ಚುನಾವಣಾ ಅಖಾಡದಲ್ಲಿ ಜೆಡಿಎಸ್ ನಿಂದ ದಿನಕ್ಕೊಂದು ದಾಳ| ವರುಣಾ, ಅರಸೀಕೆರೆ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಬದಲಾವಣೆ
ಸಮಗ್ರ ನ್ಯೂಸ್: ಚುನಾವಣಾ ರಾಜಕೀಯದಲ್ಲಿ ದಿನಕ್ಕೊಂದು ಬೆಳವಣಿಗೆಗಳ ನಡೆಯುತ್ತಿದ್ದು, ಎರಡು ಕ್ಷೇತ್ರಗಳ ಅಭ್ಯರ್ಥಿಗಳನ್ನು ಬದಲಿಸಿದ್ದ ಜೆಡಿಎಸ್ ನಾಯಕರು ಇದೀಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ಪರ್ಧಿಸಿರುತ್ತಿರುವ ವರುಣಾ ಕ್ಷೇತ್ರದಲ್ಲೂ ಕೊನೆ ಕ್ಷಣದಲ್ಲಿ ಅಭ್ಯರ್ಥಿಯನ್ನು ಬದಲಾವಣೆ ಮಾಡಿದ್ದಾರೆ. ಚುನಾವಣಾ ದಿನಾಂಕ ಘೋಷಣೆಗೂ ಮುನ್ನವೇ ವರುಣಾ ಕ್ಷೇತ್ರದ ಅಭ್ಯರ್ಥಿಯನ್ನು ಘೋಷಿಸಿದ ಜೆಡಿಎಸ್ ನಾಯಕರು, ಅಭಿಷೇಕ್ ಅವರಿಗೆ ಅವಕಾಶ ನೀಡಿದ್ದರು. ಆದರೆ ಸಿದ್ದರಾಮಯ್ಯನವರ ಸ್ಪರ್ಧೆ ವಿಚಾರ ಘೋಷಣೆಯಾದ ಬಳಿಕ ಅಭಿಷೇಕ್ ಪ್ರಚಾರ ಕಾರ್ಯದಿಂದ ತಟಸ್ಥರಾಗುಳಿದಿದ್ದಾರೆ ಎಂದು ಹೇಳಲಾಗಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಮಾಜಿ […]










