ರಾಜಕೀಯ

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ| ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ರಿಲೀಫ್

ಸಮಗ್ರ ನ್ಯೂಸ್: ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆಎಸ್ ಈಶ್ವರಪ್ಪಗೆ ರಿಲೀಫ್ ಸಿಕ್ಕಿದೆ. ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಟೌನ್ ಪೊಲೀಸರಿಂದ ಬಿ ರಿಪೋರ್ಟ್ ಸಲ್ಲಿಕೆಯಾಗಿದೆ . ಸಾಕ್ಷಾಧಾರಗಳ ಕೊರತೆಯಿಂದಾಗಿ ಉಡುಪಿ ಟೌನ್ ಪೊಲೀಸರು ಬಿ . ರಿಪೋರ್ಟ್ ಸಲ್ಲಿಕೆ ಹಾಕಿದ್ದು , ವರದಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದಾರೆ . ಆದರೆ ಕೋರ್ಟ್ ಇನ್ನೂ ಉಡುಪಿ ಪೊಲೀಸರ ಬಿ .ರಿಪೋರ್ಟ್ ವರದಿಯನ್ನು ಅಂಗೀಕರಿಸಿಲ್ಲ […]

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ| ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ರಿಲೀಫ್ Read More »

ಇಂದು ರಾಜ್ಯಸಭಾ ಸದಸ್ಯರಾಗಿ ಪಿ.ಟಿ.ಉಷಾ ಪ್ರಮಾಣವಚನ ಸ್ವೀಕಾರ

ಬೆಂಗಳೂರು : ರಾಜ್ಯಸಭಾ ಸದಸ್ಯರಾಗಿ ಕೇಂದ್ರ ಸರ್ಕಾರದಿಂದ ನಾಮನಿರ್ದೇಶನಗೊಂಡಿರುವ ಮಾಜಿ ಅಥ್ಲೀಟ್ ಪಿ.ಟಿ. ಉಷಾ ಅವರು ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ಕೇಂದ್ರ ಸರ್ಕಾರ, ಪಿ.ಟಿ. ಉಷಾ ಸೇರಿದಂತೆ ಇಳೆಯರಾಜ, ವಿಜಯೇಂದ್ರ ಪ್ರಸಾದ್ ಹಾಗೂ ವೀರೇಂದ್ರ ಹೆಗ್ಗಡೆಯವರನ್ನು ರಾಜ್ಯಸಭಾ ಸದಸ್ಯರನ್ನಾಗಿ ನಾಮ ನಿರ್ದೇಶನ ಮಾಡಿತ್ತು. ಪಯ್ಯೊಳಿ ಎಕ್ಸ್ ಪ್ರೆಸ್’ ಎಂದೇ ಖ್ಯಾತರಾದ ಪಿ.ಟಿ. ಉಷಾ ಅವರನ್ನು ಕ್ರೀಡಾಕೂಟದಲ್ಲಿ ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಲಾಗಿದ್ದು, ಇವರ ಅವಧಿಯಲ್ಲಿ ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಿದ್ದಾರೆ

ಇಂದು ರಾಜ್ಯಸಭಾ ಸದಸ್ಯರಾಗಿ ಪಿ.ಟಿ.ಉಷಾ ಪ್ರಮಾಣವಚನ ಸ್ವೀಕಾರ Read More »

ಬೆಳಗಾವಿ: ಕಾಂಗ್ರೆಸ್ ನಾಯಕಿ ನವ್ಯಶ್ರೀ ಮೇಲೆ ಕೇಸ್ ದಾಖಲು| ಹೊಸತೊಂದು ಆಡಿಯೋ ರಿಲೀಸ್ ಮಾಡಿದ ನವ್ಯಶ್ರೀ

