ಸಿನಿಮಾ

ಕಿಚ್ಚ ನಟನೆಯ ‘ ವಿಕ್ರಾಂತ್ ರೋಣ’ ಪೋಸ್ಟರ್ ನಕಲಿ ಮಾಡಿದ ಬಾಲಿವುಡ್!

ಕಿಚ್ಚ ಸುದೀಪ್​ ನಟನೆಯ ಬಹುನಿರೀಕ್ಷಿತ ‘ವಿಕ್ರಾಂತ್​ ರೋಣ’ ಸಿನಿಮಾದ ಪೋಸ್ಟರ್ ಅನ್ನು ಬಾಲಿವುಡ್ ಮಂದಿ ಕಾಪಿ ಮಾಡಿದ್ದಾರೆ. ಸ್ಯಾಂಡಲ್​ವುಡ್​ಗೆ ಸೀಮಿತವಾಗದೆ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಈ ಚಿತ್ರ ರಿಲೀಸ್​ ಆಗುತ್ತಿದ್ದು, ಈ​ ಸಿನಿಮಾದ ಪೋಸ್ಟರ್​ ಕಾಪಿ ಮಾಡಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆ ಆಗುತ್ತಿದೆ. ‘ವಿಕ್ರಾಂತ್ ರೋಣ’ ಚಿತ್ರಕ್ಕಾಗಿ ಸುದೀಪ್​ ಭಿನ್ನ ಅವತಾರ ತಾಳಿದ್ದಾರೆ. ‘ರಂಗಿತರಂಗ’ ಖ್ಯಾತಿಯ ನಿರ್ದೇಶಕ ಅನೂಪ್​ ಭಂಡಾರಿ ಅವರು ಈ ಚಿತ್ರಕ್ಕೆ ಆಕ್ಷನ್ ‌ಕಟ್ ಹೇಳಿದ್ದಾರೆ. ಈ ಕಾರಣಕ್ಕೆ ಚಿತ್ರದ ಬಗ್ಗೆ […]

ಕಿಚ್ಚ ನಟನೆಯ ‘ ವಿಕ್ರಾಂತ್ ರೋಣ’ ಪೋಸ್ಟರ್ ನಕಲಿ ಮಾಡಿದ ಬಾಲಿವುಡ್! Read More »

ಬಾಲಿವುಡ್ ಲೆಜೆಂಡ್ ಕಿಂಗ್ ದಿಲೀಪ್ ಕುಮಾರ್ ವಿಧಿವಶ, ಕಣ್ಣೀರಲ್ಲಿ ಮುಳುಗಿದ ಚಿತ್ರರಂಗ

ಮುಂಬೈ: ಬಾಲಿವುಡ್‌ ಹಿರಿಯ ನಟ ದಿಲೀಪ್‌ ಕುಮಾರ್‌ ಇಂದು ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ 98 ವರ್ಷದ ದಿಲೀಪ್‌ ಕುಮಾರ್‌ ಅವರನ್ನು ಎರಡು ದಿನಗಳ ಹಿಂದಷ್ಟೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪಾಕಿಸ್ತಾನದ ಪೇಶಾವರದಲ್ಲಿ ಡಿಸೆಂಬರ್‌ 11, 1922 ರಲ್ಲಿ ಜನಿಸಿದ್ದ ಮಹಮ್ಮದ್‌ ಯೂಸೂಫ್‌ ಖಾನ್‌ ವಿಭಜನೆ ವೇಳೆ ಭಾರತಕ್ಕೆ ಬಂದಿದ್ದು ಬಾಲಿವುಡ್‌ ಚಿತ್ರರಂಗದಲ್ಲಿ ತಮ್ಮನ್ನು ಗುರುತಿಸಿಕೊಂಡ ಬಳಿಕ ದಿಲೀಪ್‌ ಕುಮಾರ್‌ ಎಂಬ ಹೆಸರಿನಿಂದಲೇ ಖ್ಯಾತರಾಗಿದ್ದರು. ಪತ್ನಿ ಸಾಯಿರಾಬಾನು ಜೊತೆ ಮುಂಬೈನಲ್ಲಿ ನೆಲೆಸಿದ್ದ ದಿಲೀಪ್‌ ಕುಮಾರ್‌ ಇಂದು ಬಾರದ ಲೋಕಕ್ಕೆ

