ರಾಜಕೀಯ

ಮಾಜಿ ಸಚಿವ, ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ.ಚಂದ್ರೇಗೌಡರು ಇನ್ನಿಲ್ಲ

ಸಮಗ್ರ ನ್ಯೂಸ್: ಮಾಜಿ ಸಚಿವ, ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ.ಚಂದ್ರೇಗೌಡರು(87 ವರ್ಷ) ತಡರಾತ್ರಿ 12.20 ಕ್ಕೆ ದಾರದಹಳ್ಳಿಯ ತಮ್ಮ ನಿವಾಸದಲ್ಲಿ ವಯೋಸಹಜ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ. ಮಂಗಳವಾರ ಮಧ್ಯಾಹ್ನ 2 ರಿಂದ ಸಂಜೆ 6ರ ವರೆಗೆ ಮೂಡಿಗೆರೆ ಅಡ್ಯಂತಾಯ ರಂಗಮಂದಿರದಲ್ಲಿ ಡಿ.ಬಿ. ಚಂದ್ರೇಗೌಡರ ಪಾರ್ಥಿವ ಶರೀರವನ್ನು ಸಾರ್ವಜನಿಕ ಅಂತಿಮ ದರ್ಶನಕ್ಕೆ ಇರಿಸಲಾಗುವುದು. ಬುಧವಾರ ಮಧ್ಯಾಹ್ನ ದಾರದಹಳ್ಳಿಯ ಅವರ ಪೂರ್ಣಚಂದ್ರ ಎಸ್ಟೇಟ್ ನಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಗುವುದು. ಮೂಡಿಗೆರೆ ತಾಲ್ಲೂಕಿನ ದಾರದಹಳ್ಳಿ ಗ್ರಾಮದ ಪಟೇಲ್ ಭೈರೇಗೌಡ ಹಾಗೂ ಪುಟ್ಟಮ್ಮ ಅವರ […]

ಮಾಜಿ ಸಚಿವ, ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ.ಚಂದ್ರೇಗೌಡರು ಇನ್ನಿಲ್ಲ Read More »

ವಿಧಾನಸಭಾ ಚುನಾವಣೆ/ ತೆಲಂಗಾಣದತ್ತ ಕರ್ನಾಟಕದ ಕಾಂಗ್ರೆಸ್ ನಾಯಕರು

ತೆಲಂಗಾಣ ರಾಜ್ಯ ವಿಧಾನಸಭಾ ಚುನಾವಣೆಗೆ ವೇದಿಕೆ ಸಿದ್ಧವಾಗಿದ್ದು, ಇದೀಗ ಕರ್ನಾಟಕದ ಕಾಂಗ್ರೆಸ್ ನಾಯಕರು ಮತ್ತು ಸಚಿವರುಗಳು ತೆಲಂಗಾಣದತ್ತ ಮುಖ ಮಾಡಿದ್ದಾರೆ. ಎಐಸಿಸಿ ನೂರಕ್ಕೂ ಅಧಿಕ ಕಾಂಗ್ರೆಸ್ ನಾಯಕರನ್ನು ಚುನಾವಣಾ ಪ್ರಚಾರಕ್ಕೆ ನೇಮಿಸಿದೆ. ಕೆಪಿಸಿಸಿ ಅಧ್ಯಕ್ಷರು ಮತ್ತು ಉಪಮುಖ್ಯಮಂತ್ರಿಗಳಾದ ಡಿ. ಕೆ. ಶಿವಕುಮಾರ್ ಈಗಾಗಲೇ ತೆಲಂಗಾಣದಲ್ಲಿ ಪ್ರಚಾರ ಆರಂಭಿಸಿದ್ದು, ಇದೀಗ ಎಐಸಿಸಿ ಕ್ಲಸ್ಟರ್ ಉಸ್ತುವಾರಿಗಳಾಗಿ, ಸಚಿವರಾದ ದಿನೇಶ್ ಗುಂಡೂರಾವ್, ಈಶ್ವರ್ ಖಂಡ್ರೆ, ಬಿ. ನಾಗೇಂದ್ರ, ಜಮೀರ್ ಅಹ್ಮದ್ ಖಾನ್, ಶಿವರಾಜ್ ಎಸ್ ತಂಗಡಗಿ, ಪ್ರಿಯಾಂಕ್ ಖರ್ಗೆ, ಎಂ ಸಿ

