ರಾಜಕೀಯ

ಸಿಎಂ ಸಿದ್ದರಾಮಯ್ಯರ ಕಾನೂನು ಸಲಹೆಗಾರರಾಗಿ ವಿರಾಜಪೇಟೆ ಶಾಸಕ ಎ.ಎಸ್ ಪೊನ್ನಣ್ಣ ನೇಮಕ

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರರಾಗಿ ಕೊಡಗು ಜಿಲ್ಲೆಯ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣರನ್ನು ನೇಮಕ ಮಾಡಿ, ಸಂಪುಟ ದರ್ಜೆ ಸ್ಥಾನಮಾನ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ಮುಖ್ಯಕಾರ್ಯದರ್ಶಿಗೆ ಟಿಪ್ಪಣಿ ಬರೆದಿದ್ದಾರೆ. ನನ್ನ ಕಾನೂನು ಸಲಹೆಗಾರರನ್ನಾಗಿ ನೇಮಿಸಿ ಸಂಪುಟ ದರ್ಜೆಯ ಸಚಿವರ ಸ್ಥಾನಮಾನದೊಂದಿಗೆ, ಲಭ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸಿ ಈ ಕೂಡಲೆ ಆದೇಶ ಹೊರಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಸಿಎಂ ಸಿದ್ದರಾಮಯ್ಯರ ಕಾನೂನು ಸಲಹೆಗಾರರಾಗಿ ವಿರಾಜಪೇಟೆ ಶಾಸಕ ಎ.ಎಸ್ ಪೊನ್ನಣ್ಣ ನೇಮಕ Read More »

ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಐದು ನಿಯಮಗಳು ಜಾರಿ

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತವಾಗಿ ಬಸ್ ಸೇವೆ ಕಲ್ಪಿಸಲು ಕಾಂಗ್ರೆಸ್ ಸರ್ಕಾರ ಸನ್ನದ್ಧವಾಗಿದೆ. ಆದರೆ, ಇದಕ್ಕೆ ಕೆಲವು ನಿಯಮಾವಳಿಯನ್ನು ರೂಪಿಸಲಾಗಿದೆ. ಏಸಿ ಬಸ್, ಡಿಲಕ್ಸ್ ಬಸ್ ಗಳನ್ನು ಹೊರತುಪಡಿಸಿ ಸಾಮಾನ್ಯ ಬಸ್ ಗಳಲ್ಲಿ ಎಲ್ಲಾ ವರ್ಗಗಳ ಮಹಿಳೆಯರು ಕರ್ನಾಟಕ ರಾಜ್ಯದೆಲ್ಲೆಡೆ ಎಲ್ಲಿ ಬೇಕಾದರೂ ಉಚಿತವಾಗಿ ಸಂಚರಿಸಬಹುದಾಗಿದೆ. ಈ ನಿಯಮವು ಕರ್ನಾಟಕದ ಮಹಿಳೆಯರಿಗೆ ಮಾತ್ರ ಅನ್ವಯವಾಗುತ್ತದೆ. ಕಾಂಗ್ರೆಸ್ ನ ಗ್ಯಾರಂಟಿ ಕಾರ್ಡ್ ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಕೆಲವು ನಿಬಂಧನೆಗಳನ್ನು

ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಐದು ನಿಯಮಗಳು ಜಾರಿ Read More »

ಕರ್ನಾಟಕ ಸೇರಿ ದೇಶಾದ್ಯಂತ ಎನ್ಐಎ ದಾಳಿ| ಎರಡು ದಿನಗಳ ಕಾರ್ಯಾಚರಣೆಯಲ್ಲಿ ಸಿಕ್ಕಿದ್ದೇನು?

