ರಾಜಕೀಯ

ಕಾಂಗ್ರೇಸ್ ವಕ್ತಾರೆ ಲಾವಣ್ಯ ಬಲ್ಲಾಳ್ ಗೆ ಜೀವ ಬೆದರಿಕೆ – ಆರೋಪಿ ಬಂಧನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು: ಮಂಗಳೂರಿನ ಸ್ಥಳೀಯ ನ್ಯೂಸ್ ಚಾನೆಲ್ ಒಂದರಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದ ಚರ್ಚಾ ಕಾರ್ಯಾಕ್ರಮದಲ್ಲಿ ಪೋನ್ ಮೂಲಕ ಕಾಂಗ್ರೇಸ್ ವಕ್ತಾರೆ ಲಾವಣ್ಯ ಬಲ್ಲಾಳ್ ಅವರಿಗೆ ಬೆದರಿಕೆ ಒಡ್ಡಿದ ಆರೋಪಿಯನ್ನು ಕೂಡಲೇ ಬಂಧಿಸುವಂತೆ ಮಾಜಿ ಸಿಎಂ ಸಿದ್ದರಾಮಯ್ಯ ಮಂಗಳೂರು ಪೊಲೀಸ್ ಆಯುಕ್ತರಿಗೆ ಆಗ್ರಹಿಸಿದ್ದಾರೆ. ಈ ಕುರಿತಂತೆ ಟ್ವಿಟ್ ಮಾಡಿರುವ ಅವರು ಮಂಗಳೂರಿನ ಸುದ್ದಿವಾಹಿನಿಯಲ್ಲಿ ನಡೆದ ಚರ್ಚೆಯಲ್ಲಿ ಕಾಂಗ್ರೇಸ್ ಪಕ್ಷದ ವಕ್ತಾರೆ ಲಾವಣ್ಯ ಬಲ್ಲಾಳ್ ಮತ್ತು ಅವರ ಕುಟುಂಬದವರಿಗೆ ಹಲ್ಲೆಯ ಬೆದರಿಕೆಯೊಡ್ಡಿರುವುದು ಖಂಡನೀಯ, ಮಂಗಳೂರು ಪೊಲೀಸ್ […]

ಕಾಂಗ್ರೇಸ್ ವಕ್ತಾರೆ ಲಾವಣ್ಯ ಬಲ್ಲಾಳ್ ಗೆ ಜೀವ ಬೆದರಿಕೆ – ಆರೋಪಿ ಬಂಧನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯ Read More »

ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ : ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇಂದು ನಡೆದ ಭಾಬಾನಿಪುರ ಉಪ ಚುನಾವಣೆಯಲ್ಲಿ ಬಿಜೆಪಿಯ ಪ್ರಿಯಾಂಕಾ ಟಿಬ್ರೂವಾಲ್ ಹಿಂದೆ ಹಾಕುವ ಮೂಲಕ ತಮ್ಮ ಮುಖ್ಯಮಂತ್ರಿ ಕುರ್ಚಿಯನ್ನು ಉಳಿಸಿಕೊಳ್ಳಲು ಅದ್ಭುತ ಗೆಲುವು ದಾಖಲಿಸಿದ್ದಾರೆ. ಡಿಲಿಮಿಟೇಶನ್ ನಂತರ 2011ರಲ್ಲಿ ರೂಪುಗೊಂಡ ಭಬಾನಿಪುರ ಕ್ಷೇತ್ರವು ಪ್ರಾರಂಭದಿಂದಲೂ ತೃಣಮೂಲ ಕಾಂಗ್ರೆಸ್ (ಟಿ.ಎಂ.ಸಿ.) ಭದ್ರಕೋಟೆಯಾಗಿದೆ. ಮಮತಾ ಬ್ಯಾನರ್ಜಿ ಅವರ ಕಾಳಿಘಾಟ್ ನಿವಾಸವು ಈ ಕ್ಷೇತ್ರದ ಅಡಿಯಲ್ಲಿ ಬರುತ್ತದೆ. ಫಲಿತಾಂಶಗಳು ಪ್ರಕಟವಾದ ನಂತರ ಸಂಭವನೀಯ ಚುನಾವಣೋತ್ತರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮುಂಜಾಗ್ರತಾ

ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಮಮತಾ ಬ್ಯಾನರ್ಜಿ Read More »

