ರಾಜಕೀಯ

‘ಹಲಾಲ್, ಜಟ್ಕಾ ಹೆಸರಲ್ಲಿ ಸಮಾಜ ಒಡೆಯಲಾಗುತ್ತಿದೆ – ಸಚಿವ ಈಶ್ವರಪ್ಪ

ಸಮಗ್ರ ನ್ಯೂಸ್: ಹಲಾಲ್‌ ಅಥವಾ ಜಟ್ಕಾ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಕುತಂತ್ರ ಮಾಡಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದರು. ಭಾನುವಾರ ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ನಿಟ್ಟೆಯಲ್ಲಿ ಎಂಆರ್‌ಎಫ್‌ ಕೇಂದ್ರ ಉದ್ಘಾಟಿಸಿ ಮಾತನಾಡಿದ ಸಚಿವರು, ‘ಹಲಾಲ್ ಹಾಗೂ ಜಟ್ಕಾ ವಿವಾದ ಸೃಷ್ಟಿಸಿರುವುದು ಕೆಲವು ವ್ಯಕ್ತಿಗಳು ಹಾಗೂ ಪಕ್ಷಗಳು. ಯಾರು ಯಾವ ಪದ್ಧತಿಯನ್ನು ಅನುಸರಿಸುತ್ತಿದ್ದಾರೋ ಅದನ್ನೇ ಮುಂದುವಸಿಕೊಂಡು ಹೋಗಲಿ’ ಎಂದು ಹೇಳಿದರು. ‘ಹಲಾಲ್‌ ಹಾಗೂ ಜಟ್ಕಾ ವಿಚಾರದಲ್ಲಿ ರಾಜಕಾರಣ ಮಾಡುವುದಿಲ್ಲ. ಚುನಾವಣೆಯಲ್ಲಿ ತೊಡೆ ತಟ್ಟಿ, ಅಭಿವೃದ್ಧಿ ಕಾರ್ಯಗಳನ್ನು […]

‘ಹಲಾಲ್, ಜಟ್ಕಾ ಹೆಸರಲ್ಲಿ ಸಮಾಜ ಒಡೆಯಲಾಗುತ್ತಿದೆ – ಸಚಿವ ಈಶ್ವರಪ್ಪ Read More »

ಪರಿಷತ್ ಸ್ಥಾನಕ್ಕೆ ಸಿ.ಎಂ ಇಬ್ರಾಹಿಂ ಗುಡ್ ಬೈ|

ಸಮಗ್ರ ನ್ಯೂಸ್: ಪರಿಷತ್ ವಿಪಕ್ಷ ನಾಯಕ ಸ್ಥಾನದ ನಿರೀಕ್ಷೆಯಲ್ಲಿದ್ದಂತ ಕಾಂಗ್ರೆಸ್ ಎಂ ಎಲ್ ಸಿ ಸಿ.ಎಂ ಇಬ್ರಾಹಿಂಗೆ ಆ ಸ್ಥಾನ ದೊರೆತಿರಲಿಲ್ಲ. ಹೀಗಾಗಿ ಬೇಸರಗೊಂಡಿರುವ ಅವರು, ಕಾಂಗ್ರೆಸ್ ಪಕ್ಷ ತೊರೆಯಲು ನಿರ್ಧರಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಇಂದು ಎಂ.ಎಲ್ ಸಿ ಸ್ಥಾನಕ್ಕೆ ಸಿ.ಎಂ ಇಬ್ರಾಹಿಂ ಅವರು ರಾಜೀನಾಮೆ ನೀಡಿದ್ದಾರೆ. ನಿನ್ನೆ ಈ ಬಗ್ಗೆ‌ ಇಬ್ರಾಹಿಂ ಘೋಷಿಸಿದ್ದು, ಇಂದು ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರನ್ನು ವಿಧಾನಸೌಧದ ಕಚೇರಿಯಲ್ಲಿ ಭೇಟಿಯಾದ ಅವರು, ತಮ್ಮ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ

ಪರಿಷತ್ ಸ್ಥಾನಕ್ಕೆ ಸಿ.ಎಂ ಇಬ್ರಾಹಿಂ ಗುಡ್ ಬೈ| Read More »

ಮಾಜಿ‌ ಸಿಎಂ ಯಡಿಯೂರಪ್ಪರ ಬೆನ್ನಿಗೆ ಮತ್ತೆ ಜೋತುಬಿದ್ದ ಅಕ್ರಮ ಡಿನೋಟಿಫಿಕೇಶನ್ ಭೂತ| ವಿಶೇಷ ಕ್ರಿಮಿನಲ್ ಪ್ರಕರಣ ದಾಖಲಿಸಲು ನ್ಯಾಯಾಲಯ ಆದೇಶ|

