ಸಿನಿಮಾ

‘ಬಾಹುಬಲಿ-2’ ಬಾಕ್ಸಾಫೀಸ್ ಗಳಿಕೆಯ ದಾಖಲೆಯನ್ನು ಮುರಿದ ‘ಕಾಂತಾರಾ’| ಕರ್ನಾಟಕದಲ್ಲಿ 1 ಕೋಟಿ ಟಿಕೆಟ್ ಸೇಲ್

ಸಮಗ್ರ ಫಿಲಂಸ್: ಕರ್ನಾಟಕದಲ್ಲಿ ಒಂದು ಕೋಟಿ ಕಾಂತಾರಾ ಟಿಕೆಟ್ ಸೇಲ್ ಆಗಿದ್ದು ಈ ದಾಖಲೆ ವಿಚಾರವನ್ನು ಸ್ವತಃ ಹೊಂಬಾಳೆ ಮೂವಿಸ್ ಘೋಷಿಸಿದೆ. ಸ. 30 ರಂದು ತೆರೆಕಂಡ ಕಾಂತಾರ ಸಿನಿಮಾ ವಿಶ್ವದ ಸಿನಿಪ್ರೇಮಿಗಳನ್ನು ಸೆಳೆದಿದೆ. ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು ಎಲ್ಲ ಭಾಷೆಯಲ್ಲೂ ಹಲವು ಹೊಸ ದಾಖಲೆ ಬರೆಯುತ್ತ ಸಾಗಿದೆ. ಬಾಲಿವುಡ್ ನಲ್ಲಿ ರಾಮಸೇತು ಸಿನಿಮಾವನ್ನು ಮೀರಿಸುವ ಗಳಿಕೆ ಕಾಣ್ತಿರೋ ಕಾಂತಾರ ಈಗ ಕನ್ನಡದಲ್ಲಿ ಹೊಸ ದಾಖಲೆ ಬರೆದಿದೆ. ಈ ವಿಚಾರವನ್ನು ಸ್ವತಃ ಕಾಂತಾರ ಸಿನಿಮಾದ ಮೇಕರ್ಸ್ […]

‘ಬಾಹುಬಲಿ-2’ ಬಾಕ್ಸಾಫೀಸ್ ಗಳಿಕೆಯ ದಾಖಲೆಯನ್ನು ಮುರಿದ ‘ಕಾಂತಾರಾ’| ಕರ್ನಾಟಕದಲ್ಲಿ 1 ಕೋಟಿ ಟಿಕೆಟ್ ಸೇಲ್ Read More »

‘ಕಾಂತಾರ’ ಬಳಿಕ ಗಡಿದಾಟಲಿದ್ದಾನೆ ‘ಶಿವದೂತೆ ಗುಳಿಗೆ’ | ತುಳು ರಂಗಭೂಮಿಯ ಕ್ರಾಂತಿ ಕನ್ನಡ, ಹಿಂದಿಯಲ್ಲಿ ಪ್ರದರ್ಶನಕ್ಕೆ ಸಜ್ಜು!

ಸಮಗ್ರ ನ್ಯೂಸ್: ತುಳುನಾಡಿನ ದೈವಗಳಾದ ಪಂಜುರ್ಲಿ, ಗುಳಿಗನ ಕಥೆಯಾಧಾರಿತ “ಕಾಂತಾರ’ ಸಿನೆಮಾ ದೇಶ-ವಿದೇಶದಲ್ಲಿ ಮೋಡಿ ಮಾಡುತ್ತಿರುವ ಮಧ್ಯೆಯೇ, ಕರಾವಳಿಯಾದ್ಯಂತ ತುಳು ರಂಗಭೂಮಿಯಲ್ಲಿ ಹೊಸ ಕ್ರಾಂತಿ ಬರೆದ “ಶಿವದೂತೆ ಗುಳಿಗೆ’ ತುಳು ನಾಟಕ ಇದೀಗ ಕನ್ನಡ ಹಾಗೂ ಹಿಂದಿ ಭಾಷೆಯಲ್ಲಿ ಪ್ರದರ್ಶನಕ್ಕೆ ಅಣಿಯಾಗಿದೆ! “ಕಾಂತಾರ’ ಸಿನೆಮಾದಲ್ಲಿ 20 ನಿಮಿಷ ತುಳುನಾಡಿನ ಕಾರಣಿಕ ಶಕ್ತಿ ಗುಳಿಗನ ಪ್ರದರ್ಶನವಿದ್ದರೆ, ಶಿವದೂತೆ ಗುಳಿಗೆ ನಾಟಕವು ಪೂರ್ಣ ಗುಳಿಗನ ಕಥೆಯಾಧಾರಿತವಾಗಿದೆ. ವಿಶೇಷವೆಂದರೆ, ಕಾಂತಾರದಲ್ಲಿ “ಗುರುವ’ನಾಗಿ ಮಿಂಚಿರುವ ಕಿರುತೆರೆ ನಟ ಸ್ವರಾಜ್‌ ಶೆಟ್ಟಿ ಅವರೇ ಶಿವದೂತೆ

