ರಾಜಕೀಯ

ಮೂರು ವರ್ಷದಿಂದ ಒಂದೇ ಪ್ರಾಮಿಸ್| ಸಂಖ್ಯೆಯನ್ನಾದರೂ ಬದಲಿಸಿ ಪ್ರಧಾನಿಗಳೇ… ಮೋದಿ ಭಾಷಣಕ್ಕೆ ಕಾಂಗ್ರೆಸ್ ವ್ಯಂಗ್ಯ

ನವದೆಹಲಿ: 75ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು, ದೇಶವನ್ನುದ್ದೇಶಿಸಿ ಮಾತನಾಡಿದ್ದರು. ಪ್ರಧಾನಿಯವರ ಭಾಷಣ ಈಗ ಟ್ರೋಲ್‌ಗೆ ಒಳಗಾಗಿದ್ದು, ಮೂರು ವರ್ಷವೂ ಒಂದೇ ಪ್ರಾಮಿಸ್ ಮಾಡಿದ್ದಾರೆ ಎಂದು ನೆಟ್ಟಿಗರು ಮೋದಿಯವರ ಕಾಲೆಳೆಯುತ್ತಿದ್ದಾರೆ. ಆಗಸ್ಟ್ 15, 2019, 2020, 2021 ಈ ಮೂರು ವರ್ಷವೂ 100 ಲಕ್ಷ ಕೋಟಿ ರೂಪಾಯಿಗಳನ್ನು ಆಧುನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ವಿನಿಯೋಗಿಸಲಾಗುತ್ತದೆ ಎಂದು ಹೇಳಿದ್ದಾರೆ ಎಂಬ ಮೀಮ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ರಾಷ್ಟ್ರದ ಜನರನ್ನು ಒಂದೇ ಭರವಸೆ, ಯೋಜನೆಯ […]

ಮೂರು ವರ್ಷದಿಂದ ಒಂದೇ ಪ್ರಾಮಿಸ್| ಸಂಖ್ಯೆಯನ್ನಾದರೂ ಬದಲಿಸಿ ಪ್ರಧಾನಿಗಳೇ… ಮೋದಿ ಭಾಷಣಕ್ಕೆ ಕಾಂಗ್ರೆಸ್ ವ್ಯಂಗ್ಯ Read More »

ತಾಲಿಬಾನಿ‌ ಸಂಸ್ಕ್ರತಿ ನಡೆಯಲ್ಲ, ತಪ್ಪಿತಸ್ಥರಿಗೆ ಶಿಕ್ಷೆ ಆಗ್ಲೇಬೇಕು- ಕೋಟ ಗುಡುಗು

ಮಂಗಳೂರು: ಸ್ವಾತಂತ್ರ್ಯ ರಥಯಾತ್ರೆಗೆ ಅಡ್ಡಿ ಪಡಿಸಿರುವುದು ತಾಲಿಬಾನಿ‌ ಸಂಸ್ಕ್ರತಿಯನ್ನು ತೋರ್ಪಡಿಸುತ್ತದೆ. ಸೌಹಾರ್ದಯುತವಾಗಿದ್ದ ಕರಾವಳಿಯಲ್ಲಿ ಇಂತಹ ವಿಚಾರಗಳು ಶೋಭೆ ತರದು. ಇಂತವುಗಳು ರಾಜ್ಯದಲ್ಲಿ ‌ನಡೆಯಲ್ಲ’ ಎಂದು ಸಮಾಜಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಗುಡುಗಿದ್ದಾರೆ. ಪುತ್ತೂರಿನ ಕಬಕದಲ್ಲಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ರಥಯಾತ್ರೆಗೆ ಇಂದು ಮುಂಜಾನೆ ಎಸ್ ಡಿಪಿಐ ಕಾರ್ಯಕರ್ತರು ಅಡ್ಡಿಪಡಿಸಿದ್ದರು. ರಥಯಾತ್ರೆಯಲ್ಲಿ ಸಾವರ್ಕರ್ ಭಾವಚಿತ್ರವನ್ನು ಹಾಕಿದ್ದಕ್ಕೆ ಅಡ್ಡಿ ಪಡಿಸಿದ್ದ ಕಾರ್ಯಕರ್ತರು ಟಿಪ್ಪುವಿನ ಫೋಟೋ ಕೂಡಾ ಹಾಕುವಂತೆ ದಾಂಧಲೆ ಎಬ್ಬಿಸಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಕೋಟ ‘ ಇಂತಹ

ತಾಲಿಬಾನಿ‌ ಸಂಸ್ಕ್ರತಿ ನಡೆಯಲ್ಲ, ತಪ್ಪಿತಸ್ಥರಿಗೆ ಶಿಕ್ಷೆ ಆಗ್ಲೇಬೇಕು- ಕೋಟ ಗುಡುಗು Read More »

ಡಿಕೆಶಿ ಎಡವಟ್ಟಿನಿಂದ ಹುತಾತ್ಮರಾದ ಸೋನಿಯಾ ಗಾಂಧಿ…!

