ಚುಡಾಯಿಸುತ್ತಿದ್ದವರು ನಾಚಿಸುವಂತೆ ಬೆಳೆದ ‘ಅಭಿನಯ ಶಾರದೆ’| ದುಂಡುಮಲ್ಲಿಗೆ ಕಮಲಾಕುಮಾರಿ ಜಯಂತಿ ಆದ ಕಥೆ|
ಬೆಂಗಳೂರು: ದುಂಡಗೆ, ದಪ್ಪಗಿದ್ದ ಬಾಲಕಿಯನ್ನು ಸಹಪಾಠಿಗಳು ಚುಡಾಯಿಸುತ್ತಿದ್ದರು. ಆದರೂ ಆತ್ಮವಿಶ್ವಾಸ ಕುಗ್ಗಿಸಿಕೊಳ್ಳದ ಆ ಬಾಲೆ ಶಾಲೆಯಲ್ಲಿ ನೃತ್ಯ ಮಾಡಿ ಸೈ ಎನ್ನಿಸಿಕೊಂಡಿದ್ದಲ್ಲದೆ, ಪ್ರಶಸ್ತಿಯನ್ನೂ ಪಡೆದು ನಗೆ ಬೀರಿದಳು. ನಿರಂತರವಾಗಿ ತೆಲುಗು ಸಿನಿಮಾಗಳನ್ನು ನೋಡುತ್ತಿದ್ದ ಆ ಬಾಲೆಗೆ ಎ.ನಾಗೇಶ್ವರರಾವ್ ಮತ್ತು ಎನ್.ಟಿ. ರಾಮರಾವ್ ಅವರ ಅಭಿನಯ ಅಂದ್ರೆ ಎಲ್ಲಿಲ್ಲದ ಪ್ರೀತಿ. ಹತ್ತನೇ ತರಗತಿಗೆ ವಿದ್ಯಾಭ್ಯಾಸ ಮೊಟಕುಗೊಳಿಸಿದ ಆ ಬಾಲೆಗೆ ತಾನು ಪಂಚಭಾಷಾ ನಟಿ ಆಗುತ್ತೇನೆ, ಅಭಿನಯ ಶಾರದೆ ಎಂಬ ಹೆಸರು ಪಡೆಯುವೆ ಎಂಬ ಒಂದು ಸಣ್ಣ ಸುಳಿವೂ ಇರಲಿಲ್ಲ… […]