ರಾಜಕೀಯ

ಬಿಜೆಪಿ ಸರ್ಕಾರದ 40% ಕಮಿಷನ್ ನಿಂದ ಅಭಿವೃದ್ಧಿ ಮೇಲೆ‌ ಬರೆ| ಸುಳ್ಯದಲ್ಲಿ ಎಐಸಿಸಿ ಅಧ್ಯಕ್ಷ ಖರ್ಗೆ ಕಿಡಿ

ಸಮಗ್ರ ನ್ಯೂಸ್: ‘ ಬಿಜೆಪಿ ಸರ್ಕಾರವು ಪ್ರತಿಯೊಂದು ಕ್ಷೇತ್ರದಲ್ಲೂ ಕಮಿಷನ್ ಹೊಡೆಯುತ್ತಿದ್ದು, ಅಭಿವೃದ್ಧಿ ಕುಂಠಿತವಾಗಿದೆ, ಕಾಮಗಾರಿ, ಯೋಜನೆಗಳು ಹಳ್ಳ ಹಿಡಿದಿದ್ದು, ಇದರ ವಿರುದ್ಧ ಜನಸಾಮಾನ್ಯರು ಹೋರಾಡಬೇಕಿದೆ’ ಎಂದು ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ಸುಳ್ಯದಲ್ಲಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸರ್ಕಾರದ ಹಲವು ಸ್ತರಗಳಲ್ಲಿ ಲೂಟಿ ಹೊಡೆಯಲಾಗುತ್ತಿದೆ. ಭ್ರಷ್ಟಾಚಾರ ತುಂಬಿ ತುಳುಕುತ್ತಿದ್ದರೂ ನಾ ತಿನ್ನಲ್ಲ, ತಿನ್ನಲು ಬಿಡಲ್ಲ ಎಂದು ಘೋಷಿಸಿಕೊಳ್ಳುತ್ತಿರುವ ಪ್ರಧಾನಿಗಳ ಹೇಳಿಕೆ ಹಾಸ್ಯಾಸ್ಪದ. ಯುವಕರು, ಶಿಕ್ಷಿತರು ಉದ್ಯೋಗ ವಂಚಿತರಾಗಿದ್ದು, ಭಾರತದಲ್ಲಿ […]

ಬಿಜೆಪಿ ಸರ್ಕಾರದ 40% ಕಮಿಷನ್ ನಿಂದ ಅಭಿವೃದ್ಧಿ ಮೇಲೆ‌ ಬರೆ| ಸುಳ್ಯದಲ್ಲಿ ಎಐಸಿಸಿ ಅಧ್ಯಕ್ಷ ಖರ್ಗೆ ಕಿಡಿ Read More »

“ಈ ಬಾರಿ ಜೆಡಿಎಸ್ ಪಕ್ಷಕ್ಕೆ ಜನತೆ ಮಣೆ ಹಾಕಲಿದ್ದಾರೆ” -ಮೊಯಿದೀನ್ ಬಾವಾ

ಸಮಗ್ರ ನ್ಯೂಸ್: “ರಾಜ್ಯದಲ್ಲಿ ಈ ಬಾರಿ ಬದಲಾವಣೆಯ ಗಾಳಿ ಬಲವಾಗಿ ಬೀಸುತ್ತಿದ್ದು ಜನತೆ ಜೆಡಿಎಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡಲಿದ್ದಾರೆ. ಮಂಗಳೂರು ಉತ್ತರ ಕ್ಷೇತ್ರದಲ್ಲಿ ನಾನು ಶಾಸಕನಾಗಿದ್ದಾಗ ಮಾಡಿದ್ದ ಜನಪರ ಯೋಜನೆಗಳು ಮತ್ತು ಅಭಿವೃದ್ಧಿಯನ್ನು ನೋಡಿ ಜನರು ಮತ ಕೊಟ್ಟು ಗೆಲ್ಲಿಸಲಿದ್ದಾರೆ. ಪ್ರಚಾರ ಸಂದರ್ಭದಲ್ಲಿ ನನ್ನ ಪರ ಇರುವ ಜನರ ಬೆಂಬಲ ನೋಡಿ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳಿಗೆ ನಡುಕ ಶುರುವಾಗಿದೆ” ಎಂದು ಉತ್ತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮೊಯಿದೀನ್ ಬಾವಾ ಹೇಳಿದ್ದಾರೆ. ಅವರು ಸೋಮವಾರ ಪಂಜಿಮೊಗರು,

