ಸಮಗ್ರ ಸಮಾಚಾರ

ಮಂಗಳೂರು: ಸಾಲ ಕೊಡುವುದಾಗಿ ಬಹುಕೋಟಿ ವಂಚನೆ| ಸಿನಿಮೀಯ ಶೈಲಿಯಲ್ಲಿ ಸಿಕ್ಕಿಬಿದ್ದ ಮಹಾವಂಚಕ ರೋಹನ್ ಸಲ್ದಾನಾ

ಸಮಗ್ರ ನ್ಯೂಸ್: ಸಾಲ ಕೊಡುವುದಾಗಿ ಕೋಟ್ಯಂತರ ರೂ ಹಣ ಪಡೆದು ವಂಚನೆ ಮಾಡುತ್ತಿದ್ದ ನಟೋರಿಯಸ್ ರೋಹನ್ ಸಲ್ಡಾನಾ ಎಂಬಾತನನ್ನ ಬಂಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಅನೇಕ ವರ್ಷಗಳಿಂದ 200 ಕೋಟಿಗೂ ಅಧಿಕ ವಂಚನೆ ಮಾಡಿದ್ದಾನೆ. ಆಂಧ್ರ ಪ್ರದೇಶ ಮೂಲದ ಸಿಲ್ಕ್ ಸ್ಯಾರಿ ತಯಾರಿಕ ಕಂಪನಿ ಮಾಲೀಕ, ಸಾಲಕ್ಕಾಗಿ 2023ರಲ್ಲಿ ಬೆಂಗಳೂರಿನಲ್ಲಿ ಫೈನಾನ್ಸ್ ಕನ್ಸಲ್‌ಟೆನ್ಸಿ ನಡೆಸಿಕೊಂಡಿರುವ ವಿಮಲೇಶ್ ಎಂಬಾತನ ಮೊರೆ ಹೋಗಿದ್ದ. ಆಗ ವಿಮಲೇಶ್ ಇದೇ ರೋಹನ್‌ನನ್ನ ಪರಿಚಯಿಸಿಕೊಟ್ಟಿದ್ದ. ಸಾಲ ಕೊಡಿಸೋದಕ್ಕೆ ಒಂದು ಸ್ಟ್ಯಾಂಪ್ ಪೇಪರ್‌ಗೆಂದು ರೋಹನ್ ಉದ್ಯಮಿ […]

ಮಂಗಳೂರು: ಸಾಲ ಕೊಡುವುದಾಗಿ ಬಹುಕೋಟಿ ವಂಚನೆ| ಸಿನಿಮೀಯ ಶೈಲಿಯಲ್ಲಿ ಸಿಕ್ಕಿಬಿದ್ದ ಮಹಾವಂಚಕ ರೋಹನ್ ಸಲ್ದಾನಾ Read More »

ಅತ್ಯಧಿಕ ಹಾಲು ಸಂಗ್ರಹ/ ದಾಖಲೆ ನಿರ್ಮಿಸಿದ ಕೆಎಂಎಫ್

ಸಮಗ್ರ ನ್ಯೂಸ್‌: ಕಳೆದ ಒಂದು ತಿಂಗಳಿಂದ ರಾಜ್ಯದಲ್ಲಿ ಹೆಚ್ಚು ಹಾಲು ಉತ್ಪಾದನೆಯಾಗುತ್ತಿದ್ದು, ಈ ಮೂಲಕ ಕೆಎಂಎಫ್ ಇತಿಹಾಸದಲ್ಲೇ ಮೊದಲ ಬಾರಿಗೆ ಅತಿ ಹೆಚ್ಚು ಹಾಲು ಸಂಗ್ರಹವಾಗುತ್ತಿದೆ. ಕಳೆದ ವರ್ಷ ಜೂನ್ ಹಾಗೂ ಜುಲೈ ತಿಂಗಳಲ್ಲಿ 90 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿತ್ತು. ಆದರೆ ಈ ವರ್ಷದ ಮೇ ತಿಂಗಳಾಂತ್ಯದಿಂದ ನಿತ್ಯ ಕೋಟಿಗಿಂತಲೂ ಹೆಚ್ಚು ಹಾಲು ಉತ್ಪಾದನೆಯಾಗುತ್ತಿದ್ದು, ಪ್ರಸ್ತುತ ರಾಜ್ಯದಲ್ಲಿ ಕೆಎಂಎಫ್‌ನಲ್ಲಿ ದಿನನಿತ್ಯ 1.05 ಕೋಟಿ ಲೀಟರ್ ಹಾಲು ಸಂಗ್ರಹವಾಗುತ್ತಿದೆ. ಕಳೆದ ಒಂದು ತಿಂಗಳಿಂದ ರಾಜ್ಯದಲ್ಲಿ ಮಳೆಯಾಗುತ್ತಿದ್ದು, ವಾತಾವರಣ

