ರಾಜಕೀಯ

ಮತದಾರರನ್ನು ವಾಹನಗಳಲ್ಲಿ ಕರೆತಂದರೆ ನಿರ್ದಾಕ್ಷಿಣ್ಯ ಕ್ರಮ| ಜಿಲ್ಲಾಧಿಕಾರಿ ರವಿಕುಮಾರ್ ಖಡಕ್ ಎಚ್ಚರಿಕೆ

ಸಮಗ್ರ ನ್ಯೂಸ್: ನಾಳೆ ಮೇ 10ರಂದು ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯಲಿದ್ದು, ಚುನಾವಣೆಯಲ್ಲಿ ಮತದಾನ ನಡೆಸುವ ಮತದಾರರನ್ನು ವಾಹನಗಳ ಮೂಲಕ ಕರೆ ತರಲು ಯಾವುದೇ ಅಭ್ಯರ್ಥಿ ಅಥವಾ ರಾಜಕೀಯ ಪಕ್ಷದವರಿಗೆ ಅವಕಾಶವಿಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಖಡಕ್ ವಾರ್ನಿಂಗ್ ರವಾನಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮತದಾರರನ್ನು ವಾಹನಗಳಲ್ಲಿ ಕರೆ ತರಲು ಅವಕಾಶವಿಲ್ಲ. ಯಾವುದೇ ಪಕ್ಷ, ಯಾವುದೇ ಅಭ್ಯರ್ಥಿಗಳಿಗೆ ಅವಕಾಶವಿಲ್ಲ. ಅಂತಹ ವಿಚಾರಗಳಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇನೆ. ಯಾವುದೇ ಭಾಗದಿಂದ ನೇರವಾಗಿ ಕರೆ ತರಲು ಅವಕಾಶವಿಲ್ಲ […]

ಮತದಾರರನ್ನು ವಾಹನಗಳಲ್ಲಿ ಕರೆತಂದರೆ ನಿರ್ದಾಕ್ಷಿಣ್ಯ ಕ್ರಮ| ಜಿಲ್ಲಾಧಿಕಾರಿ ರವಿಕುಮಾರ್ ಖಡಕ್ ಎಚ್ಚರಿಕೆ Read More »

ಮೊಬೈಲ್‌ನಲ್ಲಿ ಆ್ಯಪ್ ಬಳಸಿ ಮತಗಟ್ಟೆ ಹುಡುಕುವುದು ಹೇಗೆ?

ಸಮಗ್ರ ನ್ಯೂಸ್: ಮೇ 09, ರಾಜ್ಯಾದ್ಯಂತ ನಾಳೆ ಬೆಳಗ್ಗೆ 7ರಿಂದ ಮತದಾನ ಪ್ರಕ್ರಿಯೆ ಆರಂಭವಾಗಲಿದ್ದು, ಮತದಾರರು ತಮ್ಮ ಮತಗಟ್ಟೆ ವಿಳಾಸ ಎಲ್ಲಿದೆ ಎಂದು ಸುಲಭವಾಗಿ ಹುಡುಕಬಹುದು. ಮತದಾರರಿಗೆ ಅನುಕೂಲ ಆಗುವಂತೆ ಕೇಂದ್ರ ಚುನಾವಣಾ ಆಯೋಗದಿಂದ ಚುನಾವಣಾ ಆ್ಯಪ್ ಡೌನ್‌ಲೋಡ್ ಮಾಡಿಕೊಂಡು ಮತಗಟ್ಟೆಗೆ ಗೂಗಲ್ ಲೊಕೇಶನ್ ಆಧರಿಸಿ ಮತಗಟ್ಟೆ ತಲುಪಬಹುದು. ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಕೇಂದ್ರಗಳಲ್ಲಿ ಸಣ್ಣ ಪುಟ್ಟ ಸ್ಥಳಗಳ ಬಗ್ಗೆ ಗೂಗಲ್‌ನಲ್ಲಿಯೂ ಮಾಹಿತಿ ಲಭ್ಯವಾಗದೆ ಮತ್ತು ಅಂತಹ ಸ್ಥಳಗಳನ್ನು ಗೂಗಲ್ ಮ್ಯಾಪ್ ಲಭ್ಯವಿರುವುದಿಲ್ಲ. ಅದಕ್ಕಾಗಿ,

