ರಾಜಕೀಯ

ಬಿಜೆಪಿ ಸೇರುವಂತೆ ಒತ್ತಡ; ಮಣಿಯದ್ದಕ್ಕೆ ಇಡಿ ಸಂಚು – ಅಲವತ್ತುಕೊಂಡ ಡಿ.ಕೆ ಶಿವಕುಮಾರ್

ಸಮಗ್ರ ನ್ಯೂಸ್: ಬಿಜೆಪಿ ಪಕ್ಷಕ್ಕೆ ಸೇರುವಂತೆ ನನ್ನ ಮೇಲೆ ಒತ್ತಡ ಹೇರಲಾಗುತ್ತಿದೆ. ಅದಕ್ಕೆ ಒಪ್ಪದಿದ್ದಕ್ಕೆ ಸಂಚು ರೂಪಿಸಲಾಗಿದೆ. ಸರ್ಕಾರಿ ಸಂಸ್ಥೆಗಳು ನನ್ನ ವಿರುದ್ಧ ಪ್ರಕರಣ ದಾಖಲಿಸುತ್ತಿವೆ. ನನ್ನನ್ನು ಹೆದರಿಸುವುದು ಅಷ್ಟು ಸುಲಭವಲ್ಲ – ಕರ್ನಾಟಕ ಕಾಂಗ್ರೆಸ್​ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕರ್ನಾಟಕ ಕಾಂಗ್ರೆಸ್​ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸುವ ಮಾತು ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಆಡಳಿತಾರೂಢ ಬಿಜೆಪಿ ವಿರುದ್ಧ ಟ್ವೀಟ್​ ಮೂಲಕ ಡಿ.ಕೆ. ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಬಿಜೆಪಿಗೆ ಸೇರುವಂತೆ […]

ಬಿಜೆಪಿ ಸೇರುವಂತೆ ಒತ್ತಡ; ಮಣಿಯದ್ದಕ್ಕೆ ಇಡಿ ಸಂಚು – ಅಲವತ್ತುಕೊಂಡ ಡಿ.ಕೆ ಶಿವಕುಮಾರ್ Read More »

ನಟ ಅನಿರುದ್ಧ್ ರಿಂದ ಪ್ರಧಾನಿ ಮೋದಿಗೆ ಪತ್ರ

ಸಮಗ್ರ ನ್ಯೂಸ್: ನಟ ಅನಿರುದ್ಧ್​ ಅವರೀಗ ಬೆಂಗಳೂರಿನ ಕುರಿತು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಸುದ್ದಿಯಾಗಿದ್ದಾರೆ. ಆಗಾಗ ಸಾಮಾಜಿಕ ಕಳಕಳಿಯ ವಿಚಾರಗಳಲ್ಲಿ ಸುದ್ದಿಯಾಗಿರುವ ನಟ, ಇದೀಗ ‘ಬ್ರ್ಯಾಂಡ್ ಬೆಂಗಳೂರು’ ಉಳಿಸುವ ಬಗ್ಗೆ ಪತ್ರದಲ್ಲಿ ನಮೂದಿಸಿದ್ದಾರೆ. ಐಟಿ ಹಬ್, ಗ್ರೀನ್ ಸಿಟಿ ಎಂದೆಲ್ಲಾ ವಿಶ್ವದ ಗಮನ ಸೆಳೆದ ಬೆಂಗಳೂರು ಇತ್ತೀಚೆಗೆ ಅವ್ಯವಸ್ಥೆಗಳ ಕೂಪವಾಗುತ್ತಿದೆ. ಬೆಂಗಳೂರಿನ ಸಮಸ್ಯೆಯನ್ನು ಆಲಿಸಲು ಪ್ರತ್ಯೇಕವಾಗಿರುವ ಇಲಾಖೆಯನ್ನು ರಚಿಸಬೇಕು. ಕೇಂದ್ರ ಸರ್ಕಾರ ರಾಜ್ಯಕ್ಕೆ ಈ ಬಗ್ಗೆ ಸೂಕ್ತ ಕಾರ್ಯ ನಿರ್ವಹಿಸಲು ಕೂಡಲೇ ಆದೇಶ ಮಾಡಬೇಕು.