ಕೋರ್ಟ್ ಗೆ ಹಾಜರಾಗದ ಡಿಕೆಶಿ| ನ.6 ಕ್ಕೆ ಮತ್ತೆ ವಾರಂಟ್ ಜಾರಿ|

ಸುಳ್ಯ: ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ. ಕೆ. ಶಿವಕುಮಾರ್ ಅವರು ಕರ್ನಾಟಕದ ಇಂಧನ ಸಚಿವರಾಗಿದ್ದಾಗ ನಡೆದ ಘಟನೆಯೊಂದಕ್ಕೆ ಸಂಬಂಧಿಸಿ ಕೇಸಿನ ವಿಚಾರದಲ್ಲಿ ಸಾಕ್ಷ್ಯ ಹೇಳಲು ಸುಳ್ಯ ನ್ಯಾಯಾಲಯಕ್ಕೆ ಹಾಜರಾಗಬೇಕಾಗಿದ್ದು, ಅವರು ಹಾಜರಾಗದ ಹಿನ್ನಲೆಯಲ್ಲಿ ನ.06ಕ್ಕೆ ಮತ್ತೆ ವಾರೆಂಟ್ ಆಗಿದೆ 2016ನೆ‌ ಇಸವಿಯಲ್ಲಿ ‌ವಿದ್ಯುತ್ ಸಮಸ್ಯೆ‌ ಕುರಿತಂತೆ ಬೆಳ್ಳಾರೆಯ ಸಾಯಿ ಗಿರಿಧರ ಎಂಬವರು ಅಂದು ಇಂಧನ ಸಚಿವರಾಗಿದ್ದ ಡಿ.ಕೆ. ಶಿವಕುಮಾರ್ ಗೆ ಫೋನ್ ಮಾಡಿ ಸುಳ್ಯದ ವಿದ್ಯುತ್ ಅವ್ಯವಸ್ಥೆಯ ಬಗ್ಗೆ ಪ್ರಶ್ನಿಸಿದ್ದರು. ಇದರಿಂದ ‌ಕುಪಿತರಾದ ಶಿವಕುಮಾರ್, ಮೆಸ್ಕಾಂ ಎಂ.ಡಿ.ಗೆ ಹೇಳಿ

ಕೋರ್ಟ್ ಗೆ ಹಾಜರಾಗದ ಡಿಕೆಶಿ| ನ.6 ಕ್ಕೆ ಮತ್ತೆ ವಾರಂಟ್ ಜಾರಿ| Read More »

“ಸಿದ್ದರಾಮಯ್ಯ ಓರ್ವ ಭಯೋತ್ಪಾದಕ”- ಸಿದ್ದು ತಾಲಿಬಾನ್ ಹೇಳಿಕೆಗೆ ನಳಿನ್ ತಿರುಗೇಟು

ಮಂಗಳೂರು: ಆರೆಸ್ಸೆಸ್ ತಾಲಿಬಾನ್ ಇದ್ದಂತೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಪ್ರತಿಕ್ರಿಯೆ ನೀಡಿದ್ದಾರೆ. ಸಿದ್ದರಾಮಯ್ಯ ಒಬ್ಬ ಭಯೋತ್ಪಾದಕ ಇದ್ದಂತೆ ಎಂದು ಪರೋಕ್ಷವಾಗಿ ಕರಾವಳಿಯಲ್ಲಿ ನಡೆದಿರುವ ಕೊಲೆಗಳನ್ನು ಉಲ್ಲೇಖಿಸಿ, ಗಂಭೀರ ಆರೋಪ ಮಾಡಿದ್ದಾರೆ. ಸಿದ್ದರಾಮಯ್ಯರೇ ಒಬ್ಬ ಭಯೋತ್ಪಾದಕ ಇದ್ದಂತೆ. ಕಾಂಗ್ರೆಸ್ ನಲ್ಲಿಯೇ ಅವರು ಅತಂತ್ರ ಸ್ಥಿತಿಯಲ್ಲಿದ್ದಾರೆ. ಹೀಗಾಗಿ ಅವರು ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ತಾಲಿಬಾನ್ ರೀತಿಯ ಸಂಸ್ಕೃತಿ ಅವರದ್ದೇ. ಕಳೆದ ಬಾರಿ ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ರಾಜ್ಯದಲ್ಲಿ ಅತಿ ಹೆಚ್ಚು

“ಸಿದ್ದರಾಮಯ್ಯ ಓರ್ವ ಭಯೋತ್ಪಾದಕ”- ಸಿದ್ದು ತಾಲಿಬಾನ್ ಹೇಳಿಕೆಗೆ ನಳಿನ್ ತಿರುಗೇಟು Read More »

