ಕರಾವಳಿ

500ರ ಗಡಿ ದಾಟಿದ ಸಿಂಗಲ್ ಚೋಲ್ ಅಡಿಕೆ|ಧಾರಣೆ ಮತ್ತಷ್ಟು ಹೆಚ್ಚುವ ನಿರೀಕ್ಷೆ

ಸಮಗ್ರ ನ್ಯೂಸ್: ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಲ ದಿನಗಳ ಹಿಂದೆ ಡಬ್ಬಲ್‌ ಚೋಲ್‌ ಧಾರಣೆ ಕೆ.ಜಿ.ಗೆ 500 ರೂ. ದಾಟಿದ ಬೆನ್ನಲ್ಲೇ ಇದೀಗ ಸಿಂಗಲ್‌ ಚೋಲ್‌ ಧಾರಣೆಯು ಕೆ.ಜಿ.ಗೆ 500 ರೂ.ದಾಟಿ ದಾಖಲೆ ನಿರ್ಮಿಸಿದೆ. ಹೊಸ ಅಡಿಕೆ ಧಾರಣೆಯು ಶೀಘ್ರವೇ 500 ರೂ. ತಲುಪುವ ನಿರೀಕ್ಷೆಯಿದೆ. ಮಾರುಕಟ್ಟೆಯಲ್ಲಿ ಅಡಿಕೆ ಕೊರತೆ ಪ್ರಮಾಣ ಮತ್ತಷ್ಟು ಹೆಚ್ಚಾಗಿದ್ದು ಇದರ ಪರಿಣಾಮ ಧಾರಣೆ ಏರಿಕೆಯಾಗಿದೆ. ಧಾರಣೆ ಇನ್ನಷ್ಟು ಏರುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಡಬ್ಬಲ್‌ ಚೋಲ್‌ ಧಾರಣೆ ಹತ್ತು ದಿನಗಳ […]

500ರ ಗಡಿ ದಾಟಿದ ಸಿಂಗಲ್ ಚೋಲ್ ಅಡಿಕೆ|ಧಾರಣೆ ಮತ್ತಷ್ಟು ಹೆಚ್ಚುವ ನಿರೀಕ್ಷೆ Read More »

ಎ.12ರಿಂದ ಮಂಗಳೂರು – ಕುಕ್ಕೆ ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಆರಂಭ| ರೈಲು ಸಂಚಾರದ ವೇಳಾಪಟ್ಟಿ ಇಲ್ಲಿದೆ ನೋಡಿ…

ಸಮಗ್ರ ನ್ಯೂಸ್: ಮಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಎ.12ಕ್ಕೆ ಹೊಸ ರೈಲು ಆರಂಭಿಸಲಾಗುತ್ತಿದ್ದು, ದಿನಕ್ಕೆ 4 ಬಾರಿ ಸಂಚರಿಸಲಿದೆ ಎಂದು ಕೇಂದ್ರ ರೈಲ್ವೇ ಖಾತೆ ಸಹಾಯಕ ಸಚಿವ ವಿ. ಸೋಮಣ್ಣ ತಿಳಿಸಿದರು. ಅವರು ಮಂಗಳೂರಿನಲ್ಲಿ ರೈಲ್ವೇ ಮೇಲ್ಸೇತುವೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು ರೈಲಿನ ವೇಳಾಪಟ್ಟಿ: ಮಂಗಳೂರು ಸೆಂಟ್ರಲ್‌-ಕಬಕ ಪುತ್ತೂರು-ಸುಬ್ರಹ್ಮಣ್ಯ ರಸ್ತೆ ಪ್ಯಾಸೆಂಜರ್‌ ರೈಲು (56625) ಮುಂಜಾನೆ 4ಕ್ಕೆ ಮಂಗಳೂರು ಸೆಂಟ್ರಲ್‌ನಿಂದ ಹೊರಟು ಕಬಕ-ಪುತ್ತೂರಿಗೆ 5.18ಕ್ಕೆ ತಲುಪಲಿದೆ. 2 ನಿಮಿಷ ನಿಲುಗಡೆಯಾಗಿ 6.30ಕ್ಕೆ ಸುಬ್ರಹ್ಮಣ್ಯ ತಲುಪಲಿದೆ.

