ಸಿನಿಮಾ

ನಟ ದಿ. ಪುನಿತ್ ರಾಜ್ ಕುಮಾರ್ ಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರಧಾನ|

ಸಮಗ್ರ ನ್ಯೂಸ್: ನಟ ದಿ. ಡಾ.ಪುನೀತ್‌ ರಾಜ್‌ಕುಮಾರ್‌ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಈ ವೇಳೆ ಪ್ರಶಸ್ತಿಯನ್ನು ನಟ, ನಿರ್ಮಾಪಕ, ಗಾಯಕ ಕರ್ನಾಟಕ ರತ್ನ ಪುನೀತ್‌ ರಾಜ್‌ ಅವರ ಪತ್ನಿ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಅವರಿಗೆ ನೀಡಿ ಗೌರವಿಸಲಾಯಿತು. ಇದೇ ವೇಳೆ ಸಮಾರಂಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಡಾ. ರಾಜ್‌ಕುಮಾರ್‌ ಕುಟುಂಬದ ಸದ್ಯಸರು, ಖ್ಯಾತ ನಟರಾದ ರಜಿನಿಕಾಂತ್‌, ಜ್ಯೂ.ಎನ್‌ಟಿಆರ್‌ ಸೇರಿದಂತೆ ರಾಜಕೀಯ ನಾಯಕರುಗಳು ಭಾಗವಹಿಸಿದ್ದರು. ಇದೇ ವೇಳೆ ಕಾರ್ಯಕ್ರಮಕ್ಕೆ ಸಾವಿರಾರು ಜನತೆ ಆಗಮಿಸಿ ನೆಚ್ಚಿನ […]

ನಟ ದಿ. ಪುನಿತ್ ರಾಜ್ ಕುಮಾರ್ ಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರಧಾನ| Read More »

‘ಗಾಡ್ ಫಾದರ್’ ನ ಮೀರಿಸಿದ ‘ಕಾಂತಾರ’ ತೆಲುಗು

ಸಮಗ್ರ ನ್ಯೂಸ್: ತೆಲುಗಿಗೆ ಡಬ್ಬಿಂಗ್ ಆಗಿ ಅಲ್ಲಿ ಸೂಪರ್ ಹಿಟ್ ಪ್ರದರ್ಶನ ಕಾಣ್ತಿರುವ ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಕಾಂತಾರ ಸಿನಿಮಾ ತೆಲುಗಿನ ಮೆಗಾ ಸ್ಟಾರ್ ಚಿರಂಜೀವಿ ಅವರ ಗಾಡ್ ಫಾದರ್ ಸಿನಿಮಾವನ್ನೂ ಮೀರಿಸಿದೆ. ಕಾಂತಾರಾ ಸೆಪ್ಟೆಂಬರ್ 30 ರಂದು ಥಿಯೇಟರ್‌ ಗಳಲ್ಲಿ ಬಿಡುಗಡೆಯಾಯಿತು ಮತ್ತು ಅಂದಿನಿಂದ ಬಾಕ್ಸ್ ಆಫೀಸ್‌ ನಲ್ಲಿ ಪ್ರಾಬಲ್ಯ ಸಾಧಿಸುತ್ತಿದೆ. ಚಿತ್ರವು ಇತರ ಭಾಷೆಗಳಲ್ಲಿಯೂ ಬಿಡುಗಡೆಯಾಗಲು ಹೆಚ್ಚಿನ ಬೇಡಿಕೆಯ ಕಾರಣ, ಚಿತ್ರವನ್ನು ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಡಬ್ ಮಾಡಿ

‘ಗಾಡ್ ಫಾದರ್’ ನ ಮೀರಿಸಿದ ‘ಕಾಂತಾರ’ ತೆಲುಗು Read More »