ಅತ್ಯಧಿಕ ಹಾಲು ಸಂಗ್ರಹ/ ದಾಖಲೆ ನಿರ್ಮಿಸಿದ ಕೆಎಂಎಫ್ Read More »

ಕೋಲ್ಕತಾದಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ| ಬಾಗಲಕೋಟೆಯ ಯುವಕ ಅರೆಸ್ಟ್

ಸಮಗ್ರ ನ್ಯೂಸ್: ಕೊಲ್ಕತ್ತಾದಲ್ಲಿ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್ ರೇಪ್ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬಾಗಲಕೋಟೆ ಮೂಲದ ವಿದ್ಯಾರ್ಥಿ ಪರಮಾನಂದ ಜೈನ್ ಎನ್ನುವ ಯುವಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಜು.12ರ ರಾತ್ರಿ ಪರಮಾನಂದನನ್ನು ಪೊಲೀಸರು ಬಂಧಿಸಿ ಕರೆದೊಯ್ದಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರ ನಿವಾಸಿಯಾದ ಪರಮಾನಂದ ಐಐಎಂ ಕಾನೂನು ಕಾಲೇಜಿನಲ್ಲಿ ಓದುತ್ತಿದ್ದಾನೆ. ಹಾಸ್ಟೆಲಿಗೆ ಯುವತಿಯನ್ನು ಕರೆಸಿಕೊಂಡು, ಮತ್ತು ಬರುವ ಪಾನಿಯ ಕೊಡಿಸಿ ಪರಮಾನಂದ ಅತ್ಯಾಚಾರ ಎಸಗಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದೆ.ಜುಲೈ 12ರಂದು ಆರೋಪಿ ಪರಮಾನಂದನನ್ನು

ಕೋಲ್ಕತಾದಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ| ಬಾಗಲಕೋಟೆಯ ಯುವಕ ಅರೆಸ್ಟ್ Read More »

ಮುಷ್ಕರಕ್ಕೆ ಮುಂದಾದ ಸಾರಿಗೆ ನೌಕರರಿಗೆ ಎಸ್ಮಾ ಜಾರಿ

ಸಮಗ್ರ ನ್ಯೂಸ್: ವೇತನ ಪರಿಷ್ಕರಣೆ, ಹಿಂಬಾಕಿ ನೀಡುವುದು ಸೇರಿದಂತೆ ಸಾರಿಗೆ ನಿಗಮಗಳ ನೌಕರರ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಆಗಸ್ಟ್ 5 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ನಿರ್ಧರಿಸಿದೆ. ಮುಷ್ಕರಕ್ಕೆ ಮುಂದಾಗಿದ್ದ ಸಾರಿಗೆ ನೌಕರರಿಗೆ ಕೆಎಸ್‌ಆರ್ಟಿಸಿ ಶಾಕ್ ನೀಡಿದೆ. ಪ್ರತಿಭಟನೆ ನಡೆಸದಂತೆ ಕೆಎಸ್‌ಆರ್ಟಿಸಿ ವತಿಯಿಂದ ಎಸ್ಮಾ ಜಾರಿ ಮಾಡಲಾಗಿದೆ. ಕರ್ನಾಟಕ ಅಗತ್ಯ ಸೇವಾ ನಿರ್ವಹಣಾ ಕಾಯ್ದೆ 2013ರ ಅಡಿ ಎಸ್ಮಾ ಜಾರಿ ಮಾಡಿದ್ದು, 5

ಮುಷ್ಕರಕ್ಕೆ ಮುಂದಾದ ಸಾರಿಗೆ ನೌಕರರಿಗೆ ಎಸ್ಮಾ ಜಾರಿ Read More »