ಬೆಂಗಳೂರು: ಇಂದು 75ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಕಾಂಗ್ರೆಸ್ ಭವನದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗಿದ್ದು, ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ರವರು ಭಾಷಣದ ವೇಳೆ ಎಡವಟ್ಟು ಮಾಡಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ನಡೆಸಿ, ಕಾರ್ಯಕ್ರಮವನ್ನುದ್ದೇಶಿಸಿ ಕಾಂಗ್ರೆಸ್ ನಾಯಕರು ಮಾತನಾಡಿದ್ದಾರೆ. ಈ ವೇಳೆ ಡಿ.ಕೆ ಶಿವಕುಮಾರ್ ಭಾಷಣ ಮಾಡುವಾಗ, ಹುತಾತ್ಮರಾದ ಸೋನಿಯಾ ಗಾಂಧಿ ಎಂದು ಬಾಯಿತಪ್ಪಿ ಹೇಳಿ ನಂತರ ಸಾರಿ, ಸಾರಿ ಹುತಾತ್ಮರಾದ ಇಂದಿರಾ ಗಾಂಧಿ ಎಂದು ತಪ್ಪನ್ನು ತಿದ್ದಿಕೊಂಡು ಭಾಷಣವನ್ನು ಮುಂದುವರೆಸಿದ್ದಾರೆ. ಬಳಿಕ ದೇಶ

ಡಿಕೆಶಿ ಎಡವಟ್ಟಿನಿಂದ ಹುತಾತ್ಮರಾದ ಸೋನಿಯಾ ಗಾಂಧಿ…! Read More »

‘ಬಸವನಾಡಲ್ಲಿ ಭ್ರಷ್ಟರಿಗಿಲ್ಲ ಅವಕಾಶ’ – ಸಚಿವೆ ಶಶಿಕಲಾ ಜೊಲ್ಲೆಗೆ ಘೇರಾವ್ ಕೂಗಿದ ವಿಜಯಪುರ ಜನತೆ

ವಿಜಯಪುರ: ಧ್ವಜಾರೋಹಣ ಮಾಡದಂತೆ ಮುಜರಾಯಿ, ಹಜ್ ಮತ್ತು ವಕ್ಫ್ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವೆಯೂ ಆಗಿರುವ ಶಶಿಕಲಾ ಜೊಲ್ಲೆ ಅವರಿಗೆ ಮಹಿಳೆಯರು ಮುತ್ತಿಗೆ ಹಾಕಿದ ಘಟನೆ ಇಂದು ನಡೆದಿದೆ. ಇಂದು 75 ನೇ ಸ್ವಾತಂತ್ರೋತ್ಸವ ಹಿನ್ನೆಲೆ ನಗರದ ಮಹಿಳಾ ವಿಶ್ವವಿದ್ಯಾಲಯದ ಆವರಣದಲ್ಲಿ ಧ್ವಜಾರೋಹಣಕ್ಕ ಆಗಮಿಸುತ್ತಿದ್ದ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆಯನ್ನು ತಡೆದ ಮಹಿಳೆಯರು, ಭ್ರಷ್ಟಾಚಾರ ಆರೋಪ ಹೊತ್ತಿರುವ ನೀವು ಧ್ವಜಾರೋಹಣ ಮಾಡದಂತೆ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಸಚಿವೆ ಬರುತ್ತಿದ್ದಂತೆ ಭ್ರಷ್ಟರಿಗೆ ಬಸವ ನಾಡಿನಲ್ಲಿ ಅವಕಾಶ

‘ಬಸವನಾಡಲ್ಲಿ ಭ್ರಷ್ಟರಿಗಿಲ್ಲ ಅವಕಾಶ’ – ಸಚಿವೆ ಶಶಿಕಲಾ ಜೊಲ್ಲೆಗೆ ಘೇರಾವ್ ಕೂಗಿದ ವಿಜಯಪುರ ಜನತೆ Read More »