ಮೊಬೈಲ್‌ನಲ್ಲಿ ಆ್ಯಪ್ ಬಳಸಿ ಮತಗಟ್ಟೆ ಹುಡುಕುವುದು ಹೇಗೆ? Read More »

ಬೆರಳಿಗೆ ಹಚ್ಚುವ ಚುನಾವಣಾ ಶಾಯಿಯ ಇತಿಹಾಸ ಗೊತ್ತೇ? 35 ದೇಶಗಳಿಗೆ ರಪ್ತಾಗುತ್ತಿದೆ ನಮ್ಮ ರಾಯಲ್ ಶಾಯಿ!!

ಸಮಗ್ರ ನ್ಯೂಸ್: ಪ್ರತಿಯೊಬ್ಬರೂ ತಾವು ಮತದಾನ ಮಾಡಿದ ಮೇಲೆ ತಮ್ಮ ಕೈಯ ತೋರು ಬೆರಳನ್ನು ಏಕೆ ತೋರಿಸುತ್ತಿದ್ದಾರೆ ಎಂಬ ಸಂದೇಹ ಚಿಕ್ಕ ಮಕ್ಕಳಲ್ಲಿ ಮೂಡಿದರೂ ದೊಡ್ಡವರಾದವರಿಗೆ ಈ ಬಗ್ಗೆ ಸಹಜವಾಗಿ ಗೊತ್ತೇ ಇರುತ್ತದೆ. ಹೌದು, ವ್ಯಕ್ತಿಯೊಬ್ಬನಿಗೆ ಸಾಂವಿಧಾನಿಕವಾಗಿ ಬಂದಿರುವ ಮತದಾನದ ಹಕ್ಕನ್ನು ಅವನು ಚಲಾಯಿಸಿದ್ದಾನೆ ಎಂಬುದನ್ನು ಸೂಚಿಸುವ ಹಾಗೂ ಒಂದೇ ಬಾರಿ ಮಾಡಬೇಕಾಗಿರುವ ತನ್ನ ಸರಿಯಾದ ಹಕ್ಕನ್ನು ಚಲಾಯಿಸಿದ್ದಾನೆ ಎಂದು ಖಾತರಿಪಡಿಸುವ ಸಂಕೇತವಾಗಿ ಅವನ/ಅವಳ ಕೈಯ ತೋರು ಬೆರಳಿಗೆ ಸುಲಭವಾಗಿ ಅಳಿಸಲಾಗದಂತಹ ಒಂದು ಶಾಯಿಯ ಗುರುತನ್ನು ಹಾಕಿರುತ್ತಾರೆ.

ಬೆರಳಿಗೆ ಹಚ್ಚುವ ಚುನಾವಣಾ ಶಾಯಿಯ ಇತಿಹಾಸ ಗೊತ್ತೇ? 35 ದೇಶಗಳಿಗೆ ರಪ್ತಾಗುತ್ತಿದೆ ನಮ್ಮ ರಾಯಲ್ ಶಾಯಿ!! Read More »

