ರಾಜಕೀಯ

ತಾಕತ್ತಿದ್ದರೆ ಗುದ್ದಲಿ ಪೂಜೆ ದಿನವೇ ಕಾಮಗಾರಿ ಆರಂಭಿಸಿ| ನಾಗರಿಕ ಹಿತರಕ್ಷಣಾ ವೇದಿಕೆಯಿಂದ ಅರಂತೋಡು- ಎಲಿಮಲೆ‌ ರಸ್ತೆ ಕಾಮಗಾರಿಗೆ ಆಗ್ರಹ

ಸಮಗ್ರ ನ್ಯೂಸ್: ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಸುಳ್ಯ ತಾಲೂಕಿನ ಅರಂತೋಡು- ಅಡ್ತಲೆ- ಎಲಿಮಲೆ ರಸ್ತೆ ದುರಸ್ತಿಗೆ ಆಗ್ರಹಿಸಿ ನಾಗರಿಕ ಹಿತರಕ್ಷಣಾ ವೇದಿಕೆ ಕಳೆದ ಕೆಲ ತಿಂಗಳಿನಿಂದ ಮತದಾನ ಬಹಿಷ್ಕಾರ ನಿರ್ಧಾರ ಮಾಡಿ ಅಹವಾಲು ಸಲ್ಲಿಸುತ್ತಿದ್ದು, ಈ ಬೆನ್ನಲ್ಲೇ ಶಾಸಕ ಹಾಗೂ ಸಚಿವ ಎಸ್ .ಅಂಗಾರ ಕಾಮಗಾರಿ ಗುದ್ದಲಿ ಪೂಜೆಗೆ ದಿನ ನಿಗದಿ ಮಾಡಿದ್ದಾರೆ. ಆದರೆ ಇದಕ್ಕೆ ಸೆಡ್ಡು‌ ಹೊಡೆದಿರುವ ನಾಗರಿಕ ಹಿತರಕ್ಷಣಾ ವೇದಿಕೆ ಗುದ್ದಲಿ ಪೂಜೆಗೆ ಗ್ರಾಮಸ್ಥರು ಮಾನ್ಯತೆ ನೀಡುವುದಿಲ್ಲ, ಒಂದು ವೇಳೆ ಗುದ್ದಲಿ ಪೂಜೆ […]

ತಾಕತ್ತಿದ್ದರೆ ಗುದ್ದಲಿ ಪೂಜೆ ದಿನವೇ ಕಾಮಗಾರಿ ಆರಂಭಿಸಿ| ನಾಗರಿಕ ಹಿತರಕ್ಷಣಾ ವೇದಿಕೆಯಿಂದ ಅರಂತೋಡು- ಎಲಿಮಲೆ‌ ರಸ್ತೆ ಕಾಮಗಾರಿಗೆ ಆಗ್ರಹ Read More »

ಮನವಿ ಕೊಟ್ರೆ ಕೆಲ್ಸ ಆಗಲ್ಲ; ಸರ್ಕಾರ ದುಡ್ಡು ಕೊಟ್ರೆ ಮಾತ್ರ ಕೆಲ್ಸ ಆಗುತ್ತೆ| ಸಚಿವನಾಗಿದ್ರೂ ಬೇರೆ ಪಕ್ಷದ ಶಾಸಕನಂತೆ ಹೇಳಿಕೆ‌ ನೀಡಿದ ಎಸ್.ಅಂಗಾರ

