ರಾಜಕೀಯ

ತನ್ನದಲ್ಲದ ಎರಡೂ ಕ್ಷೇತ್ರಗಳಲ್ಲಿ ಸಚಿವ ವಿ.ಸೋಮಣ್ಣಗೆ ಸೋಲುವ ಭೀತಿ| ಕೈ ಮುಗಿತೀನಿ ವಾಪಾಸ್ ತಗೋ ಎಂದು ಜೆಡಿಎಸ್ ಅಭ್ಯರ್ಥಿಗೆ ದಮ್ಮಯ್ಯ ಹಾಕಿದ ಹಿರಿಯ ನಾಯಕ

ಸಮಗ್ರ ನ್ಯೂಸ್: ತನ್ನ ಸ್ವಂತ ಕ್ಷೇತ್ರ ಗೋವಿಂದರಾಜನಗರ ಬಿಟ್ಟು ವರುಣಾ ಹಾಗೂ ಚಾಮರಾಜನಗರದ ವಿಧಾನಸಭಾ ಕ್ಷೇತ್ರಗಳೆರಡಲ್ಲೂ ಬಿಜೆಪಿ ಹೈಕಮಾಂಡ್‌ ಸೂಚನೆ ಮೇರೆಗೆ ಸ್ಪರ್ಧೆ ಮಾಡುತ್ತಿರುವ ಸಚಿವ ವಿ ಸೋಮಣ್ಣ ಅವರಿಗೆ ಎರಡೂ ಕ್ಷೇತ್ರಗಳಲ್ಲಿ ಸೋಲುವ ಆತಂಕ ಹೆಚ್ಚಾಗಿದೆ. ವರುಣಾ ವಿಧಾನಸಭಾ ಕ್ಷೇತ್ರದ ಎರಡು ಹಳ್ಳಿಗಳಲ್ಲಿ ಮತಯಾಚನೆ ಮಾಡುವ ವೇಳೆ ಗ್ರಾಮಸ್ಥರಿಂದ ತರಾಟೆಗೆ ಒಳಗಾಗಿದ್ದ ಸೋಮಣ್ಣ ಅವರಿಗೆ ಸಂಬಂಧಿಸಿದ್ದು ಎನ್ನಲಾದ ಆಡಿಯೋ ವೈರಲ್‌ ಆಗಿದೆ. ಇಲ್ಲಿ ಸಚಿವ ವಿ ಸೋಮಣ್ಣ ಅವರು ಚಾಮರಾಜನಗರ ಜೆಡಿಎಸ್‌ ಅಭ್ಯರ್ಥಿಗೆ ನಿನ್ನ ಕೈಮುಗಿತಿನಿ […]

ತನ್ನದಲ್ಲದ ಎರಡೂ ಕ್ಷೇತ್ರಗಳಲ್ಲಿ ಸಚಿವ ವಿ.ಸೋಮಣ್ಣಗೆ ಸೋಲುವ ಭೀತಿ| ಕೈ ಮುಗಿತೀನಿ ವಾಪಾಸ್ ತಗೋ ಎಂದು ಜೆಡಿಎಸ್ ಅಭ್ಯರ್ಥಿಗೆ ದಮ್ಮಯ್ಯ ಹಾಕಿದ ಹಿರಿಯ ನಾಯಕ Read More »

ಪುತ್ತೂರು: ಚುನಾವಣೆ ಅಖಾಡದಲ್ಲಿ ಸಂಚಲನ ಸೃಷ್ಟಿಸಿದ ಪುತ್ತಿಲರ ಪ್ರಣಾಳಿಕೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚುನಾವಣಾ ಕಾವು ಏರತೊಡಗುತ್ತಿದ್ದಂತೆಯೇ ಮಳೆಯ ಸಿಂಚನವಾಗುತ್ತಿದೆ. ಬುಧವಾರ ಹನಿಮಳೆಯೊಂದಿಗೆ ಬಿಜೆಪಿ, ಕಾಂಗ್ರೆಸ್ ಪಕ್ಷಗಳು ಪ್ರಚಾರ ನಡೆಸಿದರೆ, ಭಾರಿ ಸಂಚಲನವನ್ನೇ ಸೃಷ್ಟಿಸಿರುವ ಪುತ್ತೂರು ಕ್ಷೇತ್ರದಲ್ಲಿ ಹಿಂದು ಸಂಘಟನೆಗಳ ಮುಖಂಡ ಹಾಗೂ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ಜಿಲ್ಲೆಯಲ್ಲಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಣಾಳಿಕೆಯೊಂದನ್ನು ಬಿಡುಗಡೆ ಮಾಡುತ್ತಿರುವುದು ಈ ಚುನಾವಣೆಯಲ್ಲಿ ಇದೇ ಮೊದಲಾಗಿದ್ದು, ಪ್ರಚಾರದ ದೃಷ್ಟಿಯಿಂದ ಗಮನ ಸೆಳೆಯುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡಿದ್ದಷ್ಟೇ ಅಲ್ಲ,

