ಸಿನಿಮಾ

ಸುಮಲತಾ ಅಂಬರೀಶ್ ಅವರಿಗೆ ಗೌರವ ಡಾಕ್ಟರೇಟ್

ಸಮಗ್ರ ನ್ಯೂಸ್: ಕನ್ನಡ ಚಿತ್ರರಂಗದ ಹಿರಿಯ ನಟಿ ಮತ್ತು ಸಂಸದೆಯಾಗಿರುವ ಸುಮಲತಾ ಅಂಬರೀಶ್ ಅವರಿಗೆ ಗೌರವ ಡಾಕ್ಟರೇಟ್ ಲಭಿಸಿದೆ. ಸಮಾಜ ಸೇವೆ, ರಾಜಕೀಯ ಮತ್ತು ಚಲನಚಿತ್ರಗಳಲ್ಲಿನ ಸೇವೆಗಾಗಿ ಯುಎಸ್​ಎ ಕ್ಯಾಲಿಫೋರ್ನಿಯಾದ ಬರ್ಕ್ಲಿ ವಿಶ್ವವಿದ್ಯಾಲಯದಿಂದ ಅನುಮೋದಿಸಲಾದ ಮತ್ತು ಮಾನ್ಯತೆ ಪಡೆದಿರುವ ಹೈದರಾಬಾದ್​ನ ಯುನೈಟೆಡ್ ಥಿಯೋಲಾಜಿಕಲ್ ರಿಸರ್ಚ್ ಇನ್ಸ್ಟಿಟ್ಯೂಟ್​ನಿಂದ ಗೌರವ ಡಾಕ್ಟರೇಟ್ ನೀಡಲಾಗಿದೆ. ಗೌರವ ಡಾಕ್ಟರೇಟ್ ಪಡೆದುಕೊಂಡಿರುವುದಕ್ಕೆ ಸುಮಲತಾ ಅವರು ಗೌರವ ಪೂರ್ವಕವಾಗಿ ಧನ್ಯವಾದವನ್ನು ಅರ್ಪಿಸಿದ್ದಾರೆ. ಈ ಕುರಿತಾಗಿ ಫೇಸ್​ಬುಕ್​ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಂಸದೆ ಸುಮಲತಾ, ಈ ಗೌರವ ನನ್ನ […]

ಸುಮಲತಾ ಅಂಬರೀಶ್ ಅವರಿಗೆ ಗೌರವ ಡಾಕ್ಟರೇಟ್ Read More »

ರಶ್ಮಿಕಾ ಮಂದಣ್ಣ ಡೀಪ್‌ ಫೇಕ್ ವಿಡಿಯೋ ಸೃಷ್ಟಿಕರ್ತ ಅರೆಸ್ಟ್

ಸಮಗ್ರ ನ್ಯೂಸ್: ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್ ಫೇಕ್ ವೀಡಿಯೊ ಸೃಷ್ಟಿಸಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ಶನಿವಾರ ತಿಳಿಸಿದ್ದಾರೆ. ವೀಡಿಯೊದ ಸೃಷ್ಟಿಕರ್ತ ಎಂದು ಶಂಕಿಸಲಾದ ಆರೋಪಿಯನ್ನು ದಕ್ಷಿಣ ಭಾರತದಲ್ಲಿ ಬಂಧಿಸಿ ದೆಹಲಿಗೆ ಕರೆತರಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನವೆಂಬರ್ 10 ರಂದು ದೆಹಲಿ ಪೊಲೀಸರ ವಿಶೇಷ ಘಟಕದ ಗುಪ್ತಚರ ಫ್ಯೂಷನ್ ಮತ್ತು ಸ್ಟ್ರಾಟೆಜಿಕ್ ಆಪರೇಷನ್ಸ್ (ಐಎಫ್‌ಎಸ್‌ಒ) ಘಟಕದಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 465 (ಫೋರ್ಜರಿಗಾಗಿ ಶಿಕ್ಷೆ) ಮತ್ತು 469

ರಶ್ಮಿಕಾ ಮಂದಣ್ಣ ಡೀಪ್‌ ಫೇಕ್ ವಿಡಿಯೋ ಸೃಷ್ಟಿಕರ್ತ ಅರೆಸ್ಟ್ Read More »

