ರಾಜಕೀಯ

ಆಪ್ ಜೊತೆ ಮೈತ್ರಿ/ ದೆಹಲಿ ಪ್ರದೇಶ ಕಾಂಗ್ರೆಸ್ ಘಟಕದ ಅಧ್ಯಕ್ಷ ರಾಜೀನಾಮೆ

ಸಮಗ್ರ ನ್ಯೂಸ್: ಆಮ್ ಆದ್ಮಿ ಪಕ್ಷ (ಆಪ್)ದ ಜತೆ ಮೈತ್ರಿ ಮಾಡಿಕೊಂಡಿರುವುದನ್ನು ವಿರೋಧಿಸಿ ದೆಹಲಿ ಪ್ರದೇಶ ಕಾಂಗ್ರೆಸ್ ಘಟಕದ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ಅವರು ರಾಜೀನಾಮೆ ನೀಡಿದ್ದಾರೆ. ದೆಹಲಿಯ ಕಾಂಗ್ರೆಸ್ ಘಟಕ ಆಪ್ ಜತೆಗಿನ ಮೈತ್ರಿಗೆ ವಿರುದ್ಧವಿತ್ತು. ಆದರೂ ಪಕ್ಷದ ಹೈಕಮಾಂಡ್ ಮೈತ್ರಿ ಮಾಡಿಕೊಂಡಿದೆ. ದೆಹಲಿ ಘಟಕದ ನಾಯಕರು ಸರ್ವಾನುಮತದಿಂದ ತೆಗೆದುಕೊಳ್ಳುವ ನಿರ್ಧಾರಗಳನ್ನು ಎಐಸಿಸಿ ದೆಹಲಿ ಉಸ್ತುವಾರಿಯಾಗಿರುವ ದೀಪಕ್ ಬಾಬ್ರಿಯಾ ಅವರು ತಿರಸ್ಕರಿಸುತ್ತಿದ್ದಾರೆ ಎಂದು ದೂರಿ ಲವ್ಲಿ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ […]

ಆಪ್ ಜೊತೆ ಮೈತ್ರಿ/ ದೆಹಲಿ ಪ್ರದೇಶ ಕಾಂಗ್ರೆಸ್ ಘಟಕದ ಅಧ್ಯಕ್ಷ ರಾಜೀನಾಮೆ Read More »

ಮುಂಬೈ : ಕಾಂಗ್ರೆಸ್‌ ಪಕ್ಷಕ್ಕೆ ಮುಸ್ಲಿಮರ ಮತ ಬೇಕು, ಆದರೆ ಮುಸ್ಲಿಮ್‌ ಅಭ್ಯರ್ಥಿ ಬೇಡ ಎಂದ ನಸೀಮ್‌ ಖಾನ್‌

ಸಮಗ್ರ ನ್ಯೂಸ್‌ : ಕಾಂಗ್ರೆಸ್‌ಗೆ ಮುಸ್ಲಿಮರ ಮತ ಬೇಕು. ಆದರೆ ಮುಸ್ಲಿಮ್‌ ಅಭ್ಯರ್ಥಿ ಬೇಡ ಎಂದು ಹೇಳಿರುವ ನಸೀಮ್‌ ಖಾನ್‌ ಪಕ್ಷದ ವಿರುದ್ಧ ಸಿಟ್ಟಾಗಿದ್ದು ನಾನು ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಪ್ರಚಾರ ನಡೆಸುವುದಿಲ್ಲ ಎಂದು ತಿಳಿಸಿದ್ದಾರೆ. ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆಗೆ ಮಹಾ ವಿಕಾಸ್ ಅಘಾಡಿ ಯಾವುದೇ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಅವರು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದು ಪ್ರಚಾರದಿಂದ ಹಿಂದೆ ಸರಿಯುತ್ತಿರುವುದಾಗಿ ತಿಳಿಸಿದ್ದಾರೆ ಎಂಬ ಮಾಹಿತಿ ತಿಳಿದು

ಮುಂಬೈ : ಕಾಂಗ್ರೆಸ್‌ ಪಕ್ಷಕ್ಕೆ ಮುಸ್ಲಿಮರ ಮತ ಬೇಕು, ಆದರೆ ಮುಸ್ಲಿಮ್‌ ಅಭ್ಯರ್ಥಿ ಬೇಡ ಎಂದ ನಸೀಮ್‌ ಖಾನ್‌ Read More »

