ರಾಜಕೀಯ

ಕಾಂಗ್ರೆಸ್‌ ತೊರೆದ ಹಾರ್ದಿಕ್ ಪಟೇಲ್

ಸಮಗ್ರ ನ್ಯೂಸ್: ಗುಜರಾತ್ ಕಾಂಗ್ರೆಸ್ ನ ರಾಜ್ಯಾಧ್ಯಕ್ಷ ಹಾರ್ಧಿಕ್ ಪಟೇಲ್, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅಲ್ಲದೇ ಕಾಂಗ್ರೆಸ್ ಸದಸ್ಯ ಸ್ಥಾನಕ್ಕೂ ರಾಜೀನಾಮೆ ಸಲ್ಲಿಸಿದ್ದಾರೆ. ಈ ಕುರಿತಂತೆ ಟ್ವಿಟ್ ಮಾಡಿರುವ ಅವರು, ಇಂದು ನಾನು ಧೈರ್ಯದಿಂದ ಕಾಂಗ್ರೆಸ್ ಪಕ್ಷದ ಹುದ್ದೆಗೆ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆ. ನನ್ನ ನಿರ್ಧಾರವನ್ನು ನನ್ನ ಎಲ್ಲಾ ಸಹೋದ್ಯೋಗಿಗಳು ಮತ್ತು ಗುಜರಾತ್ ಜನರು ಸ್ವಾಗತಿಸುತ್ತಾರೆ ಎಂದು ನನಗೆ ಖಾತ್ರಿಯಿದೆ. ನನ್ನ ಈ ಹೆಜ್ಜೆಯ ನಂತರ, ನಾನು ಭವಿಷ್ಯದಲ್ಲಿ ಗುಜರಾತ್ ಗಾಗಿ […]

ಕಾಂಗ್ರೆಸ್‌ ತೊರೆದ ಹಾರ್ದಿಕ್ ಪಟೇಲ್ Read More »

ಪಠ್ಯಪುಸ್ತಕಗಳು ಪಕ್ಷ ಪುಸ್ತಕಗಳಾಗುತ್ತಿವೆ. ಬಿಜೆಪಿಯ ಪಟಾಲಂ ವಿಕೃತಿಯ ಪರಾಕಾಷ್ಠೆ – ಮಾಜಿ ಸಿಎಂ ಹೆಚ್ಡಿಕೆ ಕಿಡಿ

ಸಮಗ್ರ ನ್ಯೂಸ್: 10ನೇ ತರಗತಿ ಪಠ್ಯದಲ್ಲಿ ಆರ್.ಎಸ್.ಎಸ್ ಸಂಸ್ಥಾಪಕ ಹೆಡ್ಗೆವಾರ್ ಭಾಷಣ ಸೇರಿಸಿರುವ ಸರ್ಕಾರದ ಕ್ರಮಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದು, ಪಠ್ಯಪುಸ್ತಕಗಳನ್ನು ʼಪಕ್ಷಪುಸ್ತಕʼಗಳನ್ನಾಗಿ ಮಾಡುವ ವ್ಯವಸ್ಥಿತ ಹುನ್ನಾರಕ್ಕೆ ನನ್ನ ಧಿಕ್ಕಾರವಿದೆ. ಬಿಜೆಪಿಯ ನೈಜ ಬಣ್ಣದ ವಿಸ್ತೃತರೂಪವೇ ಆಯ್ದ ಪಠ್ಯಗಳನ್ನು ಟಾರ್ಗೆಟ್‌ ಮಾಡಿ ಡಿಲೀಟ್‌ ಮಾಡುವುದು ಎಂದು ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿಯ ಈ ಬುಡಮೇಲು ಕೃತ್ಯಗಳ ಬಗ್ಗೆ ನನಗೆ ಅಚ್ಚರಿಯೇನೂ ಇಲ್ಲ. ನನ್ನ ಜತೆ ಮೈತ್ರಿ ಸರಕಾರ ಮಾಡಿದಾಗ ಅವರ ಬೇಳೆ ಬೇಯಲಿಲ್ಲ. ʼಆಪರೇಷನ್‌ ಕಮಲʼದ

ಪಠ್ಯಪುಸ್ತಕಗಳು ಪಕ್ಷ ಪುಸ್ತಕಗಳಾಗುತ್ತಿವೆ. ಬಿಜೆಪಿಯ ಪಟಾಲಂ ವಿಕೃತಿಯ ಪರಾಕಾಷ್ಠೆ – ಮಾಜಿ ಸಿಎಂ ಹೆಚ್ಡಿಕೆ ಕಿಡಿ Read More »

