ರಾಜಕೀಯ

ಸುಳ್ಯ : ಎಎಪಿ ಅಭ್ಯರ್ಥಿ ಸುಮನಾ‌ ಅವರಿಂದ ಪ್ರಚಾರ ಆರಂಭ

ಸಮಗ್ರ ನ್ಯೂಸ್: ಸುಳ್ಯ ವಿಧಾನಸಭಾ ಕ್ಷೇತ್ರದ ಆಮ್‌ ಆದ್ಮಿ ಪಕ್ಷದ ಅಭ್ಯರ್ಥಿ ಸುಮನಾ ಬೆಳ್ಳಾರ್ಕರ್‌ ಪ್ರಚಾರ ಕಾರ್ಯವನ್ನು ಆರಂಭಿಸಿದ್ದಾರೆ. ಸುಳ್ಯದ ವಿವಿಧ ಪ್ರಮುಖ‌ ಪ್ರದೇಶಗಳಿಗೆ ಒಂದು ಸುತ್ತಿನ ಪ್ರವಾಸ ನಡೆಸಿ, ಸುಳ್ಯದ ಮೂಲಭೂತ ಸಮಸ್ಯೆಗಳ ಕಡೆಗೆ ಗಮನಹರಿಸಿ ಸುಳ್ಯಕ್ಕೆ ಪ್ರತ್ಯೇಕವಾದ ಪ್ರಣಾಳಿಕೆಗೆ ಮಾಹಿತಿ ಸಂಗ್ರಹಿಸಿದರು. ಪ್ರಚಾರ ಕಾರ್ಯದಲ್ಲಿ ಆಮ್‌ ಆದ್ಮಿ ಪಕ್ಷದ ಜಿಲ್ಲಾದ್ಯಕ್ಷ ಅಶೋಕ್‌ ಎಡಮಲೆ, ಪಕ್ಷದ ಪ್ರಮುಖರಾದ ರಾಮಕೃಷ್ಣ ಬೀರಮಂಗಲ, ಖಲಂದರ್‌ ಎಲಿಮಲೆ, ರಶೀದ್‌ ಜಟ್ಟಿಪಳ್ಳ , ಗುರುಪ್ರಸಾದ್‌ ಮೇರ್ಕಜೆ, ಪ್ರಸನ್ನ ಎಣ್ಮೂರು, ಗಣೇಶ್ ಪ್ರಸಾದ್ […]

ಸುಳ್ಯ : ಎಎಪಿ ಅಭ್ಯರ್ಥಿ ಸುಮನಾ‌ ಅವರಿಂದ ಪ್ರಚಾರ ಆರಂಭ Read More »

ಸುಳ್ಯ: ರಾಜಕಾರಣಿಗಳಿಗೆ ಗೇಟಿನೊಳಗೆ ನೋ ಎಂಟ್ರಿ| ಬೋರ್ಡ್ ಹಾಕಿ ಕಿವಿ ಹಿಂಡಿದ ಗ್ರಾಮಸ್ಥ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಅಸೆಂಬ್ಲಿ‌ ಚುನಾವಣೆ ಗರಿಗೆದರಿದೆ. ರಾಜಕಾರಣಿಗಳು ಜನರನ್ನು ಯಾಮಾರಿಸಲು ಪ್ರಯತ್ನಪಟ್ಟರೆ, ಜನರು ಅವರಿಗೆ ಬುದ್ದಿ ಕಲಿಸಲು ಅಣಿಯಾಗ್ತಿದಾರೆ. ವಿವಿಧ ರಾಜಕೀಯ ಪಕ್ಷದ ನಾಯಕರು ಮತದಾರರ ಸೆಳೆಯುವ ಪ್ರಯತ್ನ ಮಾಡುತ್ತಿದ್ದರೆ ಮತ್ತೊಂದೆಡೆ ಜಾಣ ಮತದಾರ ಇದುವರೆಗೆ ತಿರುಗಿ ನೋಡದ ರಾಜಕಾರಣಿಗಳಿಗೆ ಪಾಠ ಕಲಿಸಲು ತುದಿಗಾಲಲ್ಲಿ ನಿಂತಿದ್ದಾರೆ. ಮತದಾನ ನಮ್ಮ ಹಕ್ಕು ಸೂಕ್ತವಾಗಿ ಸ್ಪಂದಿಸದ ಜನಪ್ರತಿನಿಧಿಗಳಿಗೆ ಓಟು ಕೊಡುವುದಿಲ್ಲ ಅನ್ನುವ ಕೂಗು ಸುಳ್ಯ ತಾಲೂಕಿನ ಹಲವು ಕಡೆ ಕೇಳಿ ಬಂದಿದೆ. ಇದೀಗ ಅಜ್ಜಾವರದ ಮುಂಡೋಳಿಮೂಲೆಯಲ್ಲೂ ಇಂಥಹುದ್ದೇ ಒಂದು

