ರಾಜಕೀಯ

ರಾಜಕೀಯ ನಾಯಕರೇ ನಿಜವಾದ ಗೂಂಡಾಗಳು, ಭ್ರಷ್ಟರನ್ನು ಗುಂಡಿಟ್ಟು ಕೊಲ್ಲಬೇಕು – ಮುತಾಲಿಕ್ ಕಿಡಿ

ವಿಜಯಪುರ: ರಾಜಕೀಯ ನಾಯಕರು ನಿಜವಾದ ಗೂಂಡಾಗಳು. ಚುನಾವಣೆ ಬಂದಾಗ ಹಿಂದೂಗಳನ್ನು ಬಳಸಿಕೊಳ್ಳುತ್ತಾರೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಮುತಾಲಿಕ್, ಚುನಾವಣೆ ಬಂದಾಗ ರಾಜಕೀಯಕ್ಕೆ ಹಿಂದೂಗಳನ್ನು ಬಳಸಿಕೊಳ್ಳುತ್ತಾರೆ. ಬಳಿಕ ಹಿಂದುತ್ವಕ್ಕೆ ಹೋರಾಡಿದವರ ಮೇಲೆ ರೌಡಿಶೀಟರ್ ಕೇಸ್ ಹಾಕಲಾಗುತ್ತದೆ. ಅದನ್ನು ತಡೆಗಟ್ಟುವುದನ್ನು ಬಿಟ್ಟು, ತಮ್ಮ ಸ್ವಾರ್ಥಕ್ಕಾಗಿ ಹಿಂದುಗಳನ್ನು ಬಳಸಿಕೊಳ್ಳುತ್ತಾರೆ ಎಂದು ಹೇಳಿದ್ದಾರೆ. ಹಂಸಲೇಖ ಅವರು ದೊಡ್ಡ ವ್ಯಕ್ತಿ. ಅವರು ಅಂತಹ ಶಬ್ದ ಮಾತನಾಡಬಾರದಿತ್ತು. ಆದರೂ ಮಾತನಾಡಿದ್ದಾರೆ. ಅದನ್ನು ಖಂಡಿಸಿದ್ದೇನೆ. ಅವರು ಕ್ಷಮೆ ಕೇಳಿದ್ದಾರೆ. […]

ರಾಜಕೀಯ ನಾಯಕರೇ ನಿಜವಾದ ಗೂಂಡಾಗಳು, ಭ್ರಷ್ಟರನ್ನು ಗುಂಡಿಟ್ಟು ಕೊಲ್ಲಬೇಕು – ಮುತಾಲಿಕ್ ಕಿಡಿ Read More »

ಮೇಲ್ಮನೆ ಚುನಾವಣೆ: ಮಂಜುನಾಥ ಭಂಡಾರಿ ನಾಮಪತ್ರ ಸಲ್ಲಿಕೆ

ಮಂಗಳೂರು : ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಂಜುನಾಥ್ ಭಂಡಾರಿ ಮಂಗಳವಾರ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಕಾಂಗ್ರೆಸ್ ದ.ಕ. ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮುಖಂಡರಾದ ಮಿಥುನ್ ರೈ ಮತ್ತಿತರರು ಉಪಸ್ಥಿತರಿದ್ದರು. ಈ ವೇಳೆ ಮಾತನಾಡಿದ ಅವರು ‘ಕಳೆದ 40 ವರ್ಷದಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯನಾಗಿದ್ದೇನೆ. ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿದ್ದ ನನ್ನನ್ನು ಹಿರಿಯ ನಾಯಕರು ಗುರುತಿಸಿ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಕಲ್ಪಿಸಿದ್ದಾರೆ. ಈ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ’ ಎಂದರು. ದ.ಕ. ಮತ್ತು ಉಡುಪಿ ಜಿಲ್ಲೆಯ ಸ್ಥಳೀಯ