“ಈ ಬಾರಿ ಜೆಡಿಎಸ್ ಪಕ್ಷಕ್ಕೆ ಜನತೆ ಮಣೆ ಹಾಕಲಿದ್ದಾರೆ” -ಮೊಯಿದೀನ್ ಬಾವಾ Read More »

ಸುಳ್ಯಕ್ಕೆ ಆಗಮಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಸಮಗ್ರ ನ್ಯೂಸ್: ಕಾಂಗ್ರೆಸ್ ನಾಯಕ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇದೀಗ ಸುಳ್ಯಕ್ಕೆ ಆಗಮಿಸಿದ್ದಾರೆ. ಸುಳ್ಯ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಅವರ ಚುನಾವಣಾ ಪ್ರಚಾರ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಿದ್ದಾರೆ. ಮಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಸುಳ್ಯದ ಹೆಲಿಪ್ಯಾಡ್ ಗೆ ಆಗಮಿಸಿದ ಮಲ್ಲಿಕಾರ್ಜುನ ಖರ್ಗೆ, ಅಲ್ಲಿಂದ ರಸ್ತೆ ಮಾರ್ಗದ ಮೂಲಕ ಸಮಾವೇಶ ನಡೆಯಲಿರುವ ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದ ಸಭಾಂಗಣದ ಬಳಿ ಆಗಮಿಸಿ ಸಭೆಯಲ್ಲಿ ಭಾಗವಹಿಸಿ, ಪಾಲ್ಗೊಂಡಿದ್ದಾರೆ‌. ಸುಳ್ಯಕ್ಕೆ ಆಗಮಿಸಿದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಾಂಗ್ರೆಸ್ ನಾಯಕರು

ಸುಳ್ಯಕ್ಕೆ ಆಗಮಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ Read More »

ಬ್ಯಾಟ್ ಹಿಡಿದು ಕ್ರೀಸ್ ಗಿಳಿದ ಅರುಣ್ ಕುಮಾರ್ ಪುತ್ತಿಲ| ಪುತ್ತೂರಲ್ಲಿ ಗೆಲುವಿನ ಸಿಕ್ಸರ್ ಬಾರಿಸ್ತಾರಾ ಬಂಡಾಯ ನಾಯಕ!?

ಸಮಗ್ರ ನ್ಯೂಸ್: ಬಿಜೆಪಿ ಮತ್ತು ಆರೆಸ್ಸೆಸ್ ನಾಯಕರ ಒತ್ತಡದ ನಡುವೆಯೂ ಬಂಡಾಯ ಕಣಕ್ಕಿಳಿದ ಅರುಣ್ ಪುತ್ತಿಲ ತಮ್ಮ ನಾಮಪತ್ರ ಹಿಂಪಡೆಯದೆ ಕಣದಲ್ಲಿ ಗಟ್ಟಿಯಾಗಿ ನಿಂತುಬಿಟ್ಟಿದ್ದಾರೆ. ಅಲ್ಲದೆ, ತಮ್ಮ ಚುನಾವಣಾ ಚಿಹ್ನೆಯಾಗಿ ಕ್ರಿಕೆಟ್ ಬ್ಯಾಟ್ ಅನ್ನು ಆಯ್ಕೆ ಮಾಡಿಕೊಂಡಿದ್ದು, ಅರುಣ್ ಪುತ್ತಿಲ ಕ್ರೀಸಿಗಿಳಿದು ಬ್ಯಾಟಿಂಗ್ ಮಾಡುವ ಸೂಚನೆ ನೀಡಿದ್ದಾರೆ. ಪುತ್ತೂರು ಮತ್ತು ಸುಳ್ಯ ಕ್ಷೇತ್ರದಲ್ಲಿ ಅರುಣ್ ಪುತ್ತಿಲ ಪರವಾಗಿ ಆರೆಸ್ಸೆಸ್ ಮತ್ತು ಬಿಜೆಪಿ ಕಾರ್ಯಕರ್ತರಿಂದ ಭಾರೀ ಬೆಂಬಲ ವ್ಯಕ್ತವಾಗಿದೆ. ಈಗಾಗಲೇ ಫೇಸ್ಬುಕ್ ಜಾಲತಾಣದಲ್ಲಿ ಅರುಣ್ ಪುತ್ತಿಲ ಪರ ಅಭಿಯಾನ