ಯಾದಗಿರಿ : ಮೋದಿ ಮತ್ತೊಮ್ಮೆ ಪ್ರಧಾನಿ ಆದ್ರೆ ಮುಸ್ಲಿಂ ಮೀಸಲಾತಿ ತೆಗೆಯುತ್ತೇವೆ-ಯತ್ನಾಳ್

ಸಮಗ್ರ ನ್ಯೂಸ್‌ : ಮೋದಿ ಮತ್ತೊಮ್ಮೆ ಪ್ರಧಾನಿಯಾದರೆ ಮುಸ್ಲಿಂ ಮೀಸಲಾತಿ ತೆಗೆಯುತ್ತೇವೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಅವರು ಯಾದಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ದಲಿತರು ಮತ್ತು ಹಿಂದುಳಿದವರಿಗೆ ಕಾಂಗ್ರೆಸ್ ಭಾರೀ ಮೋಸ ಮಾಡಿದೆ. ಸಂವಿಧಾನದಲ್ಲಿ ಕೇವಲ ಎಸ್‍ಸಿ, ಎಸ್‍ಟಿ, ಅಲ್ಪಸಂಖ್ಯಾತರು, ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದವರಿಗೆ ಮಾತ್ರ ಮೀಸಲಾತಿ ನೀಡಲಾಗಿದೆ. ಮುಸ್ಲಿಂ ಧರ್ಮಕ್ಕೆ ಮೀಸಲಾತಿ ಕೊಡಲು ಬರುವುದಿಲ್ಲ. ಮೂರನೇ ಬಾರಿ ಪ್ರಧಾನಿಯಾದ ಬಳಿಕ ಮೊದಲು ಮುಸ್ಲಿಂ ಮೀಸಲಾತಿ ತೆಗೆದು ಹಾಕುತ್ತೇವೆ. ಅದನ್ನು ಎಸ್‍ಸಿ,

ಯಾದಗಿರಿ : ಮೋದಿ ಮತ್ತೊಮ್ಮೆ ಪ್ರಧಾನಿ ಆದ್ರೆ ಮುಸ್ಲಿಂ ಮೀಸಲಾತಿ ತೆಗೆಯುತ್ತೇವೆ-ಯತ್ನಾಳ್ Read More »

ಲೋಕಸಭಾ ಚುನಾವಣೆ – 2024| ಮೊದಲ ಹಂತದ ಬಹಿರಂಗ ಪ್ರಚಾರಕ್ಕೆ ಇಂದು ತೆರೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮೊದಲ ಹಂತದ ಮತದಾನಕ್ಕೆ ಒಂದೇ ದಿನ ಬಾಕಿ ಇದೆ. ಲೋಕ ಸಮರದಲ್ಲಿ ಗೆಲುವಿಗೆ ಕಾಂಗ್ರೆಸ್ ಮತ್ತು ಕಮಲ-ದಳ ಮೈತ್ರಿ ಪಡೆ ಅಬ್ಬರದ ಪ್ರಚಾರ ನಡೆಸಿ, ಭರ್ಜರಿ ಮತಯಾಚನೆ ಮಾಡಿದೆ. ಇವತ್ತು ರಾಜ್ಯದ 14 ಕ್ಷೇತ್ರ ಮೊದಲ ಹಂತದ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಮೊದಲ ಹಂತದ 14 ಕ್ಷೇತ್ರಗಳಲ್ಲಿ ಇಂದು ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರ ಮುಕ್ತಾಯವಾಗಲಿದೆ. ಈ ಹಿನ್ನೆಲೆ ಕೊನೆ ದಿನ ಎಲ್ಲಾ ಪಕ್ಷದ ಅಭ್ಯರ್ಥಿಗಳು ಅಬ್ಬರದ ಪ್ರಚಾರಕ್ಕೆ

ಲೋಕಸಭಾ ಚುನಾವಣೆ – 2024| ಮೊದಲ ಹಂತದ ಬಹಿರಂಗ ಪ್ರಚಾರಕ್ಕೆ ಇಂದು ತೆರೆ Read More »

