ರಾಜಕೀಯ

ರಾಜ್ಯಸಭೆ ಚುನಾವಣೆ|ಮತದಾನಕ್ಕೆ ಗೈರಾದ ಶಿವರಾಂ ಹೆಬ್ಬಾರ್

ಸಮಗ್ರ ನ್ಯೂಸ್: ಇಂದು ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಈ ಚುನಾವಣೆಗೆ ಯಲ್ಲಾಪುರ ಬಿಜೆಪಿ ಶಾಸಕ ಅಲಬೈಲ್ ಶಿವರಾಂ ಹೆಬ್ಬಾರ್ ಗೈರಾಗಿದ್ದಾರೆ. ಇನ್ನುಳಿದಂತೆ 222 ಶಾಸಕರು ಮತ ಚಲಾಯಿಸಿದ್ದಾರೆ. ಇಂದು ಬೆಳಗ್ಗೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆದಿತ್ತು. ಎಸ್.ಟಿ ಸೋಮಶೇಖರ್ ಅಡ್ಡಮತದಾನ ಮಾಡಿರುವುದು ಮತ್ತು ಶಿವರಾಂ ಹೆಬ್ಬಾರ್ ಮತದಾನದಿಂದ ದೂರ ಉಳಿದಿರುವುದರಿಂದ ಬಿಜೆಪಿಗೆ ಎರಡು ಮತಗಳು ಕೈತಪ್ಪಿದೆ.

ರಾಜ್ಯಸಭೆ ಚುನಾವಣೆ|ಮತದಾನಕ್ಕೆ ಗೈರಾದ ಶಿವರಾಂ ಹೆಬ್ಬಾರ್ Read More »

ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಜೆಡಿಎಸ್ ಗೆ ಕನ್ಫರ್ಮ್ ಆಗಿದೆ; ಶಾಸಕ ಜಿಟಿ ದೇವೇಗೌಡ

ಸಮಗ್ರ ನ್ಯೂಸ್: ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಜೆಡಿಎಸ್ಗೆ ಕನ್ಫರ್ಮ್ ಆಗಿದೆ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಂಡ್ಯ ಸ್ಥಳೀಯ ನಾಯಕರ ಸಭೆ ನಡೆಸಿ ಚುನಾವಣೆ ಸಿದ್ಧತೆ ಮಾಡುತ್ತಿದ್ದೇವೆ. ಮಂಡ್ಯ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಬಗ್ಗೆ ಅಭಿಪ್ರಾಯ ಸಂಗ್ರಹಿಸುತ್ತಿದ್ದೇವೆ. ಅಭ್ಯರ್ಥಿ ಯಾರೆಂದು ಇನ್ನೂ ತೀರ್ಮಾನವಾಗಿಲ್ಲ ಎಂದು ಹೇಳಿದ್ದಾರೆ. ಟಿಕೆಟ್ ಗಾಗಿ ಸಂಸದೆ ಸುಮಲತಾ ಸಭೆ ವಿಚಾರವಾಗಿ ಮಾತನಾಡಿದ ಅವರು, ಸುಮಲತಾರವರು ಅಧಿಕೃತ ಬಿಜೆಪಿ ಮೆಂಬರ್ ಅಲ್ಲ. ಆದರೂ ಅವರು ಟಿಕೆಟ್ ಕೇಳುವುದರಲ್ಲಿ ತಪ್ಪಿಲ್ಲ.

ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಜೆಡಿಎಸ್ ಗೆ ಕನ್ಫರ್ಮ್ ಆಗಿದೆ; ಶಾಸಕ ಜಿಟಿ ದೇವೇಗೌಡ Read More »