ಧರ್ಮಸ್ಥಳ ಸಾಮೂಹಿಕ ಅಂತ್ಯಸಂಸ್ಕಾರ ಪ್ರಕರಣ| ಎಸ್ಐಟಿ ರಚನೆಗೆ‌ ಆಗ್ರಹ

ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ಹಲವಾರು ಅತ್ಯಾಚಾರ, ಹತ್ಯೆ ಮತ್ತು ಕಾಡಿನಲ್ಲಿ ಶವಗಳನ್ನು ಹೂತಿರುವ ಪ್ರಕರಣದಲ್ಲಿ ಸಾಕ್ಷಿ ಫಿರ್ಯಾದಿಗೆ ರಾಜ್ಯ ಸರಕಾರವು ತತ್‌ಕ್ಷಣವೇ ಭದ್ರತೆ ಒದಗಿಸಬೇಕು. ಈ ಆರೋಪಗಳ ತನಿಖೆಗೆ ಸುಪ್ರೀಂ ಕೋರ್ಟ್‌ ಅಥವಾ ಹೈಕೋರ್ಟ್‌ ಹಾಲಿ ಅಥವಾ ನಿವೃತ್ತ ನ್ಯಾಯಮೂರ್ತಿಯ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಬೇಕು ಎಂದು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲ ಗೌಡ ಆಗ್ರಹಿಸಿದ್ದಾರೆ. ಮೇಲಿನ ಅಪರಾಧಗಳ ಸಂಬಂಧ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದಲ್ಲಿ ಹೇಳಿಕೆ ದಾಖಲಿಸಿದ ಬಳಿಕವೂ ತನಿಖೆ ಸರಿಯಾಗಿ ಆಗುತ್ತಿಲ್ಲ.

ಧರ್ಮಸ್ಥಳ ಸಾಮೂಹಿಕ ಅಂತ್ಯಸಂಸ್ಕಾರ ಪ್ರಕರಣ| ಎಸ್ಐಟಿ ರಚನೆಗೆ‌ ಆಗ್ರಹ Read More »

ಮೆಟ್ರೋದಲ್ಲಿ ಇನ್ಮುಂದೆ ನೆಟ್‌ವರ್ಕ್‌ ಸಮಸ್ಯೆ ಇಲ್ಲ/ ವೈಫೈ ಅಳವಡಿಸಲು ಮುಂದಾದ ಬಿಎಂಆರ್‌ಸಿಎಲ್

ಸಮಗ್ರ ನ್ಯೂಸ್‌: ನೆಟ್ವರ್ಕ್ ಸಮಸ್ಯೆ ಉಂಟಾಗುತ್ತಿರುವ ನಮ್ಮ ಮೆಟ್ರೋದ ಸುರಂಗ ಮಾರ್ಗಗಳಲ್ಲಿ ವೈಫೈ ಅಳವಡಿಸಲು ಬಿಎಂಆರ್‌ಸಿಎಲ್ ಮುಂದಾಗಿದೆ. ಮೆಟ್ರೋ ಮಾರ್ಗಗಳಲ್ಲಿ ಉಂಟಾಗುವ ನೆಟ್ವರ್ಕ್ ಸಮಸ್ಯೆ ನಿವಾರಣೆಗೆ ಬಿಎಂಆರ್‌ಸಿಎಲ್, ಮೆಟ್ರೋ ನಿಲ್ದಾಣಗಳಲ್ಲಿ ಐಬಿಎಸ್, ಬಿಟಿಎಸ್ ಸೆಲ್ಯುಲಾರ್ ಟವರ್ ಮತ್ತು ಪೋಲ್‌ಗಳನ್ನು ಇಟ್ಟು ವೈಫೈ ಮೂಲಕ ಗ್ರಾಹಕರಿಗೆ 4G, 5G ಸೇವೆ ಒದಗಿಸಲು ಮುಂದಾಗಿದೆ. ನಮ್ಮ ಮೆಟ್ರೋ ಎರಡನೇ ಹಂತದ ಸುರಂಗ ಹಾಗೂ ಎತ್ತರಿಸಿದ ಮಾರ್ಗದಲ್ಲಿ ನಿರಂತರ ಮತ್ತು ಸುಗಮ ಮೊಬೈಲ್ ಸಂಪರ್ಕ ಒದಗಿಸಲು ಅಡ್ವಾನ್‌ನ್ಸ್ ಕಮ್ಯೂನಿಕೇಶನ್ ಆ್ಯಂಡ್ ಎಲೆಕ್ಟ್ರಾನಿಕ್ಸ್

ಮೆಟ್ರೋದಲ್ಲಿ ಇನ್ಮುಂದೆ ನೆಟ್‌ವರ್ಕ್‌ ಸಮಸ್ಯೆ ಇಲ್ಲ/ ವೈಫೈ ಅಳವಡಿಸಲು ಮುಂದಾದ ಬಿಎಂಆರ್‌ಸಿಎಲ್ Read More »

ಧರ್ಮಸ್ಥಳ ರಹಸ್ಯ ಅಂತ್ಯಸಂಸ್ಕಾರ ಪ್ರಕರಣ| ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ – ದಿನೇಶ್ ಗುಂಡೂರಾವ್

