ಸಿನಿಮಾ

ನಟಿ ಪವಿತ್ರಾ ಗೌಡ ವಿರುದ್ದ ದರ್ಶನ್ ಪತ್ನಿ ವಿಜಯಲಕ್ಷ್ಮಿ ಗರಂ|ಕಾನೂನು ಕ್ರಮದ ಎಚ್ಚರಿಕೆ

ಸಮಗ್ರ ನ್ಯೂಸ್: ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ, ಪವಿತ್ರಾ ಗೌಡ ವಿರುದ್ಧ ಗರಂ ಆಗಿದ್ದು ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ. ವಿಜಯಲಕ್ಷ್ಮಿ ಅವರು ದರ್ಶನ್ ಹಾಗೂ ತಮ್ಮ ಪುತ್ರ ವಿನೀತ್ ಜೊತೆಗಿನ ಚಿತ್ರವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ‘ಕುಟುಂಬವೇ ಎಲ್ಲ’ ಎಂದು ಕ್ಯಾಪ್ಷನ್ ನೀಡಿದ್ದರು. ಅದಾದ ಕೆಲವೇ ಹೊತ್ತಿನಲ್ಲಿ ಪವಿತ್ರಾ ಗೌಡ ಸಹ, ತಮ್ಮ ಹಾಗೂ ದರ್ಶನ್​ರ ಹಲವು ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು, ‘ನಮ್ಮ ಸಂಬಂಧಕ್ಕೆ 10 ವರ್ಷವಾಯಿತು. ಇನ್ನೂ ಹಲವು ವರ್ಷ ಜೊತೆಗೆ […]

ನಟಿ ಪವಿತ್ರಾ ಗೌಡ ವಿರುದ್ದ ದರ್ಶನ್ ಪತ್ನಿ ವಿಜಯಲಕ್ಷ್ಮಿ ಗರಂ|ಕಾನೂನು ಕ್ರಮದ ಎಚ್ಚರಿಕೆ Read More »

ಇಂದು ಧ್ರುವ ಸರ್ಜಾ ಮಕ್ಕಳ ನಾಮಕರಣ…!

ಸಮಗ್ರ ನ್ಯೂಸ್: ಇಂದು ದೇಶದೆಲ್ಲೆಡೆ ಸಂಭ್ರಮದ ವಾತಾವರಣ ಅಯೋಧ್ಯೆಯಲ್ಲಿ ಬಾಲರಾಮನ ಪ್ರತಿಷ್ಠಾಪನೆ ನಡೆದಾಯಿತ್ತು, ಈ ಶುಭದಿನದ ಈ ಸಂಭ್ರಮದಲ್ಲಿ ನಟ ಧ್ರುವ ಸರ್ಜಾ ತಮ್ಮ ಇಬ್ಬರು ಮಕ್ಕಳಿಗೆ ನಾಮಕರಣ ಮಾಡಿದ್ದಾರೆ. ಮಗಳಿಗೆ ರುದ್ರಾಕ್ಷಿ ಮತ್ತು ಮಗನಿಗೆ ಹಯಗ್ರೀವ ಎಂದು ನಾಮಕರಣ ಮಾಡಿದ್ದಾರೆ. ಧ್ರುವ ಸರ್ಜಾ ಫಾರ್ಮ್ ಹೌಸ್ ನಲ್ಲಿ ಈ ನಾಮಕರಣ ಶಾಸ್ತ್ರ ನಡೆದಿದೆ. ಇಲ್ಲಿ ಮುಖ್ಯವಾಗಿ ಮಕ್ಕಳಿಗೆ ವಿಶೇಷ ಮತ್ತು ಅರ್ಥಪೂರ್ಣವಾದ ಹೆಸರನ್ನೇ ಇಟ್ಟಿದ್ದಾರೆ ಧ್ರುವ ಸರ್ಜಾ. ಧ್ರುವ ಸರ್ಜಾ ಅಂಡ್ ಫ್ಯಾಮಿಲಿ ಆಂಜನೇಯನ ಭಕ್ತರು.

