ರಾಜಕೀಯ

“ಅನಾಥ ಶವಗಳ‌ ಅಂತ್ಯಸಂಸ್ಕಾರ ಮಾಡುತ್ತಿರುವ ಅಯೂಬ್ ಗೆ ಪದ್ಮಶ್ರೀ ನೀಡಿ”| ಕೇಂದ್ರಕ್ಕೆ ಪತ್ರ‌ ಬರೆದ‌ ಸಂಸದ ಪ್ರತಾಪ್ ಸಿಂಹ

ಸಮಗ್ರ ನ್ಯೂಸ್: ಅನಾಥ ಶವಗಳ ಅಂತ್ಯಸಂಸ್ಕಾರದ ಮೂಲಕ ಸಮಾಜಕ್ಕೆ ತಮ್ಮದೇ ಆದ ರೀತಿಯಲ್ಲಿ ವಿಶಿಷ್ಟ ಸೇವೆ ಸಲ್ಲಿಸುತ್ತಿರುವ ಮೈಸೂರಿನ ಅಯೂಬ್ ಅಹ್ಮದ್‌ ಅವರಿಗೆ 2023ನೇ ಸಾಲಿನ ಪದ್ಮಶ್ರೀ ಪ್ರಶಸ್ತಿ ನೀಡುವ ಮೂಲಕ ಗೌರವಿಸಬೇಕು ಎಂದು ಸಂಸದ ಪ್ರತಾಪ ಸಿಂಹ ಹಾಗೂ ಶಾಸಕ ತನ್ವೀರ್ ಸೇಠ್‌ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ವಿನಂತಿಸಿದ್ದಾರೆ. ಮೈಸೂರಿನ ಎನ್.ಆರ್.ಮೊಹಲ್ಲಾ ಎ.ಜೆ.ಬ್ಲಾಕ್ ನಿವಾಸಿಯಾಗಿರುವ ಅಯೂಬ್, ಕಳೆದ 23 ವರ್ಷಗಳಿಂದ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಅಮೆರಿಕದ ಹಾರ್ಮೊನಿ ಇನ್​ಸ್ಟಿಟ್ಯೂಟ್ ಅಯೂಬ್ ಅವರಿಗೆ ಈಗಾಗಲೇ ಡಾಕ್ಟರೇಟ್ […]

“ಅನಾಥ ಶವಗಳ‌ ಅಂತ್ಯಸಂಸ್ಕಾರ ಮಾಡುತ್ತಿರುವ ಅಯೂಬ್ ಗೆ ಪದ್ಮಶ್ರೀ ನೀಡಿ”| ಕೇಂದ್ರಕ್ಕೆ ಪತ್ರ‌ ಬರೆದ‌ ಸಂಸದ ಪ್ರತಾಪ್ ಸಿಂಹ Read More »

ಕರಾವಳಿ ಜಿಲ್ಲೆಗಳಲ್ಲಿ ಕುಚಲಕ್ಕಿ ವಿತರಣೆಗೆ ರಾಜ್ಯಸರ್ಕಾರ ಸಮ್ಮತಿ

ಸಮಗ್ರ ನ್ಯೂಸ್: ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಜನರ ಪ್ರಮುಖ ಆಹಾರವಾಗಿರುವ ಕುಚಲಕ್ಕಿಯನ್ನು ಗುಣಮಟ್ಟದಲ್ಲಿ ಪಡಿತರದಾರರಿಗೆ ವಿತರಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮತಿಸಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ, ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ನಿರ್ಮಲ್ ಕುಮಾರ್ ಸುರಾಣಾ ಹಾಗೂ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಉಪಾಧ್ಯಕ್ಷ ಕಿರಣ್

ಕರಾವಳಿ ಜಿಲ್ಲೆಗಳಲ್ಲಿ ಕುಚಲಕ್ಕಿ ವಿತರಣೆಗೆ ರಾಜ್ಯಸರ್ಕಾರ ಸಮ್ಮತಿ Read More »

ಮತಾಂತರ ನಿಷೇಧ ವಿಧೇಯಕ ಮೇಲ್ಮನೆಯಲ್ಲಿ ಪಾಸ್| ಪ್ರತಿಹರಿದು ಕಾಂಗ್ರೆಸ್ ಆಕ್ರೋಶ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಬಲವಂತದ ಮತಾಂತರಕ್ಕೆ ಬ್ರೇಕ್ ಬೀಳಲಿದೆ. ಯಾಕೆಂದರೆ ವಿಧಾನ ಪರಿಷತ್‍ನಲ್ಲಿ ಮತಾಂತರ ನಿಷೇಧ ವಿಧೇಯಕಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ವಿಧಾನಸಭೆಯಿಂದ ಅಂಗೀಕಾರವಾದ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ 2022ನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ವಿಧಾನ ಪರಿಷತ್‌ನಲ್ಲಿ ಇಂದು ಮಂಡನೆ ಮಾಡಿದರು. ವಿಧೇಯಕ ಅಂಗೀಕಾರವಾಗಿದ್ದು ಮತ್ತೊಂದೆಡೆ ಮತಾಂತರ ನಿಷೇಧ ವಿಧೇಯಕ್ಕೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದೆ. ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ಬಿಲ್‌ನ ಪ್ರತಿಯನ್ನು ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕದಲ್ಲಿ

