ರಾಜಕೀಯ

ಪರಾಜಿತ ಅಭ್ಯರ್ಥಿ ಜಿ ಕೃಷ್ಣಪ್ಪ ರವರು ಸುಳ್ಯದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಸವಾರಿ ಮಾಡಲು ಬಂದರೆ ಸಹಿಸಲ್ಲ : ಸತ್ಯಕುಮಾರ್ ಆಡಿಂಜ

ಸಮಗ್ರ ನ್ಯೂಸ್: ಸುಳ್ಯ ಕ್ಷೇತ್ರದಲ್ಲಿ ಟಿಕೆಟ್ ಗೆ ಪಟ್ಟು ಹಿಡಿದು, ಪ್ರಭಾವ ಬಳಸಿ ಅಭ್ಯರ್ಥಿಯಾಗಿ ಕಾರ್ಯಕರ್ತರ, ಜನಾಭಿಪ್ರಾಯವಿಲ್ಲದೆ ಅಭ್ಯರ್ಥಿಯಾಗಿ ಸ್ಪರ್ಧಿಸಿ ಹೀನಾಯವಾಗಿ ಸೋಲನುಭವಿಸಿದ ಕೃಷ್ಣಪ್ಪರವರು ಸುಳ್ಯದ ಕಾಂಗ್ರೆಸ್ ಪಕ್ಷದಲ್ಲಿ ಪ್ರಾಮಾಣಿಕವಾಗಿ ದುಡಿಯುತ್ತಿರುವ ಕಾರ್ಯಕರ್ತರ ಮೇಲೆ ಆರೋಪ ಹೊರಿಸಿ ಕಿರುಕುಳ ನೀಡುತ್ತಿರುವ ಕೃಷ್ಣಪ್ಪರವರು ಮೊದಲು ತಮ್ಮನ್ನು ತಾವು ಅವಲೋಕನ ಮಾಡಿಕೊಳ್ಳಬೇಕು. ಒಬ್ಬ ಅಭ್ಯರ್ಥಿ ಗೆದ್ದರೂ ಸೋತರೂ ಪಕ್ಷದಲ್ಲಿ ಹೇಗಿರಬೇಕು? ಹೇಗೆ ತಪ್ಪನ್ನು ಸರಿಪಡಿಸಿಕೊಂಡು ಪಕ್ಷ ಸಂಘಟನೆ ಮಾಡಬೇಕೆಂದು ತಿಳಿದು ಕೊಳ್ಳಬೇಕು.ಆದರೆ ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿರುವ ಕಾರ್ಯಕರ್ತರನ್ನು ಉಚ್ಚಾಟಿಸಲು […]

ಪರಾಜಿತ ಅಭ್ಯರ್ಥಿ ಜಿ ಕೃಷ್ಣಪ್ಪ ರವರು ಸುಳ್ಯದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಸವಾರಿ ಮಾಡಲು ಬಂದರೆ ಸಹಿಸಲ್ಲ : ಸತ್ಯಕುಮಾರ್ ಆಡಿಂಜ Read More »

ನಾಳೆಯಿಂದ `ಗೃಹಜ್ಯೋತಿ’ ಯೋಜನೆಗೆ ನೋಂದಣಿ ಶುರು : ಗೊಂದಲದಲ್ಲಿರುವ ಗ್ರಾಹಕರಿಗೆ ಸರ್ಕಾರದ ಸ್ಪಷ್ಟೀಕರಣ!

