ಸಿನಿಮಾ

ಕೊಲೆ ಪ್ರಕರಣ: ದರ್ಶನ್ ಗೆ ಸಂಕಷ್ಟ ನಿವಾರಣೆಯಾಗಲಿ ಎಂದು ಕುಟುಂಬಸ್ಥರಿಂದ ಪೂಜೆ

ಸಮಗ್ರ ನ್ಯೂಸ್: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ದರ್ಶನ್ ನನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೇ ಅವರ ಕುಟುಂಬಸ್ಥರು ಸಂಕಷ್ಟ ಪರಿಹಾರಕ್ಕೆ ದೇವರ ಮೊರೆ ಹೋಗಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕೈಗಾದಲ್ಲಿ ಉದ್ಯೋಗದಲ್ಲಿರುವ ದರ್ಶನ್ ಸಹೋದರಿ ದಿವ್ಯಾ ಅವರ ಪತಿ ಮಂಜುನಾಥ, ದರ್ಶನ್ ಒಳಿತಿಗಾಗಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕೈಗಾದ ಟೌನ್‌ಶಿಪ್‌ನಲ್ಲಿರುವ ರಾಮಲಿಂಗೇಶ್ವರ, ಶನೇಶ್ವರ ದೇವಸ್ಥಾನದಲ್ಲಿ ದರ್ಶನ್ ಹೆಸರಿನಲ್ಲಿ ನವಗ್ರಹ ಪೂಜೆ, ಶನಿಶಾಂತಿ ಪೂಜೆ ಹಾಗೂ ವಿಶೇಷ‌ ಹೂವಿನ ಅಲಂಕಾರ ಪೂಜೆ […]

ಕೊಲೆ ಪ್ರಕರಣ: ದರ್ಶನ್ ಗೆ ಸಂಕಷ್ಟ ನಿವಾರಣೆಯಾಗಲಿ ಎಂದು ಕುಟುಂಬಸ್ಥರಿಂದ ಪೂಜೆ Read More »

‘ಡಿ ಗ್ಯಾಂಗ್’ ಗೆ ಬಿಸಿ ಮುಟ್ಟಿಸಿದ ಖಡಕ್ ಪೊಲೀಸ್ ಅಧಿಕಾರಿಗಳು ಇವರೇ ನೋಡಿ…| ರೀಲ್ ಹೀರೋಗೆ ಬಿಸಿ ಮುಟ್ಟಿಸಿದ ರಿಯಲ್ ಹೀರೋಗಳು

ಸಮಗ್ರ ನ್ಯೂಸ್: ಸ್ಯಾಂಡಲ್ ವುಡ್ ನಲ್ಲಿ ದಾಸ, ಅಭಿಮಾನಿಗಳ ಚಾಲೆಂಜಿಂಗ್ ಸ್ಟಾರ್​ ಎಂದೆಲ್ಲಾ ಕರೆಯಲ್ಪಟ್ಟ ನಟ ದರ್ಶನ್​ ಇದೀಗ ಕೊಲೆ ಪ್ರಕರಣವೊಂದರಲ್ಲಿ ಪ್ರಮುಖ ಆರೋಪಿಯಾಗಿ, ಪೊಲೀಸರ ಕಸ್ಟಡಿಯಲ್ಲಿದ್ದು, ನಿರಂತರ ವಿಚಾರಣೆಗೆ ಒಳಪಟ್ಟಿದ್ದಾರೆ. ಒಂದೆಡೆ ದರ್ಶನ್​ ಬಂಧನ ಚಿತ್ರರಂಗದ ಗಣ್ಯರು ಸೇರಿದಂತೆ ರಾಜ್ಯದ ಜನತೆಗೂ ಭಾರೀ ಅಚ್ಚರಿ ತಂದರೆ, ಹತ್ಯೆ ಪ್ರಕರಣದಲ್ಲಿ ಪೊಲೀಸರ ಅತಿಥಿಯಾಗಿರುವ ದರ್ಶನ್​ ಪರ ಬೆಂಬಲದ ಘೋಷಣೆಗಳನ್ನು ಕೂಗುತ್ತಿರುವ ಅಭಿಮಾನಿಗಳು ಮತ್ತೊಂದೆಡೆ. ಆರಂಭಿಕ ಹಂತದಲ್ಲೇ ಮುಚ್ಚಿಹೋಗಬೇಕಿದ್ದ ಈ ಪ್ರಕರಣದಲ್ಲಿ ದರ್ಶನ್​ರನ್ನು ಬಯಲಿಗೆಳೆದು ತಂದ ಇಬ್ಬರು ದಕ್ಷ