ಸಮಗ್ರ ನ್ಯೂಸ್: ಧರ್ಮಸ್ಥಳ ರಹಸ್ಯ ಅಂತ್ಯಸಂಸ್ಕಾರ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಯಾರನ್ನೂ ರಕ್ಷಿಸುತ್ತಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗುರುವಾರ ಹೇಳಿದ್ದಾರೆ. ಧರ್ಮಸ್ಥಳದ ಮಾಜಿ ನೈರ್ಮಲ್ಯ ಸಿಬ್ಬಂದಿಯೊಬ್ಬರು ತಾವು ಧರ್ಮಸ್ಥಳದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಲವು ಮೃತದೇಹಗಳನ್ನು ಹೂತಿರುವುದಾಗಿ ಹೇಳಿಕೆ ದಾಖಲಿಸಿದ ಬೆನ್ನಲ್ಲೇ ಇದೀಗ ನಾಪತ್ತೆ, ಅಸ್ವಾಭಾವಿಕ ಸಾವುಗಳು ಮತ್ತು ಲೈಂಗಿಕ ದೌರ್ಜನ್ಯಗಳ ಬಗ್ಗೆ ದೂರುಗಳು ದಾಖಲಾಗುತ್ತಿವೆ. ಯಾರನ್ನೂ ಬೆಂಬಲಿಸುವ ಅಥವಾ ರಕ್ಷಿಸುವ ಪ್ರಶ್ನೆಯೇ ಇಲ್ಲ. ನಾವು ಪ್ರಕರಣವನ್ನು ಸಂವೇದನಾಶೀಲಗೊಳಿಸಲು ಬಯಸುವುದಿಲ್ಲ, ಆದರೆ ನಾವು ಖಂಡಿತವಾಗಿಯೂ

ಧರ್ಮಸ್ಥಳ ರಹಸ್ಯ ಅಂತ್ಯಸಂಸ್ಕಾರ ಪ್ರಕರಣ| ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ – ದಿನೇಶ್ ಗುಂಡೂರಾವ್ Read More »

ನಿರೂಪಕಿ ಅನುಶ್ರೀ ಮದುವೆ ಫಿಕ್ಸ್| ಮುಂದಿನ ತಿಂಗಳೇ ಕಲ್ಯಾಣೋತ್ಸವ| ಹುಡುಗ ಯಾರು ಗೊತ್ತಾ?

ಸಮಗ್ರ ನ್ಯೂಸ್: ಖ್ಯಾತ ನಿರೂಪಕಿ ನಟಿ ಅನುಶ್ರೀ ಅವರು ಹಸೆಮಣೆ ಏರಲು ಸಜ್ಜಾಗಿದ್ದಾರೆ. ಕೆಲ ವರ್ಷಗಳಿಂದ ಅನುಶ್ರೀ ಮದುವೆ ಯಾವಾಗ ಅನ್ನೋರಿಗೆ ಸಿಹಿಸುದ್ದಿ ಸಿಕ್ಕಿದೆ. ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ಅವರು ಆಗಸ್ಟ್ 28ಕ್ಕೆ ಮದುವೆ ಆಗಲಿದ್ದಾರೆ. ಕೊಡಗು ಮೂಲದ ಕಾರ್ಪೋರೇಟ್ ಉದ್ಯಮಿ ಜೊತೆ ಅನುಶ್ರೀ ಮದುವೆ ನಡೆಯಲಿದೆ. ಆಗಸ್ಟ್ 28ಕ್ಕೆ ಅನುಶ್ರೀ ಮದುವೆ ನಡೆಯಲಿದೆ ಎಂಬ ಮಾಹಿತಿ ಸಿಕ್ಕಿದೆ. ಬೆಂಗಳೂರು ಮೂಲದ ಉದ್ಯಮಿ ರೋಷನ್ ಜೊತೆ ಅವರು ವಿವಾಹ ಆಗುತ್ತಿದ್ದಾರೆ. ಹಾಗಾದರೆ ಇದು ಲವ್ ಮ್ಯಾರೇಜಾ?

