ಸಮಗ್ರ ಸಮಾಚಾರ

ಧರ್ಮಸ್ಥಳದಲ್ಲಿ ಮೃತದೇಹ ಹೂತ ಪ್ರಕರಣ| ಎಸ್ಐಟಿ ತಂಡದ ಎದುರು‌ ಹಾಜರಾದ‌ ದೂರುದಾರ

ಸಮಗ್ರ ನ್ಯೂಸ್: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಮಂಗಳೂರು ಐಬಿಗೆ ಎಸ್.ಐ.ಟಿ ತನಿಖೆಗಾಗಿ ಅಧಿಕಾರಿಗಳ ಮುಂದೆ ಮುಖಕ್ಕೆ ಕಪ್ಪು ಬಣ್ಣದ ಕವರ್ ಹಾಕಿಕೊಂಡು ದೂರುದಾರ ವ್ಯಕ್ತಿ ಇಬ್ಬರು ವಕೀಲರ ಜೊತೆ ಕಾರಿನಲ್ಲಿ ಜುಲೈ 26 ರಂದು ಬಂದು ಹಾಜರಾಗಿದ್ದಾನೆ. ಪ್ರಕರಣದ ತನಖೆಯನ್ನು ಎಸ್.ಐ.ಟಿ ಅಧಿಕಾರಿಗಳು ಚುರುಕುಗೊಳಿಸಿದ್ದಾರೆ. ಮಲ್ಲಿಕಟ್ಟೆಯಲ್ಲಿರುವ ಎಸ್ ಪಿ‌ ಕಚೇರಿಗೆ ಆಗಮಿಸಿರುವ ದೂರುದಾರ ತನಿಖಾಧಿಕಾರಿ ಅನುಚೇತ್ ಅವರಿಗೆ ಹೇಳಿಕೆ ನೀಡಿದ್ದಾನೆ ಎನ್ನಲಾಗಿದೆ.

ಧರ್ಮಸ್ಥಳದಲ್ಲಿ ಮೃತದೇಹ ಹೂತ ಪ್ರಕರಣ| ಎಸ್ಐಟಿ ತಂಡದ ಎದುರು‌ ಹಾಜರಾದ‌ ದೂರುದಾರ Read More »

ದಕ್ಷಿಣ‌ ಕನ್ನಡ ಜಿಲ್ಲೆಗೆ ‘ತುಳುನಾಡು’ ಎಂದು ಮರು ನಾಮಕರಣವಾಗಲಿ – ಬಿಳಿಮಲೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಎಂದು ಮರುನಾಮಕರಣ ಮಾಡಬೇಕೆಂಬ ಕೂಗು ಹಲವು ದಿನಗಳಿಂದ ಕೇಳಿಬರುತ್ತಿದೆ. ಈ ಬೆನ್ನಲ್ಲೇ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆಯವರು ಬದಲಿಸುವುದಾದರೇ ತುಳುನಾಡು ಅಂತಾ ಬದಲಿಸಲಿ ಎಂದು ಹೇಳಿದ್ದಾರೆ. ಕಾರವಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸ ಜಿಲ್ಲೆಯನ್ನು ಮಾಡುವುದಾದರೆ ಯಾವ ಹೆಸರು ಬೇಕಾದರೂ ಇಟ್ಟುಕೊಳ್ಳಲಿ. ಆದರೆ ಐತಿಹಾಸಿಕ ಸ್ಥಳಗಳ ಹೆಸರನ್ನು ಯಾರು ಕೂಡ ಬದಲಿಸಬಾರದು. ಕರ್ನಾಟಕ ಏಕೀಕರಣದ ಸಂದರ್ಭದಲ್ಲಿ ಕಾಸರಗೋಡು ಕರ್ನಾಟಕದಿಂದ ಬೇರೆ ಆಯಿತು. ತುಳುನಾಡು ಎಂದು ಇಟ್ಟಿದ್ದರೆ

ದಕ್ಷಿಣ‌ ಕನ್ನಡ ಜಿಲ್ಲೆಗೆ ‘ತುಳುನಾಡು’ ಎಂದು ಮರು ನಾಮಕರಣವಾಗಲಿ – ಬಿಳಿಮಲೆ Read More »