ಬಾಲಿವುಡ್ ಲೆಜೆಂಡ್ ಕಿಂಗ್ ದಿಲೀಪ್ ಕುಮಾರ್ ವಿಧಿವಶ, ಕಣ್ಣೀರಲ್ಲಿ ಮುಳುಗಿದ ಚಿತ್ರರಂಗ Read More »

ಅ ಕಾರಕ್ಕೂ, ಹ ಕಾರಕ್ಕೂ ವ್ಯತ್ಯಾಸ ತಿಳಿದುಕೊಳ್ಳಿ: ಸ್ಯಾಂಡಲ್ ವುಡ್ ನಟಿ ಅನಿತಾ ಭಟ್

ಬೆಂಗಳೂರು: ಕನ್ನಡ ಪದವನ್ನು ತಪ್ಪಾಗಿ ಬಳಸಿದ ನೆಟ್ಟಿಗರೊಬ್ಬರನ್ನು ಸ್ಯಾಂಡವುಡ್ ನಟಿ ಹಾಗೂ ಬಿಗ್‌ಬಾಸ್ ಸೀಸನ್-2 ರ ಸ್ಪರ್ಧಿ ಅನಿತಾ ಭಟ್‌ರವರು ತರಾಟೆಗೆ ತೆಗೆದುಕೊಂಡಿದ್ದಾರೆ. ಕೊರೊನಾ ಲಾಕ್‌ಡೌನ್ ಸಂಕಷ್ಟದ ಬಳಿಕ ಸರ್ಕಾರಿ ಶಾಲೆಗೆ ದಾಖಲಾಗುವ ಮಕ್ಕಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದ ಟ್ವೀಟ್‌ವೊಂದಕ್ಕೆ ಅನಿತಾ ಭಟ್‌ರವರು ಹೌದು, ನಾನು ಕೂಡ ಓದಿದ್ದು ಸರ್ಕಾರಿ ಶಾಲೆಯಲ್ಲಿಯೇ ಎಂದು ಪ್ರತಿಕ್ರಿಯಿಸಿದ್ದರು. ಇದಕ್ಕೆ ನೆಟ್ಟಿಗರೊಬ್ಬರು ನೀವು ಓದಿದ್ದು ಸರ್ಕಾರಿ ಶಾಲೆಯಲ್ಲಿ ಸಂತೋಷ. ನಿಮ್ಮ ಮಕ್ಕಳು? ನಾನು ಓದಿದ್ದು ಸರ್ಕಾರಿ ಶಾಲೆಯಲ್ಲಿ, ನನ್ನ ಮಕ್ಕಳನ್ನು ಸಹ

ಅ ಕಾರಕ್ಕೂ, ಹ ಕಾರಕ್ಕೂ ವ್ಯತ್ಯಾಸ ತಿಳಿದುಕೊಳ್ಳಿ: ಸ್ಯಾಂಡಲ್ ವುಡ್ ನಟಿ ಅನಿತಾ ಭಟ್ Read More »

