ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಕೇಸು ದಾಖಲು| ಶೀಘ್ರವೇ ಜಿಲ್ಲಾ ಕಾಂಗ್ರೆಸ್ ಮಧ್ಯಪ್ರವೇಶ ಮಾಡಿ ಅನಾಪೇಕ್ಷಿತ ವಿದ್ಯಾಮಾನಗಳನ್ನು ಸರಿಪಡಿಸಲು ಎಂ ವೆಂಕಪ್ಪ ಗೌಡ ಆಗ್ರಹ
ಸಮಗ್ರ ನ್ಯೂಸ್: ಚುನಾವಣೆಯಲ್ಲಿ ಸ್ಪರ್ಧಿಸಿರತಕ್ಕಂತಹವರು ಮತ್ತು ರಾಜಕಾರಣದಲ್ಲಿ ತೊಡಗಿಸಿಕೊಂಡವರು ಒಂದು ವೇಳೆ ಅವರು ಚುನಾವಣೆಗೆ ನಿಂತಾಗ ಆಗಿರತಕ್ಕಂತಹ ತಪ್ಪನ್ನು ಸರಿಪಡಿಸಿಕೊಂಡು ಮುಂದೆ ಅಂತಹ ತಪ್ಪುಗಳು ಆಗಬಾರದೆಂದು ಕಾರ್ಯಕರ್ತರ ಬೆನ್ನು ತಟ್ಟಿ ಪಕ್ಷವನ್ನು ಬೆಳೆಸುವುದು ಒಬ್ಬ ಬುದ್ದಿವಂತ ರಾಜಕಾರಣಿಯ ಲಕ್ಷಣ. ಆದರೆ ಅದಕ್ಕೆ ವ್ಯತಿರಿಕ್ತವಾಗಿ ನಡೆದುಕೊಂಡು ಪಕ್ಷದ ಒಳಗೆ ತೀರ್ಮಾನಮಾಡಬೇಕಾದ ಸಂಗತಿಗಳನ್ನು ಬೀದಿಗೆ ತಂದು ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರ ಮೇಲೆಯೇ ದ್ವೇಷ ಮತ್ತು ಅಸೂಯೆಯಿಂದ ಪೊಲೀಸ್ ಠಾಣೆ ಮತ್ತು ನ್ಯಾಯಾಲಯಗಳಲ್ಲಿ ದೂರು, ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಿ ಅವರ ಮೇಲೆ […]










