ರಾಜಕೀಯ

ಕೆಂಪೇಗೌಡರ ಕಾರ್ಯಕ್ರಮದಲ್ಲಿ ‌ಟಿಪ್ಪುವನ್ನು ಎಳೆತಂದ ನಳಿನ್ ಕುಮಾರ್| ಗೌಡರ ಮುಂದೆ ಟಿಪ್ಪು ಏನೂ ಅಲ್ಲವೆಂದ ಬಿಜೆಪಿ ರಾಜ್ಯಾಧ್ಯಕ್ಷ

ಕೆಂಪೇಗೌಡರ ಕಂಚಿನ ಪ್ರತಿಮೆ ನಿರ್ಮಾಣ ಹಾಗೂ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಅವರ ಹೆಸರಿಡಬೇಕೆಂಬ ಸಂದರ್ಭದಲ್ಲಿ ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರಿಡಬೇಕೆಂಬ ಚರ್ಚೆಗಳು ಕೇಳಿ ಬಂತು. ಆದರೆ ಕೆಂಪೇಗೌಡರ ಎದುರು ಯಾವ ಟಿಪ್ಪು ಏನೂ ಅಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದರು. ಮಂಗಳೂರು ನಗರದ ಲೇಡಿಹಿಲ್ ಬಳಿ‌ ಮನಪಾ ಈಜುಕೊಳದ ಆವರಣದಲ್ಲಿ ಬೆಂಗಳೂರಿನಲ್ಲಿ ಕೆಂಪೇಗೌಡರ ಪ್ರತಿಮೆ ನಿರ್ಮಾಣಕ್ಕೆ ಮಣ್ಣು ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಟಿಪ್ಪುವಿನ ನಿರಂತರ ದಾಳಿಗಳ ಬಗ್ಗೆ […]

ಕೆಂಪೇಗೌಡರ ಕಾರ್ಯಕ್ರಮದಲ್ಲಿ ‌ಟಿಪ್ಪುವನ್ನು ಎಳೆತಂದ ನಳಿನ್ ಕುಮಾರ್| ಗೌಡರ ಮುಂದೆ ಟಿಪ್ಪು ಏನೂ ಅಲ್ಲವೆಂದ ಬಿಜೆಪಿ ರಾಜ್ಯಾಧ್ಯಕ್ಷ Read More »

ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕಾರ

ಸಮಗ್ರ ನ್ಯೂಸ್: ಕನ್ನಡಿಗ ʻಮಲ್ಲಿಕಾರ್ಜುನ ಖರ್ಗೆʼ ಅವರು ಇಂದು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ದೆಹಲಿಯ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಕೇಂದ್ರ ಕಚೇರಿಯಲ್ಲಿ ನೂತನವಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆ ಇಂದು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು. ಈ ವೇಳೆ ಸಮಾರಂಭದಲ್ಲಿ ಸೋನಿಯಾ ಗಾಂಧಿ ಅವರು ಚುನಾವಣಾ ಪ್ರಮಾಣಪತ್ರವನ್ನು ಹಸ್ತಾಂತರಿಸಿದ್ದಾರೆ. 24 ವರ್ಷಗಳ ನಂತರ ಮೊದಲ ಬಾರಿಗೆ ಗಾಂಧಿಯೇತರರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಈ ಬಾರಿ ಗಾಂಧಿ ಕುಟುಂಬದವರು ಅಧ್ಯಕ್ಷ ಸ್ಥಾನಕ್ಕೆ

ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕಾರ Read More »

ಮಹಿಳೆಗೆ ಕಪಾಳಮೋಕ್ಷ ಪ್ರಕರಣ| ಸಚಿವ ವಿ.ಸೋಮಣ್ಣ ತಲೆದಂಡ!?