ಪುತ್ತೂರು: ಚುನಾವಣಾ ಹಿನ್ನೆಲೆಯಲ್ಲಿ ನಾಲ್ವರು ಹಿಂದೂ ಕಾರ್ಯಕರ್ತರ ಗಡಿಪಾರು

ಸಮಗ್ರ ನ್ಯೂಸ್: ಮೇ.10ರಂದು ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನಲೆಯಲ್ಲಿ ಕ್ರಿಮಿನಲ್ ಹಿನ್ನೆಲೆಯುಳ್ಳ ನಾಲ್ಕು ಮಂದಿಯನ್ನು ಪುತ್ತೂರಿನಿಂದ ಗಡಿಪಾರು ಮಾಡಲಾಗಿದೆ. ಹಿಂದೂ ಸಂಘಟನೆ ಕಾರ್ಯಕರ್ತರಾಗಿರುವ ಬನ್ನೂರು ಮೂಲದ ಪ್ರಜ್ವಲ್, ಪ್ರತಾಪ್, ಜಗ್ಗ ಯಾನೆ ಅಚ್ಚು, ಅವಿನಾಶ್ ಅವರು ಗಡಿಪಾರು ಆಗಿದ್ದಾರೆ. ಈ ನಾಲ್ಕು ಮಂದಿ ಚುನಾವಣೆಯ ಸಂದರ್ಭ ಶಾಂತಿ ಭಂಗ ಮಾಡಬಹುದೆಂಬ ನಿಟ್ಟಿನಲ್ಲಿ ನಗರ ಠಾಣೆಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಕೆಲವು ದಿನಗಳಿಂದ ಇವರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಬಳಗದಲ್ಲಿ ಗುರುತಿಸಿಕೊಂಡಿದ್ದರು. ಇದೇ ಕಾರಣದಿಂದ

ಪುತ್ತೂರು: ಚುನಾವಣಾ ಹಿನ್ನೆಲೆಯಲ್ಲಿ ನಾಲ್ವರು ಹಿಂದೂ ಕಾರ್ಯಕರ್ತರ ಗಡಿಪಾರು Read More »

ಕಡಬ: ನದಿಯಲ್ಲಿ ಮುಳುಗಿ ಸಹೋದರಿಯರಿಬ್ಬರು ದುರ್ಮರಣ| ಇಬ್ಬರ ಶವವೂ ಪತ್ತೆ; ಶೋಕಸಾಗರದಲ್ಲಿ ಕುಟುಂಬ

ಸಮಗ್ರ ನ್ಯೂಸ್: ರಜೆ ಅವಧಿಯಲ್ಲಿ ಕಾರ್ಯಕ್ರಮಕ್ಕೆ ಸಂಬಂಧಿಗಳ ಮನೆಗೆ ಬಂದಿದ್ದ ಸಹೋದರಿಯಬ್ಬರು ನದಿಯಲ್ಲಿ ಮುಳುಗಿ‌ ಸಾವನ್ನಪ್ಪಿದ ಘಟನೆ ಕಡಬ ತಾಲೂಕಿನ ಬಳ್ಪ ಸಮೀಪದ ಕೇನ್ಯ ಗ್ರಾಮದಲ್ಲಿ ನಡೆದಿದೆ. ಮೇ.8ರ ಸಂಜೆ ಈ ದುರ್ಘಟನೆ ಸಂಭವಿಸಿದ್ದು, ಮೂಲತಃ ಕಣ್ಕಲ್ ನವರಾಗಿದ್ದು ಬೆಂಗಳೂರಿನಲ್ಲಿ ಇಂಜಿನಿಯರ್ ಆಗಿರುವ ಸತೀಶ್ ಅಮ್ಮಣ್ಣಾಯ ಅವರ ಪುತ್ರಿಯರಾದ ಹಂಸಿತಾ ( 15 ) ಮತ್ತು ಅವಂತಿಕಾ ( 11 ) ಎಂಬ ಸಹೋದರಿಯರು ನೀರು ಪಾಲಾದ ದುರ್ದೈವಿಗಳು. ಸಹೋದರಿಯರು ನೀರುಪಾಲಾದ ಸುದ್ದಿ ತಿಳಿದು ಆಗಮಿಸಿದ ಅಗ್ನಿ

ಕಡಬ: ನದಿಯಲ್ಲಿ ಮುಳುಗಿ ಸಹೋದರಿಯರಿಬ್ಬರು ದುರ್ಮರಣ| ಇಬ್ಬರ ಶವವೂ ಪತ್ತೆ; ಶೋಕಸಾಗರದಲ್ಲಿ ಕುಟುಂಬ Read More »