‘ವರಾಹ ರೂಪಂ’ ಹಾಡನ್ನು ಬಳಸಿಕೊಳ್ಳಬಹುದು, ಆದರೆ…

ಸಮಗ್ರ ನ್ಯೂಸ್: ಕಾಂತಾರ ಸಿನಿಮಾದ ಅಬ್ಬರ ಎಲ್ಲೆಡೆ ಮುಂದುವರೆದಿದೆ. ಕನ್ನಡ, ಮಲಯಾಳಂ, ತೆಲುಗು, ತಮಿಳು, ಹಿಂದಿ ಸೇರಿದಂತೆ ಎಲ್ಲಾ ಭಾಷೆಯ ಬಾಕ್ಸ್‌ ಆಫೀಸ್‌ನಲ್ಲಿ ಕಾಂತಾರ ಸದ್ದು ಮುಂದುವರೆದಿದೆ. ಈ ನಡುವೆ ಕಾಂತಾರ ಸಿನಿಮಾದ ಜನಪ್ರಿಯ ‘ವರಾಹ ರೂಪಂ’ ಹಾಡಿಗೆ ವಿವಾದ ಸುತ್ತಿಕೊಂಡಿತ್ತು. ಈ ಕುರಿತು ಕೇರಳದ ಕೋರ್ಟ್ ಹಾಡನ್ನು ಬಳಸದಂತೆ ತಡೆಯಾಜ್ಞೆ ನೀಡಿತ್ತು. ಆದರೆ ಇದೀಗ ಕೋರ್ಟ್ ಕದ ತಟ್ಟಿರುವ ‘ತೈಕುಡಂ ಬ್ರಿಡ್ಜ್’ ಬ್ಯಾಂಡ್ ತಂದ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದೆ. ಇದು ಕಾಂತಾರ ತಂಡಕ್ಕೆ ಸ್ವಲ್ಪಮಟ್ಟಿಗೆ ನೆಮ್ಮದಿ

‘ವರಾಹ ರೂಪಂ’ ಹಾಡನ್ನು ಬಳಸಿಕೊಳ್ಳಬಹುದು, ಆದರೆ… Read More »

‘ಕಾಂತಾರ’ ಕ್ಕೆ ಬಿಗ್ ಶಾಕ್| ವರಾಹರೂಪಂ ಹಾಡು ಬಳಸದಂತೆ ಕೇರಳ‌ ಕೋರ್ಟ್ ನಿಂದ ತಡೆಯಾಜ್ಞೆ

ಸಮಗ್ರ ನ್ಯೂಸ್: ವಿಶ್ವದೆಲ್ಲೆಡೆ ಕಾಂತಾರ ಸಿನಿಮಾದ ಅಬ್ಬರ ಮುಂದುವರೆದಿದೆ. ಕನ್ನಡ, ಮಲಯಾಳಂ, ತೆಲುಗು, ತಮಿಳು, ಹಿಂದಿ ಸೇರಿದಂತೆ ಎಲ್ಲಾ ಭಾಷೆಯ ಬಾಕ್ಸ್‌ ಆಫೀಸ್‌ನಲ್ಲಿ ಕಾಂತಾರ ಸದ್ದು ಮುಂದುವರೆದಿದೆ. ಈ ನಡುವೆ ಕಾಂತಾರ ಸಿನಿಮಾದ ಜನಪ್ರಿಯ ವರಾಹ ರೂಪಂ ಹಾಡಿಗೆ ವಿವಾದ ಸುತ್ತಿಕೊಂಡಿದ್ದು, ಸದ್ಯ ಕೇರಳದ ನ್ಯಾಯಾಲಯವೊಂದು ಹಾಡು ಬಳಸದಂತೆ ತಡೆಯಾಜ್ಞೆ ನೀಡಿದೆ. ‘ವರಾಹರೂಪಂ’ ಹಾಡನ್ನು ಕಾಂತಾರ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಅವರು ಮಲಯಾಳಂ ಭಾಷೆಯ ‘ನವರಸಂ..’ ಹಾಡಿನಿಂದ ಇದನ್ನು ಕಾಪಿ ಮಾಡಿದ್ದಾರೆ ಎಂಬ ಆರೋಪ ಎದುರಾಗಿತ್ತು.

‘ಕಾಂತಾರ’ ಕ್ಕೆ ಬಿಗ್ ಶಾಕ್| ವರಾಹರೂಪಂ ಹಾಡು ಬಳಸದಂತೆ ಕೇರಳ‌ ಕೋರ್ಟ್ ನಿಂದ ತಡೆಯಾಜ್ಞೆ Read More »