ಪುತ್ತೂರು: ಚುನಾವಣೆ ಅಖಾಡದಲ್ಲಿ ಸಂಚಲನ ಸೃಷ್ಟಿಸಿದ ಪುತ್ತಿಲರ ಪ್ರಣಾಳಿಕೆ Read More »

ಎ.30ರಂದು ಸುಳ್ಯಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ

ಸಮಗ್ರ ನ್ಯೂಸ್:‌ ಕರಾವಳಿಯಲ್ಲಿ ಚುನಾವಣಾ ಕಾವು ಜೋರಾಗಿದ್ದು, ಅಲ್ಲಲ್ಲಿ ರಾಷ್ಟ್ರೀಯ ನಾಯಕರು ಪ್ರಚಾರದಲ್ಲಿ ತೊಡಗಿದ್ದಾರೆ. ಇದೀಗ ಬಿಜಪಿ ರಾಷ್ಟ್ರೀಯ ಅಧ್ಯಕ್ಷ ಅಧ್ಯಕ್ಷ ಜೆಪಿ ನಡ್ಡಾ ಎ.30ರಂದು ಸುಳ್ಯಕ್ಕೆ ಆಗಮಿಸಲಿದ್ದಾರೆ ಎಂದು ತಿಳಿದು ಬಂದಿದೆ. ಬಿಜೆಪಿ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಸುಳ್ಯದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಜೆಪಿ ನಡ್ಡಾ ಸುಳ್ಯಕ್ಕೆ ಆಗಮಿಸುವುದನ್ನು ಬಿಜೆಪಿ ಮುಖಂಡರು ಖಚಿತ ಪಡಿಸಿದ್ದಾರೆ.

ಎ.30ರಂದು ಸುಳ್ಯಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ Read More »

ಬಿರುಸಾದ ಪ್ರಚಾರ ಭರಾಟೆ| ಇಂದು ರಾಜ್ಯಕ್ಕೆ ಯೋಗಿ ಆದಿತ್ಯನಾಥ್ ಭೇಟಿ

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭೆ ಚುನಾವಣೆ ಪ್ರಚಾರ ಭರಾಟೆ ಬಿರುಸಾಗಿದ್ದು, ಈ ಹಿನ್ನೆಲೆಯಲ್ಲಿ ಇಂದು ರಾಜ್ಯಕ್ಕೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಆಗಮಿಸಲಿದ್ದು, ಮಂಡ್ಯದಲ್ಲಿ ಬಿಜೆಪಿ ಪರ ಭರ್ಜರಿ ಪ್ರಚಾರ ನಡೆಸಲಿದ್ದಾರೆ. ಇಂದು ಯೋಗಿ ಆದಿತ್ಯನಾಥ್ ಅವರು ಮಂಡ್ಯ ನಗರ, ಬಸವನಬಾಗೇವಾಡಿ, ಇಂಡಿ, ಏಪ್ರಿಲ್ 30 ರಂದು ಶೃಂಗೇರಿ, ಪುತ್ತೂರು, ಕಾರ್ಕಳ, ಬೈಂದೂರು, ಭಟ್ಕಳ, ಮೇ.3 ರಂದು ಗಂಗಾವತಿ, ಜೇವರ್ಗಿ, ಶಹಾಪುರ, ಭಾಲ್ಕಿ ಕ್ಷೇತ್ರಗಳಲ್ಲಿ ಮತಯಾಚನೆ ಮಾಡಲಿದ್ದಾರೆ. ಇನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ

ಬಿರುಸಾದ ಪ್ರಚಾರ ಭರಾಟೆ| ಇಂದು ರಾಜ್ಯಕ್ಕೆ ಯೋಗಿ ಆದಿತ್ಯನಾಥ್ ಭೇಟಿ Read More »

