ಚುನಾವಣಾ ಅಖಾಡಕ್ಕಿಳಿದ ಅಣ್ಣಾಮಲೈ/ ನಾಮಪತ್ರ ಸಲ್ಲಿಕೆ
ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಗೆ ಕೊಯಮತ್ತೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಅಖಾಡಕ್ಕೆ ಇಳಿದಿರುವ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ, ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಕೊಯಮತ್ತೂರಿನ ಕೊನಿಯಮ್ಮನ್ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಬಿಜೆಪಿ ಹಾಗೂ ಮಿತ್ರ ಪಕ್ಷಗಳ ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ತೆರಳಿ ನಾಮಪತ್ರ ಸಲ್ಲಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಯಮತ್ತೂರಿನ ಜನ ನನ್ನ ಮೇಲೆ ಪ್ರೀತಿ ತೋರಿದ್ದಾರೆ. ಇಲ್ಲಿನ ಅಭಿವೃದ್ಧಿಯ ಬಗ್ಗೆ ಸ್ಪಷ್ಟ ಚಿತ್ರಣವಿದೆ ಎಂದರು.
ಚುನಾವಣಾ ಅಖಾಡಕ್ಕಿಳಿದ ಅಣ್ಣಾಮಲೈ/ ನಾಮಪತ್ರ ಸಲ್ಲಿಕೆ Read More »