ರಾಜಕೀಯ

ಕೇಂದ್ರ ಸರ್ಕಾರದಿಂದ ಹೊಸ ನಿಯಮ| ದೇಶವ್ಯಾಪ್ತಿ ಹಗಲು – ರಾತ್ರಿಗೆ ಬೇರೆ ಬೇರೆ ವಿದ್ಯುತ್ ಬಿಲ್

ಸಮಗ್ರ ನ್ಯೂಸ್: ಇಡೀ ದೇಶದಲ್ಲಿಯೇ ವಿದ್ಯುತ್ ಬಿಲ್ ಇನ್ನು ಮುಂದೆ ಹೆಚ್ಚಾಗುವ ನಿರೀಕ್ಷೆಯಿದೆ. ಕೇಂದ್ರ ಸರ್ಕಾರವು ಶಕ್ತಿ ತೆರಿಗೆಯಲ್ಲಿ ಮಾಡಿದ ಕೆಲವೊಂದು ಪರಿಷ್ಕರಣೆಗಳು ಅದಕ್ಕೆ ಕಾರಣವಾಗಿದೆ. ಪ್ರಮುಖವಾಗಿ ಬೇಸಿಗೆ ಕಾಲದಲ್ಲಿ ನೀವು ಈ ಹಿಂದೆ ಪಡೆಯುತ್ತಿದ್ದ ವಿದ್ಯುತ್ ಬಿಲ್‌ಗಿಂತ ಅಧಿಕ ವಿದ್ಯುತ್ ಬಿಲ್ ಬರುವ ಸಾಧ್ಯತೆ ಇದೆ. ಶಕ್ತಿ ತೆರಿಗೆ ನಿಯಮದಲ್ಲಿ ಕೇಂದ್ರ ಸರ್ಕಾರವು ಇತ್ತೀಚೆಗೆ ಕೆಲವೊಂದು ಬದಲಾವಣೆಗಳನ್ನು ಮಾಡಿದೆ. ಈ ಪರಿಷ್ಕರಣೆಯ ಬಳಿಕ ಬೇಸಿಗೆ ಕಾಲದಲ್ಲಿ ರಾತ್ರಿ ಹೊತ್ತಿನಲ್ಲಿ ಹವಾ ನಿಯಂತ್ರಕ (ಎಸಿ) ಮತ್ತು ಕೂಲರ್‌ಗಳನ್ನು […]

ಕೇಂದ್ರ ಸರ್ಕಾರದಿಂದ ಹೊಸ ನಿಯಮ| ದೇಶವ್ಯಾಪ್ತಿ ಹಗಲು – ರಾತ್ರಿಗೆ ಬೇರೆ ಬೇರೆ ವಿದ್ಯುತ್ ಬಿಲ್ Read More »

ಅಕ್ಕಿ ಬೆಲೆಯೂ ಗಗನಕ್ಕೆ| ಬೆಲೆ ಏರಿಕೆಯಿಂದ ಹೈರಾಣಾದ ಜನಸಾಮಾನ್ಯ

ಸಮಗ್ರ ನ್ಯೂಸ್: ಕಳೆದೊಂದು ತಿಂಗಳಿಂದ ಏರಿಕೆಯಾಗುತ್ತಿರುವ ಅಕ್ಕಿ, ಬೇಳೆಕಾಳುಗಳ ಬೆಲೆಯಿಂದ ಜನಸಾಮಾನ್ಯನ ಬದುಕು ದಿನದಿಂದ ದಿನಕ್ಕೆ ಕಷ್ಟಕರವಾಗುತ್ತಿದೆ. ಖಾದ್ಯ ತೈಲ ಬೆಲೆ ಇಳಿಕೆಯಿಂದ ಕೊಂಚ ನಿಟ್ಟುಸಿರು ಬಿಡುತ್ತಿದ್ದ ಜನರನ್ನು ಈಗ ಅಕ್ಕಿ, ಬೇಳೆಕಾಳುಗಳ ಬೆಲೆ ಏರಿಕೆ ಕಂಗಾಲಾಗುವಂತೆ ಮಾಡಿದೆ. ಬೇಳೆಕಾಳುಗಳ ಬೆಲೆ ಹದಿನೈದು ದಿನಗಳಿಂದ ದಿಢೀರ್‌ ಏರಿದ್ದರೆ, ಅಕ್ಕಿ 2 ರೂ.ನಿಂದ ಆರಂಭವಾಗಿ ಈಗ ಸುಮಾರು 10​​-12 ರು.ವರೆಗೆ ಹೆಚ್ಚಳವಾಗಿದೆ. ಒಂದು ತಿಂಗಳ ಅಂತರದಲ್ಲೇ ಬೇಳೆಕಾಳುಗಳ ಬೆಲೆ 20​-.30 ರವರೆಗೂ ಏರಿಕೆಯಾಗಿದೆ. ಏರಿಕೆಯಾಗುತ್ತಿರುವ ಅಕ್ಕಿ, ಬೇಳೆಕಾಳುಗಳ ಬೆಲೆ

