ಸಿನಿಮಾ

ಇಂದು ರಾಜ್ಯದಾದ್ಯಂತ ‘ಯುವ’ ರಿಲೀಸ್| ಥಿಯೇಟರ್ ಮುಂದೆ ರಾರಾಜಿಸುತ್ತಿದೆ ಯುವನ ಕಟೌಟ್

ಸಮಗ್ರ ನ್ಯೂಸ್: ರಾಘವೇಂದ್ರ ರಾಜ್‌ಕುಮಾರ್‌ ಅವರ ಕಿರಿಯ ಮಗ ಯುವ ರಾಜ್‌ಕುಮಾರ್ ಅವರ ಚೊಚ್ಚಲ ಸಿನಿಮಾ ‘ಯುವ’ ಇಂದು (ಮಾ.29) ರಿಲೀಸ್ ಆಗಿದೆ. ಬೆಂಗಳೂರಿನ ಸಿದ್ದೇಶ್ವರ ಥಿಯೇಟರ್​ನಲ್ಲಿ ಮುಂಜಾನೆಯಿಂದಲೇ ಫ್ಯಾನ್ಸ್​ ಶೋ ಪ್ರದರ್ಶನ ಕಂಡಿದೆ. ರಾಜ್ಯದಲ್ಲಿ 350ಕ್ಕೂ ಹೆಚ್ಚು ಥಿಯೇಟರ್​ಗಳಲ್ಲಿ ಈ ಚಿತ್ರ ಬಿಡುಗಡೆ ಆಗಿದೆ. ಇದೀಗ ಸಿನಿಮಾ ಕಂಡು ಪ್ರೇಕ್ಷಕರು ಫಿದಾ ಆಗಿದ್ದಾರೆ. ಥಿಯೇಟರ್ ಮುಂದೆ ಯುವನ ಕಟೌಟ್ ಗಳು ರಾರಾಜಿಸುತ್ತಿದೆ. ಜೂನಿಯರ್ ಅಪ್ಪು ಎಂದೆ ಅಭಿಮಾನಿಗಳಿಗೆ ಯುವ ಫೇಮಸ್ ಆಗಿದ್ದಾರೆ. ಸಿನಿಮಾದಲ್ಲಿ ಯುವನ “ಒಬ್ಬನೇ […]

ಇಂದು ರಾಜ್ಯದಾದ್ಯಂತ ‘ಯುವ’ ರಿಲೀಸ್| ಥಿಯೇಟರ್ ಮುಂದೆ ರಾರಾಜಿಸುತ್ತಿದೆ ಯುವನ ಕಟೌಟ್ Read More »

ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್ ನೀಡಿದ ಮೋಹಕ ತಾರೆ ರಮ್ಯಾ

ಸಮಗ್ರ ನ್ಯೂಸ್: ಮೋಹಕ ತಾರೆ ರಮ್ಯಾ 8 ವರ್ಷಗಳ ನಂತರ ಮತ್ತೆ ಬಣ್ಣದ ಲೋಕಕ್ಕೆ ಬರುತ್ತಾರೆ ಎಂದು ಹೇಳಲಾಗುತ್ತಿತ್ತು. ʼಉತ್ತರಕಾಂಡʼ ಸಿನಿಮಾದಲ್ಲಿ ಡಾಲಿ ಧನಂಜಯ್​ಗೆ ಜೋಡಿಯಾಗಿ ಮೋಹಕ ತಾರೆ ಕಾಣಿಸಿಕೊಂಡು ಸ್ಯಾಂಡಲ್​ವುಡ್​ನಲ್ಲಿ ಹಂಗಮಾ ಸೃಷ್ಟಿ ಮಾಡುತ್ತಾರೆ ಎಂದು ಹೇಳಲಾಗುತ್ತಿತ್ತು. ಡೇಟ್ಸ್ ಹೊಂದಾಣಿಕೆ ಆಗದ ಕಾರಣ, ನಾನು ಉತ್ತರಕಾಂಡ ಸಿನಿಮಾದಲ್ಲಿ ನಟಿಸುತ್ತಿಲ್ಲ. ನನ್ನ ಸಿನಿಮಾ ಮತ್ತು ರಾಜಕೀಯ ಕೆಲಸಗಳನ್ನು ಸದ್ಯ ಕಾಯ್ದಿರಿಸಿದ್ದೇನೆ. ಆದರೆ ಚಿತ್ರತಂಡಕ್ಕೆ ಶುಭವಾಗಲಿ ಎಂದು ರಮ್ಯಾ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಉತ್ತರಕಾಂಡ ಚಿತ್ರದಲ್ಲಿ ಡಾಲಿ

ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್ ನೀಡಿದ ಮೋಹಕ ತಾರೆ ರಮ್ಯಾ Read More »

ನನ್ನನ್ನು ಚಿತ್ರೋದ್ಯಮ ಮರೆತಿದೆ; ಆಶಿಷ್ ವಿದ್ಯಾರ್ಥಿ

ಸಮಗ್ರ ನ್ಯೂಸ್: ಆಶಿಷ್ ವಿದ್ಯಾರ್ಥಿ ಕನ್ನಡವೂ ಸೇರಿದಂತೆ ಹಲವಾರು ಭಾಷೆಗಳಲ್ಲಿ ನಟಿಸಿದ್ದು, ನನಗೆ ಅವಕಾಶ ನೀಡುತ್ತಿಲ್ಲವೆಂದು ಬೇಸರ ವ್ಯಕ್ತಪಡಿಸಿದ್ದಾರೆ. ನಾನು ಹಲವಾರು ಭಾಷೆಗಳಲ್ಲಿ ನಟಿಸಿದ್ದರೂ, ವಿವಿಧ ಪಾತ್ರಗಳನ್ನು ಮಾಡಿದ್ದರೂ, ನನ್ನನ್ನು ಚಿತ್ರೋದ್ಯಮ ಮರೆತಿದೆ ಎಂದು ಅವರು ಹೇಳಿಕೊಂಡಿದ್ದಾರೆ. ನನ್ನನ್ನು ಎಲ್ಲರೂ ವಿಲನ್ ರೀತಿಯಲ್ಲಿ ನೋಡುತ್ತಿದ್ದಾರೆ. ನಾನು ಸಾಕಷ್ಟು ಪಾತ್ರಗಳಲ್ಲಿ ನಟಿಸಿದ್ದೇನೆ. ಬೇರೆ ಬೇರೆ ಪಾತ್ರಗಳನ್ನು ಸಮರ್ಥವಾಗಿ ನಿಭಾಯಿಸಿದ್ದೇನೆ. ಅವೆಲ್ಲವನ್ನೂ ಜನರು ಮತ್ತು ಉದ್ಯಮ ಮೆಚ್ಚಿಕೊಂಡಿದೆ. ಆದರೂ, ನನಗೆ ಕೆಲಸ ಕೊಡುತ್ತಿಲ್ಲ. ದಯವಿಟ್ಟು ಅವಕಾಶ ನೀಡಿ ಎಂದು ಅವರು

ನನ್ನನ್ನು ಚಿತ್ರೋದ್ಯಮ ಮರೆತಿದೆ; ಆಶಿಷ್ ವಿದ್ಯಾರ್ಥಿ Read More »