‘ಡಿ ಗ್ಯಾಂಗ್’ ಗೆ ಬಿಸಿ ಮುಟ್ಟಿಸಿದ ಖಡಕ್ ಪೊಲೀಸ್ ಅಧಿಕಾರಿಗಳು ಇವರೇ ನೋಡಿ…| ರೀಲ್ ಹೀರೋಗೆ ಬಿಸಿ ಮುಟ್ಟಿಸಿದ ರಿಯಲ್ ಹೀರೋಗಳು Read More »

ದರ್ಶನ್ ಚಿತ್ರರಂಗದಿಂದ ಬ್ಯಾನ್ ವಿಚಾರ| ಫಿಲ್ಮ್ ಚೇಂಬರ್ ನಿಂದ ಪ್ರತಿಕ್ರಿಯೆ

ಸಮಗ್ರ ನ್ಯೂಸ್: ದರ್ಶನ್ & ಸಹಚರರಿಂದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಈಗ ಪೊಲೀಸರ ಬಲೆಗೆ ಬಿದ್ದಿದ್ದಾರೆ. ದರ್ಶನ್, ಪವಿತ್ರಾ ಗೌಡ ಹಾಗೂ ಅವರ ಸಹಚರರನ್ನೂ ಬಂಧಿಸಿ ತನಿಖೆ ನಡೆಸಲಾಗುತ್ತಿದೆ. ಈ ಕೊಲೆ ಆರೋಪದಿಂದ ದರ್ಶನ್ ಅವರನ್ನು ಚಿತ್ರರಂಗದಲ್ಲಿ ಬ್ಯಾನ್ ಮಾಡಬೇಕು ಎಂದು ಕೆಲವರು ಒತ್ತಾಯಿಸಿದ್ದಾರೆ. ಇದರ ಕುರಿತು ನಿನ್ನೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸುದ್ದಿಗೋಷ್ಠಿ ನಡೆಸಲಾಯಿತು. ಈ ವೇಳೆ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್ಎಂ ಸುರೇಶ್ ಮಾತನಾಡಿ ‘ಯಾವ ಚಿತ್ರರಂಗದಲ್ಲೂ

ದರ್ಶನ್ ಚಿತ್ರರಂಗದಿಂದ ಬ್ಯಾನ್ ವಿಚಾರ| ಫಿಲ್ಮ್ ಚೇಂಬರ್ ನಿಂದ ಪ್ರತಿಕ್ರಿಯೆ Read More »

ನಟ ದುನಿಯಾ ವಿಜಯ್ ವಿಚ್ಛೇದನ ಅರ್ಜಿ ವಜಾ

ಸಮಗ್ರ ನ್ಯೂಸ್: ನಟ ದುನಿಯಾ ವಿಜಯ್ ಅವರು ವಿಚ್ಛೇಧನ ಕೋರಿ ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿಯನ್ನು ಸಲ್ಲಿಸಿದ್ದರು. ಇಂತಹ ಅರ್ಜಿಯನ್ನು ಕೌಟುಂಬಿಕ ನ್ಯಾಯಾಲಯವು ವಜಾಗೊಳಿಸಿದೆ. ನಟ ದುನಿಯಾ ವಿಜಯ್ ಕ್ರೌರ್ಯದ ಆಧಾರದಲ್ಲಿ ಪತ್ನಿ ನಾಗರತ್ನರಿಂದ ವಿಚ್ಛೇಧನ ನೀಡುವಂತೆ ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿಯನ್ನು ಸಲ್ಲಿಸಿದ್ದರು. ಆದರೇ ಆರೋಪ ಸಾಭೀತು ಪಡಿಸಲು ಸಾಧ್ಯವಾಗದ ಹಿನ್ನಲೆಯಲ್ಲಿ ನಟ ದುನಿಯಾ ವಿಜಯ್ ಸಲ್ಲಿಸಿದ್ದಂತ ವಿಚ್ಛೇಧನ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಬೆಂಗಳೂರಿನ ಶಾಂತಿನಗರದಲ್ಲಿರುವಂತ ಕೌಟುಂಬಿಕ ನ್ಯಾಯಾಲಯಕ್ಕೆ ನಟ ದುನಿಯಾ ವಿಜಯ್ ವಿಚ್ಛೇಧನ ಕೋರಿ

