಿಸಿದ ಗಿಣಿ ಶಾಸ್ತ್ರ

ಸಮಗ್ರ ನ್ಯೂಸ್ : ಇಂದು ಐಪಿಎಲ್ ಫೈನಲ್ ಪಂದ್ಯ ನಡೆಯಲಿದ್ದು, ರಾಜ್ಯದಲ್ಲಿ ಆರ್‌ಸಿಬಿ ಅಭಿಮಾನಿಗಳು ಪಂದ್ಯದ ಪ್ರತಿ ಎಸೆತ ಸಂಭ್ರಮಿಸಲು ಎಲ್ಲಾ ತಯಾರಿ ಮಾಡಿಕೊಂಡಿದ್ದಾರೆ. ಇತ್ತ ಹಲವು ಅಭಿಮಾನಿಗಳು ಅಹಮ್ಮದಾಬಾದ್ ಪ್ರಯಾಣ ಮಾಡಿದ್ದು, ಕ್ರೀಡಾಂಗಣದಲ್ಲಿ ಪಂದ್ಯ ವೀಕ್ಷಿಸಲು ಸಜ್ಜಾಗಿದ್ದಾರೆ.ಇದೀಗ ಗಿಣಿ ಶಾಸ್ತ್ರದ ಮೂಲಕ ಈ ಬಾರಿ ಟ್ರೋಫಿ ವಿನ್ನರ್ ತಿಳಿದುಕೊಳ್ಳುವ ಪ್ರಯತ್ನ ಮಾಡಲಾಗಿದೆ. ಗಿಣಿ ಹೆಕ್ಕಿದ ಲೋಗೋ ಹಲವರಿಗೆ ಅಚ್ಚರಿ ನೀಡಿದೆ. ಗಿಣಿ ಹೇಳಿದ ಐಪಿಎಲ್ 2026 ಫೈನಲ್ ಭವಿಷ್ಯಐಪಿಎಲ್ ಫೈನಲ್ ಪಂದ್ಯದಲ್ಲಿ ಆರ್‌ಸಿಬಿ ಹಾಗೂ ಗುಜರಾತ್

ಫೈನಲ್ ನಲ್ಲಿ ಆರ್‌ಸಿಬಿ vs ಗುಜರಾತ್ ಟೈಟಾನ್ಸ್ | ಅಚ್ಚರಿ ಮೂಡಿಸಿದ ಗಿಣಿ ಶಾಸ್ತ್ರ Read More »