ಅಸಹಾಯಕ ವೃದ್ಧ ದಂಪತಿಗೆ ಕಿಚ್ಚ ಸುದೀಪ್ ನೆರವು

ಬೆಂಗಳೂರು: ಕೊರೋನ ಹಾವಳಿಯಿಂದ ತತ್ತರಿಸಿದ ಹಾಗೂ ಸಂಕಷ್ಟದಲ್ಲಿ ಸಿಲುಕಿದ ಹಲವರಿಗೆ ತನ್ನ ಚಾರಿಟೇಬಲ್ ಸೊಸೈಟಿಯಿಂದ ಅನೇಕರಿಗೆ ಆಸರೆಯಾಗಿದ್ದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್’ರವರು ಇದೀಗ ಮತ್ತೊಂದು ಒಳ್ಳೆಯ ಕೆಲಸಕ್ಕೆ ಮುಂದಾಗಿದ್ದಾರೆ. ದೊಡ್ಡಬಳ್ಳಾಪುರದ ಕಮಲಮ್ಮಾ (70) ಹಾಗೂ ಶ್ರೀನಿವಾಸ (78 ) ಎಂಬ ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದು, ಒಬ್ಬ ಮಗನಿಗೆ ಕಾಲಿಲ್ಲದ ಕಾರಣ ಆತನಿಗೆ ಪೋಷಕರನ್ನು ನೋಡಿಕೊಳ್ಳಲಾಗುತ್ತಿಲ್ಲ. ಇನ್ನೋರ್ವ ಮಗ ಮೈಸೂರಿನಲ್ಲಿ ವಾಸವಿದ್ದು ,ಅಪ್ಪ ಅಮ್ಮನಿಗೆ ಎಳ್ಳು ನೀರು ಬಿಟ್ಟು ಕೈ ತೊಳೆದುಕೊಂಡಿದ್ದಾನೆ. ಬೆಂಗಳೂರಿನಲ್ಲಿ ಇದ್ದ ಆಸ್ತಿಯನ್ನೆಲ್ಲಾ

ಅಸಹಾಯಕ ವೃದ್ಧ ದಂಪತಿಗೆ ಕಿಚ್ಚ ಸುದೀಪ್ ನೆರವು Read More »

ಹುಟ್ಟುಹಬ್ಬದ ಸಂಭ್ರಮದಲ್ಲಿ ಗೋಲ್ಡನ್ ಸ್ಟಾರ್ | ವಿಶೇಷದಿನದಂದೆ ‘ಸಖತ್’ ಪೋಸ್ಟರ್ ಬಿಡುಗಡೆ

ಬೆಂಗಳೂರು: ಇಂದು ಸ್ಯಾಂಡಲ್’ವುಡ್ ನಟ ಗೋಲ್ಡನ್ ಸ್ಟಾರ್ ಗಣೇಶ್ ಅವರಿಗೆ ಹುಟ್ಟು ಹಬ್ಬದ ಸಂಭ್ರಮ. ಇಂದು ಅವರು 42ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಪ್ರತಿವರ್ಷ ಕುಟುಂಬದವರು, ಸ್ನೇಹಿತರು ಹಾಗೂ ಅಭಿಮಾನಿಗಳೊಟ್ಟಿಗೆ ಬಹಳ ಸಡಗರದಿಂದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳತ್ತಿದ್ದ ಗಣೇಶ್‌ರವರು ಈ ವರ್ಷ ಕೊರೊನಾ ಹಿನ್ನೆಲೆ ಈ ಬಾರಿ ಸರಳವಾಗಿ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಇತ್ತೀಚೆಗಷ್ಟೇ ಸೋಶಿಯಲ್ ಮೀಡಿಯಾದಲ್ಲಿ ಈ ಬಾರಿ ತಮ್ಮ ಬರ್ತ್ಡೇಗೆ ವ್ಯರ್ಥ ಮಾಡುವ ಹಣವನ್ನು ಕೊರೊನಾ ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡುವಂತೆ ಅಭಿಮಾನಿಗಳಿಗೆ ಮನವಿ ಮಾಡಿದ್ದರು. ಇನ್ನೂ ಅಭಿಮಾನಿಗಳು ಸೋಶಿಯಲ್

ಹುಟ್ಟುಹಬ್ಬದ ಸಂಭ್ರಮದಲ್ಲಿ ಗೋಲ್ಡನ್ ಸ್ಟಾರ್ | ವಿಶೇಷದಿನದಂದೆ ‘ಸಖತ್’ ಪೋಸ್ಟರ್ ಬಿಡುಗಡೆ Read More »

ಸಂಚಾರ ವಿಜಯ್‌ಗೆ ಅಮೆರಿಕದಲ್ಲಿ ಗೌರವ – ಫ್ರಾಂಕ್ಲಿನ್ ಥಿಯೇಟರ್ ಮುಂದೆ ವಿಜಯ್‌ಯವರನ್ನು ಸ್ಮರಿಸುವ ಬರಹ