ಬಿಜೆಪಿ ಸರ್ಕಾರದ 40% ಕಮಿಷನ್ ನಿಂದ ಅಭಿವೃದ್ಧಿ ಮೇಲೆ‌ ಬರೆ| ಸುಳ್ಯದಲ್ಲಿ ಎಐಸಿಸಿ ಅಧ್ಯಕ್ಷ ಖರ್ಗೆ ಕಿಡಿ

ಸಮಗ್ರ ನ್ಯೂಸ್: ‘ ಬಿಜೆಪಿ ಸರ್ಕಾರವು ಪ್ರತಿಯೊಂದು ಕ್ಷೇತ್ರದಲ್ಲೂ ಕಮಿಷನ್ ಹೊಡೆಯುತ್ತಿದ್ದು, ಅಭಿವೃದ್ಧಿ ಕುಂಠಿತವಾಗಿದೆ, ಕಾಮಗಾರಿ, ಯೋಜನೆಗಳು ಹಳ್ಳ ಹಿಡಿದಿದ್ದು, ಇದರ ವಿರುದ್ಧ ಜನಸಾಮಾನ್ಯರು ಹೋರಾಡಬೇಕಿದೆ’ ಎಂದು ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ಸುಳ್ಯದಲ್ಲಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸರ್ಕಾರದ ಹಲವು ಸ್ತರಗಳಲ್ಲಿ ಲೂಟಿ ಹೊಡೆಯಲಾಗುತ್ತಿದೆ. ಭ್ರಷ್ಟಾಚಾರ ತುಂಬಿ ತುಳುಕುತ್ತಿದ್ದರೂ ನಾ ತಿನ್ನಲ್ಲ, ತಿನ್ನಲು ಬಿಡಲ್ಲ ಎಂದು ಘೋಷಿಸಿಕೊಳ್ಳುತ್ತಿರುವ ಪ್ರಧಾನಿಗಳ ಹೇಳಿಕೆ ಹಾಸ್ಯಾಸ್ಪದ. ಯುವಕರು, ಶಿಕ್ಷಿತರು ಉದ್ಯೋಗ ವಂಚಿತರಾಗಿದ್ದು, ಭಾರತದಲ್ಲಿ

ಬಿಜೆಪಿ ಸರ್ಕಾರದ 40% ಕಮಿಷನ್ ನಿಂದ ಅಭಿವೃದ್ಧಿ ಮೇಲೆ‌ ಬರೆ| ಸುಳ್ಯದಲ್ಲಿ ಎಐಸಿಸಿ ಅಧ್ಯಕ್ಷ ಖರ್ಗೆ ಕಿಡಿ Read More »

“ಈ ಬಾರಿ ಜೆಡಿಎಸ್ ಪಕ್ಷಕ್ಕೆ ಜನತೆ ಮಣೆ ಹಾಕಲಿದ್ದಾರೆ” -ಮೊಯಿದೀನ್ ಬಾವಾ

ಸಮಗ್ರ ನ್ಯೂಸ್: “ರಾಜ್ಯದಲ್ಲಿ ಈ ಬಾರಿ ಬದಲಾವಣೆಯ ಗಾಳಿ ಬಲವಾಗಿ ಬೀಸುತ್ತಿದ್ದು ಜನತೆ ಜೆಡಿಎಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡಲಿದ್ದಾರೆ. ಮಂಗಳೂರು ಉತ್ತರ ಕ್ಷೇತ್ರದಲ್ಲಿ ನಾನು ಶಾಸಕನಾಗಿದ್ದಾಗ ಮಾಡಿದ್ದ ಜನಪರ ಯೋಜನೆಗಳು ಮತ್ತು ಅಭಿವೃದ್ಧಿಯನ್ನು ನೋಡಿ ಜನರು ಮತ ಕೊಟ್ಟು ಗೆಲ್ಲಿಸಲಿದ್ದಾರೆ. ಪ್ರಚಾರ ಸಂದರ್ಭದಲ್ಲಿ ನನ್ನ ಪರ ಇರುವ ಜನರ ಬೆಂಬಲ ನೋಡಿ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳಿಗೆ ನಡುಕ ಶುರುವಾಗಿದೆ” ಎಂದು ಉತ್ತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮೊಯಿದೀನ್ ಬಾವಾ ಹೇಳಿದ್ದಾರೆ. ಅವರು ಸೋಮವಾರ ಪಂಜಿಮೊಗರು,