ಎ.12ರಿಂದ ಮಂಗಳೂರು – ಕುಕ್ಕೆ ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಆರಂಭ| ರೈಲು ಸಂಚಾರದ ವೇಳಾಪಟ್ಟಿ ಇಲ್ಲಿದೆ ನೋಡಿ… Read More »

ನೆಲ್ಯಾಡಿ: ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ| ಓರ್ವ ಸಾವು; 10ಕ್ಕೂ ಅಧಿಕ ಮಂದಿಗೆ ಗಾಯ

ಸಮಗ್ರ ನ್ಯೂಸ್: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ಪಲ್ಟಿಯಾದ ಪರಿಣಾಮ ಓರ್ವ ಮೃತಪಟ್ಟು, ಹತ್ತಕ್ಕೂ ಅಧಿಕ ಮಂದಿ ಗಂಭೀರ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಸಮೀಪದ ನೀರಕಟ್ಟೆ ಎಂಬಲ್ಲಿ ಶುಕ್ರವಾರ ಬೆಳಗಿನ ಜಾವ ನಡೆದಿದೆ. ಬೆಂಗಳೂರಿನಿಂದ ಉಡುಪಿಗೆ ತೆರಳುತ್ತಿದ್ದ ಖಾಸಗಿ ಬಸ್ ನೀರಕಟ್ಟೆಯ ಅಪಾಯಕಾರಿ ತಿರುವನ್ನು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಓರ್ವ ಬಸ್ಸಿನಡಿ ಸಿಲುಕಿ ಮೃತಪಟ್ಟಿದ್ದು, ಹತ್ತಕ್ಕೂ ಅಧಿಕ ಮಂದಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಪುತ್ತೂರು ಹಾಗೂ

ನೆಲ್ಯಾಡಿ: ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ| ಓರ್ವ ಸಾವು; 10ಕ್ಕೂ ಅಧಿಕ ಮಂದಿಗೆ ಗಾಯ Read More »

ಎ.4-6 ಮಂಗಳೂರು- ಮಧೂರು ದೇವಸ್ಥಾನಕ್ಕೆ KSRTCಯಿಂದ ವಿಶೇಷ ಬಸ್

ಸಮಗ್ರ ನ್ಯೂಸ್: ಮಧೂರು ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ ವಿಜೃಂಭಣೆಯಿಂದ ನಡೆಯುತ್ತಿದ್ದು, ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮಂಗಳೂರು ಕೆಎಸ್ಸಾರ್ಟಿಸಿ ವಿಭಾಗದಿಂದ ಮಂಗಳೂರು-ಮಧೂರು ನಡುವೆ ವಿಶೇಷ ಬಸ್ ಸೇವೆಯನ್ನು ಆರಂಭಿಸಿದೆ. ಎ.4ರಿಂದ ಈ ಬಸ್ ಸೇವೆ ಲಭಿಸಲಿದ್ದು, ಬಸ್ ಮಂಗಳೂರಿನ ಬಿಜೈ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಿಂದ ಮಧೂರಿಗೆ ಬೆಳಗ್ಗೆ 10 ಗಂಟೆಗೆ ಮತ್ತು‌ 10.20ಕ್ಕೆ ಹೊರಡಲಿದೆ. ಮಧೂರಿನಿಂದ ಮಂಗಳೂರಿಗೆ 1.30 ಮತ್ತು 1.45ಕ್ಕೆ‌ ಹೊರಡಲಿದೆ ಎಂದು ಕೆಎಸ್ಸಾರ್ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ಎ.4-6 ಮಂಗಳೂರು- ಮಧೂರು ದೇವಸ್ಥಾನಕ್ಕೆ KSRTCಯಿಂದ ವಿಶೇಷ ಬಸ್ Read More »