ಮತಾಂತರ ನಿಷೇಧ ವಿಧೇಯಕ ಮೇಲ್ಮನೆಯಲ್ಲಿ ಪಾಸ್| ಪ್ರತಿಹರಿದು ಕಾಂಗ್ರೆಸ್ ಆಕ್ರೋಶ Read More »

ಸಿಎಂ ಮಾಧ್ಯಮ ಸಂಯೋಜಕರಾಗಿ ಹಿರಿಯ ಪತ್ರಕರ್ತ ಶಂಕರ್ ಪಾಗೋಜಿ ನೇಮಕ

ಸಮಗ್ರ ನ್ಯೂಸ್: ಇತ್ತೀಚಿಗೆ ಸಿಎಂ ಬಸವರಾಜ ಬೊಮ್ಮಾಯಿಯವರ ಮಾಧ್ಯಮ ಸಂಯೋಜಕರಾಗಿದ್ದ ಗುರುಲಿಂಗಸ್ವಾಮಿ ಹೊಳಿಮಠ ಅವರು ಅಕಾಲಿಕವಾಗಿ ನಿಧನದ ಕಾರಣದಿಂದ ತೆರವಾಗಿದ್ದ ಸ್ಥಾನಕ್ಕೆ ಹಿರಿಯ ಪತ್ರಕರ್ತ ಶಂಕರ್ ಪಾಗೋಜಿ ಅವರನ್ನು ನೇಮಕ ಮಾಡಲಾಗಿದೆ. ಜೊತೆಗೆ ಸಿಎಂ ಮಾಧ್ಯಮ ಸಲಹೆಗಾರರನ್ನಾಗಿ ಮೋಹನ್ ಕೃಷ್ಣ ಅವರನ್ನು ನೇಮಕ ಮಾಡಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿಯವರ ಮಾಧ್ಯಮ ಸಲಹೆಗಾರರನ್ನಾಗಿ ಮೋಹನ್ ಕೃಷ್ಣ ಅವರನ್ನು ನೇಮಕ ಮಾಡಲಾಗಿದೆ. ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ತಕ್ಷಣದಿಂದ

ಸಿಎಂ ಮಾಧ್ಯಮ ಸಂಯೋಜಕರಾಗಿ ಹಿರಿಯ ಪತ್ರಕರ್ತ ಶಂಕರ್ ಪಾಗೋಜಿ ನೇಮಕ Read More »

ವಿಧಾನಸಭಾ ಕಲಾಪದ ನಡುವೆ ಸಮನ್ಸ್: ಡಿಕೆ ಶಿವಕುಮಾರ್ ಬೇಸರ

ಬೆಂಗಳೂರು: ಭಾರತ ಜೋಡೋ ಯಾತ್ರೆ, ವಿಧಾನಸಭಾ ಕಲಾಪದ ನಡುವೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸಮನ್ಸ್ ನೀಡಿದ್ದಾರೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿ ಬೇಸರ ವ್ಯಕ್ತಪಡಿಸಿದ್ದಾರೆ. “ಭಾರತ ಜೋಡೋ ಯಾತ್ರೆಹಾಗೂ ವಿಧಾನಸಭಾ ಅಧಿವೇಶನ ನಡೆಯುತ್ತಿರುವ ಮಧ್ಯೆಯೇ ಮತ್ತೊಮ್ಮೆ ಇಡಿ ನನಗೆ ಸಮನ್ಸ್‌ ನೀಡಿದೆ” ಎಂದಿದ್ದಾರೆ. “ನಾನು ತನಿಖೆಗೆ ಸಹಕರಿಸಲು ಸಿದ್ಧ. ಆದರೆ, ಈ

ವಿಧಾನಸಭಾ ಕಲಾಪದ ನಡುವೆ ಸಮನ್ಸ್: ಡಿಕೆ ಶಿವಕುಮಾರ್ ಬೇಸರ Read More »