ಸಮಗ್ರ ನ್ಯೂಸ್: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹ ಜ್ಯೋತಿ ಯೋಜನೆಯ ಅನ್ವಯ ಅಪಾರ್ಮೆಂಟ್ ನಿವಾಸಿಗಳಿಗೆ 200 ಯೂನಿಟ್ ಉಚಿತ ವಿದ್ಯುತ್ ಸೌಲಭ್ಯ ಸಿಗುತ್ತದೆಯೋ ಇಲ್ಲವೋ ಎಂಬ ಗೊಂದಲವಿತ್ತು. ಅಲ್ಲದೇ ಇನ್ನೂ ಅನೇಕ ಗೊಂದಲಗಳು ವಿದ್ಯುತ್ ಬಳಕೆ ಗ್ರಾಹಕರಲ್ಲಿ ಇದ್ದವು. ಆ ಗೊಂದಲಗಳಿಗೆ ರಾಜ್ಯ ಸರ್ಕಾರ ಸ್ಪಷ್ಠೀಕರಣ ನೀಡಿದೆ. ಅದೇನು ಎನ್ನುವ ಬಗ್ಗೆ ಮುಂದೆ ಓದಿ. ಈ ಕುರಿತಂತೆ ಸ್ಪಷ್ಠೀಕರಣದ ನಡವಳಿಗಳನ್ನು ರಾಜ್ಯ ಸರ್ಕಾರ ಹೊರಡಿಸಿದೆ. ಗೃಹ ಜ್ಯೋತಿ ಯೋಜನೆಯಡಿ ಪ್ರತಿ ಮನೆಗೆ ಉಚಿತ ವಿದ್ಯುತ್ ಸೌಕರ್ಯ ಒದಗಿಸುವ

ನಾಳೆಯಿಂದ `ಗೃಹಜ್ಯೋತಿ’ ಯೋಜನೆಗೆ ನೋಂದಣಿ ಶುರು : ಗೊಂದಲದಲ್ಲಿರುವ ಗ್ರಾಹಕರಿಗೆ ಸರ್ಕಾರದ ಸ್ಪಷ್ಟೀಕರಣ! Read More »

`ಗ್ಯಾರಂಟಿ’ಗಳಿಗೆ ಅರ್ಜಿ ಸಲ್ಲಿಸುವ ಮುನ್ನಾ ಎಚ್ಚರ : ಅಪ್ಪಿ ತಪ್ಪಿ ಈ ಲಿಂಕ್ ಕ್ಲಿಕ್ ಮಾಡಿದ್ರೆ ನಿಮ್ಮ ಬ್ಯಾಂಕ್ ಖಾತೆಯೇ ಖಾಲಿ!

ಸಮಗ್ರ ನ್ಯೂಸ್: ರಾಜ್ಯ ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಿಗೆ ಅರ್ಜಿ ಸಲ್ಲಿಸುವ ಮುನ್ನಾ ಎಚ್ಚರವಾಗಿರಿ, ಗ್ಯಾರಂಟಿಗೆ ಅರ್ಜಿ ಸಲ್ಲಿಸುವವರ ಮಾಹಿತಿ ಕದಿಯಲು ಸೈಬರ್ ಕದೀಮರು ಕಾಯುತ್ತಿದ್ದಾರೆ ಎಂದು ಸೈಬರ್ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಕರ್ನಾಟಕ ಸರ್ಕಾರವು ಗೃಹಜ್ಯೋತಿ, ಗೃಹಲಕ್ಷ್ಮೀ, ಯುವನಿಧಿ, ಶಕ್ತಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಈ ಯೋಜನೆಗೆ ಅರ್ಜಿ ಸಲ್ಲಿಕೆಗೆ ಸೇವಾಸಿಂಧು ಪೋರ್ಟಲ್ ಇದೆ. ಆದರೆ ಇದನ್ನೇ ಬಂಡವಾಳ ಮಾಡಿಕೊಂಡಿರುವ ಸೈಬರ್ ಕಳ್ಳರು, ಈಗ ಸಾಮಾಜಿಕ ಜಾಲತಾಣದಲ್ಲಿ ನಕಲಿ ಲಿಂಕ್‌ಗಳನ್ನು ಹರಿಯಬಿಡುತ್ತಿದ್ದಾರೆ. ಹೌದು,

`ಗ್ಯಾರಂಟಿ’ಗಳಿಗೆ ಅರ್ಜಿ ಸಲ್ಲಿಸುವ ಮುನ್ನಾ ಎಚ್ಚರ : ಅಪ್ಪಿ ತಪ್ಪಿ ಈ ಲಿಂಕ್ ಕ್ಲಿಕ್ ಮಾಡಿದ್ರೆ ನಿಮ್ಮ ಬ್ಯಾಂಕ್ ಖಾತೆಯೇ ಖಾಲಿ! Read More »

