ಸಮಗ್ರ ಸಮಾಚಾರ

ಬಸ್ ನಿಂದ ಬಿದ್ದು ವಿದ್ಯಾರ್ಥಿನಿ ಸಾವು

ಸಮಗ್ರ ನ್ಯೂಸ್: ರಾಜ್ಯ ಸಾರಿಗೆ ಬಸ್‌ನಿಂದ ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಹಾವೇರಿಯಲ್ಲಿ ನಡೆದಿದೆ. ವಾಸನ ಹಳ್ಳಿಯ ನಿವಾಸಿ ಮಧು ಕುಂಬಾರ(14) ಮೃತ ದುರ್ದೈವಿ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಕುಸನೂರ ಗ್ರಾಮದ ಬಳಿ ಈ ಘಟನೆ ನಡೆದಿದೆ. ಮೃತ ಬಾಲಕಿಯ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸಾರಿಗೆ ಬಸ್ ಚಾಲಕನ ವಿರುದ್ಧ ದೂರು ದಾಖಲಾಗಿದೆ. ಕರ್ನಾಟಕ ಸರ್ಕಾರ ‘ಶಕ್ತಿ’ ಯೋಜನೆಯನ್ನು ಜಾರಿಗೆ ತಂದ ದಿನವೇ ಈ ಘಟನೆ ನಡೆದಿರುವುದು ದುರ್ದೈವದ ಸಂಗತಿ.ಶಾಲೆಗೆ […]

ಬಸ್ ನಿಂದ ಬಿದ್ದು ವಿದ್ಯಾರ್ಥಿನಿ ಸಾವು Read More »

ಉಳ್ಳಾಲ: 24 ಪುಟಗಳ ಡೆತ್ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆ|ನೂತನ ಮನೆ ಖರೀದಿಸಿದ ಐದೇ ದಿನದಲ್ಲಿ ಏನಾಯಿತು ಈಕೆಗೆ..?| ಇದಕ್ಕೆಲ್ಲ ಕಾರಣ ಬ್ಯಾಂಕ್ ಅಧಿಕಾರಿಗಳ..!

ಸಮಗ್ರ ನ್ಯೂಸ್: ಯುವತಿಯೋರ್ವಳು 24 ಪುಟಗಳ ಡೆತ್ನೋಟ್ ಬರೆದಿಟ್ಟು ನೇಣು ಬಿಗಿದು ಆತ್ಮ ಹತ್ಯೆಗೈದ ಘಟನೆ ಕುಂಪಲ ಚಿತ್ರಾಂಜಲಿ ನಗರದಲ್ಲಿ ನಡೆದಿದೆ. ಮೂಲತ: ಫರಂಗಿಪೇಟೆಯ ಸದ್ಯ ಕುಂಪಲ ಚಿತ್ರಾಂಜಲಿ ನಗರದ ನಿವಾಸಿಯಾಗಿದ್ದ ಅಶ್ವಿನಿ ಬಂಗೇರ(25)ಆತ್ಮ ಹತ್ಯೆಗೈದ ಯುವತಿ.ನಿನ್ನೆ ರಾತ್ರಿ ಅಶ್ವಿನಿ ತನ್ನ‌ ಸ್ನೇಹಿತೆ ಜೊತೆ ಚಾಟ್ ಮಾಡಿದ್ದಲೆನ್ನಲಾಗಿದ್ದು ಸ್ನೇಹಿತೆ ಬೆಳಿಗ್ಗೆ ಬಂದು ಕೋಣೆಯ ಬಾಗಿಲು ಒಡೆದು ನೋಡಿದಾಗ ಅಶ್ವಿನಿ ಫ್ಯಾನಿಗೆ ಸೀರೆಯಿಂದ ನೇಣು ಬಿಗಿದು ಆತ್ಮ ಹತ್ಯೆಗೈದಿದ್ದು ಬೆಳಕಿಗೆ ಬಂದಿದೆ. ಅಶ್ವಿನಿ ಬರೆದ 24 ಪುಟಗಳ ಡೆತ್

ಉಳ್ಳಾಲ: 24 ಪುಟಗಳ ಡೆತ್ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆ|ನೂತನ ಮನೆ ಖರೀದಿಸಿದ ಐದೇ ದಿನದಲ್ಲಿ ಏನಾಯಿತು ಈಕೆಗೆ..?| ಇದಕ್ಕೆಲ್ಲ ಕಾರಣ ಬ್ಯಾಂಕ್ ಅಧಿಕಾರಿಗಳ..! Read More »

