ಸಂಸ್ಕೃತಿ

ಕೊಲ್ಲೂರಿಗೆ ಹೆಣ್ಣಾನೆ ಇದ್ರೆ ದಾನ ಮಾಡಿ| ಕೇರಳಕ್ಕೆ ಪತ್ರ ಬರೆದ ಸಿಎಂ ಡಿಕೆಶಿ

ಸಮಗ್ರ ನ್ಯೂಸ್: ಐತಿಹಾಸಿಕ ಮತ್ತು ಧಾರ್ಮಿಕ ಹಿನ್ನೆಲೆಯುಳ್ಳ ಕರ್ನಾಟಕದ ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಧಾರ್ಮಿಕ ವಿಧಿವಿಧಾನಗಳಿಗಾಗಿ ಹೆಣ್ಣು ಸಾಕಾನೆಯೊಂದನ್ನು ದಾನವಾಗಿ ನೀಡುವಂತೆ ಕರ್ನಾಟಕ ಸರ್ಕಾರವು ಕೇರಳ ಸರ್ಕಾರಕ್ಕೆ ಅಧಿಕೃತ ವಿನಂತಿ ಮಾಡಿದೆ. ನೆರೆರಾಜ್ಯಗಳಿಗೆ ಸಾಕಾನೆಗಳನ್ನು ದಾನ ಮಾಡುವ ಅಥವಾ ವರ್ಗಾವಣೆ ಮಾಡುವಂತೆ ಕೇರಳ ಅರಣ್ಯ ಇಲಾಖೆಯ ಮೇಲೆ ಒತ್ತಡ ಹೆಚ್ಚುತ್ತಿರುವ ಬೆನ್ನಲ್ಲೇ ಈ ಮಹತ್ವದ ಬೆಳವಣಿಗೆ ನಡೆದಿದೆ. ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇರಳದ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರಿಗೆ ಈ […]

ಕೊಲ್ಲೂರಿಗೆ ಹೆಣ್ಣಾನೆ ಇದ್ರೆ ದಾನ ಮಾಡಿ| ಕೇರಳಕ್ಕೆ ಪತ್ರ ಬರೆದ ಸಿಎಂ ಡಿಕೆಶಿ Read More »

ತಿರುಪತಿಯ ಮೊದಲ ಆರತಿ‌ ಕರ್ನಾಟಕದವರಿಗೂ ಲಭ್ಯ – ಸಿಎಂ

ಸಮಗ್ರ ನ್ಯೂಸ್: ವಿಶ್ವಪ್ರಸಿದ್ಧ ತಿರುಮಲ ವೆಂಕಟೇಶ್ವರ ದೇವಾಲಯದಲ್ಲಿ ಪ್ರತಿದಿನ ನಡೆಯುವ ಅತ್ಯಂತ ಪವಿತ್ರವಾದ ಮೊದಲ ಆರತಿಯನ್ನು ಪಡೆದುಕೊಳ್ಳಲು ಕರ್ನಾಟಕದ ಜನಪ್ರತಿನಿಧಿಗಳು ಹಾಗೂ ಅಧಿಕಾರಿ ವರ್ಗಕ್ಕೆ ಮುಕ್ತ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದಿಂದ ಶೀಘ್ರದಲ್ಲೇ ಅಧಿಕೃತ ಶಿಷ್ಟಾಚಾರದ ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಕಟಿಸಿದ್ದಾರೆ. ಬೆಂಗಳೂರಿನ ಬನಶಂಕರಿ 6ನೇ ಹಂತದ ಲಿಂಗಧೀರನಹಳ್ಳಿಯಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಶ್ರೀಷಣ್ಮುಖ ಸುಬ್ರಮಣ್ಯ ದೇವಸ್ಥಾನದ ಶೀಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು, ಈ ಮಹತ್ವದ ನಿರ್ಧಾರವನ್ನು ಸಾರ್ವಜನಿಕವಾಗಿ ಹಂಚಿಕೊಂಡರು. ತಿರುಪತಿ ದೇವಸ್ಥಾನದ ಇತಿಹಾಸ