ಸಮಗ್ರ ನ್ಯೂಸ್: 2013 ರಲ್ಲಿ ಭೂ ಡಿನೋಟಿಫಿಕೇಷನ್ ದೂರಿಗೆ ಸಂಬಂಧಿಸಿದಂತೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ‘ವಿಶೇಷ ಕ್ರಿಮಿನಲ್ ಪ್ರಕರಣ’ ದಾಖಲಿಸಲು ಆದೇಶಿಸಿದೆ. ಮಾಜಿ ಮುಖ್ಯಮಂತ್ರಿ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ 1988ರ ಸೆಕ್ಷನ್ 13(2)ರ ಅಡಿಯಲ್ಲಿ ಓದಲಾದ ಸೆಕ್ಷನ್ 13(1)(ಡಿ) ಅಡಿಯಲ್ಲಿ ಶಿಕ್ಷಾರ್ಹ ಅಪರಾಧಗಳಿಗಾಗಿ ವಿಶೇಷ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ವಿಶೇಷ ನ್ಯಾಯಾಧೀಶ ಬಿ.ಜಯಂತ ಕುಮಾರ್ ಅವರು ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಯಡಿಯೂರಪ್ಪ ಅವರು ಉಪಮುಖ್ಯಮಂತ್ರಿಯಾಗಿದ್ದಾಗ ಬೆಂಗಳೂರಿನ ಬೆಳ್ಳಂದೂರು ಬಳಿ ಸುಮಾರು 4.30 ಎಕರೆ ಜಮೀನನ್ನು

ಮಾಜಿ‌ ಸಿಎಂ ಯಡಿಯೂರಪ್ಪರ ಬೆನ್ನಿಗೆ ಮತ್ತೆ ಜೋತುಬಿದ್ದ ಅಕ್ರಮ ಡಿನೋಟಿಫಿಕೇಶನ್ ಭೂತ| ವಿಶೇಷ ಕ್ರಿಮಿನಲ್ ಪ್ರಕರಣ ದಾಖಲಿಸಲು ನ್ಯಾಯಾಲಯ ಆದೇಶ| Read More »

ಕಲ್ಲಡ್ಕದ ಭಯೋತ್ಪಾದಕ ಹೇಳಿದಂತೆ ಪೊಲೀಸ್ ವರ್ಗಾವಣೆ ನಡೆಯುತ್ತಿದೆ| ಪರಿಷತ್ ನಲ್ಲಿ ಬಿ.ಕೆ ಹರಿಪ್ರಸಾದ್ ವಾಗ್ದಾಳಿ

ಸಮಗ್ರ ನ್ಯೂಸ್: ಪೊಲೀಸ್ ಇಲಾಖೆಯಲ್ಲಿ ನೇಮಕಾತಿ ಸೇರಿದಂತೆ ವರ್ಗಾವಣೆಯಲ್ಲಿ ಭಾರಿ ಅಕ್ರಮ ನಡೆಯುತ್ತಿದೆ. ವರ್ಗಾವಣೆಯು ಲಕ್ಷ-ಕೋಟಿಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ರಾಜ್ಯದ ಪತ್ರಿಕೆಗಳು ಸುದ್ದಿ ಮಾಡುತ್ತಿವೆ.ವರ್ಗಾವಣೆಯ ಹಣ ನೇರವಾಗಿ ಸಂಘಪರಿವಾರದ ಕೇಶವ ಕೃಪಕ್ಕೆ ಸಂದಾಯವಾಗುತ್ತಿದೆ. ಕಲ್ಲಡ್ಕದ ಭಯೋತ್ಪಾದಕ ಒಬ್ರು ಹೇಳಿದ ಹಾಗೆ ವರ್ಗಾವಣೆ ನಡೆಯುತ್ತಿರುವುದು ದುರಂತ ಎಂದು ಆರ್ ಎಸ್ ಎಸ್ ನ ಕಲ್ಲಡ್ಕ ಪ್ರಭಾಕರ್ ಭಟ್ಟರ ಹೆಸರು ಹೇಳದೆ ಬಿಜೆಪಿ ಸರ್ಕಾರದ ವಿರುದ್ಧ ವಿಧಾನ ಪರಿಷತ್ ಕಲಾಪದಲ್ಲಿ ವಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್ ವಾಗ್ದಾಳಿ