ಕೃಷ್ಣಪ್ಪರವರು ಕಾರ್ಯಕರ್ತರನ್ನು ಬೆದರಿಸಿ ಪಕ್ಷ ಒಡೆಯುವ ಯತ್ನ ಮಾಡುತ್ತಿದ್ದಾರೆ,ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿರಬೇಕು: ಭವಾನಿಶಂಕರ್ ಕಲ್ಮಡ್ಕ

ಸಮಗ್ರ ನ್ಯೂಸ್:‌ ಸುಳ್ಯದ ಪರಾಜಿತ ಅಭ್ಯರ್ಥಿ ಜಿಗಣಿ ಕೃಷ್ಣಪ್ಪರವರು ಸೋಲಿನ ಹೊಣೆಯನ್ನು ಕಾರ್ಯಕರ್ತರ ಮೇಲೆ ಹೇರಲು ಯತ್ನಿಸುತ್ತಿದ್ದಾರೆ. ಟಿಕೆಟ್ ಆಕಾಂಕ್ಷಿ ಯಾಗಿದ್ದ ನಂದಕುಮಾರ್ ರವರೊಂದಿಗೆ ಗುರುತಿಸಿಕೊಂಡವರ ನಾಯಕರ, ಕಾರ್ಯಕರ್ತರ ಮೇಲೆ ದ್ವೇಷ ಸಾಧಿಸಲು ಹೊರಟಿದ್ದು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಮುಖಾಂತರ ಅಮಾನತು ಆದೇಶ ಹೊರಡಿಸಿ ಕಾರ್ಯಕರ್ತರು ಮತ್ತು ನಾಯಕರ ಮೇಲೆ ಸೇಡು ತೀರಿಸಲು ಮುಂದಾಗಿದ್ದಾರೆ. ಅಲ್ಲದೆ ಇದೀಗ ಪೊಲೀಸ್ ದೂರಿನ ಮುಖಾಂತರ ನಮ್ಮ ವರ್ಚಸ್ಸು ಕುಗ್ಗಿಸುವ ತಂತ್ರ ಮಾಡುತ್ತಿದ್ದಾರೆ. ಜಿಗಣಿಯಿಂದ ಬಂದು ಇಲ್ಲಿಯ ಕಾರ್ಯಕರ್ತರ ಮೇಲೆ ಸವಾರಿ

ಕೃಷ್ಣಪ್ಪರವರು ಕಾರ್ಯಕರ್ತರನ್ನು ಬೆದರಿಸಿ ಪಕ್ಷ ಒಡೆಯುವ ಯತ್ನ ಮಾಡುತ್ತಿದ್ದಾರೆ,ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿರಬೇಕು: ಭವಾನಿಶಂಕರ್ ಕಲ್ಮಡ್ಕ Read More »

ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಕೇಸು ದಾಖಲು| ಶೀಘ್ರವೇ ಜಿಲ್ಲಾ ಕಾಂಗ್ರೆಸ್ ಮಧ್ಯಪ್ರವೇಶ ಮಾಡಿ ಅನಾಪೇಕ್ಷಿತ ವಿದ್ಯಾಮಾನಗಳನ್ನು ಸರಿಪಡಿಸಲು ಎಂ ವೆಂಕಪ್ಪ ಗೌಡ ಆಗ್ರಹ

