ರಾಜಕೀಯ

ಉಪ ಚುನಾವಣೆ ಬೆನ್ನಲ್ಲೇ ದಲಿತರ ಇಡೀ ಗ್ರಾಮಕ್ಕೆ ಬೆಂಕಿ ಹಚ್ಚಿ ಕಲ್ಲು ತೂರಿದ ದುಷ್ಕರ್ಮಿಗಳು!

ಸಮಗ್ರ ನ್ಯೂಸ್:ಉಪಚುನಾವಣೆ ಬೆನ್ನಲ್ಲೇ ದಲಿತ ಇಡೀ ಗ್ರಾಮಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಆಘಾತಕಾರಿ ಘಟನೆ ಮಧ್ಯಪ್ರದೇಶದ ವಿಜಯಪುರ ವಿಧಾನಸಭಾ ಕ್ಷೇತ್ರದ ಗೋಥಾ ಗ್ರಾಮದಲ್ಲಿ ನಡೆದಿದೆ. ನ.13 ರಂದು ವಿಧಾನಸಭೆಯ ಉಪಚುನಾವಣೆ ನಡೆದ ಬೆನ್ನಲ್ಲೇ ದುಷ್ಕರ್ಮಿಗಳು ನ.14 ರಂದು ದಲಿತರ ಪ್ರಾಬಲ್ಯ ಇರುವ ಗ್ರಾಮದಲ್ಲಿ ಕಲ್ಲು ತೂರಾಟ ನಡೆಸಿ ಬೆಂಕಿ ಹಚ್ಚಿ ದುಷ್ಕೃತ್ಯ ನಡೆಸಿದ್ದಾರೆ.ಗ್ರಾಮಸ್ಥರು ಆಶ್ರಯ ಪಡೆಯಲು ಪೊಲೀಸ್ ಠಾಣೆಗೆ ನುಗ್ಗಿದ್ದಾರೆ. ವಿಜಯಪುರ ಪೊಲೀಸ್ ಠಾಣೆ ಇನ್ ಸ್ಪೆಕ್ಟರ್ ಘಟನಾ ಸ್ಥಳಕ್ಕೆ ದೌಡಾಯಿಸಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಗ್ರಾಮದಲ್ಲಿ ಉದ್ವಿಗ್ನ […]

ಉಪ ಚುನಾವಣೆ ಬೆನ್ನಲ್ಲೇ ದಲಿತರ ಇಡೀ ಗ್ರಾಮಕ್ಕೆ ಬೆಂಕಿ ಹಚ್ಚಿ ಕಲ್ಲು ತೂರಿದ ದುಷ್ಕರ್ಮಿಗಳು! Read More »

ಗುತ್ತಿಗೆ ಕಾಮಗಾರಿಯಲ್ಲಿ ಮುಸ್ಲಿಮರಿಗೆ ಮೀಸಲಾತಿ ಪ್ರಸ್ತಾವವಿಲ್ಲ – ಡಿಸಿಎಂ

ಸಮಗ್ರ ನ್ಯೂಸ್: ರಾಜ್ಯ ಕಾಂಗ್ರೆಸ್ ಸರ್ಕಾರದ ಮೇಲೆ ವಿರೋಧಪಕ್ಷಗಳು ಮೇಲಿಂದ ಮೇಲೆ ತುಷ್ಟಿಕರಣ, ಓಲೈಕೆ ರಾಜಕಾರಣದ ಆರೋಪ ಮಾಡುತ್ತಿದ್ದು, ಈ ಮಧ್ಯೆ ಉಪಚುನಾವಣೆ ಮತದಾನಕ್ಕೆ ಒಂದು ದಿನ ಮುಂಚಿತವಾಗಿ ರಾಜ್ಯ ಸರ್ಕಾರ ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಂ ಸಮುದಾಯಕ್ಕೆ ಶೇ.4 ರಷ್ಟು ಮಿಲಿಸಲಾತಿಗೆ ಅನುಮೋದನೆ ನೀಡಿದೆ ಎಂಬ ವದಂತಿ ಹಬ್ಬಿತ್ತು. ಈ ಬೆಳವಣಿಗೆ ಹಲವು ರೀತಿಯ ಚರ್ಚೆಗೆ ದಾರಿ ಮಾಡಿಕೊಟ್ಟಿತ್ತು. ಈಗಾಗಲೇ ರಾಜ್ಯದಲ್ಲಿ ವಕ್ಫ್ ಬೋರ್ಡ್ ಸೃಷ್ಟಿ ಮಾಡಿರುವ ಗೊಂದಲಗಳಿಂದ ಸರ್ಕಾರಕ್ಕೆ ತಲೆನೋವಾಗಿದ್ದು, ಈ ಮಧ್ಯೆ ಉಪಚುನಾವಣೆಯ ಕಾರಣಕ್ಕೆ

