ರಾಜಕೀಯ

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿ.ಎಂ ಇಬ್ರಾಹಿಂ ರಾಜೀನಾಮೆ

ಸಮಗ್ರ ನ್ಯೂಸ್: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿಎಂ ಇಬ್ರಾಹಿಂ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಬಳಿಕ ದೇವೇಗೌಡರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಸೋಲಿನ ಹೊಣೆ ನಾನು ಹೊರುತ್ತೇನೆ. ಹೀಗಾಗಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದೇನೆ. ದೇವೇಗೌಡರಿಗೆ ರಾಜೀನಾಮೆ ಸಲ್ಲಿಕೆ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿ.ಎಂ ಇಬ್ರಾಹಿಂ ರಾಜೀನಾಮೆ Read More »

ಕರಾವಳಿಯಲ್ಲಿ ಖಾಸಗಿ ಬಸ್ ಸೇವೆಗೆ ನಿಷೇಧದ ತೂಗುಗತ್ತಿ| ಕೋಮು ಸಾಮರಸ್ಯ ಕದಡಲು ಖಾಸಗಿ ಬಸ್ ಸಿಬ್ಬಂದಿ ಕಾರಣವಂತೆ!! ಹಿಂದುತ್ವದ ಪ್ಯಾಕ್ಟರಿಗೆ ‘ಕೈ’ ಹಾಕಿದ ಸರ್ಕಾರ?

ಸಮಗ್ರ ನ್ಯೂಸ್: ಮಂಗಳೂರು ನಗರ ಸೇರಿದಂತೆ ದಕ್ಷಿಣ ಜಿಲ್ಲೆಯಲ್ಲಿ ಖಾಸಗಿ ಬಸ್ ಸೇವೆ ಬಂದ್ ಮಾಡಿ ಸರಕಾರಿ ಬಸ್ ಸೇವೆಗೆ ಮಾತ್ರ ಅವಕಾಶ ನೀಡುವ ಕುರಿತು ಸಿದ್ದರಾಮಯ್ಯ ನೇತೃತ್ವದ ನೂತನ ಕಾಂಗ್ರೆಸ್ ಸರಕಾರದಲ್ಲಿ ಚಿಂತನೆ ನಡೆದಿದೆ. ಕರಾವಳಿಯಲ್ಲಿ ಹರಡುತ್ತಿರುವ ಕೋಮುವಾದವನ್ನು ಮಟ್ಟಹಾಕುವ ಉದ್ದೇಶದಿಂದಲೇ ಖಾಸಗಿ ಬಸ್ ಸೇವೆ ರದ್ದು ಮಾಡಲು ಸರಕಾರ ಮುಂದಾಗಿದೆ ಎನ್ನಲಾಗುತ್ತಿದೆ. ಕರಾವಳಿಯಲ್ಲಿ ಕೋಮುವಾದ ಬೆಳೆಯುವಲ್ಲಿ ಖಾಸಗಿ ಬಸ್ ವಲಯದ ಪಾತ್ರ ಇರುವುದು ಮತ್ತು ಕರಾವಳಿಯ ಖಾಸಗಿ ಬಸ್ ಮಾಫಿಯಾದ ಕಪಿಮುಷ್ಠಿ ದಿನದಿಂದ ದಿನಕ್ಕೆ

ಕರಾವಳಿಯಲ್ಲಿ ಖಾಸಗಿ ಬಸ್ ಸೇವೆಗೆ ನಿಷೇಧದ ತೂಗುಗತ್ತಿ| ಕೋಮು ಸಾಮರಸ್ಯ ಕದಡಲು ಖಾಸಗಿ ಬಸ್ ಸಿಬ್ಬಂದಿ ಕಾರಣವಂತೆ!! ಹಿಂದುತ್ವದ ಪ್ಯಾಕ್ಟರಿಗೆ ‘ಕೈ’ ಹಾಕಿದ ಸರ್ಕಾರ? Read More »