ಸಮಗ್ರ ನ್ಯೂಸ್: ಚುನಾವಣೆಯಲ್ಲಿ ಸ್ಪರ್ಧಿಸಿರತಕ್ಕಂತಹವರು ಮತ್ತು ರಾಜಕಾರಣದಲ್ಲಿ ತೊಡಗಿಸಿಕೊಂಡವರು ಒಂದು ವೇಳೆ ಅವರು ಚುನಾವಣೆಗೆ ನಿಂತಾಗ ಆಗಿರತಕ್ಕಂತಹ ತಪ್ಪನ್ನು ಸರಿಪಡಿಸಿಕೊಂಡು ಮುಂದೆ ಅಂತಹ ತಪ್ಪುಗಳು ಆಗಬಾರದೆಂದು ಕಾರ್ಯಕರ್ತರ ಬೆನ್ನು ತಟ್ಟಿ ಪಕ್ಷವನ್ನು ಬೆಳೆಸುವುದು ಒಬ್ಬ ಬುದ್ದಿವಂತ ರಾಜಕಾರಣಿಯ ಲಕ್ಷಣ. ಆದರೆ ಅದಕ್ಕೆ ವ್ಯತಿರಿಕ್ತವಾಗಿ ನಡೆದುಕೊಂಡು ಪಕ್ಷದ ಒಳಗೆ ತೀರ್ಮಾನಮಾಡಬೇಕಾದ ಸಂಗತಿಗಳನ್ನು ಬೀದಿಗೆ ತಂದು ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರ ಮೇಲೆಯೇ ದ್ವೇಷ ಮತ್ತು ಅಸೂಯೆಯಿಂದ ಪೊಲೀಸ್ ಠಾಣೆ ಮತ್ತು ನ್ಯಾಯಾಲಯಗಳಲ್ಲಿ ದೂರು, ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಿ ಅವರ ಮೇಲೆ

ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಕೇಸು ದಾಖಲು| ಶೀಘ್ರವೇ ಜಿಲ್ಲಾ ಕಾಂಗ್ರೆಸ್ ಮಧ್ಯಪ್ರವೇಶ ಮಾಡಿ ಅನಾಪೇಕ್ಷಿತ ವಿದ್ಯಾಮಾನಗಳನ್ನು ಸರಿಪಡಿಸಲು ಎಂ ವೆಂಕಪ್ಪ ಗೌಡ ಆಗ್ರಹ Read More »

ರಾಜ್ಯದ ಜನತೆಗೆ ಗುಡ್ ನ್ಯೂಸ್| ಅನ್ನಭಾಗ್ಯದಲ್ಲಿ 8 ಕೆಜಿ ಅಕ್ಕಿ, 2 ಕೆಜಿ ಧಾನ್ಯ ವಿತರಣೆಗೆ ಚಿಂತನೆ

ಸಮಗ್ರ ನ್ಯೂಸ್: ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಪಡಿತರ ಚೀಟಿದಾರರಿಗೆ 8 ಕೆಜಿ ಅಕ್ಕಿ ಜತೆಗೆ ಎರಡು ಕೆಜಿ ರಾಗಿ ಅಥವಾ ಜೋಳ ವಿತರಿಸುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದ್ದಾರೆ. 8 ಕೆಜಿ ಅಕ್ಕಿ ಜತೆಗೆ ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ ಎರಡು ಕೆಜಿ ರಾಗಿ, ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಎರಡು ಕೆಜಿ ಜೋಳ ವಿತರಿಸುವ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ. ಯಾವುದೇ ಅಡಚಣೆ ಎದುರಾದರೂ ಅನ್ನಭಾಗ್ಯ ಯೋಜನೆ ಜಾರಿಗೆ ಬರುವುದನ್ನು ತಡೆಯಲು ಸಾಧ್ಯವಿಲ್ಲ.

ರಾಜ್ಯದ ಜನತೆಗೆ ಗುಡ್ ನ್ಯೂಸ್| ಅನ್ನಭಾಗ್ಯದಲ್ಲಿ 8 ಕೆಜಿ ಅಕ್ಕಿ, 2 ಕೆಜಿ ಧಾನ್ಯ ವಿತರಣೆಗೆ ಚಿಂತನೆ Read More »