ಬಂಟ್ವಾಳ: ಅನಾರೋಗ್ಯದಿಂದ ಯುವ ವಕೀಲೆ ಸಾವು

ಸಮಗ್ರ ನ್ಯೂಸ್: ಅನಾರೋಗ್ಯದಿಂದ ಯುವ ಬರಹಗಾರ್ತಿ, ವಕೀಲೆ ರಾಜಶ್ರೀ ಜಯರಾಜ್ ಪೂಜಾರಿ ನಿಧನರಾಗಿದ್ದಾರೆ. ಚಿಕ್ಕವಯಸ್ಸಿನಲ್ಲೇ ಕಲೆ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದ ಯುವ ಪ್ರತಿಭೆ ನಿಧನರಾಗಿದ್ದು, ಆಘಾತ ಉಂಟುಮಾಡಿದೆ. ಬಂಟ್ವಾಳದ ಜಯರಾಜ್ ಮತ್ತು ಸರೋಜಿನಿ ದಂಪತಿಗಳಿಗೆ ಜನವರಿ 16, 2000 ರಂದು ಜನಿಸಿದ ರಾಜಶ್ರೀ, ಬಂಟ್ವಾಳದಲ್ಲಿ ತನ್ನ ಆರಂಭಿಕ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದರು ಮತ್ತು ನಂತರ ಬಡಗ ಎಕ್ಕಾರು ಮತ್ತು ಶ್ರೀ ದುರ್ಗಾಪರಮೇಶ್ವರಿ ಪದವಿ ಪೂರ್ವ ಕಾಲೇಜಿನಲ್ಲಿ ಕಟೀಲಿನ ಶಿಕ್ಷಣವನ್ನು ಮುಂದುವರೆಸಿದರು. ತನ್ನ ವಿಧ್ಯಾಬ್ಯಾಸದ ಸಂದರ್ಭ

ಬಂಟ್ವಾಳ: ಅನಾರೋಗ್ಯದಿಂದ ಯುವ ವಕೀಲೆ ಸಾವು Read More »

ಧರ್ಮಸ್ಥಳ ಪ್ರಕರಣ| ಎಸ್ಐಟಿ ಯಿಂದ ತನಿಖೆ ಶುರು

ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣಗಳ ತನಿಖೆಗೆ ರಾಜ್ಯ ಸರಕಾರ ರಚಿಸಿರುವ ಎಸ್ಐಟಿ ತಂಡ ಮಂಗಳೂರಿಗೆ ಆಗಮಿಸಿದೆ. ಇದರೊಂದಿಗೆ ಅಧಿಕೃತವಾಗಿ ಪ್ರಕರಣದ ತನಿಖೆ ಪ್ರಾರಂಭವಾಗಲಿದೆ. ತನಿಖೆಯ ಭಾಗವಾಗಿರುವ ಡಿಐಜಿ ಎಂ.ಎನ್. ಅನುಚೇತ್ ಮಂಗಳೂರಿಗೆ ಆಗಮಿಸಿ ಇತರ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ ಎಂದು ಎಂದು ಮೂಲಗಳು ತಿಳಿಸಿವೆ. ಪೊಲೀಸ್‌ ನೇಮಕಾತಿ ವಿಭಾಗದ ಡಿಐಜಿ ಎಂ.ಎನ್‌.ಅನುಚೇತ್‌ ಮತ್ತು ಆಂತರಿಕ ಭದ್ರತಾ ವಿಭಾಗದ ಎಸ್‌ಪಿ ಜಿತೇಂದ್ರ ಕುಮಾರ್ ದಯಾಮ ಸದಸ್ಯರಾಗಿದ್ದಾರೆ. ಅನುಚೇತ್‌ ಮತ್ತು ದಯಾಮ ಮಾತ್ರ

ಧರ್ಮಸ್ಥಳ ಪ್ರಕರಣ| ಎಸ್ಐಟಿ ಯಿಂದ ತನಿಖೆ ಶುರು Read More »

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಿಂದ ಖಾಸಗಿ ಕಾರ್ಯಕ್ರಮಗಳಿಗೆ ಉಚಿತ ಅನ್ನಪ್ರಸಾದ ರದ್ದತಿಗೆ ಚಿಂತನೆ