ಆರೋಗ್ಯ ಸಚಿವರ ಆಪ್ತ ಕಾರ್ಯದರ್ಶಿಯಾಗಿ ಕೆ.ಎ ಹಿದಾಯತುಲ್ಲ(KAS) ನೇಮಕ

ಸಮಗ್ರ ನ್ಯೂಸ್: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಆಪ್ತ ಕಾರ್ಯದರ್ಶಿಯಾಗಿ ಕೆ.ಎ ಹಿದಾಯತ್ತುಲ್ಲ ನೇಮಕರಾಗಿದ್ದಾರೆ. ಹಿರಿಯ ಕೆಎಎಸ್ ಅಧಿಕಾರಿಯಾಗಿರುವ ಹಿದಾಯುತ್ತುಲ್ಲಾ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದು, ಇವರು ಈ ಮೊದಲು ಬೆಂಗಳೂರು ನಗರಾಭಿವೃದ್ಧಿ ಇಲಾಖೆಯ ಜಂಟಿ ಕಾರ್ಯದರ್ಶಿಯಾಗಿ ಮತ್ತು ಕಂದಾಯ ಇಲಾಖೆಯ ಸರ್ಕಾರದ ಅಪರ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು. ಸದಾ ಜನರ ಪರವಾಗಿ ಇರುವ, ಪ್ರಾಮಾಣಿಕ ಕೆಎಎಸ್​ ಅಧಿಕಾರಿ ಹಿದಾಯತ್ತುಲ್ಲ ಅವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಗೇರುಕಟ್ಟೆ ನಿವಾಸಿಯಾಗಿದ್ದು,

ಆರೋಗ್ಯ ಸಚಿವರ ಆಪ್ತ ಕಾರ್ಯದರ್ಶಿಯಾಗಿ ಕೆ.ಎ ಹಿದಾಯತುಲ್ಲ(KAS) ನೇಮಕ Read More »

ಮಂಡ್ಯ: ದಶಪಥ ಹೆದ್ದಾರಿಯಲ್ಲಿ ಮೂರು ಸುತ್ತು ಪಲ್ಟಿ ಹೊಡೆದ ಕಾರು | ಐವರು ಜಖಂ; ಇಬ್ಬರು ಗಂಭೀರ

ಸಮಗ್ರ ನ್ಯೂಸ್: ಬೆಂಗಳೂರು- ಮೈಸೂರು ದಶಪಥ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಗಂಭೀರ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಟೈರ್ ಸ್ಫೋಟಗೊಂಡ ಪರಿಣಾಮ ಚಲಿಸುತ್ತಿದ್ದ ಕಾರೊಂದು ಮೂರು ಸುತ್ತು ಪಲ್ಟಿ ಹೊಡೆದಿರುವ ಘಟನೆ ಮಂಡ್ಯ ಜಿಲ್ಲೆಯ ಚಿಕ್ಕಮಂಡ್ಯ ಬಳಿಯ ದಶಪಥ ಎಕ್ಸ್ ಪ್ರೆಸ್‍ವೇನಲ್ಲಿ ನಡೆದಿದೆ. ಕಾರು ಬೆಂಗಳೂರು ಕಡೆಯಿಂದ ಮೈಸೂರಿನತ್ತ ತೆರಳುತ್ತಿತ್ತು. ಭೀಕರ ಅಪಘಾತದಲ್ಲಿ ಐವರು ಗಂಭಿರವಾಗಿ ಗಾಯಗೊಂಡಿದ್ದಾರೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಮಂಡ್ಯದ ಮಿಮ್ಸ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರಿನಲ್ಲಿದ್ದವರೆಲ್ಲ ಬೆಂಗಳೂರು ಮೂಲದವರು ಎನ್ನಲಾಗಿದೆ.