ಇಂದು ಧ್ರುವ ಸರ್ಜಾ ಮಕ್ಕಳ ನಾಮಕರಣ…! Read More »

ಸುಮಲತಾ ಅಂಬರೀಶ್ ಅವರಿಗೆ ಗೌರವ ಡಾಕ್ಟರೇಟ್

ಸಮಗ್ರ ನ್ಯೂಸ್: ಕನ್ನಡ ಚಿತ್ರರಂಗದ ಹಿರಿಯ ನಟಿ ಮತ್ತು ಸಂಸದೆಯಾಗಿರುವ ಸುಮಲತಾ ಅಂಬರೀಶ್ ಅವರಿಗೆ ಗೌರವ ಡಾಕ್ಟರೇಟ್ ಲಭಿಸಿದೆ. ಸಮಾಜ ಸೇವೆ, ರಾಜಕೀಯ ಮತ್ತು ಚಲನಚಿತ್ರಗಳಲ್ಲಿನ ಸೇವೆಗಾಗಿ ಯುಎಸ್​ಎ ಕ್ಯಾಲಿಫೋರ್ನಿಯಾದ ಬರ್ಕ್ಲಿ ವಿಶ್ವವಿದ್ಯಾಲಯದಿಂದ ಅನುಮೋದಿಸಲಾದ ಮತ್ತು ಮಾನ್ಯತೆ ಪಡೆದಿರುವ ಹೈದರಾಬಾದ್​ನ ಯುನೈಟೆಡ್ ಥಿಯೋಲಾಜಿಕಲ್ ರಿಸರ್ಚ್ ಇನ್ಸ್ಟಿಟ್ಯೂಟ್​ನಿಂದ ಗೌರವ ಡಾಕ್ಟರೇಟ್ ನೀಡಲಾಗಿದೆ. ಗೌರವ ಡಾಕ್ಟರೇಟ್ ಪಡೆದುಕೊಂಡಿರುವುದಕ್ಕೆ ಸುಮಲತಾ ಅವರು ಗೌರವ ಪೂರ್ವಕವಾಗಿ ಧನ್ಯವಾದವನ್ನು ಅರ್ಪಿಸಿದ್ದಾರೆ. ಈ ಕುರಿತಾಗಿ ಫೇಸ್​ಬುಕ್​ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಂಸದೆ ಸುಮಲತಾ, ಈ ಗೌರವ ನನ್ನ

ಸುಮಲತಾ ಅಂಬರೀಶ್ ಅವರಿಗೆ ಗೌರವ ಡಾಕ್ಟರೇಟ್ Read More »

ರಶ್ಮಿಕಾ ಮಂದಣ್ಣ ಡೀಪ್‌ ಫೇಕ್ ವಿಡಿಯೋ ಸೃಷ್ಟಿಕರ್ತ ಅರೆಸ್ಟ್

ಸಮಗ್ರ ನ್ಯೂಸ್: ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್ ಫೇಕ್ ವೀಡಿಯೊ ಸೃಷ್ಟಿಸಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ಶನಿವಾರ ತಿಳಿಸಿದ್ದಾರೆ. ವೀಡಿಯೊದ ಸೃಷ್ಟಿಕರ್ತ ಎಂದು ಶಂಕಿಸಲಾದ ಆರೋಪಿಯನ್ನು ದಕ್ಷಿಣ ಭಾರತದಲ್ಲಿ ಬಂಧಿಸಿ ದೆಹಲಿಗೆ ಕರೆತರಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನವೆಂಬರ್ 10 ರಂದು ದೆಹಲಿ ಪೊಲೀಸರ ವಿಶೇಷ ಘಟಕದ ಗುಪ್ತಚರ ಫ್ಯೂಷನ್ ಮತ್ತು ಸ್ಟ್ರಾಟೆಜಿಕ್ ಆಪರೇಷನ್ಸ್ (ಐಎಫ್‌ಎಸ್‌ಒ) ಘಟಕದಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 465 (ಫೋರ್ಜರಿಗಾಗಿ ಶಿಕ್ಷೆ) ಮತ್ತು 469

ರಶ್ಮಿಕಾ ಮಂದಣ್ಣ ಡೀಪ್‌ ಫೇಕ್ ವಿಡಿಯೋ ಸೃಷ್ಟಿಕರ್ತ ಅರೆಸ್ಟ್ Read More »