ಜೂ.12ರ ರಾತ್ರಿ ಬನ್ನೇರುಘಟ್ಟ ರಸ್ತೆಯಲ್ಲಿ ನಟ ಸಂಚಾರಿ ವಿಜಯ್ ಅವರಿಗೆ ಆಕ್ಸಿಡೆಂಟ್ ಆಗಿ ನಿಧನರಾಗಿದ್ದರು.ಇವರ ನಿಧನದಿಂದ ಬರೀ ಕನ್ನಡ ಚಿತ್ರರಂಗಕ್ಕೆ ಮಾತ್ರ ನಷ್ಟವಾಗಿದ್ದಲ್ಲ. ಇಡೀ ಭಾರತೀಯ ಚಿತ್ರರಂಗವೇ ಒಬ್ಬ ಪ್ರತಿಭಾವಂತ ಕಲಾವಿದನನ್ನು ಕಳೆದುಕೊಂಡಂತೆ ಆಗಿದೆ. ರಾಷ್ಟ್ರ ಪ್ರಶಸ್ತಿ ಪಡೆದ ಸಂಚಾರಿ ವಿಜಯ್ ಅವರ ಅಗಲಿಕೆಗೆ ಎಲ್ಲರೂ ನಮನ ಸಲ್ಲಿಸಿದ್ದರು. ಈಗ ಅಮೆರಿಕದ ಪ್ರತಿಷ್ಠಿತ ಫ್ರಾಂಕ್ಲಿನ್ ಥಿಯೇಟರ್ ಕೂಡ ಅವರಿಗೆ ಗೌರವ ಸೂಚಿಸಿದೆ. ಫ್ರಾಂಕ್ಲಿನ್ ಥಿಯೇಟರ್ ಮುಂದೆ ವಿಜಯ್ ಅವರನ್ನು ಸ್ಮರಿಸುವ ಬರಹವನ್ನು ಬಿತ್ತರಿಸಲಾಗಿದೆ. ಈ ಸುದ್ದಿಯನ್ನು ‘ನಾನು

ಸಂಚಾರ ವಿಜಯ್‌ಗೆ ಅಮೆರಿಕದಲ್ಲಿ ಗೌರವ – ಫ್ರಾಂಕ್ಲಿನ್ ಥಿಯೇಟರ್ ಮುಂದೆ ವಿಜಯ್‌ಯವರನ್ನು ಸ್ಮರಿಸುವ ಬರಹ Read More »

ಇಂದು ‘ಕಬ್ಜಾ’ ಕಡೆಯಿಂದ ‘ಕಿಚ್ಚಾ-ಉಪ್ಪಿ’ ಅಭಿಮಾನಿಗಳಿಗೆ ರಸದೌತಣ

ರಿಲೀಸ್​​ಗೂ ಮೊದಲೇ ಉಪೇಂದ್ರ ಹಾಗೂ ಸುದೀಪ್ ನಟನೆಯ ‘ಕಬ್ಜ’ ಸಿನಿಮಾ ಸಾಕಷ್ಟು ಕುತೂಹಲ ಮೂಡಿಸಿದೆ. ಈ ಚಿತ್ರದ ವಿನೂತನ ಹಾಲಿವುಡ್ ಶೈಲಿಯ ಪೋಸ್ಟರ್ ಇಂದು ಮುಂಜಾನೆ 6 ಗಂಟೆಗೆ ಬಿಡುಗಡೆಯಾಗಿದೆ. ಈ ಪೋಸ್ಟರ್​ನಿಂದ ಅಭಿಮಾನಿಗಳಿಗೆ ರಸದೌತಣ ಸಿಕ್ಕಿದೆ. ಉಪೇಂದ್ರ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ವಿಶೇಷಪಾತ್ರದಲ್ಲಿ ಕಿಚ್ಚ ಸುದೀಪ್ ನಟಿಸುತ್ತಿದ್ದಾರೆ. ‘ಮುಕುಂದ ಮುರಾರಿ’ ಚಿತ್ರದ ನಂತರ ಈ ಜೋಡಿ ‘ಕಬ್ಜ’ ಚಿತ್ರದಲ್ಲಿ ಒಂದಾಗಿದೆ. ಖ್ಯಾತ ನಿರ್ದೇಶಕ ಆರ್. ಚಂದ್ರು ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಎಂ.ಟಿ.ಬಿ ನಾಗರಾಜ್ ಅರ್ಪಿಸುವ,