ಸಿದ್ದರಾಮಯ್ಯ ವಿರುದ್ದ ವಿವಾದಾತ್ಮಕ ಹೇಳಿಕೆ| ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ದ ದೂರು ದಾಖಲು

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದ್ದಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲಾಗಿದೆ. ಈ ಸಂಬಂಧ ಪುತ್ತೂರು ನಗರಸಭಾ ಸದಸ್ಯ ಮೊಹಮ್ಮದ್ ರಿಯಾಝ್ ಅವರು ಪುತ್ತೂರು ನಗರ ಠಾಣೆಯಲ್ಲಿ ಹರೀಶ್ ಪೂಂಜಾ ವಿರುದ್ಧ ದೂರು ದಾಖಲಿಸಿದ್ದಾರೆ. ಸಿದ್ದರಾಮಯ್ಯ 24 ಹಿಂದೂ ಕಾರ್ಯಕರ್ತರನ್ನ ಹತ್ಯೆ ಮಾಡಿದ್ದಾರೆ ಎಂದು ಹರೀಶ್ ಪೂಂಜಾ ಅವರು ಸುಳ್ಳು ಆರೋಪ ಮಾಡಿದ್ದು,

ಸಿದ್ದರಾಮಯ್ಯ ವಿರುದ್ದ ವಿವಾದಾತ್ಮಕ ಹೇಳಿಕೆ| ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ದ ದೂರು ದಾಖಲು Read More »

ವಿಧಾನಸಭೆ ಸ್ಪೀಕರ್ ಆಗಿ ಯು.ಟಿ ಖಾದರ್ ಅವಿರೋಧ ಆಯ್ಕೆ

ಸಮಗ್ರ ನ್ಯೂಸ್: ವಿಧಾನಸಭೆ ಸಭಾಪತಿ ಸ್ಥಾನಕ್ಕೆ ಮಾಜಿ ಸಚಿವ, ಮಂಗಳೂರಿನ ಶಾಸಕ ಯು.ಟಿ ಖಾದರ್ ಅವರು ಬುಧವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಂಗಳವಾರ ಬೆಳಗ್ಗೆ ಯು.ಟಿ ಖಾದರ್ ಅವರು ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿಗೆ ಅವರಿಗೆ ನಾಮಪತ್ರ ಸಲ್ಲಿಸಿದ್ದರು. ಖಾದರ್ ಅವರನ್ನು ಹೊರತುಪಡಿಸಿ ಮತ್ತ್ಯಾರೂ ಸ್ಪೀಕರ್‌ ಸ್ಥಾನಕ್ಕೆ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೊದಲಿಗೆ ಯು.ಟಿ ಖಾದರ್ ಅವರ ಹೆಸರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ಅದನ್ನು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಅನುಮೋದಿಸಿದರು. ಬಳಿಕ

ವಿಧಾನಸಭೆ ಸ್ಪೀಕರ್ ಆಗಿ ಯು.ಟಿ ಖಾದರ್ ಅವಿರೋಧ ಆಯ್ಕೆ Read More »

