ರಾಜಕೀಯ

ಜನಾರ್ದನ ರೆಡ್ಡಿ ಬಳ್ಳಾರಿ ಪ್ರವೇಶಕ್ಕೆ ಸುಪ್ರೀಂಕೋರ್ಟ್‌ ಅನುಮತಿ

ಸಮಗ್ರ ನ್ಯೂಸ್: 14 ವರ್ಷಗಳಿಂದ ಬಳ್ಳಾರಿಯಿಂದ ದೂರವಾಗಿದ್ದ ಮಾಜಿ ಸಚಿವ, ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಅವರಿಗೆ ಕೊನೆಗೂ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಬಳ್ಳಾರಿ ಸೇರಿದಂತೆ ಆಂಧ್ರ ಪ್ರದೇಶದ ಅನಂತಪುರ ಹಾಗೂ ಕಡಪ ಜಿಲ್ಲೆಗಳ ಪ್ರವೇಶಕ್ಕೆ ವಿಧಿಸಿದ್ದ ನಿರ್ಬಂಧವನ್ನು ಸುಪ್ರೀಂ ಕೋರ್ಟ್ ತೆರವು ಮಾಡಿದೆ. ಅಕ್ರಮ ಗಣಿಗಾರಿಕೆ ಆರೋಪದ ಹಿನ್ನೆಲೆ ತವರು ಜಿಲ್ಲೆಯ ಪ್ರವೇಶವಿಲ್ಲದೆ ವನವಾಸ ಅನುಭವಿಸಿದ್ದ ಮಾಜಿ ಸಚಿವ, ಹಾಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಬಳ್ಳಾರಿ ಪ್ರವೇಶಕ್ಕೆ ಸುಪ್ರೀಂ ಕೋರ್ಟ್ […]

ಜನಾರ್ದನ ರೆಡ್ಡಿ ಬಳ್ಳಾರಿ ಪ್ರವೇಶಕ್ಕೆ ಸುಪ್ರೀಂಕೋರ್ಟ್‌ ಅನುಮತಿ Read More »

ಮುಡಾ ಹಗರಣ: 14 ನಿವೇಶನ ವಾಪಸ್ ನೀಡಲು ಸಿಎಂ ಪತ್ನಿ ನಿರ್ಧಾರ, ಲೋಕಾಯುಕ್ತಕ್ಕೆ ಪತ್ರ

ಸಮಗ್ರ ನ್ಯೂಸ್: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬಕ್ಕೆ ಸಂಕಷ್ಟ ಎದುರಾಗಿದು, ಇದೀಗ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರು ಮುಡಾಗೆ ಸೈಟ್ಗಳನ್ನು ಹಿಂದಿರುಗಿಸಲು ಮುಂದಾಗಿದ್ದಾರೆ. ಮೈಸೂರಿನ ವಿಜಯನಗರದ 3 ಮತ್ತು 4ನೇ ಹಂತದಲ್ಲಿ ಪಡೆದ 14 ನಿವೇಶನಗಳನ್ನು ಹಿಂದಿರುಗಿಸುವುದಾಗಿ ಸಿಎಂ ಪತ್ನಿ ಪಾರ್ವತಿ ಅವರು ಮುಡಾ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಸಿದ್ದರಾಮಯ್ಯನವರಿಗೆ ಇದೀಗ ಆಗುತ್ತಿರುವ ರಾಜಕೀಯ ಸಂಕಷ್ಟವನ್ನು ನೋಡಲಾಗದೇ ಪತ್ನಿ ಈ ನಿರ್ಧಾರಕ್ಕೆ ಬಂದಿದ್ದಾರೆ. ಈ ಬಗ್ಗೆ ಖುದ್ದು ಮುಡಾಗೆ ಬರೆದ ಪತ್ರದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ.