ವಿಧಾನಸಭಾ ಚುನಾವಣೆ/ ತೆಲಂಗಾಣದತ್ತ ಕರ್ನಾಟಕದ ಕಾಂಗ್ರೆಸ್ ನಾಯಕರು Read More »

ಬೆಂಗಳೂರಿನ ಬಾರ್ಟನ್ ಸೆಂಟರ್ ಕಚೇರಿಗೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಭೇಟಿ

ಸಮಗ್ರ ನ್ಯೂಸ್: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಬೆಂಗಳೂರಿನ MG ರಸ್ತೆಯ ಬಾರ್ಟನ್ ಸೆಂಟರ್ ಕಚೇರಿಗೆ ಸೆ.14 ರಂದು ಭೇಟಿ ನೀಡಿದರು. ತಮ್ಮ ಕಚೇರಿಗೆ ಆಗಮಿಸಿದ ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈಯವರನ್ನು ಆತ್ಮೀಯವಾಗಿ ಸ್ವಾಗತಿಸಿ, ಶಾಲು ಹೊದಿಸಿ ಹಾರಾರ್ಪಣೆ ಮಾಡಿ ಗೌರವಿಸಿದರು. ಈ ಸಂದರ್ಭದಲ್ಲಿ ತುಳುಕೂಟ ಬೆಂಗಳೂರು ಅಧ್ಯಕ್ಷರಾದ ಸುಂದರ್ ರಾಜ್, ಅಕ್ಷಯ್ ರೈ ದಂಬೆಕಾನ, ಮುರಳೀಧರ ರೈ ಮಠಂತಬೆಟ್ಟು, ನವೀನ್ ಕಲ್ಲಡ್ಕ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಮತ್ತು

ಬೆಂಗಳೂರಿನ ಬಾರ್ಟನ್ ಸೆಂಟರ್ ಕಚೇರಿಗೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಭೇಟಿ Read More »

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯಕ್ಕೆ ಸೋಲು| ಗೆದ್ದು ಬೀಗಿದ ಮೋದಿ‌ ಸರ್ಕಾರ

ಸಮಗ್ರ‌ ನ್ಯೂಸ್: ಲೋಕಸಭೆಯಲ್ಲಿ ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ಗೊತ್ತುವಳಿಯಲ್ಲಿ ಆಡಳಿತಾರೂಢ ಬಿಜೆಪಿ ನೇತೃತ್ವದ ಸರಕಾರವು ನಿರೀಕ್ಷೆಯಂತೆಯೇ ವಿಪಕ್ಷಗಳ ಒಕ್ಕೂಟ ‘ಇಂಡಿಯಾ’ ವಿರುದ್ಧ ಗೆಲುವು ದಾಖಲಿಸಿದೆ. ಅವಿಶ್ವಾಸ ನಿರ್ಣಯದ ಕುರಿತು ಪ್ರಧಾನಿ ನರೇಂದ್ರ ಮೋದಿ ಉತ್ತರಿಸುವಾಗ ವಿರೋಧ ಪಕ್ಷಗಳು ಲೋಕಸಭೆಯಿಂದ ಸಭಾತ್ಯಾಗ ಮಾಡಿವೆ. ಇದಕ್ಕೆ ಪ್ರತಿಯಾಗಿ, “ಅವರು ನಮ್ಮನ್ನು ತೆಗಳುತ್ತಾರೆ. ಆದರೆ, ಅವರಿಗೆ ನಮ್ಮ ಮಾತನ್ನು ಕೇಳಿಸಿಕೊಳ್ಳುವ ವ್ಯವಧಾನವಿಲ್ಲ” ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಾರೆ. ಬುಧವಾರ ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಯಲ್ಲಿ ಪ್ರತಿಕ್ರಿಯಿಸಿದ ಪ್ರಧಾನಿ, ದೇಶದ

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯಕ್ಕೆ ಸೋಲು| ಗೆದ್ದು ಬೀಗಿದ ಮೋದಿ‌ ಸರ್ಕಾರ Read More »

ಸೌಜನ್ಯ ಪ್ರಕರಣದಲ್ಲಿ ಧರ್ಮಾಧಿಕಾರಿಯ ಮಂಪರು ಪರೀಕ್ಷೆ ಮಾಡುವುದು ತಪ್ಪಲ್ಲ| ನಟ ಪ್ರಕಾಶ್ ರಾಜ್ ಪ್ರತಿಕ್ರಿಯೆ