ಪ್ರಚಾರದ ವೇಳೆ ಮೈತ್ರಿ ಅಭ್ಯರ್ಥಿ ಹಾಗೂ ಕಾಂಗ್ರೆಸ್ ಶಾಸಕರ ನಡುವೆ ಕಿರಿಕಿರಿ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಅಬ್ಬರದ ಪ್ರಚಾರವನ್ನು ಎಲ್ಲಾ ಪಕ್ಷಗಳು ನಡೆಸುತ್ತಿದೆ. ಅದರಂತೆ ಇಂದು ಕೋಲಾರ ಜಿಲ್ಲೆ ಬಂಗಾರಪೇಟೆ ಪಟ್ಟಣದಲ್ಲಿ ಮೈತ್ರಿ ಅಭ್ಯರ್ಥಿ ರೋಡ್​ ಶೋ ನಡೆಸಿದ್ದು, ಈ ವೇಳೆ ಕಿರಿಕ್ ಉಂಟಾಗಿದೆ. ಮೈತ್ರಿ ಅಭ್ಯರ್ಥಿ ಮಲ್ಲೇಶ್​ ಬಾಬು ರೋಡ್​ ಶೋಗೆ ರಸ್ತೆಯಲ್ಲಿ ಜನ ಜಮಾಯಿಸಿದ್ಧರು. ಈ ವೇಳೆ ಕಾರಿನಲ್ಲಿ ಬಂದ ಬಂಗಾರಪೇಟೆ ಕಾಂಗ್ರೆಸ್ ಶಾಸಕ ಎಸ್​.ಎನ್​ನಾರಾಯಣಸ್ವಾಮಿ ಎದುರು ಬಿಜೆಪಿ ಹಾಗೂ ಜೆಡಿಎಸ್​ ಕಾರ್ಯಕರ್ತರು ಮೋದಿ ಮೋದಿ ಎಂದು ಘೋಷಣೆ ಕೂಗಿದ್ದಾರೆ. ಈ ಹಿನ್ನೆಲೆ ಕಾರಿನಿಂದ

ಪ್ರಚಾರದ ವೇಳೆ ಮೈತ್ರಿ ಅಭ್ಯರ್ಥಿ ಹಾಗೂ ಕಾಂಗ್ರೆಸ್ ಶಾಸಕರ ನಡುವೆ ಕಿರಿಕಿರಿ Read More »

ಲೋಕಸಭೆ ಚುನಾವಣೆ ಹಿನ್ನೆಲೆ ಜಿಲ್ಲಾದ್ಯಂತ ಮಧ್ಯಮಾರಾಟ ನಿಷೇಧ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ – 2024ನ್ನು ಸುಸೂತ್ರವಾಗಿ ನಡೆಸಲು ಹಾಗೂ ಶಾಂತಿಯುತ ಸುವ್ಯವಸ್ಧೆಯನ್ನು ಕಾಪಾಡುವ ದೃಷ್ಟಿಯಿಂದ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳು ಆಗಿರುವ ವೆಂಕಟ್ ರಾಜಾ ಅವರು ಜಿಲ್ಲಾದ್ಯಂತ ಮಧ್ಯ ಮಾರಾಟ ನಿಷೇಧ ಆದೇಶ ಹೊರಡಿಸಿದ್ದಾರೆ. ಎ.24 ರಂದು ಸಂಜೆ 5 ಗಂಟೆಯಿಂದ ಎ.26 ರ ಮಧ್ಯರಾತ್ರಿ 12 ಗಂಟೆವರೆಗೆ ಮತ್ತು ಜೂ.3 ರಂದು ಸಂಜೆ 5 ಗಂಟೆಯಿಂದ ಜೂ.4 ರ ಮಧ್ಯರಾತ್ರಿ 12 ಗಂಟೆವರೆಗೆ ಕೊಡಗು ಜಿಲ್ಲೆಯಾದ್ಯಂತ ಎಲ್ಲಾ ವಿಧದ ಮಧ್ಯಗಳ ಸಾಗಣಿಕೆ, ಶೇಕರಣೆ

ಲೋಕಸಭೆ ಚುನಾವಣೆ ಹಿನ್ನೆಲೆ ಜಿಲ್ಲಾದ್ಯಂತ ಮಧ್ಯಮಾರಾಟ ನಿಷೇಧ Read More »

