ಕೆಂಪೇಗೌಡರ ಕಾರ್ಯಕ್ರಮದಲ್ಲಿ ಟಿಪ್ಪುವನ್ನು ಎಳೆತಂದ ನಳಿನ್ ಕುಮಾರ್| ಗೌಡರ ಮುಂದೆ ಟಿಪ್ಪು ಏನೂ ಅಲ್ಲವೆಂದ ಬಿಜೆಪಿ ರಾಜ್ಯಾಧ್ಯಕ್ಷ
ಕೆಂಪೇಗೌಡರ ಕಂಚಿನ ಪ್ರತಿಮೆ ನಿರ್ಮಾಣ ಹಾಗೂ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಅವರ ಹೆಸರಿಡಬೇಕೆಂಬ ಸಂದರ್ಭದಲ್ಲಿ ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರಿಡಬೇಕೆಂಬ ಚರ್ಚೆಗಳು ಕೇಳಿ ಬಂತು. ಆದರೆ ಕೆಂಪೇಗೌಡರ ಎದುರು ಯಾವ ಟಿಪ್ಪು ಏನೂ ಅಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದರು. ಮಂಗಳೂರು ನಗರದ ಲೇಡಿಹಿಲ್ ಬಳಿ ಮನಪಾ ಈಜುಕೊಳದ ಆವರಣದಲ್ಲಿ ಬೆಂಗಳೂರಿನಲ್ಲಿ ಕೆಂಪೇಗೌಡರ ಪ್ರತಿಮೆ ನಿರ್ಮಾಣಕ್ಕೆ ಮಣ್ಣು ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಟಿಪ್ಪುವಿನ ನಿರಂತರ ದಾಳಿಗಳ ಬಗ್ಗೆ […]