ನಟ ಅನಿರುದ್ಧ್ ರಿಂದ ಪ್ರಧಾನಿ ಮೋದಿಗೆ ಪತ್ರ Read More »

ಕಾಂಗ್ರೆಸ್ ನಿಂದ ಹೊರನಡೆದ ಹಿರಿಯ ನಾಯಕ ಕಪಿಲ್ ಸಿಬಲ್| ಎಸ್.ಪಿ ಯಿಂದ ರಾಜ್ಯಸಭೆಗೆ ಸ್ಪರ್ಧೆ

ಸಮಗ್ರ ನ್ಯೂಸ್: ಕಾಂಗ್ರೆಸ್‌ ಹಿರಿಯ ನಾಯಕ ಕಪಿಲ್‌ ಸಿಬಲ್‌ ಸಮಾಜವಾದಿ ಪಾರ್ಟಿಗೆ ಅಚ್ಚರಿ ರೀತಿಯಲ್ಲಿ ಪಕ್ಷಾಂತರವಾಗಿದ್ದಾರೆ. ರಾಜ್ಯಸಭಾ ಟಿಕೆಟ್‌ ಆಕಾಂಕ್ಷಿಯಾಗಿದ್ದ ಕಪಿಲ್‌ ಸಿಬಲ್‌ಗೆ ಕಾಂಗ್ರೆಸ್‌ ಟಿಕೆಟ್‌ ನೀಡಿರಲಿಲ್ಲ. ಹೀಗಾಗಿ ಕೊನೇ ಕ್ಷಣದಲ್ಲಿ ಅವರು ಕಾಂಗ್ರೆಸ್‌ ಪಕ್ಷಕ್ಕೆ ಬಿಗ್‌ ಶಾಕ್‌ ನೀಡಿದ್ದಾರೆ. ಸಮಾಜವಾದಿ ಪಾರ್ಟಿ ಕಪಿಲ್‌ ಸಿಬಲ್‌ ಅವರಿಗೆ ರಾಜ್ಯಸಭಾ ಟಿಕೆಟ್‌ ನೀಡಿದ್ದು, ಅವರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಕಾಂಗ್ರೆಸ್‌ನ ಹಿರಿಯ ನಾಯಕರಾಗಿದ್ದ ಕಪಿಲ್‌ ಸಿಬಲ್‌ ರಾಜ್ಯಸಭಾ ಟಿಕೆಟ್‌ ಸಿಗುತ್ತೆಂದು ಭಾವಿಸಿದ್ದರು. ಹೈಕಮಾಂಡ್‌ ಅವರಿಗೆ ಟಿಕೆಟ್‌ ನೀಡಿಲ್ಲ. ಹೀಗಾಗಿ

ಕಾಂಗ್ರೆಸ್ ನಿಂದ ಹೊರನಡೆದ ಹಿರಿಯ ನಾಯಕ ಕಪಿಲ್ ಸಿಬಲ್| ಎಸ್.ಪಿ ಯಿಂದ ರಾಜ್ಯಸಭೆಗೆ ಸ್ಪರ್ಧೆ Read More »

