ರಾಜಕೀಯ

ಕಡಬ: ನದಿಯಲ್ಲಿ ಮುಳುಗಿ ಸಹೋದರಿಯರಿಬ್ಬರು ದುರ್ಮರಣ| ಇಬ್ಬರ ಶವವೂ ಪತ್ತೆ; ಶೋಕಸಾಗರದಲ್ಲಿ ಕುಟುಂಬ

ಸಮಗ್ರ ನ್ಯೂಸ್: ರಜೆ ಅವಧಿಯಲ್ಲಿ ಕಾರ್ಯಕ್ರಮಕ್ಕೆ ಸಂಬಂಧಿಗಳ ಮನೆಗೆ ಬಂದಿದ್ದ ಸಹೋದರಿಯಬ್ಬರು ನದಿಯಲ್ಲಿ ಮುಳುಗಿ‌ ಸಾವನ್ನಪ್ಪಿದ ಘಟನೆ ಕಡಬ ತಾಲೂಕಿನ ಬಳ್ಪ ಸಮೀಪದ ಕೇನ್ಯ ಗ್ರಾಮದಲ್ಲಿ ನಡೆದಿದೆ. ಮೇ.8ರ ಸಂಜೆ ಈ ದುರ್ಘಟನೆ ಸಂಭವಿಸಿದ್ದು, ಮೂಲತಃ ಕಣ್ಕಲ್ ನವರಾಗಿದ್ದು ಬೆಂಗಳೂರಿನಲ್ಲಿ ಇಂಜಿನಿಯರ್ ಆಗಿರುವ ಸತೀಶ್ ಅಮ್ಮಣ್ಣಾಯ ಅವರ ಪುತ್ರಿಯರಾದ ಹಂಸಿತಾ ( 15 ) ಮತ್ತು ಅವಂತಿಕಾ ( 11 ) ಎಂಬ ಸಹೋದರಿಯರು ನೀರು ಪಾಲಾದ ದುರ್ದೈವಿಗಳು. ಸಹೋದರಿಯರು ನೀರುಪಾಲಾದ ಸುದ್ದಿ ತಿಳಿದು ಆಗಮಿಸಿದ ಅಗ್ನಿ […]

ಕಡಬ: ನದಿಯಲ್ಲಿ ಮುಳುಗಿ ಸಹೋದರಿಯರಿಬ್ಬರು ದುರ್ಮರಣ| ಇಬ್ಬರ ಶವವೂ ಪತ್ತೆ; ಶೋಕಸಾಗರದಲ್ಲಿ ಕುಟುಂಬ Read More »

ಸುಳ್ಯ: ವೋಟರ್ಸ್ ಸ್ಲಿಪ್ ಜೊತೆ ಬಿಜೆಪಿ ಕರಪತ್ರ ಹಂಚಿದರಾ ಬಿಎಲ್ಒಗಳು? ಸಮಗ್ರ ತನಿಖೆಗೆ ಚುನಾವಣಾಧಿಕಾರಿ ಆದೇಶ

ಸಮಗ್ರ ನ್ಯೂಸ್: ವೋಟರ್ಸ್ ಸ್ಲಿಪ್ ಅನ್ನು ಮತದಾರರ ಮನೆಗೆ ತಲುಪಿಸುವ ವೇಳೆ ಬಿಜೆಪಿ ಪಕ್ಷದ ಪ್ರಚಾರದ ಕರಪತ್ರವನ್ನು ಕೂಡ ಜತೆಗೆ ವಿತರಿಸಿದ್ದಾರೆ ಎಂದು ಆರೋಪ‌ ಕೇಳಿಬಂದಿದ್ದು ಬಿಎಲ್‌ಒಗಳಿಬ್ಬರ ಮೇಲೆ ತನಿಖೆ ನಡೆಸಲು ಸುಳ್ಯ ಚುನಾವಣಾಧಿಕಾರಿಗಳು ಆದೇಶಿಸಿದ್ದಾರೆ. ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಜಾಲ್ಸೂರು ಗ್ರಾಮದ ಎರಡು ಬೂತ್ ಗಳಲ್ಲಿ ಬಿ.ಜೆ.ಪಿ.ಯ ಪ್ರಚಾರ ಸಾಮಾಗ್ರಿಯನ್ನು ವೋಟರ್ಸ್ ಸ್ಲಿಪ್ ನೊಂದಿಗೆ ಕೊಟ್ಟಿರುವುದಾಗಿ ಹೇಳಲಾಗಿದ್ದು ಈ ಬಗ್ಗೆ ಚುನಾವಣಾಧಿಕಾರಿಗಳಿಗೆ ದೂರು ಬಂದಿದೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಚುನಾವಣಾಧಿಕಾರಿಗಳು