ಗುತ್ತಿಗೆ ಕಾಮಗಾರಿಯಲ್ಲಿ ಮುಸ್ಲಿಮರಿಗೆ ಮೀಸಲಾತಿ ಪ್ರಸ್ತಾವವಿಲ್ಲ – ಡಿಸಿಎಂ Read More »

ಅವಳು ಕ್ಷೇತ್ರಕ್ಕೆ ಬರ್ಲಿ! ಕರಂದ್ಲಾಜೆ ವಿರುದ್ಧ ಏಕವಚನದಲ್ಲೇ ನಾಲಿಗೆ ಹರಿಬಿಟ್ಟ ಬಿಜೆಪಿ ಶಾಸಕ

ಸಮಗ್ರ ನ್ಯೂಸ್:ಚನ್ನಪಟ್ಟಣ ಉಪಚನಾವಣಾ ಹಿನ್ನೆಲೆ ಕಾಂಗ್ರೆಸ್ ನಾಯಕರು ಹಮ್ಮಿಕೊಂಡಿದ್ದ ಪ್ರಚಾರ ಸಭೆಯಲ್ಲಿ ಯಶವಂತಪುರದ ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖ‌ರ್ ಅವರು ಪ್ರತ್ಯಕ್ಷರಾಗಿದ್ದರು. ಇದೂ ಸಾಕಷ್ಟು ಸದ್ದುಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಸೋಮಶೇಖ‌ರ್ ತಾಕತ್ ಇದ್ದರೆ ರಾಜೀನಾಮೆ ಕೊಟ್ಟು ಕಾಂಗ್ರೆಸ್ ನಿಂದ ಗೆದ್ದು ತೋರಿಸಲಿ ಎನ್ನುವ ಮಾತುಗಳನ್ನು ಹೇಳಿದ್ದರು. ಅದಕ್ಕೆ ಪ್ರತಿಕ್ರಿಯಿಸಿರುವ ಎಸ್ ಟಿ ಸೋಮಶೇಖರ್ ಅವರು, ಶೋಭಾ ಕರಂದ್ಲಾಜೆ ಅವರ ವಿರುದ್ಧ ಏಕವಚನದಲ್ಲಿಯೇ ನಾಲಿಗೆ ಹರಿಬಿಟ್ಟಿದ್ದಾರೆ.ತಾಕತ್ ಟೆಸ್ಟ್ ಮಾಡಬೇಕಂದ್ರೆ ಕ್ಷೇತ್ರಕ್ಕೆ ಬರಲಿ ಶೋಭಾ

ಅವಳು ಕ್ಷೇತ್ರಕ್ಕೆ ಬರ್ಲಿ! ಕರಂದ್ಲಾಜೆ ವಿರುದ್ಧ ಏಕವಚನದಲ್ಲೇ ನಾಲಿಗೆ ಹರಿಬಿಟ್ಟ ಬಿಜೆಪಿ ಶಾಸಕ Read More »

