ರಾಜಕೀಯ

ಬೆಳ್ತಂಗಡಿ ಶಾಸಕ‌ ಹರೀಶ್ ಪೂಂಜಾ ಹೆಸರಲ್ಲಿ ನಕಲಿ ಪೋಸ್ಟರ್ ಹಂಚಿಕೆ| ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸಂದೇಶದ ವಿರುದ್ದ ದೂರು

ಸಮಗ್ರ ನ್ಯೂಸ್: ಶಾಸಕ ಹರೀಶ್ ಪೂಂಜರವರ ಹೆಸರಿನಲ್ಲಿ ನಕಲಿ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತಿದ್ದು, ಈ ಬಗ್ಗೆ ಸಂದೇಶ ಸೃಷ್ಟಿ ಮಾಡಿದ ಮತ್ತು ಅದನ್ನು ಜಾಲತಾಣಗಳಲ್ಲಿ ಶೇರ್ ಮಾಡಿದ ವ್ಯಕ್ತಿಗಳ ವಿರುದ್ಧ ಮೇ 22 ರಂದು ಬೆಳ್ತಂಗಡಿ ನಗರ ಠಾಣೆಯಲ್ಲಿ ಬಿಜೆಪಿ ಕಾರ್ಯಕರ್ತರು ದೂರು ದಾಖಲಿಸಿದರು. ಈ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಪದಾಧಿಕಾರಿಗಳು, ತಾಲೂಕು ಯುವಮೋರ್ಚಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ದೂರು ಸ್ವೀಕರಿಸಿದ ಬೆಳ್ತಂಗಡಿ ಠಾಣಾ ಪೊಲೀಸರು ಕಾನೂನು ಕ್ರಮದ ಭರವಸೆ ನೀಡಿದ್ದಾರೆ.

ಬೆಳ್ತಂಗಡಿ ಶಾಸಕ‌ ಹರೀಶ್ ಪೂಂಜಾ ಹೆಸರಲ್ಲಿ ನಕಲಿ ಪೋಸ್ಟರ್ ಹಂಚಿಕೆ| ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸಂದೇಶದ ವಿರುದ್ದ ದೂರು Read More »

ರಾ.ಸ್ವ.ಸೇ ಸಂಘದ ಹಿರಿಯ ಕೊಂಡಿ ಕೊಡ್ಮಾಣ್ ಕಾಂತಪ್ಪ ಶೆಟ್ಟಿ ಇನ್ನಿಲ್ಲ

ಸಮಗ್ರ ನ್ಯೂಸ್: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪುತ್ತೂರು ಜಿಲ್ಲಾ ಸಂಘ ಚಾಲಕ, ಸಾಮಾಜಿಕ, ಧಾರ್ಮಿಕ,ಸಹಕಾರಿ ನೇತಾರ ಕೊಡ್ಮಾಣ್ ಕಾಂತಪ್ಪ ಶೆಟ್ಟಿ ( 61)ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ. ಸದಾ ನಗುಮುಖ ಗಂಭೀರ ವ್ಯಕ್ತಿತ್ವ, ನೇರ ನಡೆ ನುಡಿಯವರಾಗಿದ್ದ ಕಾಂತಪ್ಪ ಶೆಟ್ಟಿಯವರು ಹೃದಯ ವೈಶಾಲ್ಯತೆಯುಳ್ಳವರಾಗಿದ್ದರು. ಕೆಲ ಸಮಯಗಳಿಂದ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು,ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸೋಮವಾರ ಮಧ್ಯಾಹ್ನ ಅವರು ಕೊನೆಯುಸಿರೆಳೆದಿದ್ದಾರೆ. ರಾ.ಸ್ವ.ಸೇ.ಸಂಘದಲ್ಲಿ ಮಾತ್ರವಲ್ಲ ಭಾರತೀಯ ಜನತಾಪಕ್ಷದಲ್ಲು ಗುರುತಿಸಿಕೊಂಡಿದ್ದ ಅವರು ಒಂದುಬಾರಿ ಪುದು ಜಿ.ಪಂ.ಚುನಾವಣೆಗೆ ಸ್ಪರ್ಧಿ ಸೋಲನ್ನನುಭವಿಸಿದ