ಸಮಗ್ರ ನ್ಯೂಸ್: ನಾಗರೀಕರು ಮನವಿ ಕೊಟ್ಟರೆ ಯಾವುದೇ ಕೆಲಸಗಳು ಆಗುವುದಿಲ್ಲ. ಕಾಮಗಾರಿ‌ ನಡೆಸಲು ಸರ್ಕಾರ ಹಣ‌ ಬಿಡುಗಡೆ‌ ಮಾಡಬೇಕು, ಮನವಿ ಕೊಟ್ಟ ಮಾತ್ರಕ್ಕೆ ಕೆಲಸವಾಗದು, ಎಂದು ಸಚಿವ ಎಸ್.ಅಂಗಾರ ಹೇಳಿದ್ದಾರೆ. ಸಚಿವರ ಈ ಒಟ್ಟಾರೆ ಹೇಳಿಕೆಯಿಂದ ಕಡಬ ತಾಲೂಕಿನ ಬಲ್ಯ ಗ್ರಾಮದ ಜನರಿಗೆ ನಾವು ಬೇರೆ ಪಕ್ಷದ ಶಾಸಕನೊಂದಿಗೆ ಮಾತನಾಡ್ತಿದ್ದೆವೆಯೋ ಎಂಬ ಅನುಮಾನ ಕಾಡಿದೆ. ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಮತದಾರರ ಆಕ್ರೋಶ ಅಲ್ಲಲ್ಲಿ ಪ್ರಕಟವಾಗತೊಡಗಿದ್ದು, ಗುದ್ದಲಿ ಪೂಜೆಗೆಂದು ಆಗಮಿಸಿದ ಸುಳ್ಯ ಶಾಸಕ , ಸಚಿವ ಎಸ್‌.ಅಂಗಾರ ಅವರಿಗೆ ‘ಮೊದಲು

ಮನವಿ ಕೊಟ್ರೆ ಕೆಲ್ಸ ಆಗಲ್ಲ; ಸರ್ಕಾರ ದುಡ್ಡು ಕೊಟ್ರೆ ಮಾತ್ರ ಕೆಲ್ಸ ಆಗುತ್ತೆ| ಸಚಿವನಾಗಿದ್ರೂ ಬೇರೆ ಪಕ್ಷದ ಶಾಸಕನಂತೆ ಹೇಳಿಕೆ‌ ನೀಡಿದ ಎಸ್.ಅಂಗಾರ Read More »

ರಾಜಕೀಯ ನಿವೃತ್ತಿ ಘೋಷಿಸಿದ ಎಸ್.ಎಂ ಕೃಷ್ಣ

ಸಮಗ್ರ ನ್ಯೂಸ್: ಮಾಜಿ ಸಿಎಂ ಎಸ್.ಎಂ ಕೃಷ್ಣ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈ ಕುರಿತು ಮಾತನಾಡಿರುವ ಎಸ್ ಎಂ ಕೃಷ್ಣ ನಾನು ಹೆಚ್ಚಾಗಿ ರಾಜಕೀಯದಲ್ಲಿ ಕಾಣಿಸಿಕೊಳ್ಳುತ್ತಿಲ್ಲ ಎಂಬ ಮಾತುಗಳು ಕೇಳಿಬರುತ್ತಿದೆ. 90 ವರ್ಷದ ವಯಸ್ಸಿನಲ್ಲಿ 50 ವರ್ಷದ ವ್ಯಕ್ತಿ ಹಾಗೆ ನಟಿಸೋಕೆ ಆಗುತ್ತಾ..? ಆದ್ದರಿಂದ ರಾಜಕೀಯ ಜೀವನಕ್ಕೆ ಗುಡ್ ಬೈ ಹೇಳುವ ಬಗ್ಗೆ ನಿರ್ಧರಿಸಿದ್ದೇನೆ ಎಂದು ಹೇಳಿದ್ದಾರೆ. ವಯಸ್ಸಿನ ಕಾರಣದಿಂದ ಸಾರ್ವಜನಿಕ ಜೀವನದಿಂದ ದೂರ ಇದ್ದೇನೆ, ಹಾಗಾಗಿ ಈ ವಿಚಾರವನ್ನು ಹೈಕಮಾಂಡ್ ಗಮನಕ್ಕೆ ತರುವ ಅವಶ್ಯಕತೆ

ರಾಜಕೀಯ ನಿವೃತ್ತಿ ಘೋಷಿಸಿದ ಎಸ್.ಎಂ ಕೃಷ್ಣ Read More »