ಇಂದಿನಿಂದಲೇ ನವಕರ್ನಾಟಕ ನಿರ್ಮಾಣದತ್ತ ಹೆಜ್ಜೆ – ನೂತನ ಯೋಜನೆಗಳನ್ನು ಘೋಷಿಸಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಕೊರೋನಾ ಸಾಂಕ್ರಾಮಿಕ ರೋಗ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಈ ಬಾರಿ 75ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಅತ್ಯಂತ ಸರಳವಾಗಿ ಆಚರಿಸಲಾಗುತ್ತಿದ್ದು ರಾಜಧಾನಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ಜನತೆಯನ್ನು ಉದ್ದೇಶಿಸಿ‌ ಮಾತನಾಡಿದರು. ಪ್ರಜಾಪ್ರಬುತ್ವ ಯಶಸ್ವಿಯಾಗಲು ಸಂವಿಧಾನ ಮೂಲ ಕಾರಣವಾಗಿದೆ.ಇಂದಿನಿಂದ ನವ ಕರ್ನಾಟಕ ನಿರ್ಮಾಣ ಆರಂಭವಾಗುತ್ತದೆ. ಹೊಸ ಚಿಂತನೆ, ಹೊಸ ದಾರಿ, ಹೊಸ ದಿಕ್ಸೂಚಿ, ಮಾನವ ಸಂಪನ್ಮೂಲ ಬಳಸಿಕೊಂಡು ಹೊಸ ತಂತ್ರಜ್ಞಾನ ಬಳಕೆ ಮಾಡಿ, ವೈಜ್ಞಾನಿಕವಾಗಿ ಕೃಷಿ, ಸೇವಾ ವಲಯವನ್ನ

ಇಂದಿನಿಂದಲೇ ನವಕರ್ನಾಟಕ ನಿರ್ಮಾಣದತ್ತ ಹೆಜ್ಜೆ – ನೂತನ ಯೋಜನೆಗಳನ್ನು ಘೋಷಿಸಿದ ಸಿಎಂ ಬೊಮ್ಮಾಯಿ Read More »

ಮಧ್ಯರಾತ್ರಿ ಸಿಕ್ಕಿದ ಸ್ವಾತಂತ್ರ್ಯವನ್ನು ಹಗಲಿರುಳು ಕಾಯಬೇಕಿದೆ – ಸ್ವಾತಂತ್ರ್ಯ ಧ್ವಜಾರೋಹಣ ಬಳಿಕ ಸಿಎಂ ಬೊಮ್ಮಾಯಿ ಕರೆ

ಬೆಂಗಳೂರು : ‘ದೇಶಕ್ಕೆ ಮಧ್ಯರಾತ್ರಿ ಬಂದ ಸ್ವಾತಂತ್ರ್ಯವನ್ನು ಹಗಲಿರುಳು ಕಾಯಬೇಕು. ಅಂತಹ ಪರಿಸ್ಥಿತಿ ಇಂದು ಸೃಷ್ಟಿಯಾಗಿದೆ’ ಎಂದು ನಾಡಿನ ಜನತೆಗೆ ವಿಧಾನಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಕರೆ ನೀಡಿದ್ದಾರೆ. 1947 ರಲ್ಲಿ ಬಂದ ಸ್ವಾತಂತ್ರ್ಯ ಸಾತ್ವಿಕ ಹೋರಾಟದಿಂದ ಬಂದಿದೆ. ನಾವೆಲ್ಲ 75 ವರ್ಷ ಪೂರೈಸಿದ್ದೇವೆ, ಸಿಕ್ಕಿದ ಸ್ವಾತಂತ್ರ್ಯ ಉಳಿಸಿಕೊಳ್ಳಲು ಜನತೆ ಚಿಂತಿಸಬೇಕು ಎಂದವರು ತಿಳಿಸಿದರು. ಪ್ರಜಾಪ್ರಭುತ್ವದ ಬುನಾದಿಯ ಮೇಲೆ ಮುನ್ನಡೆಯಬೇಕಾಗಿದೆ. ಅಮೃತ ಮಹೋತ್ಸವವನ್ನು ನಾವೆಲ್ಲರೂ ಅರ್ಥಪೂರ್ಣವಾಗಿ ಆಚರಿಸೋಣ ಎಂದು ಕರೆ ನೀಡಿದರು. ಸ್ವಾತಂರ್ತ್ಯ ದಿವಸವನ್ನು ಅರ್ಥಪೂರ್ಣವಾಗಿ ಹಾಗೂ