ಬಿಗ್ ಬಾಸ್​ ಕೊಟ್ರು ಎಲಿಮಿನೇಷನ್ ಶಾಕ್​…! ತನಿಷಾ ಬಿಗ್ ಬಾಸ್ ಮನೆಯಿಂದ ಔಟ್…

ಸಮಗ್ರ ನ್ಯೂಸ್: ಬಿಗ್ ಬಾಸ್​ ಫಿನಾಲೆಗೆ ಇನ್ನೇನೂ ಕೆಲವೇ ದಿನಗಳಷ್ಟೆ ಬಾಕಿ ಇದೆ. ಈಗ ಬಿಗ್ ಬಾಸ್ ಮನೆಯಲ್ಲಿ ಟ್ವಿಸ್ಟ್ ಮೇಲೆ ಟ್ವಿಸ್ಟ್ ತೆಗೆದುಕೊಳ್ತಿದೆ. ಬಂದ ಅತಿಥಿಗಳೆಲ್ಲಾ ಹೊರಗೆ ಹೋದ ಬಳಿಕ ಈಗ ಬಿಗ್​ ಬಾಸ್​ ಎಲಿಮಿನೇಷನ್ ಶಾಕ್ ಕೊಟ್ಟಿದ್ದಾರೆ. ಹೌದು ಕಳೆದ ವಾರ ವರ್ತೂರು ಸಂತೋಷ್​ ಹಾಗೂ ತುಕಾಲಿ ಸಂತೋಷ್ ಎಲಿಮಿನೇಷನ್​ ನಿಂದ ಬಚಾವ್ ಆಗಿದ್ರು. ಸುದೀಪ್​ ಈ ವಾರ ಯಾವುದೇ ಎಲಿಮಿನೇಷನ್ ಇಲ್ಲ ಎಂದಿದ್ರು. ಇದೀಗ ಬಿಗ್ ಬಾಸ್​ ರಾತ್ರಿ ಡೈರೆಕ್ಟ್​ ಎಲಿಮಿನೇಷನ್ ಮಾಡಿದೆ.

ಬಿಗ್ ಬಾಸ್​ ಕೊಟ್ರು ಎಲಿಮಿನೇಷನ್ ಶಾಕ್​…! ತನಿಷಾ ಬಿಗ್ ಬಾಸ್ ಮನೆಯಿಂದ ಔಟ್… Read More »

ಶಿವನಿಗೆ ಭಾಸ್ಕರನ ನಮಸ್ಕಾರ|ಗವಿಗಂಗಾಧರನಿಗೆ ನಮಿಸಿ ಪಥ ಬದಲಿಸಿದ ಭಾಸ್ಕರ…!

ವರ್ಷದಲ್ಲಿ ಒಂದು ಬಾರಿ ಈ ಮಕರ ಸಂಕ್ರಾಂತಿಯಂದು ಈ ಸನ್ನಿವೇಷ ನಡೆಯುತ್ತದೆ. ಮೊದಲು ದೇಗುಲದ ಗರ್ಭಗುಡಿಯ ಹೊಸ್ತಿಲು ದಾಟಿ, ನಂದಿ ವಿಗ್ರಹವನ್ನು ಸ್ಪರ್ಶಿಸಿತು. ಬಳಿಕ ನಂದಿ ಮೂಲಕ ಹಾದು ಸ್ಪಟಿಕ ಲಿಂಗ ಸ್ಪರ್ಶಿಸಿತು. ನಂತರ ಶಿವಲಿಂಗದ ಕೆಳಭಾಗದ ಮೂಲಕ ಹಾದು, ಶಿವಲಿಂಗವನ್ನು ಆವರಿಸಿತು. ಇನ್ನು ಸೂರ್ಯ ರಶ್ಮಿ ಸ್ಪರ್ಶದ ವೇಳೆ ಭಕ್ತರಿಗೆ ದೇಗುಲದ ಒಳಗೆ ಪ್ರವೇಶ ಇರಲಿಲ್ಲ. ಹೀಗಾಗಿ ಭಕ್ತರಿಗೆ ಅನುಕೂಲವಾಗುವಂತೆ ದೇವಸ್ಥಾನದ ಹೊರಾಂಗಣದಲ್ಲಿ ದೊಡ್ಡ ಪೆಂಡಾಲ್‌ ಹಾಕಿ 10 ಎಲ್‌ಇಡಿ ಪರದೆಗಳನ್ನು ಅಳವಡಿಸಲಾಗಿತ್ತು. ಅಲ್ಲಿಂದಲೇ ಭಕ್ತರು

ಶಿವನಿಗೆ ಭಾಸ್ಕರನ ನಮಸ್ಕಾರ|ಗವಿಗಂಗಾಧರನಿಗೆ ನಮಿಸಿ ಪಥ ಬದಲಿಸಿದ ಭಾಸ್ಕರ…! Read More »

ಜನವರಿ 22 ರಂದು ಧ್ರುವ ಸರ್ಜಾ ಮಗಳ ನಾಮಕರಣ..!