ಮೇಲ್ಮನೆ ಚುನಾವಣೆ: ಮಂಜುನಾಥ ಭಂಡಾರಿ ನಾಮಪತ್ರ ಸಲ್ಲಿಕೆ Read More »

ವಿಧಾನ ಪರಿಷತ್ ಚುನಾವಣೆ| ಬಿಜೆಪಿ ಅಭ್ಯರ್ಥಿಗಳ‌ ಮೊದಲ ಪಟ್ಟಿ ರಿಲೀಸ್|

ಬೆಂಗಳೂರು: ಡಿಸೆಂಬರ್ 10ರಂದು ನಡೆಯಲಿರುವ ವಿಧಾನ ಪರಿಷತ್ತಿನ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ ಚುನಾವಣೆಗೆ ಭಾರತೀಯ ಜನತಾ ಪಾರ್ಟಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಮೊದಲ ಪಟ್ಟಿಯಲ್ಲಿ 20 ಅಭ್ಯರ್ಥಿಗಳಿವರು. ಬೆಳಗಾವಿಯಿಂದ ಹಾಲಿ ಸದಸ್ಯ ಮಹಾಂತೇಶ ಕವಟಗಿಮಠ, ಧಾರವಾಡದಿಂದ ಪ್ರದೀಪ ಶೆಟ್ಟರ್ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಶಿವಮೊಗ್ಗದಿಂದ ಡಿ.ಎಸ್. ಅರುಣ್, ಕೊಡಗಿನಿಂದ ಸುಜಾ ಕುಶಾಲಪ್ಪ, ದಕ್ಷಿಣ ಕನ್ನಡ ಕೋಟ ಶ್ರೀನಿವಾಸ ಪೂಜಾರಿ, ಚಿಕ್ಕಮಗಳೂರು ಎಂ.ಕೆ.ಪ್ರಾಣೇಶ ಹೆಸರಿದೆ. ಉತ್ತರ ಕನ್ನಡ ಗಣಪತಿ ಉಳ್ವೇಕರ್, ಮೈಸೂರು ರಘು ಕೌಟಿಲ್ಯ,

ವಿಧಾನ ಪರಿಷತ್ ಚುನಾವಣೆ| ಬಿಜೆಪಿ ಅಭ್ಯರ್ಥಿಗಳ‌ ಮೊದಲ ಪಟ್ಟಿ ರಿಲೀಸ್| Read More »

ರೈತರ ಪರವಾಗಿ ಪ್ರಧಾನಿಗೆ ಅಭಿನಂದನೆ- ಯಡಿಯೂರಪ್ಪ ಟ್ವೀಟ್

ಬೆಂಗಳೂರು: ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿದ ಕೇಂದ್ರ ಬಿಜೆಪಿ ಸರ್ಕಾರದ ನಿರ್ಧಾರಕ್ಕೆ ದೇಶದ ರೈತರ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಟ್ವೀಟಿಸಿದ್ದಾರೆ. ರೈತರ ಕೃಷಿ ಕಾಯ್ದೆ ವಿರುದ್ಧ ದೇಶದ ಹಲವು ಭಾಗದ ರೈತರ ವಿರೋಧಕ್ಕೆ ಸ್ಪಂದಿಸಿ ಕಾಯ್ದೆಗಳನ್ನು ಹಿಂಪಡೆದ ಪ್ರಧಾನಿ ಅವರಿಗೆ ರೈತರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಸದಾ ರೈತರ ಹಿತ, ರೈತ ಪರವಾದ ಬದ್ಧತೆ ಹೊಂದಿರುವ ಕೇಂದ್ರ ಸರ್ಕಾರ, ಪ್ರತಿಷ್ಠೆ, ರಾಜಕೀಯಗಳನ್ನೆಲ್ಲಾ ಪರಿಗಣಿಸದೆ ಸಂವೇದನಾಶೀಲತೆಯನ್ನು ಪ್ರದರ್ಶಿಸಿದೆ ಎಂದು ಅವರು ತಿಳಿಸಿದ್ದಾರೆ.