ಸಮಗ್ರ ನ್ಯೂಸ್: ನಿನ್ನೆ(ಮೇ.31) ದೇಶದ ಬಿಹಾರ, ಕರ್ನಾಟಕ, ಕೇರಳ ಮೂರು ರಾಜ್ಯಗಳಲ್ಲಿ ಏಕಕಾಲದಲ್ಲಿ ಎನ್​​ಐಎ(NIA) ದಾಳಿ ಮಾಡಿತ್ತು. ಮೂರು ರಾಜ್ಯಗಳ 85 ಕಡೆ ದಾಳಿ ನಡೆಸಿದ್ದ ಎನ್​ಐಎತಂಡ, ಕರ್ನಾಟಕದ ದಕ್ಷಿಣ ಕನ್ನಡ, ಶಿವಮೊಗ್ಗ ಜಿಲ್ಲೆಯಲ್ಲಿ 25 ಕಡೆ ದಾಳಿ ಮಾಡಿದ್ದು, ಕೇರಳ ರಾಜ್ಯದ ಕಾಸರಗೋಡು, ಮಲ್ಲಾಪುರಂ, ಕೋಝಿಕೊಡ್, ತಿರುವನಂತಪುರಂನಲ್ಲಿ ರಾಷ್ಟ್ರೀಯ ತನಿಖಾ ದಳ ದಾಳಿ ನಡೆಸಿ, ಪರಿಶೀಲನೆ ನಡೆಸಿತ್ತು. ಈ ವೇಳೆ 17,50,100 ಲಕ್ಷ ನಗದು ಜಪ್ತಿ ಮಾಡಲಾಗಿದೆ. ಇಂದು(ಜೂ.1) ಕೂಡ ಕೆಲವೆಡೆ ದಾಳಿ ಮುಂದುವರಿಸಿದೆ ಎಂದು

ಕರ್ನಾಟಕ ಸೇರಿ ದೇಶಾದ್ಯಂತ ಎನ್ಐಎ ದಾಳಿ| ಎರಡು ದಿನಗಳ ಕಾರ್ಯಾಚರಣೆಯಲ್ಲಿ ಸಿಕ್ಕಿದ್ದೇನು? Read More »

ಸಿಎಂ ಸಿದ್ದರಾಮಯ್ಯ ಪ್ರಧಾನ ಸಲಹೆಗಾರನಾಗಿ ಸುನಿಲ್ ಕನುಗೋಲು ನೇಮಕ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಧಾನ ಸಲಹೆಗಾರರಾಗಿ ಚುನಾವಣಾ ತಂತ್ರಗಾರ ಸುನೀಲ್ ಕನುಗೋಲು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಕಾಂಗ್ರೆಸ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಕನುಗೋಲು ಚುನಾವಣಾ ತಂತ್ರಗಾರಿಕೆ ಹೆಣೆದಿದ್ದ ಕನುಗೋಲು ಅವರನ್ನೇ ಸಿದ್ದರಾಮಯ್ಯ ಪ್ರಧಾನ ಸಲಹೆಗಾರರನ್ನಾಗಿ ನೇಮಿಸಿಕೊಳ್ಳಲು ಮುಂದಾಗಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ಪೇಸಿಎಂ ಅಭಿಯಾನ ಕೈಗೊಂಡಿದ್ದರು. ಇದು ಬಿಜೆಪಿಗೆ ಭಾರೀ ಆಘಾತ ನೀಡಿತ್ತು, 40% ಸರ್ಕಾರ ಅನ್ನೋ ಕ್ಯಾಂಪೇನ್‌ ಅನ್ನು ಕಾಂಗ್ರೆಸ್‌ ಮಾಡಿತ್ತು. ಪೇ ಸಿಎಂ ಅಭಿಯಾನ, ಭಾರತ್ ಜೋಡೋ

ಸಿಎಂ ಸಿದ್ದರಾಮಯ್ಯ ಪ್ರಧಾನ ಸಲಹೆಗಾರನಾಗಿ ಸುನಿಲ್ ಕನುಗೋಲು ನೇಮಕ Read More »

‘ಸುಳ್ಯವನ್ನು ಮಾದರಿ ಕ್ಷೇತ್ರವನ್ನಾಗಿಸಲು ಅಧಿಕಾರಿಗಳೂ ಸಹಕರಿಸಿ’|ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಶಾಸಕಿ ಭಾಗೀರಥಿ ಮುರುಳ್ಯ