ರಾ.ಸ್ವ.ಸೇ ಸಂಘದ ಹಿರಿಯ ಕೊಂಡಿ ಕೊಡ್ಮಾಣ್ ಕಾಂತಪ್ಪ ಶೆಟ್ಟಿ ಇನ್ನಿಲ್ಲ Read More »

ಕುಲದೈವದ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಶಾಸಕಿ ಭಾಗೀರಥಿ ಮುರುಳ್ಯ| ಅಧಿವೇಶನದಲ್ಲಿ ಗೊಂದಲ ಸೃಷ್ಟಿ

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭೆಯ ಮೊಟ್ಟ ಮೊದಲ ವಿಶೇಷ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ಮೇ.24ರ ವರೆಗೆ ನಡೆಯಲಿದೆ. ಸಾರ್ವತ್ರಿಕ ಚುನಾವಣೆಯ ಬಳಿಕ ವಿಧಾನಸಭೆಗೆ ಆಯ್ಕೆಯಾದ 224 ಜನಪ್ರತಿನಿಧಿಗಳ ಪ್ರಮಾಣವಚನ ಕಾರ್ಯಕ್ರಮ ಅಧಿವೇಶನದಲ್ಲಿ ನಡೆಯಿತು. ಸುಳ್ಯ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅಧಿವೇಶನದಲ್ಲಿ ಅಧಿಕಾರ ಪದ ಮತ್ತು ಗೌಪ್ಯತಾ ಪ್ರಮಾಣವಚನ ಸ್ವೀಕರಿಸಿದರು. ಈ ವೇಳೆ ಅವರು ಕುಲದೇವರಾದ ಸತ್ಯಸಾರಮಣಿ, ಸತ್ಯ ಪದನಾಜಿ, ಅಮ್ಮನವರು ಹಾಗೂ ಮತದಾರ ಭಾಂದವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಈ ವೇಳೆ ಕೆಲವು ಸದಸ್ಯರು

ಕುಲದೈವದ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಶಾಸಕಿ ಭಾಗೀರಥಿ ಮುರುಳ್ಯ| ಅಧಿವೇಶನದಲ್ಲಿ ಗೊಂದಲ ಸೃಷ್ಟಿ Read More »

ವಿಧಾನಸೌಧದ ಮೆಟ್ಟಿಲುಗಳಿಗೆ ನಮಸ್ಕರಿಸಿ ಅಧಿವೇಶನಕ್ಕೆ ತೆರಳಿದ ಸುಳ್ಯ ಶಾಸಕಿ ಭಾಗೀರಥಿ

ಸಮಗ್ರ ನ್ಯೂಸ್: ಸುಳ್ಯ ವಿಧಾನಸಭಾ ಕ್ಷೇತ್ರದ ನೂತನ ಶಾಸಕಿ ಭಾಗಿರಥಿ ಮುರುಳ್ಯ ಅವರು ವಿಧಾನಸೌಧದ ಮೆಟ್ಟಿಲುಗಳಿಗೆ ನಮಸ್ಕರಿಸಿ ಅಧಿವೇಶನಕ್ಕೆ ತೆರಳಿದ ಪ್ರಸಂಗ ಇಂದು ನಡೆದಿದೆ. ಇಂದು ನೂತನ ಶಾಸಕರಿಗೆ ಮೊದಲ ಅಧಿವೇಶನ ಅಗಿದ್ದು ರಾಜ್ಯದ ಎಲ್ಲಾ ತಾಲೂಕುಗಳ ಶಾಸಕರು ಅಧಿವೇಶನಕ್ಕೆ ತೆರಳಿದ್ದಾರೆ. ಇದೇ ರೀತಿ ಸುಳ್ಯ ಶಾಸಕಿ ಮೊದಲ ಬಾರಿಗೆ ಅಧಿವೇಶನಕ್ಕೆ ತೆರಳುತ್ತಿರುವ ಕಾರಣ ಸರ್ಕಾರದ ಕೆಲಸ ದೇವರ ಕೆಲಸ ಎಂಬಂತೆ ಪ್ರಜಾಪ್ರಭುತ್ವದ ಪವಿತ್ರ ದೇಗುಲವಾದ ವಿಧಾನಸಭೆಗೆ ಭಾಗಿರಥಿ ಮುರುಳ್ಯ ಅವರು ವಿಧಾನಸೌಧದ ಮೆಟ್ಟಿಲುಗಳಿಗೆ ನಮಿಸಿ ಮುಂದಕ್ಕೆ