ಸಮಗ್ರ ನ್ಯೂಸ್: ದಕ್ಷಿಣಕನ್ನಡ ಜಿಲ್ಲೆಯ ಹೆಸರಾಂತ ಶಿವಕ್ಷೇತ್ರ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಇನ್ನು ಮುಂದೆ ಖಾಸಗಿ ಕಾರ್ಯಕ್ರಮಗಳಿಗೆ ಉಚಿತ ಅನ್ನಪ್ರಸಾದ ವಿತರಣೆ ವ್ಯವಸ್ಥೆಯನ್ನು ನಿಲ್ಲಿಸಲು ಚಿಂತಿಸಲಾಗಿದೆ ಎಂದು ಶಾಸಕ ಅಶೋಕ ರೈ ಹೇಳಿದ್ದಾರೆ. ಪುತ್ತೂರಿನಲ್ಲಿ ಮಾತನಾಡಿದ ಅವರು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ನಿರ್ವಹಣೆಗೆ ಹಣದ ಕೊರತೆ ಎದುರಾಗಿದ್ದು, ಈ ಹಿನ್ನಲೆ ಮುಂದಿನ ದಿನಗಳಲ್ಲಿ ಖಾಸಗಿ ಕಾರ್ಯಕ್ರಮಗಳಿಗೆ ಉಚಿತವಾಗಿ ನೀಡಲಾಗುತ್ತಿದ್ದ ಅನ್ನಪ್ರಸಾದ ಸೇವೆಯನ್ನು ನಿಲ್ಲಿಸಲು ಸೂಚಿಸಲಾಗಿದ್ದು, ಅನ್ನಪ್ರಸಾದ ಬೇಕಾದಲ್ಲಿ ಬೇಕಾದಲ್ಲಿ ಹಣ ಕೊಟ್ಟು ಪಡೆಯುವಂತೆ ಸೂಚನೆ ನೀಡಲಾಗಿದೆ ಎಂದು

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಿಂದ ಖಾಸಗಿ ಕಾರ್ಯಕ್ರಮಗಳಿಗೆ ಉಚಿತ ಅನ್ನಪ್ರಸಾದ ರದ್ದತಿಗೆ ಚಿಂತನೆ Read More »

ಉಪರಾಷ್ಟ್ರಪತಿ ಜಗದೀಪ್ ಧನಕರ್ ದಿಢೀರ್ ರಾಜೀನಾಮೆ| ಮುಂದೆ ಈ ಹುದ್ದೆ ಅಲಂಕರಿಸುವವರು ಯಾರು?

ಸಮಗ್ರ ನ್ಯೂಸ್: ಜಗದೀಪ್‌ ಧನಕರ್‌ ರಾಜೀನಾಮೆಯಿಂದಾಗಿ ತೆರವಾಗುವ ಉಪರಾಷ್ಟ್ರಪತಿ ಹುದ್ದೆಗೆ ಯಾರು ಆಯ್ಕೆಯಾಗಲಿದ್ದಾರೆ ಎಂಬ ಚರ್ಚೆ ಆರಂಭವಾಗಿದೆ. 74 ವರ್ಷದ ಧನಕರ್‌ ಅವರು 2022ರ ಆಗಸ್ಟ್‌ನಲ್ಲಿ ಅಧಿಕಾರ ವಹಿಸಿಕೊಂಡಿದ್ದರು. ಅವರ ಅಧಿಕಾರದ ಅವಧಿ 2027ರ ವರೆಗೂ ಇತ್ತು. ರಾಜ್ಯಸಭೆಯ ಸಭಾಪತಿಯೂ ಆಗಿರುವ ಅವರು ಸೋಮವಾರ ಆರಂಭವಾದ ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನ ಕಲಾಪದಲ್ಲಿ ಪಾಲ್ಗೊಂಡಿದ್ದರು. ಉಪ ರಾಷ್ಟ್ರಪತಿ ಜಗದೀಪ್ ಧನಕರ್‌ ಅವರು ವೈದ್ಯಕೀಯ ಕಾರಣಗಳನ್ನು ನೀಡಿ ಸೋಮವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ರಾಜ್ಯಸಭಾ ಉಪ

ಉಪರಾಷ್ಟ್ರಪತಿ ಜಗದೀಪ್ ಧನಕರ್ ದಿಢೀರ್ ರಾಜೀನಾಮೆ| ಮುಂದೆ ಈ ಹುದ್ದೆ ಅಲಂಕರಿಸುವವರು ಯಾರು? Read More »

ಜಾಗ ವಿವಾದದ ಕಾರಣ ನನ್ನ ತಂದೆಯನ್ನು ಕೊಲೆ ಮಾಡಲಾಗಿದೆ| ಧರ್ಮಸ್ಥಳದ ವಿರುದ್ಧ ಕೇರಳದಲ್ಲಿ ದೂರು ನೀಡಿದ ವ್ಯಕ್ತಿ