ಸಮಗ್ರ ನ್ಯೂಸ್: ಸರಕಾರದ ಯೋಜನೆಗಳನ್ನು ಉತ್ತಮ ರೀತಿಯಲ್ಲಿ ಅನುಷ್ಠಾನ ಮಾಡುವಲ್ಲಿ ಅಧಿಕಾರಿಗಳ ಜವಬ್ದಾರಿ ಹೆಚ್ಚಿನದ್ದು. ಅಧಿಕಾರಿಗಳು ಜನರನ್ನು ಯಾವುದೇ ಕಾರಣಕ್ಕೂ ಸತಾಯಿಸದೇ ಅವರಿಗೆ ಸೂಕ್ತ ಸಲಹೆಗಳನ್ನು ನೀಡಿ ಅವರ ಕೆಲಸಗಳನ್ನು ಮಾಡಿಕೊಡಬೇಕು. ಸುಳ್ಯವನ್ನು ಮಾದರಿ ಕ್ಷೇತ್ರವನ್ನಾಗಿಸುವ ನನ್ನ ಕನಸಿಗೆ ಅಧಿಕಾರಿಗಳು ಸಹಕರಿಸಬೇಕು ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ತಿಳಿಸಿದರು. ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಬುಧವಾರ ಮಾತನಾಡಿದರು. ಅಧಿಕಾರಿಗಳು ತಮ್ಮ ಕ್ಷೇತ್ರದಲ್ಲಿ ಉತ್ತಮ ಅನುಭವವನ್ನು

‘ಸುಳ್ಯವನ್ನು ಮಾದರಿ ಕ್ಷೇತ್ರವನ್ನಾಗಿಸಲು ಅಧಿಕಾರಿಗಳೂ ಸಹಕರಿಸಿ’|ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಶಾಸಕಿ ಭಾಗೀರಥಿ ಮುರುಳ್ಯ Read More »

ಎಂ.ಬಿ ಪಾಟೀಲ್, ಪ್ರಿಯಾಂಕ ಖರ್ಗೆಗೆ ಹೆಚ್ಚುವರಿ ಖಾತೆಗಳ ಹೊಣೆ

ಸಮಗ್ರ ನ್ಯೂಸ್: ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಅವರಿಗೆ ಹೆಚ್ಚುವರಿಯಾಗಿ ಮೂಲಸೌಲಭ್ಯ ಅಭಿವೃದ್ಧಿ ಖಾತೆಯನ್ನು ಹಂಚಿಕೆ ಮಾಡಿ ಬುಧವಾರ ಅಧಿಸೂಚನೆ ಹೊರಡಿಸಲಾಗಿದೆ. ಅಲ್ಲದೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಅವರಿಗೆ ಹೆಚ್ಚುವರಿಯಾಗಿ ಮಾಹಿತಿ ತಂತ್ರಜ್ಞಾನ (ಐಟಿ) ಮತ್ತು ಜೈವಿಕ ತಂತ್ರಜ್ಞಾನ (ಬಿಟಿ) ಖಾತೆಯನ್ನೂ ನೀಡಲಾಗಿದೆ. ಇದೇ 28ರಂದು ಎಲ್ಲ ಸಚಿವರಿಗೆ ಖಾತೆಗಳನ್ನು ಹಂಚಲಾಗಿತ್ತು. ಆಗ ಮೂಲಸೌಲಭ್ಯ ಅಭಿವೃದ್ಧಿ ಮತ್ತು ಐಟಿ ಬಿಟಿ ಖಾತೆಯನ್ನು ಮುಖ್ಯಮಂತ್ರಿ ವಹಿಸಿಕೊಂಡಿದ್ದರು. ಪರಿಷ್ಕೃತ ಖಾತೆ ಹಂಚಿಕೆ

ಎಂ.ಬಿ ಪಾಟೀಲ್, ಪ್ರಿಯಾಂಕ ಖರ್ಗೆಗೆ ಹೆಚ್ಚುವರಿ ಖಾತೆಗಳ ಹೊಣೆ Read More »