ಸುಳ್ಯ: ರಾಜಕಾರಣಿಗಳಿಗೆ ಗೇಟಿನೊಳಗೆ ನೋ ಎಂಟ್ರಿ| ಬೋರ್ಡ್ ಹಾಕಿ ಕಿವಿ ಹಿಂಡಿದ ಗ್ರಾಮಸ್ಥ Read More »

ಮಹಿಳೆ ಜೊತೆಗಿನ ಅಶ್ಲೀಲ ಫೋಟೋ ವೈರಲ್| ದೂರು ದಾಖಲಿಸಿದ ಪುತ್ತೂರು ಶಾಸಕ ಸಂಜೀವ ಮಠಂದೂರು

ಸಮಗ್ರ ನ್ಯೂಸ್: ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ನೆಕ್ಕಿಲಾಡಿ ಮೂಲದ ಮಹಿಳೆಯೊಬ್ಬರ ಜತೆ ಆತ್ಮೀಯವಾಗಿರುವ ಕೆಲ ಫೊಟೊಗಳು ಫೇಸ್‌ ಬುಕ್‌, ವಾಟ್ಸಾಪ್‌ ಸಹಿತ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದ್ದು ಈ ಕುರಿತು ಶಾಸಕ ಮಠಂದೂರು ಸೈಬರ್‌ ಕ್ರೈಮ್‌ ಪೊಲೀಸರಿಗೆ ದೂರು ನೀಡಿದ್ದಾರೆ.‌ ಬೆಂಗಳೂರಿನ ಗಾಂಧಿನಗರದಲ್ಲಿರುವ ಅಲಸೂರು ಗೇಟ್‌ ಸೈಬರ್‌ ಕ್ರೈಮ್‌ ಪೊಲೀಸ್‌ ಠಾಣೆಯಲ್ಲಿ ಮಠಂದೂರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ಚುನಾವಣಾ ಸಂದರ್ಭ, ಅದರಲ್ಲೂ ಟಿಕೆಟ್‌ ಘೋಷಣೆಗೆ ಪಕ್ಷ ಸಿದ್ದತೆ ನಡೆಸುತ್ತಿರುವ ವೇಳೆ ಮಾನ

ಮಹಿಳೆ ಜೊತೆಗಿನ ಅಶ್ಲೀಲ ಫೋಟೋ ವೈರಲ್| ದೂರು ದಾಖಲಿಸಿದ ಪುತ್ತೂರು ಶಾಸಕ ಸಂಜೀವ ಮಠಂದೂರು Read More »

ಪೋಟೋ ವೈರಲ್ ಬೆನ್ನಲ್ಲೇ ಶಾಸಕರ ಅಶ್ಲೀಲ ವಿಡಿಯೋ ಬಾಂಬ್?! “ಪಿಚ್ಚರ್ ಅಬೀ ಬಾಕಿ ಹೇ” ಎಂದು ಬರೆದುಕೊಂಡ ನೆಟ್ಟಿಗರು

ಸಮಗ್ರ ನ್ಯೂಸ್: ಪುತ್ತೂರು ಶಾಸಕರಾದ ಸಂಜೀವ ಮಠಂದೂರು ಮಹಿಳೆಯೊಬ್ಬರ ಜೊತೆಗಿದ್ದ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು ಇದೀಗ ವೀಡಿಯೊ ವೈರಲ್ ಬಗ್ಗೆ ಮತ್ತೊಂದು ಸುದ್ದಿ ಹರಿದಾಡುತ್ತಿದೆ. ವಿಧಾನ ಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಒಬ್ಬೊಬ್ಬರ ಒಂದೊಂದು ಮುಖವಾಡಗಳು ಹೊರಬೀಳುತ್ತಿದ್ದು ಇದೀಗ ಪುತ್ತೂರು ಶಾಸಕರ ರಾಸಲೀಲೆಯಲ್ಲಿ ತೊಡಗಿರುವ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಬಾರಿ ಹರಿದಾಡುತ್ತಿವೆ. ಇದೀಗ ಹೊರಬಿದ್ದಿದ್ದು ಟ್ರೈಲರ್ ಇನ್ನು ಪಿಚ್ಚರ್ ಬಾಕಿ ಇದ್ದು ಅದರ ವೀಡಿಯೋ ಕೂಡ ಇಂದು- ನಾಳೆಯಲ್ಲಿ ಹೊರಬೀಳಲಿದೆಯೆಂದು ಸಾಮಾಜಿಕ ಜಾಲ