ಬರ ಪರಿಹಾರ ಕುರಿತು ಕೇಂದ್ರಕ್ಕೆ ಸುಪ್ರೀಂ ನಿರ್ದೇಶನ ನೀಡಿಲ್ಲ – ಆರ್.ಅಶೋಕ್

ಸಮಗ್ರ ನ್ಯೂಸ್: ಬರ ಪರಿಹಾರ ಬಿಡುಗಡೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಕೇಂದ್ರಕ್ಕೆ ಯಾವುದೇ ನಿರ್ದೇಶನ ನೀಡಿಲ್ಲ. ಕೇಂದ್ರ ಸರ್ಕಾರವೇ ಚುನಾವಣಾ ಆಯೋಗದ ಅನುಮತಿ ಕೇಳಿದ್ದು, ಅದಕ್ಕೆ ಚುನಾವಣಾ ಆಯೋಗ ಅನುಮತಿ ನೀಡಿದೆ. ಈ ವಿಷಯವನ್ನು ನ್ಯಾಯಾಲಯದ ಗಮನಕ್ಕೆ ತಂದಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಹೇಳಿದರು. ಬಿಜೆಪಿ ಮಾಧ್ಯಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದನ್ನೇ ಕಾಂಗ್ರೆಸ್‌ ಪಕ್ಷ ತಮಗೆ ಸಿಕ್ಕ ವಿಜಯ ಎಂಬಂತೆ ಬಿಂಬಿಸಿಕೊಳ್ಳುತ್ತಿದೆ ಎಂದು ಕುಟುಕಿದರು. ರಾಜ್ಯದಲ್ಲಿ ಹಿಂದೂಗಳ ಮೇಲೆ ಹಲ್ಲೆ, ದೌರ್ಜನ್ಯ

ಬರ ಪರಿಹಾರ ಕುರಿತು ಕೇಂದ್ರಕ್ಕೆ ಸುಪ್ರೀಂ ನಿರ್ದೇಶನ ನೀಡಿಲ್ಲ – ಆರ್.ಅಶೋಕ್ Read More »

ಕಾಂಗ್ರೆಸ್‌ ರಾಜ್ಯಗಳಲ್ಲಿ ಹನುಮಾನ್‌ ಚಾಲೀಸಾ ಹೇಳುವುದೂ ಮಹಾ ಅಪರಾಧ| ಸಿದ್ದರಾಮಯ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಮೋದಿ

ಸಮಗ್ರ ನ್ಯೂಸ್: ಲೋಕ ಚುನಾವಣೆಗೆ ದಿನಗಣನೆ ಬಾಕಿ ಇದೆ ಅಷ್ಟೇ, ಇದೇ ಹೊತ್ತಲ್ಲಿ ಕಾಂಗ್ರೆಸ್ ಬಿಜೆಪಿ ನಡುವೆ ಮಾತಿನ ವಾಗ್ಯುದ್ದ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ರಾಜಸ್ಥಾನದಲ್ಲಿ ತಮ್ಮ ಚುನಾವಣಾ ಪ್ರಚಾರದ ವೇಳೆ ಕರ್ನಾಟಕದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಕಾಂಗ್ರೆಸ್‌ ಆಡಳಿತ ಇರುವ ರಾಜ್ಯಗಳಲ್ಲಿ ಹನುಮಾನ್‌ ಚಾಲೀಸಾ ಹೇಳುವುದೂ ಮಹಾ ಅಪರಾಧ. ಶೋಭಾ ಯಾತ್ರೆ ನಡೆಸಲೂ ಅಲ್ಲಿ ಅವಕಾಶ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್‌

ಕಾಂಗ್ರೆಸ್‌ ರಾಜ್ಯಗಳಲ್ಲಿ ಹನುಮಾನ್‌ ಚಾಲೀಸಾ ಹೇಳುವುದೂ ಮಹಾ ಅಪರಾಧ| ಸಿದ್ದರಾಮಯ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಮೋದಿ Read More »