ತಿರುಪತಿಯ ಮೊದಲ ಆರತಿ‌ ಕರ್ನಾಟಕದವರಿಗೂ ಲಭ್ಯ – ಸಿಎಂ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಜುಲೈ 12ರಿಂದ 18, 2026ರ ವರೆಗೆ ಎಲ್ಲಾ ರಾಶಿಗಳ ಆರೋಗ್ಯ, ಆರ್ಥಿಕತೆ, ಪ್ರವಾಸ, ವಿದ್ಯಾಭ್ಯಾಸ, ಸಹವಾಸ ಮತ್ತು ಖರ್ಚು ವೆಚ್ಚಗಳನ್ನು ತಿಳಿದರೆ ಇಡುವ ಹೆಜ್ಜೆ ದೃಢವಾಗಿರಲಿದೆ. ಧೈರ್ಯದಿಂದ ಮುಂದಡಿ ಇಡಲೂ ಸಾಧ್ಯ. ಈ ವಾರದಲ್ಲಿ ಯಾರಿಗೆ ಲಾಭ? ಯಾವ‌ ರಾಶಿಯವರಿಗೆ ಶುಭ? ತಿಳಿಯೋಣ… ಮೇಷ:ಈ ವಾರದಲ್ಲಿ ನಿಮ್ಮ ಕಾರ್ಯಕ್ಷೇತ್ರದಲ್ಲಿ ಮಹತ್ತರ ಬದಲಾವಣೆಗಳು ಕಂಡುಬರಲಿವೆ. ರಾಶ್ಯಾಧಿಪತಿಯ ಬಲವು ಚೆನ್ನಾಗಿದ್ದು, ಹಳೆಯ ಬಾಕಿ ವಸೂಲಾಗಲಿದೆ. ಆದರೆ, ಆತುರದ ನಿರ್ಧಾರಗಳು ಉದ್ಯೋಗದಲ್ಲಿ ಸಣ್ಣಪುಟ್ಟ ಗೊಂದಲಗಳಿಗೆ ಕಾರಣವಾಗಬಹುದು. ವ್ಯಾಪಾರಸ್ಥರಿಗೆ ಮಧ್ಯಮ

ದ್ವಾದಶ ರಾಶಿಗಳ ವಾರಭವಿಷ್ಯ Read More »

ನಾಡಹಬ್ಬ ದಸರಾಗೆ ಮುಹೂರ್ತ ಫಿಕ್ಸ್| ಅ.11ರಂದು ಉದ್ಘಾಟನೆ

ಸಮಗ್ರ ನ್ಯೂಸ್: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026 ಉದ್ಘಾಟನೆಗೆ ಮುಹೂರ್ತ ನಿಗದಿಯಾಗಿದೆ. ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ನಡೆಯುತ್ತಿರುವ ಮೊದಲ ದಸರಾ ಮಹೋತ್ಸವ ಇದಾಗಿದ್ದು, ನಾಡ ಹಬ್ಬ ದಸರಾ ಮಹೋತ್ಸವಕ್ಕೆ ರಾಜ್ಯ ಸರ್ಕಾರ ಸಕಲ ರೀತಿಯಲ್ಲಿ ಸಿದ್ಧತೆ ಮಾಡಿಕೊಳ್ಳುತ್ತಿದೆ. ವಿಧಾನಸೌಧದ ಸಮ್ಮೇಳನ ಸಭಾಗಂಣದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆದ ಮೈಸೂರು ದಸರಾ ಕುರಿತ ಸಭೆಯಲ್ಲಿ ಮೈಸೂರು ದಸರಾ ಮಹೋತ್ಸವ ಹಾಗೂ ಜಂಬೂಸವಾರಿಗೆ ದಿನಾಂಕ ನಿಗದಿಪಡಿಸಲಾಯಿತು. ಆಗಸ್ಟ್ 26ರಂದು ಮೈಸೂರು ಅರಮನೆ ಪ್ರವೇಶ ದ್ವಾರದಲ್ಲಿ ಗಜಪಡೆಗೆ ಪೂಜೆ