ಸುಳ್ಯ: ವೋಟರ್ಸ್ ಸ್ಲಿಪ್ ಜೊತೆ ಬಿಜೆಪಿ ಕರಪತ್ರ ಹಂಚಿದರಾ ಬಿಎಲ್ಒಗಳು? ಸಮಗ್ರ ತನಿಖೆಗೆ ಚುನಾವಣಾಧಿಕಾರಿ ಆದೇಶ

ಸಮಗ್ರ ನ್ಯೂಸ್: ವೋಟರ್ಸ್ ಸ್ಲಿಪ್ ಅನ್ನು ಮತದಾರರ ಮನೆಗೆ ತಲುಪಿಸುವ ವೇಳೆ ಬಿಜೆಪಿ ಪಕ್ಷದ ಪ್ರಚಾರದ ಕರಪತ್ರವನ್ನು ಕೂಡ ಜತೆಗೆ ವಿತರಿಸಿದ್ದಾರೆ ಎಂದು ಆರೋಪ‌ ಕೇಳಿಬಂದಿದ್ದು ಬಿಎಲ್‌ಒಗಳಿಬ್ಬರ ಮೇಲೆ ತನಿಖೆ ನಡೆಸಲು ಸುಳ್ಯ ಚುನಾವಣಾಧಿಕಾರಿಗಳು ಆದೇಶಿಸಿದ್ದಾರೆ. ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಜಾಲ್ಸೂರು ಗ್ರಾಮದ ಎರಡು ಬೂತ್ ಗಳಲ್ಲಿ ಬಿ.ಜೆ.ಪಿ.ಯ ಪ್ರಚಾರ ಸಾಮಾಗ್ರಿಯನ್ನು ವೋಟರ್ಸ್ ಸ್ಲಿಪ್ ನೊಂದಿಗೆ ಕೊಟ್ಟಿರುವುದಾಗಿ ಹೇಳಲಾಗಿದ್ದು ಈ ಬಗ್ಗೆ ಚುನಾವಣಾಧಿಕಾರಿಗಳಿಗೆ ದೂರು ಬಂದಿದೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಚುನಾವಣಾಧಿಕಾರಿಗಳು

ಸುಳ್ಯ: ವೋಟರ್ಸ್ ಸ್ಲಿಪ್ ಜೊತೆ ಬಿಜೆಪಿ ಕರಪತ್ರ ಹಂಚಿದರಾ ಬಿಎಲ್ಒಗಳು? ಸಮಗ್ರ ತನಿಖೆಗೆ ಚುನಾವಣಾಧಿಕಾರಿ ಆದೇಶ Read More »

ಬಿಜೆಪಿಗೆ ಮತ ಹಾಕದಿದ್ದರೆ ಕೇಂದ್ರದ ಯೋಜನೆಗಳಿಗೆ ಬ್ರೇಕ್| ಜೆ.ಪಿ ನಡ್ಡಾ ಹೇಳಿಕೆಗೆ ಕಾಂಗ್ರೆಸ್ ನಿಂದ ತೀವ್ರ ಆಕ್ಷೇಪ