ಮುಡಾ ಹಗರಣ: 14 ನಿವೇಶನ ವಾಪಸ್ ನೀಡಲು ಸಿಎಂ ಪತ್ನಿ ನಿರ್ಧಾರ, ಲೋಕಾಯುಕ್ತಕ್ಕೆ ಪತ್ರ Read More »

ಹೈಕೋರ್ಟ್‌ನಲ್ಲಿ ಹಿನ್ನಡೆ/ ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ ಎಂದ ಸಿಎಂ

ಸಮಗ್ರ ನ್ಯೂಸ್‌: ಮುಡಾ ಪ್ರಕರಣದಲ್ಲಿ ಹೈಕೋರ್ಟ್‌ ತೀರ್ಪು ಬಂದ ಬಳಿಕ ಸಿಎಂ ಸಿದ್ದರಾಮಯ್ಯ ಇದೇ ಮೊದಲ ಬಾರಿಗೆ ರಿಯಾಕ್ಷನ್ ನೀಡಿದ್ದು, ಹೈಕೋರ್ಟ್ ಆದೇಶದ ಅಂಶಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ. ಆದೇಶ ಪ್ರತಿ ಪಡೆದು ಓದಿದ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ. ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ಕೋರ್ಟ್ ತಿರಸ್ಕರಿಸಿದೆ. ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕೋರ್ಟ್ ತೀರ್ಪಿನ ಬಳಿಕ ಮಾಧ್ಯಮ ಪ್ರಕರಣ ಹೊರಡಿಸಿದ್ದು. ಹೈಕೋರ್ಟ್ ಆದೇಶದ ಅಂಶಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ. ಆದೇಶ ಪ್ರತಿ ಪಡೆದು ಓದಿದ

ಹೈಕೋರ್ಟ್‌ನಲ್ಲಿ ಹಿನ್ನಡೆ/ ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ ಎಂದ ಸಿಎಂ Read More »

ಮುಡಾ ಅಕ್ರಮ ಹಗರಣ|ಸಿಎಂ ಸಿದ್ದರಾಮಯ್ಯಗೆ ಬಿಗ್ ಶಾಕ್| ರಾಜ್ಯಪಾಲರ ಆದೇಶ ಎತ್ತಿ ಹಿಡಿದ ಹೈಕೋರ್ಟ್

ಸಮಗ್ರ ನ್ಯೂಸ್: ಮುಡಾ ಅಕ್ರಮ ಸಂಬಂಧಿಸಿದಂತೆ ಹೈಕೋರ್ಟ್‌ ತೀರ್ಪು ಪ್ರಕಟಿಸಿದ್ದು ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ವಜಾ ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸುದೀರ್ಘ ವಿಚಾರಣೆ ನಡೆದಿತ್ತು. 30 ಗಂಟೆಗೂ ಅಧಿಕ ಸಮಯ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಾದ-ಪ್ರತಿವಾದವನ್ನು ನ್ಯಾಯಾಧೀಶರು ಆಲಿಸಿದ್ದರು. ರಾಜ್ಯಪಾಲರ ಕ್ರಮವನ್ನು ಪ್ರಶ್ನಿಸಿ ಅರ್ಜಿ ಹಾಕಿದ್ದ ಸಿಎಂ ಸಿದ್ದರಾಮಯ್ಯ ಪರ ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಅಭಿಷೇಕ್‌ ಮನು ಸಿಂಘ್ವಿ ನೇತೃತ್ವದ ತಂಡ ವಾದ ಮಂಡಿಸಿತ್ತು. ರಾಜ್ಯಪಾಲರ ಕಚೇರಿ ಪರ ಸುಪ್ರೀಂ ಕೋರ್ಟ್ ಸಾಲಿಸಿಟರ್‌ ಜನರಲ್

ಮುಡಾ ಅಕ್ರಮ ಹಗರಣ|ಸಿಎಂ ಸಿದ್ದರಾಮಯ್ಯಗೆ ಬಿಗ್ ಶಾಕ್| ರಾಜ್ಯಪಾಲರ ಆದೇಶ ಎತ್ತಿ ಹಿಡಿದ ಹೈಕೋರ್ಟ್ Read More »