ಸುಳ್ಯ: ವೋಟರ್ಸ್ ಸ್ಲಿಪ್ ಜೊತೆ ಬಿಜೆಪಿ ಕರಪತ್ರ ಹಂಚಿದರಾ ಬಿಎಲ್ಒಗಳು? ಸಮಗ್ರ ತನಿಖೆಗೆ ಚುನಾವಣಾಧಿಕಾರಿ ಆದೇಶ Read More »

ಬಿಜೆಪಿಗೆ ಮತ ಹಾಕದಿದ್ದರೆ ಕೇಂದ್ರದ ಯೋಜನೆಗಳಿಗೆ ಬ್ರೇಕ್| ಜೆ.ಪಿ ನಡ್ಡಾ ಹೇಳಿಕೆಗೆ ಕಾಂಗ್ರೆಸ್ ನಿಂದ ತೀವ್ರ ಆಕ್ಷೇಪ

ಸಮಗ್ರ ನ್ಯೂಸ್: ‘ರಾಜ್ಯದಲ್ಲಿ ಡಬಲ್‌ ಎಂಜಿನ್‌ ಸರ್ಕಾರ ಮುಂದುವರಿದರೆ ಕೇಂದ್ರದ ಯೋಜನೆಗಳು ಮುಂದುವರಿಯುತ್ತವೆ. ಒಂದು ವೇಳೆ ಸಿದ್ದರಾಮಯ್ಯನವರ ಸರ್ಕಾರ ಬಂದರೆ ಅವುಗಳಿಗೆ ಬ್ರೇಕ್‌ ಬೀಳುತ್ತದೆ’ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಹೇಳಿದರು. ಹರಪನಹಳ್ಳಿ ಹಾಗೂ ಕೂಡ್ಲಿಗಿ ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಭಾನುವಾರ ಮತಯಾಚಿಸಿ ಮಾತನಾಡಿದ ಅವರು, ‘ಡಬಲ್‌ ಎಂಜಿನ್‌ ಸರ್ಕಾರ ಮುಂದುವರಿದರೆ ಪ್ರಧಾನ ಮಂತ್ರಿ ಆವಾಸ್‌ ಯೋಜನೆ, ಪ್ರಧಾನ ಮಂತ್ರಿ ಗರೀಬ್‌ ಅನ್ನ ಕಲ್ಯಾಣ ಯೋಜನೆ, ಪ್ರಧಾನ ಮಂತ್ರಿ ಉಜ್ವಲ ಯೋಜನೆಯ

ಬಿಜೆಪಿಗೆ ಮತ ಹಾಕದಿದ್ದರೆ ಕೇಂದ್ರದ ಯೋಜನೆಗಳಿಗೆ ಬ್ರೇಕ್| ಜೆ.ಪಿ ನಡ್ಡಾ ಹೇಳಿಕೆಗೆ ಕಾಂಗ್ರೆಸ್ ನಿಂದ ತೀವ್ರ ಆಕ್ಷೇಪ Read More »

ಕರ್ನಾಟಕ ವಿಧಾನಸಭಾ ಚುನಾವಣೆ| ಇಂದು(ಮೇ.8) ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ

ಸಮಗ್ರ ನ್ಯೂಸ್: ಮೇ. 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆ ಬಹಿರಂಗ ಪ್ರಚಾರಕ್ಕೆ ಮೇ.8ರ ಸಂಜೆ ತೆರೆ ಬೀಳಲಿದೆ. ಬಹಿರಂಗ ಪ್ರಚಾರ ಅಂತ್ಯಗೊಂಡ ನಂತರ ಮತದಾರರಲ್ಲದವರು ಆ ಕ್ಷೇತ್ರಗಳನ್ನು ಬಿಟ್ಟು ತೆರಳಬೇಕಿದ್ದು, ಸ್ಟಾರ್ ಪ್ರಚಾರಕರು ಕ್ಷೇತ್ರಗಳಲ್ಲಿ ಉಳಿಯುವಂತಿಲ್ಲ. ಆಯಾ ಕ್ಷೇತ್ರಗಳ ಮಟ್ಟಪಟ್ಟಿಯಲ್ಲಿ ಹೆಸರಿಲ್ಲದ ರಾಜಕೀಯ ನಾಯಕರುಗಳೂ ಸೇರಿದಂತೆ ಎಲ್ಲಾ ಮುಖಂಡರು ಜಾಗ ಖಾಲಿ ಮಾಡಬೇಕು ಎಂದು ಚುನಾವಣಾ ಆಯೋಗ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಮತದಾನ ಮುಕ್ತಾಯದ 48 ಗಂಟೆಗೂ ಮುನ್ನ ಬಹಿರಂಗ ಪ್ರಚಾರ ಅಂತ್ಯವಾಗಲಿದೆ. ಅದರಂತೆ