ಅಕ್ಕಿ ಬೆಲೆಯೂ ಗಗನಕ್ಕೆ| ಬೆಲೆ ಏರಿಕೆಯಿಂದ ಹೈರಾಣಾದ ಜನಸಾಮಾನ್ಯ Read More »

ರಾಜೀನಾಮೆ ಬೆನ್ನಲ್ಲೇ ಉಲ್ಟಾ ಹೊಡೆದ ಕಟೀಲ್| ನಾನು ರಾಜೀನಾಮೆ ಕೊಡೋದಾಗಿ ಹೇಳಿಲ್ಲ‌‌ ಎಂದ ಬಿಜೆಪಿ ರಾಜ್ಯಾಧ್ಯಕ್ಷ

ಸಮಗ್ರ ನ್ಯೂಸ್: ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ. ಈ ಕುರಿತಂತೆ ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‌ ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ. ಇಂದು ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಳ್ಳಾರಿಯಲ್ಲಿ ವಿ. ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷೆಯನ್ನು ಪ್ರಕಟಿಸಿದ ಕುರಿತ ಪ್ರಶ್ನೆಗೆ ಉತ್ತರಿಸುವ ವೇಳೆ ಸೋಲಿನ ನೈತಿಕ ಹೊಣೆ ಹೊರುತ್ತೇನೆ. ಸೋಲಿನ ಕಾರಣಗಳ ಕುರಿತಂತೆ ಪಕ್ಷದ ಹಿರಿಯರಿಗೆ ಮಾಹಿತಿ ನೀಡಿದ್ದೇನೆ. 4 ವರ್ಷಗಳಿಂದ ನಾನು ಅಧ್ಯಕ್ಷ

ರಾಜೀನಾಮೆ ಬೆನ್ನಲ್ಲೇ ಉಲ್ಟಾ ಹೊಡೆದ ಕಟೀಲ್| ನಾನು ರಾಜೀನಾಮೆ ಕೊಡೋದಾಗಿ ಹೇಳಿಲ್ಲ‌‌ ಎಂದ ಬಿಜೆಪಿ ರಾಜ್ಯಾಧ್ಯಕ್ಷ Read More »

ಬೆಂಗಳೂರು: ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ರಾಜೀನಾಮೆ

ಸಮಗ್ರ ನ್ಯೂಸ್:ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ರಾಜೀನಾಮೆ ಘೋಷಣೆ ಮಾಡಿದ್ದಾರೆ. ಶನಿವಾರ ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಸೋಲಿನ ಹಿನ್ನೆಲೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.  ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಸೋಲಿನ ನೈತಿಕ ಹೊಣೆ ಹೊತ್ತು ಈಗಾಗಲೇ ನನ್ನ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳೀನ್‌ ಕುಮಾರ್‌ ಕಟೀಲ್‌ ಹೇಳಿದ್ದಾರೆ. ಈಗಾಗಲೇ ನಾನು ಲಿಖಿತ ಹಾಗೂ ಮೌಖಿಕವಾಗಿ ರಾಜೀನಾಮೆ ಸಲ್ಲಿಕೆ ಮಾಡಿದ್ದೇನೆ ಎಂದು ಹೇಳಿದ್ದಾರೆ.

ಬೆಂಗಳೂರು: ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ರಾಜೀನಾಮೆ Read More »

“ಪ್ರತಾಪ್ ಸಿಂಹ ಮುಚ್ಕೊಂಡಿರ್ಬೇಕು, ಮುನಿಸ್ವಾಮಿ ಅಲ್ಲ ಆತ ಮನಿಸ್ವಾಮಿ”| ಪ್ರದೀಪ್ ಈಶ್ವರ್ ಹಿಂಗ್ಯಾಕೆ ಹೇಳಿದ್ರು!?