ಕೇಂದ್ರ, ರಾಜ್ಯದಿಂದ ನಾರಾಯಣ ಗುರುಗಳಿಗೆ ಹೆಜ್ಜೆಹೆಜ್ಜೆಗೂ ಅವಮಾನ – ಜೆ.ಆರ್ ಲೋಬೊ

ಸಮಗ್ರ ನ್ಯೂಸ್: ಹತ್ತನೇ ತರಗತಿ ಪಠ್ಯ ಪುಸ್ತಕದಿಂದ ನಾರಾಯಣ ಗುರುಗಳ ವಿಷಯ ಕೈ ಬಿಟ್ಟು ಬಿಜೆಪಿ ಸರಕಾರ ಅವರಿಗೆ ಅವಮಾನ ಮಾಡುತ್ತಿದೆ. ಇದರ ವಿರುದ್ದ ಚಳವಳಿ ನಡೆಸಲಾಗುವುದು ಎಂದು ಮಾಜಿ ಶಾಸಕ ಜೆ.ಆರ್.ಲೋಬೋ ಎಚ್ಚರಿಕೆ ನೀಡಿದರು. ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡಿದ ಅವರು, ಗಣರಾಜ್ಯೋತ್ಸವದಲ್ಲಿ ನಾರಾಯಣಗುರುಗಳ ಸ್ತಬ್ಧಚಿತ್ರಕ್ಕೆ ಅವಕಾಶ ನಿರಾಕರಣೆ ಮಾಡಲಾಯಿತು. ಮಂಗಳೂರು ವಿಮಾನ ನಿಲ್ದಾಣ, ರೈಲು ನಿಲ್ದಾಣಕ್ಕೆ ಅವರ ಹೆಸರಿಡಲು ಒತ್ತಾಯಿಸಿದರೂ ಸರಕಾರ ಸ್ಪಂದಿಸಿಲ್ಲ.‌ ದ.ಕ ದ ಬ್ಯಾಂಕ್ ಗಳ ಹೆಸರು ಕೂಡ ಇಲ್ಲದಂತೆ ಸರಕಾರ ಮಾಡಿದೆ. ಹೆಜ್ಜೆ

ಕೇಂದ್ರ, ರಾಜ್ಯದಿಂದ ನಾರಾಯಣ ಗುರುಗಳಿಗೆ ಹೆಜ್ಜೆಹೆಜ್ಜೆಗೂ ಅವಮಾನ – ಜೆ.ಆರ್ ಲೋಬೊ Read More »

“ಹರೀಶ್ ಪೂಂಜಾ ಗೋಣಿಯಲ್ಲಿ‌ ದುಡ್ಡು ತುಂಬಿ ಹಂಚುತ್ತಾರೆ!” | ಕಾರ್ಯಕರ್ತನ ಹೊಗಳಿಕೆ ಬೆಳ್ತಂಗಡಿ ಶಾಸಕರಿಗೆ ಮುಳುವಾಗುತ್ತಾ?

ಸಮಗ್ರ ನ್ಯೂಸ್: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರನ್ನು ಕಾರ್ಯಕರ್ತರೊಬ್ಬರು ಹೊಗಳುವ ಭರದಲ್ಲಿ ಆಡಿದ ಮಾತು ಈಗ ಶಾಸಕರಿಗೆ ಮುಳುವಾಗುವ ಲಕ್ಷಣಗಳು ಕಂಡುಬರುತ್ತಿದೆ. ಬೆಳ್ತಂಗಡಿಯ ಬಳಂಜದಲ್ಲಿ ನಡೆದ ಭಜನೋತ್ಸವ ಕಾರ್ಯಕ್ರಮದ ಸಮಾರೋಪದಲ್ಲಿ ಶಾಸಕ ಹರೀಶ್ ಪೂಂಜಾ ಭಾಗವಹಿಸಿದ್ದರು. ಈ ವೇಳೆ ಅಲ್ಲಿನ ಬಿಜೆಪಿ ಕಾರ್ಯಕರ್ತ ಹರೀಶ್ ವೈ ಚಂದ್ರಮ ಎಂಬವರು ಶಾಸಕರನ್ನು ಹೊಗಳಿದ್ದಾರೆ. ಅವರು ಭಾಷಣ ಮಾಡುವ ಸಂದರ್ಭದಲ್ಲಿ ”ಹರೀಶ್ ಪೂಂಜಾರವರು ಶಾಸಕರ ಮನೆಗೆ ಹೋದವರನ್ನು ಅವರು ಯಾವತ್ತೂ ಬರಿಗೈಲಿ ಕಳಿಸಿಲ್ಲ. ಐದು, ಹತ್ತು ಸಾವಿರದಂತೆ ಕಷ್ಟದಲ್ಲಿರುವವರಿಗೆ ನೀಡುತ್ತಾರೆ.