ರೈತರ ಪರವಾಗಿ ಪ್ರಧಾನಿಗೆ ಅಭಿನಂದನೆ- ಯಡಿಯೂರಪ್ಪ ಟ್ವೀಟ್ Read More »

ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿರಲಿ;ಎದೆಯಗಲ ಎಷ್ಟೇ ಇಂಚಿನದ್ದಾಗಿರಲಿ, ಜನಶಕ್ತಿಯ ಎದುರು ಆತ ಮಣಿಯಲೇಬೇಕು. ಇದುವೇ ಪ್ರಜಾಪ್ರಭುತ್ವದ ಸೊಗಸು: ಪ್ರಧಾನಿ ನಡೆಯನ್ನು ಹೊಗಳಿ, ಕಿಚಾಯಿಸಿದ ಸಿದ್ದು

ಬೆಂಗಳೂರು: ಕರಾಳ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿದ ಕೇಂದ್ರ ಬಿಜೆಪಿ ಸರ್ಕಾರದ ನಿರ್ಧಾರ ದೇಶದ ಮಣ್ಣಿನ ಮಕ್ಕಳ ಅಭೂತಪೂರ್ವ ಹೋರಾಟಕ್ಕೆ ಸಿಕ್ಕ ಗೆಲುವಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ರೈತ ಹೋರಾಟಗಾರರಿಗೆ ಅಭಿನಂದನೆಗಳು ಜೈಕಿಸಾನ್ ಎಂದು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕೃಷಿ ಕಾಯ್ದೆ ರದ್ದುಗೊಳಿಸಿದರಷ್ಟೇ ಸಾಲದು ಈ ಕರಾಳ ಕಾಯ್ದೆ ರದ್ದತಿಗಾಗಿ ನಡೆದ ಹೋರಾಟದಲ್ಲಿ ಹುತಾತ್ಮರಾದ ರೈತ ಕುಟುಂಬಗಳಿಗೆ ಕೇಂದ್ರ ಬಿಜೆಪಿ ಸರ್ಕಾರ ತಲಾ 25 ಲಕ್ಷ ರೂಪಾಯಿ ಪರಿಹಾರ ಕೊಡಬೇಕು ಎಂದು ಒತ್ತಾಯಿಸಿದ್ದಾರೆ. ಸರ್ವಾಧಿಕಾರಿ

ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿರಲಿ;ಎದೆಯಗಲ ಎಷ್ಟೇ ಇಂಚಿನದ್ದಾಗಿರಲಿ, ಜನಶಕ್ತಿಯ ಎದುರು ಆತ ಮಣಿಯಲೇಬೇಕು. ಇದುವೇ ಪ್ರಜಾಪ್ರಭುತ್ವದ ಸೊಗಸು: ಪ್ರಧಾನಿ ನಡೆಯನ್ನು ಹೊಗಳಿ, ಕಿಚಾಯಿಸಿದ ಸಿದ್ದು Read More »

‘ಸಂಸತ್ ನಲ್ಲಿ ಅಂಗೀಕಾರವಾಗದ ಹೊರತು‌ ನಾವು ಪ್ರಧಾನಿಯನ್ನು ನಂಬಲ್ಲ’ – ರೈತ ನಾಯಕ ರಾಕೇಶ್ ಹೇಳಿಕೆ

