ರಾಜಕೀಯ

“ಪೊಲೀಸರಿಂದಲೂ ಎಂಜಲು ಕಾಸು ತಿನ್ನುವವರ ಬಗ್ಗೆ ಮಾತಾಡ್ಲಿ” – ಬಿಜೆಪಿ ಮುಖಂಡ, ಮಾಜಿ ಪೊಲೀಸ್ ಅಧಿಕಾರಿ ಮಟ್ಟಣ್ಣನವರ್

ಬೆಂಗಳೂರು: ‘ಪೊಲೀಸರು ಕೆಟ್ಟು ಹಾಳಾಗಿದ್ದಾರೆ. ಎಂಜಲು ಕಾಸು ತಿನ್ನುತ್ತಾರೆ ಎಂಬ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಹೇಳಿಕೆ ವೈರಲ್‌ ಆಗಿದೆ. ಇದೇ ರೀತಿ ಪೊಲೀಸರಿಂದ ಎಂಜಲು ಕಾಸು ತಿನ್ನುವವರ ಕುರಿತೂ ಗೃಹಸಚಿವರು ಮಾತನಾಡಬೇಕು’ ಎಂದು ಆಡಳಿತಾರೂಢ ಬಿಜೆಪಿ ಮುಖಂಡರೂ ಆಗಿರುವ ಮಾಜಿ ಪೊಲೀಸ್‌ ಅಧಿಕಾರಿ ಗಿರೀಶ್‌ ಮಟ್ಟೆಣ್ಣವರ್‌ ಆಗ್ರಹಿಸಿದ್ದಾರೆ. ಅರಗ ಜ್ಞಾನೇಂದ್ರ ಅವರು ಗೃಹ ಸಚಿವರಾದ ಬಳಿಕ ಪೊಲೀಸರ ಕುರಿತು ಇಂತಹ ಹೇಳಿಕೆಗಳು ಬರುತ್ತಲೇ ಇವೆ. ಆದರೆ, ವರ್ಗಾವಣೆ ಎಂಜಲು ದಂಧೆ ಗೃಹ ಸಚಿವರಿಗೆ ಗೊತ್ತಿಲವೇ […]

“ಪೊಲೀಸರಿಂದಲೂ ಎಂಜಲು ಕಾಸು ತಿನ್ನುವವರ ಬಗ್ಗೆ ಮಾತಾಡ್ಲಿ” – ಬಿಜೆಪಿ ಮುಖಂಡ, ಮಾಜಿ ಪೊಲೀಸ್ ಅಧಿಕಾರಿ ಮಟ್ಟಣ್ಣನವರ್ Read More »

ಮೋದಿ- ದೊಡ್ಡಗೌಡ್ರು ಮುಖಾಮುಖಿ ಭೇಟಿ| ಕುತೂಹಲ ಕೆರಳಿಸಿದ ಹಾಲಿ, ಮಾಜಿ ಪ್ರಧಾನಿಗಳ ಮಾತುಕತೆ|

ಹೊಸದಿಲ್ಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಸಂಸತ್ ನ ಚಳಿಗಾಲದ ಅಧಿವೇಶನದ ಎರಡನೇ ದಿನವಾದ ಇಂದು ಈ ಇಬ್ಬರೂ ನಾಯಕರು ಸಂಸತ್ ನಲ್ಲಿ ಮಾತುಕತೆ ನಡೆಸಿದರು. ಈ ಕುರಿತು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು, ” ಇಂದು ಸಂಸತ್ತಿನಲ್ಲಿ ನಮ್ಮ ಮಾಜಿ ಪ್ರಧಾನಿ ಶ್ರೀ ಹೆಚ್ ಡಿ ದೇವೇಗೌಡರ ಜೊತೆ ಉತ್ತಮ ಸಭೆ ನಡೆಸಿದ್ದೇವೆ” ಎಂದು ಬರೆದುಕೊಂಡಿದ್ದಾರೆ. ಮೂರು ರೈತ ಕಾಯ್ದೆಗಳನ್ನು ಕೇಂದ್ರ

ಮೋದಿ- ದೊಡ್ಡಗೌಡ್ರು ಮುಖಾಮುಖಿ ಭೇಟಿ| ಕುತೂಹಲ ಕೆರಳಿಸಿದ ಹಾಲಿ, ಮಾಜಿ ಪ್ರಧಾನಿಗಳ ಮಾತುಕತೆ| Read More »

ರಾಜ್ಯದ ಶ್ರೀಮಂತ ಎಂಎಲ್.ಸಿ‌ ಅಭ್ಯರ್ಥಿ ಕೆಜಿಎಪ್ ಬಾಬು ಅಲಿಯಾಸ್ ಯೂಸುಪ್ ಶರೀಪ್ ಹಿನ್ನಲೆ ಗೊತ್ತಾ? ಇವರ ಮೇಲಿದೆ ಹಲವು ಪ್ರಕರಣಗಳು..!