“ಹರೀಶ್ ಪೂಂಜಾ ಗೋಣಿಯಲ್ಲಿ‌ ದುಡ್ಡು ತುಂಬಿ ಹಂಚುತ್ತಾರೆ!” | ಕಾರ್ಯಕರ್ತನ ಹೊಗಳಿಕೆ ಬೆಳ್ತಂಗಡಿ ಶಾಸಕರಿಗೆ ಮುಳುವಾಗುತ್ತಾ? Read More »

ನೀವು ಬಳಸೋ ಎಣ್ಣೆಯಲ್ಲಿ ಕಡಲೆಯೂ ಇಲ್ಲ, ಸೂರ್ಯಕಾಂತಿಯೂ ಇಲ್ಲ – ಶೋಭಾ ಕರಂದ್ಲಾಜೆ

ಸಮಗ್ರ ನ್ಯೂಸ್: ನೀವು ತಿನ್ನುತ್ತಿರುವ ಸೂರ್ಯಕಾಂತಿ, ಕಡಲೆಕಾಯಿ ಎಣ್ಣೆಯಲ್ಲಿ ಸೂರ್ಯಕಾಂತಿಯೂ ಇಲ್ಲ, ಕಡಲೆ ಬೀಜವೂ ಇಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಡುಗೆ ತೈಲದ ವಿಚಾರದಲ್ಲಿ ಭಾರತ ಸ್ವಾವಲಂಬಿ ಆಗಬೇಕಿದೆ. ಶೇಕಡ 70ರಷ್ಟು ಎಣ್ಣೆ ವಿದೇಶದಿಂದ ಆಮದಾಗುತ್ತದೆ. ಮಲೇಷಿಯಾ ಹಾಗೂ ಇಂಡೋನೇಷ್ಯಾದಿಂದ ಪಾಮ್ ಆಯಿಲ್ ಬರುತ್ತದೆ. ಅದನ್ನು ಭಾರತದಲ್ಲಿ ರಿಫೈನರಿ ಮಾಡಿ ಬೇರೆ, ಬೇರೆ ಲೇಬಲ್ ಅಂಟಿಸಿ ಮಾರಾಟ ಮಾಡಲಾಗುತ್ತಿದೆ ಎಂದಿದ್ದಾರೆ ತೈಲ ಬೆಳೆಗಳಿಗೆ ಕೇಂದ್ರ ಸರ್ಕಾರ

ನೀವು ಬಳಸೋ ಎಣ್ಣೆಯಲ್ಲಿ ಕಡಲೆಯೂ ಇಲ್ಲ, ಸೂರ್ಯಕಾಂತಿಯೂ ಇಲ್ಲ – ಶೋಭಾ ಕರಂದ್ಲಾಜೆ Read More »

ಕೆನಡಾದಲ್ಲಿ ಕನ್ನಡ ಕಂಪು ಹರಡಿದ ಚಂದ್ರ ಆರ್ಯ| ಸಂಸದರ ಭಾಷಣ ಫುಲ್ ವೈರಲ್

ಸಮಗ್ರ ನ್ಯೂಸ್: ಕೆನಡಾ ಸಂಸತ್‌ನಲ್ಲಿ ಕನ್ನಡದ ಕಂಪು ಹರಡಿದೆ. ಕೆನಡಾ ದೇಶದ ಲಿಬರಲ್‌ ಪಕ್ಷದ ಸಂಸದ ಚಂದ್ರ ಆರ್ಯ ಕನ್ನಡದಲ್ಲಿಯೇ ಮಾತನಾಡುವ ಮೂಲಕ ಕನ್ನಡಿಗರ ಮನ ಗೆದ್ದಿದ್ದಾರೆ.ನಾನು ನನ್ನ ಮಾತೃ ಭಾಷೆಯಾದ ಕನ್ನಡದಲ್ಲಿ ಮಾತನಾಡುತ್ತೇನೆ ಎಂದು ಕೆನಡಾ ಪಾರ್ಲಿಮೆಂಟ್‌ನಲ್ಲಿ ಸಂಸದ ಚಂದ್ರ ಆರ್ಯ ಕನ್ನಡದಲ್ಲಿ ಮಾತನಾಡಿದ್ದಾರೆ. ಮಾನ್ಯ ಸಭಾಪತಿ ಕೆನಡಾ ಸಂಸತ್‌ನಲ್ಲಿ ನನ್ನ ಮಾತೃಭಾಷೆ ಕನ್ನಡದಲ್ಲಿ ಮಾತನಾಡಲು ಅವಕಾಶ ಸಿಕ್ಕಿರುವುದಕ್ಕೆ ನನಗೆ ಸಂತೋಷವಾಗುತ್ತಿದೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ದ್ವಾರಾಳು ಗ್ರಾಮದ ವ್ಯಕ್ತಿಯೊಬ್ಬ ಕೆನಡಾದಲ್ಲಿ ಸಂಸತ್‌ ಸದಸ್ಯನಾಗಿ