‘ಕಾಂತಾರ’ ಬಳಿಕ ಗಡಿದಾಟಲಿದ್ದಾನೆ ‘ಶಿವದೂತೆ ಗುಳಿಗೆ’ | ತುಳು ರಂಗಭೂಮಿಯ ಕ್ರಾಂತಿ ಕನ್ನಡ, ಹಿಂದಿಯಲ್ಲಿ ಪ್ರದರ್ಶನಕ್ಕೆ ಸಜ್ಜು! Read More »

ಹಿಂದಿ ಅಭಿಮಾನಿಗಳಿಗಾಗಿ ಸಿನಿಮಾ ಮಾಡ್ತಾರಾ‌ ರಿಷಬ್? ಬಾಲಿವುಡ್ ಬಗ್ಗೆ ‘ಕಾಂತಾರದ ಶಿವ’ನ ಅಭಿಪ್ರಾಯ ಏನು?

ಸಮಗ್ರ ನ್ಯೂಸ್: ಇತ್ತೀಚೆಗೆ ನಡೆದ ಸಂದರ್ಶನದಲ್ಲಿ ರಿಷಬ್ ಬಾಲಿವುಡ್ ಬಗ್ಗೆ ಮಾತನಾಡಿದ್ದು ನೇರವಾಗಿ ಹಿಂದಿ ಸಿನಿಮಾಗಳಲ್ಲಿ ಕೆಲಸ ಮಾಡುವುದಕ್ಕೆ ಇಷ್ಟವಿಲ್ಲ ಎಂದು ಹೇಳಿಕೊಂಡಿದ್ದಾರೆ. ‘ನಾನು ಕನ್ನಡ ಸಿನಿಮಾಗಳನ್ನು ಮಾಡಬೇಕು. ನಾನು ಹೆಮ್ಮೆಯ ಕನ್ನಡಿಗ. ಕನ್ನಡ ಚಿತ್ರರಂಗ ಮತ್ತು ಕನ್ನಡ ಜನತೆಯಿಂದ ನಾನು ಇಂದು ಈ ಮಟ್ಟದಲ್ಲಿ ಹೆಸರು ಮಾಡಿರುವುದು. ಒಂದು ಸಿನಿಮಾ ಹಿಟ್ ಆಗಿದೆ ಎಂದ ಮಾತ್ರಕ್ಕೆ ನನ್ನ ಸ್ನೇಹಿತರು ಮತ್ತು ಕುಟುಂಬಸ್ಥರು ಬದಲಾಗುವುದಿಲ್ಲ. ನಮ್ಮ ಕೋರ್ ಕನ್ನಡ ಸಿನಿಮಾರಂಗದಲ್ಲಿ ಉಳಿಯುತ್ತದೆ’ ಎಂದು ಇಂಡಿಯಾ ಎಕ್ಸಪ್ರೆಸ್‌ನಲ್ಲಿ ರಿಷಬ್

ಹಿಂದಿ ಅಭಿಮಾನಿಗಳಿಗಾಗಿ ಸಿನಿಮಾ ಮಾಡ್ತಾರಾ‌ ರಿಷಬ್? ಬಾಲಿವುಡ್ ಬಗ್ಗೆ ‘ಕಾಂತಾರದ ಶಿವ’ನ ಅಭಿಪ್ರಾಯ ಏನು? Read More »