ಮಂಡ್ಯ: ದಶಪಥ ಹೆದ್ದಾರಿಯಲ್ಲಿ ಮೂರು ಸುತ್ತು ಪಲ್ಟಿ ಹೊಡೆದ ಕಾರು | ಐವರು ಜಖಂ; ಇಬ್ಬರು ಗಂಭೀರ Read More »

ಚಾರ್ಮಾಡಿ: ಬಸ್ ನ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸಾವು

ಸಮಗ್ರ ನ್ಯೂಸ್: ಸರ್ಕಾರಿ ಬಸ್ಸಿನ ಹಿಂಬದಿ ಚಕ್ರಕ್ಕೆ ಸಿಲುಕಿ ಸ್ಕೂಟಿ ಸವಾರ ಸಾವನ್ನಪ್ಪಿದ ಘಟನೆ ಚಾರ್ಮಾಡಿ ಘಾಟಿಯ ಮೂರನೇ ತಿರುವಿನಲ್ಲಿ ನಡೆದಿದೆ. ಘಾಟಿಯ ರಸ್ತೆ ತಿರುವಿನಲ್ಲಿ ನಿಯಂತ್ರಣ ತಪ್ಪಿ ಸವಾರನು ಬಿದ್ದು ಸಾವನ್ನಪ್ಪಿದ್ದಾನೆ. ಸಾವನ್ನಪ್ಪಿರುವ ವ್ಯಕ್ತಿಯನ್ನು ಮಾಗುಂಡಿ ಗ್ರಾಮದ ಇರ್ಫಾನ್ (29) ಎನ್ನಲಾಗಿದ್ದು ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ಸರ್ಕಾರಿ ಬಸ್ ಧರ್ಮಸ್ಥಳದಿಂದ ಹರಪ್ಪನ ಹಳ್ಳಿಗೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ. ಚಿಕ್ಕಮಗಳೂರು ಹಾಗೂ ದಕ್ಷಿಣ ಕನ್ನಡಕ್ಕೆ ಸಂಪರ್ಕ ಕಲ್ಪಿಸುವ ಚಾರ್ಮುಡಿ ಘಾಟ್ ನಲ್ಲಿ ಈ ದುರ್ಘಟನೆ ಸಂಭವಿಸಿದೆ.

ಚಾರ್ಮಾಡಿ: ಬಸ್ ನ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸಾವು Read More »

ಕರಾವಳಿಗೆ ಎಂಟ್ರಿ ಕೊಡದ ಮುಂಗಾರು| ಆತಂಕದಲ್ಲಿ ರೈತಾಪಿ ವರ್ಗ| ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾದರೆ ಬಚಾವ್!!

ಸಮಗ್ರ ನ್ಯೂಸ್: ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಈ ಬಾರಿ ಮುಂಗಾರು ಪ್ರವೇಶದ ಲೆಕ್ಕದಲ್ಲಿ ಗೊಂದಲದಲ್ಲಿ ಸಿಲುಕಿದೆ. ಈ ಬಾರಿ ನಿರೀಕ್ಷೆಯ ಪ್ರಕಾರ ಮುಂಗಾರು ಪ್ರವೇಶ ಕೇರಳಕ್ಕೆ ನಿಧಾನವಾಗುತ್ತಿದೆ. ಇದಕ್ಕಾಗಿ ಎರಡು ದಿನಗಳ ಕಾಲ ಮುಂಗಾರು ಕುರಿತು ಮತ್ತಷ್ಟು ಅಧ್ಯಯನಕ್ಕೆ ಇಳಿದು ಬಿಟ್ಟಿದೆ. ಕೇರಳದಲ್ಲಿ ಮುಂಗಾರು ಪ್ರವೇಶ ಜೂನ್ 4ರ ಬಳಿಕ ಆಗಬಹುದು ಎಂದು ಐಎಂಡಿ ಮೊದಲು ವರದಿ ನೀಡಿತ್ತು. ಆದರೆ ಈ ಬಳಿಕ ಇದು ಜೂನ್ 7ರಿಂದ 8ರೊಳಗೆ ಆಗುವ ಸಾಧ್ಯತೆಗಳು ಇದೆ ಎನ್ನುವ ಅಂದಾಜು

ಕರಾವಳಿಗೆ ಎಂಟ್ರಿ ಕೊಡದ ಮುಂಗಾರು| ಆತಂಕದಲ್ಲಿ ರೈತಾಪಿ ವರ್ಗ| ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾದರೆ ಬಚಾವ್!! Read More »