ಪೋಕ್ಸೊ ಪ್ರಕರಣ| ನ್ಯಾಯಾಲಯಕ್ಕೆ ಖುದ್ದು ಹಾಜರಾಗುವುದರಿಂದ ಬಿ.ಎಸ್.ವೈ ಬಚಾವ್

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ವೈ ವಿರುದ್ಧದ ಪೋಕ್ಸೋ ಪ್ರಕರಣದಲ್ಲಿ ಖುದ್ದು ಹಾಜರಾಗುವಂತೆ ನೀಡಿದ್ದ ವಿಶೇಷ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್‌ ತಡೆ ನೀಡಿದೆ. ವಿಶೇಷ ನ್ಯಾಯಾಲಯದ ಸಮನ್ಸ್ ಹಾಗೂ ಕೋರ್ಟ್ ಕಾಗ್ನಿಜೆನ್ಸ್ ರದ್ದು ಮಾಡುವಂತೆ ಕೋರಿ ಬಿಎಸ್‍ವೈ ಮತ್ತು ಇತರ ಮೂವರು ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಪ್ರದೀಪ್ ಸಿಂಗ್ ಯೆರೂರ್ ಅವರಿದ್ದ ಏಕಸದಸ್ಯ ಪೀಠ ಸಮನ್ಸ್ ಆದೇಶಕ್ಕೆ ತಡೆ ನೀಡಿದೆ. ಮುಂದಿನ ವಿಚಾರಣೆಯವರೆಗೂ ಫಾಸ್ಟ್ ಟ್ರ್ಯಾಕ್ ಕೋರ್ಟ್‍ಗೆ ಹಾಜರಾತಿಗೆ ವಿನಾಯಿತಿ ನೀಡಲಾಗಿದೆ. ಈ

ಪೋಕ್ಸೊ ಪ್ರಕರಣ| ನ್ಯಾಯಾಲಯಕ್ಕೆ ಖುದ್ದು ಹಾಜರಾಗುವುದರಿಂದ ಬಿ.ಎಸ್.ವೈ ಬಚಾವ್ Read More »

ಕರಾವಳಿಯನ್ನು ಕಡೆಗಣಿಸಿದ್ರೆ ಪ್ರತ್ಯೇಕ ವಿಧಾನಸೌಧ ಕಟ್ಟಿಸಿಕೊಂಡು ಮಾತಾಡುತ್ತೇವೆ| ವಿಧಾನ ಮಂಡಲ ಅಧಿವೇಶನದಲ್ಲಿ ಶಾಸಕ ಹರೀಶ್ ಪೂಂಜಾ ಆಕ್ರೋಶ

ಸಮಗ್ರ ನ್ಯೂಸ್ : ಕರಾವಳಿ ಅಭಿವೃದ್ಧಿ ಕಡೆಗಣಿಸಿದ್ರೆ ನಾವು ಪ್ರತ್ಯೇಕ ವಿಧಾನಸೌಧ ಕಟ್ಟಿಸಿಕೊಂಡು ಮಾತಾಡುವ ವ್ಯವಸ್ಥೆ ತರಬೇಕಾಗುತ್ತದೆ ಎಂದು ಬಿಜೆಪಿ ಶಾಸಕ ಹರೀಶ್ ಪೂಂಜಾ ಈ ಕೂಗೆಬ್ಬಿಸಿದ್ದಾರೆ. ವಿಧಾನಸಭೆಯಲ್ಲಿ 69 ನಿಯಮದಡಿಯಲ್ಲಿ ಕರಾವಳಿ ಜಿಲ್ಲೆಗಳ ಸಮಸ್ಯೆಗಳ ಬಗ್ಗೆ ಇಂದು ಚರ್ಚೆ ನಡೆಯಿತು. ಈ ವೇಳೆ ಸುನಿಲ್ ಕುಮಾರ್ ಮಾತನಾಡಿ, ಸದನದಲ್ಲಿ ಉತ್ತರ ಕರ್ನಾಟಕ, ಬೆಂಗಳೂರು ಬಗ್ಗೆ ಚರ್ಚೆ ಆಗುತ್ತದೆ. ಆದರೆ ಕರಾವಳಿ ಬಗ್ಗೆ ಯಾವತ್ತೂ ಚರ್ಚೆಗಳು ನಡೆದಿಲ್ಲ. ಟೆಂಪಲ್ ಟೂರಿಸಂ ವಿಚಾರವಾಗಿ ಕರಾವಳಿಯನ್ನು ಅಭಿವೃದ್ಧಿ ಪಡಿಸಬೇಕು. 330 ಕಿ.ಮೀ

ಕರಾವಳಿಯನ್ನು ಕಡೆಗಣಿಸಿದ್ರೆ ಪ್ರತ್ಯೇಕ ವಿಧಾನಸೌಧ ಕಟ್ಟಿಸಿಕೊಂಡು ಮಾತಾಡುತ್ತೇವೆ| ವಿಧಾನ ಮಂಡಲ ಅಧಿವೇಶನದಲ್ಲಿ ಶಾಸಕ ಹರೀಶ್ ಪೂಂಜಾ ಆಕ್ರೋಶ Read More »

ಸ್ವಿಟ್ಜರ್ಲೆಂಡ್ ಪ್ರವಾಸಿಗರ ಆಟೋಸಫಾರಿ: 7,000 ಕಿ.ಮೀ. ದಕ್ಷಿಣ ಭಾರತ ಸಂಚಾರ!