ಸಮಗ್ರ ನ್ಯೂಸ್: ಧರ್ಮಸ್ಥಳ ಸಮೀಪದ ಮಣ್ಣಸಂಕ ಬಳಿ 11 ವರ್ಷಗಳ ಹಿಂದೆ ನಡೆದ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯ ಸಿಗಬೇಕು ಎನ್ನುವ ಕೂಗು ರಾಜ್ಯದೆಲ್ಲೆಡೆ ಜೋರಾಗಿದೆ. ಈ ಪ್ರಕರಣ ನಡೆದು ದಶಕಗಳೇ ಉರುಳಿದರೂ ನೊಂದ ಕುಟುಂಬಕ್ಕೆ ನ್ಯಾಯ ಸಿಕ್ಕಿಲ್ಲ. ಸೌಜನ್ಯ ಕುಟುಂಬಸ್ಥರು ಸತತ ಹೋರಾಟ ನಡೆಸುತ್ತಿದ್ದಾರೆ. ಇತ್ತೀಚೆಗೆ ಸಿಬಿಐ ಕೋರ್ಟ್ ತೀರ್ಪಿನ ಬಳಿಕ ಮತ್ತೆ ಹೋರಾಟಗಳು ಆರಂಭವಾಗಿವೆ. ಇದೀಗ ಬಹುಭಾಷಾ ನಟ ಪ್ರಕಾಶ್ ರಾಜ್ ಪ್ರತಿಕ್ರಿಯೆ ನೀಡಿದ್ದಾರೆ. ಉಜಿರೆ ಎಸ್‌ಡಿಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯ

ಸೌಜನ್ಯ ಪ್ರಕರಣದಲ್ಲಿ ಧರ್ಮಾಧಿಕಾರಿಯ ಮಂಪರು ಪರೀಕ್ಷೆ ಮಾಡುವುದು ತಪ್ಪಲ್ಲ| ನಟ ಪ್ರಕಾಶ್ ರಾಜ್ ಪ್ರತಿಕ್ರಿಯೆ Read More »

ರಾಹುಲ್ ಗಾಂಧಿಯವರ ಸಂಸತ್ ಸದಸ್ಯ ಸ್ಥಾನ ಅನರ್ಹತೆ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ| ಸತ್ಯಕ್ಕೆ ಸಂದ ಜಯ : ಎಂ ವೆಂಕಪ್ಪ ಗೌಡ

ಸಮಗ್ರ ನ್ಯೂಸ್: ರಾಹುಲ್ ಗಾಂಧಿಯವರ ಸಂಸತ್ ಸದಸ್ಯ ಸ್ಥಾನವನ್ನು ಅನರ್ಹ ಮಾಡಿದ ಮತ್ತು ವಿಧಿಸಿದ್ದ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿರುವುದನ್ನು ಸ್ವಾಗತಿಸುತ್ತೇವೆ. ಇದೊಂದು ಅಪರೂಪದ ಬೆಳವಣಿಗೆ ಯಾಗಿದ್ದು ದೇಶದಲ್ಲಿ ಹಿಂದೆಂದೂ ಇಂತಹ ಪ್ರಕರಣ ಸಂಭವಿಸಿರಲಿಲ್ಲ. ಕೇವಲ ವಿರೋಧ ಪಕ್ಷವನ್ನು ತುಳಿಯಲು, ನಾಯಕರುಗಳನ್ನು ಅವಮಾನಿಸುವಂತ ಸಣ್ಣತನವನ್ನು ತೋರಿದ ಕೇಂದ್ರ ಸರಕಾರ ಮತ್ತು ಬಿಜೆಪಿ ಪಕ್ಷಕ್ಕೆ ಇದು ಒಂದು ಪಾಠ ವಾಗಬೇಕು. ರಾಹುಲ್ ಗಾಂಧೀಯವರು ದೇಶದ ಸಮಸ್ಯೆಗಳನ್ನು ಮತ್ತು ಕೇಂದ್ರ ಸರಕಾರದ ವೈಫಲ್ಯಗಳನ್ನು ಸಂಸತ್ತಿನಲ್ಲಿ ಮಾತನಾಡುತ್ತಾರೆ ಎಂದು ಸಂಸತ್

ರಾಹುಲ್ ಗಾಂಧಿಯವರ ಸಂಸತ್ ಸದಸ್ಯ ಸ್ಥಾನ ಅನರ್ಹತೆ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ| ಸತ್ಯಕ್ಕೆ ಸಂದ ಜಯ : ಎಂ ವೆಂಕಪ್ಪ ಗೌಡ Read More »