ನಿರೂಪಕಿ ಅನುಶ್ರೀ ಮದುವೆ ಫಿಕ್ಸ್| ಮುಂದಿನ ತಿಂಗಳೇ ಕಲ್ಯಾಣೋತ್ಸವ| ಹುಡುಗ ಯಾರು ಗೊತ್ತಾ? Read More »

ಧರ್ಮಸ್ಥಳದಲ್ಲಿ ಕಾಣೆಯಾದ ಅನನ್ಯ ಭಟ್ ಕಳೆಬರಹ ಹುಡುಕಿಕೊಡಲು ಎಸ್ಪಿಗೆ ದೂರು ನೀಡಿದ ತಾಯಿ| ದೀರ್ಘ ದೂರಿನಲ್ಲಿ ಹಲವು ಘಟನೆಗಳು ಉಲ್ಲೇಖ

ಸಮಗ್ರ ನ್ಯೂಸ್: ಧರ್ಮಸ್ಥಳದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಲವು ಮೃತದೇಹಗಳನ್ನು ಹೂತು ಹಾಕಿದ್ದೇನೆ ಎಂದು ಧರ್ಮಸ್ಥಳದಲ್ಲಿ ಸ್ವಚ್ಛತಾ ಕಾರ್ಮಿಕನಾಗಿ ಕೆಲಸ ಮಾಡಿದ್ದ ವ್ಯಕ್ತಿಯೋರ್ವನ ಹೇಳಿಕೆ ಹೆಚ್ಚು ಪ್ರಾಮುಖ್ಯತೆ ಪಡೆದುಕೊಂಡಿದೆ. ಇದರ ಬೆನ್ನಲ್ಲೆ 60 ವರ್ಷದ ಮಹಿಳೆಯೊಬ್ಬರು 2003ರಲ್ಲಿ ಧರ್ಮಸ್ಥಳದಲ್ಲಿ ನಿಗೂಢವಾಗಿ ನಾಪತ್ತೆಯಾಗಿದ್ದ ತನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯ ಭಟ್ ಅವರ ಕಳೆಬರಹವನ್ನು ಪತ್ತೆಹಚ್ಚಲು ನೆರವಾಗುವಂತೆ ಧರ್ಮಸ್ಥಳ ಪೊಲೀಸರಿಗೆ ಮನವಿ ನೀಡಿದ್ದಾರೆ. ಬೆಂಗಳೂರಿನ ಪದ್ಮನಾಭನಗರ ನಿವಾಸಿ ಮತ್ತು ಕೇಂದ್ರ ತನಿಖಾ ದಳದ ನಿವೃತ್ತ ಸ್ಟೆನೋಗ್ರಾಫರ್ ಸುಜಾತಾ ಭಟ್ ತಮ್ಮ

ಧರ್ಮಸ್ಥಳದಲ್ಲಿ ಕಾಣೆಯಾದ ಅನನ್ಯ ಭಟ್ ಕಳೆಬರಹ ಹುಡುಕಿಕೊಡಲು ಎಸ್ಪಿಗೆ ದೂರು ನೀಡಿದ ತಾಯಿ| ದೀರ್ಘ ದೂರಿನಲ್ಲಿ ಹಲವು ಘಟನೆಗಳು ಉಲ್ಲೇಖ Read More »

ರಾಜ್ಯ ಸರ್ಕಾರಕ್ಕೆ ಕೇಂದ್ರ ಪುರಸ್ಕಾರ| ‘ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ’ ಗೆ ರಾಜ್ಯ ಭಾಜನ

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ‌ ಕೇಂದ್ರದ ಕಾರ್ಯದಕ್ಷತೆಗಾಗಿ ಕೇಂದ್ರ ಸರ್ಕಾರದ 2024ನೇ ಸಾಲಿನ ‘ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ’ಗೆ ರಾಜ್ಯ ಭಾಜನವಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ ಸಂತಸ ಹಂಚಿಕೊಂಡಿದ್ದಾರೆ. ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರದ ಕಾರ್ಯದಕ್ಷತೆಗಾಗಿ ಕೇಂದ್ರ ಸರ್ಕಾರದ 2024ನೇ ಸಾಲಿನ ‘ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ’ಗೆ ರಾಜ್ಯ ಭಾಜನವಾಗಿದೆ ಎಂದು ತಿಳಿಸಲು ಹರ್ಷಿಸುತ್ತೇನೆ. ಕರ್ನಾಟಕವು ಪಾರದರ್ಶಕ, ಜನಸ್ನೇಹಿ ಆಡಳಿತಕ್ಕೆ ಇಡೀ ದೇಶಕ್ಕೆ ಮಾದರಿ ರಾಜ್ಯ. ಈ ಪ್ರಶಸ್ತಿಯು

ರಾಜ್ಯ ಸರ್ಕಾರಕ್ಕೆ ಕೇಂದ್ರ ಪುರಸ್ಕಾರ| ‘ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ’ ಗೆ ರಾಜ್ಯ ಭಾಜನ Read More »