ಕಲ್ಲಡ್ಕದ ಭಯೋತ್ಪಾದಕ ಹೇಳಿದಂತೆ ಪೊಲೀಸ್ ವರ್ಗಾವಣೆ ನಡೆಯುತ್ತಿದೆ| ಪರಿಷತ್ ನಲ್ಲಿ ಬಿ.ಕೆ ಹರಿಪ್ರಸಾದ್ ವಾಗ್ದಾಳಿ Read More »

ವಿದ್ಯಾರ್ಥಿ ಪರಿಷತ್ ಘಟಕದ ಉದ್ಘಾಟನೆಗೆ ಆಗಮಿಸಿದ ಕಲ್ಲಡ್ಕ ‌ಪ್ರಭಾಕರ ಭಟ್| ‘ಪ್ರಭಾಕರ ಭಟ್ ಗೋ ಬ್ಯಾಕ್’ ಘೋಷಣೆ| ಮಂಗಳೂರು ವಿಶ್ವವಿದ್ಯಾಲಯದಲ್ಲಿ ರೊಚ್ಚಿಗೆದ್ದ ಕ್ಯಾಂಪಸ್ ಫ್ರಂಟ್|

ಸಮಗ್ರ ನ್ಯೂಸ್: ಮಂಗಳೂರು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿ ಪರಿಷತ್ ಘಟಕದ ಉದ್ಘಾಟನೆಗೆ ಕಲ್ಲಡ್ಕ ‌ಪ್ರಭಾಕರ ಭಟ್ ಅವರನ್ನು ಅತಿಥಿ ಆಹ್ವಾನಿಸಿರುವುದನ್ನು ವಿರೋಧಿಸಿದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ( CFI) ಕಾರ್ಯಕರ್ತರು ವಿಶ್ವವಿದ್ಯಾಲಯದ ಮುಖ್ಯ ದ್ವಾರದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ‘ಪ್ರಭಾಕರ ಭಟ್ ಗೋ ಬ್ಯಾಕ್’ ಎಂದು ಘೋಷಣೆ ಕೂಗಿದರು. ಪ್ರತಿಭಟನೆಯ ಹಿನ್ನಲೆಯಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದರು. ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ವಿವಿ ಪ್ರವೇಶ ದ್ವಾರದಲ್ಲೇ ತಡೆದು ನಿಲ್ಲಿಸಲಾಯಿತು. ‘ದ್ವೇಷ ಭಾಷಣವನ್ನು ನಿರಂತರವಾಗಿ ಮಾಡುತ್ತಿರುವ ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು

ವಿದ್ಯಾರ್ಥಿ ಪರಿಷತ್ ಘಟಕದ ಉದ್ಘಾಟನೆಗೆ ಆಗಮಿಸಿದ ಕಲ್ಲಡ್ಕ ‌ಪ್ರಭಾಕರ ಭಟ್| ‘ಪ್ರಭಾಕರ ಭಟ್ ಗೋ ಬ್ಯಾಕ್’ ಘೋಷಣೆ| ಮಂಗಳೂರು ವಿಶ್ವವಿದ್ಯಾಲಯದಲ್ಲಿ ರೊಚ್ಚಿಗೆದ್ದ ಕ್ಯಾಂಪಸ್ ಫ್ರಂಟ್| Read More »

”ಹಲಾಲ್ ಒಂದು ಆರ್ಥಿಕ ಜಿಹಾದ್”- ಸಿ.ಟಿ ರವಿ

ಸಮಗ್ರ ನ್ಯೂಸ್: ಕೆಲ ಬಲಪಂಥೀಯ ಸಂಘಟನೆಗಳು ಇದೀಗ ಹಲಾಲ್ ಮಾಂಸದ ನಿಷೇಧಕ್ಕೆ ಒತ್ತಾಯಿಸುತ್ತಿರುವ ನಡುವೆಯೇ, ಹಲಾಲ್ ಆಹಾರ “ಆರ್ಥಿಕ ಜಿಹಾದ್” ಎಂದು ಹೇಳುವ ಮೂಲಕ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿವಾದದ ಕಿಡಿ ಹೊತ್ತಿಸಿದ್ದಾರೆ. ಹಲಾಲ್ ಒಂದು ಆರ್ಥಿಕ ಜಿಹಾದ್. ಅಂದರೆ ಇದನ್ನು ಜಿಹಾದ್ ರೂಪದಲ್ಲಿ ಬಳಸಲಾಗುತ್ತದೆ. ಅಂದರೆ ಮುಸ್ಲಿಮರು ಇತರರ ಜತೆ ವಹಿವಾಟು ನಡೆಸಬಾರದು. ಹಲಾಲ್ ಮಾಂಸವನ್ನೇ ಬಳಸಬೇಕು ಎಂದು ಅವರು ಯೋಚಿಸುವುದಾದರೆ, ಅದನ್ನು ಬಳಸಬಾರದು ಎಂದು ಹೇಳುವುದರಲ್ಲಿ ತಪ್ಪೇನಿದೆ” ಎಂದು ಸುದ್ದಿಗಾರರೊಂದಿಗೆ ಮಾತನಾಡಿದ