ಸಚಿವ ಡಾ. ಸುಧಾಕರ್ ಗೆ ಅನಾರೋಗ್ಯ; ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರೋದಾಗಿ ತಿಳಿದು ಬಂದಿದೆ. ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಅನಾರೋಗ್ಯ ಹಿನ್ನೆಲೆಯಲ್ಲಿ ವೈದ್ಯರು ಕೆಲ ದಿನಗಳ ವಿಶ್ರಾಂತಿಗೆ ಸೂಚಿಸಿದ್ದಾರೆ. ಈ ಕಾರಣಕ್ಕಾಗಿ ಸದನದ ಕಲಾಪದಲ್ಲಿ ಭಾಗವಹಿಸಲು ಸಾಧ್ಯವಾಗದೇ ಇರುವುದಕ್ಕೆ ವಿಷಾದವಿದೆ. ಆದಷ್ಟು ಶೀಘ್ರದಲ್ಲೇ ಕರ್ತವ್ಯಕ್ಕೆ ಹಾಜರಾಗುತ್ತೇನೆ. ನಿಮ್ಮ ಹಾರೈಕೆ ಇರಲಿ ಎಂದು ಹೇಳಿದ್ದಾರೆ. ಇಂದು ವಿಧಾನಸಭೆ ಪ್ರಶ್ನೋತ್ತರ ಕಲಾಪದ ವೇಳೆಯಲ್ಲಿ ಸದಸ್ಯರ ಗೈರು ಹಾಜರಿಗೆ ಸ್ಪೀಕರ್ ವಿಶ್ವೇಶ್ವರ

ಸಚಿವ ಡಾ. ಸುಧಾಕರ್ ಗೆ ಅನಾರೋಗ್ಯ; ಆಸ್ಪತ್ರೆಗೆ ದಾಖಲು Read More »

ವಿಧಾನ ಮಂಡಲ ಅಧಿವೇಶನ ನೇರಪ್ರಸಾರ

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭೆಯ ಮಳೆಗಾಲದ ಅಧಿವೇಶನ ನಡೆಯುತ್ತಿದ್ದು ೫ನೇ ದಿನದ ಅಧಿವೇಶನ ನೇರಪ್ರಸಾರ ವೀಕ್ಷಿಸಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ; ವಿಡಿಯೋ ಕೃಪೆ: ಡಿಡಿ ಚಂದನ

ವಿಧಾನ ಮಂಡಲ ಅಧಿವೇಶನ ನೇರಪ್ರಸಾರ Read More »

ಇಂದಿನಿಂದ ರಾಜ್ಯ ವಿಧಾನಮಂಡಲ ಅಧಿವೇಶನ| ಸರ್ಕಾರದ ವಿರುದ್ದ ಮುಗಿಬೀಳಲು ಪ್ರತಿಪಕ್ಷಗಳು ಸಜ್ಜು

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಮಂಡಲದ ಅಧಿವೇಶನ ಸೋಮವಾರ ಆರಂಭಗೊಳ್ಳಲಿದ್ದು, ಹತ್ತು ದಿನಗಳ ಕಲಾಪದಲ್ಲಿ (ಸೆ.12 ರಿಂದ ಸೆ.23) ಬಿಜೆಪಿ ಸರ್ಕಾರದ ಹೆಡೆಮುರಿ ಕಟ್ಟಲು ಕಾಂಗ್ರೆಸ್‌ ಮತ್ತು ಜೆಡಿಎಸ್‌ ಹಲವು ‘ಅಸ್ತ್ರ’ಗಳನ್ನು ಸಿದ್ಧ ಮಾಡಿಕೊಂಡಿವೆ. ಗುತ್ತಿಗೆ ಕಾಮಗಾರಿಯಲ್ಲಿ ಶೇ 40 ಲಂಚದ ಆರೋಪ, ಇತ್ತೀಚಿನ ಮಳೆ ಮತ್ತು ಪ್ರವಾಹದಿಂದ ಜನರಿಗಾದ ಸಂಕಷ್ಟ, ಪಠ್ಯ ಪುಸ್ತಕ ಪರಿಷ್ಕರಣೆಯಲ್ಲಿ ಅವಾಂತರ ಸೇರಿದಂತೆ ಹಲವು ವಿಷಯಗಳನ್ನು ಪ್ರಸ್ತಾಪಿಸಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಉಭಯ ಪಕ್ಷಗಳು ಸಜ್ಜಾಗಿವೆ. ಇದಕ್ಕೆ ತಿರುಗೇಟು ನೀಡಲು ಬಿಜೆಪಿಯೂ ತಯಾರಿ

ಇಂದಿನಿಂದ ರಾಜ್ಯ ವಿಧಾನಮಂಡಲ ಅಧಿವೇಶನ| ಸರ್ಕಾರದ ವಿರುದ್ದ ಮುಗಿಬೀಳಲು ಪ್ರತಿಪಕ್ಷಗಳು ಸಜ್ಜು Read More »