ನಂದಿನಿ ಹಾಲಿನ ಪ್ಯಾಕೇಟ್ ನಲ್ಲಿ ಗಂಧದಗುಡಿ| ವಿಶಿಷ್ಟವಾಗಿ ಅಪ್ಪುಗೆ ಸಫೋರ್ಟ್ ಮಾಡಿದ ಕೆಎಂಎಫ್

ಸಮಗ್ರ ನ್ಯೂಸ್: ಗಂಧದಗುಡಿ ಸಿನಿಮಾಗೆ ಕೆಎಂಎಫ್ ತನ್ನ ಬೆಂಬಲ ನೀಡಿದೆ. ಈ ಮೂಲಕ ಬ್ರಾಂಡ್ ಅಂಬಾಸಿಡರ್ ಆಗಿದ್ದ ಪುನೀತ್ ರಾಜ್​ಕುಮಾರ್ ಅವರಿಗೆ ಗೌರವ ಸಲ್ಲಿಸಿದೆ. ನಂದಿನಿ ಹಾಲಿನ ಪ್ಯಾಕೇಟ್ ನಲ್ಲಿ ಗಂಧದಗುಡಿ ಹೆಸರನ್ನು ಮುದ್ರಿಸಿದ್ದು, ಕೆಎಂಎಫ್ ವಿಭಿನ್ನವಾಗಿ ಗೌರವ ತೋರಿದೆ. ಮುಂದಿನ 15 ದಿನಗಳ ಕಾಲ ಹಾಲಿನ ಪ್ಯಾಕೆಟ್ ಮೇಲೆ ಗಂಧದಗುಡಿ ಹೆಸರನ್ನು ಮುದ್ರಿಸಲು KMF ನಿರ್ಧರಿಸಿದೆ. ಕರ್ನಾಟಕ ರತ್ನ ನೀಡುತ್ತಿರುವ ಸಲುವಾಗಿಯೂ ಈ ರೀತಿ ಗೌರವಿಸಲು ಕೆಎಂಎಫ್ ನಿರ್ಧರಿಸಲಾಗಿದೆ. ಪುನೀತ್ ರಾಜ್​ಕುಮಾರ್ ಈ ಹಿಂದೆ KMFನ

ನಂದಿನಿ ಹಾಲಿನ ಪ್ಯಾಕೇಟ್ ನಲ್ಲಿ ಗಂಧದಗುಡಿ| ವಿಶಿಷ್ಟವಾಗಿ ಅಪ್ಪುಗೆ ಸಫೋರ್ಟ್ ಮಾಡಿದ ಕೆಎಂಎಫ್ Read More »

ಇಂದು(ಅ.28) ಗಂಧದ ಗುಡಿ‌ ರಿಲೀಸ್| ಅಪ್ಫು ಅಭಿಮಾನಿಗಳ ಮುಗಿಲು ಮುಟ್ಟಿದ ಹರ್ಷೋದ್ಗಾರ

ಸಮಗ್ರ ನ್ಯೂಸ್: ರಾಜ್ಯಾದ್ಯಂತ ಪುನೀತ್‌ ರಾಜ್‌ಕುಮಾರ್‌ ನಟನೆಯ ‘ಗಂಧದ ಗುಡಿ’ ಇಂದು ಬಿಡುಗಡೆಯಾಗುತ್ತಿದೆ. ಈಗಾಗಲೇ ಬೆಂಗಳೂರಿನ ಥಿಯೇಟರ್‌ಗಳಲ್ಲಿ ಫಸ್ಟ್‌ ಶೋ ಆರಂಭವಾಗಿದೆ. ಎಲ್ಲರೂ ಗಂಧದ ಗುಡಿ ಸಾಕ್ಷ್ಯಚಿತ್ರ ನೋಡಲು ಕಾತುರದಿಂದ ಕಾಯುತ್ತಿದ್ದಾರೆ. ಎಲ್ಲಾ ಥಿಯೇಟರ್‌ಗಳ ಎದುರು ಪುನೀತ್‌ ರಾಜ್‌ಕುಮಾರ್‌ ಅವರ ಕಟೌಟ್‌ಗಳು ರಾರಾಜಿಸುತ್ತಿದ್ದು, ಅಭಿಮಾನಿಗಳು ಅವುಗಳಿಗೆ ಹಾಲಿನ ಅಭಿಷೇಕ ಮಾಡುತ್ತಿದ್ದಾರೆ. ಕರ್ನಾಟಕದಲ್ಲಿ 225ಕ್ಕೂಹೆಚ್ಚು ಸ್ಕ್ರೀನ್‌ಗಳಲ್ಲಿ ಚಿತ್ರ ರಿಲೀಸ್‌ ಆಗಲಿದೆ.