ಮುಖ್ಯಮಂತ್ರಿ ಆಸನ ಪಕ್ಕ ಬೇರೆ ಕುರ್ಚಿ ಹಾಕಿಕೊಂಡು ಕುಳಿತ ಆತಿಷಿ

ಸಮಗ್ರ ನ್ಯೂಸ್: ರಾಷ್ಟ್ರ ರಾಜಧಾನಿಯಲ್ಲಿ ನಡೆದ ನಾಟಕೀಯ ಬೆಳವಣಿಗೆಗಳಿಂದಾಗಿ ದಿಲ್ಲಿ ಮುಖ್ಯಮಂತ್ರಿಯಾಗಿರುವ ಆತಿಷಿ ಸಿಂಗ್ ಮರ್ಲೆನಾ ಇಂದು ಅಧಿಕಾರ ಸ್ವೀಕಾರ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ಅರವಿಂದ ಕೇಬ್ರಿವಾಲ್‌ ಕುಳಿತುಕೊಳ್ಳುತ್ತಿದ್ದ ಕುರ್ಚಿಯಲ್ಲಿ ಕುಳಿತುಕೊಂಡಿಲ್ಲ. ಬದಲಾಗಿ ಮುಖ್ಯಮಂತ್ರಿ ಕುರ್ಚಿ ಪಕ್ಕದಲ್ಲೇ ಬೇರೆ ಕುರ್ಚಿ ಹಾಕಿಕೊಂಡು ಕುಳಿತು ಅಧಿಕಾರ ಚಲಾಯಿಸುತ್ತಿರುವ ಫೋಟೋ ಭಾರಿ ವೈರಲ್ ಆಗಿದೆ.ಮುಖ್ಯಮಂತ್ರಿ ಎಂದಿಗಾದರೂ ಕೇಜ್ರವಾಲ್ ತಾನು ಅವರ ಆದೇಶ ಪಾಲಕಿ ಮಾತ್ರ ಎಂಬುದನ್ನು ಮರ್ಲಿನಾ ಸಾಂಕೇತಿಕವಾಗಿ ಈ ರೀತಿ ತೋರಿಸಿದ್ದಾರೆ. ಅಧಿಕಾರ ಸ್ವೀಕಾರ ಬಳಿಕ ಮಾಧ್ಯಮದವರ ಜೊತೆ

ಮುಖ್ಯಮಂತ್ರಿ ಆಸನ ಪಕ್ಕ ಬೇರೆ ಕುರ್ಚಿ ಹಾಕಿಕೊಂಡು ಕುಳಿತ ಆತಿಷಿ Read More »

ಶ್ರೀಲಂಕಾಗೆ ನೂತನ ಅಧ್ಯಕ್ಷರಾಗಿ ಅನುರಾ ಕುಮಾರ ದಿಸ್ಸಾ ನಾಯಕೆ

ಸಮಗ್ರ ನ್ಯೂಸ್: ಶ್ರೀಲಂಕಾದ ಅಧ್ಯಕ್ಷೀಯ ಚುನಾವಣೆಯಲ್ಲಿ ಎಡಪಂಥೀಯ ಒಲವು ಹೊಂದಿರುವ ಅನುರಾ ಕುಮಾರ ದಿಸ್ಸಾನಾಯಕೆ ಅವರು ಹಾಲಿ ಉದಾರವಾದಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರನ್ನು ಸೋಲಿಸಿ ಗೆಲುವು ಸಾಧಿಸಿದ್ದಾರೆ ಎಂದು ಚುನಾವಣಾ ಆಯೋಗದ ಅಂಕಿಅಂಶಗಳನ್ನು ಉಲ್ಲೇಖಿಸಿ ರಾಯಿಟರ್ಸ್ ಭಾನುವಾರ ವರದಿ ಮಾಡಿದೆ. ಈ ಮೂಲಕ ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ಅನುರಾ ಕುಮಾರ ದಿಸ್ಸಾನಾಯಕ ಆಯ್ಕೆಯಾಗಿದ್ದಾರೆ. ಶನಿವಾರ ಮತದಾನ ನಡೆಯಿತು. ದೇಶವು ತನ್ನ ಇತಿಹಾಸದಲ್ಲೇ ಅತ್ಯಂತ ಕೆಟ್ಟ ಆರ್ಥಿಕ ಬಿಕ್ಕಟ್ಟಿನಿಂದ ಮತ್ತು ಅದರ ಪರಿಣಾಮವಾಗಿ ರಾಜಕೀಯ ವಿಪ್ಲವದಿಂದ ಚೇತರಿಸಿಕೊಳ್ಳಲು

ಶ್ರೀಲಂಕಾಗೆ ನೂತನ ಅಧ್ಯಕ್ಷರಾಗಿ ಅನುರಾ ಕುಮಾರ ದಿಸ್ಸಾ ನಾಯಕೆ Read More »

