ಶಾಸಕ ಅಶೋಕ್ ರೈ ಜನಪ್ರಿಯತೆ ಬೆನ್ನಲ್ಲೇ ಪುತ್ತೂರಿಗೆ ದಾಂಗುಡಿಯಿಟ್ಟ ಬಿ.ವೈ ವಿಜಯೇಂದ್ರ| ಕರಾವಳಿ ರಾಜಕೀಯದಲ್ಲಿ ಹೊಸ ಸಂಚಲನ
ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಈ ಮೊದಲು ಕಟ್ಟಾ ಬಿಜೆಪಿ ಕ್ಷೇತ್ರವಾಗಿತ್ತು. ಆದರೆ ಈಗ ಬಿಜೆಪಿಯಿಂದಲೇ ಕಾಂಗ್ರೆಸ್ ಸೇರ್ಪಡೆಯಾದ ಶಾಸಕ ಅಶೋಕ್ ರೈ ಇಲ್ಲಿ ಜನಪ್ರಿಯತೆ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಇದರ ನಡುವೆಯೇ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪುತ್ತೂರಿಗೆ ಭೇಟಿ ನೀಡಿದ್ದಾರೆ. ಬಿಜೆಪಿ ಘಟಾನುಘಟಿ ನಾಯಕರು ಪುತ್ತೂರಿಗೆ ಭೇಟಿ ನೀಡಿದ್ದು ಅಪರೂಪ. ಕೇವಲ ಚುನಾವಣಾ ಪ್ರಚಾರ ಸಂದರ್ಭದಲ್ಲಿ ಬಂದು ಹೋಗಿರಬಹುದು. ಆದರೆ ಇದೀಗ ಬಿವೈ ವಿಜಯೇಂದ್ರ, ನಳಿನ್ ಕುಮಾರ್ ಕಟೀಲ್, ಡಿವಿ ಸದಾನಂದ ಗೌಡ ಜೊತೆಗೂಡಿ […]