ಪುತ್ತೂರು: ಕೇರಳದ ಕೊಲೆ ಆರೋಪಿಯ ಬಂಧಿಸಿದ ಕರ್ನಾಟಕ ಪೊಲೀಸ್

ಸಮಗ್ರ ನ್ಯೂಸ್: ಕೇರಳದ ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ನಸುಕಿನ ವೇಳೆ ತಮ್ಮನನ್ನು ಕೊಲೆ ಮಾಡಿ ಪುತ್ತೂರು ಕಡೆಗೆ ತಪ್ಪಿಸಿಕೊಳ್ಳಲು ತೆರಳಿದ್ದ ಆರೋಪಿ ಅಣ್ಣನನ್ನು ಪುತ್ತೂರು ನಗರ ಠಾಣೆ ಪೊಲೀಸರು ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪ ಪತ್ತೆ ಮಾಡಿ ಬಂಧಿಸಿದ್ದಾರೆ. ಬಳಿಕ ಮಂಜೇಶ್ವರ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಪೈವಳಿಕೆಯ ನಿವಾಸಿ ಜಯರಾಮ ನೋಂಡ ಬಂಧಿತ ಆರೋಪಿ. ಜಯರಾಮ ನೋಂಡ ತನ್ನ ಸಹೋದರ ಪ್ರಭಾಕರ ನೋಂಡ ಅವರನ್ನು ಶನಿವಾರ ನಸುಕಿನ ವೇಳೆ ಕೊಲೆ

ಪುತ್ತೂರು: ಕೇರಳದ ಕೊಲೆ ಆರೋಪಿಯ ಬಂಧಿಸಿದ ಕರ್ನಾಟಕ ಪೊಲೀಸ್ Read More »

ಅವರಿವರಂತೆ ಗ್ಯಾರಂಟಿ ಬಗ್ಗೆ ನಾನು ಟೀಕೆ ಮಾಡಲ್ಲ – ಯಡಿಯೂರಪ್ಪ

ಸಮಗ್ರ ನ್ಯೂಸ್: ಕಾಂಗ್ರೆಸ್‌ ಗ್ಯಾರಂಟಿ ಜಾರಿ ಬಗ್ಗೆ ನನಗೆ ಗ್ಯಾರಂಟಿ ಇದೆ ಎಂದು ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಗ್ಯಾರಂಟಿ ಭರವಸೆಗಳು ನಮ್ಮ ಹಿನ್ನಡೆಗೆ ಬಹುಮುಖ್ಯ ಕಾರಣವಾಗಿದೆ. ಅವರು ಅದನ್ನು ಅನುಷ್ಠಾನಕ್ಕೆ ತರಲಿ. ಒಟ್ಟಾರೆಯಾಗಿ ಜನರಿಗೆ ಒಳ್ಳೆಯದಾಗಲಿ ಯಡಿಯೂರಪ್ಪ ಹೇಳಿದರು. ಕಾಂಗ್ರೆಸ್‌ನವರ ಗ್ಯಾರಂಟಿ ಯೋಜನೆಗಳ ಬಗ್ಗೆ ನಾನು ಅನಗತ್ಯವಾಗಿ ಟೀಕೆ ಮಾಡಲು ಹೋಗುವುದಿಲ್ಲ. ಬೇರೆಯವರು ಮಾತನಾಡಿದಂತೆ ನಾನು ಮಾತನಾಡಲ್ಲ ಎಂದು ಬಿ.ಎಸ್.‌ ಯಡಿಯೂರಪ್ಪ ಅವರು

ಅವರಿವರಂತೆ ಗ್ಯಾರಂಟಿ ಬಗ್ಗೆ ನಾನು ಟೀಕೆ ಮಾಡಲ್ಲ – ಯಡಿಯೂರಪ್ಪ Read More »