ವಿಧಾನಸೌಧದ ಮೆಟ್ಟಿಲುಗಳಿಗೆ ನಮಸ್ಕರಿಸಿ ಅಧಿವೇಶನಕ್ಕೆ ತೆರಳಿದ ಸುಳ್ಯ ಶಾಸಕಿ ಭಾಗೀರಥಿ Read More »

ಹೊಸದೊಂದು ಸಂಘಟನೆ ಕಟ್ಟಿದ ಅರುಣ್ ಕುಮಾರ್ ಪುತ್ತಿಲ| ಬಿಜೆಪಿಗೆ ಸೆಡ್ಡು ಹೊಡೆದು ಲೋಕಾರ್ಪಣೆಗೊಂಡ ‘ಪುತ್ತಿಲ ಪರಿವಾರ’

ಸಮಗ್ರ ನ್ಯೂಸ್: ಬಿಜೆಪಿಯಿಂದ ಬಂಡಾಯ ಎದ್ದು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಮೂರನೇ ಸ್ಥಾನಕ್ಕೆ ಕಳುಹಿಸಿದ್ದ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ನೇತೃತ್ವದಲ್ಲಿ ಇದೀಗ ಸಂಘ ಪರಿವಾರಕ್ಕೆ ಸಡ್ಡು ಹೊಡೆಯಲು ಮತ್ತೊಂದು ಸಂಘಟನೆ ರೂಪುಗೊಂಡಿದೆ. ಪುತ್ತಿಲ ಪರಿವಾರ ಹೆಸರಿನಲ್ಲಿ ಹೊಸ ಸಂಘಟನೆ ಇಂದು ಲೋಕಾರ್ಪಣೆಗೊಂಡಿದೆ. ಇಂದು ನಡೆದ ಪುತ್ತಿಲ ಬೆಂಬಲಿಗರ ನಮ್ಮ ನಡಿಗೆ ಮಹಾಲಿಂಗೇಶ್ವರನ ಕಡೆಗೆ ಪಾದಯಾತ್ರೆ ಬಳಿಕ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಎದುರು ಗದ್ದೆಯಲ್ಲಿ ಬೃಹತ್ ಕಾರ್ಯಕರ್ತರ ಸಭೆಯಲ್ಲಿ ಈ ಹೊಸ ಸಂಘಟನೆ ಹುಟ್ಟುಕೊಂಡಿದೆ.

ಹೊಸದೊಂದು ಸಂಘಟನೆ ಕಟ್ಟಿದ ಅರುಣ್ ಕುಮಾರ್ ಪುತ್ತಿಲ| ಬಿಜೆಪಿಗೆ ಸೆಡ್ಡು ಹೊಡೆದು ಲೋಕಾರ್ಪಣೆಗೊಂಡ ‘ಪುತ್ತಿಲ ಪರಿವಾರ’ Read More »

ಇಂದಿನಿಂದ ಮೂರು ದಿನ‌ ರಾಜ್ಯ ವಿಧಾನಮಂಡಲ ವಿಶೇಷ ಅಧಿವೇಶನ

ಸಮಗ್ರ ನ್ಯೂಸ್: ಇಂದಿನಿಂದ (ಮೇ.22ರಿಂದ 24) ಮೂರು ದಿನ ವಿಧಾನಸಭಾ ಅಧಿವೇಶನ ನಡೆಯಲಿದ್ದು, ಮೊದಲ ಎರಡು ದಿನ ನೂತನ ಶಾಸಕರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕೊನೆ ದಿನ ವಿಧಾನಸಭಾ ಸ್ಪೀಕರ್​​​ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಸೋಮವಾರ ಬೆಳಿಗ್ಗೆ 11 ಗಂಟೆಗೆ ಅಧಿವೇಶನ ಆರಂಭವಾಗಲಿದೆ. ನೂತನ ಸದಸ್ಯರಿಗೆ ಹಂಗಾಮಿ ಸ್ಪೀಕರ್​ ಆಗಿ ಆಯ್ಕೆಯಾಗಿರುವ ಆರ್​.ವಿ ದೇಶಪಾಂಡೆಯವರು ಪ್ರಮಾಣ ವಚನ ಬೋಧನೆ ಮಾಡಲಿದ್ದಾರೆ. ವಿಧಾನಸಭೆಯ ಅವಧಿ ಮೇ 23ಕ್ಕೆ ಅಂತ್ಯವಾಗಿದ್ದು, ಈ ತಿಂಗಳು 23ರರೊಳಗೆ ಶಾಸಕರ ಪ್ರಮಾಣವಚನ ಸ್ವೀಕಾರ ಪೂರ್ಣಗೊಳ್ಳಬೇಕು.