ಕರ್ನಾಟಕ ವಿಧಾನಸಭಾ ಚುನಾವಣೆ| ಇಂದು(ಮೇ.8) ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ Read More »

ಕರ್ನಾಟಕ ಚುನಾವಣಾ ಪೂರ್ವ ಸಮೀಕ್ಷೆ| ಅತಿದೊಡ್ಡ ಪಕ್ಷವಾಗಿ ಕಾಂಗ್ರೆಸ್ ಮೇಲುಗೈ| ಕುಸಿತ ಕಂಡ ಬಿಜೆಪಿ

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೇನು ಕೆಲ ದಿನಗಳಷ್ಟೇ ಬಾಕಿ ಉಳಿದಿದ್ದು, ರಾಜಕೀಯ ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ತೊಡಗಿವೆ. ಈ ಬಾರಿ ಯಾವ ಪಕ್ಷ ಅಧಿಕಾರದ ಗದ್ದುಗೆಗೆ ಏರಬಹುದು ಎಂಬ ಕುತೂಹಲ ಮತದಾರರಲ್ಲಿಯೇ ಮನೆಮಾಡಿದೆ. ಹೀಗಿರುವಾಗ, ಮತ್ತೊಂದು ಚುನಾವಣಾ ಪೂರ್ವ ಸಮೀಕ್ಷೆಯ ವರದಿ ಪ್ರಕಟವಾಗಿದ್ದು, ಕಾಂಗ್ರೆಸ್ ಪಾಲಿಗೆ ಸುವರ್ಣಾವಕಾಶ ಎನ್ನುವಂತಾಗಿದೆ. ರಾಷ್ಟ್ರೀಯ ಸಮೀಕ್ಷಾ ಸಂಸ್ಥೆಯಾದ ಲೋಕ್ ಪೋಲ್ ಎಂಬ ಸಂಸ್ಥೆ ನಡೆಸಿದ ಸಮೀಕ್ಷೆ ಪ್ರಕಾರ, ಈ ಭಾರಿ ರಾಜ್ಯದಲ್ಲಿ ಕಾಂಗ್ರೆಸ್ ಭರ್ಜರಿ ಮುನ್ನಡೆ ಸಾಧಿಸಿ ಅಧಿಕಾರದ

ಕರ್ನಾಟಕ ಚುನಾವಣಾ ಪೂರ್ವ ಸಮೀಕ್ಷೆ| ಅತಿದೊಡ್ಡ ಪಕ್ಷವಾಗಿ ಕಾಂಗ್ರೆಸ್ ಮೇಲುಗೈ| ಕುಸಿತ ಕಂಡ ಬಿಜೆಪಿ Read More »