ಬಿಜೆಪಿ ಟಿಕೆಟ್ ಸಿಗುವುದರಲ್ಲಿ ಯಾವುದೇ ಅನುಮಾನವಿಲ್ಲ;ಸುಮಲತಾ ಅಂಬರೀಶ್

ಸಮಗ್ರ ನ್ಯೂಸ್: ಬಿಜೆಪಿ ಟಿಕೆಟ್ ಸಿಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ ಮಂಡ್ಯದಿಂದ ಸ್ಪರ್ಧೆ ಮಾಡುವುದು ನನ್ನ ಆಸೆ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದರು. ಮಂಡ್ಯ ರೈಲು ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಿ ಹೊಸದಾಗಿ ನಿರ್ಮಾಣ ಮಾಡುವ ಕಾಮಗಾರಿಗೆ ಇಂದು (ಫೆ.26) ಪ್ರಧಾನಿ ನರೇಂದ್ರ ಮೋದಿಯವರು ಚಾಲನೆ ನೀಡಿದರು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಂಸದೆ, ನಾನು ಟಿಕೆಟ್ ಕೇಳಿಯೇ ಕೇಳುತ್ತೇನೆ. ನನಗೆ ನನ್ನದೇ ಆದ ಆತ್ಮವಿಶ್ವಾಸ ಇದೆ ಎಂದರು. ಜೆಡಿಎಸ್ ಪಕ್ಷ ಎನ್ ಡಿಎ ಭಾಗ, ನಾನು

ಬಿಜೆಪಿ ಟಿಕೆಟ್ ಸಿಗುವುದರಲ್ಲಿ ಯಾವುದೇ ಅನುಮಾನವಿಲ್ಲ;ಸುಮಲತಾ ಅಂಬರೀಶ್ Read More »

ಚುನಾವಣೆ ಹಿನ್ನೆಲೆ ವಿಧಾನಸೌಧ ಸುತ್ತಲೂ 144 ಸೆಕ್ಷನ್ ಜಾರಿ

ಸಮಗ್ರ ನ್ಯೂಸ್: ಕರ್ನಾಟಕದ 4 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಮತ್ತು ಅಧಿವೇಶನ ಹಿನ್ನೆಲೆ ವಿಧಾನಸೌಧ ಸುತ್ತಲೂ 144 ಸೆಕ್ಷನ್ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ. ಹಾಗೇ ಇಂದಿನಿಂದ 28 ನೇ ತಾರೀಖು ಬೆಳಗ್ಗೆ 6 ಗಂಟೆವರೆಗೆ ನಿಷೇದಾಜ್ಞೆ ಜಾರಿ ಮಾಡಲು ಆದೇಶ ಹೊರಡಿಸಿದೆ. ನಾಳೆ ಬೆಳಗ್ಗೆ 10 ಗಂಟೆಗೆ ವಿಧಾನಸೌಧದಲ್ಲಿ ಮತದಾನ ಆರಂಭವಾಗಲಿದ್ದು, ಸಂಜೆ 4 ಗಂಟೆಯವರೆಗೂ ಹಕ್ಕು ಚಲಾವಣೆಗೆ ಅವಕಾಶವಿರಲಿದೆ. ಸಂಜೆ 4 ಗಂಟೆಯಿಂದ 5ಗಂಟೆಯವರೆಗೆ ಮತಗಳ ಎಣಿಕೆ ನಡೆಯಲಿದೆ. ವಿವಿಧ ರಾಜಕೀಯ ಪಕ್ಷಗಳು, ಹಲವು

ಚುನಾವಣೆ ಹಿನ್ನೆಲೆ ವಿಧಾನಸೌಧ ಸುತ್ತಲೂ 144 ಸೆಕ್ಷನ್ ಜಾರಿ Read More »

