ಜನಾರ್ಧನ ರೆಡ್ಡಿ ಬಳಿಕ ಬಳ್ಳಾರಿಯಲ್ಲಿ ರಾಜೀನಾಮೆ ಪರ್ವ ಶುರು| ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸ್ಥಾನಕ್ಕೆ ಶೇಖರ್ ದಮ್ಮೂರು ರಿಸೈನ್
ಸಮಗ್ರ ನ್ಯೂಸ್: ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಹಾಗೂ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ, ಜನಾರ್ದನ ರೆಡ್ಡಿ ಬೆಂಬಲಿಗರಾದ ದಮ್ಮೂರು ಶೇಖರ್ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಹಲವು ವರ್ಷಗಳಿಂದ ಭಾರತೀಯ ಜನತಾ ಪಾರ್ಟಿಯಲ್ಲಿ ಸಕ್ರಿಯ ಕಾರ್ಯಕರ್ತನಾಗಿ ಹಲವು ಜವಾಬ್ದಾರಿಗಳನ್ನು ನಿಭಾಯಿಸಿದ್ದೇನೆ. ಪಕ್ಷ ಕಟ್ಟುವಲ್ಲಿ ನನ್ನ ಅಳಿಲು ಸೇವೆ ಸಲ್ಲಿಸಿದ್ದೇನೆ. ಇಷ್ಟು ವರ್ಷ ಬಿಜೆಪಿಯಲ್ಲಿ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಿದ್ದಕ್ಕೆ ಧನ್ಯವಾದ ಎಂದು ಹೇಳಿದ್ದಾರೆ. ಇತ್ತೀಚೆಗೆ ಜನಾರ್ದನ ರೆಡ್ಡಿ ಅವರು […]