ಬೆಂಗಳೂರು: ‘ಕೆಜಿಎಫ್‌ ಬಾಬು’ ಎಂದೇ ಹೆಸರುವಾಸಿಯಾಗಿರುವ ಯೂಸುಫ್‌ ಷರೀಫ್‌ ಅವರು ಬೆಂಗಳೂರು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು, ಬರೋಬ್ಬರಿ 1,743 ಕೋಟಿ ರೂ.ಆಸ್ತಿ ಘೋಷಣೆ ಮಾಡಿದ್ದಾರೆ. ಈ ಮೂಲಕ ರಾಜ್ಯದ ಅತಿ ಶ್ರೀಮಂತ ಅಭ್ಯರ್ಥಿ ಎನ್ನಿಸಿಕೊಂಡಿದ್ದಾರೆ. ಇವರ ಮೇಲೆ ಅತ್ಯಾಚಾರ ಸೇರಿ 21 ಪ್ರಕರಣಗಳಿವೆ. ಮೊದಲ ಹೆಂಡತಿ ಮಗಳ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇದರಲ್ಲಿ 14 ಪ್ರಕರಣಗಳು ಈಗಾಗಲೇ ಖುಲಾಸೆಯಾಗಿದೆ. ಜೆಪಿ ನಗರ ಠಾಣೆಯಲ್ಲಿ 2 ಕೇಸ್,

ರಾಜ್ಯದ ಶ್ರೀಮಂತ ಎಂಎಲ್.ಸಿ‌ ಅಭ್ಯರ್ಥಿ ಕೆಜಿಎಪ್ ಬಾಬು ಅಲಿಯಾಸ್ ಯೂಸುಪ್ ಶರೀಪ್ ಹಿನ್ನಲೆ ಗೊತ್ತಾ? ಇವರ ಮೇಲಿದೆ ಹಲವು ಪ್ರಕರಣಗಳು..! Read More »

‘ ಅಧಿಕಾರಕ್ಕಾಗಿ ಅಂಟಿಕೊಂಡು ಕೂರಲ್ಲ, ಜನಸೇವೆಯೇ ನನ್ನ ಉದ್ದೇಶ’| ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ ಹೇಳಿಕೆ|

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ 83ನೇ ಸಂಚಿಕೆಯಲ್ಲಿ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ್ದಾರೆ. ಇನ್ನೆರಡು ದಿನಗಳಲ್ಲಿ ಡಿಸೆಂಬರ್ ಆರಂಭವಾಗಲಿದ್ದು, ದೇಶ ನೌಕಾಪಡೆಯ ದಿನ ಮತ್ತು ಸಶಸ್ತ್ರ ಪಡೆಗಳ ಧ್ವಜ ದಿನವನ್ನು ಆಚರಿಸುತ್ತಿದೆ. ಡಿಸೆಂಬರ್ 16 ರಂದು ದೇಶವು 1971 ರ ಯುದ್ಧದ ಸುವರ್ಣಮಹೋತ್ಸವ ಆಚರಿಸಲಿದ್ದು, ಈ ಸಂದರ್ಭದಲ್ಲಿ ದೇಶದ ಭದ್ರತಾ ಪಡೆಗಳನ್ನು ಸ್ಮರಿಸುವುದು ನಮ್ಮ ಕರ್ತವ್ಯ. ನಾವು ವೀರಯೋಧರನ್ನು ಹುತಾತ್ಮ ಯೋಧರನ್ನು ಸ್ಮರಿಸೋಣ ಎಂದು ಹೇಳಿದ್ದಾರೆ. ಪ್ರಕೃತಿ ಸಂರಕ್ಷಣೆ

‘ ಅಧಿಕಾರಕ್ಕಾಗಿ ಅಂಟಿಕೊಂಡು ಕೂರಲ್ಲ, ಜನಸೇವೆಯೇ ನನ್ನ ಉದ್ದೇಶ’| ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ ಹೇಳಿಕೆ| Read More »