ಮಾಜಿ ಸಿಎಂ ಬಿಎಸ್ ವೈಗೆ ಮತ್ತೊಂದು ಸಂಕಷ್ಟ| ಅಕ್ರಮ ಡಿನೋಟಿಫಿಕೇಶನ್ ಪ್ರಕರಣದಲ್ಲಿ ಲೋಕಾಯುಕ್ತದಿಂದ ಸಮನ್ಸ್

ಸಮಗ್ರ ನ್ಯೂಸ್: ಪೋಕ್ಸೋ ಕೇಸಲ್ಲಿ ಸಂಕಷ್ಟ ಎದುರಿಸುತ್ತಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಮತ್ತೊಂದು ಶಾಕ್ ನೀಡಲಾಗಿದೆ. ಅದೇ ಅಕ್ರಮ ಡಿನೋಟಿಫಿಕೇಷನ್ ಕೇಸಲ್ಲಿ ಲೋಕಾಯುಕ್ತದಿಂದ ಸಮನ್ಸ್ ಜಾರಿಗೊಳಿಸಲಾಗಿದೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಸಚಿವ ಕೃಷ್ಣಭೈರೇಗೌಡ ಸೇರಿದಂತೆ ವಿವಿಧ ಸಚಿವರು ಅಕ್ರಮ ಡಿನೋಟಿಫಿಕೇಷನ್ ಆರೋಪ ಮಾಡಿದ್ದರು. ಈ ಬೆನ್ನಲ್ಲೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ವಿರುದ್ಧದ ಡಿನೋಟಿಫಿಕೇಷನ್ ಹಗರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತದಿಂದ ಸಮನ್ಸ್ ಜಾರಿಗೊಳಿಸಲಾಗಿದೆ.

ಮಾಜಿ ಸಿಎಂ ಬಿಎಸ್ ವೈಗೆ ಮತ್ತೊಂದು ಸಂಕಷ್ಟ| ಅಕ್ರಮ ಡಿನೋಟಿಫಿಕೇಶನ್ ಪ್ರಕರಣದಲ್ಲಿ ಲೋಕಾಯುಕ್ತದಿಂದ ಸಮನ್ಸ್ Read More »

ಮತ್ತೆ ಚುನಾವಣಾ ಕಣಕ್ಕೆ ಇಳಿದ ಕೇಜ್ರಿವಾಲ್‌/ ನಾಳೆ ಹರಿಯಾಣದಲ್ಲಿ ಬೃಹತ್‌ ರೋಡ್‌ ಶೋ

ಸಮಗ್ರ ನ್ಯೂಸ್‌: ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ, ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹರಿಯಾಣ ವಿಧಾನಸಭಾ ಚುನಾವಣೆ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದು, ಸೆಪ್ಟೆಂಬರ್ 20 ರಂದು ಜಗಧ್ರಿ ಕ್ಷೇತ್ರದಲ್ಲಿ ರೋಡ್ ಶೋ ನಡೆಸಲಿದ್ದಾರೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಸಂದೀಪ್ ಪಾಠಕ್ ಗುರುವಾರ ತಿಳಿಸಿದ್ದಾರೆ. ಕೇಜ್ರಿವಾಲ್ ಅವರು ಹರಿಯಾಣದ 11 ಜಿಲ್ಲೆಗಳ 13 ಕಡೆ ನಡೆಯುವ ಸಮಾವೇಶಗಳಲ್ಲೂ ಭಾಗಿಯಾಗಲಿದ್ದಾರೆ. ಶೀಘ್ರದಲ್ಲೇ ದಿನಾಂಕ ಘೋಷಣೆ ಮಾಡಲಾಗುವುದು ಎಂದು ಪಾಠಕ್ ಹೇಳಿದ್ದಾರೆ. 90 ಸದಸ್ಯ ಬಲದ ಹರಿಯಾಣ

ಮತ್ತೆ ಚುನಾವಣಾ ಕಣಕ್ಕೆ ಇಳಿದ ಕೇಜ್ರಿವಾಲ್‌/ ನಾಳೆ ಹರಿಯಾಣದಲ್ಲಿ ಬೃಹತ್‌ ರೋಡ್‌ ಶೋ Read More »