ಸಚಿವ ಸಂಪುಟ ಸರ್ಕಸ್| ಹೈಕಮಾಂಡ್ ಜೊತೆ ಚರ್ಚೆಗೆ ಸಿಎಂ, ಡಿಸಿಎಂ ಇಂದು ದೆಹಲಿಗೆ

ಸಮಗ್ರ ನ್ಯೂಸ್: ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ 8 ಮಂದಿ ಸಚಿವರು ಪ್ರಮಾಣವಚನ ಸ್ವೀಕರಿಸಿದ್ದು, ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಇಂದು ಹೈಕಮಾಂಡ್ ಜೊತೆ ಚರ್ಚೆ ನಡೆಸಲು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಸಂಜೆ 6:30ಕ್ಕೆ ವಿಶೇಷ ವಿಮಾನದಲ್ಲಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಸಂಪುಟ ವಿಸ್ತರಣೆಯ ಸಂಬಂಧ ಹೈಕಮಾಂಡ್ ನಾಯಕರ ಜೊತೆಗೆ ಚರ್ಚೆ ನಡೆಸಲಿದ್ದಾರೆ. ಸಂಪುಟ ವಿಸ್ತರಣೆ ಕುರಿತಾಗಿ ಒಪ್ಪಿಗೆ ಪಡೆದುಕೊಳ್ಳಲಿದ್ದಾರೆ. ಮಧು ಬಂಗಾರಪ್ಪ, ಬಿ.ಕೆ. ಹರಿಪ್ರಸಾದ್, ಕೃಷ್ಣ ಬೈರೇಗೌಡ,

ಸಚಿವ ಸಂಪುಟ ಸರ್ಕಸ್| ಹೈಕಮಾಂಡ್ ಜೊತೆ ಚರ್ಚೆಗೆ ಸಿಎಂ, ಡಿಸಿಎಂ ಇಂದು ದೆಹಲಿಗೆ Read More »

ವಿಧಾನಸಭಾ ಸ್ಪೀಕರ್ ಆಗಿ ಯು.ಟಿ ಖಾದರ್ ಆಯ್ಕೆ| ಇಂದು ನಾಮಪತ್ರ ಸಲ್ಲಿಕೆ

ಸಮಗ್ರ ನ್ಯೂಸ್: ವಿಧಾನಸಭೆಯ ನೂತನ ಸ್ಪೀಕರ್ ಹುದ್ದೆಗೆ ಮಾಜಿ ಸಚಿವ ಯು ಟಿ ಖಾದರ್ ಅವರನ್ನು ಕಾಂಗ್ರೆಸ್ ಅಂತಿಮಗೊಳಿಸಿದೆ. ಯು ಟಿ ಖಾದರ್ ಇಂದು ಸ್ಪೀಕರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ. ಮಂಗಳೂರು ವಿಧಾನಸಭಾ ಕ್ಷೇತ್ರದಿಂದ ಐದನೇ ಬಾರಿಗೆ ಆಯ್ಕೆಯಾಗಿರುವ ಯು ಟಿ ಖಾದರ್ ಎಂಬ ಸೋಲಿಲ್ಲದ ಸರದಾರನಿಗೆ ಈ ಬಾರಿಯ ಕಾಂಗ್ರೆಸ್ ಸರ್ಕಾರದಲ್ಲಿ ಗೃಹ ಅಥವಾ ತತ್ಸಮಾನ ಪ್ರಮುಖ ಖಾತೆ ನೀಡಲಾಗುತ್ತೆ ಎಂದು ಊಹಿಸಲಾಗಿತ್ತು. ಆದರೆ ಸ್ಪೀಕರ್ ಹುದ್ದೆಗೆ ಯು ಟಿ ಖಾದರ್ ಹೆಸರು ಅಚ್ಚರಿಯ ಆಯ್ಕೆ.

ವಿಧಾನಸಭಾ ಸ್ಪೀಕರ್ ಆಗಿ ಯು.ಟಿ ಖಾದರ್ ಆಯ್ಕೆ| ಇಂದು ನಾಮಪತ್ರ ಸಲ್ಲಿಕೆ Read More »

ಸ್ಪೀಕರ್ ಸ್ಥಾನಕ್ಕೆ ಅಚ್ಚರಿಯ ಆಯ್ಕೆ| ಖಾದರ್ ಗೆ ಒಲಿಯುತ್ತಾ ಸಭಾಧ್ಯಕ್ಷ ಸ್ಥಾನ?