ಬಿಗ್ ಬಾಸ್​ ಕೊಟ್ರು ಎಲಿಮಿನೇಷನ್ ಶಾಕ್​…! ತನಿಷಾ ಬಿಗ್ ಬಾಸ್ ಮನೆಯಿಂದ ಔಟ್…

ಸಮಗ್ರ ನ್ಯೂಸ್: ಬಿಗ್ ಬಾಸ್​ ಫಿನಾಲೆಗೆ ಇನ್ನೇನೂ ಕೆಲವೇ ದಿನಗಳಷ್ಟೆ ಬಾಕಿ ಇದೆ. ಈಗ ಬಿಗ್ ಬಾಸ್ ಮನೆಯಲ್ಲಿ ಟ್ವಿಸ್ಟ್ ಮೇಲೆ ಟ್ವಿಸ್ಟ್ ತೆಗೆದುಕೊಳ್ತಿದೆ. ಬಂದ ಅತಿಥಿಗಳೆಲ್ಲಾ ಹೊರಗೆ ಹೋದ ಬಳಿಕ ಈಗ ಬಿಗ್​ ಬಾಸ್​ ಎಲಿಮಿನೇಷನ್ ಶಾಕ್ ಕೊಟ್ಟಿದ್ದಾರೆ. ಹೌದು ಕಳೆದ ವಾರ ವರ್ತೂರು ಸಂತೋಷ್​ ಹಾಗೂ ತುಕಾಲಿ ಸಂತೋಷ್ ಎಲಿಮಿನೇಷನ್​ ನಿಂದ ಬಚಾವ್ ಆಗಿದ್ರು. ಸುದೀಪ್​ ಈ ವಾರ ಯಾವುದೇ ಎಲಿಮಿನೇಷನ್ ಇಲ್ಲ ಎಂದಿದ್ರು. ಇದೀಗ ಬಿಗ್ ಬಾಸ್​ ರಾತ್ರಿ ಡೈರೆಕ್ಟ್​ ಎಲಿಮಿನೇಷನ್ ಮಾಡಿದೆ.

ಬಿಗ್ ಬಾಸ್​ ಕೊಟ್ರು ಎಲಿಮಿನೇಷನ್ ಶಾಕ್​…! ತನಿಷಾ ಬಿಗ್ ಬಾಸ್ ಮನೆಯಿಂದ ಔಟ್… Read More »

ಶಿವನಿಗೆ ಭಾಸ್ಕರನ ನಮಸ್ಕಾರ|ಗವಿಗಂಗಾಧರನಿಗೆ ನಮಿಸಿ ಪಥ ಬದಲಿಸಿದ ಭಾಸ್ಕರ…!

ವರ್ಷದಲ್ಲಿ ಒಂದು ಬಾರಿ ಈ ಮಕರ ಸಂಕ್ರಾಂತಿಯಂದು ಈ ಸನ್ನಿವೇಷ ನಡೆಯುತ್ತದೆ. ಮೊದಲು ದೇಗುಲದ ಗರ್ಭಗುಡಿಯ ಹೊಸ್ತಿಲು ದಾಟಿ, ನಂದಿ ವಿಗ್ರಹವನ್ನು ಸ್ಪರ್ಶಿಸಿತು. ಬಳಿಕ ನಂದಿ ಮೂಲಕ ಹಾದು ಸ್ಪಟಿಕ ಲಿಂಗ ಸ್ಪರ್ಶಿಸಿತು. ನಂತರ ಶಿವಲಿಂಗದ ಕೆಳಭಾಗದ ಮೂಲಕ ಹಾದು, ಶಿವಲಿಂಗವನ್ನು ಆವರಿಸಿತು. ಇನ್ನು ಸೂರ್ಯ ರಶ್ಮಿ ಸ್ಪರ್ಶದ ವೇಳೆ ಭಕ್ತರಿಗೆ ದೇಗುಲದ ಒಳಗೆ ಪ್ರವೇಶ ಇರಲಿಲ್ಲ. ಹೀಗಾಗಿ ಭಕ್ತರಿಗೆ ಅನುಕೂಲವಾಗುವಂತೆ ದೇವಸ್ಥಾನದ ಹೊರಾಂಗಣದಲ್ಲಿ ದೊಡ್ಡ ಪೆಂಡಾಲ್‌ ಹಾಕಿ 10 ಎಲ್‌ಇಡಿ ಪರದೆಗಳನ್ನು ಅಳವಡಿಸಲಾಗಿತ್ತು. ಅಲ್ಲಿಂದಲೇ ಭಕ್ತರು

ಶಿವನಿಗೆ ಭಾಸ್ಕರನ ನಮಸ್ಕಾರ|ಗವಿಗಂಗಾಧರನಿಗೆ ನಮಿಸಿ ಪಥ ಬದಲಿಸಿದ ಭಾಸ್ಕರ…! Read More »

ಜನವರಿ 22 ರಂದು ಧ್ರುವ ಸರ್ಜಾ ಮಗಳ ನಾಮಕರಣ..!