ಸಾಯುವ ಮುನ್ನ ಮೇಕೆದಾಟು ಯೋಜನೆಗೆ ಒಪ್ಪಿಗೆ ಕೊಡಿಸ್ತೀನಿ: ದೇವೇಗೌಡ ವಾಗ್ದಾನ

ಸಮಗ್ರ ನ್ಯೂಸ್:ಚನ್ನಪಟ್ಟಣದ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿರುವ ತಮ್ಮ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಪರ 91ರ ಇಳಿವಯಸ್ಸಿನಲ್ಲೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ. ತಾಲೂಕಿನ ಹೊಡಿಕೆ ಹೊಸಹಳ್ಳಿ ಗ್ರಾಮದಲ್ಲಿ ನಿಖಿಲ್ ಪರ ಮತಯಾಚನೆ ಮಾಡಿದ ಅವರು, ನಾನು ಕೊನೆಯುಸಿರು ಎಳೆಯುವ ಮುನ್ನ ಮೇಕೆದಾಟು ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಒಪ್ಪಿಗೆ ಕೊಡಿಸಿಯೇ ತೀರುತ್ತೇನೆ ಎಂದು ವಾಗ್ದಾನ ನೀಡಿದರು. ಮೇಕೆದಾಟು ಯೋಜನೆಯ ಅನುಷ್ಠಾನ ಕೇವಲ ಪ್ರಧಾನಿ ನರೇಂದ್ರ ಮೋದಿ ಅವರಿಂದ ಮಾತ್ರ ಸಾಧ್ಯ. ಇದರಲ್ಲಿ ಎರಡು

ಸಾಯುವ ಮುನ್ನ ಮೇಕೆದಾಟು ಯೋಜನೆಗೆ ಒಪ್ಪಿಗೆ ಕೊಡಿಸ್ತೀನಿ: ದೇವೇಗೌಡ ವಾಗ್ದಾನ Read More »

ಕಾಮನ್ವೆಲ್ತ್‌ ಸಂಸದೀಯ ಸಭೆ- ಸ್ಪೀಕ‌ರ್ ಯು.ಟಿ. ಖಾದರ್ ಭಾಗಿ

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭೆಯ ಸ್ಪೀಕರ ಯು.ಟಿ.ಖಾದರ್ ಕಾಮನ್ ವೆಲ್ತ್ ಸಂಸದೀಯ ಸಂಘ, ಕರ್ನಾಟಕ ಶಾಖೆ ಇದರ ಪ್ರತಿನಿಧಿಯಾಗಿ ಆಸ್ಟ್ರೇಲಿಯಾ ದೇಶದ ಸಿಡ್ನಿಯಲ್ಲಿ ನಡೆಯುತ್ತಿರುವ 67ನೇ ಕಾಮನ್‌ವೆಲ್ತ್ ಸಂಸದೀಯ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ನ 4 ಮತ್ತು 5 ರಂದು ಭಾಗವಹಿಸಿದರು.

ಕಾಮನ್ವೆಲ್ತ್‌ ಸಂಸದೀಯ ಸಭೆ- ಸ್ಪೀಕ‌ರ್ ಯು.ಟಿ. ಖಾದರ್ ಭಾಗಿ Read More »

ಸಚಿವ ಜಮೀ‌ರ್ ಅಹ್ಮದ್ ವಿರುದ್ಧ ಸಿಡಿದೆದ್ದ ಕಾಂಗ್ರೆಸ್‌ ಶಾಸಕರು| ಎಐಸಿಸಿ ಅಧ್ಯಕ್ಷರಿಗೆ ದೂರು

ಸಮಗ್ರ ನ್ಯೂಸ್: ವಸತಿ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಇದೀಗ ಕಾಂಗ್ರೆಸ್ ಶಾಸಕರು, ಪಕ್ಷದ ಪದಾಧಿಕಾರಿಗಳೇ ಸಿಡಿದೆದ್ದಿದ್ದಾರೆ. ಒಂದೆಡೆ, ವಕ್ಫ್ ವಿಚಾರವಾಗಿ ಜಮೀರ್ ವಿರುದ್ಧ ಪ್ರತಿಪಕ್ಷ ಬಿಜೆಪಿ ಈಗಾಗಲೇ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ವಿಚಾರದಲ್ಲಿ ಬಿಜೆಪಿ ನಾಯಕರು ಬಹಿರಂಗವಾಗಿಯೇ ಜಮೀರ್ ವಿರುದ್ಧ ಸಮರ ಸಾರಿದ್ದಾರೆ. ಸಿಎಂ ಸಿದ್ದರಾಮಯ್ಯಗಿಂತಲೂ ಹೆಚ್ಚು ಜಮೀರ್‌ರನ್ನೇ ಗುರಿಯಾಗಿಸಿಕೊಂಡಿದ್ದಾರೆ. ವಕ್ಫ್ ವಿಚಾರದಿಂದ ಚುನಾವಣೆ ಹೊಸ್ತಿಲಲ್ಲಿ ನಾವೇ ರಾಜಕೀಯ ಮಾಡಲು ಅವಕಾಶ ಮಾಡಿಕೊಟ್ಟಂತಾಗಿದೆ ಎಂದು ಕಾಂಗ್ರೆಸ್ ಶಾಸಕರು ಬೇಸರ ವ್ಯಕ್ತಪಡಿಸಿದ್ದಾರೆ.‌ ಜಮೀರ್