“ಆರ್ಟಿಕಲ್ 370” ಸಿನಿಮಾ/ ಏಪ್ರಿಲ್ 19ರಂದು ಒಟಿಟಿಯಲ್ಲಿ ರಿಲೀಸ್

ಸಮಗ್ರ ನ್ಯೂಸ್”: ಕೇಂದ್ರ ಸರ್ಕಾರವು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು ಮಾಡಿದ್ದ ಘಟನೆಗಳನ್ನು ಆಧರಿಸಿ ಮೂಡಿ ಬಂದ ‘ಆರ್ಟಿಕಲ್ 370’ ಸಿನಿಮಾ ಇದೀಗ ಒಟಿಟಿಯಲ್ಲಿ ಅಬ್ಬರಿಸಲು ‘ಆರ್ಟಿಕಲ್ 370’ ಸಿದ್ಧವಾಗಿದೆ. ನಟಿ ಯಾಮಿ ಗೌತಮ್ ಅವರು ಈ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಚಿತ್ರಮಂದಿರದಲ್ಲಿ ಈ ಸಿನಿಮಾಗೆ ಒಳ್ಳೆಯ ಕಲೆಕ್ಷನ್ ಆಗಿದೆ. ಆರಂಭದಲ್ಲೇ ‘ಆರ್ಟಿಕಲ್ 370’ ಸಿನಿಮಾಗೆ ಸಾಧಾರಣ ಕಲೆಕ್ಷನ್ ಆಯಿತು. ನಂತರದ ದಿನಗಳಲ್ಲಿ ಅದೇ ಸ್ಥಿತಿ ಮುಂದುವರಿಯಿತು. ಅಚ್ಚರಿ ಏನೆಂದರೆ, ಸತತ ಒಂದು ತಿಂಗಳ ಪ್ರದರ್ಶನದ

“ಆರ್ಟಿಕಲ್ 370” ಸಿನಿಮಾ/ ಏಪ್ರಿಲ್ 19ರಂದು ಒಟಿಟಿಯಲ್ಲಿ ರಿಲೀಸ್ Read More »

ಪ್ರೇಕ್ಷಕರನ್ನು ಸೆಳೆದ ‘ಬ್ಲಿಂಕ್’ ಸಿನಿಮಾ: ಶೋಗಳ ಸಂಖ್ಯೆ ಹೆಚ್ಚಳ

ಸಮಗ್ರ ನ್ಯೂಸ್‌: ‘ಬ್ಲಿಂಕ್’ ಕನ್ನಡ ಸಿನಿಮಾ ಪ್ರೇಕ್ಷಕರನ್ನು ಚಿತ್ರಮಂದಿರಗಳಿಗೆ ಸೆಳೆಯಲು ಯಶಸ್ವಿಯಾಗುತ್ತಿವೆ. ಕೆಲ ಯುವಕರ ತಂಡಗಳು ಪ್ರೇಕ್ಷಕರನ್ನು ಸೆಳೆಯಲು ಯಶಸ್ವಿಯಾಗಿರುವುದು ಭರವಸೆಯನ್ನು ಮತ್ತಷ್ಟು ಹೆಚ್ಚು ಮಾಡಿದೆ. ಚಿತ್ರಮಂದಿರದಲ್ಲಿ ಈ ಸಿನಿಮಾ ಬಿಡುಗಡೆ ಆದಾಗ ಕೆಲವೇ ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದ್ದ ಸಿನಿಮಾ, ಕಂಟೆಂಟ್ನಿಂದ ಪ್ರೇಕ್ಷಕರನ್ನು ಸೆಳೆದು ಇದೀಗ ಶೋಗಳ ಸಂಖ್ಯೆಯನ್ನು ಹೆಚ್ಚು ಮಾಡಿಕೊಂಡಿದೆ. ಶಿವರಾತ್ರಿ ಹಬ್ಬದಂದು ಸೂಪರ್ ಸ್ಟಾರ್ಸ್ ಸಿನಿಮಾಗಳ ಮಧ್ಯೆ ತೆರೆಗೆ ಬಂದ ‘ಬ್ಲಿಂಕ್’ ಸಿನಿಮಾಗೆ ಪ್ರಾರಂಭದಲ್ಲಿ ಉತ್ತಮ ಪ್ರತಿಕ್ರಿಯೆ ದೊರೆತಿರಲಿಲ್ಲ. ಆರಂಭದ ದಿನಗಳಲ್ಲಿ ಸಿನಿಮಾ ನೋಡಿದ