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭೆಯ ನೂತನ ಸ್ಪೀಕರ್ ಹುದ್ದೆಗೆ ಅಚ್ಚರಿಯ ಆಯ್ಕೆಯಾಗಿ ಮಾಜಿ ಸಚಿವ ಯು ಟಿ ಖಾದರ್ ಅವರನ್ನು ಕಾಂಗ್ರೆಸ್ ಅಂತಿಮಗೊಳಿಸಿದೆ ಎಂದು ತಿಳಿದು ಬಂದಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ರಾಷ್ಟ್ರೀಯ ಪ್ರಧಾನ್ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರು ಖಾದರ್ ಅವರನ್ನು ಕರೆದು ಮಾತನಾಡಿದ್ದು ಅಲ್ಪಸಂಖ್ಯಾತರಿಗೆ ಪ್ರಮುಖ ಹುದ್ದೆ ನೀಡಬೇಕು ಎಂದು ರಾಹುಲ್ ಗಾಂಧಿ ತೀರ್ಮಾನಿಸಿದ್ದು ಸ್ಪೀಕರ್ ರಂತಹ ಪ್ರತಿಷ್ಠಿತ ಹಾಗು ಅತ್ಯಂತ ಜವಾಬ್ದಾರಿಯುತ ಹುದ್ದೆಗೆ ನೀವೇ ಸೂಕ್ತ ಎಂದು

ಸ್ಪೀಕರ್ ಸ್ಥಾನಕ್ಕೆ ಅಚ್ಚರಿಯ ಆಯ್ಕೆ| ಖಾದರ್ ಗೆ ಒಲಿಯುತ್ತಾ ಸಭಾಧ್ಯಕ್ಷ ಸ್ಥಾನ? Read More »

ಬೆಳ್ತಂಗಡಿ ಶಾಸಕ‌ ಹರೀಶ್ ಪೂಂಜಾ ಹೆಸರಲ್ಲಿ ನಕಲಿ ಪೋಸ್ಟರ್ ಹಂಚಿಕೆ| ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸಂದೇಶದ ವಿರುದ್ದ ದೂರು

ಸಮಗ್ರ ನ್ಯೂಸ್: ಶಾಸಕ ಹರೀಶ್ ಪೂಂಜರವರ ಹೆಸರಿನಲ್ಲಿ ನಕಲಿ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತಿದ್ದು, ಈ ಬಗ್ಗೆ ಸಂದೇಶ ಸೃಷ್ಟಿ ಮಾಡಿದ ಮತ್ತು ಅದನ್ನು ಜಾಲತಾಣಗಳಲ್ಲಿ ಶೇರ್ ಮಾಡಿದ ವ್ಯಕ್ತಿಗಳ ವಿರುದ್ಧ ಮೇ 22 ರಂದು ಬೆಳ್ತಂಗಡಿ ನಗರ ಠಾಣೆಯಲ್ಲಿ ಬಿಜೆಪಿ ಕಾರ್ಯಕರ್ತರು ದೂರು ದಾಖಲಿಸಿದರು. ಈ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಪದಾಧಿಕಾರಿಗಳು, ತಾಲೂಕು ಯುವಮೋರ್ಚಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ದೂರು ಸ್ವೀಕರಿಸಿದ ಬೆಳ್ತಂಗಡಿ ಠಾಣಾ ಪೊಲೀಸರು ಕಾನೂನು ಕ್ರಮದ ಭರವಸೆ ನೀಡಿದ್ದಾರೆ.

ಬೆಳ್ತಂಗಡಿ ಶಾಸಕ‌ ಹರೀಶ್ ಪೂಂಜಾ ಹೆಸರಲ್ಲಿ ನಕಲಿ ಪೋಸ್ಟರ್ ಹಂಚಿಕೆ| ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸಂದೇಶದ ವಿರುದ್ದ ದೂರು Read More »