ಸಮಗ್ರ ನ್ಯೂಸ್: ಇನ್ನೇನೂ ಜನವರಿ 22ರ ದಿನಕ್ಕಾಗಿ ಇಡೀ ದೇಶವೇ ಕಾಯುತ್ತಿದೆ. ಅಂದು ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೆ ದಿನಗಣನೆ ಅಷ್ಟೇ.ಹಲವರು ಈ ಕಾರ್ಯಕ್ರಮದಲ್ಲಿ ಭಾಗಿ ಆಗುವುದಕ್ಕಾಗಿ ತುದಿಗಾಲಲ್ಲಿ ನಿಂತಿದ್ದಾರೆ. ಕನ್ನಡ ಸಿನಿಮಾ ರಂಗದಿಂದಲೂ ಹಲವಾರು ಸೆಲೆಬ್ರಿಟಿಗಳಿಗೆ ಇದಾಗಲೆ ಆಹ್ವಾನ ಬಂದಿದೆ. ಆದರೆ ಈ ದಿನವೇ ನಟ ಧ್ರುವ ಸರ್ಜಾ ತಮ್ಮ ಮಕ್ಕಳಿಗೆ ನಾಮಕರಣ ಮಾಡಲಿದ್ದಾರೆ ಎಂಬ ಮಾಹಿತಿಯು ಹೊರಬಿದ್ದಿದೆ. ಧ್ರುವ ಸರ್ಜಾ ಅಂಡ್ ಫ್ಯಾಮಿಲಿ ಆಂಜನೇಯನ ಭಕ್ತರು. ಆಂಜನೇಯ ಗುಡಿಯನ್ನೇ ಈ ಕುಟುಂಬ ನಿರ್ಮಾಣ ಮಾಡಿದೆ.

ಜನವರಿ 22 ರಂದು ಧ್ರುವ ಸರ್ಜಾ ಮಗಳ ನಾಮಕರಣ..! Read More »

ಅವಧಿ ಮೀರಿ ಪಬ್ ನಲ್ಲಿ ಸೆಲೆಬ್ರಿಟಿಗಳ ಪಾರ್ಟಿ… ನಟ ದರ್ಶನ್ ಸೇರಿ 8 ಮಂದಿಗೆ ನೋಟಿಸ್

ಸಮಗ್ರ ನ್ಯೂಸ್: ಅವಧಿ ಮೀರಿ ಪಬ್ ನಲ್ಲಿ ಸೆಲೆಬ್ರಿಟಿಗಳ ಪಾರ್ಟಿ ವಿಚಾರ ಇತ್ತೀಚೆಗೆ ಸುದ್ದಿಯಾಗಿತ್ತು. ಜೆಟ್​ ​ಲ್ಯಾಗ್ ಪಬ್​ನಲ್ಲಿ ದರ್ಶನ್, ಅಭಿಷೇಕ್ ಅಂಬರೀಷ್ ಸೇರಿ ಅನೇಕ ಸೆಲೆಬ್ರೆಟಿಗಳು ಮಧ್ಯ ರಾತ್ರಿ 3 ಗಂಟೆವರೆಗೂ ಪಾರ್ಟಿ ಮಾಡಿದ್ದರು. ಈ ಪ್ರಕರಣದಲ್ಲಿ ಪಬ್ ವಿರುದ್ಧ ಕೇಸ್ ದಾಖಲಾಗಿತ್ತು. ಈ ಪಾರ್ಟಿಯಲ್ಲಿ ಭಾಗಿ ಆದ ನಟ ದರ್ಶನ್, ಅಭಿಷೇಕ್, ನಿರ್ಮಾಪಕ ರಾಕ್​ಲೈನ್ ವೆಂಕಟೇಶ್​ ಸೇರಿ 8 ಮಂದಿಗೆ ಸುಬ್ರಹ್ಮಣ್ಯನಗರ ಇನ್ಸ್​ಪೆಕ್ಟರ್​ ಸುರೇಶ್ ಅವರು ನೋಟಿಸ್ ನೀಡಿ ಹೇಳಿಕೆ ದಾಖಲಿಸಲಾಗಿದೆ. ‘ಕಾಟೇರ’ ಸಿನಿಮಾ