ಪ್ರೇಕ್ಷಕರನ್ನು ಸೆಳೆದ ‘ಬ್ಲಿಂಕ್’ ಸಿನಿಮಾ: ಶೋಗಳ ಸಂಖ್ಯೆ ಹೆಚ್ಚಳ Read More »

ಖ್ಯಾತ ಗಾಯಕಿ ಮಂಗ್ಲಿ ಕಾರಿಗೆ ಭೀಕರ ಅಪಘಾತ

ಸಮಗ್ರ ನ್ಯೂಸ್: ಗಾಯಕಿ ಮಂಗ್ಲಿ ಅವರು ಕಾರು ಅಪಘಾತಕ್ಕೆ ಒಳಗಾಗಿದು, ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಎಂಬ ಮಾಹಿತಿ ಲಭಿಸಿದೆ. ಬ್ಯಾಕ್ ಟು ಬ್ಯಾಕ್ ಕಾರ್ಯಕ್ರಮಗಳನ್ನು ನೀಡುತ್ತಿರುವ ಮಂಗ್ಲಿ ಈಗ ಕಾರ್ಯಕ್ರಮ ಮುಗಿಸಿ ಬರುವಾಗ ಈ ಘಟನೆ ನಡೆದಿದೆ. ಮಂಗ್ಲಿ ಅವರಿಗೆ ಯಾವುದೇ ತೊಂದರೆ ಆಗಿಲ್ಲ ಎಂದು ತಿಳಿದು ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ರಂಗಾ ರೆಡ್ಡಿ ಜಿಲ್ಲೆಯ ನಂದಿಗ್ರಾಮ ಕನ್ಹಾ ಆಧ್ಯಾತ್ಮಿಕ ಉತ್ಸವದಲ್ಲಿ ಮಂಗ್ಲಿ ಭಾಗವಹಿಸಿದ್ದರು. ಆ ಬಳಿಕ ಅವರು ಬೆಂಗಳೂರು-ಹೈದರಾಬಾದ್ ಹೈವೇ ಮೂಲಕ ನಿನ್ನೆ ಹೈದರಾಬಾದ್​ಗೆ

ಖ್ಯಾತ ಗಾಯಕಿ ಮಂಗ್ಲಿ ಕಾರಿಗೆ ಭೀಕರ ಅಪಘಾತ Read More »

ದೊಡ್ಮನೆ ರಾಜಕುಮಾರನ 49ನೇ ಹುಟುಹಬ್ಬ| ಕಂಠೀರವ ಸ್ಟುಡಿಯೋದಲ್ಲಿ ಅಭಿಮಾನಿಗಳ ಜನಸಾಗರ

ಸಮಗ್ರ ನ್ಯೂಸ್: ಇಂದು ಅಗಲಿದ ತಾರೆ ಪುನೀತ್ ರಾಜ್​ಕುಮಾರ್ ಅವರ 49ನೇ ಹುಟ್ಟುಹಬ್ಬ ಸಂಭ್ರಮ. ಮುಂಜಾನೆಯಿಂದಲೇ ಕಂಠೀರವ ಸ್ಟುಡಿಯೋದ ಅವರ ಸ್ಮಾರಕದ ಬಳಿ ಅಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದಾರೆ. ಅಸಲಿಗೆ ಕಳೆದ ಎರಡು ದಿನಗಳಿಂದಲೂ ಸ್ಮಾರಕಕ್ಕೆ ಭೇಟಿ ನೀಡುತ್ತಿರುವ ಅಭಿಮಾನಿಗಳ ಸಂಖ್ಯೆ ಹೆಚ್ಚಾಗಿದೆ. ಇಂದು ಹುಟ್ಟುಹಬ್ಬವಾದ್ದರಿಂದ ಮಧ್ಯರಾತ್ರಿಯಿಂದಲೇ ಹಲವು ರೀತಿಯ ಕಾರ್ಯಕ್ರಮಗಳು ಕಂಠೀರವ ಸ್ಟುಡಿಯೋನಲ್ಲಿನ ಅಪ್ಪು ಸ್ಮಾರಕ ಬಳಿ ಪ್ರಾರಂಭವಾಗಿವೆ. ರಾತ್ರಿಯೇ ಕೇಕ್ ಕತ್ತರಿಸಿ ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಅಂದಹಾಗೆ ಅಪ್ಪುವಿನ ಈ ಹುಟ್ಟುಹಬ್ಬವನ್ನು ‘ಸ್ಪೂರ್ತಿಯ ಹಬ್ಬ’ವನ್ನಾಗಿ ಆಚರಿಸುತ್ತಿರುವುದು