ಸುಳ್ಯ: ಆಮ್ ಆದ್ಮಿ ಪಾರ್ಟಿ ವತಿಯಿಂದ ನಾಳೆ (ಮೇ.8) ಬೃಹತ್ ರೋಡ್ ಶೋ

ಸಮಗ್ರ ನ್ಯೂಸ್: ಮೇ 8 ರಂದು ಆಮ್ ಆದ್ಮಿ ಪಾರ್ಟಿಯ ವತಿಯಿಂದ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿಬೃಹತ್ ವಾಹನ ಜಾಥಾ ಹಾಗೂ ರೋಡ್ ಶೋ ನಡೆಯಲಿದೆ. ಸಂಪಾಜೆ ಯಿಂದ ಜಾಥಾ ಪ್ರಾರಂಭವಾಗಿ ಕಲ್ಲುಗುಂಡಿ, ಅರಂತೋಡು, ಸುಳ್ಯ, ಪೈಚಾರು,ಸೋಣಂಗೇರಿ, ಗುತ್ತಿಗಾರು, ಸುಬ್ರಹ್ಮಣ್ಯ, ಕಡಬ, ಆಲಂಕಾರು,ಕಡಬ, ಪಂಜ, ನಿಂತಿಕಲ್ಲು, ಕಾಣಿಯೂರು, ಬೆಳಂದೂರು,ಸವಣೂರು, ಪೆರುವಾಜೆ, ಬೆಳ್ತಾರೆ, ಐವರ್ನಾಡು ಸೋಣಂಗೇರಿ, ಜಾಲ್ಸೂರು ನಿಂದ ಸುಳ್ಯಕ್ಕೆ ತೆರಳಲಿದೆ ಎಂದು ತಿಳಿಸಿದ್ದಾರೆ.

ಸುಳ್ಯ: ಆಮ್ ಆದ್ಮಿ ಪಾರ್ಟಿ ವತಿಯಿಂದ ನಾಳೆ (ಮೇ.8) ಬೃಹತ್ ರೋಡ್ ಶೋ Read More »

ಇಂದು ಮಂಗಳೂರಿಗೆ ಪ್ರಿಯಾಂಕಾ ಗಾಂಧಿ

ಸಮಗ್ರ ನ್ಯೂಸ್: ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಮಂಗಳೂರಿಗೆ ಮೇ 7ರಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಜಿಲ್ಲೆಗೆ ಆಗಮಿಸಲಿದ್ದಾರೆ. ಮುಲ್ಕಿ ಕೊಲ್ನಾಡು ಮೈದಾನದಲ್ಲಿ ಅಪರಾಹ್ನ ಒಂದು ಗಂಟೆಗೆ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಮಂಜುನಾಥ ಭಂಡಾರಿ ಸುದ್ದಿ ಗೋಷ್ಠಿಯಲ್ಲಿಂದು ತಿಳಿಸಿದ್ದಾರೆ. ಇನ್ನು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ, ಮೂಡಬಿದ್ರೆ ಕ್ಷೇತ್ರ, ಕಾಪು ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಒಟ್ಟು ಸುಮಾರು 50 ಸಾವಿರ ಮಂದಿ ಈ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಮಂಜುನಾಥ

ಇಂದು ಮಂಗಳೂರಿಗೆ ಪ್ರಿಯಾಂಕಾ ಗಾಂಧಿ Read More »

‘ಟ್ರಬಲ್ ಇಂಜಿನ್ ಸರ್ಕಾರ’ ಎಂದು ಆರೋಪಿಸಿದ್ದ ಕಾಂಗ್ರೆಸ್ ಗೆ ‘ಟ್ರಬಲ್’| ನೋಟೀಸ್ ಜಾರಿ ಮಾಡಿದ ಚು. ಆಯೋಗ

ಸಮಗ್ರ ನ್ಯೂಸ್: ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ ಜಾಹೀರಾತು ನೀಡಿದ್ದ ಹಿನ್ನಲೆಯಲ್ಲಿ ಚುನಾವಣಾ ಆಯೋಗದಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ನೋಟಿಸ್ ಜಾರಿ ಮಾಡಲಾಗಿದೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಡಿ.ಕೆ. ಶಿವಕುಮಾರ್ ಗೆ ನೋಟಿಸ್ ಜಾರಿ ನೀಡಲಾಗಿದೆ. ವಿವಿಧ ನೇಮಕಾತಿ, ವರ್ಗಾವಣೆಗೆ ಹುದ್ದೆಗಳಿಗೆ ರೇಟ್ ಫಿಕ್ಸ್ ಜಾಹೀರಾತು ನೀಡಲಾಗಿತ್ತು. ಈ ಸಂಬಂಧ ಡಿಕೆಶಿಗೆ ನೋಟಿಸ್ ಜಾರಿ ಮಾಡಲಾಗಿದೆ. ರೇಟ್ ಕಾರ್ಡ್ ಗೆ ಸಂಬಂಧಿಸಿದಂತೆ ಜಾಹೀರಾತು ನೀಡಿದ ಹಿನ್ನೆಲೆಯಲ್ಲಿ ಚುನಾವಣೆನೀತಿ ಸಂಹಿತೆ