ಪಂಜಾಬ್ ಕಾಂಗ್ರೇಸ್ ನಲ್ಲಿ ಕ್ಷಿಪ್ರ ಬೆಳವಣಿಗೆ| ರಾಜ್ಯಾಧ್ಯಕ್ಷ ನವಜೋತ್ ಸಿಂಗ್ ಸಿಧು ರಾಜೀನಾಮೆ

ಪಂಜಾಬ್: ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಪಂಜಾಬ್‌ ರಾಜ್ಯ ಕಾಂಗ್ರೆಸ್‌ ಅಧ್ಯಕ್ಷರಾಗಿ ಕೆಲ ದಿನಗಳ ಹಿಂದಷ್ಟೇ ಅಧಿಕಾರ ಸ್ವೀಕರಿಸಿದ್ದ ನವಜೋತ್‌ ಸಿಂಗ್‌ ಸಿಧು, ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.ಮುಖ್ಯಮಂತ್ರಿಗಳಾಗಿ ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ವಿರೋಧದ ನಡುವೆಯೂ ನವಜೋತ್‌ ಸಿಂಗ್‌ ಸಿಧು, ಪಂಜಾಬ್‌ ರಾಜ್ಯ ಕಾಂಗ್ರೆಸ್‌ ಅಧ್ಯಕ್ಷರಾಗಿ ನೇಮಕಗೊಂಡಿದ್ದರು. ಇದಾದ ಕೆಲ ದಿನಗಳ ಬಳಿಕ ಕಾಂಗ್ರೆಸ್‌ ಹೈಕಮಾಂಡ್‌ ಸೂಚನೆ ಮೇರೆಗೆ ಅಮರಿಂದರ್‌ ಸಿಂಗ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ

ಪಂಜಾಬ್ ಕಾಂಗ್ರೇಸ್ ನಲ್ಲಿ ಕ್ಷಿಪ್ರ ಬೆಳವಣಿಗೆ| ರಾಜ್ಯಾಧ್ಯಕ್ಷ ನವಜೋತ್ ಸಿಂಗ್ ಸಿಧು ರಾಜೀನಾಮೆ Read More »

ಮಾರಲು ಇನ್ನೇನಿದೆ ಎಂದು ನೋಡ್ತಿದೀರಾ? ಪ್ರಧಾನಿಯನ್ನು ಛೇಡಿಸಿದ ಕಾಂಗ್ರೇಸ್

ಬೆಂಗಳೂರು: ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ವಿಮಾನದಲ್ಲಿ ಪ್ರಯಾಣಿಸುವಾಗ ಕಡತಗಳನ್ನು ಪರಿಶೀಲಿಸುತ್ತಿರುವ ಫೊಟೋಗೆ ಕಮೆಂಟ್‌ ಮಾಡಿರುವ ಕರ್ನಾಟಕ ಕಾಂಗ್ರೆಸ್‌, ‘ಫೋಟೋ ಶೂಟ್‌ ಚೆನ್ನಾಗಿದೆ ನರೇಂದ್ರ ಮೋದಿ ಅವರೇ, ಆದರೆ ಲೈಟಿಂಗ್‌ ಕಳಪೆಯಾಗಿದೆ!’ ಎಂದು ಛೇಡಿಸಿದೆ. ಟಾರ್ಚ್‌ ಬೆಳಕು ಬಳಸುವ ಬದಲು ನಿಮ್ಮ ಹೊಚ್ಚ ಹೊಸ 8,500 ಕೋಟಿ ಬೆಲೆಯ ವಿಮಾನದಲ್ಲಿ ಫೋಟೋಶೂಟ್‌ಗಾಗಿಯೇ ಪ್ರತ್ಯೇಕ ಲೈಟಿಂಗ್‌ ವ್ಯವಸ್ಥೆ ಮಾಡಿಕೊಳ್ಳಿ!’ ಎಂದು ಕಾಂಗ್ರೆಸ್‌ ಮೋದಿ ಅವರಿಗೆ ವ್ಯಂಗ್ಯದ ಸಲಹೆ ನೀಡಿದೆ. ‘ಅಂದ ಹಾಗೆ ಮಾರಲು ದೇಶದ ಇನ್ಯಾವ

ಮಾರಲು ಇನ್ನೇನಿದೆ ಎಂದು ನೋಡ್ತಿದೀರಾ? ಪ್ರಧಾನಿಯನ್ನು ಛೇಡಿಸಿದ ಕಾಂಗ್ರೇಸ್ Read More »