ಕಾಂಗ್ರೆಸ್ ವಿರುದ್ಧ ಚುನಾವಣಾ ಆಯೋಗಕ್ಕೆ ಟಿ.ಎ.ಶರವಣ ದೂರು

ಸಮಗ್ರ ನ್ಯೂಸ್: ಮತದಾರರನ್ನು ಸೆಳೆಯುವ ಉದ್ದೇಶದಿಂದ ಚುನಾವಣಾ ಲಂಚ ಹಾಗೂ ಗ್ಯಾರಂಟಿ ಕಾರ್ಡ್‌ಗಳನ್ನು ವಿತರಿಸುತ್ತಿರುವ ಕಾಂಗ್ರೆಸ್‌ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಎಂಎಲ್‌ಸಿ ಟಿ.ಎ.ಶರವಣ ಅವರ ನೇತೃತ್ವದಲ್ಲಿ ಜೆಡಿಎಸ್‌ ಮುಖಂಡರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಕಾಂಗ್ರೆಸ್ ಹಲವಾರು ಭರವಸೆಗಳು ಮತ್ತು ಆಶ್ವಾಸನೆಗಳನ್ನು ಘೋಷಿಸುವ ಮೂಲಕ ಸಮಾಜದ ವಿವಿಧ ಗುಂಪುಗಳನ್ನು ದಾರಿ ತಪ್ಪಿಸಲು ಪ್ರಯತ್ನಿಸುತ್ತಿದೆ. ಇದು ಗ್ಯಾರಂಟಿ ಕಾರ್ಡ್‌ಗಳು ಚುನಾವಣಾ ಆಮಿಷವಾಗಿದ್ದು, ಇಂತಹವುಗಳ ಮೇಲೆ ನಿರ್ಬಂಧ ವಿಧಿಸಬೇಕು ಎಂದು ಎಂಎಲ್‌ಸಿ ಟಿ.ಎ.ಶರವಣ ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ವಿರುದ್ಧ ಚುನಾವಣಾ ಆಯೋಗಕ್ಕೆ ಟಿ.ಎ.ಶರವಣ ದೂರು Read More »

ಚುನಾವಣೆಗೆ ಮೊದಲೇ ಖಾತೆ ತೆರೆದ ಬಿಜೆಪಿ| ಸೂರತ್ ನಲ್ಲಿ‌‌ ಅವಿರೋಧವಾಗಿ ಆಯ್ಕೆಯಾದ ಬಿಜೆಪಿ ಅಭ್ಯರ್ಥಿ

ಸಮಗ್ರ ನ್ಯೂಸ್: ಗುಜರಾತ್‌ನ ಸೂರತ್‌ ಕ್ಷೇತ್ರದಿಂದ ಬಿಜೆಪಿಯ ಮುಕೇಶ್‌ ದಲಾಲ್‌ ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಅಧಿಕೃತವಾಗಿ ಘೋಷಿಸಲಾಗಿದೆ. ಅವರಿಗೆ ಚುನಾವಣಾಧಿಕಾರಿಗಳು ವಿಜೇತರ ಪ್ರಮಾಣಪತ್ರ ನೀಡಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ನಿಲೇಶ್‌ ಕುಂಭಾನಿ ಅವರ ನಾಮಪತ್ರವನ್ನು ಚುನಾವಣಾಧಿಕಾರಿಗಳು ತಿರಸ್ಕರಿಸಿದ್ದರೆ ಉಳಿದ ಎಲ್ಲಾ ಅಭ್ಯರ್ಥಿಗಳು ಕಣದಿಂದ ಹಿಂದೆ ಸರಿದಿದ್ದಾರೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ಅಭ್ಯರ್ಥಿಗಳ ಹೊರತಾಗಿ ಬಹುಜನ ಸಮಾಜದ ಪ್ಯಾರೆಲಾಲ್‌ ಭಾರತಿ ಸಹಿತ ಎಂಟು ಮಂದಿ ಇತರ ಅಭ್ಯರ್ಥಿಗಳಿದ್ದರು. ಕಣದಿಂದ ಹಿಂದೆ ಸರಿದವರಲ್ಲಿ ಪ್ಯಾರೆಲಾಲ್‌ ಕೊನೆಯವರಾಗಿದ್ದರು. ಸಾಕ್ಷಿಗಳಾಗಿ ಸಹಿ ಹಾಕಿದವರ

ಚುನಾವಣೆಗೆ ಮೊದಲೇ ಖಾತೆ ತೆರೆದ ಬಿಜೆಪಿ| ಸೂರತ್ ನಲ್ಲಿ‌‌ ಅವಿರೋಧವಾಗಿ ಆಯ್ಕೆಯಾದ ಬಿಜೆಪಿ ಅಭ್ಯರ್ಥಿ Read More »