ನಾಡಹಬ್ಬ ದಸರಾಗೆ ಮುಹೂರ್ತ ಫಿಕ್ಸ್| ಅ.11ರಂದು ಉದ್ಘಾಟನೆ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಜುಲೈ 5 ರಿಂದ ಜುಲೈ 11, 2026 ರವರೆಗೆ ಸೂರ್ಯ-ಬುಧ ಮಿಥುನದಲ್ಲಿ, ಚಂದ್ರ-ಮಂಗಳ ವೃಷಭದಲ್ಲಿ, ಶುಕ್ರ-ಕೇತು ಸಿಂಹದಲ್ಲಿ, ಗುರು ಕರ್ಕಾಟಕದಲ್ಲಿ, ಶನಿ ಮೀನದಲ್ಲಿ ಮತ್ತು ರಾಹು ಕುಂಭ ರಾಶಿಯಲ್ಲಿದ್ದಾರೆ. ಕಾಲಕಾಲಕ್ಕೆ ಬದಲಾಣೆ ಬೇಕಿದ್ದು, ಸೂಕ್ತ ರೀತಿಯಲ್ಲಿ ವರ್ತಿಸಿದರೆ ಶುಭವಾಗಲಿದೆ. ​ಮೇಷ ರಾಶಿ:ನಿಮ್ಮ ರಾಶ್ಯಾಧಿಪತಿ ಮಂಗಳ ಚಂದ್ರನೊಂದಿಗೆ ದ್ವಿತೀಯದಲ್ಲಿದ್ದಾನೆ. ಆರ್ಥಿಕವಾಗಿ ಧನಲಾಭದ ಯೋಗವಿದೆ. ಆದರೆ ಮಾತಿನ ಮೇಲೆ ನಿಯಂತ್ರಣವಿರಲಿ. ಕುಟುಂಬದಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಬರಬಹುದು. ಉದ್ಯೋಗದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಮನ್ನಣೆ ಸಿಗಲಿದೆ. ​ವೃಷಭ ರಾಶಿ:ನಿಮ್ಮದೇ

ದ್ವಾದಶ ರಾಶಿಗಳ ವಾರಭವಿಷ್ಯ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಜೂನ್ 29 ರಿಂದ ಜುಲೈ 5ರ ವರೆಗಿನ ವಾರದಲ್ಲಿ ಗ್ರಹಗತಿಗಳ ಬದಲಾವಣೆಯೊಂದಿಗೆ ಎಲ್ಲಾ 12 ರಾಶಿಗಳ ಜೀವನದಲ್ಲಿ ಮಹತ್ವದ ಏರಿಳಿತಗಳನ್ನು ತರಲಿದೆ. ಈ ವಾರ ಯಾರಿಗೆ ಅದೃಷ್ಟ ಒಲಿಯಲಿದೆ? ಯಾರು ಜಾಗರೂಕರಾಗಿರಬೇಕು? ಎನ್ನುವ ಬಗ್ಗೆ ಮಾಹಿತಿ ಇಲ್ಲಿದೆ. ಮೇಷ ರಾಶಿ:ವಾರದ ಆರಂಭವು ಸಂತೋಷ ಮತ್ತು ಸಕಾರಾತ್ಮಕತೆಯಿಂದ ಕೂಡಿರಲಿದೆ. ಒಡಹುಟ್ಟಿದವರು ಮತ್ತು ಸ್ನೇಹಿತರೊಂದಿಗಿನ ಭಿನ್ನಾಭಿಪ್ರಾಯಗಳು ಬಗೆಹರಿಯಲಿವೆ. ಉದ್ಯೋಗಿಗಳಿಗೆ ಕೆಲಸದ ಸ್ಥಳದಲ್ಲಿ ಸುಧಾರಣೆ ಕಂಡುಬರಲಿದ್ದು, ಹಿರಿಯ ಅಧಿಕಾರಿಗಳ ಬೆಂಬಲ ಸಿಗಲಿದೆ. ಈ ವಾರದಲ್ಲಿ ಇತರರ ಅಭಿಪ್ರಾಯಗಳ ಮೇಲೆ

ದ್ವಾದಶ ರಾಶಿಗಳ ವಾರಭವಿಷ್ಯ Read More »

ಇಂದು ಬಣ್ಣಗಳ ಹಬ್ಬ ಹೋಳಿ| ಬದುಕನ್ನು ರಂಗಾಗಿಸುವ ಈ ಹಬ್ಬದ ಮಹತ್ವ ಗೊತ್ತಾ?