ಸಮಗ್ರ ನ್ಯೂಸ್: ಅನ್ನ ಭಾಗ್ಯ ಅಕ್ಕಿ ವಿಚಾರವಾಗಿ ಬಿಜೆಪಿ-ಕಾಂಗ್ರೆಸ್​ ನಾಯಕರ ನಡುವೆ ಮಾತಿನ ಸಮರ ಮುಂದುವರಿದಿದೆ. ನಾಯಕರು ಕೌಂಟರ್​​​​-ಪ್ರತಿ ಕೌಂಟರ್​​ ಕೊಡುತ್ತಿದ್ದಾರೆ. ಕೋಲಾರ ಸಂಸದ ಮುನಿಸ್ವಾಮಿ ಮತ್ತು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ನಡುವೆ ವಾಗ್ಯುದ್ದ ನಡೆದಿದೆ. ಪ್ರದೀಪ್ ಈಶ್ವರ್ ವಿರುದ್ಧ ಮಾತನಾಡಿದ್ದ ಬಿಜೆಪಿ ಸಂಸದ ಮುನಿಸ್ವಾಮಿ, ಇಲ್ಲಿ ಯಾರೋ ಒಬ್ಬ ಚಿಕ್ಕಬಳ್ಳಾಪುರಕ್ಕೆ ಬಂದಿದ್ದಾನೆ. ಬೆಳಗ್ಗೆಯಿಂದ ಸಂಜೆವರೆಗೂ ಅಪ್ಪ-ಅಮ್ಮ ಅಂತಿದ್ದಾನೆ. ಈ ಥರದವರನ್ನು ನಾನ್ ನೋಡಿಲ್ಲ, ಅಬ್ಬಬ್ಬಾ ಏನ್ ಡ್ರಾಮಾ. ಮುಂದಿದೆ ಮಾರಿ ಹಬ್ಬ ಎಂದು ಮುನಿಸ್ವಾಮಿ

“ಪ್ರತಾಪ್ ಸಿಂಹ ಮುಚ್ಕೊಂಡಿರ್ಬೇಕು, ಮುನಿಸ್ವಾಮಿ ಅಲ್ಲ ಆತ ಮನಿಸ್ವಾಮಿ”| ಪ್ರದೀಪ್ ಈಶ್ವರ್ ಹಿಂಗ್ಯಾಕೆ ಹೇಳಿದ್ರು!? Read More »

ಪರಿಷತ್ ಸ್ಥಾನಕ್ಕೆ ಶೆಟ್ಟರ್ ಸೇರಿ‌ ಕಾಂಗ್ರೆಸ್ ನ ಮೂವರು ಅವಿರೋಧ ಆಯ್ಕೆ

ಸಮಗ್ರ ನ್ಯೂಸ್: ಮಾಜಿ ಸಿಎಂ ಜಗದೀಶ್‌ ಶೆಟ್ಟರ್, ಸಚಿವ ಬೋಸರಾಜು ಹಾಗೂ ತಿಪ್ಪಣ್ಣ ಕಮಕನೂರು ಅವರು ವಿಧಾನ ಪರಿಷತ್‌ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿಧಾನ ಪರಿಷತ್ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ಕಾಂಗ್ರೆಸ್ ಮೂವರು ಅಭ್ಯರ್ಥಿಗಳಾದ ಜಗದೀಶ್ ಶೆಟ್ಟರ್, ತಿಪ್ಪಣ್ಣ ಕಮಕನೂರು ಹಾಗೂ ಸಚಿವ ಬೋಸರಾಜು ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ವಿಶಾಲಾಕ್ಷಿ ಅವರು ಶುಕ್ರವಾರ ಅಧಿಕೃತವಾಗಿ ಘೋಷಿಸಿದ್ದಾರೆ.