ಸಭಾಪತಿ ಸ್ಥಾನಕ್ಕೆ ಹೊರಟ್ಟಿ‌ ರಾಜೀನಾಮೆ| ನಾಳೆ‌ ಬಿಜೆಪಿಗೆ ಅಧಿಕೃತ ಸೇರ್ಪಡೆ

ಸಮಗ್ರ ನ್ಯೂಸ್: ವಿಧಾನ ಪರಿಷತ್ ಸಭಾಪತಿ ಹಾಗೂ ಪರಿಷತ್ ಸದಸ್ಯ ಸ್ಥಾನಕ್ಕೆ ಬಸವರಾಜ ಹೊರಟ್ಟಿಯವರು ರಾಜೀನಾಮೆ ನೀಡಿದ್ದಾರೆ. ಅಲ್ಲದೇ ನಾಳೆ ಅಧಿಕೃತವಾಗಿ ಬಿಜೆಪಿ ಪಕ್ಷವನ್ನು ಸೇರ್ಪಡೆಗೊಳ್ಳೋದಾಗಿ ತಿಳಿಸಿದ್ದಾರೆ. ಈ ಕುರಿತಂತೆ ಮಾತನಾಡಿದಂತ ಅವರು, ಸಭಾಪತಿ ಹಾಗೂ ಪರಿಷತ್ ಸದಸ್ಯ ಸ್ಥಾನ ಎರಡಕ್ಕೂ ವಿಧಾನ ಪರಿಷತ್ ಕಾರ್ಯದರ್ಶಿಯವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದೇನೆ. ನಾಳೆ ಬಿಜೆಪಿ ಪಕ್ಷವನ್ನು ಸೇರ್ಪಡೆಗೊಳ್ಳುವುದಾಗಿ ತಿಳಿಸಿದ್ದಾರೆ. ಇನ್ನೂ ನಿಯಮದ ಪ್ರಕಾರ ಸಭಾಪತಿ ಸ್ಥಾನಕ್ಕೆ ರಾಜೀನಾಮೆಯನ್ನು ಉಪ ಸಭಾಪತಿಗಳಿಗೆ ಸಲ್ಲಿಸಬೇಕು. ಆದರೆ ಉಪ ಸಭಾಪತಿ ಸ್ಥಾನ

ಸಭಾಪತಿ ಸ್ಥಾನಕ್ಕೆ ಹೊರಟ್ಟಿ‌ ರಾಜೀನಾಮೆ| ನಾಳೆ‌ ಬಿಜೆಪಿಗೆ ಅಧಿಕೃತ ಸೇರ್ಪಡೆ Read More »

ತ್ರಿಪುರಾ ಮುಖ್ಯಮಂತ್ರಿಯಾಗಿ ಮಾಣಿಕ್ ಸಹಾ ಅಧಿಕಾರ ಸ್ವೀಕಾರ

ಸಮಗ್ರ ನ್ಯೂಸ್: ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಮುನ್ನ ಮಾಣಿಕ್ ಸಹಾ ಅವರು ರವಿವಾರ ತ್ರಿಪುರಾದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಬಿಪ್ಲಬ್ ಕುಮಾರ್ ದೇಬ್ ಅವರು ಶನಿವಾರ ರಾಜೀನಾಮೆ ನೀಡಿದ ನಂತರ ಸಹಾ ಅವರನ್ನು ಸಿಎಂ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿತ್ತು.ದೇಬ್ ಈಗ ಬಿಜೆಪಿ ತ್ರಿಪುರಾ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆಯಿದೆ. ಸಹಾ ಲಕ್ನೋದ ಕಿಂಗ್ ಜಾರ್ಜ್ ವೈದ್ಯಕೀಯ ಕಾಲೇಜಿನ ಸರ್ಜನ್. ಅವರು 2016 ರಲ್ಲಿ ಬಿಜೆಪಿಗೆ ಸೇರುವ ಮೊದಲು ಪ್ರತಿಪಕ್ಷ ಕಾಂಗ್ರೆಸ್‌ನ

ತ್ರಿಪುರಾ ಮುಖ್ಯಮಂತ್ರಿಯಾಗಿ ಮಾಣಿಕ್ ಸಹಾ ಅಧಿಕಾರ ಸ್ವೀಕಾರ Read More »