ಕೆನಡಾದಲ್ಲಿ ಕನ್ನಡ ಕಂಪು ಹರಡಿದ ಚಂದ್ರ ಆರ್ಯ| ಸಂಸದರ ಭಾಷಣ ಫುಲ್ ವೈರಲ್ Read More »

ಕಾಂಗ್ರೆಸ್‌ ತೊರೆದ ಹಾರ್ದಿಕ್ ಪಟೇಲ್

ಸಮಗ್ರ ನ್ಯೂಸ್: ಗುಜರಾತ್ ಕಾಂಗ್ರೆಸ್ ನ ರಾಜ್ಯಾಧ್ಯಕ್ಷ ಹಾರ್ಧಿಕ್ ಪಟೇಲ್, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅಲ್ಲದೇ ಕಾಂಗ್ರೆಸ್ ಸದಸ್ಯ ಸ್ಥಾನಕ್ಕೂ ರಾಜೀನಾಮೆ ಸಲ್ಲಿಸಿದ್ದಾರೆ. ಈ ಕುರಿತಂತೆ ಟ್ವಿಟ್ ಮಾಡಿರುವ ಅವರು, ಇಂದು ನಾನು ಧೈರ್ಯದಿಂದ ಕಾಂಗ್ರೆಸ್ ಪಕ್ಷದ ಹುದ್ದೆಗೆ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆ. ನನ್ನ ನಿರ್ಧಾರವನ್ನು ನನ್ನ ಎಲ್ಲಾ ಸಹೋದ್ಯೋಗಿಗಳು ಮತ್ತು ಗುಜರಾತ್ ಜನರು ಸ್ವಾಗತಿಸುತ್ತಾರೆ ಎಂದು ನನಗೆ ಖಾತ್ರಿಯಿದೆ. ನನ್ನ ಈ ಹೆಜ್ಜೆಯ ನಂತರ, ನಾನು ಭವಿಷ್ಯದಲ್ಲಿ ಗುಜರಾತ್ ಗಾಗಿ

ಕಾಂಗ್ರೆಸ್‌ ತೊರೆದ ಹಾರ್ದಿಕ್ ಪಟೇಲ್ Read More »

ಪಠ್ಯಪುಸ್ತಕಗಳು ಪಕ್ಷ ಪುಸ್ತಕಗಳಾಗುತ್ತಿವೆ. ಬಿಜೆಪಿಯ ಪಟಾಲಂ ವಿಕೃತಿಯ ಪರಾಕಾಷ್ಠೆ – ಮಾಜಿ ಸಿಎಂ ಹೆಚ್ಡಿಕೆ ಕಿಡಿ