ನವದೆಹಲಿ: ಕೃಷಿ ಮಸೂದೆಗಳನ್ನು ರದ್ದುಪಡಿಸಿ ಘೋಷಣೆ ಹೊರಡಿಸಿದ ಪ್ರಧಾನಿ ಮೋದಿಯವರ ನಿರ್ಧಾರದ ಸಂಬಂಧ ಮಾತನಾಡಿದ ಭಾರತೀಯ ಕಿಸಾನ್​ ಯೂನಿಯನ್​ ನಾಯಕ ರಾಕೇಶ್​ ಟಿಕಾಯತ್​, ಸಂಸತ್​ನಲ್ಲಿ ಈ ನಿರ್ಧಾರವನ್ನು ಅಂಗೀಕರಿಸಿದ ಬಳಿಕವೇ ಸತ್ಯಾಗ್ರಹದ ಸ್ಥಳದಿಂದ ರೈತರು ತಮ್ಮ ಮನೆಗೆ ಮರಳಲಿದ್ದಾರೆ ಎಂದು ಹೇಳಿದ್ದಾರೆ. ಕೃಷಿ ಮಸೂದೆ ವಾಪಸ್​ ಪಡೆದುಕೊಂಡ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ರಾಕೇಶ್​, ರೈತರ ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ ಕಾನೂನು ಬದ್ಧಗೊಳಿಸುವುದು ಸೇರಿದಂತೆ ಇನ್ನೂ ಅನೇಕ ಬೇಡಿಕೆಗಳು ಹಾಗೆಯೇ ಉಳಿದಿದೆ. ಇವುಗಳ ಬಗ್ಗೆ ಪ್ರಧಾನಿ

‘ಸಂಸತ್ ನಲ್ಲಿ ಅಂಗೀಕಾರವಾಗದ ಹೊರತು‌ ನಾವು ಪ್ರಧಾನಿಯನ್ನು ನಂಬಲ್ಲ’ – ರೈತ ನಾಯಕ ರಾಕೇಶ್ ಹೇಳಿಕೆ Read More »

ಬಟ್ಟೆಬಿಚ್ಚಿ ಓಡಾಡೋರಿಗೇನ್ ಗೊತ್ತು ಗಾಂಧಿ ಮೌಲ್ಯ?: ಹಿರಿಯ ಕಾಂಗ್ರೆಸ್ ಮುಖಂಡ ರಮೇಶ್ ಕುಮಾರ್ ಕಿಡಿಕಾರಿದ್ದು ಯಾರ ಬಗ್ಗೆ ಗೊತ್ತ?

ಬೆಂಗಳೂರು: ನಮಗೆ ಸ್ವಾತಂತ್ರ‍್ಯ ಸಿಕ್ಕಿದ್ದು ಬರೀ ಭಿಕ್ಷೆ ಮಾತ್ರ. ಒಂದು ಕೆನ್ನೆಗೆ ಹೊಡೆದರೆ ಎರಡೂ ಕೆನ್ನೆಗೆ ಹೊಡೆಸಿಕೊಳ್ಳಿ ಎಂದು ಗಾಂಧೀಜಿ ಅವರಿಗೆ ಸಿಗುವುದು ಭಿಕ್ಷೆ ಮಾತ್ರವೇ ಎಂದು ಹೇಳಿದ್ದ ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕಿಡಿಕಾರಿದ್ಧಾರೆ. ಈ ಬಗ್ಗೆ ಮಾತನಾಡಿದ ರಮೇಶ್ ಕುಮಾರ್ ಬಟ್ಟೆ ಬಿಚ್ಚಿ ಓಡಾಡುವವರಿಗೇನು ಗೊತ್ತಿದೆ ಗಾಂಧಿ ಮೌಲ್ಯ? ಎಂದು ಖಾರವಾಗಿ ಪ್ರಶ್ನಿಸಿದ್ದಾರೆ. ಆಕೆಯಂಥವರು ಹೊಟ್ಟೆಪಾಡಿಗಾಗಿ ಬಟ್ಟೆ ಬಿಚ್ಚಿ ತಿರುಗುವವರು. ಅಂಥವರ ಬಗ್ಗೆ ಇಲ್ಲಿ ಮಾತನಾಡುವುದು ಸರಿಯಲ್ಲ.