ಭಾರತ್‌‌ ಜೋಡೋ ಯಾತ್ರೆಯಲ್ಲಿ ಸಹೋದರಿಯ ಅಪ್ಪಿ ಮುದ್ದಾಡಿದ ರಾಗಾ| ವಿಡಿಯೋ ವೈರಲ್

ಸಮಗ್ರ ನ್ಯೂಸ್: ಭಾರತ್ ಜೋಡೋ ಯಾತ್ರೆ ಯುಪಿಗೆ ಕಾಲಿಟ್ಟಿದ್ದು, ಕಾಂಗ್ರೆಸ್ ನಾಯಕಿ ಮತ್ತು ರಾಹುಲ್ ಗಾಂಧಿ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಕೂಡ ಅದಕ್ಕೆ ಸೇರಿಕೊಂಡರು. ಈ ವೇಳೆ ವೇದಿಕೆ ಮೇಲೆಯೇ ಸಹೋದರಿ ಪ್ರಿಯಾಂಕಾ ಗಾಂಧಿಯನ್ನು ರಾಹುಲ್ ಅಪ್ಪಿ ಮುತ್ತಿಟ್ಟಿದ್ದು, ವಿಡಿಯೋ ಸಧ್ಯ ವೈರಲ್ ಆಗ್ತಿದೆ. ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ತಮ್ಮ ಸಹೋದರಿ ಪ್ರಿಯಾಂಕಾ ಅವರನ್ನ ಆತ್ಮೀಯವಾಗಿ ಸ್ವಾಗತಿಸಿದರು. ಇಬ್ಬರೂ ನಾಯಕರು ಒಟ್ಟಿಗೆ ವೇದಿಕೆ ಹಂಚಿಕೊಂಡು ಜನರನ್ನುದ್ದೇಶಿಸಿ ಮಾತನಾಡಿದರು. ಇದಕ್ಕೂ ಮುನ್ನ ರಾಹುಲ್ ಗಾಂಧಿ

ಭಾರತ್‌‌ ಜೋಡೋ ಯಾತ್ರೆಯಲ್ಲಿ ಸಹೋದರಿಯ ಅಪ್ಪಿ ಮುದ್ದಾಡಿದ ರಾಗಾ| ವಿಡಿಯೋ ವೈರಲ್ Read More »

ಮಾಜಿ ಸಚಿವ ಅರವಿಂದ ಲಿಂಬಾವಳಿಗೆ ಬಿಗ್ ಶಾಕ್| ಹಣ ವಂಚನೆ ಆರೋಪಿಸಿ ವ್ಯಕ್ತಿ ಹೆಸರು ಬರೆದಿಟ್ಟು ಆತ್ಮಹತ್ಯೆ

ಸಮಗ್ರ ನ್ಯೂಸ್: ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಸೇರಿದಂತೆ 6 ಜನರ ಹೆಸರು ಬರೆದಿಟ್ಟು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ದಕ್ಷಿಣ ತಾಲೂಕಿನ ನೆಟ್ಟಿಗೆರೆ ಗ್ರಾಮದ ಬಳಿ ನಡೆದಿದೆ. HSR ಲೇಔಟ್ ನಿವಾಸಿ 47 ವರ್ಷದ ಪ್ರದೀಪ್ ತನ್ನ ಕಾರಿನಲ್ಲೇ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್ ​ನೋಟ್​ನಲ್ಲಿ ಮಹದೇವಪುರ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಸೇರಿದಂತೆ ಒಟ್ಟು 6 ಪ್ರಭಾವಿ ರಾಜಕಾರಣಿಗಳ ಹೆಸರನ್ನು ಉಲ್ಲೇಖಿಸಲಾಗಿದೆ. ಮಾಜಿ ಸಚಿವ ಅರವಿಂದ ಲಿಂಬಾವಳಿ, ಜಿ.ರಮೇಶ್

ಮಾಜಿ ಸಚಿವ ಅರವಿಂದ ಲಿಂಬಾವಳಿಗೆ ಬಿಗ್ ಶಾಕ್| ಹಣ ವಂಚನೆ ಆರೋಪಿಸಿ ವ್ಯಕ್ತಿ ಹೆಸರು ಬರೆದಿಟ್ಟು ಆತ್ಮಹತ್ಯೆ Read More »