ಬೆಳ್ತಂಗಡಿ: ನನಗೆ ಮುಸ್ಲಿಂ ಮತ ಬೇಡ, ಹಿಂದೂ ಮತಗಳಷ್ಟೇ ಸಾಕು – ಹರೀಶ್ ಪೂಂಜಾ

ಸಮಗ್ರ ನ್ಯೂಸ್: ‘ನನಗೆ ಮುಸ್ಲಿಂ ಮತ ಬೇಡ ಹಿಂದೂಗಳ ಓಟು ಮಾತ್ರವೇ ಸಾಕು’ ಎಂದು ಶಾಸಕ ಹರೀಶ್ ಪೂಂಜಾ ಕಾರ್ಯಕ್ರಮ ಒಂದರಲ್ಲಿ ಹೇಳಿಕೆ ನೀಡಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಭಾ ಕಾರ್ಯಕ್ರಮದ ವೇದಿಕೆಯೊಂದರಲ್ಲಿ ಭಾಷಣದ ವೇಳೆ ಮಾತನಾಡಿದ ಶಾಸಕ ಪೂಂಜಾ ಮುಂದಿನ ಚುನಾವಣೆಗೆ ಸಂಘದ ಹಿರಿಯರು ನನ್ನನ್ನು ಮತ್ತೆ ಚುನಾವಣೆಯಲ್ಲಿ ಸ್ಪರ್ಧಿಸಲು ಸೂಚಿಸಿದರೆ ನಾನು ಧೈರ್ಯದಿಂದ ಹೇಳುತ್ತೇನೆ, ನನಗೆ ಬ್ಯಾರಿ(ಮುಸ್ಲಿಂ)ಗಳ ಓಟು ಬೇಡ ಹಿಂದೂಗಳ ಓಟು ಮಾತ್ರ ಸಾಕು ಯಾಕೆಂದರೆ ಅಯೋಧ್ಯೆಯಲ್ಲಿ ಅಯೋಧ್ಯೆ ರಾಮಮಂದಿರ ನಿರ್ಮಾಣ

ಬೆಳ್ತಂಗಡಿ: ನನಗೆ ಮುಸ್ಲಿಂ ಮತ ಬೇಡ, ಹಿಂದೂ ಮತಗಳಷ್ಟೇ ಸಾಕು – ಹರೀಶ್ ಪೂಂಜಾ Read More »

ಚುನಾವಣೆ; ರಾಜ್ಯಸಭೆಗೆ ನಿರ್ಮಲಾ, ಪರಿಷತ್ ಗೆ ವಿಜಯೇಂದ್ರ ಫೈನಲ್?

ಸಮಗ್ರ ನ್ಯೂಸ್: ವಿಧಾನ ಪರಿಷತ್ ಮತ್ತು ರಾಜ್ಯಸಭೆ ಚುನಾವಣೆಗೆ ಸಂಬಂಧಿಸಿದಂತೆ ಇಂದು ನಡೆದ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ರಾಜ್ಯಸಭೆ ಅಭ್ಯರ್ಥಿಯಾಗಿ ನಿರ್ಮಲಾ ಸೀತಾರಾಮನ್ ಹೆಸರು ಮತ್ತು ಪರಿಷತ್ ಸ್ಥಾನದ ಅಭ್ಯರ್ಥಿಯಾಗಿ ಬಿ.ವೈ.ವಿಜಯೇಂದ್ರ ಹೆಸರನ್ನೂ ಕಳುಹಿಸಿದೆ ಎನ್ನಲಾಗಿದೆ. ಇದಲ್ಲದೇ ರಾಜ್ಯಸಭೆ ಅಭ್ಯರ್ಥಿಯಾಗಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ, ಲೆಹರ್ ಸಿಂಗ್ ಕೆ.ಸಿ ರಾಮಮೂರ್ತಿ ಸೇರಿದಂತೆ 5 ಹೆಸರುಗಳನ್ನು ಹೆಸರನ್ನೂ ಪ್ರಸ್ತಾಪಿಸಲಾಗಿದೆ ಅಂತ ತಿಳಿದು ಬಂದಿದೆ.