ಮಧ್ಯರಾತ್ರಿ ಸಿಕ್ಕಿದ ಸ್ವಾತಂತ್ರ್ಯವನ್ನು ಹಗಲಿರುಳು ಕಾಯಬೇಕಿದೆ – ಸ್ವಾತಂತ್ರ್ಯ ಧ್ವಜಾರೋಹಣ ಬಳಿಕ ಸಿಎಂ ಬೊಮ್ಮಾಯಿ ಕರೆ Read More »

ಸಿಎಂ ಬೊಮ್ಮಾಯಿ ಮತ್ತೊಂದು ಮಹತ್ವದ ಹೆಜ್ಜೆ ಶುಭಕೋರುವ ಬೋರ್ಡಿಂಗ್ಸ್ ಫ್ಲೆಕ್ಸ್ ಗೆ ಬ್ರೇಕ್

ಉಡುಪಿ: ಕೆಲವು ದಿನಗಳ ಹಿಂದೆ ಸರಕಾರಿ ಸಮಾರಂಭಗಳಲ್ಲಿ ಹೂ ಗುಚ್ಛ, ಹಾರ, ಇತರ ನೆನಪಿನ ಕಾಣಿಕೆ ನೀಡುವುದನ್ನು ನಿಷೇಧಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇದೀಗ ಮತ್ತೊಂದು ಮಹತ್ವದ ಘೋಷಣೆ ಮಾಡಿದ್ದಾರೆ. ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇಶುಭಕೋರುವಂತಹ ವರ್ಡಿಂಗ್ಸ್ ಫ್ಲೆಕ್ಸ್ ಗಳನ್ನು ಹಾಕುವುದನ್ನು ನಿಲ್ಲಿಸಬೇಕು ಎಂದರು. ಜೊತೆಗೆ ಫ್ಲೆಕ್ಸ್ ಗಳನ್ನು ಹಾಕದಂತೆ ಪಕ್ಷ ಮತ್ತು ಅಭಿಮಾನಿಗಳ ಬಳಿ ಮನವಿ ಮಾಡಿಕೊಂಡರು.ಸರಕಾರಿ ಸಮಾರಂಭಗಳಲ್ಲಿ ಹೂವಿನ ಬಳಕೆ ನಿಷೇಧ ಮಾಡಿರುವುದನ್ನು ವಿರೋಧಿಸಿ ಹೂವಿನ ವ್ಯಾಪ್ಯಾರಿಗಳು ಕೈಗೊಂಡಿದ್ದ ಪ್ರತಿಭಟನೆ

ಸಿಎಂ ಬೊಮ್ಮಾಯಿ ಮತ್ತೊಂದು ಮಹತ್ವದ ಹೆಜ್ಜೆ ಶುಭಕೋರುವ ಬೋರ್ಡಿಂಗ್ಸ್ ಫ್ಲೆಕ್ಸ್ ಗೆ ಬ್ರೇಕ್ Read More »

‘ನಿಮಗೇನು ಕಾಮನ್ ಸೆನ್ಸ್ ಇಲ್ವಾ?’ ದ.ಕ ಡಿಸಿ ಗೆ ಸಿಎಂ ಹಿಗ್ಗಾಮುಗ್ಗಾ ತರಾಟೆ

ಮಂಗಳೂರು: ಮಾಸ್ಕ್, ಗ್ಲೌಸ್ ಇಲ್ಲದೇ ಏನ್ ಆಡಳಿತ ಮಾಡ್ತೀರಾ?ಆರೋಗ್ಯ ಸಿಬ್ಬಂದಿಗೆ ಬೇಕಾದ ಸವಲತ್ತು ಕೊಡೋಕೆ ನಿಮ್ಮಿಂದ ಆಗಲ್ವಾ? ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ.ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತರಾಟೆಗೆ ತೆಗೆದುಕೊಂಡ ಘಟನೆ ಗುರುವಾರ ನಡೆಯಿತು. ದ.ಕ. ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಶಾ ಕಾರ್ಯಕರ್ತರು ಸೇರಿದಂತೆ ಅರೋಗ್ಯ ಕಾರ್ಯಕರ್ತರಿಗೆ ಪಿಪಿಇ ಕಿಟ್, ಮಾಸ್ಕ್ ಹಾಗೂ ಗ್ಲೌಸ್ ಕೊರತೆ ಇದೆ ಎಂದು ಶಾಸಕ ಯು.ಟಿ. ಖಾದರ್ ಆಕ್ಷೇಪಿಸಿದರು.ಇದಕ್ಕೆ ಪ್ರತಿಕ್ರಿಯೆ ನೀಡಿದ