ರಾಜಕೀಯ ನಾಯಕರೇ ನಿಜವಾದ ಗೂಂಡಾಗಳು, ಭ್ರಷ್ಟರನ್ನು ಗುಂಡಿಟ್ಟು ಕೊಲ್ಲಬೇಕು – ಮುತಾಲಿಕ್ ಕಿಡಿ

ವಿಜಯಪುರ: ರಾಜಕೀಯ ನಾಯಕರು ನಿಜವಾದ ಗೂಂಡಾಗಳು. ಚುನಾವಣೆ ಬಂದಾಗ ಹಿಂದೂಗಳನ್ನು ಬಳಸಿಕೊಳ್ಳುತ್ತಾರೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಮುತಾಲಿಕ್, ಚುನಾವಣೆ ಬಂದಾಗ ರಾಜಕೀಯಕ್ಕೆ ಹಿಂದೂಗಳನ್ನು ಬಳಸಿಕೊಳ್ಳುತ್ತಾರೆ. ಬಳಿಕ ಹಿಂದುತ್ವಕ್ಕೆ ಹೋರಾಡಿದವರ ಮೇಲೆ ರೌಡಿಶೀಟರ್ ಕೇಸ್ ಹಾಕಲಾಗುತ್ತದೆ. ಅದನ್ನು ತಡೆಗಟ್ಟುವುದನ್ನು ಬಿಟ್ಟು, ತಮ್ಮ ಸ್ವಾರ್ಥಕ್ಕಾಗಿ ಹಿಂದುಗಳನ್ನು ಬಳಸಿಕೊಳ್ಳುತ್ತಾರೆ ಎಂದು ಹೇಳಿದ್ದಾರೆ. ಹಂಸಲೇಖ ಅವರು ದೊಡ್ಡ ವ್ಯಕ್ತಿ. ಅವರು ಅಂತಹ ಶಬ್ದ ಮಾತನಾಡಬಾರದಿತ್ತು. ಆದರೂ ಮಾತನಾಡಿದ್ದಾರೆ. ಅದನ್ನು ಖಂಡಿಸಿದ್ದೇನೆ. ಅವರು ಕ್ಷಮೆ ಕೇಳಿದ್ದಾರೆ.

ರಾಜಕೀಯ ನಾಯಕರೇ ನಿಜವಾದ ಗೂಂಡಾಗಳು, ಭ್ರಷ್ಟರನ್ನು ಗುಂಡಿಟ್ಟು ಕೊಲ್ಲಬೇಕು – ಮುತಾಲಿಕ್ ಕಿಡಿ Read More »

ಮೇಲ್ಮನೆ ಚುನಾವಣೆ: ಮಂಜುನಾಥ ಭಂಡಾರಿ ನಾಮಪತ್ರ ಸಲ್ಲಿಕೆ

ಮಂಗಳೂರು : ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಂಜುನಾಥ್ ಭಂಡಾರಿ ಮಂಗಳವಾರ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಕಾಂಗ್ರೆಸ್ ದ.ಕ. ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮುಖಂಡರಾದ ಮಿಥುನ್ ರೈ ಮತ್ತಿತರರು ಉಪಸ್ಥಿತರಿದ್ದರು. ಈ ವೇಳೆ ಮಾತನಾಡಿದ ಅವರು ‘ಕಳೆದ 40 ವರ್ಷದಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯನಾಗಿದ್ದೇನೆ. ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿದ್ದ ನನ್ನನ್ನು ಹಿರಿಯ ನಾಯಕರು ಗುರುತಿಸಿ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಕಲ್ಪಿಸಿದ್ದಾರೆ. ಈ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ’ ಎಂದರು. ದ.ಕ. ಮತ್ತು ಉಡುಪಿ ಜಿಲ್ಲೆಯ ಸ್ಥಳೀಯ

ಮೇಲ್ಮನೆ ಚುನಾವಣೆ: ಮಂಜುನಾಥ ಭಂಡಾರಿ ನಾಮಪತ್ರ ಸಲ್ಲಿಕೆ Read More »