ಚುನಾವಣೆ; ರಾಜ್ಯಸಭೆಗೆ ನಿರ್ಮಲಾ, ಪರಿಷತ್ ಗೆ ವಿಜಯೇಂದ್ರ ಫೈನಲ್? Read More »

ರಾಜಕೀಯ ಬೆಳವಣಿಗೆ; ತ್ರಿಪುರ ಮುಖ್ಯಮಂತ್ರಿ ದಿಢೀರ್ ರಾಜೀನಾಮೆ

ಸಮಗ್ರ ನ್ಯೂಸ್: ದಿಢೀರ್‌ ರಾಜಕೀಯ ಬೆಳವಣಿಗೆಯಲ್ಲಿ ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್‌ ಕುಮಾರ್‌ ದೇವ್‌ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.ಬಿಜೆಪಿ ಹೈಕಮಾಂಡ್‌ ಸೂಚನೆಯಂತೆ ಬಿಪ್ಲಬ್‌ ಕುಮಾರ್‌ ದೇವ್‌ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದ್ದು, ಮತ್ತೊಬ್ಬರನ್ನು ಮುಖ್ಯಮಂತ್ರಿಯನ್ನಾಗಿ ಶಾಸಕಾಂಗ ಪಕ್ಷ ಆಯ್ಕೆ ಮಾಡಲಿದೆ. ಬಿಪ್ಲಬ್‌ ಕುಮಾರ್‌ ದೇವ್‌ ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಬಿಜೆಪಿ ಹೈಕಮಾಂಡ್‌ ಸೂಚನೆಯಂತೆ ಪಕ್ಷದ ನಿಷ್ಟಾವಂತ ಕಾರ್ಯಕರ್ತರಾಗಿರುವ ಬಿಪ್ಲಬ್‌ ಕುಮಾರ್‌ ದೇವ್‌ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಹೇಳಲಾಗಿದೆ.

ರಾಜಕೀಯ ಬೆಳವಣಿಗೆ; ತ್ರಿಪುರ ಮುಖ್ಯಮಂತ್ರಿ ದಿಢೀರ್ ರಾಜೀನಾಮೆ Read More »

ರಾಜ್ಯಸರ್ಕಾರದಿಂದ ಮತಾಂತರ ನಿಷೇಧ ಕಾಯ್ದೆ ಸುಗ್ರೀವಾಜ್ಞೆ ಜಾರಿ| ಸುಗ್ರೀವಾಜ್ಞೆ ತಿರಸ್ಕರಿಸಲು ಸಿದ್ದರಾಮಯ್ಯ ಆಗ್ರಹ

ಸಮಗ್ರ ನ್ಯೂಸ್: ಕೆಲ ಸಮಯದಿಂದ ಪರ-ವಿರೋಧಕ್ಕೆ ಕಾರಣವಾಗಿದ್ದ ಬಲವಂತದ ಮತಾಂತರ ನಿಷೇಧ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದೆ. ವಿಧಾನಸಭೆಯಲ್ಲಿ ಅನುಮೋದನೆಗೊಂಡು, ಪರಿಷತ್ತಿನಲ್ಲಿ ಬಾಕಿ ಉಳಿದುಕೊಂಡಿದ್ದ ‘ಕರ್ನಾಟಕ ಧಾರ್ವಿುಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಅಧ್ಯಾದೇಶ, 2022’ಕ್ಕೆ ಮೇ 12ರಂದು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಸಂಪುಟದ ತೀರ್ವನವನ್ನು ಶುಕ್ರವಾರ ರಾಜಭವನಕ್ಕೆ ಕಳಿಸಲಾಗುತ್ತದೆ. ರಾಜ್ಯಪಾಲರು ಕಾನೂನು ತಂಡದ ಜತೆ ಸಮಾಲೋಚಿಸಿ ಸುಗ್ರೀವಾಜ್ಞೆಗೆ ಸಹಿ ಹಾಕಿದ ಕೂಡಲೇ ಮತಾಂತರ ನಿಷೇಧ ಕಾನೂನು ಜಾರಿಗೆ

ರಾಜ್ಯಸರ್ಕಾರದಿಂದ ಮತಾಂತರ ನಿಷೇಧ ಕಾಯ್ದೆ ಸುಗ್ರೀವಾಜ್ಞೆ ಜಾರಿ| ಸುಗ್ರೀವಾಜ್ಞೆ ತಿರಸ್ಕರಿಸಲು ಸಿದ್ದರಾಮಯ್ಯ ಆಗ್ರಹ Read More »

ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತೆ ಕಿಡಿಕಾರಿದ ನಟಿ ರಮ್ಯಾ

ಸಮಗ್ರ ನ್ಯೂಸ್: ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಮಾಜಿ ಸಂಸದೆ, ನಟಿ ರಮ್ಯಾ‌ ಮತ್ತೆ ಕಿಡಿಕಾರಿದ್ದಾರೆ. ಕಾಂಗ್ರೆಸ್ ಕಚೇರಿಯೇ ನನ್ನ ಟ್ರೋಲ್ ಮಾಡಲು ಹೇಳಿದೆ. ಕರ್ನಾಟಕ ಕಾಂಗ್ರೆಸ್ ಅಂದರೆ ಡಿ.ಕೆ.ಶಿವಕುಮಾರ್, ಡಿ.ಕೆ.ಶಿವಕುಮಾರ್ ಅಂದರೆ ಕರ್ನಾಟಕ ಕಾಂಗ್ರೆಸ್ ಎಂದು ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಸೋಷಿಯಲ್ ಮೀಡಿಯಾ ಉಸ್ತುವಾರಿ ಜವಾಬ್ದಾರಿ ಬಿಟ್ಟ ಬಳಿಕ ನನ್ನ ವಿರುದ್ಧ 8 ಕೋಟಿ ರೂಪಾಯಿ ವಂಚನೆ ಆರೋಪ ಕೇಳಿ ಬಂದಿದೆ. ನನ್ನ ಇಮೇಜ್ ಡ್ಯಾಮೇಜ್ ಮಾಡಲೆಂದೇ ನನ್ನ ವಿರುದ್ಧ ಸುದ್ದಿ ಮಾಡಲಾಗುತ್ತಿದೆ. ವೈಯಕ್ತಿಕ ಕಾರಣಕ್ಕೆ

ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತೆ ಕಿಡಿಕಾರಿದ ನಟಿ ರಮ್ಯಾ Read More »

ದೇವಸ್ಥಾನಗಳಲ್ಲಿ ಧ್ವನಿವರ್ಧಕ ಬಳಸಲು ಕರೆ ಕೊಟ್ಟವರು ಭಯೋತ್ಪಾದಕರು| ವಿವಾದಾತ್ಮಕ ಹೇಳಿಕೆ ನೀಡಿದ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್‌| ಹೇಳಿಕೆಗೆ ನಾನಿನ್ನೂ ಬದ್ಧವೆಂದ ಹರಿಪ್ರಸಾದ್|

ಬೆಂಗಳೂರು: ದೇವಸ್ಥಾನಗಳಲ್ಲಿ ಧ್ವನಿವರ್ಧಕ ಬಳಸಲು ಕರೆ ಕೊಟ್ಟವರು ಭಯೋತ್ಪಾದಕರು ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್‌ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ವಿಧಾನ ಸೌಧದಲ್ಲಿ ಮಾತನಾಡಿದ ಅವರು, ಯಾರು ಈ ಸುಪ್ರಭಾತ ಅಭಿಯಾನವನ್ನು ಪ್ರಾರಂಭ ಮಾಡುತ್ತಿದ್ದಾರೋ ಅವರು ಭಯೋತ್ಪಾದಕರು. ಅವರನ್ನು ಕಾನೂನು ಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ (ಯುಎಪಿಎ) ಕಾಯ್ದೆಯ ಅಡಿಯಲ್ಲಿ ಅರೆಸ್ಟ್ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಸರ್ಕಾರದ ವೈಫಲ್ಯ ಮುಚ್ಚಿ ಹಾಕಲು ಸಮಾಜ ವಿರೋಧಿ ಶಕ್ತಿಗಳನ್ನು ಬಳಸಿಕೊಳ್ಳುತ್ತಿದ್ದಾರೆ. ಇವರು ಸಂಘ ಪರಿವಾರದ ವಿವಿಧ ಆಕ್ಟೋಪಸ್ ಇದ್ದಂತೆ.

ದೇವಸ್ಥಾನಗಳಲ್ಲಿ ಧ್ವನಿವರ್ಧಕ ಬಳಸಲು ಕರೆ ಕೊಟ್ಟವರು ಭಯೋತ್ಪಾದಕರು| ವಿವಾದಾತ್ಮಕ ಹೇಳಿಕೆ ನೀಡಿದ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್‌| ಹೇಳಿಕೆಗೆ ನಾನಿನ್ನೂ ಬದ್ಧವೆಂದ ಹರಿಪ್ರಸಾದ್| Read More »