ಇದು 40% ಕಮಿಷನ್ ಸಮಾವೇಶ – ರಾಜ್ಯ ಸರ್ಕಾರಕ್ಕೆ ಕುಟುಕಿದ ಕಾಂಗ್ರೆಸ್

ಸಮಗ್ರ ನ್ಯೂಸ್: ಬಿಜೆಪಿಗರು 40% ಕಮಿಷನ್‌ ಲೂಟಿಯ ಹಣದಲ್ಲಿ ʼಕಮಿಷನ್‌ ಸಮಾವೇಶʼ ನಡೆಸುತ್ತಿದ್ದಾರೆ ಎಂದು ರಾಜ್ಯ ಕಾಂಗ್ರೆಸ್‌ ಕಮಲಪಾಳಯದ ವಿರುದ್ಧ ಗುಡುಗಿದೆ. ಈ ಕುರಿತು ಸರಣಿ ಟ್ಟೀಟ್‌ ಮಾಡಿರುವ ಕೆಪಿಸಿಸಿ, ಬಿಜೆಪಿ ನಡೆಸುತ್ತಿರುವುದು ಜನಸ್ಪಂದನ ಸಮಾವೇಶವಲ್ಲ “ಕಮಿಷನ್ ಸಮಾವೇಶ” 40% ಕಮಿಷನ್ ಲೂಟಿಯ ಪಾಪದ ಹಣದಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಯಾವ ಸಾಧನೆ ಹೇಳಿಕೊಳ್ಳುವಿರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ?. ನಿಮ್ಮದೇ ಪಕ್ಷದ ಕಾರ್ಯಕರ್ತ ಮತ್ತು ಗುತ್ತಿಗೆದಾರ ಸಂತೋಷ್ ಪಾಟೀಲ್‌ರನ್ನು ಕಮಿಷನ್ ಕಿರುಕುಳದಲ್ಲಿ ಕೊಂದಿದ್ದನ್ನು ಹೇಳಿಕೊಳ್ಳುವಿರಾ? ಎಂದು ಪ್ರಶ್ನಿಸಿದೆ.

ಇದು 40% ಕಮಿಷನ್ ಸಮಾವೇಶ – ರಾಜ್ಯ ಸರ್ಕಾರಕ್ಕೆ ಕುಟುಕಿದ ಕಾಂಗ್ರೆಸ್ Read More »

ಹತ್ಯೆಯಾದ ಪ್ರವೀಣ್ ನೆಟ್ಟಾರು ಕುಟುಂಬದ ಸದಸ್ಯರೊಬ್ಬರಿಗೆ ಸಿಎಂ ಕಚೇರಿಯಲ್ಲಿ ಉದ್ಯೋಗ – ಸಿ ಎಂ ಬೊಮ್ಮಾಯಿ ಘೋಷಣೆ

ಸಮಗ್ರ ನ್ಯೂಸ್: ಬಿಜೆಪಿ ಜನಸ್ಪಂದನ ಸಮಾವೇಶದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಪ್ರವೀಣ್​ ನೆಟ್ಟಾರು ಕುಟುಂಬಕ್ಕೆ ಸಿಎಂ ಕಚೇರಿಯಲ್ಲಿ ಕೆಲಸ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ದ.ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಹತ್ಯೆಗೀಡಾಗಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಕೆಲಸ ನೀಡುವುದಾಗಿ ತಿಳಿಸಿದ್ದಾರೆ ರಾಜ್ಯ ಬಿಜೆಪಿ ಸರ್ಕಾರದ ಮೂರು ವರ್ಷಗಳ ಸಾಧನೆಯನ್ನು ಮುಂದಿಟ್ಟುಕೊಂಡು ಬಿಜೆಪಿ ಶಕ್ತಿ ಪ್ರದಶರ್ನಕ್ಕೆ ಮುಂದಾಗಿದೆ.ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಅದ್ದೂರಿ ಬಿಜೆಪಿ ಜನಸ್ಪಂದನ ಸಮಾವೇಶ ಆಯೋಜನೆ ಮಾಡಿದೆ. ಈ

ಹತ್ಯೆಯಾದ ಪ್ರವೀಣ್ ನೆಟ್ಟಾರು ಕುಟುಂಬದ ಸದಸ್ಯರೊಬ್ಬರಿಗೆ ಸಿಎಂ ಕಚೇರಿಯಲ್ಲಿ ಉದ್ಯೋಗ – ಸಿ ಎಂ ಬೊಮ್ಮಾಯಿ ಘೋಷಣೆ Read More »