ಪ್ರಧಾನಿ ಮೋದಿ ಕಾಲಿಗೆರಗಿ ಸ್ವಾಗತಿಸಿದ ಪಪುವಾ ನ್ಯೂಗಿನಿಯಾದ ಪ್ರಧಾನಿ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಮೂರು ರಾಷ್ಟ್ರಗಳ ಪ್ರವಾಸದಲ್ಲಿದ್ದಾರೆ. ಜಪಾನ್‌ನಲ್ಲಿ ಜಿ7 ಶೃಂಗಸಭೆಯಲ್ಲಿ ಪಾಲ್ಗೊಂಡ ಮಂದಿ ಇದೀಗ ಪಪುವಾ ನ್ಯೂಗಿನಿಯಾಗೆ ಬಂದಿಳಿದಿದ್ದಾರೆ. ಮೋದಿ ಆಗಮನದಿಂದ ಪಪುವಾ ನ್ಯೂಗಿನಿಯಾ ಪುಟ್ಟ ದೇಶ ಪುಳಕಿತಗೊಂಡಿದೆ. ಶಿಷ್ಟಾಚಾರ ಬದಿಗೊತ್ತಿ ಪ್ರಧಾನಿ ಮೋದಿಗೆ ಪಪುವಾ ನ್ಯೂಗಿನಿಯಾ ಭರ್ಜರಿ ಸ್ವಾಗತ ನೀಡಿದೆ. ವಿಮಾನದಿಂದ ಇಳಿದು ಬಂದ ಮೋದಿಯನ್ನು ಸ್ವಾಗತಿಸಿದ ಪಪುವಾ ಪ್ರಧಾನಿ ಜೇಮ್ಸ್ ಮರಾಪೆ, ಮೋದಿ ಕಾಲಿಗೆರಗಿದ ಘಟನೆ ನಡೆದಿದೆ. ಈ ವಿಡಿಯೋ ಭಾರಿ ವೈರಲ್ ಆಗಿದ್ದು, ಮೋದಿ ಜನಪ್ರೀಯತೆ ಹಾಗೂ ಮೋದಿ

ಪ್ರಧಾನಿ ಮೋದಿ ಕಾಲಿಗೆರಗಿ ಸ್ವಾಗತಿಸಿದ ಪಪುವಾ ನ್ಯೂಗಿನಿಯಾದ ಪ್ರಧಾನಿ Read More »

ಚಿಕ್ಕಮಗಳೂರು: ಮಲೆನಾಡಲ್ಲಿ ಧಾರಾಕಾರ ಆಲಿಕಲ್ಲು ಮಳೆ| ಧರೆಗುರುಳಿದ ಮರ, ಟ್ರಾಫಿಕ್ ಜಾಮ್

ಸಮಗ್ರ ನ್ಯೂಸ್: ಕಾದ ಕಾವಲಿಯಂತಾಗಿದ್ದ ಜಿಲ್ಲೆಯ ಮಲೆನಾಡು ಭಾಗಕ್ಕೆ ವರುಣದೇವ ಕೃಪೆ ತೋರಿದ್ದು, ಕಳೆದೊಂದು ಗಂಟೆಯಿಂದ ಮೂಡಿಗೆರೆ ತಾಲೂಕಿನ ಸುತ್ತಮುತ್ತ ಧಾರಾಕಾರವಾಗಿ ಆಲಿಕಲ್ಲು ಮಳೆ ಸುರಿಯುತ್ತಿತ್ತು ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.‌ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್, ಬಣಕಲ್ ಬಾಳೂರು, ಹೊರಟ್ಟಿ, ಸಬ್ಬೇನಹಳ್ಳಿ ಸೇರಿದಂತೆ ಸುತ್ತಮುತ್ತ ಆಲಿಕಲ್ಲು ಸಮೇತ ಭಾರೀ ಮಳೆ ಸುರಿಯುತ್ತಿದೆ. ಮಳೆಗಾಗಿ ಆಕಾಶ ನೋಡುತ್ತಿದ್ದ ಮಲೆನಾಡಿಗರ ಮೊಗದಲ್ಲಿ ಮಂದಹಾಸ ಮೂಡಿದೆ. ಭಾರಿ ಮಳೆ-ಗಾಳಿಯಿಂದ ಕೊಟ್ಟಿಗೆಹಾರ ಹಾಗೂ ಚಾರ್ಮಾಡಿ ಘಾಟಿಯಲ್ಲಿ ಅಲ್ಲಲ್ಲಿ ವಾಹನದಟ್ಟಣೆ ಕೂಡ

ಚಿಕ್ಕಮಗಳೂರು: ಮಲೆನಾಡಲ್ಲಿ ಧಾರಾಕಾರ ಆಲಿಕಲ್ಲು ಮಳೆ| ಧರೆಗುರುಳಿದ ಮರ, ಟ್ರಾಫಿಕ್ ಜಾಮ್ Read More »