ಕನ್ನಡದ ಹಿರಿಯ ನಟ ಲೋಹಿತಾಶ್ವ ವಿಧಿವಶ

ಸಮಗ್ರ ನ್ಯೂಸ್: ಕನ್ನಡದ ಹಿರಿಯ ನಟ ಲೋಹಿತಾಶ್ವ ಅವರು ವಿಧಿವಶರಾಗಿದ್ದಾರೆ, ಇಂದು ಮಧ್ಯಾಹ್ನ ಅವರು ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ ಎಂದು ತಿಳಿದುಬಂದಿದೆ. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಅಕ್ಟೋಬರ್​ 4ರಂದು ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ಇಂದು ವಿಧಿವಶರಾಗಿದ್ದಾರೆ. ಮೂಲತಃ ತುಮಕೂರಿನ ತೊಂಡಗೆರೆ ಗ್ರಾಮದವರಾದ ಲೋಹಿತಾಶ್ವ ಅವರು 500ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಆಂಗ್ಲ ಪ್ರಾಧ್ಯಾಪಕಾರಾಗಿ ಅವರು ತಮ್ಮನ್ನು ಗುರುತಿಸಿಕೊಂಡಿದ್ದರು. ಇವರ ಪುತ್ರ ಶರತ್ ಲೋಹಿತಾಶ್ವ ಅವರೂ

ಕನ್ನಡದ ಹಿರಿಯ ನಟ ಲೋಹಿತಾಶ್ವ ವಿಧಿವಶ Read More »

ಸಾನಿಯಾ- ಶೋಹೆಬ್ ಸಂಸಾರದಲ್ಲಿ ಒಡಕು? ಮುರಿದು ಬೀಳುತ್ತಾ ಮೂಗುತಿ ಸುಂದರಿಯ ಪ್ರೇಮಸೌಧ

ಸಮಗ್ರ ನ್ಯೂಸ್: ಭಾರತೀಯ ಟೆನ್ನಿಸ್​ ತಾರೆ ಸಾನಿಯಾ ಮಿರ್ಜಾ ಮತ್ತು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶೋಹೆಬ್​ ಮಲಿಕ್ ವೈವಾಹಿಕ ಜೀವನದಲ್ಲಿ ಬಿರುಕು ಮೂಡಿದೆ ಎಂಬ ಸುದ್ದಿ ನಿನ್ನೆಯಿಂದ ಹರಿದಾಡುತ್ತಿದೆ. ಇದರ ಬೆನ್ನಲ್ಲೇ ಸಾನಿಯಾ ಪೋಸ್ಟ್​ ಮಾಡಿರುವ ಇನ್​ಸ್ಟಾಗ್ರಾಂ ಸ್ಟೋರಿ ವದಂತಿಗೆ ಮತ್ತಷ್ಟು ಪುಷ್ಟಿ ನೀಡಿದ್ದು, ಸ್ಟಾರ್​ ದಂಪತಿ ನಡುವೆ ಎಲ್ಲವೂ ಸರಿಯಿಲ್ಲ ಎಂಬ ಅನುಮಾನ ಗಟ್ಟಿಯಾಗಿದೆ.​ ಅವಿನಾಶ್​ ಆರ್ಯನ್​ ಎಂಬುವರ ಸಾನಿಯಾರ ಇನ್​ಸ್ಟಾಗ್ರಾಂ ಸ್ಟೋರಿಯನ್ನು ಟ್ವಿಟರ್​ನಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ಅದರಲ್ಲಿ ಬರೆದಿರುವ ಸಾಲುಗಳ ಸಾರಾಂಶ ಈ ಮುಂದಿನಂತಿದೆ.

ಸಾನಿಯಾ- ಶೋಹೆಬ್ ಸಂಸಾರದಲ್ಲಿ ಒಡಕು? ಮುರಿದು ಬೀಳುತ್ತಾ ಮೂಗುತಿ ಸುಂದರಿಯ ಪ್ರೇಮಸೌಧ Read More »

ಹೆಣ್ಣು ಮಗುವಿಗೆ ‌ಜನ್ಮ ನೀಡಿದ ನಟಿ‌ ಆಲಿಯಾ‌‌ ಭಟ್

ಸಮಗ್ರ ನ್ಯೂಸ್: ಬಾಲಿವುಡ್ ನಟಿ‌ ಆಲಿಯಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಮೂಲಕ ಕಪೂರ್‌ ಫ್ಯಾಮಿಲಿಯಲ್ಲಿ ಸಂಭ್ರಮ ಮನೆ ಮಾಡಿದೆ. ಮುಂಬೈನ ಗಿರ್ಗಾಂವ್ನಲ್ಲಿರುವ ಎಚ್.ಎನ್.ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯಲ್ಲಿ ಆಲಿಯಾ ಮಗುವಿಗೆ ಜನ್ಮ ನೀಡಿದ್ದಾರೆ. ಆಲಿಯಾ-ರಣಬೀರ್ ಜೂನ್‌ ನಲ್ಲಿ ತಾವು ತಂದೆ – ತಾಯಿಯಾಗಲಿದ್ದೇವೆ ಎನ್ನುವ ಸಂತಸದ ವಿಷಯವನ್ನು ಫೋಟೋ ಹಂಚಿಕೊಂಡು ಹೇಳಿದ್ದರು. ಇದೀಗ‌ ಕಪೂರ್ ಕುಟುಂಬದಲ್ಲಿ ಸಂತಸ‌ ಮನೆ ಮಾಡಿದ್ದು ಎಲ್ಲೆಡೆಯಿಂದ ಶುಭಾಶಯದ‌ ಮಹಾಪೂರವೇ ಹರಿದುಬರುತ್ತಿದೆ.