ಸಮಗ್ರ ನ್ಯೂಸ್: ಇನ್ನೇನೂ ಜನವರಿ 22ರ ದಿನಕ್ಕಾಗಿ ಇಡೀ ದೇಶವೇ ಕಾಯುತ್ತಿದೆ. ಅಂದು ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೆ ದಿನಗಣನೆ ಅಷ್ಟೇ.ಹಲವರು ಈ ಕಾರ್ಯಕ್ರಮದಲ್ಲಿ ಭಾಗಿ ಆಗುವುದಕ್ಕಾಗಿ ತುದಿಗಾಲಲ್ಲಿ ನಿಂತಿದ್ದಾರೆ. ಕನ್ನಡ ಸಿನಿಮಾ ರಂಗದಿಂದಲೂ ಹಲವಾರು ಸೆಲೆಬ್ರಿಟಿಗಳಿಗೆ ಇದಾಗಲೆ ಆಹ್ವಾನ ಬಂದಿದೆ. ಆದರೆ ಈ ದಿನವೇ ನಟ ಧ್ರುವ ಸರ್ಜಾ ತಮ್ಮ ಮಕ್ಕಳಿಗೆ ನಾಮಕರಣ ಮಾಡಲಿದ್ದಾರೆ ಎಂಬ ಮಾಹಿತಿಯು ಹೊರಬಿದ್ದಿದೆ. ಧ್ರುವ ಸರ್ಜಾ ಅಂಡ್ ಫ್ಯಾಮಿಲಿ ಆಂಜನೇಯನ ಭಕ್ತರು. ಆಂಜನೇಯ ಗುಡಿಯನ್ನೇ ಈ ಕುಟುಂಬ ನಿರ್ಮಾಣ ಮಾಡಿದೆ.

ಜನವರಿ 22 ರಂದು ಧ್ರುವ ಸರ್ಜಾ ಮಗಳ ನಾಮಕರಣ..! Read More »

ಅವಧಿ ಮೀರಿ ಪಬ್ ನಲ್ಲಿ ಸೆಲೆಬ್ರಿಟಿಗಳ ಪಾರ್ಟಿ… ನಟ ದರ್ಶನ್ ಸೇರಿ 8 ಮಂದಿಗೆ ನೋಟಿಸ್

ಸಮಗ್ರ ನ್ಯೂಸ್: ಅವಧಿ ಮೀರಿ ಪಬ್ ನಲ್ಲಿ ಸೆಲೆಬ್ರಿಟಿಗಳ ಪಾರ್ಟಿ ವಿಚಾರ ಇತ್ತೀಚೆಗೆ ಸುದ್ದಿಯಾಗಿತ್ತು. ಜೆಟ್​ ​ಲ್ಯಾಗ್ ಪಬ್​ನಲ್ಲಿ ದರ್ಶನ್, ಅಭಿಷೇಕ್ ಅಂಬರೀಷ್ ಸೇರಿ ಅನೇಕ ಸೆಲೆಬ್ರೆಟಿಗಳು ಮಧ್ಯ ರಾತ್ರಿ 3 ಗಂಟೆವರೆಗೂ ಪಾರ್ಟಿ ಮಾಡಿದ್ದರು. ಈ ಪ್ರಕರಣದಲ್ಲಿ ಪಬ್ ವಿರುದ್ಧ ಕೇಸ್ ದಾಖಲಾಗಿತ್ತು. ಈ ಪಾರ್ಟಿಯಲ್ಲಿ ಭಾಗಿ ಆದ ನಟ ದರ್ಶನ್, ಅಭಿಷೇಕ್, ನಿರ್ಮಾಪಕ ರಾಕ್​ಲೈನ್ ವೆಂಕಟೇಶ್​ ಸೇರಿ 8 ಮಂದಿಗೆ ಸುಬ್ರಹ್ಮಣ್ಯನಗರ ಇನ್ಸ್​ಪೆಕ್ಟರ್​ ಸುರೇಶ್ ಅವರು ನೋಟಿಸ್ ನೀಡಿ ಹೇಳಿಕೆ ದಾಖಲಿಸಲಾಗಿದೆ. ‘ಕಾಟೇರ’ ಸಿನಿಮಾ

ಅವಧಿ ಮೀರಿ ಪಬ್ ನಲ್ಲಿ ಸೆಲೆಬ್ರಿಟಿಗಳ ಪಾರ್ಟಿ… ನಟ ದರ್ಶನ್ ಸೇರಿ 8 ಮಂದಿಗೆ ನೋಟಿಸ್ Read More »

ಬಿಗ್ ಬಾಸ್ ಮನೆಯಿಂದ ಹೊರ ಬಂದ ಸಿರಿ ಹೇಳಿದ್ದೇನು? ದೊಡ್ಮನೆಯಲ್ಲಿ ಹೀಗೆಲ್ಲಾ ಇತ್ತಾ?