ಸಮಗ್ರ ನ್ಯೂಸ್: ಭಾರತದ ಸಂಸ್ಕೃತಿ, ಪ್ರಕೃತಿ ಸೌಂದರ್ಯ, ಮತ್ತು ಊಟದ ರುಚಿಯ ಆಶಯದಲ್ಲಿ ಸ್ವಿಟ್ಜರ್ಲೆಂಡ್‌ನ ಮೂವರು ಪ್ರವಾಸಿಗರು ಆಟೋದಲ್ಲಿ 7,000 ಕಿ.ಮೀ. ಪ್ರಯಾಣ ನಡೆಸಿದ್ದಾರೆ. ಗೋವಾದಿಂದ ಆಟೋ ಬಾಡಿಗೆ ತೆಗೆದುಕೊಂಡ ಈ ವಿದೇಶಿ ಪ್ರವಾಸಿಗರು, ತಾವೇ ವಾಹನ ಓಡಿಸುತ್ತಾ ಕರ್ನಾಟಕ, ಕೇರಳ, ತಮಿಳುನಾಡು, ಮಹಾರಾಷ್ಟ್ರ, ಮತ್ತು ಗೋವಾದ ದಟ್ಟ ಅರಣ್ಯ, ಕಡಲು, ಬೆಟ್ಟ ಮತ್ತು ನಗರ ಜೀವರಾಸಿಕೆಯನ್ನು ಅನುಭವಿಸಿದ್ದಾರೆ. ಚಿಕ್ಕಮಗಳೂರಿಗೂ ಭೇಟಿ:ಪ್ರಕೃತಿಯ ಸೌಂದರ್ಯದ ಗುಂಗಿನಲ್ಲಿ, ಈ ಪ್ರವಾಸಿಗರು ಕರ್ನಾಟಕದ ಪ್ರಸಿದ್ಧ ಹಿಲ್‌ಸ್ಟೇಷನ್‌ ಚಿಕ್ಕಮಗಳೂರಿಗೂ ಭೇಟಿ ನೀಡಿದ್ದಾರೆ. ಇಲ್ಲಿನ

ಸ್ವಿಟ್ಜರ್ಲೆಂಡ್ ಪ್ರವಾಸಿಗರ ಆಟೋಸಫಾರಿ: 7,000 ಕಿ.ಮೀ. ದಕ್ಷಿಣ ಭಾರತ ಸಂಚಾರ! Read More »

ಮಂಗಳೂರು: ಪತ್ನಿಯ ಕೊಲೆ, ಪತಿಗೆ ಜೀವಾವಧಿ ಶಿಕ್ಷೆ

ಸಮಗ್ರ ನ್ಯೂಸ್:  ಪತ್ನಿಯ ಮೇಲೆ ಹಲ್ಲೆ ನಡೆಸಿ ಕೊಲೆಗೈದ ವ್ಯಕ್ತಿಗೆ ನ್ಯಾಯಾಧೀಶೆ ಸಂಧ್ಯಾ ಎಸ್ ಅಧ್ಯಕ್ಷತೆಯ ಮಂಗಳೂರಿನ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ಶಿಕ್ಷೆಗೊಳಗಾದ ಆರೋಪಿಯನ್ನು ಉಳ್ಳಾಲ ತಾಲೂಕಿನ ಸೋಮೇಶ್ವರ ಗ್ರಾಮದ ಕುಂಪಲ ಚೇತನ್ ನಗರದ ನಿವಾಸಿ ಜೋಸೆಫ್ ಫ್ರಾನ್ಸಿಸ್ ರೆನ್ಸನ್ ಅಲಿಯಾಸ್ ರೆನ್ಸನ್ (53) ಎಂದು ಗುರುತಿಸಲಾಗಿದೆ. ಅವರ ಪತ್ನಿ ಶೈಮಾ ಬಲಿಯಾದವರು. ಜೋಸೆಫ್ ಫ್ರಾನ್ಸಿಸ್ ರೆನ್ಸನ್ ಮದ್ಯಪಾನ, ಜೂಜಾಟ ಮತ್ತು ಇತರ ದುಶ್ಚಟಗಳಿಗೆ ವ್ಯಸನಿಯಾಗಿದ್ದಳರು ಎಂದು ವರದಿಯಾಗಿದೆ.