ಕಾಂಗ್ರೆಸ್ ನ ಚುನಾವಣಾ ಗ್ಯಾರಂಟಿ ದೇಶವನ್ನು ದಿವಾಳಿ ಮಾಡುತ್ತೆ – ನಮೋ ವಾಗ್ದಾಳಿ

ಸಮಗ್ರ ನ್ಯೂಸ್: ಚುನಾವಣೆಗಳಲ್ಲಿ ಗೆಲುವು ಸಾಧಿಸುವ ಉದ್ದೇಶದಿಂದ ಕಾಂಗ್ರೆಸ್‌ ಅನುಸರಿಸುತ್ತಿರುವ ‘ಗ್ಯಾರಂಟಿ ಸೂತ್ರ’ ದೇಶವನ್ನು ದಿವಾಳಿ ಮಾಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಾರೆ. ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಒಂಬತ್ತು ವರ್ಷ ತುಂಬಿದ ಹಿನ್ನೆಲೆಯಲ್ಲಿ ರಾಜ್ಯಸ್ಥಾನದಲ್ಲಿ ನಡೆದ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಇದೇ ತಿಂಗಳ ಆರಂಭದಲ್ಲಿ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿರುವ ವಿಚಾರ ಉಲ್ಲೇಖಿಸಿದರು. ಕಾಂಗ್ರೆಸ್ ಹೊಸ ಗ್ಯಾರಂಟಿ ಸೂತ್ರವನ್ನು ಅನುಸರಿಸುತ್ತಿದೆ. ಆದರೆ, ಅವರು (ಕಾಂಗ್ರೆಸ್ಸಿಗರು) ಕೊಟ್ಟ ಭರವಸೆಗಳನ್ನು ಪೂರೈಸುತ್ತಿದ್ದಾರೆಯೇ ಎಂದು

ಕಾಂಗ್ರೆಸ್ ನ ಚುನಾವಣಾ ಗ್ಯಾರಂಟಿ ದೇಶವನ್ನು ದಿವಾಳಿ ಮಾಡುತ್ತೆ – ನಮೋ ವಾಗ್ದಾಳಿ Read More »

ಆರೋಪ‌ ಸಾಬೀತಾದರೆ ಗಲ್ಲುಶಿಕ್ಷೆಗೆ ಸಿದ್ಧ| ಕುಸ್ತಿಪಟುಗಳ ಆಕ್ರೋಶದ ನಡುವೆ ಬ್ರಿಜ್ ಭೂಷಣ್ ಸಿಂಗ್ ಹೇಳಿಕೆ

ಸಮಗ್ರ ನ್ಯೂಸ್: ಲೈಂಗಿಕ ಕಿರುಕುಳದ ಆರೋಪದ ಮೇಲೆ WFI ಮುಖ್ಯಸ್ಥ ಬ್ರಿಜ್ ಭೂಷಣ್ ನನ್ನು ಬಂಧಿಸುವಂತೆ ಒತ್ತಾಯಿಸಿ ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನಾ ಕಾವು ಜೋರಾಗಿದೆ. ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದ (ಎಂಪಿ) ಮತ್ತು ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಸರಣ್ ಸಿಂಗ್ ಈ ಹೇಳಿಕೆಗಳಿಂದ ವಿಚಲಿತರಾಗಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಬ್ರಿಜ್ ಭೂಷಣ್, ‘ನಾನು ತಪ್ಪಿತಸ್ಥನಲ್ಲ. ನನ್ನ ಯಾವುದೇ ಸಣ್ಣ ಆರೋಪ ಸಾಬೀತಾದರೆ ಗಲ್ಲಿಗೇರಿಸಿ’ ಎಂದು ಹೇಳಿದರು. ಏತನ್ಮಧ್ಯೆ, ಕ್ರೀಡೆಯ ಅಂತರಾಷ್ಟ್ರೀಯ

ಆರೋಪ‌ ಸಾಬೀತಾದರೆ ಗಲ್ಲುಶಿಕ್ಷೆಗೆ ಸಿದ್ಧ| ಕುಸ್ತಿಪಟುಗಳ ಆಕ್ರೋಶದ ನಡುವೆ ಬ್ರಿಜ್ ಭೂಷಣ್ ಸಿಂಗ್ ಹೇಳಿಕೆ Read More »