ದೊಡ್ಮನೆ ರಾಜಕುಮಾರನ 49ನೇ ಹುಟುಹಬ್ಬ| ಕಂಠೀರವ ಸ್ಟುಡಿಯೋದಲ್ಲಿ ಅಭಿಮಾನಿಗಳ ಜನಸಾಗರ Read More »

ಗೋವಾದಲ್ಲಿ ನಡೆಯುತ್ತಿದೆ ʻಟಾಕ್ಸಿಕ್ʼ ಸಿನಿಮಾದ ಶೂಟಿಂಗ್‌| ಪೋಟೋ ವೈರಲ್

ಸಮಗ್ರ ನ್ಯೂಸ್: ಸ್ಯಾಂಡಲ್‌ವುಡ್‌ ನಟ ಯಶ್‌ ಅವರ ಹೊಸ ಸಿನಿಮಾದ ಟೈಟಲ್ ಅನ್ನು ಮೊನ್ನೆಯಷ್ಟೆ ರಿವೀಲ್ ಮಾಡಿದ್ದಾರೆ. ಈ ʻಟಾಕ್ಸಿಕ್ʼ ಸಿನಿಮಾದ ಶೂಟಿಂಗ್‌ ಗೋವಾದಲ್ಲಿ ನಡೆಯುತ್ತಿದ್ದು, ಕೆಲವು ಫೋಟೊ ಹಾಗೂ ವಿಡಿಯೊಗಳು ಲೀಕ್‌ ಆಗಿವೆ. ವೈರಲ್ ಆದ ಫೋಟೊದಲ್ಲಿ ಯಶ್ ಕೂಡ ಕಾಣಿಸಿಕೊಂಡಿದ್ದಾರೆ. ಆದ್ರೆ ಇದು ಶೂಟಿಂಗ್‌ ವಿಡಿಯೊ ಹೌದೋ ಅಲ್ಲವೋ ಎಂಬ ಅನುಮಾನವು ಇದೆ. ಮಲಯಾಳಂ ಮೂಲದ ನಟಿ, ನಿರ್ದೇಶಕಿ ಗೀತು ಮೋಹನ್‌ದಾಸ್‌ ಈ ಚಿತ್ರಕ್ಕೆ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. ಬರೋಬ್ಬರಿ 170 ಕೋಟಿ ರೂಪಾಯಿ

ಗೋವಾದಲ್ಲಿ ನಡೆಯುತ್ತಿದೆ ʻಟಾಕ್ಸಿಕ್ʼ ಸಿನಿಮಾದ ಶೂಟಿಂಗ್‌| ಪೋಟೋ ವೈರಲ್ Read More »