ಸಮಗ್ರ ನ್ಯೂಸ್: ತನ್ನ ಕಷ್ಟವನ್ನು ಹೇಳಿಕೊಳ್ಳಲು ಆಗಮಿಸಿದಂತ ಮಹಿಳೆಯೊಬ್ಬರಿಗೆ, ವಸತಿ ಸಚಿವ ವಿ.ಸೋಮಣ್ಣ ಕಪಾಳ ಮೋಕ್ಷ ಮಾಡಿದ ವೀಡಿಯೋ ಸಖತ್ ವೈರಲ್ ಆಗಿತ್ತು. ಈ ಬಳಿಕ ಮಹಿಳೆಯ ಕ್ಷಮೆ ಕೇಳಿದ್ದು, ಈ ಪ್ರಕರಣದಲ್ಲಿ ಸಚಿವ ವಿ.ಸೋಮಣ್ಣ ಅವರಿಗೆ ರಾಜೀನಾಮೆ ನೀಡುವಂತೆ ಬಿಜೆಪಿ ಹೈಕಮಾಂಡ್ ಸೂಚಿಸಿದೆ ಎನ್ನಲಾಗುತ್ತಿದೆ. ವಸತಿ ಸಚಿವ ವಿ.ಸೋಮಣ್ಣ ನಿನ್ನೆ ಚಾಮರಾಜನಗರದಲ್ಲಿ ವಿವಿಧ ಕಾರ್ಯಕ್ರಮದ ನಿಮಿತ್ತ ತೆರಳಿದ್ದ ಸಂದರ್ಭದಲ್ಲಿ, ಪರಿಶಿಷ್ಟ ಮಹಿಳೆಯೊಬ್ಬರು ತಮಗೆ ನಿವೇಶನ ಹಂಚಿಕೆ ಆಗಿಲ್ಲ. ದಯವಿಟ್ಟು ಕೊಡಿಸುವಂತೆ ಮನವಿ ಮಾಡಿಕೊಳ್ಳಲು ಮುಂದಾಗಿದ್ದರು. ಅಲ್ಲದೇ

ಮಹಿಳೆಗೆ ಕಪಾಳಮೋಕ್ಷ ಪ್ರಕರಣ| ಸಚಿವ ವಿ.ಸೋಮಣ್ಣ ತಲೆದಂಡ!? Read More »

ಬ್ರಿಟನ್ ಪ್ರಧಾನಿಯಾಗಿ ರಿಷಿ ಸುನಕ್ ಆಯ್ಕೆ| ಅ.28ರಂದು ಅಧಿಕಾರ ಸ್ವೀಕಾರ

ಸಮಗ್ರ ನ್ಯೂಸ್: ಭಾರತ ಮೂಲದ, ಇನ್ಫೋಸಿಸ್‌ ಸಂಸ್ಥಾಪಕ ಎನ್.ಆರ್. ನಾರಾಯಣಮೂರ್ತಿ ಅವರ ಅಳಿಯ ರಿಷಿ ಸುನಕ್‌ (Rishi Sunak) ಅವರು ಬ್ರಿಟನ್‌ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ಆ ಮೂಲಕ ಬ್ರಿಟನ್‌ ಪ್ರಧಾನಿಯಾಗಿ ಆಯ್ಕೆಯಾದ ಮೊದಲ ಅನಿವಾಸಿ ಭಾರತೀಯ ಎನಿಸಿದ್ದಾರೆ. ರಿಷಿ ಸುನಕ್‌ ಅವರಿಗೆ 196 ಸಂಸದರ ಬೆಂಬಲ ಸಿಕ್ಕಿದ್ದು, ಪೆನ್ನಿ ಮೋರ್ಡಾಂಟ್‌ ಅವರಿಗೆ ಕೇವಲ 27 ಸಂಸದರು ಬೆಂಬಲ ನೀಡಿದ್ದರು. ಹಾಗಾಗಿ, ರಿಷಿ ಅವರನ್ನು ನೂತನ ಪ್ರಧಾನಿಯನ್ನಾಗಿ ಘೋಷಣೆ ಮಾಡಲಾಗಿದ್ದು, ಅಕ್ಟೋಬರ್‌ 28ರಂದು ಪದಗ್ರಹಣ ಮಾಡಲಿದ್ದಾರೆ. ಲಿಜ್‌ ಟ್ರಸ್‌