ರಾ.ಸ್ವ.ಸೇ ಸಂಘದ ಹಿರಿಯ ಕೊಂಡಿ ಕೊಡ್ಮಾಣ್ ಕಾಂತಪ್ಪ ಶೆಟ್ಟಿ ಇನ್ನಿಲ್ಲ

ಸಮಗ್ರ ನ್ಯೂಸ್: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪುತ್ತೂರು ಜಿಲ್ಲಾ ಸಂಘ ಚಾಲಕ, ಸಾಮಾಜಿಕ, ಧಾರ್ಮಿಕ,ಸಹಕಾರಿ ನೇತಾರ ಕೊಡ್ಮಾಣ್ ಕಾಂತಪ್ಪ ಶೆಟ್ಟಿ ( 61)ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ. ಸದಾ ನಗುಮುಖ ಗಂಭೀರ ವ್ಯಕ್ತಿತ್ವ, ನೇರ ನಡೆ ನುಡಿಯವರಾಗಿದ್ದ ಕಾಂತಪ್ಪ ಶೆಟ್ಟಿಯವರು ಹೃದಯ ವೈಶಾಲ್ಯತೆಯುಳ್ಳವರಾಗಿದ್ದರು. ಕೆಲ ಸಮಯಗಳಿಂದ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು,ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸೋಮವಾರ ಮಧ್ಯಾಹ್ನ ಅವರು ಕೊನೆಯುಸಿರೆಳೆದಿದ್ದಾರೆ. ರಾ.ಸ್ವ.ಸೇ.ಸಂಘದಲ್ಲಿ ಮಾತ್ರವಲ್ಲ ಭಾರತೀಯ ಜನತಾಪಕ್ಷದಲ್ಲು ಗುರುತಿಸಿಕೊಂಡಿದ್ದ ಅವರು ಒಂದುಬಾರಿ ಪುದು ಜಿ.ಪಂ.ಚುನಾವಣೆಗೆ ಸ್ಪರ್ಧಿ ಸೋಲನ್ನನುಭವಿಸಿದ

ರಾ.ಸ್ವ.ಸೇ ಸಂಘದ ಹಿರಿಯ ಕೊಂಡಿ ಕೊಡ್ಮಾಣ್ ಕಾಂತಪ್ಪ ಶೆಟ್ಟಿ ಇನ್ನಿಲ್ಲ Read More »

ಕುಲದೈವದ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಶಾಸಕಿ ಭಾಗೀರಥಿ ಮುರುಳ್ಯ| ಅಧಿವೇಶನದಲ್ಲಿ ಗೊಂದಲ ಸೃಷ್ಟಿ

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭೆಯ ಮೊಟ್ಟ ಮೊದಲ ವಿಶೇಷ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ಮೇ.24ರ ವರೆಗೆ ನಡೆಯಲಿದೆ. ಸಾರ್ವತ್ರಿಕ ಚುನಾವಣೆಯ ಬಳಿಕ ವಿಧಾನಸಭೆಗೆ ಆಯ್ಕೆಯಾದ 224 ಜನಪ್ರತಿನಿಧಿಗಳ ಪ್ರಮಾಣವಚನ ಕಾರ್ಯಕ್ರಮ ಅಧಿವೇಶನದಲ್ಲಿ ನಡೆಯಿತು. ಸುಳ್ಯ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅಧಿವೇಶನದಲ್ಲಿ ಅಧಿಕಾರ ಪದ ಮತ್ತು ಗೌಪ್ಯತಾ ಪ್ರಮಾಣವಚನ ಸ್ವೀಕರಿಸಿದರು. ಈ ವೇಳೆ ಅವರು ಕುಲದೇವರಾದ ಸತ್ಯಸಾರಮಣಿ, ಸತ್ಯ ಪದನಾಜಿ, ಅಮ್ಮನವರು ಹಾಗೂ ಮತದಾರ ಭಾಂದವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಈ ವೇಳೆ ಕೆಲವು ಸದಸ್ಯರು

ಕುಲದೈವದ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಶಾಸಕಿ ಭಾಗೀರಥಿ ಮುರುಳ್ಯ| ಅಧಿವೇಶನದಲ್ಲಿ ಗೊಂದಲ ಸೃಷ್ಟಿ Read More »