ಸಮಗ್ರ ನ್ಯೂಸ್: ವಿಶ್ವದಲ್ಲಿ ಯುದ್ಧದ ಕಾರ್ಮೋಡ ಇದ್ದರೆ ನಮ್ಮ ಭಾರತ ದೇಶದಾದ್ಯಂತ ಹೋಳಿ ಹಬ್ಬವನ್ನು ಇಂದು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ. ಜಾತಿ-ಮತ ಭೇದವಿಲ್ಲದೆ ಜನರು ಒಂದಾಗಿ ಸೇರಿ ಬಣ್ಣಗಳ ಓಕುಳಿಯಾಟದಲ್ಲಿ ಮಿಂದೇಳುತ್ತಿದ್ದಾರೆ. ವಸಂತ ಋತುವಿನ ಆಗಮನವನ್ನು ಸೂಚಿಸುವ ಈ ಹಬ್ಬವು ಚಳಿಗಾಲದ ಅಂತ್ಯವನ್ನು ಸಾರುತ್ತದೆ. ಹೋಳಿ ಆಚರಣೆ ಸಾಮಾನ್ಯವಾಗಿ ಎರಡು ಹಂತಗಳಲ್ಲಿ ನಡೆಯುತ್ತದೆ. ಮೊದಲ ದಿನ “ಹೋಲಿಕಾ ದಹನ” ನಡೆಸಿ ಕೆಟ್ಟದನ್ನು ನಾಶ ಮಾಡುವುದನ್ನು ಸಂಕೇತಿಸಲಾಗುತ್ತದೆ. ಎರಡನೇ ದಿನ ಜನರು ಬಣ್ಣಗಳನ್ನು ಎರಚಿಕೊಂಡು, ಪರಸ್ಪರ ಶುಭಾಶಯ ವಿನಿಮಯ

ಇಂದು ಬಣ್ಣಗಳ ಹಬ್ಬ ಹೋಳಿ| ಬದುಕನ್ನು ರಂಗಾಗಿಸುವ ಈ ಹಬ್ಬದ ಮಹತ್ವ ಗೊತ್ತಾ? Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಫೆಬ್ರವರಿ ತಿಂಗಳ ಈ ವಾರವು ಗ್ರಹಗಳ ಸ್ಥಾನ ಬದಲಾವಣೆಯಿಂದ 12 ರಾಶಿಗಳ ಸಾಪ್ತಾಹಿಕ ಭವಿಷ್ಯ ಹೇಗಿರಲಿದೆ? ಯಾವ ರಾಶಿಗೆ ಶುಭ? ಯಾವ ರಾಶಿಗೆ ಅದೃಷ್ಟಶಾಲಿಯಾಗಿರಲಿದೆ? ಯಾವ ರಾಶಿಗೆ ದುರಾದೃಷ್ಟ ಎದುರಾಗಲಿದೆ? ಎಲ್ಲಾ 12 ರಾಶಿಗಳ ಈ ವಾರದ ರಾಶಿ ಭವಿಷ್ಯ ಹೇಗಿರಲಿದೆ? ನೋಡೋಣ… ಮೇಷ:ಈ ರಾಶಿಯವರು ಸೂರ್ಯನನ್ನು ನಿತ್ಯ ಪ್ರಾರ್ಥನೆ ಮಾಡಲೇಬೇಕು. ಆದರೆ ಮಾಘ ಮಾಸದಲ್ಲಂತೂ ಪ್ರಾರ್ಥನೆ ಮಾಡಲೇಬೇಕು ಎಂಬ ಕಡ್ಡಾಯ ನಿಯಮವಿದೆ. ದೇವರು ಆರೋಗ್ಯ ಕೊಡುತ್ತಾನೆ. ನಿಮಗೆ ದಿಕ್ಕು ದೆಸೆ ತೋರಿ ಸರ್ವತೋಮುಖ

ದ್ವಾದಶ ರಾಶಿಗಳ ವಾರಭವಿಷ್ಯ Read More »