ಪೋಟೋ ವೈರಲ್ ಬೆನ್ನಲ್ಲೇ ಶಾಸಕರ ಅಶ್ಲೀಲ ವಿಡಿಯೋ ಬಾಂಬ್?! “ಪಿಚ್ಚರ್ ಅಬೀ ಬಾಕಿ ಹೇ” ಎಂದು ಬರೆದುಕೊಂಡ ನೆಟ್ಟಿಗರು Read More »

ಕಾಂಗ್ರೆಸ್ ನ ಎರಡನೇ ಪಟ್ಟಿ ರಿಲೀಸ್| 42 ಕ್ಷೇತ್ರಗಳಲ್ಲಿ ಯಾರಿಗೆಲ್ಲಾ ಟಿಕೆಟ್ ಗೊತ್ತಾ?

ಸಮಗ್ರ ನ್ಯೂಸ್: ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆಗಾಗಿ ಚುನಾವಣಾ ಸಮಿತಿಯ ಸಭೆ ನಡೆಯಿತು. ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿಯ ಹೆಸರು ಫೈನಲ್ ಮಾಡುವ ನಿಟ್ಟಿನಲ್ಲಿ ಸತತ ಎರಡು ದಿನಗಳ ಕಾಲ ದೆಹಲಿಯ ಎಐಸಿಸಿ ಕಚೇರಿಯಲ್ಲಿ ( AICC Office ) ಕಾಂಗ್ರೆಸ್ ಚುನಾವಣಾ ಸಮಿತಿಯ ಸಭೆ ನಡೆಯಿತು. ಈ ಸಭೆಯಲ್ಲಿ ರಾಹುಲ್ ಗಾಂಧಿ, ಕೆ.ಸಿ ವೇಣುಗೋಪಾಲ್, ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ

ಕಾಂಗ್ರೆಸ್ ನ ಎರಡನೇ ಪಟ್ಟಿ ರಿಲೀಸ್| 42 ಕ್ಷೇತ್ರಗಳಲ್ಲಿ ಯಾರಿಗೆಲ್ಲಾ ಟಿಕೆಟ್ ಗೊತ್ತಾ? Read More »

ಮಂಗಳೂರು: ಕರಾವಳಿಯ ಬಿಜೆಪಿ ಶಾಸಕನೊಂದಿಗಿನ ಖಾಸಗಿ ಫೋಟೋ ವೈರಲ್| ಮಹಿಳೆಯಿಂದ ದೂರು ದಾಖಲು

ಸಮಗ್ರ ನ್ಯೂಸ್: ಮಹಿಳೆಯೊಬ್ಬರು ಕರಾವಳಿಯ ಬಿಜೆಪಿ ಶಾಸಕರೊಬ್ಬರ ಜೊತೆಗೆ ಆತ್ಮೀಯವಾಗಿರುವ ಸೆಲ್ಫಿ ಪೋಟೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಈ ಬಗ್ಗೆ ಸಂತ್ರಸ್ತ ಮಹಿಳೆಯು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈಕೆ ನೆಕ್ಕಿಲಾಡಿ ಸಮೀಪದವರು ಎಂದು ಗುರುತಿಸಲಾಗಿದ್ದು, ಈಕೆ ಎ.೫ ರಂದು ಸಂಜೆ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿರುವುದಾಗಿ ತಿಳಿದು ಬಂದಿದೆ. ದೂರು ಸ್ವೀಕರಿಸಿರುವ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ. ಪೋಟೊ ಅಸಲಿ/ ಎಡಿಟೆಡ್ ಸೇರಿದಂತೆ ವಿವಿಧ ಆಯಾಮಗಳಲ್ಲಿ ಪೊಲೀಸ್ ತನಿಖೆ ನಡೆಯಲಿದೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ

ಮಂಗಳೂರು: ಕರಾವಳಿಯ ಬಿಜೆಪಿ ಶಾಸಕನೊಂದಿಗಿನ ಖಾಸಗಿ ಫೋಟೋ ವೈರಲ್| ಮಹಿಳೆಯಿಂದ ದೂರು ದಾಖಲು Read More »

ಸಚಿವ ಎಸ್.ಅಂಗಾರ ಸೇರಿ 25 ಮಂದಿ ಹಾಲಿ ಶಾಸಕರಿಗೆ ಟಿಕೆಟ್ ಡೌಟ್| ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಮಹತ್ವದ ನಿರ್ಧಾರ

ಸಮಗ್ರ ನ್ಯೂಸ್: ಆಡಳಿತಾ ವಿರೋಧಿ ಅಲೆ ಹಾಗೂ ಅನ್ಯ ಕಾರಣಗಳಿಗಾಗಿ ಆಡಳಿತಾರೂಢ ಬಿಜೆಪಿಯ ಎರಡು ಡಜನ್‍ಗೂ ಅಧಿಕ ಶಾಸಕರಿಗೆ ಟಿಕೆಟ್ ಸಿಗುವುದು ಅನುಮಾನ ಎನ್ನಲಾಗುತ್ತಿದೆ. ಈ ಬಗ್ಗೆ ಕೋರ್ ಕಮಿಟಿ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆದಿದ್ದು, ಹಾಲಿ ಶಾಸಕರಿಗೆ ಕೋಕ್ ನೀಡಿ ಹೊಸ ಮುಖಗಳಿಗೆ ಮನ್ನಣೆ ನೀಡಬೇಕೆಂಬ ಅಭಿಪ್ರಾಯ ವ್ಯಕ್ತವಾಗಿದೆ. ಆಡಳಿತ ವಿರೋಧಿ ಹಾಗೂ ಕೆಲವು ಗಂಭೀರ ಸ್ವರೂಪದ ಆರೋಪಗಳನ್ನು ಎದುರಿಸುತ್ತಿರುವ ಹಿನ್ನಲೆಯಲ್ಲಿ ಹಾಲಿ ಶಾಸಕರಿಗೆ ಟಿಕೆಟ್ ನೀಡದೆ ಹೊಸಬರಿಗೆ ವಿಶೇಷವಾಗಿ ಪಕ್ಷ ನಿಷ್ಠರಿಗೆ ಟಿಕೆಟ್ ಘೋಷಣೆ

ಸಚಿವ ಎಸ್.ಅಂಗಾರ ಸೇರಿ 25 ಮಂದಿ ಹಾಲಿ ಶಾಸಕರಿಗೆ ಟಿಕೆಟ್ ಡೌಟ್| ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಮಹತ್ವದ ನಿರ್ಧಾರ Read More »

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ| ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ದ ಎರಡು ದೂರು ದಾಖಲು

ಸಮಗ್ರ ನ್ಯೂಸ್: ವಿಧಾನಸಭೆ ಚುನಾವಣೆ ಹಿನ್ನೆಲೆ ನೀತಿ ಸಂಹಿತೆ ಜಾರಿಗೊಳಿಸಲಾಗಿದ್ದು, ಚುನಾವಣಾಧಿಕಾರಿಗಳು ಅಲರ್ಟ್ ಆಗಿದ್ದಾರೆ. ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜ ವಿರುದ್ಧ ಎರಡು ಪ್ರತ್ಯೇಕ ದೂರು ದಾಖಲಿಸಲಾಗಿದೆ. ಸಾಮಾಜಿಕ ಕಾರ್ಯಕರ್ತ ಶೇಖರ ಲಾಯಿಲ ಬೆಳ್ತಂಗಡಿ ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದು, ದೂರಿನಲ್ಲಿ ನೀತಿಸಂಹಿತೆ ಉಲ್ಲಂಘನೆ ಮಾಡಲಾಗಿದೆ ‌ಎಂದು ಆರೋಪಿಸಲಾಗಿದೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಅವರು ಪತ್ರಿಕೆಗೆ ಹಣ ಕೊಟ್ಟು ಹರೀಶ್ ಪೂಂಜ ಹೆಸರಿನಲ್ಲಿ ಅಕ್ರಮ ಸಕ್ರಮ ಯೋಜನೆಯನ್ನು ಶಾಸಕರ ಸಾಧನೆ

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ| ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ದ ಎರಡು ದೂರು ದಾಖಲು Read More »