ಬ್ಯಾಟ್ ಹಿಡಿದು ಕ್ರೀಸ್ ಗಿಳಿದ ಅರುಣ್ ಕುಮಾರ್ ಪುತ್ತಿಲ| ಪುತ್ತೂರಲ್ಲಿ ಗೆಲುವಿನ ಸಿಕ್ಸರ್ ಬಾರಿಸ್ತಾರಾ ಬಂಡಾಯ ನಾಯಕ!? Read More »

ಬೆಳ್ತಂಗಡಿ: ಗೆಳೆಯರೊಂದಿಗೆ ನದಿಗೆ ತೆರಳಿ ಕಣ್ಮರೆಯಾಗಿದ್ದಾತ ಶವವಾಗಿ ಪತ್ತೆ

ಸಮಗ್ರ ನ್ಯೂಸ್: ಗೆಳೆಯನೊಂದಿಗೆ ಹೊಳೆಗೆ ಸ್ನಾನಕ್ಕೆಂದು ತೆರಳಿದ್ದ ವ್ಯಕ್ತಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಪುದುವೆಟ್ಟು ಗ್ರಾಮದ ಶಾಂತಿ ಹೊಳೆಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ತೋಟತ್ತಾಡಿ ಗ್ರಾಮದ ಕಂಚೇರಿ ಕಂಡ ನಿವಾಸಿ ಜೈಸನ್‌ ಪಿ.ವಿ. (34) ತನ್ನ ಅಕ್ಕನ ಮನೆಗೆ ಬಂದಿದ್ದು ಗೆಳೆಯ ಸ್ಟ್ಯಾನ್ಲಿಯೊಂದಿಗೆ ರವಿವಾರ ಪುದುವೆಟ್ಟು ಗ್ರಾಮದ ಶಾಂತಿಯ ಹೊಳೆಗೆ ಸ್ನಾನಕ್ಕೆಂದು ಬೈಕ್‌ನಲ್ಲಿ ತೆರಳಿದ್ದರು. ಈ ವೇಳೆ ಸ್ನಾನಕ್ಕೆ ಇಳಿದ ಜೈಸನ್‌ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದರು. ಸೋಮವಾರ ಬೆಳಗ್ಗೆ ಅವರ ಮೃತದೇಹವು ಪತ್ತೆಯಾಗಿದೆ. ಈ ಬಗ್ಗೆ

ಬೆಳ್ತಂಗಡಿ: ಗೆಳೆಯರೊಂದಿಗೆ ನದಿಗೆ ತೆರಳಿ ಕಣ್ಮರೆಯಾಗಿದ್ದಾತ ಶವವಾಗಿ ಪತ್ತೆ Read More »

ದ.ಕ ಜಿಲ್ಲೆಯ 8 ಕ್ಷೇತ್ರಗಳಲ್ಲಿ 60 ಮಂದಿ ಸ್ಪರ್ಧೆ

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ದಕ್ಷಿಣ ಕನ್ನಡ ಜಿಲ್ಲೆಯಿಂದ ನಾಮಪತ್ರ ಸಲ್ಲಿಸಿದ್ದ 72 ಜನರಲ್ಲಿ 12 ಜನರು ನಾಮಪತ್ರ ಹಿಂತೆಗೆದುಕೊಂಡುದರಿಂದ ಈಗ ಸ್ಪರ್ಧೆಯಲ್ಲಿ 60 ಮಂದಿ ಉಳಿದಿದ್ದಾರೆ. ಮಂಗಳೂರು ಉತ್ತರದಲ್ಲಿ 10, ಬೆಳ್ತಂಗಡಿ, ಪುತ್ತೂರು, ಸುಳ್ಯ, ಮೂಡಬಿದಿರೆ, ಮಂಗಳೂರು ದಕ್ಷಿಣಗಳಲ್ಲಿ ತಲಾ 8, ಬಂಟ್ವಾಳ 6, ಮಂಗಳೂರು ಉಳ್ಳಾಲದಲ್ಲಿ 4 ಮಂದಿ ಉಳಿದಿದ್ದಾರೆ. ಮೇ.10 ರಂದು ಚುನಾವಣೆ ನಡೆಯಲಿದ್ದು, ಮೇ. 13ಕ್ಕೆ ಈ ಸ್ಪರ್ಧಾಳುಗಳ ಭವಿಷ್ಯ ತಿಳಿಯಲಿದೆ.