ಪರಿಷತ್ ಸ್ಥಾನಕ್ಕೆ ಶೆಟ್ಟರ್ ಸೇರಿ‌ ಕಾಂಗ್ರೆಸ್ ನ ಮೂವರು ಅವಿರೋಧ ಆಯ್ಕೆ Read More »

ಜಾಗತಿಕ ಪ್ರಭಾವಿ ನಾಯಕರ ಪಟ್ಟಿಯಲ್ಲಿ ಮತ್ತೆ ಮೋದಿಯೇ ನಂ.1

ಸಮಗ್ರ ನ್ಯೂಸ್: ಜಾಗತಿಕ ಜನಪ್ರಿಯ ನಾಯಕರಲ್ಲಿ ಪ್ರಧಾನಿ ನರೇಂದ್ರ ಮೋದಿಯವರು‌ ಮತ್ತೊಮ್ಮೆ ಮೊದಲ ಸ್ಥಾವವನ್ನು ಗಿಟ್ಟಿಸಿಕೊಂಡು, ಮುನ್ನಡೆದಿದ್ದಾರೆ. ಈ ಮೂಲಕ ಪ್ರಧಾನಿ ಮೋದಿಯವರು ಮತ್ತೆ ವಿಶ್ವದ ನಂ.1 ಜನಪ್ರಿಯ ನಾಯಕರ ಪಟ್ಟಿಯಲ್ಲೇ ಮುಂದುವರೆದಿದ್ದಾರೆ. ಈ ಬಗ್ಗೆ ಮಾರ್ನಿಂಗ್ ಕನ್ಸಲ್ಟ್ ಎನ್ನುವಂತ ಸಂಸ್ಥೆಯೊಂದು ಸಮೀಕ್ಷೆ ನಡೆಸಿದೆ. ತನ್ನ ವರದಿಯನ್ನು ಬಿಡುಗಡೆ ಮಾಡಿದ್ದು, ಈ ಬಾರಿ ಶೇ.76ರಷ್ಟು ಅನುಮೋದನೆಯ ರೇಟಿಂಗ್ ಪಡೆದಿರುವಂತ ಪ್ರಧಾನಿ ಮೋದಿಯವರು ನಂ.1 ಜನಪ್ರಿಯ ಜಾಗತಿಕ ನಾಯಕರಾಗಿ ಮತ್ತೊಮ್ಮೆ ಮೊದಲ ಸ್ಥಾನವನ್ನು ಗಳಿಸಿಕೊಂಡಿದ್ದಾರೆ. ಅಂದಹಾಗೇ ಅಮೇರಿಕಾ ಮೂಲಕ

ಜಾಗತಿಕ ಪ್ರಭಾವಿ ನಾಯಕರ ಪಟ್ಟಿಯಲ್ಲಿ ಮತ್ತೆ ಮೋದಿಯೇ ನಂ.1 Read More »

ಗೃಹಜ್ಯೋತಿ ಸರ್ವರ್ ಸಮಸ್ಯೆ ಕ್ಲಿಯರ್| ಇಂದಿನಿಂದ 2 ಸಾವಿರ ಕೇಂದ್ರಗಳಲ್ಲಿ ನೋಂದಣಿ

ಸಮಗ್ರ ನ್ಯೂಸ್: ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸುವವರಿಗೆ ರಾಜ್ಯ ಸರ್ಕಾರ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಇಂದಿನಿಂದ ರಾಜ್ಯಾದ್ಯಂತ 2,000 ಕೇಂದ್ರಗಳಲ್ಲಿ ನೋಂದಣಿಗೆ ವ್ಯವಸ್ಥೆ ಮಾಡಲಾಗಿದೆ. ಗೃಹಜ್ಯೋತಿ ಯೋಜನೆಗೆ ನೋಂದಾಯಿಸಲು ಸೇವಾಸಿಂಧು ವೆಬ್ ಸೈಟ್ ನಲ್ಲಿ ಸಮಸ್ಯೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ 2,000 ಕೇಂದ್ರಗಳಲ್ಲಿ ನೋಂದಣಿಗೆ ವ್ಯವಸ್ಥೆ ಮಾಡಲಾಗಿದೆ. ಕರ್ನಾಟಕ ಒನ್, ಗ್ರಾಮ ಒನ್, ವಿದ್ಯುತ್ ಚ್ಛಕ್ತ ಕಚೇರಿಗಳು, ಗ್ರಾಮಪಂಚಾಯಿತಿಗಳು ಹಾಗೂ ನಾಡಕಚೇರಿಗಳಲ್ಲಿ ನೋಂದಣಿ ಮಾಡಲಾಗುವುದು. ಈ ಕೇಂದ್ರಗಳಲ್ಲಿ

ಗೃಹಜ್ಯೋತಿ ಸರ್ವರ್ ಸಮಸ್ಯೆ ಕ್ಲಿಯರ್| ಇಂದಿನಿಂದ 2 ಸಾವಿರ ಕೇಂದ್ರಗಳಲ್ಲಿ ನೋಂದಣಿ Read More »