ಇಂದು(ಅ.28) ಗಂಧದ ಗುಡಿ‌ ರಿಲೀಸ್| ಅಪ್ಫು ಅಭಿಮಾನಿಗಳ ಮುಗಿಲು ಮುಟ್ಟಿದ ಹರ್ಷೋದ್ಗಾರ Read More »

ವಿವಾದದ ಸುಳಿಯಲ್ಲಿ ಧನಂಜಯ್ ನಟನೆಯ ‘ಹೆಡ್ ಬುಷ್’| ಇಂದು ವಾಣಿಜ್ಯ ಮಂಡಳಿ ಸಮ್ಮುಖದಲ್ಲಿ ಮಾತುಕತೆ

ಸಮಗ್ರ ನ್ಯೂಸ್: ಈಗಾಗಲೇ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಧನಂಜಯ್ ನಟನೆಯ ‘ಹೆಡ್ ಬುಷ್’ ಸಿನಿಮಾದಲ್ಲಿ ವೀರಭದ್ರ ದೇವರ ವೀರಗಾಸೆಗೆ ಅವಮಾನ ಮಾಡಲಾಗಿದೆ ಎಂದು ವೀರಗಾಸೆ ಕಲಾವಿದರು ಆಕ್ಷೇಪ ವ್ಯಕ್ತ ಪಡಿಸಿದ್ದಾರೆ. ಸಾಹಸ ಸನ್ನಿವೇಶದಲ್ಲಿ ವೀರಗಾಸೆ ಕಲಾವಿದರಿಗೆ ಒದೆಯಲಾಗಿದೆ. ಅದು ಕಲೆ ಮತ್ತು ವೀರಭದ್ರ ದೇವರಿಗೆ ಮಾಡಿದ ಅಪಮಾನ ಎಂದು ಕಲಾವಿದರು ಆಕ್ಷೇಪಿಸಿದ್ದಾರೆ. ಚಿತ್ರದಲ್ಲಿ ಬೇರೆ ರೀತಿಯ ಕರಗ ತೋರಿಸಿದ್ದಾರೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಬಾಮಾ ಹರೀಶ್ ತಿಳಿಸಿದ್ದಾರೆ. ಇಂದು ಬೆಳಗ್ಗೆ 11:30 ಕ್ಕೆ

ವಿವಾದದ ಸುಳಿಯಲ್ಲಿ ಧನಂಜಯ್ ನಟನೆಯ ‘ಹೆಡ್ ಬುಷ್’| ಇಂದು ವಾಣಿಜ್ಯ ಮಂಡಳಿ ಸಮ್ಮುಖದಲ್ಲಿ ಮಾತುಕತೆ Read More »

ರಿಷಬ್ ಶೆಟ್ಟಿಗೆ ಹ್ಯಾಟ್ಸ್ ಅಫ್ ಹೇಳಿದ ಸೂಪರ್ ಸ್ಟಾರ್ ರಜನಿಕಾಂತ್….!!

ಬೆಂಗಳೂರು: ಕಾಂತಾರ ಸಿನೆಮಾ ಮೋಡಿ ಮತ್ತೆ ಮುಂದುವರೆದಿದ್ದು, ಪ್ರಖ್ಯಾತ ನಟ ನಟಿಯರು ಸಿನೆಮಾ ನೋಡಿ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಇದೀಗ ಸೂಪರ್ ಸ್ಟಾರ್ ರಜನಿಕಾಂತ್ ಕಾಂತಾರ ಸಿನೆಮಾವನ್ನು ನೋಡಿ ಟ್ವೀಟರ್ ನಲ್ಲಿ ತಮ್ಮ ಅನಿಸಿಕೆಯನ್ನು ಹಂಚಿಕೊಂಡಿದ್ದಾರೆ. ಗೊತ್ತಿರುವುದಕ್ಕಿಂತ ಗೊತ್ತಿರದ ವಿಷಯಗಳೇ ಜಾಸ್ತಿ ಆದರೆ ಕಾಂತಾರ ಸಿನೆಮಾದಲ್ಲಿ ಹೇಳಿರುವ ವಿಷಯಗಳನ್ನು ಮತ್ತೆ ಯಾರೂ ಈ ರೀತಿಯಾಗಿ ಯಾರೂ ಹೇಳುವುದಿಲ್ಲ ಎಂದಿದ್ದಾರೆ. ಹೊಂಬಾಳೆ ಫಿಲ್ಮ್ಸ್ ನಡಿ ಮೂಡಿಬಂದ ಕಾಂತಾರ ಚಿತ್ರ ನೋಡಿ ನನ್ನ ಮೈನವಿರೇಳಿತು ಎಂದ ಅವರು ಬರಹಗಾರನಾಗಿ ನಿರ್ದೇಶಕನಾಗಿ

ರಿಷಬ್ ಶೆಟ್ಟಿಗೆ ಹ್ಯಾಟ್ಸ್ ಅಫ್ ಹೇಳಿದ ಸೂಪರ್ ಸ್ಟಾರ್ ರಜನಿಕಾಂತ್….!! Read More »