ಚುನಾವಣೆ ಘೋಷಣೆ ಬೆನ್ನಲ್ಲೇ ಘರ್ಜಿಸಿದ ಕಾಂಗ್ರೆಸ್| ಸ್ಲೋಗನ್ ಬಿಡುಗಡೆ ಮಾಡಿದ ಕೈ ಪಾಳಯ

ಸಮಗ್ರ ನ್ಯೂಸ್: ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾದ ದಿನದಿಂದಲೇ ಕಾಂಗ್ರೆಸ್ ಪಕ್ಷ ‘ಮತ್ತೆ ಗರ್ಜಿಸಲಿದೆ ಕರ್ನಾಟಕ’ ಎಂಬ ಹೊಸ ಅಭಿಯಾನ ಆರಂಭಿಸಿದೆ. ಈ ಅಭಿಯಾನಕ್ಕೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಚಾಲನೆ ನೀಡಿ ಲೋಗೋ ಬಿಡುಗಡೆ ಮಾಡಿದ್ದಾರೆ. ಈ ಅಭಿಯಾನವು ಕರ್ನಾಟಕದ ಜನರಿಗೆ ಪಕ್ಷದ ಬದ್ಧತೆಯನ್ನು ಪ್ರದರ್ಶಿಸುವ ಗುರಿಯನ್ನು ಹೊಂದಿದೆ ಮತ್ತು ಎಲ್ಲರಿಗೂ ಉತ್ತಮ ಭವಿಷ್ಯವನ್ನು ಸೃಷ್ಟಿಸುವ ದೂರದೃಷ್ಟಿಯನ್ನು ಹೊಂದಿದೆ ಎಂದು ಎಂ.ಬಿ. ಪಾಟೀಲ್‌ ಹೇಳಿದ್ದಾರೆ. ‘ಡಬಲ್ ಇಂಜಿನ್ ಸರ್ಕಾರದಿಂದ ಕರ್ನಾಟಕದ ಜನರು ನಿರಾಸೆಗೊಂಡಿದ್ದಾರೆ. ಕೋವಿಡ್-19,

ಚುನಾವಣೆ ಘೋಷಣೆ ಬೆನ್ನಲ್ಲೇ ಘರ್ಜಿಸಿದ ಕಾಂಗ್ರೆಸ್| ಸ್ಲೋಗನ್ ಬಿಡುಗಡೆ ಮಾಡಿದ ಕೈ ಪಾಳಯ Read More »

ಹೊರಬಿತ್ತು ಸಿ-ವೋಟರ್ ಸಮೀಕ್ಷೆ| ಈ ಪಕ್ಷಕ್ಕೆ ಸಿಗಲಿದೆ ಬಹುಮತ

ಸಮಗ್ರ ನ್ಯೂಸ್: ಬಹುನಿರೀಕ್ಷಿತ ಕರ್ನಾಟಕ ವಿಧಾನಸಭಾ ಚುನಾವಣೆಗೆ ಈಗಾಗಲೇ ಕೇಂದ್ರ ಚುನಾವಣಾ ಆಯೋಗ ದಿನಾಂಕ ನಿಗದಿ ಮಾಡಿದೆ. ಮೇ 10ನೇ ತಾರೀಕಿನಂದು ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಇದಾದ 2 ದಿನಗಳ ಬಳಿಕ ಅಂದರೆ ಮೇ 13ನೇ ತಾರೀಕು ಚುನಾವಣಾ ಫಲಿತಾಂಶ ಹೊರಬೀಳಲಿದೆ. ಇನ್ನು, ಕಾಂಗ್ರೆಸ್​, ಬಿಜೆಪಿ ಮತ್ತು ಜೆಡಿಎಸ್​ ಸೇರಿದಂತೆ ಎಲ್ಲಾ ಪಕ್ಷಗಳು ಈ ಬಾರಿ ಹೇಗಾದರೂ ಚುನಾವಣೆ ಗೆದ್ದು ಕರ್ನಾಟಕದಲ್ಲಿ ಅಧಿಕಾರದ ಗದ್ದುಗೆ ಹಿಡಿಯಬೇಕು ಎಂದು ಸಜ್ಜಾಗಿವೆ. ಈ

ಹೊರಬಿತ್ತು ಸಿ-ವೋಟರ್ ಸಮೀಕ್ಷೆ| ಈ ಪಕ್ಷಕ್ಕೆ ಸಿಗಲಿದೆ ಬಹುಮತ Read More »