ಕನ್ನಡ ಚಿತ್ರರಂಗದ ಹಿರಿಯ ನಟ, ಪತ್ರಕರ್ತ ಸುರೇಶ್ಚಂದ್ರ ಕೊರೋನಾಗೆ ಬಲಿ
ಬೆಂಗಳೂರು: ಸ್ಯಾಂಡಲ್ವುಡ್ ಹಿರಿಯ ನಟ ಸುರೇಶ್ಚಂದ್ರ ಇಂದು ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೆಲದಿನಗಳ ಹಿಂದೆ ಇವರಿಗೆ ಕೋವಿಡ್ ಪಾಸಿಟಿವ್ ಬಂದಿತ್ತು. ಹಿನ್ನೆಲೆಯಲ್ಲಿ ಅವರನ್ನು ಜಯನಗರದ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಐವತ್ತಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ ನಟಿಸಿರುವ ಸುರೇಶ್ಚಂದ್ರ ಚೆಲುವಿನ ಚಿತ್ತಾರ ಚಿತ್ರದಲ್ಲಿ ನಟಿಸಿ ಖ್ಯಾತಿ ಪಡೆದಿದ್ದರು. ಅವರು 80ರ ದಶಕದಲ್ಲಿ ಸಂಜೆವಾಣಿ ಪತ್ರಿಕೆಯಲ್ಲಿ ಪತ್ರಕರ್ತರಾಗಿಯೂ ಸೇವೆ ಸಲ್ಲಿಸಿದ್ದರು.
ಕನ್ನಡ ಚಿತ್ರರಂಗದ ಹಿರಿಯ ನಟ, ಪತ್ರಕರ್ತ ಸುರೇಶ್ಚಂದ್ರ ಕೊರೋನಾಗೆ ಬಲಿ Read More »