30 ದಿನ ಜೈಲಿನಲ್ಲಿದ್ದರೆ ಪ್ರಧಾನಿ, ಸಿಎಂ ಸ್ಥಾನಕ್ಕೆ ಕುತ್ತು| ಹೊಸ ಮಸೂದೆ ಮಂಡನೆಗೆ ಸಿದ್ಧತೆ ನಡೆಸಿರುವ ಕೇಂದ್ರ
ಸಮಗ್ರ ನ್ಯೂಸ್: ಭ್ರಷ್ಟಾಚಾರ ಅಥವಾ ಕ್ರಿಮಿನಲ್ ಪ್ರಕರಣಗಳಲ್ಲಿ ಸಿಲುಕಿ ಜೈಲು ಪಾಲಾಗುವ ಉನ್ನತ ಹುದ್ದೆಯಲ್ಲಿರುವವರಿಗೆ ಕೇಂದ್ರ ಸರ್ಕಾರ ಬಿಗ್ ಶಾಕ್ ನೀಡಲು ಮುಂದಾಗಿದೆ. ಯಾವುದೇ ಸಚಿವರು, ಮುಖ್ಯಮಂತ್ರಿ ಅಥವಾ ಪ್ರಧಾನ ಮಂತ್ರಿ ಸತತ 30 ದಿನಗಳ ಕಾಲ ಬಂಧನದಲ್ಲಿದ್ದರೆ, ಅವರು ಸ್ವಯಂಚಾಲಿತವಾಗಿ ತಮ್ಮ ಸ್ಥಾನವನ್ನು ಕಳೆದುಕೊಳ್ಳುವಂತಹ ಮಹತ್ವದ ಮಸೂದೆಯನ್ನು ಸಂಸತ್ತಿನ ಮುಂಬರುವ ಮಳೆಗಾಲದ ಅಧಿವೇಶನದಲ್ಲಿ ಮಂಡಿಸಲು ಕೇಂದ್ರ ಸಿದ್ಧತೆ ನಡೆಸಿದೆ. ಸಂವಿಧಾನದ 130ನೇ ತಿದ್ದುಪಡಿ ಮಸೂದೆಯ ಅಡಿಯಲ್ಲಿ ಈ ಹೊಸ ನಿಯಮವನ್ನು ತರಲಾಗುತ್ತಿದೆ. ಗಂಭೀರ ಕ್ರಿಮಿನಲ್ ಆರೋಪ […]