ಸಮಗ್ರ ನ್ಯೂಸ್: ಕಾಂಗ್ರೆಸ್ ಯುವ ಕಾರ್ಯಕರ್ತೆ ನವ್ಯಶ್ರೀ ವಿರುದ್ಧ ಕೇಸ್ ದಾಖಲಾಗಿರುವ ವಿಚಾರ ಸಂಬಂಧ ಇದೀಗ ನವ್ಯಶ್ರೀ ಆಡಿಯೋ ರಿಲೀಸ್ ಮಾಡಿದ್ದಾರೆ. ರಾಜಕುಮಾರ, ನವ್ಯಶ್ರೀ ಮತ್ತು ನವ್ಯಶ್ರೀ ಆಪ್ತ ತಿಲಕ್ ಜೊತೆಯಾಗಿ ಮಾತನಾಡಿರುವ ಆಡಿಯೋವನ್ನು ಬಿಡುಗಡೆ ಮಾಡಿದ್ದಾರೆ. ರಿಲೀಸ್ ಮಾಡಿರುವ ಆಡಿಯೊ ಸಂಭಾಷಣೆಯಲ್ಲಿ, ನಾನು ಒಪ್ಪಿಕೊಂಡಿದ್ದೇನೆ, ಅವಳು ಒಪ್ಪಿಕೊಂಡಿದ್ದಾಳೆ ನನ್ನ ಹೆಂಡತಿಯನ್ನೂ ಒಪ್ಪಿಸುತ್ತೇನೆ. ನನ್ನ ಹೆಂಡತಿ ಮಕ್ಕಳ ಜೊತೆಗೆ ಮನೆಯಲ್ಲಿ ಇಟ್ಟುಕೊಳ್ಳುತ್ತೇನೆ. ಯಾವುದಕ್ಕೂ ತಲೆ ಕೆಡಿಸಿಕೊಳ್ಳಬೇಡಿ. ನನ್ನ ಮಗಳಿಗೂ ಹೇಳಿದ್ದೇನೆ ಏನೂ ತೊಂದರೆ ಇಲ್ಲಾ ಎಂದು ರಾಜಕುಮಾರ

ಬೆಳಗಾವಿ: ಕಾಂಗ್ರೆಸ್ ನಾಯಕಿ ನವ್ಯಶ್ರೀ ಮೇಲೆ ಕೇಸ್ ದಾಖಲು| ಹೊಸತೊಂದು ಆಡಿಯೋ ರಿಲೀಸ್ ಮಾಡಿದ ನವ್ಯಶ್ರೀ Read More »

ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ರಾಜೇಶ್ ಕುಂತೂರು ನೇಮಕ

ಸಮಗ್ರ ನ್ಯೂಸ್: ರಾಷ್ಟ್ರೀಯ ಸ್ವಯಂಸೇವಕ ಸಂಘದ ತುಮಕೂರು ವಿಭಾಗ ಪ್ರಚಾರಕ ರಾಜೇಶ್ ಕುಂತೂರು ಅವರು ಬಿಜೆಪಿ ಕರ್ನಾಟಕ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ನಿಯುಕ್ತಿಗೊಂಡಿದ್ದಾರೆ. 2010 ರಿಂದ ಸಂಘದ ಪೂರ್ಣಾವಧಿ ಪ್ರಚಾರಕರಾಗಿ ಸೇವೆ ಸಲ್ಲಿಸುತ್ತಿರುವ ಇವರು ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಕಡಬದವರು. ವಿದ್ಯಾರ್ಥಿ ಜೀವನದಲ್ಲೇ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರಾಗಿ ಪುತ್ತೂರು ಗ್ರಾಮಾಂತರ ತಾಲೂಕಿನ ಅರಿಯಡ್ಕ ಮಂಡಲದ ಮಂಡಲ ಕಾರ್ಯವಾಹರಾಗಿ ಜವಾಬ್ದಾರಿ ನಿರ್ವಹಿಸಿದ್ದರು. ಪದವಿ ವಿದ್ಯಾಭ್ಯಾಸ ಮುಗಿಸಿದ ನಂತರ ಸಂಘದ ಪ್ರಚಾರಕರಾಗಿ ತನ್ನ ಪೂರ್ಣ ಜೇವನವನ್ನು

ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ರಾಜೇಶ್ ಕುಂತೂರು ನೇಮಕ Read More »

ಕರ್ನಾಟಕದಲ್ಲಿ ಮುಂದಿನ ಚುನಾವಣೆಯಲ್ಲೂ ಬಿಜೆಪಿಗೇ ಬಹುಮತ| ಹೊರಬಿದ್ದ ಸಮೀಕ್ಷೆಯಿಂದ ಕೇಸರಿ ಪಡೆ ಫುಲ್ ಖುಷ್