ಮಂಗಳೂರು: ಪತ್ನಿಯ ಕೊಲೆ, ಪತಿಗೆ ಜೀವಾವಧಿ ಶಿಕ್ಷೆ Read More »

16 ದಿನಗಳಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ದಿಗಂತ್  ತಾಯಿ ಮಡಿಲಿಗೆ

ಸಮಗ್ರ ನ್ಯೂಸ್:  ರಾಜ್ಯಾದ್ಯಂತ ಗಮನ ಸೆಳೆದಿದ್ದ ದಿಗಂತ್ ಯೆಂಬ ಯುವಕನ ನಾಪತ್ತೆ ಪ್ರಕರಣ ಸುಖಾಂತ್ಯ ಕಂಡಿದೆ. ಫರಂಗಿಪೇಟೆ ಬಳಿಯ ಕಿಡೆಬೆಟ್ಟುವಿನ ಪದ್ಮನಾಭ ಅವರ ಮಗ ದಿಗಂತ್ ಫೆ. 25 ರ ರಾತ್ರಿ ಫರಂಗಿಪೇಟೆ ರೈಲ್ವೆ ಹಳಿಗಳಿಂದ ನಾಪತ್ತೆಯಾಗಿದ್ದ. ತನ್ನ ಕಾಲೇಜಿನಿಂದ ಪಿಯುಸಿ ಪರೀಕ್ಷೆಯ ಪ್ರವೇಶ ಪತ್ರವನ್ನು ಪಡೆದ ನಂತರ, ಸಂಜೆ ದೇವಸ್ಥಾನಕ್ಕೆ ಹೋಗಿ ಅಲ್ಲಿಂದ ನಾಪತ್ತೆಯಾಗಿದ್ದ ಎಂದು ವರದಿಯಾಗಿತ್ತು. ಈ ನಿಗೂಢ ಕಣ್ಮರೆ ಹಲವು ಗೊಂದಲಕ್ಕೆ ಕಾರಣವಾಗಿದಲ್ಲದೆ ವಿವಿಧ ವದಂತಿಗಳಿಗೆ ಕಾರಣವಾಗಿತ್ತು. I ನಡುವೆ ಆತನನ್ನು ಸುರಕ್ಷಿತವಾಗಿ

16 ದಿನಗಳಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ದಿಗಂತ್  ತಾಯಿ ಮಡಿಲಿಗೆ Read More »

ಕರಾವಳಿಯ ವಿವಿಧೆಡೆ ತಂಪೆರೆದ ವರುಣ| ಕಡಬ, ಸುಳ್ಯ, ಪುತ್ತೂರು ತಾಲೂಕಿನ ಹಲವೆಡೆ ಮಳೆಯ ಸಿಂಚನ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಬುಧವಾರ ಸಂಜೆ ಉತ್ತಮ‌ ಮಳೆಯಾಗಿದೆ. ಬಿಸಿಲ ಧಗೆಯಿಂದ ಬೇಸತ್ತು ಹೋಗಿದ್ದ ಕರಾವಳಿಯಲ್ಲಿ ಕೊನೆಗೂ ವರ್ಷಧಾರೆಯಾಗಿದ್ದು, ಇಂದು ಸಂಜೆ ಸುರಿದ ಮಾರ್ಚ್ ತಿಂಗಳ ಮೊದಲ ಮಳೆಯಿಂದಾಗಿ ತಾಪಮಾನ ಕೊಂಚ ಇಳಿಕೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ , ಕಡಬ, ಪುತ್ತೂರು ತಾಲೂಕಿನಲ್ಲಿ ತುಂತುರು ಮಳೆಯಾಗಿದೆ. ಮಧ್ಯಾಹ್ನ ಬಳಿಕ ಮೋಡ ಕವಿದ ವಾತಾವರಣ ಇದ್ದು ಸಂಜೆ 3.30 ರ ವೇಳೆಗೆ ಸುಳ್ಯ ,ಹರಿಹರ , ಅಜ್ಜಾವರ, ಮಂಡೆಕೋಲು, ಅರಂತೋಡು, ಸೋಣಂಗೇರಿ

ಕರಾವಳಿಯ ವಿವಿಧೆಡೆ ತಂಪೆರೆದ ವರುಣ| ಕಡಬ, ಸುಳ್ಯ, ಪುತ್ತೂರು ತಾಲೂಕಿನ ಹಲವೆಡೆ ಮಳೆಯ ಸಿಂಚನ Read More »