ಅವಧಿ ಮೀರಿ ಪಬ್ ನಲ್ಲಿ ಸೆಲೆಬ್ರಿಟಿಗಳ ಪಾರ್ಟಿ… ನಟ ದರ್ಶನ್ ಸೇರಿ 8 ಮಂದಿಗೆ ನೋಟಿಸ್ Read More »

ಬಿಗ್ ಬಾಸ್ ಮನೆಯಿಂದ ಹೊರ ಬಂದ ಸಿರಿ ಹೇಳಿದ್ದೇನು? ದೊಡ್ಮನೆಯಲ್ಲಿ ಹೀಗೆಲ್ಲಾ ಇತ್ತಾ?

ಸಮಗ್ರ ನ್ಯೂಸ್: ಹಲವಾರು ಧಾರಾವಾಹಿಗಳನ್ನು ಮಾಡಿ ಖ್ಯಾತಿ ಹೊಂದಿರುವ ಸಿರಿ ಬಿಗ್ ಬಾಸ್ 10 ನಲ್ಲಿ 12 ವಾರಗಳ ಕಾಲ ಇದ್ದರು. ಕಳೆದ ವಾರ ಬಿಗ್ ಮನೆಯಿಂದ ಹೊರಗೆ ಬಂದಿದ್ದಾರೆ. ಅವರ ಫಸ್ಟ್ ರಿಯಾಕ್ಷನ್ ಏನ್ ಗೊತ್ತಾ? ಇಲ್ಲಿದೆ ನೋಡಿ ಅಪ್ಡೇಟ್. ಎಸ್, ಕೂಲ್ ಆಗಿಯೇ ಆಡಿ ಎಲ್ಲರ ಮನ ಗೆದ್ದಿದ್ದಾರೆ ಸಿರಿ. ಹಾಗೆಯೇ ಮನೆಯಿಂದ ಹೊರ ಬಂದ ಸಿರಿ ” ಬಿಗ್ ಬಾಸ್ ಗೆ ಮೊದಲು ಹೋಗ್ಲೋ ಬೇಡ್ವೋ ಅಂತ ಯೋಚ್ನೆ ಮಾಡಿದ್ದೆ, ಮತ್ತೆ ಮನಸ್ಸು

ಬಿಗ್ ಬಾಸ್ ಮನೆಯಿಂದ ಹೊರ ಬಂದ ಸಿರಿ ಹೇಳಿದ್ದೇನು? ದೊಡ್ಮನೆಯಲ್ಲಿ ಹೀಗೆಲ್ಲಾ ಇತ್ತಾ? Read More »

ಮಗುವಿನ ನಿರೀಕ್ಷೆಯಲ್ಲಿ ನಟಿ ಅದಿತಿ ಪ್ರಭುದೇವ

ಸಮಗ್ರ ನ್ಯೂಸ್: ಸ್ಯಾಂಡಲ್​ವುಡ್ ನಟಿ ಅದಿತಿ ಪ್ರಭುದೇವ ಅವರು ಹೊಸ ವರ್ಷದ ಸಂದರ್ಭದಲ್ಲಿ ಗುಡ್​ನ್ಯೂಸ್ ಕೊಟ್ಟಿದ್ದಾರೆ. ನಟಿ ಅದಿತಿ ಅಮ್ಮನಾಗಲಿರುವ ಸಂತಸದ ಸುದ್ದಿಯನ್ನು ತಮ್ಮ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಸಂಬಂಧಗಳಲ್ಲಿ ಶ್ರೇಷ್ಠವಾದದ್ದು , ಹುಟ್ಟಿದಾಗಿನಿಂದ ಸಾಯುವವರೆಗೂ ಪ್ರತಿಯೊಂದು ನೋವು ನಲಿವಿನಲ್ಲೂ ನಮ್ಮ ಬಾಯಿಂದ ಬರುವ ಏಕೈಕ ಪದ “ಅಮ್ಮ”. . . ಜೀವನದಲ್ಲಿ ಪ್ರತಿಯೊಬ್ಬರೂ ಪ್ರೀತಿಯಿಂದ ಗೌರವದಿಂದ ಕಾಣುವ ಸಂಬಂಧ “ಅಮ್ಮ” ಪ್ರತಿಕ್ಷಣ ನಮಗಾಗಿ ಮಿಡಿಯುವ ಜೀವ “ಅಮ್ಮ” 2024 ಕ್ಕೆ ನಾನು ” ಅಮ್ಮ” ಎಂದು ನಟಿ