ಅಮಿತ್ ಶಾ ‘ಜನಸಂಕಲ್ಪ ಸಮಾವೇಶ’ ದಲ್ಲಿ ಜನರಿಗೆ ಹಣ ಹಂಚಿತೇ ಬಿಜೆಪಿ? ಟ್ವಿಟರ್ ನಲ್ಲಿ ಆರೋಪಿಸಿದ ಕಾಂಗ್ರೆಸ್

ಸಮಗ್ರ ನ್ಯೂಸ್: ಮಂಡ್ಯ ಜಿಲ್ಲೆಯಲ್ಲಿ ಇಂದು ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರು ಭಾಗವಹಿಸಿದ್ದ ‘ಜನ ಸಂಕಲ್ಪ ಸಮಾವೇಶ’ ಕಾರ್ಯಕ್ರಮಕ್ಕೆ ಜನರನ್ನು ಸೇರಿಸಲು ಬಿಜೆಪಿ ಮುಖಂಡರು ಹಣ ಹಂಚಿದ್ದಾರೆಂದು ಕಾಂಗ್ರೆಸ್ ಆರೋಪಿಸಿದೆ. ಈ ಕುರಿತ ವಿಡಿಯೋ ಒಂದನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್, ”ಹಿಂದಿನ ಜನಸಂಕಟ ಯಾತ್ರೆಯಲ್ಲಿ ಖಾಲಿ ಕುರ್ಚಿ ದರ್ಶನ ಪಡೆದ ಬಿಜೆಪಿ ಈಗ ಅಮಿತ್ ಶಾ ಎದುರು ಮಾನ ಉಳಿಸಿಕೊಳ್ಳಲು ಕುರ್ಚಿಗಳಿಗಷ್ಟೇ ಅಲ್ಲ ಕುರ್ಚಿ ಮೇಲೆ ಕೂರುವವರಿಗೂ ಹಣ ಕೊಟ್ಟು

ಅಮಿತ್ ಶಾ ‘ಜನಸಂಕಲ್ಪ ಸಮಾವೇಶ’ ದಲ್ಲಿ ಜನರಿಗೆ ಹಣ ಹಂಚಿತೇ ಬಿಜೆಪಿ? ಟ್ವಿಟರ್ ನಲ್ಲಿ ಆರೋಪಿಸಿದ ಕಾಂಗ್ರೆಸ್ Read More »

ದಾಖಲೆ ಬರೆದ ಮಾಜಿ ಮುಖ್ಯಮಂತ್ರಿ ಎಚ್.ಡಿ‌ ಕುಮಾರಸ್ವಾಮಿ| ಬೃಹತ್ ಹಾರಗಳು ಏಷ್ಯಾ ಮತ್ತು ಇಂಡಿಯನ್ ಬುಕ್ ಆಪ್ ರೆಕಾರ್ಡ್ ಗೆ ದಾಖಲೆಯತ್ತ…!

ಸಮಗ್ರ ನ್ಯೂಸ್: ಕಳೆದ ನವೆಂಬರ್ 18 ರಿಂದ ರಾಜ್ಯಾದ್ಯಂತ ಪಂಚರತ್ನ ರಥಯಾತ್ರೆ ಕೈಗೊಂಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಹೊಸ ದಾಖಲೆಗೆ ಪಾತ್ರರಾಗಿದ್ದಾರೆ. ಪಂಚರತ್ನ ರಥಯಾತ್ರೆಯಲ್ಲಿ ರಾಜ್ಯದ ಜನರು ವಿವಿಧ ಬಗೆಯ ಬೃಹತ್ ಹಾರಗಳನ್ನು ಹಾಕಿ ಗೌರವಿಸಿದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿಗಳು ‘ ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ‘ ಹಾಗೂ ‘ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ‘ ದಾಖಲೆಗೆ ಪಾತ್ರರಾಗಿದ್ದಾರೆ. ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ನಿನ್ನೆ ಇಡೀ ದಿನ ಯಾತ್ರೆ ನಡೆಸಿ ಕಳೆದ