ಸಮಗ್ರ ನ್ಯೂಸ್: ಹಲವಾರು ಧಾರಾವಾಹಿಗಳನ್ನು ಮಾಡಿ ಖ್ಯಾತಿ ಹೊಂದಿರುವ ಸಿರಿ ಬಿಗ್ ಬಾಸ್ 10 ನಲ್ಲಿ 12 ವಾರಗಳ ಕಾಲ ಇದ್ದರು. ಕಳೆದ ವಾರ ಬಿಗ್ ಮನೆಯಿಂದ ಹೊರಗೆ ಬಂದಿದ್ದಾರೆ. ಅವರ ಫಸ್ಟ್ ರಿಯಾಕ್ಷನ್ ಏನ್ ಗೊತ್ತಾ? ಇಲ್ಲಿದೆ ನೋಡಿ ಅಪ್ಡೇಟ್. ಎಸ್, ಕೂಲ್ ಆಗಿಯೇ ಆಡಿ ಎಲ್ಲರ ಮನ ಗೆದ್ದಿದ್ದಾರೆ ಸಿರಿ. ಹಾಗೆಯೇ ಮನೆಯಿಂದ ಹೊರ ಬಂದ ಸಿರಿ ” ಬಿಗ್ ಬಾಸ್ ಗೆ ಮೊದಲು ಹೋಗ್ಲೋ ಬೇಡ್ವೋ ಅಂತ ಯೋಚ್ನೆ ಮಾಡಿದ್ದೆ, ಮತ್ತೆ ಮನಸ್ಸು

ಬಿಗ್ ಬಾಸ್ ಮನೆಯಿಂದ ಹೊರ ಬಂದ ಸಿರಿ ಹೇಳಿದ್ದೇನು? ದೊಡ್ಮನೆಯಲ್ಲಿ ಹೀಗೆಲ್ಲಾ ಇತ್ತಾ? Read More »

ಮಗುವಿನ ನಿರೀಕ್ಷೆಯಲ್ಲಿ ನಟಿ ಅದಿತಿ ಪ್ರಭುದೇವ

ಸಮಗ್ರ ನ್ಯೂಸ್: ಸ್ಯಾಂಡಲ್​ವುಡ್ ನಟಿ ಅದಿತಿ ಪ್ರಭುದೇವ ಅವರು ಹೊಸ ವರ್ಷದ ಸಂದರ್ಭದಲ್ಲಿ ಗುಡ್​ನ್ಯೂಸ್ ಕೊಟ್ಟಿದ್ದಾರೆ. ನಟಿ ಅದಿತಿ ಅಮ್ಮನಾಗಲಿರುವ ಸಂತಸದ ಸುದ್ದಿಯನ್ನು ತಮ್ಮ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಸಂಬಂಧಗಳಲ್ಲಿ ಶ್ರೇಷ್ಠವಾದದ್ದು , ಹುಟ್ಟಿದಾಗಿನಿಂದ ಸಾಯುವವರೆಗೂ ಪ್ರತಿಯೊಂದು ನೋವು ನಲಿವಿನಲ್ಲೂ ನಮ್ಮ ಬಾಯಿಂದ ಬರುವ ಏಕೈಕ ಪದ “ಅಮ್ಮ”. . . ಜೀವನದಲ್ಲಿ ಪ್ರತಿಯೊಬ್ಬರೂ ಪ್ರೀತಿಯಿಂದ ಗೌರವದಿಂದ ಕಾಣುವ ಸಂಬಂಧ “ಅಮ್ಮ” ಪ್ರತಿಕ್ಷಣ ನಮಗಾಗಿ ಮಿಡಿಯುವ ಜೀವ “ಅಮ್ಮ” 2024 ಕ್ಕೆ ನಾನು ” ಅಮ್ಮ” ಎಂದು ನಟಿ

ಮಗುವಿನ ನಿರೀಕ್ಷೆಯಲ್ಲಿ ನಟಿ ಅದಿತಿ ಪ್ರಭುದೇವ Read More »