‘ನಿಮಗೇನು ಕಾಮನ್ ಸೆನ್ಸ್ ಇಲ್ವಾ?’ ದ.ಕ ಡಿಸಿ ಗೆ ಸಿಎಂ ಹಿಗ್ಗಾಮುಗ್ಗಾ ತರಾಟೆ Read More »

ಶಾಸಕ ಸತೀಶ ರೆಡ್ಡಿ‌ ಮನೆ ಮುಂದೆ ನಿಲ್ಲಿಸಿದ್ದ ಕಾರುಗಳಿಗೆ ಬೆಂಕಿ ಇಟ್ಟ ಕಿಡಿಗೇಡಿಗಳು

ಬೆಂಗಳೂರು : ಬೆಂಗಳೂರಿನ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ ಎರಡು ಕಾರುಗಳಿಗೆ ಬೆಂಕಿ ಹಚ್ಚಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಡೆದಿದೆ. ಬೆಂಗಳೂರಿನ ಬೊಮ್ಮನಹಳ್ಳಿಯ ಸತೀಶ್ ರೆಡ್ಡಿ ಅವರ ನಿವಾಸದ ಬಳಿ ನಿಲ್ಲಿಸಿದ್ದ ಎರಡು ಐಷಾರಾಮಿ ಕಾರಿಗೆ ತಡರಾತ್ರಿ 1.30ಕ್ಕೆ ನಾಲ್ವರು ದುಷ್ಕರ್ಮಿಗಳು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಘಟನೆ ಸಂಬಂಧ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದು, ಹೆಚ್ಚುವರಿ ಪೊಲೀಸ್ ಆಯುಕ್ತ ಮುರುಗನ್ ಅವರು ಭೇಟಿ ನೀಡಿದ್ದಾರೆ.

ಶಾಸಕ ಸತೀಶ ರೆಡ್ಡಿ‌ ಮನೆ ಮುಂದೆ ನಿಲ್ಲಿಸಿದ್ದ ಕಾರುಗಳಿಗೆ ಬೆಂಕಿ ಇಟ್ಟ ಕಿಡಿಗೇಡಿಗಳು Read More »

ಹನಿನೀರಾವರಿ ಉತ್ತೇಜನಕ್ಕೆ ರಾಜ್ಯಕ್ಕೆ 300 ಕೋಟಿ ರೂ. ಅನುದಾನ ಮಂಜೂರು – ಶೋಭಾ ಕರಂದ್ಲಾಜೆ

ನವದೆಹಲಿ: ರಾಜ್ಯದ ರೈತರು ಹನಿ ನೀರಾವರಿಯಲ್ಲಿ ತೊಡಗಿಸಿಕೊಳ್ಳುವಂತೆ ಉತ್ತೇಜನ ನೀಡಲು ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿಯಲ್ಲಿ ಕರ್ನಾಟಕ ರಾಜ್ಯಕ್ಕೆ 300 ಕೋಟಿ ರೂ. ಅನುದಾನವನ್ನು ಮಂಜೂರು ಮಾಡಲಾಗಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಹೊಸದಿಲ್ಲಿಯಲ್ಲಿ ಆ.11ರಂದು ಬಿಡುಗಡೆಗೊಳಿಸಿದ ಪತ್ರಿಕಾ ಹೇಳಿಕೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಶೋಭಾ ಕರಂದ್ಲಾಜೆ, ಈ 300 ಕೋಟಿ ಅನುದಾನದಲ್ಲಿ 21 ಕೋಟಿ ಅನುದಾನವನ್ನು ಬುಡಕಟ್ಟು ಪ್ರದೇಶದ ಉಪ ಯೋಜನೆ, 51

ಹನಿನೀರಾವರಿ ಉತ್ತೇಜನಕ್ಕೆ ರಾಜ್ಯಕ್ಕೆ 300 ಕೋಟಿ ರೂ. ಅನುದಾನ ಮಂಜೂರು – ಶೋಭಾ ಕರಂದ್ಲಾಜೆ Read More »