ದಾಖಲೆ ಬರೆದ ಮಾಜಿ ಮುಖ್ಯಮಂತ್ರಿ ಎಚ್.ಡಿ‌ ಕುಮಾರಸ್ವಾಮಿ| ಬೃಹತ್ ಹಾರಗಳು ಏಷ್ಯಾ ಮತ್ತು ಇಂಡಿಯನ್ ಬುಕ್ ಆಪ್ ರೆಕಾರ್ಡ್ ಗೆ ದಾಖಲೆಯತ್ತ…! Read More »

ಚುನಾವಣಾ ಹಿನ್ನೆಲೆಯಲ್ಲಿ ಮತ್ತೊಂದು ಮಹತ್ವಾಕಾಂಕ್ಷಿ ಯೋಜನೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್| ಕಳಸಾ-ಬಂಡೂರಿ ನಾಲಾ ಯೋಜನೆಗೆ ಕೇಂದ್ರ ಜಲಶಕ್ತಿ‌ ಆಯೋಗ ಅನುಮತಿ

ಸಮಗ್ರ ನ್ಯೂಸ್: ಕರ್ನಾಟಕದ ಹಲವು ವರ್ಷಗಳ ಬೇಡಿಕೆಯಾದ ಕಳಸಾ-ಬಂಡೂರಿ ನಾಲಾ ವಿಸ್ತೃತ ಯೋಜನೆಗೆ ಕೇಂದ್ರ ಜಲಶಕ್ತಿ ಆಯೋಗ ಅನುಮತಿ ನೀಡಿದೆ.ಈ ಕುರಿತು ಸಿಎಂ ಬಸವರಾಜ್ ಬೊಮ್ಮಾಯಿ ವಿಧಾನಸಭೆಯಲ್ಲಿ ಮಾಹಿತಿ ನೀಡಿದ್ದು, ಕಳಸಾ-ಬಂಡೂರಿ ನಾಲಾ ಯೋಜನೆಯ ಡಿಪಿಆರ್ ಗೆ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಅನುಮತಿ ನೀಡಿದೆ.ಇದು ಉತ್ತರ ಕರ್ನಾಟಕ ಜನತೆಗೆ ಪ್ರಧಾನಿ ಮೋದಿ ಕೊಡುಗೆ ಎಂದಿದ್ದಾರೆ. ಉತ್ತರ ಕರ್ನಾಟಕ ಭಾಗದ ಮಹತ್ವದ ಯೋಜನೆಯಾಗಿದ್ದ ಕಳಸಾ ಬಂಡೂರಿ ಯೋಜನೆಗಾಗಿ 2002ರಿಂದ ಕಳಸಾದಿಂದ ಡೈವರ್ಟ್ ಮಾಡಲು ಚರ್ಚಿಸಲಾಗಿತ್ತು. ಆದರೆ ಗೋವಾ

ಚುನಾವಣಾ ಹಿನ್ನೆಲೆಯಲ್ಲಿ ಮತ್ತೊಂದು ಮಹತ್ವಾಕಾಂಕ್ಷಿ ಯೋಜನೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್| ಕಳಸಾ-ಬಂಡೂರಿ ನಾಲಾ ಯೋಜನೆಗೆ ಕೇಂದ್ರ ಜಲಶಕ್ತಿ‌ ಆಯೋಗ ಅನುಮತಿ Read More »

ಒಕ್ಕಲಿಗ, ಪಂಚಮಸಾಲಿ, ಲಿಂಗಾಯತ ಸಮುದಾಯಕ್ಕೆ ಗುಡ್ ನ್ಯೂಸ್| 2ಸಿ ಅಡಿ ಮೀಸಲಾತಿಗೆ ಸಚಿವ ಸಂಪುಟ‌ ಅಸ್ತು