ಸಮಗ್ರ ನ್ಯೂಸ್: 10ನೇ ತರಗತಿ ಪಠ್ಯದಲ್ಲಿ ಆರ್.ಎಸ್.ಎಸ್ ಸಂಸ್ಥಾಪಕ ಹೆಡ್ಗೆವಾರ್ ಭಾಷಣ ಸೇರಿಸಿರುವ ಸರ್ಕಾರದ ಕ್ರಮಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದು, ಪಠ್ಯಪುಸ್ತಕಗಳನ್ನು ʼಪಕ್ಷಪುಸ್ತಕʼಗಳನ್ನಾಗಿ ಮಾಡುವ ವ್ಯವಸ್ಥಿತ ಹುನ್ನಾರಕ್ಕೆ ನನ್ನ ಧಿಕ್ಕಾರವಿದೆ. ಬಿಜೆಪಿಯ ನೈಜ ಬಣ್ಣದ ವಿಸ್ತೃತರೂಪವೇ ಆಯ್ದ ಪಠ್ಯಗಳನ್ನು ಟಾರ್ಗೆಟ್‌ ಮಾಡಿ ಡಿಲೀಟ್‌ ಮಾಡುವುದು ಎಂದು ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿಯ ಈ ಬುಡಮೇಲು ಕೃತ್ಯಗಳ ಬಗ್ಗೆ ನನಗೆ ಅಚ್ಚರಿಯೇನೂ ಇಲ್ಲ. ನನ್ನ ಜತೆ ಮೈತ್ರಿ ಸರಕಾರ ಮಾಡಿದಾಗ ಅವರ ಬೇಳೆ ಬೇಯಲಿಲ್ಲ. ʼಆಪರೇಷನ್‌ ಕಮಲʼದ

ಪಠ್ಯಪುಸ್ತಕಗಳು ಪಕ್ಷ ಪುಸ್ತಕಗಳಾಗುತ್ತಿವೆ. ಬಿಜೆಪಿಯ ಪಟಾಲಂ ವಿಕೃತಿಯ ಪರಾಕಾಷ್ಠೆ – ಮಾಜಿ ಸಿಎಂ ಹೆಚ್ಡಿಕೆ ಕಿಡಿ Read More »

ಸಭಾಪತಿ ಸ್ಥಾನಕ್ಕೆ ಹೊರಟ್ಟಿ‌ ರಾಜೀನಾಮೆ| ನಾಳೆ‌ ಬಿಜೆಪಿಗೆ ಅಧಿಕೃತ ಸೇರ್ಪಡೆ

ಸಮಗ್ರ ನ್ಯೂಸ್: ವಿಧಾನ ಪರಿಷತ್ ಸಭಾಪತಿ ಹಾಗೂ ಪರಿಷತ್ ಸದಸ್ಯ ಸ್ಥಾನಕ್ಕೆ ಬಸವರಾಜ ಹೊರಟ್ಟಿಯವರು ರಾಜೀನಾಮೆ ನೀಡಿದ್ದಾರೆ. ಅಲ್ಲದೇ ನಾಳೆ ಅಧಿಕೃತವಾಗಿ ಬಿಜೆಪಿ ಪಕ್ಷವನ್ನು ಸೇರ್ಪಡೆಗೊಳ್ಳೋದಾಗಿ ತಿಳಿಸಿದ್ದಾರೆ. ಈ ಕುರಿತಂತೆ ಮಾತನಾಡಿದಂತ ಅವರು, ಸಭಾಪತಿ ಹಾಗೂ ಪರಿಷತ್ ಸದಸ್ಯ ಸ್ಥಾನ ಎರಡಕ್ಕೂ ವಿಧಾನ ಪರಿಷತ್ ಕಾರ್ಯದರ್ಶಿಯವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದೇನೆ. ನಾಳೆ ಬಿಜೆಪಿ ಪಕ್ಷವನ್ನು ಸೇರ್ಪಡೆಗೊಳ್ಳುವುದಾಗಿ ತಿಳಿಸಿದ್ದಾರೆ. ಇನ್ನೂ ನಿಯಮದ ಪ್ರಕಾರ ಸಭಾಪತಿ ಸ್ಥಾನಕ್ಕೆ ರಾಜೀನಾಮೆಯನ್ನು ಉಪ ಸಭಾಪತಿಗಳಿಗೆ ಸಲ್ಲಿಸಬೇಕು. ಆದರೆ ಉಪ ಸಭಾಪತಿ ಸ್ಥಾನ

ಸಭಾಪತಿ ಸ್ಥಾನಕ್ಕೆ ಹೊರಟ್ಟಿ‌ ರಾಜೀನಾಮೆ| ನಾಳೆ‌ ಬಿಜೆಪಿಗೆ ಅಧಿಕೃತ ಸೇರ್ಪಡೆ Read More »