ನಟ ದುನಿಯಾ ವಿಜಯ್ ವಿಚ್ಛೇದನ ಅರ್ಜಿ ವಜಾ Read More »

ಯುವ ರಾಜ್‌ಕುಮಾರ್‌ಗೆ ನಟಿ ಸಪ್ತಮಿ ಗೌಡ ಜತೆ ಸಂಬಂಧ: ಪತ್ನಿ ಆರೋಪ

ಸಮಗ್ರ ನ್ಯೂಸ್ : ಡಾ.ರಾಜ್‌ಕುಮಾರ್‌ ವಂಶದಲ್ಲಿ ವಿಚ್ಛೇದನ ಇದೇ ಮೊದಲು ಕೇಳಿ ಬಂದಿದ್ದು, ನಟ ಯುವ ರಾಜ್‌ಕುಮಾರ್‌ ಅವರ ಪತ್ನಿ ಶ್ರೀದೇವಿ ಭೈರಪ್ಪ ಅವರಿಗೆ ಡಿವೋರ್ಸ್ ನೋಟಿಸ್‌ ನೀಡಿದ ಬಳಿಕ ಇಬ್ಬರ ನಡುವಿನ ಆರೋಪಗಳು ಜಾಸ್ತಿಯಾಗಿವೆ. ಅದರಲ್ಲೂ, ಅನೈತಿಕ ಸಂಬಂಧಗಳ ಆರೋಪಗಳು ಇನ್ನೂ ಹೆಚ್ಚಾಗಿವೆ. ಹೌದು “ಶ್ರೀದೇವಿ ಭೈರಪ್ಪ ಅವರು ರಾಧಯ್ಯ ಎಂಬ ವ್ಯಕ್ತಿ ಜತೆ ಅನೈತಿಕ ಸಂಬಂಧ ಹೊಂದಿದ್ದಾರೆ” ಎಂಬುದಾಗಿ ಯುವ ರಾಜ್‌ಕುಮಾರ್‌ ಪರ ವಕೀಲ ಸಿರಿಲ್‌ ಪ್ರಸಾದ್‌ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ಇನ್ನು, ನಟನ ಲೀಗಲ್‌

ಯುವ ರಾಜ್‌ಕುಮಾರ್‌ಗೆ ನಟಿ ಸಪ್ತಮಿ ಗೌಡ ಜತೆ ಸಂಬಂಧ: ಪತ್ನಿ ಆರೋಪ Read More »

ಅಭಿಷೇಕ್ ಹಾಗೂ ಅವಿವಾ ದಾಂಪತ್ಯಕ್ಕೆ ಮೊದಲ ವಾರ್ಷಿಕೋತ್ಸವದ ಸಂಭ್ರಮ

ಸಮಗ್ರ ನ್ಯೂಸ್: ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಬಿದ್ದಪ್ಪ ದಾಂಪತ್ಯಕ್ಕೆ ಇದೀಗ ಒಂದು ವರ್ಷ ತುಂಬಿದೆ. 2023ರ ಜೂನ್ 5ರಂದು ಈ ಜೋಡಿ ವಿವಾಹ ಆಯಿತು. ಸೆಲೆಬ್ರಿಟಿಗಳು ಇವರ ವಿವಾಹದಲ್ಲಿ ಭಾಗವಹಿಸಿದ್ದರು. ಸುಮಲತಾ ಅಂಬರಿಶ್‌ ಅವರು ಇನ್‌ಸ್ಟಾಗ್ರಾಂನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.  ಅದರಲ್ಲಿ ತಮ್ಮ ಮಗ ಮತ್ತು ಸೊಸೆಯ ಸುಂದರ ಫೋಟೋಗಳೊಂದಿಗೆ ವಿಶ್‌ ಮಾಡಿದ್ದಾರೆ.  “ನನ್ನ ಪ್ರೀತಿಯ ಅಬಿದೊ ಮತ್ತು ಅವಿವಾಗೆ ಮೊದಲ ವಿವಾಹ ವಾರ್ಷಿಕೋತ್ಸವದ ಶುಭಾಶಯಗಳು. ನಿಮ್ಮ ಪ್ರೀತಿ ಇನ್ನಷ್ಟು ಉತ್ತಮವಾಗಲಿ. ಇನ್ನಷ್ಟು ಒಬ್ಬರನ್ನೊಬ್ಬರನ್ನು ಅರ್ಥ ಮಾಡಿಕೊಳ್ಳಿ.