ವಿಧಾನ ಪರಿಷತ್ ಚುನಾವಣೆ| ಬಿಜೆಪಿ ಅಭ್ಯರ್ಥಿಗಳ‌ ಮೊದಲ ಪಟ್ಟಿ ರಿಲೀಸ್|

ಬೆಂಗಳೂರು: ಡಿಸೆಂಬರ್ 10ರಂದು ನಡೆಯಲಿರುವ ವಿಧಾನ ಪರಿಷತ್ತಿನ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ ಚುನಾವಣೆಗೆ ಭಾರತೀಯ ಜನತಾ ಪಾರ್ಟಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಮೊದಲ ಪಟ್ಟಿಯಲ್ಲಿ 20 ಅಭ್ಯರ್ಥಿಗಳಿವರು. ಬೆಳಗಾವಿಯಿಂದ ಹಾಲಿ ಸದಸ್ಯ ಮಹಾಂತೇಶ ಕವಟಗಿಮಠ, ಧಾರವಾಡದಿಂದ ಪ್ರದೀಪ ಶೆಟ್ಟರ್ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಶಿವಮೊಗ್ಗದಿಂದ ಡಿ.ಎಸ್. ಅರುಣ್, ಕೊಡಗಿನಿಂದ ಸುಜಾ ಕುಶಾಲಪ್ಪ, ದಕ್ಷಿಣ ಕನ್ನಡ ಕೋಟ ಶ್ರೀನಿವಾಸ ಪೂಜಾರಿ, ಚಿಕ್ಕಮಗಳೂರು ಎಂ.ಕೆ.ಪ್ರಾಣೇಶ ಹೆಸರಿದೆ. ಉತ್ತರ ಕನ್ನಡ ಗಣಪತಿ ಉಳ್ವೇಕರ್, ಮೈಸೂರು ರಘು ಕೌಟಿಲ್ಯ,

ವಿಧಾನ ಪರಿಷತ್ ಚುನಾವಣೆ| ಬಿಜೆಪಿ ಅಭ್ಯರ್ಥಿಗಳ‌ ಮೊದಲ ಪಟ್ಟಿ ರಿಲೀಸ್| Read More »

ರೈತರ ಪರವಾಗಿ ಪ್ರಧಾನಿಗೆ ಅಭಿನಂದನೆ- ಯಡಿಯೂರಪ್ಪ ಟ್ವೀಟ್

ಬೆಂಗಳೂರು: ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿದ ಕೇಂದ್ರ ಬಿಜೆಪಿ ಸರ್ಕಾರದ ನಿರ್ಧಾರಕ್ಕೆ ದೇಶದ ರೈತರ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಟ್ವೀಟಿಸಿದ್ದಾರೆ. ರೈತರ ಕೃಷಿ ಕಾಯ್ದೆ ವಿರುದ್ಧ ದೇಶದ ಹಲವು ಭಾಗದ ರೈತರ ವಿರೋಧಕ್ಕೆ ಸ್ಪಂದಿಸಿ ಕಾಯ್ದೆಗಳನ್ನು ಹಿಂಪಡೆದ ಪ್ರಧಾನಿ ಅವರಿಗೆ ರೈತರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಸದಾ ರೈತರ ಹಿತ, ರೈತ ಪರವಾದ ಬದ್ಧತೆ ಹೊಂದಿರುವ ಕೇಂದ್ರ ಸರ್ಕಾರ, ಪ್ರತಿಷ್ಠೆ, ರಾಜಕೀಯಗಳನ್ನೆಲ್ಲಾ ಪರಿಗಣಿಸದೆ ಸಂವೇದನಾಶೀಲತೆಯನ್ನು ಪ್ರದರ್ಶಿಸಿದೆ ಎಂದು ಅವರು ತಿಳಿಸಿದ್ದಾರೆ.

ರೈತರ ಪರವಾಗಿ ಪ್ರಧಾನಿಗೆ ಅಭಿನಂದನೆ- ಯಡಿಯೂರಪ್ಪ ಟ್ವೀಟ್ Read More »

ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿರಲಿ;ಎದೆಯಗಲ ಎಷ್ಟೇ ಇಂಚಿನದ್ದಾಗಿರಲಿ, ಜನಶಕ್ತಿಯ ಎದುರು ಆತ ಮಣಿಯಲೇಬೇಕು. ಇದುವೇ ಪ್ರಜಾಪ್ರಭುತ್ವದ ಸೊಗಸು: ಪ್ರಧಾನಿ ನಡೆಯನ್ನು ಹೊಗಳಿ, ಕಿಚಾಯಿಸಿದ ಸಿದ್ದು