ಸಮಗ್ರ ನ್ಯೂಸ್: 2023ರ ವಿಧಾನಸಭಾ ಚುನಾವಣೆಯಲ್ಲಿ ಇತರ ಎಲ್ಲಾ ಪಕ್ಷಗಳನ್ನು ಹಿಂದಿಕ್ಕಿ ಆಡಳಿತಾರೂಢ ಬಿಜೆಪಿ ಹೆಚ್ಚು ಸ್ಥಾನ ಗಳಿಸುವ ಮೂಲಕ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮುವ ಸಾಧ್ಯತೆ ಇದೆ. ಭಾರೀ ಜಿದ್ದಾಜಿದ್ದಿನ 2023ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯು ಹೆಚ್ಚುಕಡಿಮೆ ಕಳೆದ ಬಾರಿಯಷ್ಟೇ ಸ್ಥಾನ ಗಳಿಸುವ ಸಾಧ್ಯತೆಯಿದೆ ಎಂದು ಆಂತರಿಕ ಸಮೀಕ್ಷೆಯಿಂದ ಗೊತ್ತಾಗಿದೆ. 2018ರಲ್ಲಿ 104 ಸ್ಥಾನಗಳನ್ನು ಗೆದ್ದಿದ್ದ ಬಿಜೆಪಿ 2023ರಲ್ಲೂ ಹೆಚ್ಚು ಕಡಿಮೆ ಅಷ್ಟೇ ಸ್ಥಾನವನ್ನು ಪಡೆಯಬಹುದೆಂದು ದೆಹಲಿ ಮೂಲದ ಖಾಸಗಿ ಸಂಸ್ಥೆ ನಡೆಸಿದ ಆಂತರಿಕ ಸಮೀಕ್ಷೆಯಲ್ಲಿ

ಕರ್ನಾಟಕದಲ್ಲಿ ಮುಂದಿನ ಚುನಾವಣೆಯಲ್ಲೂ ಬಿಜೆಪಿಗೇ ಬಹುಮತ| ಹೊರಬಿದ್ದ ಸಮೀಕ್ಷೆಯಿಂದ ಕೇಸರಿ ಪಡೆ ಫುಲ್ ಖುಷ್ Read More »

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲ್ಲ – ಸಿದ್ದರಾಮಯ್ಯ| ಅಂಗಳ ಅಳೆಯಲಾಗದವ ಆಕಾಶ ಅಳೆಯಲು ಹೊರಟಿದ್ದಾನೆ – ಬಿಜೆಪಿ

ಸಮಗ್ರ ನ್ಯೂಸ್: ಕಳೆದ ಬಾರಿಯ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಜನ ನನ್ನನ್ನು ಸೋಲಿಸಿದ್ದು, ಮತ್ತೆ ನಾನು ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಿಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯ ಈ ಮಾತಿಗೆ ಬಿಜೆಪಿ ವ್ಯಂಗ್ಯವಾಡಿದ್ದು, ಸರಣಿ ಟ್ವೀಟ್ ಮೂಲಕ ಕಾಲೆಳೆದಿದೆ. ಸ್ಪರ್ಧಿಸಿ ಗೆಲ್ಲಲು ಸೂಕ್ತ ಕ್ಷೇತ್ರವಿಲ್ಲದ ವ್ಯಕ್ತಿಯೊಬ್ಬರು ಮತ್ತೆ ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿದ್ದಾರೆ. ಚಾಮುಂಡೇಶ್ವರಿಯಲ್ಲಿ ನಿಲ್ಲಲ್ಲ, ಬಾದಾಮಿಯಲ್ಲಿ ಗೆಲ್ಲಲ್ಲ, ಚಾಮರಾಜಪೇಟೆ ದಕ್ಕಲ್ಲ! ಅಂಗಳ ಅಳೆಯಲು ಸಾಧ್ಯವಿಲ್ಲದ ವ್ಯಕ್ತಿಯಿಂದ ಆಕಾಶ ಅಳೆಸಲು ಹೊರಟಿರುವುದು ಹಾಸ್ಯಾಸ್ಪದವಲ್ಲವೇ ಎಂದಿದೆ.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲ್ಲ – ಸಿದ್ದರಾಮಯ್ಯ| ಅಂಗಳ ಅಳೆಯಲಾಗದವ ಆಕಾಶ ಅಳೆಯಲು ಹೊರಟಿದ್ದಾನೆ – ಬಿಜೆಪಿ Read More »