ಮಕ್ಕಳನ್ನು ದೇವರಿಗೆ ಹರಕೆಯೊಪ್ಪಿಸುವ ಭಕ್ತರು| ವಿಟ್ಲದಲ್ಲೊಂದು ಅಪರೂಪದ ಸಂಪ್ರದಾಯ

ಸಮಗ್ರ ನ್ಯೂಸ್: ಮಕ್ಕಳನ್ನುಸಾಂಕೇತಿಕವಾಗಿ ದೇವರಿಗೆ ಹರಕೆ ರೂಪದಲ್ಲಿ ಸಮರ್ಪಿಸುವ ವಿಶಿಷ್ಟ ನಂಬಿಕೆ, ಸಂಪ್ರದಾಯವಿರುವ ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸ ಪ್ರಸಿದ್ಧ ಕೇಪು ಕಜಂಬು ಉತ್ಸವ ಶ್ರೀ ಉಳ್ಳಾಲ್ತಿ ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಮಂಗಳವಾರ ರಾತ್ರಿ ನಡೆಯಿತು. ವಿಟ್ಲ ಡೊಂಬ ಹೆಗ್ಗಡೆ ಅರಮನೆಯ ಬಂಗಾರು ಅರಸರು ಕ್ಷೇತ್ರಕ್ಕೆ ಬಂದು ಪೂಜೆ ಸಲ್ಲಿಸಿದ ಬಳಿಕ, ದೇವಿಗೆ ಐದು ಸುತ್ತು ಪಲ್ಲಕ್ಕಿ ಬಲಿ ಉತ್ಸವ ನಡೆಯಿತು. ಬಲಿ ಉತ್ಸವದ ಬಳಿಕ ಪ್ರಧಾನ ದೇವಿ ಹಾಗೂ ಪರಿವಾರ ಶಕ್ತಿಗಳಿಗೆ ಪೂಜೆ ನೆರವೇರಿಸಿದ ನಂತರ ಕಜಂಬು

ಮಕ್ಕಳನ್ನು ದೇವರಿಗೆ ಹರಕೆಯೊಪ್ಪಿಸುವ ಭಕ್ತರು| ವಿಟ್ಲದಲ್ಲೊಂದು ಅಪರೂಪದ ಸಂಪ್ರದಾಯ Read More »

ನ.15ರಿಂದ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂಭ್ರಮ

ಸಮಗ್ರ ನ್ಯೂಸ್: ನವೆಂಬರ್ 15 ರಿಂದ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವದ ವೈಭವ ನಡೆಯಲಿದೆ. ಕಾರ್ತಿಕ ಮಾಸದ ಸಂದರ್ಭದಲ್ಲಿ ಲಕ್ಷದೀಪೋತ್ಸವ ಕಾರ್ಯಕ್ರಮ ನವೆಂಬರ್ 15ರಿಂದ 19ರವರೆಗೆ ನಡೆಯಲಿವೆ. ನವೆಂಬರ್ 18ರಂದು ಸಂಜೆ 5ರಿಂದ ಸರ್ವಧರ್ಮ ಸಮ್ಮೇಳನದ 93ನೇ ಅಧಿವೇಶನ ನಡೆಯಲಿದ್ದು, ರಾಜ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ ಸಚಿವ ಎಂ.ಬಿ.ಪಾಟೀಲ್ ಅಧಿವೇಶನ ಉದ್ಘಾಟಿಸುವರು. ಹರಿಹರಪುರದ ಸ್ವಯಂಪ್ರಕಾಶ್ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಅಧ್ಯಕ್ಷತೆ ವಹಿಸುವರು. ಪತ್ರಕರ್ತ ಎ.ಸೂರ್ಯಪ್ರಕಾಶ್ ಪಂಡಿತ್, ಅಂಕಣಕಾರ ತನ್ವೀರ್ ಅಹಮ್ಮದ್ ಉಲ್ಲಾ ಉಪನ್ಯಾಸ ನೀಡುವರು. ಸಾಂಸ್ಕೃತಿಕ ಕಾರ್ಯಕ್ರಮದ

ನ.15ರಿಂದ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂಭ್ರಮ Read More »