ಲೋಕಸಭಾ ಚುನಾವಣೆ ಸ್ಪರ್ಧೆ ಖಚಿತ – ಸತ್ಯಜಿತ್ ಸುರತ್ಕಲ್

ಸಮಗ್ರ ನ್ಯೂಸ್: 15 ವರ್ಷದ ಹಿಂದೆ ನನಗೆ ಬಿಜೆಪಿಯಿಂದ ಸಿಗಬೇಕಾದ ಲೋಕಸಭಾ ಟಿಕೆಟ್‌ ಕಸಿಯಲಾಗಿತ್ತು. ಈಗ ಅದನ್ನು ಮತ್ತೆ ಕೊಡಿ ಎಂದು ಕೇಳುವುದು ನನ್ನ ಹಕ್ಕು. ಈ ಸಲದ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯಕರ್ತರ ಅಭಿಲಾಷೆಯಂತೆ ಸ್ಪರ್ಧಿಸುವುದು ಖಚಿತ ಎಂದು ಸತ್ಯಜಿತ್ ಸುರತ್ಕಲ್ ಹೇಳಿದ್ದಾರೆ. ಟೀಂ ಸತ್ಯಜಿತ್ ಸುರತ್ಕಲ್ ದ.ಕ. ಜಿಲ್ಲೆ ವತಿಯಿಂದ ತುಂಬೆ ಬ್ರಹ್ಮರಕೂಟ್ಲು ಬಂಟರ ಭವನದಲ್ಲಿ ಭಾನುವಾರ ನಡೆದ ಸತ್ಯಜಿತ್ ಸುರತ್ಕಲ್ ಅವರಿಗೆ ಬಿಜೆಪಿ ಲೋಕಸಭಾ ಚುನಾವಣೆಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ

ಲೋಕಸಭಾ ಚುನಾವಣೆ ಸ್ಪರ್ಧೆ ಖಚಿತ – ಸತ್ಯಜಿತ್ ಸುರತ್ಕಲ್ Read More »

ಫೆ.29 ರಂದು ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಸಭೆ/ ಘೋಷಣೆಯಾಗುತ್ತಾ ಟಿಕೆಟ್

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಯ ಹಿನ್ನಲೆಯಲ್ಲಿ ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯು ಫೆ.29 ರಂದು ಸಭೆ ಸೇರಲಿದ್ದು, ನಂತರ 100 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆಯಿದೆ. ಈ ಪಟ್ಟಿಯಲ್ಲಿ ಪಕ್ಷದ ಪ್ರಭಾವಿ ನಾಯಕರಾದ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಇಬ್ಬರೂ ಕಾಣಿಸಿಕೊಳ್ಳುವ ನಿರೀಕ್ಷೆಯಿದೆ ಎಂದು ಮೂಲಗಳು ಹೇಳಿವೆ. ಬಿಜೆಪಿಗೆ ಕಠಿಣ ಹಾದಿ ಇರುವ ಪ.ಬಂಗಾಳ ಹಾಗೂ ತಮಿಳುನಾಡಿನ ಅಭ್ಯರ್ಥಿಗಳೂ ಈ ಪಟ್ಟಿಯಲ್ಲಿ ಇರಲಿದ್ದಾರೆ. ಈಗಲೇ ಪಟ್ಟಿ ಪ್ರಕಟಿಸಿದರೆ ಅಭ್ಯರ್ಥಿಗಳು

ಫೆ.29 ರಂದು ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಸಭೆ/ ಘೋಷಣೆಯಾಗುತ್ತಾ ಟಿಕೆಟ್ Read More »

ಲೋಕಸಭಾ ಚುನಾವಣೆ/ ದಿನಾಂಕ ಘೋಷಣೆ ಯಾವಾಗ?

ಸಮಗ್ರ ನ್ಯೂಸ್: ಏಪ್ರಿಲ್ ಅಥವಾ ಮೇ ತಿಂಗಳಿನಲ್ಲಿ ಲೋಕಸಭೆಯ ಸಾರ್ವತ್ರಿಕ ಚುನಾವಣೆ ನಡೆಯುವ ನಿರೀಕ್ಷೆ ಇದ್ದು, ಮಾ.13ರ ನಂತರ ಚುನಾವಣಾ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ. ಚುನಾವಣೆ ಸಿದ್ಧತೆ ಪರಿಶೀಲನೆ ಸಲುವಾಗಿ ಆಯೋಗ ಈಗಾಗಲೇ ಹಲವಾರು ರಾಜ್ಯಗಳಿಗೆ ಭೇಟಿ ನೀಡುತ್ತಿದ್ದು, ಆ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ದಿನಾಂಕ ಘೋಷಿಸಲಾಗುತ್ತದೆ. ಪ್ರಸ್ತುತ ತಮಿಳುನಾಡಿನಲ್ಲಿ ಆಯೋಗ ಪರಿಶೀಲನೆ ಸಭೆ ನಡೆಸುತ್ತಿದ್ದು, ಬಳಿಕ ಉತ್ತರಪ್ರದೇಶ ಹಾಗೂ ಜಮ್ಮು-ಕಾಶ್ಮೀರಕ್ಕೆ ತೆರಳಲಿದೆ. ಈ ಭೇಟಿಗಳು ಮುಗಿದ ಬಳಿಕ ದಿನಾಂಕ ಪ್ರಕಟ ಮಾಡಲಾಗುತ್ತದೆ ಎಂದು ಮೂಲಗಳು