ವಿಧಾನ ಪರಿಷತ್ ಚುನಾವಣೆ| ಕಾಂಗ್ರೆಸ್ ನಿಂದ ಶೆಟ್ಟರ್ ಸೇರಿ ಮೂರು ಮಂದಿಗೆ ಟಿಕೆಟ್

ಸಮಗ್ರ ನ್ಯೂಸ್: ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡು ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಈ ಚುನಾವಣೆಯಲ್ಲಿ ಪರಾಭವಗೊಂಡರೂ ಸಹ ಜೂನ್ 30 ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಪಡೆದುಕೊಂಡಿದ್ದಾರೆ. ಜೂನ್ 30ರಂದು ವಿಧಾನ ಪರಿಷತ್ತಿನ ಮೂರು ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ಜಗದೀಶ್ ಶೆಟ್ಟರ್, ತಿಪ್ಪಣ್ಣಪ್ಪ ಕಮಕನೂರು ಹಾಗೂ ಎನ್ ಎಸ್ ಬೋಸರಾಜು ಅವಕಾಶ ಪಡೆದುಕೊಂಡಿದ್ದಾರೆ. ಸಂಖ್ಯಾಬಲದ ಆಧಾರದಲ್ಲಿ ಈ ಮೂರೂ ಸ್ಥಾನಗಳನ್ನು ಕಾಂಗ್ರೆಸ್

ವಿಧಾನ ಪರಿಷತ್ ಚುನಾವಣೆ| ಕಾಂಗ್ರೆಸ್ ನಿಂದ ಶೆಟ್ಟರ್ ಸೇರಿ ಮೂರು ಮಂದಿಗೆ ಟಿಕೆಟ್ Read More »

Free bus service| ಉಚಿತ ಪ್ರಯಾಣದ ಎಫೆಕ್ಟ್| ಧರ್ಮಸ್ಥಳ, ಕುಕ್ಕೆಯಲ್ಲಿ ಮಹಿಳೆಯರದ್ದೇ ಹವಾ| ಕರಾವಳಿಯ ಯಾತ್ರಾಕ್ಷೇತ್ರಗಳಲ್ಲಿ ಜನವೋ ಜನ

ಸಮಗ್ರ ನ್ಯೂಸ್: ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯದ ಪರಿಣಾಮ ರಾಜ್ಯ ಪ್ರಮುಖ ಧಾರ್ಮಿಕ ಕ್ಷೇತ್ರಗಳಿಗೆ ಮಹಿಳೆಯರು ಲಗ್ಗೆ ಇಡುತ್ತಿದ್ದಾರೆ.ವಾರಂತ್ಯದ ಹಿನ್ನೆಲೆಯಲ್ಲಿ ಶನಿವಾರ ಧರ್ಮಸ್ಥಳ ಕ್ಷೇತ್ರಕ್ಕೆ ಸಾವಿರಾರು ಮಹಿಳೆಯರು ಆಗಮಿಸಿದ್ದರು. ಅಲ್ಲಿಂದ ಅವರೆಲ್ಲಾ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಪ್ರಯಾಣಿಸಲು ಮುಂದಾಗಿದ್ದರಿಂದ ಸಾರಿಗೆ ಇಲಾಖೆ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಿದೆ. ಬೆಂಗಳೂರು, ಮೈಸೂರು, ಕೋಲಾರ, ತುಮಕೂರು ಭಾಗ ಹಾಗೂ ಉತ್ತರ ಕರ್ನಾಟಕದ ಜಿಲ್ಲೆಗಳಿಂದ ಹೆಚ್ಚಿನ ಭಕ್ತರು ಕುಟುಂಬ ಸಮೇತ ಹಾಗೂ ಸ್ನೇಹಿತರ ಬಳಗ ಕಟ್ಟಿಕೊಂಡು ಸಾಗರೋಪಾದಿಯಲ್ಲಿ ಮಹಿಳೆಯರು

Free bus service| ಉಚಿತ ಪ್ರಯಾಣದ ಎಫೆಕ್ಟ್| ಧರ್ಮಸ್ಥಳ, ಕುಕ್ಕೆಯಲ್ಲಿ ಮಹಿಳೆಯರದ್ದೇ ಹವಾ| ಕರಾವಳಿಯ ಯಾತ್ರಾಕ್ಷೇತ್ರಗಳಲ್ಲಿ ಜನವೋ ಜನ Read More »