ಸಮಗ್ರ ನ್ಯೂಸ್: ‘ರಾಜ್ಯದಲ್ಲಿ ಡಬಲ್‌ ಎಂಜಿನ್‌ ಸರ್ಕಾರ ಮುಂದುವರಿದರೆ ಕೇಂದ್ರದ ಯೋಜನೆಗಳು ಮುಂದುವರಿಯುತ್ತವೆ. ಒಂದು ವೇಳೆ ಸಿದ್ದರಾಮಯ್ಯನವರ ಸರ್ಕಾರ ಬಂದರೆ ಅವುಗಳಿಗೆ ಬ್ರೇಕ್‌ ಬೀಳುತ್ತದೆ’ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಹೇಳಿದರು. ಹರಪನಹಳ್ಳಿ ಹಾಗೂ ಕೂಡ್ಲಿಗಿ ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಭಾನುವಾರ ಮತಯಾಚಿಸಿ ಮಾತನಾಡಿದ ಅವರು, ‘ಡಬಲ್‌ ಎಂಜಿನ್‌ ಸರ್ಕಾರ ಮುಂದುವರಿದರೆ ಪ್ರಧಾನ ಮಂತ್ರಿ ಆವಾಸ್‌ ಯೋಜನೆ, ಪ್ರಧಾನ ಮಂತ್ರಿ ಗರೀಬ್‌ ಅನ್ನ ಕಲ್ಯಾಣ ಯೋಜನೆ, ಪ್ರಧಾನ ಮಂತ್ರಿ ಉಜ್ವಲ ಯೋಜನೆಯ

ಬಿಜೆಪಿಗೆ ಮತ ಹಾಕದಿದ್ದರೆ ಕೇಂದ್ರದ ಯೋಜನೆಗಳಿಗೆ ಬ್ರೇಕ್| ಜೆ.ಪಿ ನಡ್ಡಾ ಹೇಳಿಕೆಗೆ ಕಾಂಗ್ರೆಸ್ ನಿಂದ ತೀವ್ರ ಆಕ್ಷೇಪ Read More »

ಕರ್ನಾಟಕ ವಿಧಾನಸಭಾ ಚುನಾವಣೆ| ಇಂದು(ಮೇ.8) ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ

ಸಮಗ್ರ ನ್ಯೂಸ್: ಮೇ. 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆ ಬಹಿರಂಗ ಪ್ರಚಾರಕ್ಕೆ ಮೇ.8ರ ಸಂಜೆ ತೆರೆ ಬೀಳಲಿದೆ. ಬಹಿರಂಗ ಪ್ರಚಾರ ಅಂತ್ಯಗೊಂಡ ನಂತರ ಮತದಾರರಲ್ಲದವರು ಆ ಕ್ಷೇತ್ರಗಳನ್ನು ಬಿಟ್ಟು ತೆರಳಬೇಕಿದ್ದು, ಸ್ಟಾರ್ ಪ್ರಚಾರಕರು ಕ್ಷೇತ್ರಗಳಲ್ಲಿ ಉಳಿಯುವಂತಿಲ್ಲ. ಆಯಾ ಕ್ಷೇತ್ರಗಳ ಮಟ್ಟಪಟ್ಟಿಯಲ್ಲಿ ಹೆಸರಿಲ್ಲದ ರಾಜಕೀಯ ನಾಯಕರುಗಳೂ ಸೇರಿದಂತೆ ಎಲ್ಲಾ ಮುಖಂಡರು ಜಾಗ ಖಾಲಿ ಮಾಡಬೇಕು ಎಂದು ಚುನಾವಣಾ ಆಯೋಗ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಮತದಾನ ಮುಕ್ತಾಯದ 48 ಗಂಟೆಗೂ ಮುನ್ನ ಬಹಿರಂಗ ಪ್ರಚಾರ ಅಂತ್ಯವಾಗಲಿದೆ. ಅದರಂತೆ

ಕರ್ನಾಟಕ ವಿಧಾನಸಭಾ ಚುನಾವಣೆ| ಇಂದು(ಮೇ.8) ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ Read More »

ಕರ್ನಾಟಕ ಚುನಾವಣಾ ಪೂರ್ವ ಸಮೀಕ್ಷೆ| ಅತಿದೊಡ್ಡ ಪಕ್ಷವಾಗಿ ಕಾಂಗ್ರೆಸ್ ಮೇಲುಗೈ| ಕುಸಿತ ಕಂಡ ಬಿಜೆಪಿ