ಬಟ್ಟೆಬಿಚ್ಚಿ ಓಡಾಡೋರಿಗೇನ್ ಗೊತ್ತು ಗಾಂಧಿ ಮೌಲ್ಯ?: ಹಿರಿಯ ಕಾಂಗ್ರೆಸ್ ಮುಖಂಡ ರಮೇಶ್ ಕುಮಾರ್ ಕಿಡಿಕಾರಿದ್ದು ಯಾರ ಬಗ್ಗೆ ಗೊತ್ತ? Read More »

“ಕಾಂಗ್ರೆಸ್‌ನವರು ಸುಳ್ಳಿನ ಫ್ಯಾಕ್ಟರಿ ಇದ್ದಂತೆ”- ಶ್ರೀರಾಮುಲು ವಾಗ್ದಾಳಿ

ಗದಗ: ಕಾಂಗ್ರೆಸ್‍ನವರು ಸುಳ್ಳಿನ ಫ್ಯಾಕ್ಟರಿ ಇದ್ದಂತೆ. ಸತ್ಯಕ್ಕೆ ದೂರವಾದದ್ದನ್ನು ಮಾತನಾಡುತ್ತಾರೆ. ಸಿದ್ದರಾಮಯ್ಯ ಅವರು ಹೊಸ ಟ್ರೆಂಡ್ ಆರಂಭಿಸಿದ್ದಾರೆ. ಅವರ ಬೂಟಾಟಿಕೆ ನೋಡುತ್ತಿದ್ದೇವೆ ಜನರಲ್ಲಿ ಗೊಂದಲ ಸೃಷ್ಟಿ ಮಾಡಲು ಮುಂದಾಗಿದ್ದಾರೆ ಎಂದು ಸಚಿವ ಬಿ. ಶ್ರೀರಾಮುಲು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಗದಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜನ ಸ್ವರಾಜ್ ಯಾತ್ರೆ ಮೂಲಕ ಪರಿಷತ್ ಚುನಾವಣೆ ಪ್ರಚಾರ ಮಾಡುತ್ತಿದ್ದೇವೆ. ನಾಲ್ಕು ತಂಡಗಳಲ್ಲಿ ಇಂದಿನಿಂದ ಯಾತ್ರೆ ಆರಂಭವಾಗಲಿದೆ. ಸುನಾಮಿ, ಸುಂಟರಗಾಳಿ, ಬಿರುಗಾಳಿ ಅಲೆ ಕಾಂಗ್ರೆಸ್ ಪಕ್ಷಕ್ಕೆ ಸೀಮಿತ. ಪರಿಷತ್ ಚುನಾವಣೆಯಲ್ಲಿ

“ಕಾಂಗ್ರೆಸ್‌ನವರು ಸುಳ್ಳಿನ ಫ್ಯಾಕ್ಟರಿ ಇದ್ದಂತೆ”- ಶ್ರೀರಾಮುಲು ವಾಗ್ದಾಳಿ Read More »