ಇಂದಿನಿಂದ ಮೂರು ದಿನ‌ ರಾಜ್ಯ ವಿಧಾನಮಂಡಲ ವಿಶೇಷ ಅಧಿವೇಶನ Read More »

ವೈರಲ್ ಆಯ್ತು ಶಾಸಕಿ ನಯನಾ ಮೋಟಮ್ಮ ಫೋಟೋಸ್| ಅವಿವೇಕಿಗಳಿಗೆ ಉತ್ತರ ಎಂದ ನಯನಾ

ಸಮಗ್ರ ನ್ಯೂಸ್: ರಾಜಕಾರಣಿಗಳನ್ನು ಜನ ಇರುವ ಹಾಗೆಯೇ ನೋಡೋದಕ್ಕೆ ಇಷ್ಟಪಡುತ್ತಾರೆ. ಜನಸಾಮಾನ್ಯರ ಪಾಲಿಗೆ ಉತ್ತಮ ರಾಜಕಾರಣಿಯ ಗುಣಲಕ್ಷಣಗಳಿವು. ಆದರೆ ವಾಸ್ತವದಲ್ಲಿ ನೋಡುವುದಾದರೆ ರಾಜಕಾರಣಿಗಳು ಮನುಷ್ಯರಲ್ವಾ, ಅವ್ರಿಗೂ ಎಲ್ಲರಂತ ಹಲವು ಕನಸುಗಳಿರೋದಲ್ವಾ. ಹೊಸ ಸ್ಥಳಗಳನ್ನು ಸುತ್ತಾಡೋದು, ಟ್ರೆಂಡೀ ಡ್ರೆಸ್ ತರೋದು ಇದೆಲ್ಲಾ ಅವರಿಗೆ ನಿಷಿದ್ಧವಾಗಿಲ್ಲ. ಆದರೂ ರಾಜಕಾರಣಿಗಳು ಹೀಗೆಲ್ಲಾ ಮಾಡಿದರೆ ಯಾಕೆ ಅಪರಾಧಿಯಂತೆ ನೋಡಲಾಗುತ್ತದೆ. ಈ ಬಗ್ಗೆ ಚಿಕ್ಕಮಗಳೂರಿನ ಮೂಡಿಗೆರೆ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಗೆಲುವು ಸಾಧಿಸಿರುವ ನಯನ ಮೋಟಮ್ಮ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ನಯನಾ ಮೋಟಮ್ಮ ಅವರ

ವೈರಲ್ ಆಯ್ತು ಶಾಸಕಿ ನಯನಾ ಮೋಟಮ್ಮ ಫೋಟೋಸ್| ಅವಿವೇಕಿಗಳಿಗೆ ಉತ್ತರ ಎಂದ ನಯನಾ Read More »

“ಕಾಂಗ್ರೆಸ್ ಗ್ಯಾರಂಟಿ ಯೋಜನೆ ಬಹಿಷ್ಕರಿಸಿ” |ಶಾಸಕ ಹರೀಶ್ ಪೂಂಜಾರಿಂದ ಬೆಳ್ತಂಗಡಿ ಜನತೆಗೆ ಮನವಿ?