ಬಿಜೆಪಿ ರಾಜ್ಯಾಧ್ಯಕ್ಷರ ಮನೆಯಲ್ಲಿ ರಹಸ್ಯ ಹೋಮ-ಹವನ: ಸ್ಪಷ್ಟನೆ ನೀಡಿದ ನಳಿನ್ ಕುಮಾರ್ ಕಟೀಲ್

ಸಮಗ್ರ ನ್ಯೂಸ್: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮನೆಯಲ್ಲಿ ರಹಸ್ಯ ಹೋಮ-ಹವನ ನಡೆಯುತ್ತಿದೆ ಎನ್ನುವ ಸುದ್ಧಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ಸ್ವತಹ ನಳಿನ್ ಕುಮಾರ್ ಕಟೀಲ್ ಅವರೆ ಸ್ಪಷ್ಟನೆ ನೀಡಿದ್ದಾರೆ. ಹೋಮ-ಹವನ ಕುಂಜಾಡಿ ತರವಾಡು ಮನೆಯಲ್ಲಿ ನಡೆಯುತ್ತಿದ್ದು, ಪ್ರತೀ ವರ್ಷವೂ ಈ ಹೋಮ ಹಾಗು ಪೂಜೆಗಳು ನಡೆಯುತ್ತಿದೆ. ಯಾರು ಬೇಕಾದರೂ ಈ ಹೋಮ-ಹವನದಲ್ಲಿ ಭಾಗವಹಿಸಲು ಅವಕಾಶವಿದ್ದು, ರಹಸ್ಯವಾಗಿ ಮಾಡಲಾಗುತ್ತಿದೆ ಎನ್ನುವುದು ಸುಳ್ಳು ಸುದ್ಧಿ ಎಂದು ಅವರು ಮಾಧ್ಯಮ ಪ್ರತಿನಿಧಿಗಳಿಗೆ ಸ್ಪಷ್ಟಪಡಿಸಿದ್ದಾರೆ. ರಾಜಕೀಯದಲ್ಲಿ ಮೂಲೆಗುಂಪಾಗುತ್ತಿರುವ

ಬಿಜೆಪಿ ರಾಜ್ಯಾಧ್ಯಕ್ಷರ ಮನೆಯಲ್ಲಿ ರಹಸ್ಯ ಹೋಮ-ಹವನ: ಸ್ಪಷ್ಟನೆ ನೀಡಿದ ನಳಿನ್ ಕುಮಾರ್ ಕಟೀಲ್ Read More »

ಸುಳ್ಯ: ಬಿಜೆಪಿಯ ಹಿರಿಯ ಕಾರ್ಯಕರ್ತರ ಜೊತೆ ಸಂವಾದ ಕಾರ್ಯಕ್ರಮ

ಸಮಗ್ರ ನ್ಯೂಸ್: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ 9 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಸುಳ್ಯ ಮಂಡಲ ಮಟ್ಟದ ಹಿರಿಯ ಕಾರ್ಯಕರ್ತರೊಡನೆ ಸಂವಾದ ಕಾರ್ಯಕ್ರಮ ಜೂ.16 ರಂದು ಜೆ ಡಿ ಆಡಿಟೋರಿಯಂ ಪೆರುವಾಜೆಯಲ್ಲಿ ನಡೆಯಿತು. ಈ ಸಂವಾದ ಕಾರ್ಯಕ್ರಮವನ್ನು ರಾಜ್ಯ ಬಿಜೆಪಿ ವಕ್ತಾರ,ವಿಧಾನ ಪರಿಷತ್ ನ ಮಾಜಿ ಸದಸ್ಯರಾದ ಸನ್ಮಾನ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ರವರು ನೆರವೇರಿಸಿದರು, ಈ ಕಾರ್ಯಕ್ರಮದಲ್ಲಿ ನಮ್ಮ ಸುಳ್ಯ ಮಂಡಲದ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ ಆಧ್ಯಕ್ಷತೆಯನ್ನು ವಹಿಸಿದ್ದರು. ಮಂಡಲ ಪ್ರಮುಖರಾದ ಎ.ವಿ ತೀರ್ಥರಾಮ