ಅಭಿಷೇಕ್ ಹಾಗೂ ಅವಿವಾ ದಾಂಪತ್ಯಕ್ಕೆ ಮೊದಲ ವಾರ್ಷಿಕೋತ್ಸವದ ಸಂಭ್ರಮ Read More »

ಕಾನ್ಸ್ ಚಲನಚಿತ್ರೋತ್ಸವ/ ಕನ್ನಡದ ಜಾನಪದ ಕಿರುಚಿತ್ರ ಪ್ರದರ್ಶನ

ಸಮಗ್ರ ನ್ಯೂಸ್: ಕನ್ನಡ ಜಾನಪದ ಕಿರುಚಿತ್ರ ಸನ್‍ಫ್ಲವರ್ಸ್ ವರ್ ದಿ ಫಸ್ಟ್ ಒನ್ಸ್ ಟು ನೋ, ವಿಶ್ವವಿಖ್ಯಾತ ಕಾನ್ಸ್ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡಿದೆ. ಶಿವಮೊಗ್ಗ ಮೂಲದವರಾದ ಹಾಗೂ ಈಗ ಮೈಸೂರಿನಲ್ಲಿ ವಾಸಿಸುತ್ತಿರುವ ಚಿದಾನಂದ ಎಸ್ ನಾಯ್ಕ್ ಅವರು ನಿರ್ದೇಶಿಸಿರುವ 16 ನಿಮಿಷದ ಕಿರುಚಿತ್ರದಲ್ಲಿ ಬಂಜಾರ ಸಮುದಾಯದ ಹಳ್ಳಿಯೊಂದರಲ್ಲಿ ಹುಂಜವನ್ನು ಕದ್ದೊಯ್ದಾಗ ಗ್ರಾಮದಲ್ಲಿ ಬೆಳಕೇ ಮೂಡದೆ ಅಂಧಕಾರದಲ್ಲಿ ವೃದ್ಧೆ ಪರಿತಪಿಸುತ್ತಿರುವ ಕುರಿತು ಚಿತ್ರಿಸಲಾಗಿದೆ. ಈ ನಿಮಿತ್ತ ಚಿತ್ರೋತ್ಸವಕ್ಕಾಗಿ ನಾಯಕ್, ಪೋಟೋಗ್ರಫಿ ನಿರ್ದೇಶಕ ಊರಜ್ ಠಾಕೂರ್, ಸೌಂಡ್ ಡಿಸೈನರ್ ಅಭಿಷೇಕ್ ಕದಂ,

ಕಾನ್ಸ್ ಚಲನಚಿತ್ರೋತ್ಸವ/ ಕನ್ನಡದ ಜಾನಪದ ಕಿರುಚಿತ್ರ ಪ್ರದರ್ಶನ Read More »

ರಾಜ್ಯದಲ್ಲಿ ಒಂದು ತಿಂಗಳು ಚಿತ್ರಮಂದಿರ ಬಂದ್ ವಿಚಾರ: ಫಿಲಂ ಚೇಂಬರ್ ಸ್ಪಷ್ಟನೆ

ಸಮಗ್ರ ನ್ಯೂಸ್: ಚಿತ್ರಮಂದಿರಗಳಿಗೆ ಜನ ಬರುವುದು ಇತ್ತೀಚೆಗೆ ತೀವ್ರವಾಗಿ ಕಡಿಮೆಯಾಗಿದ್ದು. ಇದರಿಂದ ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳು ತೀವ್ರ ಸಂಕಷ್ಟ ಎದುರಿಸುತ್ತಿವೆ. ಜನರಿಲ್ಲದೆ ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳನ್ನು ನಡೆಸುವುದು ಕಷ್ಟವಾಗಿದೆ ಎಂದು ತೆಲಂಗಾಣದಲ್ಲಿ ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳನ್ನು ಕೆಲ ದಿನಗಳ ಕಾಲ ಬಂದ್ ಮಾಡುವ ನಿರ್ಧಾರ ಮಾಡಲಾಗಿತ್ತು. ಅದೇ ಮಾದರಿಯಲ್ಲಿ ಈಗ ಕರ್ನಾಟಕದಲ್ಲಿಯೂ ಚಿತ್ರಮಂದಿರಗಳು ಅನುಭವಿಸುತ್ತಿರುವ ನಷ್ಟದಿಂದ ಪಾರಾಗಲು ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳನ್ನು ಬಂದ್ ಮಾಡಬೇಕು ಎಂಬ ಚರ್ಚೆ ಜೋರಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಇಂದು ಚಿತ್ರರಂಗದ ಪ್ರಮುಖರ ಸಭೆ