ಬ್ರಿಟನ್ ಪ್ರಧಾನಿಯಾಗಿ ರಿಷಿ ಸುನಕ್ ಆಯ್ಕೆ| ಅ.28ರಂದು ಅಧಿಕಾರ ಸ್ವೀಕಾರ Read More »

ಕಾನೂನು ಕ್ರಮಕ್ಕೆ ಸೂಚಿಸಿದ ಸಚಿವ ಎಸ್.ಅಂಗಾರ| ಆರೋಪಿಗಳ ಪರ ವಾದಕ್ಕೆ ಖಂಡನೆ

ಸಮಗ್ರ ನ್ಯೂಸ್: ಕಡಬ ತಾಲೂಕಿನ ದೋಳ್ಪಾಡಿ ಗ್ರಾಮದಲ್ಲಿ ಬೆಡ್‌ಶೀಟ್‌ ಮಾರಾಟದ ನೆಪದಲ್ಲಿ ಬಂದ ಇಬ್ಬರು ಯುವಕರು ದಲಿತ ಮಹಿಳೆಯ ಅತ್ಯಾಚಾರಕ್ಕೆ ಯತ್ನಿಸಿದ್ದು, ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಆದರೆ ಕೆಲವು ಕಾಂಗ್ರೆಸ್‌ ನಾಯಕರು ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಗಳ ಪರವಾಗಿ ವಾದಿಸುತ್ತಿರುವುದು ಖಂಡನೀಯ ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್‌.ಅಂಗಾರ ತಿಳಿಸಿದ್ದಾರೆ. ದಲಿತ ಮಹಿಳೆಯ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ್‌ ಇಲಾಖೆಗೆ ಸೂಚನೆ ನೀಡಲಾಗಿದೆ. ಕೆಲವು ಕಾಂಗ್ರೆಸ್‌ ನಾಯಕರು

ಕಾನೂನು ಕ್ರಮಕ್ಕೆ ಸೂಚಿಸಿದ ಸಚಿವ ಎಸ್.ಅಂಗಾರ| ಆರೋಪಿಗಳ ಪರ ವಾದಕ್ಕೆ ಖಂಡನೆ Read More »

ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಗೆ ಸಚಿವ ಸೋಮಣ್ಣ ಕಪಾಳ ಮೋಕ್ಷ!

ಸಮಗ್ರ ನ್ಯೂಸ್: ಸಮಸ್ಯೆ ಹೇಳಲು ಬಂದ ಮಹಿಳೆಗೆ ವಸತಿ ಸಚಿವ ಸೋಮಣ್ಣ ಕಪಾಳಮೋಕ್ಷ ಮಾಡಿರೋ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ನಡೆದಿದೆ. ಹಂಗಳ ಗ್ರಾಮದಲ್ಲಿ ನಿನ್ನೆ 175 ಗ್ರಾಮಸ್ಥರಿಗೆ ನಿವೇಶನ ಹಕ್ಕುಪತ್ರ ವಿತರಣೆ ಕಾರ್ಯಕ್ರಮ ನಿಗದಿಯಾಗಿತ್ತು. ಮಧ್ಯಾಹ್ನ 3.30ಕ್ಕೆ ನಿಗದಿಯಾಗಿದ್ದ ಕಾರ್ಯಕ್ರಮಕ್ಕೆ ಸಂಜೆ 6.30ಕ್ಕೆ ಆಗಮಿಸಿದ್ದ ಸಚಿವರ ಬಳಿ ಮಹಿಳೆ ಸಮಸ್ಯೆ ಹೇಳಿಕೊಳ್ಳಲು ಬಂದಿದ್ದರು. ನಿವೇಶನದ ಹಕ್ಕುಪತ್ರ ಪಡೆಯಲು ನೂಕುನುಗ್ಗಲು ಸಂಭವಿಸಿತ್ತು. ಇದೇ ವೇಳೆ ಮಹಿಳೆ ಸಚಿವರ ಬಳಿ ತೆರಳಿದ್ದ ಸಂದರ್ಭದಲ್ಲಿ ತಾಳ್ಮೆ ಕಳೆದುಕೊಂಡ

ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಗೆ ಸಚಿವ ಸೋಮಣ್ಣ ಕಪಾಳ ಮೋಕ್ಷ! Read More »