ಇಂದು ‘ಕಬ್ಜಾ’ ಕಡೆಯಿಂದ ‘ಕಿಚ್ಚಾ-ಉಪ್ಪಿ’ ಅಭಿಮಾನಿಗಳಿಗೆ ರಸದೌತಣ Read More »

ರೀಲ್ ನಲ್ಲಿ ಮಾತ್ರ ಅಲ್ಲ‌ ರಿಯಲ್ ಲೈಫಲ್ಲೂ ಪವರ್ ಸ್ಟಾರ್ ‘ಯುವರತ್ನ’

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಟನೆಯ ‘ಯುವರತ್ನ’ ಸಿನಿಮಾದಲ್ಲಿ ಡ್ರಗ್ ಮಟ್ಟ ಹಾಕಬೇಕು ಎನ್ನುವ ಸಂದೇಶವಿದೆ. ಶಿಕ್ಷಕ ವೃತ್ತಿ ಮಾಡುತ್ತಲೇ ಪುನೀತ್ ಡ್ರಗ್ಸ್ ಜಾಲವನ್ನು ನಾಶ ಮಾಡುವ ಕೆಲಸ ಮಾಡುತ್ತಾರೆ. ಈಗ ಅವರು ನಿಜ ಜೀವನದಲ್ಲೂ ಈ ಕಾರ್ಯ ಮಾಡುತ್ತಿದ್ದಾರೆ. ಇತ್ತೀಚೆಗೆ ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್ಸ್ ಜಾಲ ಪತ್ತೆ ಆಗಿತ್ತು. ಸಾಕಷ್ಟು ಸೆಲೆಬ್ರಿಟಿಗಳ ಹೆಸರು ಇದರಲ್ಲಿ ಕೇಳಿ ಬಂದಿತ್ತು. ಈ ಬೆಳವಣಿಗೆ ನಂತರದಲ್ಲಿ ಬೆಂಗಳೂರು ಪೊಲೀಸರು ಮಾದಕ ದ್ರವ್ಯ ವಸ್ತುಗಳನ್ನು ಮಟ್ಟಹಾಕಬೇಕು ಎಂದು ಸಾಕಷ್ಟು ಪ್ರಯತ್ನಿಸುತ್ತಿದ್ದಾರೆ. ಈಗ

ರೀಲ್ ನಲ್ಲಿ ಮಾತ್ರ ಅಲ್ಲ‌ ರಿಯಲ್ ಲೈಫಲ್ಲೂ ಪವರ್ ಸ್ಟಾರ್ ‘ಯುವರತ್ನ’ Read More »

ಮದುವೆಗೆ ಮುನ್ನ ಸೆಕ್ಸ್ ಬಗೆಗಿನ ಮಾತುಗಳು ನಾರ್ಮಲ್…? | ತಂದೆಗೆ ಮಗಳು ಕೇಳಿದ ಪ್ರಶ್ನೆ ಜಾಲತಾಣಗಳಲ್ಲಿ ವಿಡಿಯೋ ವೈರಲ್