ರಾಜ್ಯದಲ್ಲಿ ಒಂದು ತಿಂಗಳು ಚಿತ್ರಮಂದಿರ ಬಂದ್ ವಿಚಾರ: ಫಿಲಂ ಚೇಂಬರ್ ಸ್ಪಷ್ಟನೆ Read More »

ಪತಿಯಿಂದಲೇ ಬರ್ಬರ ಕೊಲೆಯಾದ ‘ಭಜರಂಗಿ’ ನಟಿ ವಿದ್ಯಾ ನಂದೀಶ್

ಸಮಗ್ರ ನ್ಯೂಸ್: ‘ಭಜರಂಗಿ’ ಸಿನಿಮಾದಲ್ಲಿ ನಟಿಸಿದ್ದ ವಿದ್ಯಾ ನಂದೀಶ್ ಭೀಕರವಾಗಿ ಕೊಲೆಯಾಗಿದ್ದಾರೆ. ಮೈಸೂರು ಜಿಲ್ಲೆಯ ಬನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ವರದಿಯಾಗಿದೆ. ಪತಿ ನಂದೀಶ್ ತನ್ನ ಪತ್ನಿ ವಿದ್ಯಾರನ್ನು ಕೊಲೆ ಮಾಡಿದ್ದಾನೆ. ಮೈಸೂರು ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿದ್ಯಾ ಕೊಲೆಯಾದ ದುರ್ದೈವಿಯಾಗಿದ್ದು, ಕೌಟುಂಬಿಕ ಕಲಹ ಹಿನ್ನೆಲೆ ಗಂಡನೇ ವಿದ್ಯಾಳ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಕನ್ನಡದ ಕೆಲ ಸಿನಿಮಾಗಳಲ್ಲಿ ಪೋಷಕ ನಟಿಯಾಗಿ ಬಣ್ಣ ಹಚ್ಚಿದ್ದರು. ಮೃತ ವಿದ್ಯಾ ಅವರು ಭಜರಂಗಿ, ವಜ್ರಕಾಯ ಸಿನಿಮಾದಲ್ಲಿ

ಪತಿಯಿಂದಲೇ ಬರ್ಬರ ಕೊಲೆಯಾದ ‘ಭಜರಂಗಿ’ ನಟಿ ವಿದ್ಯಾ ನಂದೀಶ್ Read More »

ಭಾರತದಲ್ಲಿ ಮೊದಲ ಬಾರಿಗೆ ಮತದಾನ ಮಾಡಿದ ನಟ ಅಕ್ಷಯ್ ಕುಮಾರ್

ಸಮಗ್ರ ನ್ಯೂಸ್: ಬಾಲಿವುಡ್ ನಟ ಅಕ್ಷಯ್ ಕುಮಾರ್ ಭಾರತದ ಪೌರತ್ನ ಪಡೆದುಕೊಂಡ ನಂತರ ಮೊದಲ ಬಾರಿಗೆ ಭಾರತದಲ್ಲಿ ಮತದಾನ ಮಾಡಿದ್ದಾರೆ. ನಂತರ ಮಾತನಾಡಿದ ಅಕ್ಷಯ್, ಭಾರತದ ಅಭಿವೃದ್ಧಿ ಮತ್ತು ಬಲಿಷ್ಠ ರಾಷ್ಟ್ರಕ್ಕಾಗಿ ಮತದಾನ ಮಾಡಿ ಎಂದಿದ್ದಾರೆ. ಕೆನಡಾ ಪೌರತ್ವ ಪಡೆದಿದ್ದ ಬಾಲಿವುಡ್ ನಟ ಅಕ್ಷಯ್ ಕುಮಾರ್ ಇತ್ತೀಚೆಗಷ್ಟೇ ಭಾರತದ ಪೌರತ್ನ ಪಡೆದುಕೊಂಡಿದ್ದರು.

ಭಾರತದಲ್ಲಿ ಮೊದಲ ಬಾರಿಗೆ ಮತದಾನ ಮಾಡಿದ ನಟ ಅಕ್ಷಯ್ ಕುಮಾರ್ Read More »