ಕಾಂಗ್ರೆಸ್ ಗೆ‌ ಬಿಗ್ ಶಾಕ್| 20 ಹಿರಿಯ ನಾಯಕರು ಪಕ್ಷಕ್ಕೆ ಗುಡ್ ಬೈ

ನವದೆಹಲಿ: ಕಾಂಗ್ರೇಸ್ ಹಿರಿಯ ಮುಖಂಡ ಗುಲಾಬ್ ನಬಿ ಆಜಾದ್ ಸೇರಿದಂತೆ ಸುಮಾರು 20 ಮಂದಿ ಹಿರಿಯ ನಾಯಕರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಜಮ್ಮು ಕಾಶ್ಮೀರದಲ್ಲಿ ಕಾಂಗ್ರೆಸ್ ಗೆ ದೊಡ್ಡ ಆಘಾತ ಉಂಟಾಗಿದೆ. ಜಮ್ಮು ಕಾಶ್ಮೀರದಲ್ಲಿ ಶೀಘ್ರದಲ್ಲೇ ವಿಧಾನಸಭೆ ಚುನಾವಣೆ ಘೋಷಣೆ ಆಗಲಿದೆ ಎಂಬ ವದಂತಿಗಳ ಬೆನ್ನಲ್ಲೇ ಕಾಂಗ್ರೆಸ್ ಪಕ್ಷವನ್ನು ಹಿರಿಯ ನಾಯಕರು ತೊರೆದಿರುವುದು ದೊಡ್ಡ ಹಿನ್ನಡೆ ಉಂಟಾದಂತಾಗಿದೆ. ಕೇಂದ್ರಾಡಳಿತ ಪ್ರದೇಶದಲ್ಲಿ ನೇಮಿಸಿರುವ ಪದಾಧಿಕಾರಿಗಳನ್ನು ಕೂಡಲೇ ಬದಲಾಯಿಸಬೇಕು ಎಂದು ರಾಜೀನಾಮೆ ನೀಡಿರುವ ಈ ನಾಯಕರು ಆಗ್ರಹಿಸಿದ್ದಾರೆ.

ಕಾಂಗ್ರೆಸ್ ಗೆ‌ ಬಿಗ್ ಶಾಕ್| 20 ಹಿರಿಯ ನಾಯಕರು ಪಕ್ಷಕ್ಕೆ ಗುಡ್ ಬೈ Read More »

ವಿವಾದರಹಿತ ನಾಯಕನಿಗಾಗಿ ಹುಡುಕಾಟ ನಡೆದಿದೆಯಾ ಹೈಕಮಾಂಡ್| ಮತ್ತೊಮ್ಮೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಸುಳಿವು | ಕರ್ನಾಟಕದಲ್ಲಿ ಹೊಸ ಮುಖ್ಯಮಂತ್ರಿ..!?

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಬಿಟ್ ಕಾಯಿನ್ ಬಿರುಗಾಳಿ ಎದ್ದಿದೆ. ನಿನ್ನೆ ಕಾಂಗ್ರೆಸ್ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಸಿಡಿಸಿದಂತ ಸ್ಪೋಟಕ ಬಾಂಬ್ ಗೆ ತಲ್ಲಣವೇ ಉಂಟಾಗಿದೆ. ಇಂದು ಮುಂದುವರೆದು ವಾಗ್ದಾಳಿ ನಡೆಸಿರುವಂತ ಅವರು, 2500 ಕೋಟಿ ಹಗರಣದ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಈ ಎಲ್ಲದರ ನಡುವೆ ವಿವಾದ ರಹಿತ ನಾಯಕನಿಗೆ ಬಿಜೆಪಿ ಹೈಕಮಾಂಡ್ ಹುಡುಕಾಟ ನಡೆಸಿದ್ದು, ಶೀಫ್ರವೇ ಹೊಸ ಮುಖ್ಯಮಂತ್ರಿ ಕರ್ನಾಟಕದಲ್ಲಿ ಆಗಲಿದ್ದಾರೆ ಎನ್ನಲಾಗುತ್ತಿದೆ. ಈ ನಡುವೆ ರಾಜ್ಯ ರಾಜಕೀಯದಲ್ಲಿ ಬಿಟ್‌ ಕಾಯಿನ್‌ ಪ್ರಕರಣ ತುಂಬಾನೇ ಸದ್ದು

ವಿವಾದರಹಿತ ನಾಯಕನಿಗಾಗಿ ಹುಡುಕಾಟ ನಡೆದಿದೆಯಾ ಹೈಕಮಾಂಡ್| ಮತ್ತೊಮ್ಮೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಸುಳಿವು | ಕರ್ನಾಟಕದಲ್ಲಿ ಹೊಸ ಮುಖ್ಯಮಂತ್ರಿ..!? Read More »