ಮುಂಬೈ: ನಿರ್ದೇಶಕ ಅನುರಾಗ್ ಕಶ್ಯಪ್ ಗೆ ಅವರ ಪುತ್ರಿ ಆಲಿಯಾ ಕೇಳಿದ ಕೆಲವು ಪ್ರಶ್ನೆಗಳಲ್ಲಿ ಸೆಕ್ಸ್ ಗೆ ಸಂಬಂಧಿಸಿದಂತೆ ಮದುವೆಗೆ ಮುನ್ನ ಸೆಕ್ಸ್ ಬಗ್ಗೆಗಿನ ಮಾತುಗಳು ನಾರ್ಮಲ್? ಎಂಬ ಪ್ರಶ್ನೆಯನ್ನು ತಂದೆ ಗೆ ಕೇಳಿರುವ ವಿಡಿಯೋ ಸಾಮಾಜಿಕಜಾಲತಾಣಗಲ್ಲಿ ಬಾರಿ ವೈರಲ್ ಆಗಿದೆ. ಅನುರಾಗ್ ಕಶ್ಯಪ್ ತಮ್ಮ ಯೂಟ್ಯೂಬ್ ಖಾತೆಯಲ್ಲಿ ವೀಡಿಯೋ ಶೇರ್ ಮಾಡಿಕೊಂಡಿದ್ದಾರೆ. ಈ ವೀಡಿಯೋದಲ್ಲಿ ಆಲಿಯಾ ತಂದೆಗೆ ಹಲವು ಪ್ರಶ್ನೆಗಳನ್ನು ಕೇಳುತ್ತಾಳೆ. ಈ ಪ್ರಶ್ನೆಗಳ ಪಟ್ಟಿಯಲ್ಲಿ ಮದುವೆ ಮುನ್ನ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ರೆ ನಿಮ್ಮ ಪ್ರತಿಕ್ರಿಯೆ

ಮದುವೆಗೆ ಮುನ್ನ ಸೆಕ್ಸ್ ಬಗೆಗಿನ ಮಾತುಗಳು ನಾರ್ಮಲ್…? | ತಂದೆಗೆ ಮಗಳು ಕೇಳಿದ ಪ್ರಶ್ನೆ ಜಾಲತಾಣಗಳಲ್ಲಿ ವಿಡಿಯೋ ವೈರಲ್ Read More »

ದ್ವಾದಶ ರಾಶಿಗಳ ವಾರ ಭವಿಷ್ಯ

ಈ ವಾರದಲ್ಲಿ ಯಾವ ರಾಶಿಗೆ ಏನು ಫಲ? ಒಂದಿಡೀ ವಾರದ ಶುಭಾಶುಭ ಫಲಗಳ ವಿವರ ಇಲ್ಲಿದೆ. ಈ ವಾರ ಭವಿಷ್ಯವು ಗೋಚಾರ ಫಲವನ್ನು ಅವಲಂಬಿಸಿದೆ. ಸಮಸ್ಯೆಗಳಿಗೆ ಪರಿಹಾರದ ವಿವರಗಳನ್ನೂ ನೀಡಲಾಗಿದೆ. ನೆಮ್ಮದಿಯ ಬಾಳು ನಿಮ್ಮದಾಗಲಿ. ವಾರಭವಿಷ್ಯಜೂ.21/2021 ರಿಂದ ಜೂ.27/2021 ರ ವರೆಗೆ ಮೇಷ ರಾಶಿ:-ವೃತ್ತಿರಂಗದಲ್ಲಿ ನಿರೀಕ್ಷಿತ ಉನ್ನತ ಸ್ಥಾನ ಪ್ರಾಪ್ತಿಯಾಗಿ ಕಂಟ್ರಾಕ್ಟ್ ವೃತ್ತಿಯವರಿಗೆ ಧನಾಗಮನ ನಿರಂತರವಿದೆ. ಸಾಹಸ, ಕ್ರೀಡಾ ಮನೋಭಾವಕ್ಕೆ ಮನ್ನಣೆ ಸಿಗಲಿದೆ. ಅವಿವಾಹಿತರಿಗೆ ಹೊಸ ಸಂಬಂಧಗಳು ಕೂಡಿಬರುವ ಸಾಧ್ಯತೆ ಇದೆ. ವಿದ್ಯಾರ್ಥಿ ಜೀವನದಲ್ಲಿ ಹೊಸ ಉತ್ಸಾಹ

ದ್ವಾದಶ ರಾಶಿಗಳ ವಾರ ಭವಿಷ್ಯ Read More »