ದ.ಕ ಜಿಲ್ಲೆಯ 8 ಕ್ಷೇತ್ರಗಳಲ್ಲಿ 60 ಮಂದಿ ಸ್ಪರ್ಧೆ Read More »

ಬೆಳ್ತಂಗಡಿ: ಮಾಜಿ‌ ಶಾಸಕ,‌ಕೆಪಿಸಿಸಿ ಉಪಾಧ್ಯಕ್ಷ ಗಂಗಾಧರ ಗೌಡರ ಬಳಿ ಐಟಿ ಅಧಿಕಾರಿಗಳಿಗೆ ಸಿಕ್ಕಿದ್ದೇನು? ಇಲ್ಲಿದೆ ಫುಲ್ ಡೀಟೈಲ್ಸ್

ಸಮಗ್ರ ನ್ಯೂಸ್: ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಪಕ್ಷದ ಕೆಪಿಸಿಸಿ ಉಪಾಧ್ಯಕ್ಷ ಗಂಗಾಧರ ಗೌಡರ ಮನೆ ಮೇಲೆ‌ ಏ.24 ರಂದು ಬೆಳಗ್ಗೆ 6:30 ಕ್ಕೆ ಆದಾಯ‌ ಇಲಾಖೆ ಅಧಿಕಾರಿಗಳು (ಐಟಿ) ದಾಳಿ ನಡೆಸಿದ್ದು, ಹಲವು ಸೊತ್ತು‌ ಹಾಗೂ ದಾಖಲೆಗಳು ವಶವಾಗಿವೆ. ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಬಂಗಾಡಿ ಫಾರ್ಮ್ ಹೌಸ್ , ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ಪಕ್ಕದಲ್ಲಿರುವ ಮನೆ, ಲಾಯಿಲ ಪ್ರಸನ್ನ ಎಜುಕೇಶನ್ ಟ್ರಸ್ಟ್ ಮೇಲೆ ಏಕಕಾಲದಲ್ಲಿ ಏ.24 ರ ಬೆಳಗ್ಗೆ 6:30 ಕ್ಕೆ ದಾಳಿ ಮಾಡಿದ್ದರು.

ಬೆಳ್ತಂಗಡಿ: ಮಾಜಿ‌ ಶಾಸಕ,‌ಕೆಪಿಸಿಸಿ ಉಪಾಧ್ಯಕ್ಷ ಗಂಗಾಧರ ಗೌಡರ ಬಳಿ ಐಟಿ ಅಧಿಕಾರಿಗಳಿಗೆ ಸಿಕ್ಕಿದ್ದೇನು? ಇಲ್ಲಿದೆ ಫುಲ್ ಡೀಟೈಲ್ಸ್ Read More »

‘ಶೋಭಕ್ಕ, ನಿಮ್ಮ ಪಕ್ಷದವರಂತೆ ನಾವು 40% ಕಮಿಷನ್ ಪಡೆದಿಲ್ಲ’ | ಶೋಭಾ ಕರಂದ್ಲಾಜೆ ಆರೋಪಕ್ಕೆ ಡಿಕೆಶಿ ಪ್ರತಿಕ್ರಿಯೆ

ಸಮಗ್ರ ನ್ಯೂಸ್: ‘ಶೋಭಕ್ಕ ನಿಮ್ಮ ಪಕ್ಷದವರಂತೆ ನಾವು 40 ಪರ್ಸೆಂಟ್‌ ಕಮಿಷನ್‌ ಪಡೆದಿಲ್ಲ. ನಿಮ್ಮ ಕಮಿಷನ್‌ ಸರ್ಕಾರದ ಬಗ್ಗೆ ಬಸನಗೌಡ ಪಾಟೀಲ್‌ ಯತ್ನಾಳ್‌, ನೆಹರೂ ಓಲೇಕಾರ್‌, ಮಾಡಾಳ್‌ ವಿರೂಪಾಕ್ಷಪ್ಪ, ಎಚ್‌. ವಿಶ್ವನಾಥ್‌, ಗೂಳಿಹಟ್ಟಿ ಶೇಖರ್‌ ಅವರೇ ಸಾಕ್ಷಿ ನೀಡಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತಿರುಗೇಟು ನೀಡಿದ್ದಾರೆ. ಟಿಕೆಟ್‌ ಅರ್ಜಿ ಜತೆಗೆ ಕಾಂಗ್ರೆಸ್‌ ಪಕ್ಷ 2 ಲಕ್ಷ ರೂ ಸ್ವೀಕರಿಸಿದೆ. ಹೀಗಾಗಿ ಚುನಾವಣಾ ಆಯೋಗವು 223 ಕಾಂಗ್ರೆಸ್‌ ಅಭ್ಯರ್ಥಿಗಳ ನಾಮಪತ್ರಗಳನ್ನು ತಿರಸ್ಕಾರ ಮಾಡಬೇಕು ಎಂಬ ಕೇಂದ್ರ ಸಚಿವೆ