ವಿಧಾನ ಪರಿಷತ್ ಉಪಸಭಾಪತಿ ಆನಂದ ಮಾಮನಿ ವಿಧಿವಶ

ಸಮಗ್ರ ನ್ಯೂಸ್: ಸವದತ್ತಿ ಯಲ್ಲಮ್ಮ ಕ್ಷೇತ್ರದ ಶಾಸಕ, ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ (56) ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಶನಿವಾರ ತಡರಾತ್ರಿ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಶಾಸಕ ಆನಂದ ಮಾಮನಿ ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ ನಿಧನರಾಗಿದ್ದಾರೆ. ಆನಂದ್ (ವಿಶ್ವನಾಥ್) ಚಂದ್ರಶೇಖರ್ ಮಾಮನಿ ಅವರು ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿ ಜನವರಿ 18, 1966 ಜನಿಸಿದರು. ತಂದೆ ಚಂದ್ರಶೇಖರ ಮಲ್ಲಿಕಾರ್ಜುನ ಮಾಮನಿ, ತಾಯಿ ಶ್ರೀಮತಿ ಗಂಗಮ್ಮ ಮಾಮನಿ. ಹಿಂದೂ

ವಿಧಾನ ಪರಿಷತ್ ಉಪಸಭಾಪತಿ ಆನಂದ ಮಾಮನಿ ವಿಧಿವಶ Read More »

ಭಾರತ್ ಜೋಡೋ ಯಾತ್ರೆ| ರಾಹುಲ್ ಜೊತೆ ಹೆಜ್ಜೆ ಹಾಕಿದ ನಟಿ ರಮ್ಯಾ

ಸಮಗ್ರ ನ್ಯೂಸ್: ಕಾಂಗ್ರೆಸ್‌ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ಸ್ಥಾನದಿಂದ ಹೊರ ಬಂದಿದ್ದ ನಟಿ, ರಾಜಕಾರಣಿ ರಮ್ಯಾ ಅವರು ಶನಿವಾರ ರಾಯಚೂರಿನಲ್ಲಿ ನಡೆದ ಭಾರತ ಐಕ್ಯತಾ ಯಾತ್ರೆಯಲ್ಲಿ ರಾಹುಲ್‌ಗಾಂಧಿ ಜತೆ ಹೆಜ್ಜೆ ಹಾಕಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ರಮ್ಯಾ ಅವರು 2013ರ ಲೋಕಸಭೆ ಉಪಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಗೆಲುವು ಸಾಧಿಸುವ ಮೂಲಕ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದರು. ನಂತರ 2014ರ ಸಾರ್ವತ್ರಿಕ ಲೋಕಸಭೆ ಚುನಾವಣೆಯಲ್ಲಿ ಪರಾಭವಗೊಂಡಿದ್ದರು. ಕೆಲವು ದಿನಗಳ ಬಳಿಕ ಕಾಂಗ್ರೆಸ್‌ನ ಸಾಮಾಜಿಕ ಜಾಲತಾಣದ ಮುಖ್ಯಸ್ಥ ಸ್ಥಾನ ಬಿಟ್ಟ

ಭಾರತ್ ಜೋಡೋ ಯಾತ್ರೆ| ರಾಹುಲ್ ಜೊತೆ ಹೆಜ್ಜೆ ಹಾಕಿದ ನಟಿ ರಮ್ಯಾ Read More »