ಹೆಣ್ಣು ಮಗುವಿಗೆ ‌ಜನ್ಮ ನೀಡಿದ ನಟಿ‌ ಆಲಿಯಾ‌‌ ಭಟ್ Read More »

ನಟ ದಿ. ಪುನಿತ್ ರಾಜ್ ಕುಮಾರ್ ಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರಧಾನ|

ಸಮಗ್ರ ನ್ಯೂಸ್: ನಟ ದಿ. ಡಾ.ಪುನೀತ್‌ ರಾಜ್‌ಕುಮಾರ್‌ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಈ ವೇಳೆ ಪ್ರಶಸ್ತಿಯನ್ನು ನಟ, ನಿರ್ಮಾಪಕ, ಗಾಯಕ ಕರ್ನಾಟಕ ರತ್ನ ಪುನೀತ್‌ ರಾಜ್‌ ಅವರ ಪತ್ನಿ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಅವರಿಗೆ ನೀಡಿ ಗೌರವಿಸಲಾಯಿತು. ಇದೇ ವೇಳೆ ಸಮಾರಂಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಡಾ. ರಾಜ್‌ಕುಮಾರ್‌ ಕುಟುಂಬದ ಸದ್ಯಸರು, ಖ್ಯಾತ ನಟರಾದ ರಜಿನಿಕಾಂತ್‌, ಜ್ಯೂ.ಎನ್‌ಟಿಆರ್‌ ಸೇರಿದಂತೆ ರಾಜಕೀಯ ನಾಯಕರುಗಳು ಭಾಗವಹಿಸಿದ್ದರು. ಇದೇ ವೇಳೆ ಕಾರ್ಯಕ್ರಮಕ್ಕೆ ಸಾವಿರಾರು ಜನತೆ ಆಗಮಿಸಿ ನೆಚ್ಚಿನ

ನಟ ದಿ. ಪುನಿತ್ ರಾಜ್ ಕುಮಾರ್ ಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರಧಾನ| Read More »

‘ಗಾಡ್ ಫಾದರ್’ ನ ಮೀರಿಸಿದ ‘ಕಾಂತಾರ’ ತೆಲುಗು

ಸಮಗ್ರ ನ್ಯೂಸ್: ತೆಲುಗಿಗೆ ಡಬ್ಬಿಂಗ್ ಆಗಿ ಅಲ್ಲಿ ಸೂಪರ್ ಹಿಟ್ ಪ್ರದರ್ಶನ ಕಾಣ್ತಿರುವ ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಕಾಂತಾರ ಸಿನಿಮಾ ತೆಲುಗಿನ ಮೆಗಾ ಸ್ಟಾರ್ ಚಿರಂಜೀವಿ ಅವರ ಗಾಡ್ ಫಾದರ್ ಸಿನಿಮಾವನ್ನೂ ಮೀರಿಸಿದೆ. ಕಾಂತಾರಾ ಸೆಪ್ಟೆಂಬರ್ 30 ರಂದು ಥಿಯೇಟರ್‌ ಗಳಲ್ಲಿ ಬಿಡುಗಡೆಯಾಯಿತು ಮತ್ತು ಅಂದಿನಿಂದ ಬಾಕ್ಸ್ ಆಫೀಸ್‌ ನಲ್ಲಿ ಪ್ರಾಬಲ್ಯ ಸಾಧಿಸುತ್ತಿದೆ. ಚಿತ್ರವು ಇತರ ಭಾಷೆಗಳಲ್ಲಿಯೂ ಬಿಡುಗಡೆಯಾಗಲು ಹೆಚ್ಚಿನ ಬೇಡಿಕೆಯ ಕಾರಣ, ಚಿತ್ರವನ್ನು ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಡಬ್ ಮಾಡಿ

‘ಗಾಡ್ ಫಾದರ್’ ನ ಮೀರಿಸಿದ ‘ಕಾಂತಾರ’ ತೆಲುಗು Read More »