“ಈ ಬಾರಿ ಜೆಡಿಎಸ್ ಪಕ್ಷಕ್ಕೆ ಜನತೆ ಮಣೆ ಹಾಕಲಿದ್ದಾರೆ” -ಮೊಯಿದೀನ್ ಬಾವಾ Read More »

ಸುಳ್ಯಕ್ಕೆ ಆಗಮಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಸಮಗ್ರ ನ್ಯೂಸ್: ಕಾಂಗ್ರೆಸ್ ನಾಯಕ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇದೀಗ ಸುಳ್ಯಕ್ಕೆ ಆಗಮಿಸಿದ್ದಾರೆ. ಸುಳ್ಯ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಅವರ ಚುನಾವಣಾ ಪ್ರಚಾರ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಿದ್ದಾರೆ. ಮಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಸುಳ್ಯದ ಹೆಲಿಪ್ಯಾಡ್ ಗೆ ಆಗಮಿಸಿದ ಮಲ್ಲಿಕಾರ್ಜುನ ಖರ್ಗೆ, ಅಲ್ಲಿಂದ ರಸ್ತೆ ಮಾರ್ಗದ ಮೂಲಕ ಸಮಾವೇಶ ನಡೆಯಲಿರುವ ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದ ಸಭಾಂಗಣದ ಬಳಿ ಆಗಮಿಸಿ ಸಭೆಯಲ್ಲಿ ಭಾಗವಹಿಸಿ, ಪಾಲ್ಗೊಂಡಿದ್ದಾರೆ‌. ಸುಳ್ಯಕ್ಕೆ ಆಗಮಿಸಿದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಾಂಗ್ರೆಸ್ ನಾಯಕರು

ಸುಳ್ಯಕ್ಕೆ ಆಗಮಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ Read More »

ಬ್ಯಾಟ್ ಹಿಡಿದು ಕ್ರೀಸ್ ಗಿಳಿದ ಅರುಣ್ ಕುಮಾರ್ ಪುತ್ತಿಲ| ಪುತ್ತೂರಲ್ಲಿ ಗೆಲುವಿನ ಸಿಕ್ಸರ್ ಬಾರಿಸ್ತಾರಾ ಬಂಡಾಯ ನಾಯಕ!?

ಸಮಗ್ರ ನ್ಯೂಸ್: ಬಿಜೆಪಿ ಮತ್ತು ಆರೆಸ್ಸೆಸ್ ನಾಯಕರ ಒತ್ತಡದ ನಡುವೆಯೂ ಬಂಡಾಯ ಕಣಕ್ಕಿಳಿದ ಅರುಣ್ ಪುತ್ತಿಲ ತಮ್ಮ ನಾಮಪತ್ರ ಹಿಂಪಡೆಯದೆ ಕಣದಲ್ಲಿ ಗಟ್ಟಿಯಾಗಿ ನಿಂತುಬಿಟ್ಟಿದ್ದಾರೆ. ಅಲ್ಲದೆ, ತಮ್ಮ ಚುನಾವಣಾ ಚಿಹ್ನೆಯಾಗಿ ಕ್ರಿಕೆಟ್ ಬ್ಯಾಟ್ ಅನ್ನು ಆಯ್ಕೆ ಮಾಡಿಕೊಂಡಿದ್ದು, ಅರುಣ್ ಪುತ್ತಿಲ ಕ್ರೀಸಿಗಿಳಿದು ಬ್ಯಾಟಿಂಗ್ ಮಾಡುವ ಸೂಚನೆ ನೀಡಿದ್ದಾರೆ. ಪುತ್ತೂರು ಮತ್ತು ಸುಳ್ಯ ಕ್ಷೇತ್ರದಲ್ಲಿ ಅರುಣ್ ಪುತ್ತಿಲ ಪರವಾಗಿ ಆರೆಸ್ಸೆಸ್ ಮತ್ತು ಬಿಜೆಪಿ ಕಾರ್ಯಕರ್ತರಿಂದ ಭಾರೀ ಬೆಂಬಲ ವ್ಯಕ್ತವಾಗಿದೆ. ಈಗಾಗಲೇ ಫೇಸ್ಬುಕ್ ಜಾಲತಾಣದಲ್ಲಿ ಅರುಣ್ ಪುತ್ತಿಲ ಪರ ಅಭಿಯಾನ