”ಹಲಾಲ್ ಒಂದು ಆರ್ಥಿಕ ಜಿಹಾದ್”- ಸಿ.ಟಿ ರವಿ Read More »

ಹಿಜಾಬ್ ಬೇಕು, ಭಗವದ್ಗೀತೆ ಬೇಡ – ನಾಡಿನ ಬುದ್ಧಿಜೀವಿಗಳಿಂದ ಸಿಎಂ ಗೆ ಪತ್ರ

ಸಮಗ್ರ ನ್ಯೂಸ್: ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಜಾಬ್‌ಗೆ ಅವಕಾಶ ನೀಡಬೇಕು, ವಸ್ತ್ರ ಸಂಹಿತೆ ಕಡ್ಡಾಯ ಸುತ್ತೋಲೆಯನ್ನು ವಾಪಸ್‌ ಪಡೆಯಬೇಕು, ಧರ್ಮದ ಹೆಸರಿನಲ್ಲಿ ವ್ಯಾಪಾರ ನಿರ್ಬಂಧಕ್ಕೆ ಅವಕಾಶ ನೀಡಬಾರದು, ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆ ಪ್ರಸ್ತಾಪ ಕೈಬಿಡಬೇಕು, ಶಾಂತಿಗೆ ಭಂಗ ತರುತ್ತಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ನಾಡಿನ ಪ್ರಮುಖ ಸಾಹಿತಿಗಳು ಹಾಗೂ ಚಿಂತಕರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. ಡಾ.ಕೆ. ಮರುಳಸಿದ್ದಪ್ಪ, ಡಾ. ವಿಜಯಾ, ಪ್ರೊ.ಎಸ್‌.ಜಿ.ಸಿದ್ದರಾಮಯ್ಯ, ಬೊಳುವಾರ ಮಹಮದ್‌ ಕುಂಞ, ಡಾ.ಪುರುಷೋತ್ತಮ ಬಿಳಿಮಲೆ, ಡಾ.ರಾಜೇಂದ್ರ

ಹಿಜಾಬ್ ಬೇಕು, ಭಗವದ್ಗೀತೆ ಬೇಡ – ನಾಡಿನ ಬುದ್ಧಿಜೀವಿಗಳಿಂದ ಸಿಎಂ ಗೆ ಪತ್ರ Read More »

13 ಸಾವಿರ ರೈತರ ಕೃಷಿ ಸಾಲಮನ್ನಾಗೆ ಮತ್ತೆ ಅವಕಾಶ – ಸಚಿವ ಎಸ್.ಟಿ ಸೋಮಶೇಖರ್

ಸಮಗ್ರ ನ್ಯೂಸ್: ಷರತ್ತು ಪೂರೈಸದೇ ಬಾಕಿ ಉಳಿದಿರುವ 13,000 ರೈತರ ಸಹಕಾರ ಸಾಲ‌ಮನ್ನಾ ಮಾಡಲು ಮತ್ತೊಮ್ಮೆ ಅವಕಾಶ ನೀಡಲಾಗುತ್ತದೆ. 2017-18ನೇ ಸಾಲಿನ ಬಾಕಿ ಇದ್ದ ಸಹಕಾರ ಸಂಘದಿಂದ ಪಡೆದ ಅಲ್ಪಾವಧಿ ಸಾಲ‌ಮನ್ನಾ ಮಾಡಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದರು. ವಿಧಾನಸಭೆಯಲ್ಲಿ ಬೇಡಿಕೆಗಳ ಮೇಲಿನ ಚರ್ಚೆಗೆ ಉತ್ತರಿಸಿದ ಅವರು, ಒಂದು ಲಕ್ಷ ರೂ. ‌ಸಾಲಮನ್ನಾ ಮಾಡಲು 14.8.2018ರಲ್ಲಿ ಆದೇಶ ಹೊರಡಿಸಲಾಗಿತ್ತು. ಅದರಂತೆ 20.38 ಲಕ್ಷ ರೈತರಿಗೆ 9,448.62 ಕೋಟಿ ರೂ.‌ ಸಾಲ‌ಮನ್ನಾ ಮಾಡುವ ಅಂದಾಜು ಮಾಡಲಾಗಿತ್ತು.