ಕಾಂತಾರದ ವಿರುದ್ದ ಕಾನೂನು ಸಮರಕ್ಕೆ ಸಿದ್ಧತೆ| ‘ವರಾಹರೂಪಂ’ ಮೇಲೆ ಕೃತಿಚೌರ್ಯದ ಕರಿನೆರಳು

ಸಮಗ್ರ ನ್ಯೂಸ್: ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸಿರುವ ‘ಕಾಂತಾರ’ ಭರ್ಜರಿ ಯಶಸ್ಸು ಕಂಡಿದ್ದು, ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.ಹೀಗಿರುವಾಗಲೇ ‘ಕಾಂತಾರ’ ಚಿತ್ರದ ‘ವರಾಹ ರೂಪಂ’ ಹಾಡಿನ ಬಗ್ಗೆ ಕಾನೂನು ಹೋರಾಟಕ್ಕೆ ಕೇರಳದ ತೈಕುಡಂ ಬ್ರಿಗೇಡ್ ಸಂಸ್ಥೆ ಮುಂದಾಗಿದೆ. ಮಲಯಾಳಂ ‘ನವರಸಂ’ ಹಾಡು ಹೋಲುವಂತೆ ‘ವರಾಹ ರೂಪಂ’ ಹಾಡಿನ ಸಾಮ್ಯತೆ ಇದೆ. 5 ವರ್ಷಗಳ ಹಿಂದೆ ‘ನವರಸಂ’ ಆಲ್ಬಂ ಸಾಂಗ್ ಬಿಡುಗಡೆಯಾಗಿದ್ದು, ಅದರ ಟ್ಯೂನ್ ಕಾಪಿ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಇದು ಕಾಪಿ ರೈಟ್ ಉಲ್ಲಂಘನೆಯಾಗಿದ್ದು, ‘ಕಾಂತಾರ’ ಚಿತ್ರತಂಡದ

ಕಾಂತಾರದ ವಿರುದ್ದ ಕಾನೂನು ಸಮರಕ್ಕೆ ಸಿದ್ಧತೆ| ‘ವರಾಹರೂಪಂ’ ಮೇಲೆ ಕೃತಿಚೌರ್ಯದ ಕರಿನೆರಳು Read More »

ದೈವಾರಾಧನೆ ಕುರಿತು ಚೇತನ್ ಹೇಳಿಕೆ ವಿವಾದ| ಪಂಜುರ್ಲಿಗೆ ಮೊತೆ ಹೋಗಲು ನಿರ್ಧರಿಸಿದ ದೈವನರ್ತಕರು|

ಸಮಗ್ರ ನ್ಯೂಸ್: ದೈವಾರಾಧನೆ ಕುರಿತಂತೆ ನಟ ಚೇತನ್ ಕುಮಾರ್ ಆಡಿರುವ ಮಾತು ಭಾರೀ ವಿವಾದಕ್ಕೆ ಕಾರಣವಾಗಿದೆ. ಭೂತಕೋಲ, ದೈವಾರಾಧನೆ ಹಿಂದೂ ಸಂಸ್ಕೃತಿ ಎನ್ನುವುದು ನಿಜವಲ್ಲ ಎಂದಿರುವ ಚೇತನ್, ವೈದಿಕ ಬ್ರಾಹ್ಮಣ್ಯದ ಹಿಂದೂ ಧರ್ಮಕ್ಕಿಂತ ಹಿಂದಿನಿಂದ ಇದೆ ಎಂದು ಹೇಳಿದ್ದರು. ಚೇತನ್ ಮಾತಿಗೆ ಮಂಗಳೂರು ಸೇರಿದಂತೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಈಗಾಗಲೇ ಹಿಂದೂ ಪರ ಸಂಘಟನೆಗಳಿಂದ ಚೇತನ್ ವಿರುದ್ಧ ದೂರು ದಾಖಲಾಗಿದೆ. ಇದೀಗ ಚೇತನ್ ಮಾತಿಗೆ ಆಕ್ರೋಶ ವ್ಯಕ್ತಪಡಿಸಿರುವ ದೈವ ನರ್ತಕರು ಚೇತನ್ ವಿರುದ್ಧ ಪಂಜುರ್ಲಿ (Panjurli) ದೈವಕ್ಕೇ

ದೈವಾರಾಧನೆ ಕುರಿತು ಚೇತನ್ ಹೇಳಿಕೆ ವಿವಾದ| ಪಂಜುರ್ಲಿಗೆ ಮೊತೆ ಹೋಗಲು ನಿರ್ಧರಿಸಿದ ದೈವನರ್ತಕರು| Read More »