ಸಮಗ್ರ ನ್ಯೂಸ್: ಜಾಗದ ವಿವಾದದ ಹಿನ್ನಲೆಯಲ್ಲಿ ತನ್ನ ತಂದೆಯನ್ನು ವಾಹನ ಅಪಘಾತದ ಮೂಲಕ ಕೊಲೆ ಮಾಡಲಾಗಿದೆ ಎಂದು ಆರೋಪಿಸಿ ಈ ಹಿಂದೆ ಧರ್ಮಸ್ಥಳ ಹಾಗೂ ಬೆಳ್ತಂಗಡಿ ತಾಲೂಕಿನ‌ ಇತರೆಡೆಗಳಲ್ಲಿ ವಾಸವಾಗಿದ್ದ, ಈಗ ಕೇರಳದಲ್ಲಿ ವಾಸವಾಗಿರುವ ಅನೀಶ್ ಜೋಯಿ ಎಂಬವರು ಕೇರಳದ ತಳಿಪರಂಬ ಪೊಲೀಸರಿಗೆ ದೂರು ನೀಡಿದ್ದಾರೆ. ಇದೀಗ ಅಲ್ಲಿನ ಪೊಲೀಸ್ ಠಾಣೆಯಲ್ಲಿ ದೂರು ಸ್ವೀಕರಿಸಿದ್ದು, ಪೊಲೀಸರು ಇದರ ಬಗ್ಗೆ ಪರಿಶೀಲನೆ ನಡೆಸುತ್ತಿರುವುದಾಗಿ ತಿಳಿದು ಬಂದಿದೆ. ಬೆಳ್ತಂಗಡಿ ತಾಲೂಕಿನ ಸವಣಾಲು ಗ್ರಾಮದಲ್ಲಿ ವಾಸಿಸುತ್ತಿದ್ದ ವೇಳೆ ಅನೀಶ್ ಅವರ ತಂದೆ

ಜಾಗ ವಿವಾದದ ಕಾರಣ ನನ್ನ ತಂದೆಯನ್ನು ಕೊಲೆ ಮಾಡಲಾಗಿದೆ| ಧರ್ಮಸ್ಥಳದ ವಿರುದ್ಧ ಕೇರಳದಲ್ಲಿ ದೂರು ನೀಡಿದ ವ್ಯಕ್ತಿ Read More »

ಧರ್ಮಸ್ಥಳದಲ್ಲಿ ಭಾರೀ ಹೈಡ್ರಾಮಾ| ನ್ಯಾಯಕ್ಕಾಗಿ ಪಾದಯಾತ್ರೆ ಮಾಡಿದವರಿಗೆ ಭಕ್ತರಿಂದ ತಡೆ

ಸಮಗ್ರ ನ್ಯೂಸ್: ಧರ್ಮಸ್ಥಳ ಇದೀಗ ಇಡೀ ರಾಷ್ಟ್ರದ ಗಮನ ಸೆಳೆಯುತ್ತಿದ್ದು, ಅನಾಮಿಕ ವ್ಯಕ್ತಿಯೊಬ್ಬನ ದೂರಿನ ಬೆನ್ನಲ್ಲೇ ಇದೀಗ ಎಸ್ ಐಟಿ ರಚನೆಯಾಗಿದ್ದು, ಈ ನಡುವೆ ಸೌಜನ್ಯ ಪ್ರಕರಣದ ನ್ಯಾಯಕ್ಕಾಗಿ ಕಲಬುರ್ಗಿಯಿಂದ ಪಾದಯಾತ್ರೆಯಲ್ಲಿ ಬಂದಿದ್ದೇವೆ ಎಂದು ಹೇಳಿಕೊಂಡು ಧರ್ಮಸ್ಥಳಕ್ಕೆ ಹತ್ತಕ್ಕೂ ಹೆಚ್ಚು ಮಂದಿ ಯುವಕರು ಬಂದಿದ್ದು, ಇವರನ್ನು ಸ್ಥಳೀಯರು ಅಡ್ಡಗಟ್ಟಿದ್ದು ಭಾರೀ ಹೈಡ್ರಾಮಾಕ್ಕೆ ಸಾಕ್ಷಿಯಾಯಿತು. ಸೌಜನ್ಯಳಿಗೆ ನ್ಯಾಯ ಎಂಬ ಧ್ಯೆಯದೊಂದಿಗೆ ಕಲಬುರಗಿ ಜಿಲ್ಲೆಯ ಅಳಂದ ತಾಲೂಕಿನ ರುದ್ರವಾಡಿ ಗ್ರಾಮದ ಶರಣಪ್ಪ ನೇತೃತ್ವದ ತಂಡವು ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ ಹಮ್ಮಿಕೊಂಡಿತ್ತು.