‘ವರಾಹ ರೂಪಂ’ ಹಾಡನ್ನು ಬಳಸಿಕೊಳ್ಳಬಹುದು, ಆದರೆ…

ಸಮಗ್ರ ನ್ಯೂಸ್: ಕಾಂತಾರ ಸಿನಿಮಾದ ಅಬ್ಬರ ಎಲ್ಲೆಡೆ ಮುಂದುವರೆದಿದೆ. ಕನ್ನಡ, ಮಲಯಾಳಂ, ತೆಲುಗು, ತಮಿಳು, ಹಿಂದಿ ಸೇರಿದಂತೆ ಎಲ್ಲಾ ಭಾಷೆಯ ಬಾಕ್ಸ್‌ ಆಫೀಸ್‌ನಲ್ಲಿ ಕಾಂತಾರ ಸದ್ದು ಮುಂದುವರೆದಿದೆ. ಈ ನಡುವೆ ಕಾಂತಾರ ಸಿನಿಮಾದ ಜನಪ್ರಿಯ ‘ವರಾಹ ರೂಪಂ’ ಹಾಡಿಗೆ ವಿವಾದ ಸುತ್ತಿಕೊಂಡಿತ್ತು. ಈ ಕುರಿತು ಕೇರಳದ ಕೋರ್ಟ್ ಹಾಡನ್ನು ಬಳಸದಂತೆ ತಡೆಯಾಜ್ಞೆ ನೀಡಿತ್ತು. ಆದರೆ ಇದೀಗ ಕೋರ್ಟ್ ಕದ ತಟ್ಟಿರುವ ‘ತೈಕುಡಂ ಬ್ರಿಡ್ಜ್’ ಬ್ಯಾಂಡ್ ತಂದ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದೆ. ಇದು ಕಾಂತಾರ ತಂಡಕ್ಕೆ ಸ್ವಲ್ಪಮಟ್ಟಿಗೆ ನೆಮ್ಮದಿ

‘ವರಾಹ ರೂಪಂ’ ಹಾಡನ್ನು ಬಳಸಿಕೊಳ್ಳಬಹುದು, ಆದರೆ… Read More »

‘ಕಾಂತಾರ’ ಕ್ಕೆ ಬಿಗ್ ಶಾಕ್| ವರಾಹರೂಪಂ ಹಾಡು ಬಳಸದಂತೆ ಕೇರಳ‌ ಕೋರ್ಟ್ ನಿಂದ ತಡೆಯಾಜ್ಞೆ

ಸಮಗ್ರ ನ್ಯೂಸ್: ವಿಶ್ವದೆಲ್ಲೆಡೆ ಕಾಂತಾರ ಸಿನಿಮಾದ ಅಬ್ಬರ ಮುಂದುವರೆದಿದೆ. ಕನ್ನಡ, ಮಲಯಾಳಂ, ತೆಲುಗು, ತಮಿಳು, ಹಿಂದಿ ಸೇರಿದಂತೆ ಎಲ್ಲಾ ಭಾಷೆಯ ಬಾಕ್ಸ್‌ ಆಫೀಸ್‌ನಲ್ಲಿ ಕಾಂತಾರ ಸದ್ದು ಮುಂದುವರೆದಿದೆ. ಈ ನಡುವೆ ಕಾಂತಾರ ಸಿನಿಮಾದ ಜನಪ್ರಿಯ ವರಾಹ ರೂಪಂ ಹಾಡಿಗೆ ವಿವಾದ ಸುತ್ತಿಕೊಂಡಿದ್ದು, ಸದ್ಯ ಕೇರಳದ ನ್ಯಾಯಾಲಯವೊಂದು ಹಾಡು ಬಳಸದಂತೆ ತಡೆಯಾಜ್ಞೆ ನೀಡಿದೆ. ‘ವರಾಹರೂಪಂ’ ಹಾಡನ್ನು ಕಾಂತಾರ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಅವರು ಮಲಯಾಳಂ ಭಾಷೆಯ ‘ನವರಸಂ..’ ಹಾಡಿನಿಂದ ಇದನ್ನು ಕಾಪಿ ಮಾಡಿದ್ದಾರೆ ಎಂಬ ಆರೋಪ ಎದುರಾಗಿತ್ತು.

‘ಕಾಂತಾರ’ ಕ್ಕೆ ಬಿಗ್ ಶಾಕ್| ವರಾಹರೂಪಂ ಹಾಡು ಬಳಸದಂತೆ ಕೇರಳ‌ ಕೋರ್ಟ್ ನಿಂದ ತಡೆಯಾಜ್ಞೆ Read More »