ಸಮಗ್ರ ನ್ಯೂಸ್: ಪಂಚಮಸಾಲಿ ಸಮುದಾಯದ ಬಹುದಿನಗಳ ಬೇಡಿಕೆ ಈಡೇರಿದೆ. ಪ್ರಬಲ ಸಮುದಾಯಗಳ ಸತತ ಹೋರಾಟಕ್ಕೆ ಕೊನೆಗೂ ಫಲ ಸಿಕ್ಕಿದೆ. ಇದೀಗ ಪಂಚಮಸಾಲಿ, ಒಕ್ಕಲಿಗ ಹಾಗೂ ಲಿಂಗಾಯಿತ ಸಮುದಾಯಕ್ಕೆ ಮೀಸಲಾತಿ ನೀಡಲು ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ. ಈ ಕುರಿತು ಸಭೆ ಸೇರಿದ ಸಚಿವ ಸಂಪುಟ, ಮಹತ್ವದ ನಿರ್ಧಾರ ಘೋಷಿಸಿದೆ. ಪಂಚಮಸಾಲಿ ಸಮುದಾಯಕ್ಕೆ 2ಸಿ ಅಡಿ ಮೀಸಲಾತಿ ನೀಡಲಾಗಿದೆ. ಇನ್ನು ಒಕ್ಕಲಿಗೆ ಸಮುದಾಯಕ್ಕೆ ಹೊಸ ಪ್ರವರ್ಗ ಸೃಷ್ಟಿಸಲಾಗಿದೆ. ಒಕ್ಕಲಿಗ ಸಮುದಾಯಕ್ಕೆ 2ಸಿ ಅಡಿಯಲ್ಲಿ ಮೀಸಲಾತಿ ನೀಡಲು ಸಚಿವ ಸಂಪುಟಕ್ಕೆ

ಒಕ್ಕಲಿಗ, ಪಂಚಮಸಾಲಿ, ಲಿಂಗಾಯತ ಸಮುದಾಯಕ್ಕೆ ಗುಡ್ ನ್ಯೂಸ್| 2ಸಿ ಅಡಿ ಮೀಸಲಾತಿಗೆ ಸಚಿವ ಸಂಪುಟ‌ ಅಸ್ತು Read More »

ಅಮಿತ್ ಶಾ ಎದುರು ನಡುಬಗ್ಗಿಸಿ ನಿಲ್ಲಲು ಸದನವನ್ನೇ ಮೊಟಕುಗೊಳಿಸಿದ ಸರ್ಕಾರ – ಸಿದ್ದರಾಮಯ್ಯ ಕಿಡಿ

ಸಮಗ್ರ ನ್ಯೂಸ್: ರಾಜ್ಯಕ್ಕೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ವಿಧಾನ ಮಂಡಲದ ಅಧಿವೇಶನವನ್ನು ಮೊಟಕುಗೊಳಿಸಿರುವುದರ ಕುರಿತು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಅಮಿತ್‌ ಶಾ ಮುಂದೆ ನಡು ಬಗ್ಗಿಸಿ ನಿಲ್ಲುವುದಕ್ಕಾಗಿ ಸದನ್ನವನ್ನೇ ಮೊಟಕುಗೊಳಿಸಿರುವುದು ಎಷ್ಟರ ಮಟ್ಟಿಗೆ ಸರಿ? ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಸದನವನ್ನು ಒಂದು ವಾರ ವಿಸ್ತರಿಸಿ, ಜನರ ಸಮಸ್ಯೆಗಳ ಕುರಿತು ವಿಸ್ತೃತ ಚರ್ಚೆಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸುತ್ತೇನೆ. ಇನ್ನೂ ಹದಿನೈದು ದಿನ ಚರ್ಚಿಸಿದರೂ

ಅಮಿತ್ ಶಾ ಎದುರು ನಡುಬಗ್ಗಿಸಿ ನಿಲ್ಲಲು ಸದನವನ್ನೇ ಮೊಟಕುಗೊಳಿಸಿದ ಸರ್ಕಾರ – ಸಿದ್ದರಾಮಯ್ಯ ಕಿಡಿ Read More »