13 ಸಾವಿರ ರೈತರ ಕೃಷಿ ಸಾಲಮನ್ನಾಗೆ ಮತ್ತೆ ಅವಕಾಶ – ಸಚಿವ ಎಸ್.ಟಿ ಸೋಮಶೇಖರ್ Read More »

ಎ.5ರ ಮೋದಿ ಕರ್ನಾಟಕ ಪ್ರವಾಸ ರದ್ದು|

ಸಮಗ್ರ ನ್ಯೂಸ್: ವಿವಿಧ ಕಾರ್ಯಕ್ರಮ ಹಾಗೂ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲು ಏಪ್ರಿಲ್ 5 ರಂದು ಕರ್ನಾಟಕಕ್ಕೆ ಆಗಮಿಸಬೇಕಿದ್ದ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮ ರದ್ದಾಗಿದೆ. ಸತತ ಎರಡನೇ ಬಾರಿ ಪ್ರಧಾನಿ ರಾಜ್ಯ ಪ್ರವಾಸ ರದ್ದಾಗಿದೆ. ಈ ಕುರಿತು ಸಿಎಂ ಕಚೇರಿಗೆ ಪ್ರಧಾನಿಗಳ ಕಚೇರಿಯಿಂದ ಅಧಿಕೃತ ಮಾಹಿತಿ ನೀಡಲಾಗಿದೆ. ಇತ್ತೀಚಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮೋದಿ ಪ್ರವಾಸ ಕುರಿತು ಮಾಹಿತಿ ಬಹಿರಂಗ ಪಡಿಸಿದ್ದರು. ಏಪ್ರಿಲ್ 5 ರಂದು ಪ್ರಧಾನಿ ಭೇಟಿ ನೀಡುವ ಸಾಧ್ಯತೆ ಇದೆ ಎಂದಿದ್ದರು. ಇದೇ

ಎ.5ರ ಮೋದಿ ಕರ್ನಾಟಕ ಪ್ರವಾಸ ರದ್ದು| Read More »

ಆದಾಯ ಮೀರಿ ಆಸ್ತಿ ಗಳಿಕೆ| ಸಚಿವ ಸೋಮಣ್ಣಗೆ ಬಂಧನ ಭೀತಿ

ಸಮಗ್ರ ನ್ಯೂಸ್: ತನ್ನ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದಲ್ಲಿ ಸಚಿವ ವಿ.ಸೋಮಣ್ಣಗೆ ಬಂಧನ ಭೀತಿ ಎದುರಾಗಿದೆ. ನಿರೀಕ್ಷಣಾ ಜಾಮೀನು ಕೋರಿ ಸಚಿವ ಸೋಮಣ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕೋರ್ಟ್‌ ಮಾರ್ಚ್‌ 30ಕ್ಕೆ ಮುಂದೂಡಿದೆ. ಇನ್ನು ಆಕ್ಷೇಪಣೆ ಸಲ್ಲಿಸಲು ದೂರುದಾರರ ಪರ ವಕೀಲರಿಗೆ ಸೂಚನೆ ನೀಡಿಲಾಗಿದೆ. ಸೋಮಣ್ಣ ಶಾಸಕನಾಗುವ ಮೊದಲಿನ ಆದಾಯ, ನಂತರದ ಆದಾಯ ಗಳಿಕೆ, ಆಸ್ತಿಯ ಸೂಕ್ತ ವಿವರಣೆ ನೀಡುವಲ್ಲಿ ಪೊಲೀಸರು ವಿಫಲವಾಗಿದ್ದು, ಅಸಮರ್ಪಕ ತನಿಖೆ ಎಂದು ಕೋರ್ಟ್‌ ಅಭಿಪ್ರಾಯ ಪಟ್ಟಿದೆ. ಈ‌ ಕುರಿತು ಜನಪ್ರತಿನಿಧಿಗಳ

ಆದಾಯ ಮೀರಿ ಆಸ್ತಿ ಗಳಿಕೆ| ಸಚಿವ ಸೋಮಣ್ಣಗೆ ಬಂಧನ ಭೀತಿ Read More »