ಗಂಭೀರ ಚರ್ಚೆವೇಳೆ ಜಾರಿದ ಪಂಚೆ| ಸಿದ್ದು ಪಂಚೆಪ್ರಸಂಗಕ್ಕೆ ಸಾಕ್ಷಿಯಾದ ಸದನ

ಬೆಂಗಳೂರು: ವಿಧಾನಸಭೆ ಕಲಾಪ ಅಂದಮೇಲೆ ಅಲ್ಲಿ ಜನಪ್ರತಿನಿಧಿಗಳು ಬಿಸಿ ಬಿಸಿ ಚರ್ಚೆಯಲ್ಲಿ ತೊಡಗಿರುತ್ತಾರೆ. ರಾಜ್ಯದಲ್ಲಿ ನಡೆಯುತ್ತಿರುವ ಸಾಕಷ್ಟು ಗಂಭೀರ ವಿಚಾರಗಳ ಬಗ್ಗೆ ವಾದ ಪ್ರತಿವಾದ ನಡೆಯುತ್ತದೆ. ಆದರೆ ಇಂದು ನಡೆದ ಕಲಾಪವು ಹಾಸ್ಯಪ್ರಸಂಗಕ್ಕೆ ಸಾಕ್ಷಿಯಾಗಿದೆ. ಕಲಾಪದಲ್ಲಿ ಅತ್ಯಾಚಾರದ ವಿಚಾರವಾಗಿ ಸಿದ್ದರಾಮಯ್ಯ ಗಂಭೀರವಾಗಿ ಚರ್ಚೆ ನಡೆಸುತ್ತಿದ್ದ ವೇಳೆ ಅವರ ಪಂಚೆ ಕಳಚಿ ಹೋಗಿತ್ತು. ಕೂಡಲೇ ತಮ್ಮ ಸೀಟಿನಿಂದ ಎದ್ದು ಬಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಪಂಚೆ ಕಳಚಿರುವ ಬಗ್ಗೆ ಸಿದ್ದರಾಮಯ್ಯಗೆ ಕಿವಿಯಲ್ಲಿ ಗುಟ್ಟಾಗಿ ಹೇಳಿದರು. ಆದರೆ ಸಿದ್ದರಾಮಯ್ಯ

ಗಂಭೀರ ಚರ್ಚೆವೇಳೆ ಜಾರಿದ ಪಂಚೆ| ಸಿದ್ದು ಪಂಚೆಪ್ರಸಂಗಕ್ಕೆ ಸಾಕ್ಷಿಯಾದ ಸದನ Read More »

‘ನಮ್ಮ‌ಚಪ್ಪಲಿ ಹೆಕ್ಕಲಷ್ಟೇ ಅಧಿಕಾರಿಗಳು ಇರುವುದು’- ವಿವಾದಾತ್ಮಕ ಹೇಳಿಕೆ ನೀಡಿದ ಉಮಾಭಾರತಿ

ಭೋಪಾಲ್: ಅಧಿಕಾರಶಾಹಿಯನ್ನು ದುರ್ಬಲಗೊಳಿಸುವ ವಿವಾದಾತ್ಮಕ ಹೇಳಿಕೆಯನ್ನು ನೀಡಿರುವ ಹಿರಿಯ ಬಿಜೆಪಿ ನಾಯಕಿ ಉಮಾಭಾರತಿ, ಅಧಿಕಾರಿಗಳು ‘ನಮ್ಮ ಚಪ್ಪಲಿ ಹೆಕ್ಕಲು ಮಾತ್ರ’ ಇರುವುದು ಹಾಗೂ ಅವರಿಗೆ ‘ಯಾವುದೇ ನಿಲುವು (ಔಕತ್)’ ಇಲ್ಲ ಎಂದು ಹೇಳಿದ್ದಾರೆ. ಉಮಾಭಾರತಿಯ ಹೇಳಿಕೆಯ ವೀಡಿಯೊವನ್ನು ಶನಿವಾರದಿಂದ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ. ಅಧಿಕಾರಶಾಹಿಗಳು ರಾಜಕಾರಣಿಗಳನ್ನು ನಿಯಂತ್ರಿಸುತ್ತಾರೆ ಎಂದು ನೀವು ಭಾವಿಸುತ್ತೀರಾ? ಇಲ್ಲ. ಮೊದಲು ಖಾಸಗಿಯಾಗಿ ಚರ್ಚೆಗಳು ನಡೆಯುತ್ತವೆ ಹಾಗೂ ನಂತರ ಅಧಿಕಾರಶಾಹಿ ಒಂದು ಕಡತವನ್ನು ತಯಾರಿಸಿ ಅದನ್ನು ಪಡೆಯುತ್ತದೆ. 11 ವರ್ಷಗಳ ಕಾಲ ನಾನು ಕೇಂದ್ರ ಸಚವೆ