ಬೆಂಗಳೂರು: ಕರಾಳ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿದ ಕೇಂದ್ರ ಬಿಜೆಪಿ ಸರ್ಕಾರದ ನಿರ್ಧಾರ ದೇಶದ ಮಣ್ಣಿನ ಮಕ್ಕಳ ಅಭೂತಪೂರ್ವ ಹೋರಾಟಕ್ಕೆ ಸಿಕ್ಕ ಗೆಲುವಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ರೈತ ಹೋರಾಟಗಾರರಿಗೆ ಅಭಿನಂದನೆಗಳು ಜೈಕಿಸಾನ್ ಎಂದು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕೃಷಿ ಕಾಯ್ದೆ ರದ್ದುಗೊಳಿಸಿದರಷ್ಟೇ ಸಾಲದು ಈ ಕರಾಳ ಕಾಯ್ದೆ ರದ್ದತಿಗಾಗಿ ನಡೆದ ಹೋರಾಟದಲ್ಲಿ ಹುತಾತ್ಮರಾದ ರೈತ ಕುಟುಂಬಗಳಿಗೆ ಕೇಂದ್ರ ಬಿಜೆಪಿ ಸರ್ಕಾರ ತಲಾ 25 ಲಕ್ಷ ರೂಪಾಯಿ ಪರಿಹಾರ ಕೊಡಬೇಕು ಎಂದು ಒತ್ತಾಯಿಸಿದ್ದಾರೆ. ಸರ್ವಾಧಿಕಾರಿ

ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿರಲಿ;ಎದೆಯಗಲ ಎಷ್ಟೇ ಇಂಚಿನದ್ದಾಗಿರಲಿ, ಜನಶಕ್ತಿಯ ಎದುರು ಆತ ಮಣಿಯಲೇಬೇಕು. ಇದುವೇ ಪ್ರಜಾಪ್ರಭುತ್ವದ ಸೊಗಸು: ಪ್ರಧಾನಿ ನಡೆಯನ್ನು ಹೊಗಳಿ, ಕಿಚಾಯಿಸಿದ ಸಿದ್ದು Read More »

‘ಸಂಸತ್ ನಲ್ಲಿ ಅಂಗೀಕಾರವಾಗದ ಹೊರತು‌ ನಾವು ಪ್ರಧಾನಿಯನ್ನು ನಂಬಲ್ಲ’ – ರೈತ ನಾಯಕ ರಾಕೇಶ್ ಹೇಳಿಕೆ

ನವದೆಹಲಿ: ಕೃಷಿ ಮಸೂದೆಗಳನ್ನು ರದ್ದುಪಡಿಸಿ ಘೋಷಣೆ ಹೊರಡಿಸಿದ ಪ್ರಧಾನಿ ಮೋದಿಯವರ ನಿರ್ಧಾರದ ಸಂಬಂಧ ಮಾತನಾಡಿದ ಭಾರತೀಯ ಕಿಸಾನ್​ ಯೂನಿಯನ್​ ನಾಯಕ ರಾಕೇಶ್​ ಟಿಕಾಯತ್​, ಸಂಸತ್​ನಲ್ಲಿ ಈ ನಿರ್ಧಾರವನ್ನು ಅಂಗೀಕರಿಸಿದ ಬಳಿಕವೇ ಸತ್ಯಾಗ್ರಹದ ಸ್ಥಳದಿಂದ ರೈತರು ತಮ್ಮ ಮನೆಗೆ ಮರಳಲಿದ್ದಾರೆ ಎಂದು ಹೇಳಿದ್ದಾರೆ. ಕೃಷಿ ಮಸೂದೆ ವಾಪಸ್​ ಪಡೆದುಕೊಂಡ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ರಾಕೇಶ್​, ರೈತರ ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ ಕಾನೂನು ಬದ್ಧಗೊಳಿಸುವುದು ಸೇರಿದಂತೆ ಇನ್ನೂ ಅನೇಕ ಬೇಡಿಕೆಗಳು ಹಾಗೆಯೇ ಉಳಿದಿದೆ. ಇವುಗಳ ಬಗ್ಗೆ ಪ್ರಧಾನಿ

‘ಸಂಸತ್ ನಲ್ಲಿ ಅಂಗೀಕಾರವಾಗದ ಹೊರತು‌ ನಾವು ಪ್ರಧಾನಿಯನ್ನು ನಂಬಲ್ಲ’ – ರೈತ ನಾಯಕ ರಾಕೇಶ್ ಹೇಳಿಕೆ Read More »