ಸಚಿವ ಜಮೀ‌ರ್ ಅಹ್ಮದ್ ವಿರುದ್ಧ ಸಿಡಿದೆದ್ದ ಕಾಂಗ್ರೆಸ್‌ ಶಾಸಕರು| ಎಐಸಿಸಿ ಅಧ್ಯಕ್ಷರಿಗೆ ದೂರು Read More »

‘ಶಕ್ತಿ’ ಯೋಜನೆ ದುರ್ಬಳಕೆ ತಡೆಗೆ ಸ್ಮಾರ್ಟ್ ಕಾರ್ಡ್ ವಿತರಣೆಗೆ ಚಿಂತನೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮಹಿಳೆಯರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ ದುರ್ಬಳಕೆ ತಡೆಯಲು ಸರ್ಕಾರ ಸ್ಮಾರ್ಟ್ ಕಾರ್ಡ್ ವಿತರಿಸಲು ಚಿಂತನೆ ನಡೆದಿದೆ. ರಾಜ್ಯದಲ್ಲಿ ಶಕ್ತಿ ಯೋಜನೆಯಡಿ ಪ್ರತಿದಿನ ಸರಾಸರಿ 45 ಲಕ್ಷ ಮಹಿಳೆಯರು ಪ್ರಯಾಣಿಸುತ್ತಿದ್ದಾರೆ. ನಿರ್ವಾಹಕರ ವಿರುದ್ಧ ಗೋಲ್ಮಾಲ್ ಆರೋಪ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಆದಾಯ ಸೋರಿಕೆ ತಡೆಗೆ ಸ್ಮಾರ್ಟ್ ಕಾರ್ಡ್ ವಿತರಿಸಲು ಚಿಂತನೆ ನಡೆದಿದೆ. ಅಲ್ಲದೇ, ಕೆಲವು ಮಹಿಳೆಯರು ಉಚಿತ ಟಿಕೆಟ್ ಪಡೆಯುವ ಸಂಬಂಧಿಸಿದ ದಾಖಲೆ ತೋರಿಸದೆ ನಿರ್ವಾಹಕರೊಂದಿಗೆ ವಾಗ್ವಾದಕ್ಕೆ ಇಳಿಯುವುದು ನಡೆಯುತ್ತಿದ್ದು,

‘ಶಕ್ತಿ’ ಯೋಜನೆ ದುರ್ಬಳಕೆ ತಡೆಗೆ ಸ್ಮಾರ್ಟ್ ಕಾರ್ಡ್ ವಿತರಣೆಗೆ ಚಿಂತನೆ Read More »

‘ಸಿಎಂ ಸಿದ್ದರಾಮಯ್ಯ’ಗೆ ಬಿಗ್ ರಿಲೀಫ್: ನ.26ಕ್ಕೆ ‘CBI ತನಿಖೆ’ ಕೋರಿದ್ದ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್