ಸರಕಾರಿ ಸವಲತ್ತುಗಳಲ್ಲಿ ತಾರತಮ್ಯ ನಡೆಸುತ್ತಿರುವ ಸಚಿವ ಅಂಗಾರರ ನಡೆ ಖಂಡನಾರ್ಹ – ಎಸ್‌ಡಿಪಿಐ

ಸಮಗ್ರ ನ್ಯೂಸ್: ಸರ್ಕಾರಿ ಸವಲತ್ತುಗಳನ್ನು ನೀಡುವುದರಲ್ಲಿ ಸಚಿವ ಅಂಗಾರ ರವರು ತಾರತಮ್ಯ ನಡೆಸಿರುವ ಆಡಿಯೋ ವೊಂದು ವೈರಲ್ ಆಗಿದ್ದು,ಮೇಲ್ನೋಟಕ್ಕೆ ಶಾಸಕರು ತಾರತಮ್ಯ ನಡೆಸುತ್ತಿರುವುದು ಸ್ಪಷ್ಟವಾಗಿ ತಿಳಿಯುತ್ತದೆ, ಸಚಿವರ ಈ ತಾರತಮ್ಯ ನಡೆಯನ್ನು ಎಸ್‌ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ತೀವ್ರವಾಗಿ ಖಂಡಿಸಿದೆ. ದಲಿತ ಅಂಗವಿಕಲ ರಾಮಚಂದ್ರ ನಾಯಕ್ ಎಂಬವರು ಕೊಳವೆ ಬಾವಿಗಾಗಿ ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಿ ಅದರ ಶಿಫಾರಸ್ಸಿಗಾಗಿ ಶಾಸಕ ಹಾಗೂ ಸಚಿವ ಅಂಗಾರರವರ ಸಹಿಗಾಗಿ ದಲಿತ ಸಂಘಟನೆಯ ಮುಖಂಡರೋರ್ವರ ಮೂಲಕ ಬಿಜೆಪಿ ಕಛೇರಿಯ

ಸರಕಾರಿ ಸವಲತ್ತುಗಳಲ್ಲಿ ತಾರತಮ್ಯ ನಡೆಸುತ್ತಿರುವ ಸಚಿವ ಅಂಗಾರರ ನಡೆ ಖಂಡನಾರ್ಹ – ಎಸ್‌ಡಿಪಿಐ Read More »

ಸಚಿವ ಅಂಗಾರರದ್ದು ಪ್ರಜಾಪ್ರಭುತ್ವದ ಕಗ್ಗೊಲೆ; ಅನ್ಯಾಯವಾದವರಿಗೆ ನ್ಯಾಯ ಸಿಗಲೇಬೇಕು – ಬ್ಲಾಕ್ ಕಾಂಗ್ರೆಸ್

ಸಮಗ್ರ ನ್ಯೂಸ್: ಕಳೆದ ಮೂವತ್ತು ವರ್ಷಗಳಿಂದ ಶಾಸಕರಾಗಿದ್ದು ನನಗೆ ಯಾರೂ ಆಡಳಿತ ಹೇಳಿಕೊಡಬೇಕಾಗಿಲ್ಲ ಎಂದು ಹೇಳುತ್ತಿರುವ ಸಚಿವ ಎಸ್.ಅಂಗಾರರು ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದ್ದಾರೆ. ಕಾರ್ಯಕರ್ತರಲ್ಲದವರಿಗೆ ಯೋಜನೆಯ ಲಾಭಕ್ಕೆ ಕೊಕ್ಕೆ ಹಾಕಿದ್ದು ಇದು ಅನ್ಯಾಯ ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ ಜಯರಾಮ ಹೇಳಿದ್ದಾರೆ. ಬಿಜೆಪಿ ಸುಳ್ಯ ಕಚೇರಿ ಕಾರ್ಯದರ್ಶಿ ಚಂದ್ರಶೇಖರ್ ಮಾತನಾಡಿರುವ ಆಡಿಯೋ ಕುರಿತಂತೆ ಪ್ರತಿಕ್ರಿಯಿಸಿದ ಅವರು ‘ಚುನಾಯಿತ ಜನಪ್ರತಿನಿಧಿಯಾಗಿ ಸಚಿವ ಅಂಗಾರರು ರಾಜ್ಯದ ಎಲ್ಲಾ ಜನರಿಗೆ ಸಮಾನರಾಗಿರಬೇಕು. ಪಕ್ಷಕ್ಕೆ ಸಂಬಂಧಪಟ್ಟವರಿಗೆ ಮಾತ್ರ ಯೋಜನೆಗಳ ಲಾಭಕ್ಕೆ

ಸಚಿವ ಅಂಗಾರರದ್ದು ಪ್ರಜಾಪ್ರಭುತ್ವದ ಕಗ್ಗೊಲೆ; ಅನ್ಯಾಯವಾದವರಿಗೆ ನ್ಯಾಯ ಸಿಗಲೇಬೇಕು – ಬ್ಲಾಕ್ ಕಾಂಗ್ರೆಸ್ Read More »

ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ

ಸಮಗ್ರ ನ್ಯೂಸ್: ಸಂಸತ್ತಿನ ಮುಂಗಾರು ಅಧಿವೇಶನ ಇಂದಿನಿಂದ ಆರಂಭವಾಗುತ್ತಿದ್ದು, ಮೊದಲ ದಿನ ರಾಷ್ಟ್ರಪತಿ ಆಯ್ಕೆಗೆ ಚುನಾವಣೆ ನಡೆಯಲಿದೆ. ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಹಾಗೂ ಪ್ರತಿಪಕ್ಷದ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ ಅವರು ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಇಂದು ಮತದಾನದ ನಂತರ, ಇದೇ ೨೧ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ಹಾಲಿ ಇರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧಿಕಾರವಧಿ ಇದೇ ೨೪ರಂದು ಕೊನೆಗೊಳ್ಳುತ್ತಿದೆ. ಈ ನಡುವೆ ಉಪರಾಷ್ಟ್ರಪತಿ ಸ್ಥಾನಕ್ಕೆ ಕೂಡ ಮುಂದಿನ ತಿಂಗಳು ಆಗಸ್ಟ್ ೬ರಂದು

ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ Read More »

ಸಚಿವ ಅಂಗಾರರು ಬಿಜೆಪಿಗೆ ಓಟು ನೀಡಿದವರಿಗಷ್ಟೇ ಶಿಫಾರಸು ಮಾಡ್ತಾರಂತೆ!?| ಸರ್ಕಾರಿ ಯೋಜನೆ ಪಡೆದುಕೊಳ್ಳಲು ಆತ ಬಿಜೆಪಿ ಕಾರ್ಯಕರ್ತನಾಗಿರಬೇಕು!!

ಸಮಗ್ರ ನ್ಯೂಸ್: ಕೆಲವೊಂದು ಸರ್ಕಾರಿ ಅನುದಾನಗಳನ್ನು ಪಡೆದುಕೊಳ್ಳಲು ಸ್ಥಳೀಯ ಶಾಸಕರ ಶಿಫಾರಸ್ಸು ಅಗತ್ಯ ಬೇಕಾಗಿರುತ್ತದೆ. ಹಾಗಾಗಿ ಬಡಜನರು ಯೋಜನೆಗಳ ಅನುದಾನಕ್ಕಾಗಿ ಕ್ಷೇತ್ರದ ಶಾಸಕರ ಕಚೇರಿ ಬಾಗಿಲು ತಟ್ಟುವುದು ಸಾಮಾನ್ಯ. ಆದರೆ ಸಂವಿಧಾನಾತ್ಮಕವಾಗಿ ಆಯ್ಕೆಯಾದ ಶಾಸಕರು ತಮ್ಮ ಪಕ್ಷದ ಕಾರ್ಯಕರ್ತರಿಗಷ್ಟೇ ಶಿಫಾರಸ್ಸು ಮಾಡ್ತಾರೆ ಅಂದ್ರೆ ನಂಬ್ತೀರಾ? ನೀವು ನಂಬಲೇಬೇಕು. ನಮ್ಮ ಸುಳ್ಯ ಶಾಸಕರು ಹಾಗೂ ಪ್ರಸ್ತುತ ಬಂದರು ಮತ್ತು ಮೀನುಗಾರಿಕಾ ಸಚಿವರಾಗಿರುವ ಎಸ್.ಅಂಗಾರರು ಮಾತ್ರ ಬಿಜೆಪಿ ಕಾರ್ಯಕರ್ತ ಅಥವಾ ಆ ಪಕ್ಷಕ್ಕೆ ಓಟು ಹಾಕಿದವರಿಗಷ್ಟೇ ಯಾವುದೇ ಅನುದಾನಕ್ಕೆ ಶಿಫಾರಸ್ಸು

ಸಚಿವ ಅಂಗಾರರು ಬಿಜೆಪಿಗೆ ಓಟು ನೀಡಿದವರಿಗಷ್ಟೇ ಶಿಫಾರಸು ಮಾಡ್ತಾರಂತೆ!?| ಸರ್ಕಾರಿ ಯೋಜನೆ ಪಡೆದುಕೊಳ್ಳಲು ಆತ ಬಿಜೆಪಿ ಕಾರ್ಯಕರ್ತನಾಗಿರಬೇಕು!! Read More »