ಬ್ಯಾಟ್ ಹಿಡಿದು ಕ್ರೀಸ್ ಗಿಳಿದ ಅರುಣ್ ಕುಮಾರ್ ಪುತ್ತಿಲ| ಪುತ್ತೂರಲ್ಲಿ ಗೆಲುವಿನ ಸಿಕ್ಸರ್ ಬಾರಿಸ್ತಾರಾ ಬಂಡಾಯ ನಾಯಕ!? Read More »

ಬೆಳ್ತಂಗಡಿ: ಗೆಳೆಯರೊಂದಿಗೆ ನದಿಗೆ ತೆರಳಿ ಕಣ್ಮರೆಯಾಗಿದ್ದಾತ ಶವವಾಗಿ ಪತ್ತೆ

ಸಮಗ್ರ ನ್ಯೂಸ್: ಗೆಳೆಯನೊಂದಿಗೆ ಹೊಳೆಗೆ ಸ್ನಾನಕ್ಕೆಂದು ತೆರಳಿದ್ದ ವ್ಯಕ್ತಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಪುದುವೆಟ್ಟು ಗ್ರಾಮದ ಶಾಂತಿ ಹೊಳೆಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ತೋಟತ್ತಾಡಿ ಗ್ರಾಮದ ಕಂಚೇರಿ ಕಂಡ ನಿವಾಸಿ ಜೈಸನ್‌ ಪಿ.ವಿ. (34) ತನ್ನ ಅಕ್ಕನ ಮನೆಗೆ ಬಂದಿದ್ದು ಗೆಳೆಯ ಸ್ಟ್ಯಾನ್ಲಿಯೊಂದಿಗೆ ರವಿವಾರ ಪುದುವೆಟ್ಟು ಗ್ರಾಮದ ಶಾಂತಿಯ ಹೊಳೆಗೆ ಸ್ನಾನಕ್ಕೆಂದು ಬೈಕ್‌ನಲ್ಲಿ ತೆರಳಿದ್ದರು. ಈ ವೇಳೆ ಸ್ನಾನಕ್ಕೆ ಇಳಿದ ಜೈಸನ್‌ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದರು. ಸೋಮವಾರ ಬೆಳಗ್ಗೆ ಅವರ ಮೃತದೇಹವು ಪತ್ತೆಯಾಗಿದೆ. ಈ ಬಗ್ಗೆ

ಬೆಳ್ತಂಗಡಿ: ಗೆಳೆಯರೊಂದಿಗೆ ನದಿಗೆ ತೆರಳಿ ಕಣ್ಮರೆಯಾಗಿದ್ದಾತ ಶವವಾಗಿ ಪತ್ತೆ Read More »

ದ.ಕ ಜಿಲ್ಲೆಯ 8 ಕ್ಷೇತ್ರಗಳಲ್ಲಿ 60 ಮಂದಿ ಸ್ಪರ್ಧೆ

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ದಕ್ಷಿಣ ಕನ್ನಡ ಜಿಲ್ಲೆಯಿಂದ ನಾಮಪತ್ರ ಸಲ್ಲಿಸಿದ್ದ 72 ಜನರಲ್ಲಿ 12 ಜನರು ನಾಮಪತ್ರ ಹಿಂತೆಗೆದುಕೊಂಡುದರಿಂದ ಈಗ ಸ್ಪರ್ಧೆಯಲ್ಲಿ 60 ಮಂದಿ ಉಳಿದಿದ್ದಾರೆ. ಮಂಗಳೂರು ಉತ್ತರದಲ್ಲಿ 10, ಬೆಳ್ತಂಗಡಿ, ಪುತ್ತೂರು, ಸುಳ್ಯ, ಮೂಡಬಿದಿರೆ, ಮಂಗಳೂರು ದಕ್ಷಿಣಗಳಲ್ಲಿ ತಲಾ 8, ಬಂಟ್ವಾಳ 6, ಮಂಗಳೂರು ಉಳ್ಳಾಲದಲ್ಲಿ 4 ಮಂದಿ ಉಳಿದಿದ್ದಾರೆ. ಮೇ.10 ರಂದು ಚುನಾವಣೆ ನಡೆಯಲಿದ್ದು, ಮೇ. 13ಕ್ಕೆ ಈ ಸ್ಪರ್ಧಾಳುಗಳ ಭವಿಷ್ಯ ತಿಳಿಯಲಿದೆ.

ದ.ಕ ಜಿಲ್ಲೆಯ 8 ಕ್ಷೇತ್ರಗಳಲ್ಲಿ 60 ಮಂದಿ ಸ್ಪರ್ಧೆ Read More »