‘ನಮ್ಮ‌ಚಪ್ಪಲಿ ಹೆಕ್ಕಲಷ್ಟೇ ಅಧಿಕಾರಿಗಳು ಇರುವುದು’- ವಿವಾದಾತ್ಮಕ ಹೇಳಿಕೆ ನೀಡಿದ ಉಮಾಭಾರತಿ Read More »

ರಾಜ್ಯದಲ್ಲಿ ‘ಆಪರೇಷನ್ ಹಸ್ತ’ದ ದಾಳ ಉರುಳಿಸ್ತಿದೆ ಕಾಂಗ್ರೆಸ್| ಆತಂಕ ವ್ಯಕ್ತಪಡಿಸಿದ ಯಡಿಯೂರಪ್ಪ| ಡಿಕೆಶಿ ಕುರಿತು ಅಲರ್ಟ್ ಆಗಿರಲು ಮಾಜಿ ಸಿಎಂ ಸೂಚನೆ|

ಬೆಂಗಳೂರು: ಯಾರು ಕೂಡ ವಿಪಕ್ಷಗಳನ್ನ ಹಗುರವಾಗಿ ತಗೋಬೇಡಿ. ಕಾಂಗ್ರೆಸಿನವರು ಹೊಂಚು ಹಾಕಿ ಕುಳಿತಿದ್ದಾರೆ. ಕಾಂಗ್ರೆಸ್ ಮುಖಂಡರು ಬಿಜೆಪಿಯವರನ್ನು ಸಂಪರ್ಕಿಸುತ್ತಿದ್ದಾರೆ. ತಮ್ಮ ಪಕ್ಷಕ್ಕೆ ಸೆಳೆಯಲು ಯತ್ನಿಸುತ್ತಿದ್ದಾರೆ. ಹೀಗಾಗಿ ನಮ್ಮ ಪಕ್ಷವೂ ಬಲಗೊಳ್ಳಬೇಕಾಗಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ದಾವಣಗೆರೆಯಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಈ ಮಾತು ಹೇಳಿದ್ದಾರೆ. ಜನರಿಗೆ ನಮ್ಮ ಕಾರ್ಯಕ್ರಮ ಮುಟ್ಟಬೇಕಿದೆ. ಅದಕ್ಕಾಗಿ ತಳಮಟ್ಟದಿಂದಲೇ ಕೆಲಸ ಆಗಬೇಕಾಗಿದೆ. ಹಿಂದುಳಿದವರು, ಪರಿಶಿಷ್ಟ ಜಾತಿ, ಪರಿಶಿಷ್ಟ ಜನಾಂಗದ ಮತಗಳನ್ನು ಸೆಳೆಯಲು ಅವರ ನಾಯಕರನ್ನು

ರಾಜ್ಯದಲ್ಲಿ ‘ಆಪರೇಷನ್ ಹಸ್ತ’ದ ದಾಳ ಉರುಳಿಸ್ತಿದೆ ಕಾಂಗ್ರೆಸ್| ಆತಂಕ ವ್ಯಕ್ತಪಡಿಸಿದ ಯಡಿಯೂರಪ್ಪ| ಡಿಕೆಶಿ ಕುರಿತು ಅಲರ್ಟ್ ಆಗಿರಲು ಮಾಜಿ ಸಿಎಂ ಸೂಚನೆ| Read More »

ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ದಾವಣಗೆರೆ : ಬೆಂಗಳೂರಿನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಸುವ ಮುನ್ನವೇ ದಾವಣಗೆರೆಯಲ್ಲಿ ಮತ್ತೊಂದು ಘಟನೆ ನಡೆದಿದ್ದು, ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ದಾವಣಗೆರೆಯ ಭರತ್ ಕಾಲೋನಿಯ ಕೃಷ್ಣಾ ನಾಯ್ಕ್, ಸುಮಾ, ಧ್ರುವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಕೃಷ್ಣಾ ನಾಯ್ಕ್ ಪತ್ನಿ ಮತ್ತು ಮಗನಿಗೆ ವಿಷ ಕುಡಿಸಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಸದ್ಯ ಮಾಹಿತಿ ತಿಳಿದು ಸ್ಥಳಕ್ಕೆ ಅಗಮಿಸಿದ ಆರ್ ಎಂಸಿ ಠಾಣೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಒಂದೇ ಕುಟುಂಬದ ಮೂವರು ಆತ್ಮಹತ್ಯೆ Read More »