‘ಟ್ರಬಲ್ ಇಂಜಿನ್ ಸರ್ಕಾರ’ ಎಂದು ಆರೋಪಿಸಿದ್ದ ಕಾಂಗ್ರೆಸ್ ಗೆ ‘ಟ್ರಬಲ್’| ನೋಟೀಸ್ ಜಾರಿ ಮಾಡಿದ ಚು. ಆಯೋಗ Read More »

ಯುವಜನತೆಗೆ ಉದ್ಯೋಗ ಗ್ಯಾರಂಟಿ : ಸುಮನ ಬೆಳ್ಳಾರ್ಕರ್

ಸಮಗ್ರ ನ್ಯೂಸ್: ಕೃಷಿಕರನ್ನು ಬಾಧಿಸುತ್ತಿರುವ ಅಡಿಕೆ ಎಲೆ ಹಳದಿ ರೋಗಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವುದು ಹಾಗೂ ಸುಳ್ಯದ 110 ಕೆ.ವಿ. ವಿದ್ಯುತ್ ಸಬ್‌ಸ್ಟೇಶನ್ ಕಾಮಗಾರಿ ಮಾಡಿಸುವ ಉದ್ದೇಶದಿಂದ ಎ.ಎ.ಪಿ ಬದ್ಧವಾಗಿದ್ದು, ಕ್ಷೇತ್ರದಲ್ಲಿ ಶಾಸಕರಾಗಿ ಆಯ್ಕೆಯಾದರೆ ಮೊದಲು ಇದನ್ನೇ ಮಾಡುತ್ತೇವೆ. ಅದಕ್ಕಾಗಿ ಯಾವ ಹೋರಾಟಕ್ಕೂ ನಾವು ಬದ್ಧರಾಗಿದ್ದು ಆ ಕೆಲಸವನ್ನು ಮಾಡಿಲು ಸಿದ್ಧ ಎಂದು ಎ.ಎ.ಪಿ. ಅಭ್ಯರ್ಥಿ ಸುಮನಾ ಬೆಳ್ಳಾರ್ಕರ್ ಹಾಗೂ ಜಿಲ್ಲಾಧ್ಯಕ್ಷ ಅಶೋಕ್ ಎಡಮಲೆ ಹೇಳಿದ್ದಾರೆ. ಮೇ.9ರಂದು ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಶೋಕ್

ಯುವಜನತೆಗೆ ಉದ್ಯೋಗ ಗ್ಯಾರಂಟಿ : ಸುಮನ ಬೆಳ್ಳಾರ್ಕರ್ Read More »

ಮೇ.7: ದ.ಕ ಜಿಲ್ಲೆಯಲ್ಲಿ ಪ್ರಿಯಾಂಕಾ ಗಾಂಧಿ ಚುನಾವಣಾ ಪ್ರಚಾರ

ಸಮಗ್ರ ನ್ಯೂಸ್: ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಭಾನುವಾರ ಕರಾವಳಿ ಭಾಗದಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಪ್ರಿಯಾಂಕಾ ಗಾಂಧಿ ಮಂಗಳೂರಿಗೆ ಬರಲಿದ್ದು, ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತ ಯಾಚಿಸಲಿದ್ದಾರೆ. ನಾಳೆ ಮಧ್ಯಾಹ್ನ ಹೆಲಿಕಾಪ್ಟರ್​​ನಲ್ಲಿ ಆಗಮಿಸುವ ಪ್ರಿಯಾಂಕಾ ಗಾಂಧಿ, ಮೂಡಬಿದಿರೆ ಕ್ಷೇತ್ರದ ಮೂಲ್ಕಿಯಲ್ಲಿ ಚುನಾವಣಾ ಮತಬೇಟೆ ನಡೆಸಲಿದ್ದಾರೆ. ಮುಲ್ಕಿಯ ಕೊಳ್ನಾಡುವಿನ ಮೈದಾನದಲ್ಲಿ ಮಧ್ಯಾಹ್ನ 1 ಗಂಟೆಗೆ ಹಮ್ಮಿಕೊಂಡಿರುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ, ಮಂಗಳೂರು ಉತ್ತರ, ಮೂಡಬಿದಿರೆ ಮತ್ತು ಕಾಪು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳ ಪರ ಪ್ರಚಾರ

ಮೇ.7: ದ.ಕ ಜಿಲ್ಲೆಯಲ್ಲಿ ಪ್ರಿಯಾಂಕಾ ಗಾಂಧಿ ಚುನಾವಣಾ ಪ್ರಚಾರ Read More »