ಸುಳ್ಯ: ಬಿಜೆಪಿಯ ಹಿರಿಯ ಕಾರ್ಯಕರ್ತರ ಜೊತೆ ಸಂವಾದ ಕಾರ್ಯಕ್ರಮ Read More »

ಹೀಗೂ ಕರೆಂಟ್ ಬಿಲ್ ನೀಡೋದಾ!?| ಮೆಸ್ಕಾಂ ಸಿಬ್ಬಂದಿ ಎಡವಟ್ಟಿನಿಂದ ಗ್ರಾಹಕ ಕಂಗಾಲು

ಸಮಗ್ರ ನ್ಯೂಸ್: ಮೀಟರ್​ ರೀಡರ್​ ಮಾಡಿದ ತಪ್ಪು ಗ್ರಹಿಕೆಯಿಂದಾಗಿ ವ್ಯಕ್ತಿಯೊಬ್ಬರಿಗೆ 7 ಲಕ್ಷ ರೂ. ಕರೆಂಟ್​ ಬಿಲ್​ ಅನ್ನು ನೀಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಸದಾಶಿವ ಆಚಾರ್ಯ ಅವರಿಗೆ 7.71 ಲಕ್ಷ ರೂ.ಮೌಲ್ಯದ ಕರೆಂಟ್​ ಬಿಲ್​ ನೀಡುವ ಮೂಲಕ ಮೆಸ್ಕಾಂ ಮೀಟರ್ ರೀಡರ್​ ಶಾಕ್​ ಕೊಟ್ಟಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಸದಾಶಿವ ಆಚಾರ್ಯ ತಿಂಗಳಿಗೆ ನಮ್ಮ ಮನೆಯ ಕರೆಂಟ್​ ಬಿಲ್​ ಸರಾಸರಿ ಮೂರು ಸಾವಿರ ರೂಪಾಯಿ ಬರುತ್ತಿತ್ತು. ಪ್ರತಿ ತಿಂಗಳು

ಹೀಗೂ ಕರೆಂಟ್ ಬಿಲ್ ನೀಡೋದಾ!?| ಮೆಸ್ಕಾಂ ಸಿಬ್ಬಂದಿ ಎಡವಟ್ಟಿನಿಂದ ಗ್ರಾಹಕ ಕಂಗಾಲು Read More »

ಕರ್ನಾಟಕದಲ್ಲಿ ಮತಾಂತರ ನಿಷೇಧ ಕಾಯ್ದೆ ರದ್ದು| ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಹಿಂದಿನ ಬಿಜೆಪಿ ಸರ್ಕಾರ ಪರಿಚಯಿಸಿದ ಮತಾಂತರ ವಿರೋಧಿ ಕಾನೂನನ್ನು ರದ್ದುಗೊಳಿಸಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ. ಇನ್ನು ಪಠ್ಯ ಪರಿಷ್ಕರಣೆಯ ಅಂತಿಮ ವರದಿ ಸಿದ್ಧವಾಗಿದ್ದು, ಆರ್‌ಎಸ್‌ಎಸ್ ಸಂಸ್ಥಾಪಕ ಕೆ.ಬಿ.ಹೆಡ್ಗೆವಾರ್ ಮತ್ತು ಇತರರ ಶಾಲಾ ಪಠ್ಯಪುಸ್ತಕ ಪಾಠಗಳನ್ನ ತೆಗೆದುಹಾಕಲು ಕ್ಯಾಬಿನೆಟ್ ನಿರ್ಧರಿಸಿದೆ. ಇನ್ನೊಂದು ಮಹತ್ವದ ನಿರ್ಧಾರ ಎನ್ನುವಂತೆ, ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಸಂವಿಧಾನದ ಪೀಠಿಕೆಯನ್ನು ಓದುವುದನ್ನು ಕಡ್ಡಾಯಗೊಳಿಸಲು ಸರ್ಕಾರ ನಿರ್ಧರಿಸಿದೆ.

ಕರ್ನಾಟಕದಲ್ಲಿ ಮತಾಂತರ ನಿಷೇಧ ಕಾಯ್ದೆ ರದ್ದು| ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ Read More »