ಕೊಟ್ಟಿಗೆಹಾರ: ನಿಡುವಾಳೆ ಗ್ರಾ.ಪಂ.ಅಧ್ಯಕ್ಷೆಯಾಗಿ ಬಿ.ಗುಲಾಬಿ, ಉಪಾಧ್ಯಕ್ಷರಾಗಿ ನವೀನ್ ಹಾವಳಿ ಅಯ್ಕೆ

ಸಮಗ್ರ ನ್ಯೂಸ್: ಬಾಳೂರು ಹೋಬಳಿಯ ನಿಡುವಾಳೆ ಗ್ರಾಮ ಪಂಚಾಯತ್‌ ಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ಶುಕ್ರವಾರ ಚುನಾವಣೆ ನಡೆಯಿತು.ನೂತನ ಅಧ್ಯಕ್ಷರಾಗಿ ಬಿ.ಗುಲಾಬಿ ಹಾಗೂ ಉಪಾಧ್ಯಕ್ಷರಾಗಿ ನವೀನ್ ಹಾವಳಿ ಅವಿರೋಧವಾಗಿ ಆಯ್ಕೆಯಾದರು.‌ ಗ್ರಾಮ ಪಂಚಾಯತ್‌ ಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಪಂಗಡದ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಅಭ್ಯರ್ಥಿಯ ಮೀಸಲು ಹಂಚಿಕೆಯಂತೆ ಚುನಾವಣೆ ನಡೆಯಿತು.ಚುನಾವಣಾ ಅಧಿಕಾರಿಯಾಗಿ ಬಣಕಲ್ ಕೃಷಿ ಅಧಿಕಾರಿ ಎಂ.ಆರ್.ವೆಂಕಟೇಶ್ ಭಾಗವಹಿಸಿದ್ದರು. ಉಪಾಧ್ಯಕ್ಷ ನವೀನ್ ಹಾವಳಿ ಮೊದಲ ಅವಧಿಯ ಚುನಾವಣೆಯಲ್ಲಿ ಚಪ್ಪಲಿ ಗುರುತಿನಲ್ಲಿ ಚುನಾವಣೆ

ಕೊಟ್ಟಿಗೆಹಾರ: ನಿಡುವಾಳೆ ಗ್ರಾ.ಪಂ.ಅಧ್ಯಕ್ಷೆಯಾಗಿ ಬಿ.ಗುಲಾಬಿ, ಉಪಾಧ್ಯಕ್ಷರಾಗಿ ನವೀನ್ ಹಾವಳಿ ಅಯ್ಕೆ Read More »

ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ| ಚಿತ್ತಾಪುರ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್ ಬಂಧನ

ಸಮಗ್ರ ನ್ಯೂಸ್: ಚುನಾವಣೆ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ ಪ್ರಕರಣದಲ್ಲಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ನನ್ನು ಪೊಲೀಸರು ಬಂಧಿಸಿ ನಂತರ ಬಿಡುಗಡೆ ಮಾಡಿರುವ ಘಟನೆ ನಡೆದಿದೆ. ಚುನಾವಣಾ ಸಂದರ್ಭದಲ್ಲಿನ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಚಿತ್ತಾಪುರ ಪೊಲೀಸರು ಬಂಧಿಸಿದ್ದರು. ರಾತ್ರಿಯೇ ಸ್ಟೇಷನ್ ಬೇಲ್‌ ಮೇಲೆ ಮಣಿಕಂಠ ರಾಠೋಡ್‌ ಹೊರಬಂದಿದ್ದಾರೆ. ಇನ್ನೊಂದೆಡೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಕೊಲೆ ಬೆದರಿಕೆ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕು ಗೊಳಿಸಿದ್ದಾರೆ. ಖರ್ಗೆ ಕುಟುಂಬ ಸಾಫ್ ಮಾಡುವುದಾಗಿ ಮಣಿಕಂಠ ಹೇಳಿದ್ದ ಎನ್ನಲಾದ

ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ| ಚಿತ್ತಾಪುರ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್ ಬಂಧನ Read More »