ಧರ್ಮಸ್ಥಳದಲ್ಲಿ ಭಾರೀ ಹೈಡ್ರಾಮಾ| ನ್ಯಾಯಕ್ಕಾಗಿ ಪಾದಯಾತ್ರೆ ಮಾಡಿದವರಿಗೆ ಭಕ್ತರಿಂದ ತಡೆ Read More »

ಚಿಕ್ಕಮಗಳೂರು: ಹುಡುಗಿ ಕೈಕೊಟ್ಟು ಹೋದಳೆಂದು ಅರೆಹುಚ್ಚನಾದ ಯುವಕ

ಸಮಗ್ರ ನ್ಯೂಸ್: ಪ್ರೀತಿ ವಿಫಲವಾದ ದುಃಖದಲ್ಲಿಯೇ ಅರೆಹುಚ್ಚನಾದ ಯುವಕ, ತನ್ನ ತಲೆಗೆ ಬಾಟಲಿಯಿಂದ ಹೊಡೆದುಕೊಂಡಿದ್ದಾನೆ. ತನ್ನ ತಲೆಯಲ್ಲಿ ರಕ್ತ ಹರಿಯುತ್ತಿದ್ದರೂ, ಸುಮ್ಮನೆ ಕುಳಿತಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕೈಮರ ಚೆಕ್‌ಪೋಸ್ಟ್ ಬಳಿ ಗುರುವಾರ ಬೆಳಕಿಗೆ ಬಂದಿದೆ. ತಮಿಳುನಾಡು ಮೂಲದ ಈ ಯುವಕ, ಕೆಲ ತಿಂಗಳ ಹಿಂದೆ ಕಾಫಿತೋಟದ ಕೆಲಸಕ್ಕಾಗಿ ಚಿಕ್ಕಮಗಳೂರು ಬಂದಿದ್ದರು. ಕೆಲಸದಲ್ಲಿಯೇ ಇಲ್ಲಿಯ ಹುಡುಗಿಯನ್ನು ಪ್ರೀತಿ ಮಾಡುತ್ತಿದ್ದರು. ಆದರೆ, ಕಾಲಕ್ರಮೇಣ ಹುಡುಗಿ ಕೈಕೊಟ್ಟು ಬೇರೆ ಯಾರೊಂದಿಗೋ ಮದುವೆಯಾಗಿದ್ದಾಳೆ. ಈ ಘಟನೆಯು ಯುವಕನ ಮನಸ್ಸಿಗೆ ಆಘಾತ ಉಂಟುಮಾಡಿ,

ಚಿಕ್ಕಮಗಳೂರು: ಹುಡುಗಿ ಕೈಕೊಟ್ಟು ಹೋದಳೆಂದು ಅರೆಹುಚ್ಚನಾದ ಯುವಕ Read More »

ಧರ್ಮಸ್ಥಳ ಪ್ರಕರಣಗಳ‌ ತನಿಖೆಯನ್ನು ಎನ್ಐಎ‌ಗೆ ವಹಿಸಲು ರಾಜ್ಯಸಭಾ ಸದಸ್ಯರಿಂದ ಅಮಿತ್ ಷಾಗೆ‌ ಪತ್ರ

ಸಮಗ್ರ ನ್ಯೂಸ್: ರಾಜ್ಯದ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ದಶಕಗಳಿಂದ ವ್ಯವಸ್ಥಿತವಾಗಿ ನಡೆಯುತ್ತಿರುವ ಸರಣಿ ಅಪರಾಧಗಳು, ಅದರಲ್ಲೂ ಮುಖ್ಯವಾಗಿ ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಹತ್ಯೆಗಳ ಬಗ್ಗೆ ರಾಷ್ಟ್ರೀಯ ತನಿಖಾ ದಳದಿಂದ (ಎನ್ಐಎ) ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಆಗ್ರಹಿಸಿ ರಾಜ್ಯಸಭಾ ಸದಸ್ಯ ಹಾಗೂ ಸಿಪಿಐ ನಾಯಕ ಪಿ. ಸಂದೋಷ್ ಕುಮಾರ್ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಗಂಭೀರ ಸ್ವರೂಪದ ಪತ್ರ ಬರೆದಿದ್ದಾರೆ. 500ಕ್ಕೂ ಹೆಚ್ಚು ಶವಗಳನ್ನು ತಾನೇ ವಿಲೇವಾರಿ ಮಾಡಿರುವುದಾಗಿ ದೇವಾಲಯದ ಮಾಜಿ ನೌಕರನೊಬ್ಬ

ಧರ್ಮಸ್ಥಳ ಪ್ರಕರಣಗಳ‌ ತನಿಖೆಯನ್ನು ಎನ್ಐಎ‌ಗೆ ವಹಿಸಲು ರಾಜ್ಯಸಭಾ ಸದಸ್ಯರಿಂದ ಅಮಿತ್ ಷಾಗೆ‌ ಪತ್ರ Read More »