ಒಂದು ರಾಷ್ಟ್ರ ಒಂದು ಚುನಾವಣೆ/ ಪ್ರಾಯೋಗಿಕವಲ್ಲ ಎಂದು ಡಿ ಕೆ ಶಿವಕುಮಾರ್‌

ಸಮಗ್ರ ನ್ಯೂಸ್‌: ಒಂದು ರಾಷ್ಟ್ರ, ಒಂದು ಚುನಾವಣೆ ಎಂಬ ಬಿಜೆಪಿಯ ಪ್ರಸ್ತಾಪವನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಟೀಕಿಸಿದ್ದು, ಇದು ಪ್ರಾಯೋಗಿಕವಾಗಿ ಸಾಧ್ಯವಿಲ್ಲ ಎಂದು ಹೇಳಿದ್ದಾರೆ. “ಕಾಂಗ್ರೆಸ್ ಪಕ್ಷವು ಒಂದು ರಾಷ್ಟ್ರ ಒಂದು ಚುನಾವಣೆಯನ್ನು ನಂಬುವುದಿಲ್ಲ, ಪ್ರಾಯೋಗಿಕವಾಗಿ ಅದು ಸಾಧ್ಯವಿಲ್ಲ. ಅವರು ಎಲ್ಲಾ ರಾಜ್ಯ ಪಕ್ಷಗಳನ್ನು ಸಡಿಲಿಸಲು ಬಯಸುತ್ತಾರೆ. ಅವರು ರಾಷ್ಟ್ರೀಯ ಪಕ್ಷಗಳು ಮಾತ್ರ ಉಳಿಯಬೇಕು ಎಂದು ಅವರು ಭಾವಿಸುತ್ತಾರೆ. ಫೆಡರಲ್ ರಚನೆಯಲ್ಲಿ ನೀವು ಅದನ್ನು ಮಾಡಲು ಸಾಧ್ಯವಿಲ್ಲ ಅವರು ದೊಡ್ಡ ರಿಸ್ಕ್ ತೆಗೆದುಕೊಳ್ಳುತ್ತಿದ್ದಾರೆ ಎಂದು ಶಿವಕುಮಾ‌ರ್ ತಿಳಿಸಿದ್ದಾರೆ.

ಒಂದು ರಾಷ್ಟ್ರ ಒಂದು ಚುನಾವಣೆ/ ಪ್ರಾಯೋಗಿಕವಲ್ಲ ಎಂದು ಡಿ ಕೆ ಶಿವಕುಮಾರ್‌ Read More »

ಶಾಸಕ ಮುನಿರತ್ನಗೆ ಮತ್ತೊಂದು ಟೆನ್ಷನ್: ಅತ್ಯಾಚಾರ ಆರೋಪದಡಿ ಎಫ್ಐಆರ್ ದಾಖಲು

ಸಮಗ್ರ ನ್ಯೂಸ್: ಜೀವ ಬೆದರಿಕೆ ಮತ್ತು ಜಾತಿನಿಂದನೆ ಕೇಸ್‌ನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ.ಕಾಂಗ್ರೆಸ್‌ಗೆ ಈ ಪ್ರಕರಣ ಅಸ್ತ್ರವಾಗಿ ಸಿಕ್ಕಿದೆ. ಅಂದರಂತೆ ಪ್ರತಿಭಟನೆ ನಡೆಸುತ್ತಿದ್ದಾರೆ. ಇದರ ನಡುವೆ ಮುನಿರತ್ನಗೆ ಮತ್ತೊಂದು ಕಂಟಕ ಎದುರಾಗಿದೆ. ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಬೆಂಗಳೂರು ಮೂಲದ ಮಹಿಳೆಯೊಬ್ರು ಮುನಿರತ್ನ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿ ದೂರು ದಾಖಲಿಸಿದ್ದಾರೆ. ಇದೀಗ ಮುನಿರತ್ನ ವಿರುದ್ಧ ಅತ್ಯಾಚಾರ ಆರೋಪದಡಿ

ಶಾಸಕ ಮುನಿರತ್ನಗೆ ಮತ್ತೊಂದು ಟೆನ್ಷನ್: ಅತ್ಯಾಚಾರ ಆರೋಪದಡಿ ಎಫ್ಐಆರ್ ದಾಖಲು Read More »