ಸಮಗ್ರ ನ್ಯೂಸ್: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅನುಷ್ಟಾನಕ್ಕೆ ತರಲಿರುವ ಗ್ಯಾರಂಟಿ ಯೋಜನೆಗಳನ್ನು ಬಹಿಷ್ಕರಿಸುವಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕ್ಷೇತ್ರದ ಜನತೆಗೆ ಮನವಿ ಮಾಡಿದ್ದಾರೆ ಎಂಬ ಪೋಸ್ಟರ್ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ‘ನೀವು ಉಚಿತ ಯೋಜನೆಗಳನ್ನು ಪಡೆದರೆ ನನ್ನ ಮಾನ ಹರಾಜು ಹಾಕಿದಂತೆ, ಸ್ವಾಭಿಮಾನ ಇರುವ ನಾವು ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳನ್ನು ಪಡೆದುಕೊಳ್ಳುವುದು ಬೇಡ, ಯೋಜನೆಗಳನ್ನು ಬಹಿಷ್ಕರಿಸಿ ನನ್ನ ಮಾನ ಉಳಿಸಿ’ ಎಂದು ಮನವಿ ಮಾಡಲಾದ ಪೋಸ್ಟರ್ ಅನ್ನು ಜಾಲತಾಣಗಳಲ್ಲಿ ಕೆಲವರು ಹಂಚಿಕೊಂಡಿದ್ದಾರೆ.

“ಕಾಂಗ್ರೆಸ್ ಗ್ಯಾರಂಟಿ ಯೋಜನೆ ಬಹಿಷ್ಕರಿಸಿ” |ಶಾಸಕ ಹರೀಶ್ ಪೂಂಜಾರಿಂದ ಬೆಳ್ತಂಗಡಿ ಜನತೆಗೆ ಮನವಿ? Read More »

ಐದು ಗ್ಯಾರಂಟಿಗೆ ತಾತ್ವಿಕ ಅನುಮೋದನೆ – ಸಿಎಂ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ನೂತನ ಕಾಂಗ್ರೆಸ್ ಸರ್ಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲೇ ಐದು ಗ್ಯಾರಂಟಿಗಳಿಗೆ ತಾತ್ವಿಕ ಅನುಮೋದನೆ ಪಡೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಹೆಚ್ಚಿನ ವಿವರಗಳನ್ನು ಮುಂದಿನ ಸಭೆಗಳಲ್ಲಿ ಚರ್ಚಿಸಲಾಗುವುದು. ಈ ಕುರಿತು ಆದೇಶ ಹೊರಡಿಸಲಾಗುವುದು ಎಂದು ಅವರು ತಿಳಿಸಿದರು. 200 ಯುನಿಟ್ ಗಳವರೆಗೆ ಉಚಿತ ವಿದ್ಯುತ್, ಬಿಪಿಎಲ್ ಕುಟುಂಬಗಳ ಸದಸ್ಯರಿಗೆ ಉಚಿತವಾಗಿ ತಿಂಗಳಿಗೆ ತಲಾ ಹತ್ತು ಕೆ.ಜಿ. ಅಕ್ಕಿ, ಮನೆಯ ಯಜಮಾನಿಗೆ ತಿಂಗಳಿಗೆ ₹ 2,000 ನೆರವು, ನಿರುದ್ಯೋಗಿ ಪದವೀಧರರಿಗೆ ತಿಂಗಳಿಗೆ ₹

ಐದು ಗ್ಯಾರಂಟಿಗೆ ತಾತ್ವಿಕ ಅನುಮೋದನೆ – ಸಿಎಂ ಸಿದ್ದರಾಮಯ್ಯ Read More »

ಸಿದ್ದರಾಮಯ್ಯ ಸಿಎಂ ಆಗಿ ಪ್ರಮಾಣವಚನ| ಕಂಠೀರವ ಕ್ರೀಡಾಂಗಣದಿಂದ ನೇರಪ್ರಸಾರ

ಸಮಗ್ರ ನ್ಯೂಸ್: ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಶನಿವಾರ ಮಧ್ಯಾಹ್ನ 12.30ಕ್ಕೆ ರಾಜ್ಯದ ಸಿಎಂ ಆಗಿ ಎರಡನೇ ಬಾರಿ ಸಿದ್ದರಾಮಯ್ಯ ಹಾಗೂ ಮೊದಲ ಬಾರಿ ಡಿಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್​​ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​​ ಸೇರಿದಂತೆ 10 ಮಂದಿ ಶಾಸಕರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇವರಲ್ಲಿ ಇಂದು 8 ಶಾಸಕರು ಮಾತ್ರ ಸಚಿವರಾಗಿ

ಸಿದ್ದರಾಮಯ್ಯ ಸಿಎಂ ಆಗಿ ಪ್ರಮಾಣವಚನ| ಕಂಠೀರವ ಕ್ರೀಡಾಂಗಣದಿಂದ ನೇರಪ್ರಸಾರ Read More »