ಮಗುವಿನ ನಿರೀಕ್ಷೆಯಲ್ಲಿ ನಟಿ ಅದಿತಿ ಪ್ರಭುದೇವ Read More »

ಸುಳ್ಯ: ಸಪ್ತಪದಿ ತುಳಿದ ಮಜಾಭಾರತ ಖ್ಯಾತಿಯ ಪ್ರಿಯಾಂಕಾ ಕಾಮತ್

ಸಮಗ್ರ ನ್ಯೂಸ್: ಮಜಾಭಾರತ’ ರಿಯಾಲಿಟಿ ಶೋ ಮೂಲಕ ಕಿರುತೆರೆಯಲ್ಲಿ ಮೋಡಿ ಮಾಡಿದ ಪ್ರಿಯಾಂಕಾ ಕಾಮತ್ ಸಿಹಿ ಸುದ್ದಿಯನ್ನು ನೀಡಿದ್ದಾರೆ. ತಮ್ಮ ಬಹುಕಾಲದ ಗೆಳೆಯ ಅಮಿತ್ ನಾಯಕ್ ಅವರೊಂದಿಗೆ ಪ್ರಿಯಾಂಕಾ ಕಾಮತ್ ಅವರು ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ಪ್ರಿಯಾಂಕಾ ಹಾಗೂ ಅಮಿತ್ ಅವರ ವಿವಾಹ ಅದ್ಧೂರಿಯಾಗಿ ನಡೆದಿದೆ. ಮದುವೆಯ ಫೋಟೋಗಳನ್ನು ಪ್ರಿಯಾಂಕಾ ಕಾಮತ್ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಪ್ರಿಯಾಂಕಾ ಕಾಮತ್ ಅವರ ಮದುವೆಯ ಫೋಟೋವನ್ನು ನೋಡಿ ನೆಟ್ಟಿಗರು ಮೆಚ್ಚಿಕೊಂಡಿದ್ದು ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ. ಸುಳ್ಯದವರಾದ ಪ್ರಿಯಾಂಕ ಇಲ್ಲೇ ಹಸೆಮಣೆ ಏರಿದರು.

ಸುಳ್ಯ: ಸಪ್ತಪದಿ ತುಳಿದ ಮಜಾಭಾರತ ಖ್ಯಾತಿಯ ಪ್ರಿಯಾಂಕಾ ಕಾಮತ್ Read More »

ನಟ, ರಾಜಕಾರಣಿ ವಿಜಯಕಾಂತ್ ಇನ್ನಿಲ್ಲ

ಸಮಗ್ರ ನ್ಯೂಸ್: ನಟ ಹಾಗೂ ಡಿಎಂಡಿಕೆ ಮುಖ್ಯಸ್ಥರಾದ ವಿಜಯಕಾಂತ್ ವಿಧಿವಶರಾಗಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು. ಹಾಗೇ ಅವರಿಗೆ ಕೊರೊನಾ ಪಾಸಿಟಿವ್ ಆಗಿತ್ತು. ಅವರನ್ನು ಚೆನ್ನೈನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕಳೆದ ಕೆಲ ದಿನಗಳಿಂದ ಅವರು ವೆಂಟಿಲೇಟರ್ ಸಹಾಯದಲ್ಲಿ ಇದ್ದರು. ಈಗ ಚಿಕಿತ್ಸೆ ಫಲಕಾರಿ ಆಗದೇ ಮೃತಪಟ್ಟಿದ್ದಾರೆ. ‘ವಿಜಯಕಾಂತ್ ಅವರನ್ನು ವೆಂಟಿಲೇಟರ್ ಸಹಾಯದಲ್ಲಿ ಇಡಲಾಗಿತ್ತು. ಆದರೆ, ಎಷ್ಟೇ ಪ್ರಯತ್ನಿಸಿದರೂ ಅವರನ್ನು ಬದುಕಿಸಲು ಸಾಧ್ಯವಾಗಿಲ್ಲ. ಡಿಸೆಂಬರ್ 28ರ ಬೆಳಿಗ್ಗೆ ಅವರು ನಿಧನ ಹೊಂದಿದ್ದಾರೆ’ ಎಂದು ಆಸ್ಪತ್ರೆಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಟ, ರಾಜಕಾರಣಿ ವಿಜಯಕಾಂತ್ ಇನ್ನಿಲ್ಲ Read More »