ನೀವು ಸಿಎಂಗೆ ಸಮಸ್ಯೆ ಹೇಳ್ಕೋಬೇಕಾ? ಹಾಗಾದ್ರೆ ಹೀಗೆ ಮಾಡಿ…

ಸಮಗ್ರ ನ್ಯೂಸ್: ನೀವು ನಿಮ್ಮ ಸಮಸ್ಯೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಹೇಳಿಕೊಂಡು ಪರಿಹಾರ ಕಂಡುಕೊಳ್ಳುವ ಯೋಜನೆಯಲ್ಲಿದ್ದರೆ ಅದಕ್ಕಾಗಿ ಪ್ರತ್ಯೇಕ ಸಾಮಾಜಿಕ ಜಾಲತಾಣದ ಲಿಂಕ್ ಅನ್ನು ಮುಖ್ಯಮಂತ್ರಿಗಳ ಕಾರ್ಯಾಲಯದಿಂದ ಬಿಡುಗಡೆ ಮಾಡಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಕಾರ್ಯಾಲಯದಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಸಾರ್ವಜನಿಕ ಕುಂದು ಕೊರತೆಗಳನ್ನು ನೇರವಾಗಿ ಮುಖ್ಯಮಂತ್ರಿಗಳ ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಯ ಗಮನಕ್ಕೆ ತರಲು ಮಾಧ್ಯಮ ಮತ್ತು ಸಾರ್ವಜನಿಕರಿಗೆ ನೆರವಾಗುವ ಉದ್ದೇಶದಿಂದ ಹೊಸ ಟ್ವಿಟರ್ ಖಾತೆಯನ್ನು ತೆರೆಯಲಾಗಿದೆ. https://twitter.com/osd_cmkarnataka ಹೆಸರಿನ ಟ್ವಿಟರ್ ಖಾತೆಗೆ ಸಾರ್ವಜನಿಕರು ಮತ್ತು

ನೀವು ಸಿಎಂಗೆ ಸಮಸ್ಯೆ ಹೇಳ್ಕೋಬೇಕಾ? ಹಾಗಾದ್ರೆ ಹೀಗೆ ಮಾಡಿ… Read More »

ವಿಪಕ್ಷ ನಾಯಕನಿಲ್ಲದೆ ಎರಡನೇ ವಾರಕ್ಕೆ ಕಾಲಿಟ್ಟ ವಿಧಾನಮಂಡಲ ಅಧಿವೇಶನ| ಸರ್ಕಾರದ ವಿರುದ್ದ ಮುಗಿಬೀಳಲು ವಿಪಕ್ಷಗಳ ಸರ್ಕಸ್

ಸಮಗ್ರ ನ್ಯೂಸ್: ವಿಧಾನ ಮಂಡಲ ಉಭಯ ಸದನಗಳ ಅಧಿವೇಶನ ಇಂದು ಎರಡನೇ ವಾರಕ್ಕೆ ಕಾಲಿಟ್ಟಿದೆ. ಹೀಗಿದ್ದರೂ, ವಿರೋಧ ಪಕ್ಷಗಳಿಗೆ ವಿಪಕ್ಷ ನಾಯಕನನ್ನು ಆಯ್ಕೆ ಮಾಡಲಾಗಿಲ್ಲ. ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿ ಎರಡು ತಿಂಗಳಾಗುತ್ತಿದ್ದರೂ, ವಿಧಾನ ಮಂಡಲ ಅಧಿವೇಶನ ಆರಂಭವಾಗಿ ಒಂದು ವಾರ ಕಳೆದರೂ ಪ್ರತಿಪಕ್ಷಕ್ಕೆ ಅಧಿಕೃತ ನಾಯಕರು ಇಲ್ಲದಂತಾಗಿದೆ. ವಿಪಕ್ಷ ನಾಯಕನ ಆಯ್ಕೆ ಸಂಬಂಧ ಬಿಜೆಪಿ ರಾಷ್ಟ್ರೀಯ ನಾಯಕರು ರಾಜ್ಯಕ್ಕೆ ಆಗಮಿಸಿ ಹಿರಿಯ ಮುಖಂಡರು ಹಾಗೂ ಶಾಸಕರಿಂದ ಅಭಿಪ್ರಾಯ ಪಡೆದುಕೊಂಡಿದ್ದು, ವರಿಷ್ಠರಿಗೆ ವರದಿಯನ್ನು ನೀಡಲಾಗಿದೆ. ಆದರೆ, ಇದುವರೆಗೂ

ವಿಪಕ್ಷ ನಾಯಕನಿಲ್ಲದೆ ಎರಡನೇ ವಾರಕ್ಕೆ ಕಾಲಿಟ್ಟ ವಿಧಾನಮಂಡಲ ಅಧಿವೇಶನ| ಸರ್ಕಾರದ ವಿರುದ್ದ ಮುಗಿಬೀಳಲು ವಿಪಕ್ಷಗಳ ಸರ್ಕಸ್ Read More »