ಸಮಗ್ರ ನ್ಯೂಸ್: ಮುಡಾ ಕೇಸ್ ನಲ್ಲಿ ಸಿಎಂ ಸಿದ್ದರಾಮಯ್ಯಗೆ ಇದಿಗ ಸಿಬಿಐ ತನಿಖೆ ಭೀತಿ ಎದುರಾಗಿತ್ತು. ದೂರುದಾರ ಸ್ನೇಹಮಯಿ ಕೃಷ್ಣ ಅವರು ಈ ಒಂದು ಪ್ರಕರಣ ಸಿಬಿಐ ತನಿಖೆಗೆ ಕೋರಿ ರಿಟ್ ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ಕೈಗೆತ್ತಿಕೊಂಡ ವೇಳೆಯಲ್ಲಿ ಕಾಲಾವಕಾಶ ಕೋರಿದ ಹಿನ್ನಲೆಯಲ್ಲಿ ನವೆಂಬರ್.26ಕ್ಕೆ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿಕೆ ಮಾಡಿದೆ. ಇಂದು ಸ್ನೇಹಮಯಿ ಕೃಷ್ಣ ಅವರು ಲೋಕಾಯುಕ್ತ ತನಿಖೆಯಲ್ಲಿ ನಂಬಿಕೆಯಿಲ್ಲ. ಸಿಬಿಐ ತನಿಖೆಗೆ ಆದೇಶಿಸುವಂತೆ ಕೇರಿ ಸಲ್ಲಿಸಿದ್ದಂತ ರಿಟ್ ಅರ್ಜಿಯನ್ನು ಹೈ ಕೋರ್ಟ್ ನಲ್ಲಿ ನ್ಯಾ

‘ಸಿಎಂ ಸಿದ್ದರಾಮಯ್ಯ’ಗೆ ಬಿಗ್ ರಿಲೀಫ್: ನ.26ಕ್ಕೆ ‘CBI ತನಿಖೆ’ ಕೋರಿದ್ದ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್ Read More »

ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ವಿರುದ್ದ ಎಫ್ಐಆರ್ ದಾಖಲು

ಸಮಗ್ರ ನ್ಯೂಸ್: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಎಸ್ಐಟಿ ಎಡಿಜಿಪಿ ಎಂ. ಚಂದ್ರಶೇಖರ್ ನೀಡಿರುವ ದೂರಿನ ಅನ್ವಯ ಬೆಂಗಳೂರಿನ ಸಂಜಯ ನಗರ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್. ದಾಖಲಾಗಿದೆ. ಬೆದರಿಕೆ ಹಾಗೂ ಸುಳ್ಳು ಆರೋಪಕ್ಕೆ ಸಂಬಂಧಿಸಿ ಎಸ್ಐಟಿ ಎಡಿಜಿಪಿ ಎಂ.ಚಂದ್ರಶೇಖರ್ ಅವರು ಕುಮಾರಸ್ವಾಮಿ, ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತು ಸುರೇಶ್ ಬಾಬು ವಿರುದ್ಧ ತಿಂಗಳ ಹಿಂದೆ ಸಂಜಯ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರು ಆಧರಿಸಿ ಪೊಲೀಸರು ಎನ್ಸಿಆರ್ ದಾಖಲಿಸಿಕೊಂಡಿದ್ದರು. ಇದೀಗ ನ್ಯಾಯಾಲಯದ ಆದೇಶದಂತೆ

ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ವಿರುದ್ದ ಎಫ್ಐಆರ್ ದಾಖಲು Read More »

ಮುಡಾ ಹಗರಣ ತನಿಖೆ| ವಿಚಾರಣೆಗೆ ಹಾಜರಾಗಲು ಸಿಎಂಗೆ ನೋಟೀಸ್ ನೀಡಿದ ಲೋಕಾಯುಕ್ತ

ಸಮಗ್ರ ನ್ಯೂಸ್: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಮೈಸೂರು ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದು, ನವೆಂಬರ್ 6ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ನ.6ರಂದು ಮೈಸೂರು ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ. ಈ ಮೂಲಕ 40 ವರ್ಷಗಳ ಸಿದ್ದರಾಮಯ್ಯ ಅವರ ರಾಜಕೀಯ ಜೀವನದಲ್ಲಿ ಮೊದಲ ಬಾರಿಗೆ ವಿಚಾರಣೆಗೆ ನೋಟಿಸ್ ನೀಡಲಾಗಿದೆ. ಮುಡಾ

ಮುಡಾ ಹಗರಣ ತನಿಖೆ| ವಿಚಾರಣೆಗೆ ಹಾಜರಾಗಲು ಸಿಎಂಗೆ ನೋಟೀಸ್ ನೀಡಿದ ಲೋಕಾಯುಕ್ತ Read More »