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೇನು ಕೆಲ ದಿನಗಳಷ್ಟೇ ಬಾಕಿ ಉಳಿದಿದ್ದು, ರಾಜಕೀಯ ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ತೊಡಗಿವೆ. ಈ ಬಾರಿ ಯಾವ ಪಕ್ಷ ಅಧಿಕಾರದ ಗದ್ದುಗೆಗೆ ಏರಬಹುದು ಎಂಬ ಕುತೂಹಲ ಮತದಾರರಲ್ಲಿಯೇ ಮನೆಮಾಡಿದೆ. ಹೀಗಿರುವಾಗ, ಮತ್ತೊಂದು ಚುನಾವಣಾ ಪೂರ್ವ ಸಮೀಕ್ಷೆಯ ವರದಿ ಪ್ರಕಟವಾಗಿದ್ದು, ಕಾಂಗ್ರೆಸ್ ಪಾಲಿಗೆ ಸುವರ್ಣಾವಕಾಶ ಎನ್ನುವಂತಾಗಿದೆ. ರಾಷ್ಟ್ರೀಯ ಸಮೀಕ್ಷಾ ಸಂಸ್ಥೆಯಾದ ಲೋಕ್ ಪೋಲ್ ಎಂಬ ಸಂಸ್ಥೆ ನಡೆಸಿದ ಸಮೀಕ್ಷೆ ಪ್ರಕಾರ, ಈ ಭಾರಿ ರಾಜ್ಯದಲ್ಲಿ ಕಾಂಗ್ರೆಸ್ ಭರ್ಜರಿ ಮುನ್ನಡೆ ಸಾಧಿಸಿ ಅಧಿಕಾರದ

ಕರ್ನಾಟಕ ಚುನಾವಣಾ ಪೂರ್ವ ಸಮೀಕ್ಷೆ| ಅತಿದೊಡ್ಡ ಪಕ್ಷವಾಗಿ ಕಾಂಗ್ರೆಸ್ ಮೇಲುಗೈ| ಕುಸಿತ ಕಂಡ ಬಿಜೆಪಿ Read More »

ಸುಳ್ಯ: ಆಮ್ ಆದ್ಮಿ ಪಾರ್ಟಿ ವತಿಯಿಂದ ನಾಳೆ (ಮೇ.8) ಬೃಹತ್ ರೋಡ್ ಶೋ

ಸಮಗ್ರ ನ್ಯೂಸ್: ಮೇ 8 ರಂದು ಆಮ್ ಆದ್ಮಿ ಪಾರ್ಟಿಯ ವತಿಯಿಂದ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿಬೃಹತ್ ವಾಹನ ಜಾಥಾ ಹಾಗೂ ರೋಡ್ ಶೋ ನಡೆಯಲಿದೆ. ಸಂಪಾಜೆ ಯಿಂದ ಜಾಥಾ ಪ್ರಾರಂಭವಾಗಿ ಕಲ್ಲುಗುಂಡಿ, ಅರಂತೋಡು, ಸುಳ್ಯ, ಪೈಚಾರು,ಸೋಣಂಗೇರಿ, ಗುತ್ತಿಗಾರು, ಸುಬ್ರಹ್ಮಣ್ಯ, ಕಡಬ, ಆಲಂಕಾರು,ಕಡಬ, ಪಂಜ, ನಿಂತಿಕಲ್ಲು, ಕಾಣಿಯೂರು, ಬೆಳಂದೂರು,ಸವಣೂರು, ಪೆರುವಾಜೆ, ಬೆಳ್ತಾರೆ, ಐವರ್ನಾಡು ಸೋಣಂಗೇರಿ, ಜಾಲ್ಸೂರು ನಿಂದ ಸುಳ್ಯಕ್ಕೆ ತೆರಳಲಿದೆ ಎಂದು ತಿಳಿಸಿದ್ದಾರೆ.

ಸುಳ್ಯ: ಆಮ್ ಆದ್ಮಿ ಪಾರ್ಟಿ ವತಿಯಿಂದ ನಾಳೆ (ಮೇ.8) ಬೃಹತ್ ರೋಡ್ ಶೋ Read More »