ಇಂದು ‘ಜಾಕಿ’ ರೀ ರಿಲೀಸ್| ಮುಗಿಲು ಮುಟ್ಟಿದ ಅಪ್ಪು ಅಭಿಮಾನಿಗಳ ಸಂಭ್ರಮ

ಸಮಗ್ರ ನ್ಯೂಸ್: ಪವರ್ ಸ್ಟಾರ್‌’ ಪುನೀತ್ ರಾಜ್‌ಕುಮಾರ್ ಅಂದ್ರೆ ನಮ್ಮೆಲ್ಲರ ಅಪ್ಪು ಬರ್ತ್ ಡೇಗೆ ಕೌಂಟ್ ಡೌನ್ ಶುರುವಾಗಿದೆ. ಇಂದು ಅಪ್ಪುಅಭಿನಯದ ‘ಜಾಕಿ’ ಸಿನಿಮಾವು ಮರು ಬಿಡುಗಡೆ ಆಗಿದೆ. ಬೆಳ್ಳಂಬೆಳಗ್ಗೆ ಬೆಳ್ಳಿ ಪರದೆಯಲ್ಲಿ ರಾಜರತ್ನನ ನೋಡಿ ಅಪ್ಪು ಅಭಿಮಾನಿಗಳು ಸಂತಸಗೊಂಡಿದ್ದಾರೆ. ಮಾ.17ರಂದು ಪುನೀತ್ ಹುಟ್ಟುಹಬ್ಬ. ಅದಕ್ಕೂ ಮುನ್ನ, ಅಂದರೆ ಇಂದು ‘ಜಾಕಿ’ ಸಿನಿಮಾ ರೀ-ರಿಲೀಸ್ ಆಗಿದೆ. ಬೆಂಗಳೂರಿನಲ್ಲಿ ‘ಜಾಕಿ’ ಜಾತ್ರೆ ಜೋರಾಗಿದು, ಹಬ್ಬದ ರೀತಿಯಲ್ಲಿ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಬೆಂಗಳೂರಿನ ಪ್ರಮುಖ ಚಿತ್ರಮಂದಿರಗಳಾದ ನರ್ತಕಿ, ಪ್ರಸನ್ನ, ಬಾಲಾಜಿ, ವೈಭವ್,

ಇಂದು ‘ಜಾಕಿ’ ರೀ ರಿಲೀಸ್| ಮುಗಿಲು ಮುಟ್ಟಿದ ಅಪ್ಪು ಅಭಿಮಾನಿಗಳ ಸಂಭ್ರಮ Read More »

ಮಗುವಿನ ನಿರೀಕ್ಷೆಯಲ್ಲಿ ಕೃಷ್ಣ-ಮಿಲನಾ|ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ‘ಲವ್ ಮಾಕ್ಟೇಲ್’ ದಂಪತಿ

ಸಮಗ್ರ ನ್ಯೂಸ್: ನಟಿ ಮಿಲನಾ ನಾಗರಾಜ್ ಹಾಗೂ ನಟ ‘ಡಾರ್ಲಿಂಗ್’ ಕೃಷ್ಣ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಪ್ರೀತಿಸಿ 2021ರ ಫೆಬ್ರವರಿ 14ರಂದು ಮದುವೆ ಆದರು. ಮೂರು ವರ್ಷಗಳ ಬಳಿಕ ಈ ದಂಪತಿ ಸಿಹಿ ಸುದ್ದಿ ನೀಡಿದ್ದು, 2024ರ ಸೆಪ್ಟೆಂಬರ್​ನಲ್ಲಿ ಮಗುವಿನ ಆಗಮನ ಆಗಲಿದೆ ಎಂದು ಮಿಲನಾ ಹಾಗೂ ಕೃಷ್ಣ ಘೋಷಣೆ ಮಾಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಮಿಲನಾ ನಾಗರಾಜ್ ಈ ವಿಚಾರವನ್ನು ಹೇಳಿಕೊಂಡಿದ್ದಾರೆ. ಮಗುವಿನ ಶರ್ಟ್​ ಫೋಟೋನ ಹಂಚಿಕೊಂಡಿದ್ದಾರೆ. ಇದಕ್ಕೆ ‘KrissMi’ ಎಂದು ಬರೆದು ಹಾರ್ಟ್ ಮಾರ್ಕ್

ಮಗುವಿನ ನಿರೀಕ್ಷೆಯಲ್ಲಿ ಕೃಷ್ಣ-ಮಿಲನಾ|ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ‘ಲವ್ ಮಾಕ್ಟೇಲ್’ ದಂಪತಿ Read More »