ಲೋಕಸಭಾ ಚುನಾವಣೆ/ ದಿನಾಂಕ ಘೋಷಣೆ ಯಾವಾಗ? Read More »

ಲೋಕ ಗೆಲ್ಲಲ್ಲು ತಂತ್ರ|ಕುಕ್ಕರ್‌ ಬಾಂಬ್‌ ಬ್ಲಾಸ್ಟ್ ಮಾಡಿದ ಬ್ರದರ್ಸ್‌ಗಳ ಬ್ರದರ್‌‌ರಿಂದ ಕುಕ್ಕರ್‌ ಹಂಚಿಕೆ ಎಂದು ಬಿಜೆಪಿ ಪೋಸ್ಟ್

ಸಮಗ್ರ ನ್ಯೂಸ್: ಇನ್ನೇನು ಲೋಕಸಭಾ ಚುನಾವಣೆ ಸಮೀಪದಲ್ಲಿ ಇದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಾಂಗ್ರೆಸ್ ಸಂಸದ ಡಿ.ಕೆ ಸುರೇಶ್ ಅವರು ಮತದಾರರನ್ನು ಸೆಳೆಯಲು ಕುಕ್ಕರ್ ವಿತರಿಸಿ ಆಮಿಷವೊಡ್ಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಬಿಜೆಪಿ ಟ್ವೀಟ್ ಮೂಲಕ ಕ್ರಮಕ್ಕೆ ಒತ್ತಾಯಿಸಿದೆ. ಕುಕ್ಕರ್‌ ಬಾಂಬ್‌ ಬ್ಲಾಸ್ಟ್ ಮಾಡಿದ ಬ್ರದರ್ಸ್‌ಗಳ ಬ್ರದರ್‌‌ರಿಂದ ಕುಕ್ಕರ್‌ ಹಂಚಿಕೆ! ದೇಶದ ವಿಭಜನೆ ಮಾಡುವ ಸಂಚು ರೂಪಿಸಿದ್ದ ಬೆಂಗಳೂರು ಗ್ರಾಮಾಂತರ ಸಂಸದ ಡಿಕೆ ಸುರೇಶ್ ಅವರಿಗೆ ಚುನಾವಣೆ ಘೋಷಣೆ ಮುನ್ನವೇ ಸೋಲಿನ ಭೀತಿ ಶುರುವಾಗಿದೆ.

ಲೋಕ ಗೆಲ್ಲಲ್ಲು ತಂತ್ರ|ಕುಕ್ಕರ್‌ ಬಾಂಬ್‌ ಬ್ಲಾಸ್ಟ್ ಮಾಡಿದ ಬ್ರದರ್ಸ್‌ಗಳ ಬ್ರದರ್‌‌ರಿಂದ ಕುಕ್ಕರ್‌ ಹಂಚಿಕೆ ಎಂದು ಬಿಜೆಪಿ ಪೋಸ್ಟ್ Read More »

ಮಾರ್ಚ್‌ 9ರ ನಂತರ ಲೋಕಸಭೆ ಚುನಾವಣೆ ದಿನಾಂಕ ಘೋಷಣೆ?