ಮೂಡಿಗೆರೆ:ಶಾಸಕ ಕುಮಾರಸ್ವಾಮಿ ಮನೆ ಮುಂದೆ ಧರಣಿನಿರತ ರೈತರ ಬಂಧನ

ಸಮಗ್ರ ನ್ಯೂಸ್: ರಸ್ತೆ ದುರಸ್ಥಿಗೆ ಆಗ್ರಹಿಸಿ ಶಾಸಕರ ಮನೆ ಮುಂದೆ ಧರಣಿ ನಡೆಸುತ್ತಿದ್ದ ಐವತ್ತು ಹೆಚ್ಚು ರೈತರನ್ನು ಬಂಧಿಸಿರುವ ಘಟನೆ ಜಿಲ್ಲೆ ಮೂಡಿಗೆರೆ ತಾಲೂಕಿನ ಕೆಲ್ಲೂರು ಗ್ರಾಮದಲ್ಲಿ ನಡೆದಿದೆ. ಮೂಡಿಗೆರೆ ತಾಲೂಕಿನ ಅರಳಿಮರ, ಗಂಜಲಗೋಡು, ಹಳುವಳ್ಳಿ, ಮತ್ತಿಕೆರೆ ಸೇರಿದಂತೆ ಹತ್ತಾರು ಹಳ್ಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ದುರಸ್ಥಿಗೆ ಆಗ್ರಹಿಸಿ ರೈತ ಸಂಘ ಕೆಲ್ಲೂರು ಗ್ರಾಮದಲ್ಲಿರುವ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಮನೆ ಎದುರು ಪ್ರತಿಭಟನೆ ನಡೆಸುತ್ತಿದ್ದರು. ಪೊಲೀಸರು ಮನವೊಲಿಸಿದರೂ ರೈತರ ಸಂಘದ ಸದಸ್ಯರು ಮಾತು ಕೇಳದ ಹಿನ್ನೆಲೆ ಪೊಲೀಸರು

ಮೂಡಿಗೆರೆ:ಶಾಸಕ ಕುಮಾರಸ್ವಾಮಿ ಮನೆ ಮುಂದೆ ಧರಣಿನಿರತ ರೈತರ ಬಂಧನ Read More »

ಬ್ರಿಟನ್ ಪ್ರಧಾನಿ ಲೀಸ್ ಟ್ರಸ್ ರಾಜೀನಾಮೆ| ಅಧಿಕಾರ ವಹಿಸಿ 45 ದಿನಗಳಲ್ಲಿ ಪ್ರಧಾನಿ ಸ್ಥಾನಕ್ಕೆ ಗುಡ್ ಬೈ

ಸಮಗ್ರ ನ್ಯೂಸ್: ಬ್ರಿಟನ್’ನಲ್ಲಿ ರಾಜಕೀಯ ಅರಾಜಕತೆ ತೀವ್ರಗೊಳ್ಳುತ್ತಿದ್ದಂತೆ ಲಿಜ್ ಟ್ರಸ್ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಆರ್ಥಿಕ ಬಿಕ್ಕಟ್ಟಿನ ನಂತರ ಅಧಿಕಾರ ವಹಿಸಿಕೊಂಡ ಕೇವಲ 45 ದಿನಗಳ ನಂತರ ಲಿಜ್ ಟ್ರಸ್ ಯುಕೆಯ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. 50 ದಿನಗಳಿಗಿಂತ ಕಡಿಮೆ ಅವಧಿಗೆ ಅಡಳಿತ ನಡೆಸುವ ಮೂಲಕ ಟ್ರಸ್ ಬ್ರಿಟಿಷ್ ಇತಿಹಾಸದಲ್ಲಿ ಅತ್ಯಂತ ಕಡಿಮೆ ಸೇವೆ ಸಲ್ಲಿಸಿದ ಪ್ರಧಾನಿಯಾಗಿದ್ದಾರೆ. ಇನ್ನು ಮುಂದಿನ ವಾರದೊಳಗೆ ನಾಯಕತ್ವದ ಚುನಾವಣೆ ಪೂರ್ಣಗೊಳ್ಳಲಿದೆ. ‘ಪರಿಸ್ಥಿತಿಯನ್ನು ಗಮನಿಸಿದರೆ, ನನಗೆ ನೀಡಿದ ಜನಾದೇಶವನ್ನು

ಬ್ರಿಟನ್ ಪ್ರಧಾನಿ ಲೀಸ್ ಟ್ರಸ್ ರಾಜೀನಾಮೆ| ಅಧಿಕಾರ ವಹಿಸಿ 45 ದಿನಗಳಲ್ಲಿ ಪ್ರಧಾನಿ ಸ್ಥಾನಕ್ಕೆ ಗುಡ್ ಬೈ Read More »