‘ಶೋಭಕ್ಕ, ನಿಮ್ಮ ಪಕ್ಷದವರಂತೆ ನಾವು 40% ಕಮಿಷನ್ ಪಡೆದಿಲ್ಲ’ | ಶೋಭಾ ಕರಂದ್ಲಾಜೆ ಆರೋಪಕ್ಕೆ ಡಿಕೆಶಿ ಪ್ರತಿಕ್ರಿಯೆ Read More »

ವಿಧಾನ ಸಭಾ ಚುನಾವಣೆ| ನಾಮಪತ್ರ ವಾಪಾಸಾತಿಗೆ ಇಂದೇ ಕೊನೆದಿನ| ಬಂಡಾಯಗಾರರ ಶಮನಕ್ಕೆ ಮುಂದಾದ ಪಕ್ಷದ ನಾಯಕರು

ಸಮಗ್ರ‌ ನ್ಯೂಸ್: ರಾಜ್ಯ ವಿಧಾನಸಭೆ ಚುನಾವಣೆ ನಾಮಪತ್ರ ವಾಪಸ್ ಪಡೆಯಲು ಇಂದೇ ಕೊನೆ ದಿನವಾಗಿದೆ. 3632 ಮಂದಿ ಚುನಾವಣೆಗೆ ಸ್ಪರ್ಧಿಸಿದ್ದಾರೆ. 502 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧವಾಗಿಲ್ಲದ ಕಾರಣ ತಿರಸ್ಕರಿಸಲಾಗಿದೆ. 3130 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧವಾಗಿವೆ. ಬಿಜೆಪಿ ಎಲ್ಲಾ ಇನ್ನೂ 224 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. 75 ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ. 68 ಮಂದಿ ಲಿಂಗಾಯಿತರಿಗೆ ಬಿಜೆಪಿ ಟಿಕೆಟ್ ನೀಡಲಾಗಿದ್ದು, 134 ಪದವೀಧರರು, 37 ಸ್ನಾತಕೋತ್ತರ ಪದವೀಧರರು ಸೇರಿದ್ದಾರೆ. ಕಾಂಗ್ರೆಸ್ 223 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. 53

ವಿಧಾನ ಸಭಾ ಚುನಾವಣೆ| ನಾಮಪತ್ರ ವಾಪಾಸಾತಿಗೆ ಇಂದೇ ಕೊನೆದಿನ| ಬಂಡಾಯಗಾರರ ಶಮನಕ್ಕೆ ಮುಂದಾದ ಪಕ್ಷದ ನಾಯಕರು Read More »

ಎಪ್ರಿಲ್ 27 ರಂದು ರಾಹುಲ್ ಗಾಂಧಿ ಮಂಗಳೂರಿಗೆ

ಸಮಗ್ರ ನ್ಯೂಸ್: ಎಪ್ರಿಲ್ 27 ರಂದು ಮಂಗಳೂರಿನಲ್ಲಿ ರಾಹುಲ್ ಗಾಂಧಿ ರೋಡ್ ಶೋ ನಡೆಸಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಮಂಜುನಾಥ್ ಭಂಡಾರಿ ಸುದ್ದಿ ಗೋಷ್ಠಿಯಲ್ಲಿಂದು ತಿಳಿಸಿದ್ದಾರೆ. ಎಪ್ರಿಲ್ 27ರಂದು ಕಾಪುವಿಗೆ ಆಗಮಿಸುವ ರಾಹುಲ್ ಗಾಂಧಿ ಅಲ್ಲಿನ ಮೀನುಗಾರರ ಜೊತೆಗಿನ ಸಂವಾದದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 5 ಗಂಟೆಗೆ ಮಂಗಳೂರು ನಗರದಲ್ಲಿ ರೋಡ್ ಶೋ ನಡೆಸಲಿದ್ದಾರೆ ಎಂದು ಮಂಜುನಾಥ್ ಭಂಡಾರಿ ತಿಳಿಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎ.24ರಂದು ಮಂಗಳೂರಿಗೆ ಆಗಮಿಸಿ ಎ.25ರಂದು ಸುಳ್ಯ, ಪುತ್ತೂರು, ಬೆಳ್ತಂಗಡಿ ಕ್ಷೇತ್ರಗಳಿಗೆ

ಎಪ್ರಿಲ್ 27 ರಂದು ರಾಹುಲ್ ಗಾಂಧಿ ಮಂಗಳೂರಿಗೆ Read More »