ಸಮಗ್ರ ನ್ಯೂಸ್: ಭಾರತೀಯ ಚುನಾವಣಾ ಆಯೋಗವು (ECI) ಮಾ. 9ರ ನಂತರ ಲೋಕಸಭಾ ಚುನಾವಣಾ ದಿನಾಂಕವನ್ನು ಘೋಷಿಸುವ ಸಾಧ್ಯತೆ. ಚುನಾವಣಾ ಆಯೋಗದ ಅಧಿಕಾರಿಗಳು ರಾಜ್ಯಗಳಿಗೆ ತೆರಳಿ ಅಂತಿಮ ಹಂತದ ಸಿದ್ಧತೆಯನ್ನು ಪರಿಶೀಲಿಸಲಿದ್ದಾರೆ. ಈ ಹಿಂದಿನ ಸಾರ್ವತ್ರಿಕ ಚುನಾವಣೆಯ ದಿನಾಂಕವನ್ನು 2019ರ ಮಾರ್ಚ್‌ 10ರಂದು ಆಯೋಗ ಘೋಷಿಸಿತ್ತು. ಏ. 11ರಿಂದ ಮೇ. 19ರವರೆಗೆ ಏಳು ಹಂತಗಳಲ್ಲಿ ಚುನಾವಣೆ ನಡೆದಿತ್ತು ಎಂದು ವರದಿ ವಿವರಿಸಿದೆ.ಲೋಕಸಭಾ ಚುನಾವಣೆ ಸನ್ನಿಹಿತವಾಗಿರುವ ನಡುವೆಯೇ ಕೆಲವು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಯೂ ನಡೆಯಲಿದ್ದು, ಈ ನಿಟ್ಟಿನಲ್ಲಿ ಇತ್ತೀಚೆಗೆ

ಮಾರ್ಚ್‌ 9ರ ನಂತರ ಲೋಕಸಭೆ ಚುನಾವಣೆ ದಿನಾಂಕ ಘೋಷಣೆ? Read More »

ರಾಜ್ಯ ರಾಜಕೀಯದಲ್ಲಿ ಮಹತ್ತರ ಬೆಳವಣಿಗೆ: ಒಂದೇ ಹೋಟೆಲ್​ನಲ್ಲಿ ನಡೆಯಿತು ಕಾಂಗ್ರೆಸ್​ನ 2 ಪ್ರತ್ಯೇಕ ಸಭೆ

ಸಮಗ್ರ ನ್ಯೂಸ್: ರಾಜ್ಯ ಕಾಂಗ್ರೆಸ್ ನಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿವೆ. ಲೋಕಸಭಾ ಚುನಾವಣೆಗೆ ತಯಾರಿ ನಡೆಸಿದ್ದ ಕಾಂಗ್ರೆಸ್​​ಗೆ ಇದೀಗ ಮೊದಲು ರಾಜ್ಯಸಭೆಯಲ್ಲಿ ಗೆಲ್ಲುವ ಟಾಸ್ಕ್​ ಇದೆ. ನಾಲ್ಕು ಸ್ಥಾನಕ್ಕೆ ಎನ್​ಡಿಎ ಅಭ್ಯರ್ಥಿಯಾಗಿ 5ನೇ ಅಭ್ಯರ್ಥಿ ಕಣದಲ್ಲಿರುವುದರಿಂದ ಆಡಳಿತರೂಢ ಕಾಂಗ್ರೆಸ್​​ಗೆ ಭಯ ಶುರುವಾಗಿದೆ. ಈ ಸಂಬಂಧ ಬೆಂಗಳೂರಿನ ಖಾಸಗಿ ಹೋಟೆಲ್​ವೊಂದರಲ್ಲಿ ಕಾಂಗ್ರೆಸ್​ನ ಎರಡು ಪ್ರತ್ಯೇಕ ಸಭೆಗಳು ನಡೆದಿದ್ದು, ಇದು ಕುತೂಹಲಕ್ಕೆ ಕಾರಣವಾಗಿದೆ. ಒಂದೇ ಹೋಟೆಲ್​ನಲ್ಲಿ ಒಂದು ಕಡೆ ಹಳೇ ಮೈಸೂರು ಭಾಗದ ಕಾಂಗ್ರೆಸ್​​ನ ಒಕ್ಕಲಿಗ ನಾಯಕರ ಸಭೆ ನಡೆದಿದ್ದರೆ,

ರಾಜ್ಯ ರಾಜಕೀಯದಲ್ಲಿ ಮಹತ್ತರ ಬೆಳವಣಿಗೆ: ಒಂದೇ ಹೋಟೆಲ್​ನಲ್ಲಿ ನಡೆಯಿತು ಕಾಂಗ್ರೆಸ್​ನ 2 ಪ್ರತ್ಯೇಕ ಸಭೆ Read More »