ರಾಜಕಾರಣ ಬದಿಗೊತ್ತಿ ಸಿಎಂ ಭೇಟಿ ಮಾಡಿ ಮಗನ ಮದುವೆ ಆಮಂತ್ರಣ ನೀಡಿದ ಸುಮಲತಾ

ಸಮಗ್ರ ನ್ಯೂಸ್: ರಾಜಕೀಯ ಕೆಸರೆರಚಾಟಗಳನ್ನು ಬದಿಗೊತ್ತಿದ ಸುಮಲತಾ ಅಂಬರೀಷ್ ಅವರು, ಮುಖ್ಯಮಂತ್ರಿ ಸಿದ್ದರಾಯ್ಯ ಅವರನ್ನು ಸೋಮವಾರ ಭೇಟಿ ಮಾಡಿದ್ದು, ಪುತ್ರ ಅಭಿಷೇಕ್ ಅಂಬರೀಷ್ ಮದುವೆಗೆ ಆಹ್ವಾನಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಆಮಂತ್ರಣ ಪತ್ರಿಕೆ ನೀಡಿದ ಫೋಟೋಗಳನ್ನ ಸ್ವತಃ ಸುಮಲತಾ ಅವರೇ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಅಭಿಷೇಕ್ ಅಂಬರೀಶ್ ಅವರ ವಿವಾಹ ಮಾಡೆಲ್ ಅವಿವಾ ಬಿದ್ದಪ್ ಜೊತೆಗೆ ಫಿಕ್ಸ್ ಆಗಿದ್ದು, ಜೂನ್ 5ರಂದು ಅದ್ದೂರಿಯಾಗಿ ವಿವಾಹ ಕಾರ್ಯಕ್ರಮ ಜರುಗಲಿದೆ. ಜೂನ್ 7ರಂದು ಭರ್ಜರಿಯಾಗಿ ಆರತಕ್ಷತೆ ಸಮಾರಂಭ

ರಾಜಕಾರಣ ಬದಿಗೊತ್ತಿ ಸಿಎಂ ಭೇಟಿ ಮಾಡಿ ಮಗನ ಮದುವೆ ಆಮಂತ್ರಣ ನೀಡಿದ ಸುಮಲತಾ Read More »

‘ಗೃಹಲಕ್ಷ್ಮಿ’ ಯೋಜನೆಯಡಿ ಅತ್ತೆಗೆ ಮಾತ್ರ ₹ 2000!?

ಸಮಗ್ರ ನ್ಯೂಸ್: ಕಾಂಗ್ರೆಸ್ ನೀಡಿದ್ದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಂತೆ ಪ್ರತಿ ತಿಂಗಳು ಮನೆಯ ಒಡತಿಗೆ 2 ಸಾವಿರ ರೂಪಾಯಿ ಕೊಡುತ್ತೇವೆ ಎಂದು ಸರ್ಕಾರ ಹೇಳುತ್ತಿದೆ. ಇದೀಗ ಮನೆಯೊಡತಿ ಯಾರು ಎನ್ನುವುದನ್ನು ಗುರುತಿಸುವುದೇ ಸರ್ಕಾರಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿತ್ತು. ಇದಕ್ಕೆ ಕಾರಣ ಅವಿಭಕ್ತ ಕುಟುಂಬಗಳು. ಹೌದು ಅವಿಭಕ್ತ ಕುಟುಂಬಗಳಲ್ಲಿ 2000 ಸಾವಿರ ರೂಪಾಯಿಯನ್ನು ಅತ್ತೆಗೆ ಕೊಡಬೇಕಾ ಅಥವಾ ಸೊಸೆಗೆ ಕೊಡಬೇಕಾ ಎನ್ನುವುದು ಗೊಂದಲ ಸೃಷ್ಟಿಸಿತ್ತು. ಬೆಳಗಾವಿಯಲ್ಲಿ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​, ನಮ್ಮ

‘ಗೃಹಲಕ್ಷ್ಮಿ’ ಯೋಜನೆಯಡಿ ಅತ್ತೆಗೆ ಮಾತ್ರ ₹ 2000!? Read More »